News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ

ಮುಂಬೈನ ರಸ್ತೆ ರಸ್ತೆಗಳಲ್ಲಿ ಕನ್ನಡದ KGF ಹವಾ..!

481

ಈಗ ಕರ್ನಾಟಕ ಸೇರಿದಂತೆ ಭಾರತದ ಮೂಲೆ ಮೂಲೆಯಲ್ಲೂ ಕೆಜಿಎಫ್ ಸಿನಿಮಾದ್ದೇ ಸೌಂಡ್. ಇದೀಗ ಮುಂಬೈನಲ್ಲೂ ರಾಕಿ ಭಾಯ್ ಹವಾ ಶುರುವಾಗಿದೆ. ಕೆಜಿಎಫ್ ಹಿಂದಿ ಅವತರಣಿಕೆ ಸಿನಿಮಾ ಮಹಾರಾಷ್ಟ್ರ ಸೇರಿದಂತೆ ಉತ್ತರ ಭಾರತದ ಹಲವಾರು ಚಿತ್ರಮಂದಿರಗಳಲ್ಲಿ ಇದೇ ತಿಂಗಳು 21 ರಂದು ರಿಲೀಸ್ ಆಗುತ್ತಿದೆ.

ಈ ಹಿನ್ನೆಲೆಯಲ್ಲಿ ಸದ್ಯ ಹಿಂದಿ ಪ್ರಮೋಷನ್ ಕೂಡ ಭರದಿಂದ ಸಾಗುತ್ತಿದ್ದು, ಮುಂಬೈನ ಪ್ರಮುಖ ಸ್ಥಳಗಳಲ್ಲಿ ಯಶ್, ಪೋಸ್ಟರ್ಸ್ ಗಳು ರಾರಾಜಿಸುತ್ತಿವೆ.

ಕನ್ನಡದಲ್ಲಿ ಜೋಕೆ ನಾನು ಬಳ್ಳಿಯ ಮಿಂಚು ಹಾಡನ್ನು ಕೆಜಿಎಫ್ ಚಿತ್ರಕ್ಕಾಗಿ ರಿಕ್ರಿಯೇಟ್ ಮಾಡಲಾಗಿತ್ತು. ಹಿಂದಿ ಅವತರಣಿಕೆ ಸಿನಿಮಾಗಾಗಿ 1989ರಲ್ಲಿ ಬಿಡುಗಡೆಯಾಗಿದ್ದ ತ್ರಿದೇವ್’ ಚಿತ್ರದಗಲಿ ಗಲಿ’ ಹಾಡನ್ನು ಬಳಸಲಾಗಿದೆ.

1989ರಲ್ಲಿ ಬಿಡುಗಡೆಯಾಗಿದ್ದ ಈ ಹಾಡನ್ನು ಅಲ್ಕಾ ಯಾಗ್ನಿಕ್ ಹಾಡಿದ್ದರು. ನಟ ಜಾಕಿ ಶ್ರಾಫ್ ಹಾಗೂ ನಟಿ ಸಂಗೀತಾ ಬಿಜಲಾನಿ ಮುಖ್ಯ ಪಾತ್ರದಲ್ಲಿ ನಟಿಸಿದ್ದರು. ಈಗ ಈ ರಿಮಿಕ್ಸ್ ಹಾಡಿಗೆ ಗಾಯಕಿ ನೇಹಾ ಕಕ್ಕರ್ ಧ್ವನಿ ನೀಡಿದ್ದಾರೆ. ಈ ಹಾಡನ್ನು ತನಿಷ್ಕ್ ಬಗ್ಚಿ ರೀ-ಕಂಪೋಸ್ ಮಾಡಿದ್ದಾರೆ.

ಹಿಂದಿ ಅವತರಣಿಕೆಯನ್ನು ಎಕ್ಸೆಲ್ ಮೀಡಿಯಾ, ಎಎ ಮೂವೀಸ್ ನಲ್ಲಿ ಫರ್ಹಾನ್ ಅಖ್ತರ್, ರಿತೇಶ್ ಸಿದ್ವಾನಿ ರಿಲೀಸ್ ಮಾಡ್ತಿದ್ದು, ಈಗಾಗಲೇ ದೊಡ್ಡ ಮಟ್ಟದ ಕ್ರೇಜ್ ಶುರುವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

  • ಆರೋಗ್ಯ

    ಪೋಷಕಾಂಶಗಳ ಆಗರ ಈ ಕೆಂಪು ಬಾಳೆಹಣ್ಣು! ಈ ಕೆಂಪು ಬಾಳೆಹಣ್ಣು ಬಗ್ಗೆ ನಿಮಗೆಷ್ಟು ಗೊತ್ತು?

    ಜಗತ್ತಿನಲ್ಲೇ ಅತೀ ಹೆಚ್ಚಾಗಿ ಸೇವಿಸುವ ಹಣ್ಣು ಬಾಳೆಹಣ್ಣು. ಬಾಳೆಹಣ್ಣು ಅತ್ಯಂತ ಹೆಚ್ಚು ಪೋಷಕಾಂಶವುಳ್ಳ ಆಹಾರ ಎಂದು ವೈದ್ಯರಿಂದ ಹಿಡಿದು ಪ್ರತಿಯೊಬ್ಬರು ಶಿಫಾರಸು ಮಾಡುತ್ತಾರೆ. ಇದನ್ನು ಸೇವಿಸುವುದರಿಂದ ತಕ್ಷಣವೇ ಶಕ್ತಿ ತುಂಬುತ್ತದೆ. ಒಂದು ರೀತಿಯಲ್ಲಿ ಗ್ಲೂಕೊಸ್ ರೀತಿಯಲ್ಲಿ ಕೆಲಸ ಮಾಡುತ್ತದೆ ಎಂದು ಕೂಡ ಹೇಳಬಹುದು.

  • ದೇಗುಲ ದರ್ಶನ

    ತಲಕಾವೇರಿ ತೀರ್ಥೋದ್ಭವ ಸಂಭ್ರಮ: ಬ್ರಹ್ಮ ಕುಂಡಲದಲ್ಲಿ ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ ಕೊಡವರ ಕುಲದೇವತೆ..!

    ಕಾವೇರಿ ಕೊಡವರ ಕುಲದೇವಿ,ಕಾವೇರಿ ಜನ್ಮಸ್ಥಳ ತಲಕಾವೇರಿಯಲ್ಲಿ  ಅರ್ಚಕರ ಮಂತ್ರಘೋಷ ,ಮಂಗಳವಾದ್ಯ  ನಡುವೆ ತಡರಾತ್ರಿ ಸರಿಯಾಗಿ 12 ಗಂಟೆ 57 ನಿಮಿಷಕ್ಕೆ ಕರ್ಕಾಟಕಲಗ್ನ, ರೋಹಿಣಿ ನಕ್ಷತ್ರದಲ್ಲಿ ಘಟಿಸಿದ ಪವಿತ್ರ ತೀರ್ಥೋದ್ಭವವನ್ನು ರಾಜ್ಯ ಮತ್ತು ಹೊರರಾಜ್ಯದಿಂದಬಂದ ನೂರಾರು ಭಕ್ತರು ಕಣ್ತುಂಬಿಕೊಂಡರು. 12:59ಕ್ಕೆ ತೀರ್ಥೋದ್ಭವ ಘಟಿಸಲಿದೆ ಎಂದು ಹೇಳಲಾಗಿತ್ತಾದರೂ 2 ನಿಮಿಷ ಮುನ್ನವೇ ತೀರ್ಥೋದ್ಭವಾಯಿತು. 30 ಕ್ಕೂ ಹೆಚ್ಚು ಅರ್ಚಕರ ಮಂತ್ರಘೋಷ, ಮಂಗಳವಾದ್ಯದ ನಡುವೆ ಕಾವೇರಿ ಮಾತೆ ತೀರ್ಥರೂಪಿಣಿಯಾಗಿ ಕಾಣಿಸಿಕೊಳ್ಳುತ್ತಿದ್ದಂತೆ ಭಕ್ತರ ಜಯಘೋಷ ಮುಗಿಲು ಮುಟ್ಟಿತು. ಈ ವಿಸ್ಮಯಕ್ಕೆ ಅಪಾರ ಭಕ್ತ…

  • ಉಪಯುಕ್ತ ಮಾಹಿತಿ

    ಜ್ವರದಿಂದ-ಹೃದಯಘಾತದವರೆಗೆ ಎಲ್ಲಾ ಕಾಯಿಲೆಗಳನ್ನು ತಡೆಯುವ ರಾಮಬಾಣ ಯಾವುದು ಗೊತ್ತಾ?

    ‘ವಿಟಮಿನ್ ಡಿ’ ಇರುವ ಆಹಾರ, ಫುಡ್ ಸಪ್ಲಿಮೆಂಟ್ಸ್ ಅನ್ನು ನಿಯಮಿತವಾಗಿ ಸೇವಿಸುವು ದರಿಂದ ಅನೇಕ ಕಾಯಿಲೆಗಳನ್ನು ಕ್ಷಣಮಾತ್ರದಲ್ಲಿ ಹಿಮ್ಮೆಟ್ಟಿಸಬಹುದು. ಆದರೆ ಭಾರತದಲ್ಲಿ ಹೆಚ್ಚಿನ ಜನರು ‘ವಿಟಮಿನ್ ಡಿ’ ಕೊರತೆಯಿಂದ ಬಳಲುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಸೂರ್ಯನ ಕಿರಣಗಳಲ್ಲಿ ವಿಟಮಿನ್ ಡಿ ಇದ್ದು, ಮೂಳೆ ಮತ್ತು ಸ್ನಾಯುಗಳ ಆರೋಗ್ಯಕ್ಕೆ ಉತ್ತಮ ಔಷಧ. ಪ್ರತಿಯೊಂದು ಸಂಶೋಧನೆಗಳು ‘ವಿಟಮಿನ್ ಡಿ’ ಸೇವನೆಯಿಂದ ಕೊರತೆ ಯಿರುವ ಜನರಲ್ಲಿ ತೀವ್ರವಾದ ಉಸಿರಾಟದ ಸೋಂಕಿನ ಅಪಾಯ ಅರ್ಧಕ್ಕರ್ಧ ಕಡಿಮೆಯಾಗಿದೆ ಎಂದು ತೋರಿಸಿವೆ. ಆದರೆ ‘ವಿಟಮಿನ್ ಡಿ’…

  • ಉಪಯುಕ್ತ ಮಾಹಿತಿ

    ಅಪ್ಪಿ ತಪ್ಪಿಯೂ ಇಂತಹ ಸಮಯದಲ್ಲಿ ಕಲ್ಲಂಗಡಿ ಹಣ್ಣನ್ನು ತಿನ್ನಬೇಡಿ..!

    ಇನ್ನೇನು ಬೇಸಿಗೆ ಶುರುವಾಯಿತು. ಇಂತಹ ಸಮಯದಲ್ಲಿ ನಮ್ಮ ದೇಹವನ್ನು ತಂಪಾಗಿ, ಫ್ರೆಶ್ ಆಗಿ ಇಟ್ಕೋಬೇಕು. ಇದಕ್ಕಾಗಿ ಕಲ್ಲಂಗಡಿ ಹಣ್ಣಿಗಿಂತ ಉತ್ತಮವಾದದ್ದು ಇನ್ಯಾವುದಿದೆ ಹೇಳಿ? ಕಲ್ಲಂಗಡಿ ಹಣ್ಣು ಟೇಸ್ಟಿ ಜೊತೆಗೆ ಆರೋಗ್ಯಕ್ಕೂ ಉತ್ತಮ. ಅದರಲ್ಲೂ ತೂಕ ಕಳೆದುಕೊಳ್ಳಲು ಕಸರತ್ತು ಮಾಡುತ್ತಿರುವವರಿಗೆ ಕಲ್ಲಂಗಡಿ ಬೆಸ್ಟ್. ಹೃದಯ, ಕಿಡ್ನಿ, ಹೀಟ್ ಸ್ಟ್ರೋಕ್, ಅಧಿಕ ರಕ್ತದೊತ್ತಡ ಎಲ್ಲದಕ್ಕೂ ಕಲ್ಲಂಗಡಿ ಸೇವನೆಯಿಂದ ಪ್ರಯೋಜನ ಮತ್ತು ಪರಿಹಾರವಿದೆ. ಕ್ಯಾಲೋರಿ ಬಗ್ಗೆ ಭಯ ಬೇಡ. ಕಲ್ಲಂಗಡಿಯಲ್ಲಿ ಶೇ.94ರಷ್ಟು ನೀರಿನ ಅಂಶವಿದೆ. ಲೈಕೋಪೀನ್, ಪೊಟ್ಯಾಶಿಯಂ ಸೇರಿದಂತೆ ಹಲವು ಬಗೆಯ…

  • ಸುದ್ದಿ

    ಅಮ್ಮ ಸಾವನ್ನಪ್ಪಿರುವ ವಿಷಯ ತಿಳಿಯದ ಪುಟ್ಟ ಕಂದಮ್ಮಆಟವಾಡುತ್ತಾ, ಅಮ್ಮ ಎಂದು ಕರೆದು ಎಬ್ಬಿಸುತ್ತಿರುವ ವಿಡಿಯೋ ವೈರಲ್.

    ಬಿಹಾರದ ಮುಜಾಫರ್ ನಗರದ ರೈಲ್ವೆ ನಿಲ್ದಾಣವೊಂದರಲ್ಲಿ ಶ್ರಮಿಕ್ ರೈಲಿನಲ್ಲಿ ಬಂದಿಳಿದ ಮಹಿಳೆಯೊಬ್ಬಳು ಹಸಿವು, ಸುಸ್ತಿನಿಂದ ರೈಲ್ವೆ ನಿಲ್ದಾಣದಲ್ಲೇ ಸಾವನ್ನಪ್ಪಿದ್ದಳು. ಆ ಮಹಿಳೆ ಸಾವನ್ನಪ್ಪಿರುವ ವಿಷಯ ಗೊತ್ತಾಗುತ್ತಿದ್ದಂತೆ ಜೊತೆಗಿದ್ದ ಸಂಬಂಧಿಕರು ಆಕೆಯ ಮೃತದೇಹವನ್ನು ಮುಜಾಫರ್ ನಗರದ ರೈಲ್ವೆ ನಿಲ್ದಾಣದಲ್ಲೇ ಬಟ್ಟೆಯಿಂದ ಸುತ್ತಿ ಇರಿಸಿದ್ದರು. ಆದರೆ, ಆ ಬಟ್ಟೆಯನ್ನು ಎಳೆದು ತೆಗೆದ ಆಕೆಯ ಮಗು ಅಮ್ಮನನ್ನು ಎಬ್ಬಿಸಲು ಪರದಾಡುತ್ತಿತ್ತು. 23 ವರ್ಷದ ಬಿಹಾರ ಮೂಲದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಗುಜರಾತ್‍ನ ಅಲಹಾಬಾದ್‍ನಲ್ಲಿ ವಾಸವಾಗಿದ್ದಳು. ಕಾರ್ಮಿಕಳಾಗಿ ಕೆಲಸ ಮಾಡುತ್ತಿದ್ದ ಆಕೆಗೆ ಲಾಕ್​ಡೌನ್​…