News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
Place, ಸಿನಿಮಾ

KGF ಈ ದೇಶವನ್ನು ಹೇಗೆ ಉಳಿಸಿದೆ ನೋಡಿ ಅಂದು ನೆಹರೂ ಸರ್ಕಾರವನ್ನು ಮತ್ತು ಭಾರತವನ್ನು ಹೇಗೆ ಕಾಪಾಡಿತು ನೋಡಿ

1014

ಭಾರತದಲ್ಲೇ ಮೊದಲ ವಿದ್ಯುತ್ ಪಡೆದ ನಗರ
ಭಾರತದಲ್ಲೇ ಅತಿ ಹೆಚ್ಚು ಚರ್ಚ್ಗಳನ್ನ ಒಂದಿರೊ ನಗರ
ರೈಲ್ವೆಯನ್ನು ಹೊಂದಿದ ಕರ್ನಾಟಕದ ಮೊದಲ ನಗರ

ಹೀಗೆ ಹಲವು ರೀತಿಯಲ್ಲಿ ಪ್ರಸಿದ್ಧ ಆಗಿರುವ ನಗರ ನಮ್ಮ ದೇಶವನ್ನು ಹೇಗೆ ಉಳಿಸಿದೆ ಮುಂದೆ ಓದಿ

ರಾಕಿಂಗ್​ ಸ್ಟಾರ್​ ಯಶ್​ ಅಭಿನಯದ ಕೆಜಿಎಫ್​ ಚಿತ್ರ ಸೃಷ್ಟಿಸಿರೋ ಹವಾ ಇಡೀ ಭಾರತೀಯ ಸಿನಿಮಾ ಇಂಡಸ್ಟ್ರಿಯಾದ್ಯಂತ ಬಿರುಗಾಳಿಯನ್ನೇ ಎಬ್ಬಿಸಿಬಿಟ್ಟಿದೆ. ಯಾವ ಮಟ್ಟಿಗೆ ಅಂದ್ರೆ, ಇಂಡಿಯನ್​ ಸಿನಿಮಾ ಇಂಡಸ್ಟ್ರಿಯ ಇತಿಹಾಸದಲ್ಲೇ ಕನ್ನಡದ ಚಿತ್ರವೊಂದು ಇಷ್ಟೊಂದು ಪ್ರಚಾರ ಪಡೆದದ್ದು ಇದೇ ಮೊದಲು. ನಿಜ ಹೇಳಬೇಕು ಅಂದ್ರೆ, ಕೆಜಿಎಫ್ ಚಿತ್ರದಂತೆಯೇ ಆ ಊರಿನ ಹೆಸರು ಭಾರತೀಯ ಇತಿಹಾಸದಲ್ಲಿ ಅತ್ಯಂತ ವೈಭವೋಪೇತ ಹೆಸರಾಗಿ ಉಳಿದಿದೆ. ಭವ್ಯ ಭಾರತ ನಿರ್ಮಾಣಕ್ಕೆ ಅಡಿಪಾಯ ಹಾಕಿದ್ದೇ ಕೆಜಿಎಫ್​.

ಭಾರತೀಯ ಇತಿಹಾಸಕ್ಕೆ ಬಂಗಾರದ ಯುಗವನ್ನ ತಂದು ಕೊಟ್ಟ ಹೆಸರು ಕೆಜಿಎಫ್​. ಹೀಗಾಗಿಯೇ ಕೆಜಿಎಫ್​ನ್ನ ಬಂಗಾರದ ಊರು ಎಂದೇ ಕರೆಯಲಾಗಿತ್ತು. ಇಲ್ಲಿನ ಮಣ್ಣಿನ ಕಣ ಕಣದಲ್ಲೂ ಬಂಗಾರ ಬೆರೆತು ಹೋಗಿತ್ತು. ಇದೇ ಕಾರಣಕ್ಕೆ ಕೆಜಿಎಫ್​ನ್ನ ಬ್ರಿಟೀಷರು ಮಿನಿ ಲಂಡನ್​ ಎನ್ನುವ ಹೆಸರಿನಿಂದ ಕರೆದರು. ಕೆಜಿಎಫ್​ನ ಇತಿಹಾಸವೇ ರೋಮಾಂಚನಗೊಳಿಸುವಂಥಾದ್ದು. ಪ್ರತಿ ಕನ್ನಡಿಗ ಕೂಡ ಹೆಮ್ಮೆ ಪಡುವಂಥಾದ್ದು.

ಕೆಜಿಎಫ್​ನ್ನೇ ಅಡವಿಟ್ಟಿದ್ದರು ಪ್ರಧಾನಿ ನೆಹರು:
1947 ಆಗಸ್ಟ್​ 15ರಂದು ಭಾರತ ಸ್ವಾತಂತ್ರ್ಯಗೊಂಡಾಗ ದೇಶದಲ್ಲಿ ಬಡತನ ತಾಂಡವವಾಡುತ್ತಿತ್ತು. ನಿರಂತರ ಬರಗಾಲ, ನಿರುದ್ಯೋಗ, ದೇಶ ವಿಭಜನೆಯಿಂದಾಗಿ ಎಲ್ಲೆಡೆ ದೊಂಬಿ ಗಲಾಟೆ, ಕೋಮು ಗಲಭೆಗಳು, ಇಂಥಹ ಸಾಲು ಸಾಲು ಸಮಸ್ಯೆಗಳು ಪ್ರಧಾನಿ ಜವಾಹರಲಾಲ್​ ನೆಹರು ಅವರಿಗೆ ದೊಡ್ಡ ಸವಾಲನ್ನೇ ಮುಂದಿಟ್ಟಿದ್ದವು. ಭಾರತ ದೇಶವನ್ನ ಕಟ್ಟಬೇಕು ಅಂದರೆ, ವಿಶ್ವಬ್ಯಾಂಕ್​ನಲ್ಲಿ ಸಾಲ ಪಡೆಯಲೇಬೇಕಾದ ಅನಿವಾರ್ಯತೆ ನಿರ್ಮಾಣವಾಗಿತ್ತು. ಆದರೆ ಭಾರತಕ್ಕೆ ಸಾಲ ಕೊಡಲು ವಿಶ್ವ ಬ್ಯಾಂಕ್​ ಸಿದ್ಧವಿರಲಿಲ್ಲ. ಯಾಕಂದ್ರೆ, ಭಾರತಕ್ಕೆ ಕೊಟ್ಟ ಸಾಲ ವಾಪಾಸ್​ ಬರುತ್ತೆ ಎನ್ನುವ ಯಾವುದೇ ಗ್ಯಾರಂಟಿ ವಿಶ್ವಬ್ಯಾಂಕ್​ಗೆ ಇರಲಿಲ್ಲ.

ವಿಶ್ವಬ್ಯಾಂಕ್​ನಿಂದ ಸಾಲ ಪಡೆಯೋಕೆ ನೆಹರು, ದೇಶದ ಯಾವುದಾದರು ಬೆಲೆ ಬಾಳುವ ಪ್ರದೇಶವನ್ನ ಅಡವಿಡುವ ಚಿಂತನೆ ಮಾಡುತ್ತಾರೆ. ಆಗ ಅವರ ನೆನಪಿಗೆ ಬಂದಿದ್ದೇ ಬಂಗಾರದ ಮೊಟ್ಟೆಗಳನ್ನ ತನ್ನೊಡಲಿನಲ್ಲಿ ಇಟ್ಟುಕೊಂಡಿದ್ದ ಕೆಜಿಎಫ್​. ಕೋಲಾರ ಗೋಲ್ಡ್​ ಫೀಲ್ಡ್​​​​ ಎನ್ನುವ ಚಿನ್ನದ ಭೂಮಿಯನ್ನ ಅಡವಿಡಲು ಪ್ರಧಾನಿ ನೆಹರು ನಿರ್ಧರಿಸಿದ್ದರು. ಕೆಜಿಎಫ್​ ಹೆಸರು ಕೇಳುತ್ತಿದ್ದಂತೆ ವಿಶ್ವಬ್ಯಾಂಕ್ ಭಾರತಕ್ಕೆ ಸಾಲವನ್ನ ವಿತರಿಸಿತ್ತು. ನಿಜ ಹೇಳಬೇಕು ಅಂದ್ರೆ, ಸ್ವತಂತ್ರ ಭಾರತದ ಅಭಿವೃದ್ಧಿಗೆ ಕೆಜಿಎಫ್​ನ ಪಾತ್ರ ಬಹಳಷ್ಟಿದೆ. ಕೆಜಿಎಫ್​ ಇಲ್ಲದೇ ಹೋಗಿದ್ದಿದ್ರೆ, ಸ್ವತಂತ್ರ ಭಾರತಕ್ಕೆ ಸಾಲ ಕೂಡ ಸಿಗುತ್ತಿರಲಿಲ್ಲ. ಕನ್ನಡಿಗರ ಹೆಮ್ಮೆಯ ಭೂಮಿಯನ್ನ ಅಡವಿಟ್ಟಂತಾ ನೆಹರು ಅವರು ಸಾಲ ಪಡೆದು ದೇಶದಲ್ಲಿ ಅಭಿವೃದ್ಧಿ ಕಾರ್ಯಗಳನ್ನ ಕೈಗೊಂಡರು. ಜಲಾಶಯಗಳನ್ನ ನಿರ್ಮಿಸಿದರು, ರಸ್ತೆಗಳನ್ನ ನಿರ್ಮಾಣ ಮಾಡಿದರು. ಶಾಲೆ, ಆಸ್ಪತ್ರೆ, ವಿಜ್ಞಾನ, ತಂತ್ರಜ್ಞಾನ, ಒಂದಾ ಎರಡಾ.. ಭಾರತ ಇಂದು ಇಷ್ಟೊಂದು ಎತ್ತರಕ್ಕೆ ಬೆಳೆದು ನಿಲ್ಲೋಕೆ ಬೇಕಾದ ಅಡಿಪಾಯವನ್ನ ನೆಹರು ಅಂದೇ ಹಾಕಿ ಕೊಟ್ಟರು. ನಮ್ಮ ದೇಶದ ಅಡಿಪಾಯ ಭದ್ರಗೊಳ್ಳೋಕೆ ಕಾರಣವೇ ಕನ್ನಡಿಗರ ಕೆಜಿಎಫ್​ ಎನ್ನುವುದನ್ನ ದೇಶ ಮರೆಯುವಂತಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಮಾರ್ಚ್, 2019) ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ ಬಗ್ಗೆ ಹೆಚ್ಚು ಕಂಡುಹಿಡಿಯಲು ಮೇಲ್ಮೈಗಿಂತ…

  • ಜ್ಯೋತಿಷ್ಯ

    ಹಾಸನ ಮೊದಲ ಸ್ಥಾನ ಬರಲು ನಾನೇ ಕಾರಣ ಎಂದ ಭವಾನಿ ರೇವಣ್ಣ!ರೋಹಿಣಿ ಸಿಂಧೂರಿ ಸಾಧನೆ ಏನೂ ಇಲ್ಲ ಎಂದು ಭವಾನಿ ರೇವಣ್ಣ ಹೇಳಿದ್ದೇನು ಗೊತ್ತಾ?

    ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಹಾಸನಕ್ಕೆ ಮೊದಲ ಸ್ಥಾನ ಬಂದಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾರಣ ಯಾರೆಂಬುವುದಕ್ಕೆ ಸಚಿವ ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರು ಪ್ರತಿಕ್ರಿಯಿಸಿದ್ದಾರೆ. ಇತ್ತಿಚೆಗಷ್ಟೇ ಬಂದ sslc ಫಲಿತಾಂಶದಲ್ಲಿ ಹಾಸನ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿತ್ತು. ಇದಕ್ಕೆ ಸರ್ಕಾರದ ನೀತಿಗಳೇ ಕಾರಣವಾಗಿದ್ದು, ನನ್ನ ಪತ್ನಿ ಜಿಲ್ಲಾ ಪಂಚಾಯಿತಿ ಶಿಕ್ಷಣಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ಪ್ರಯತ್ನ ಕೂಡ ಸಫಲವಾಗಿದೆ. ಇದರಲ್ಲಿ ಜಿಲಾಧಿಕಾರಿಯಾಗಿದ್ದ ರೋಹಿಣಿ ಸಿಂಧುರಿಯವರ ಪಾತ್ರ ಏನಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಇತ್ತೀಚೆಗೆ ಹೇಳಿದ್ದರು….

  • ವ್ಯಕ್ತಿ ವಿಶೇಷಣ

    ತಮ್ಮ ಜೀವನದಲ್ಲಿ ಜಾಸ್ತಿ ಓದದೇ ಇದ್ರೂ ಯಶಸ್ಸು ಕಂಡ ಭಾರತೀಯರ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ..

    ಓದು ಜೀವನಕ್ಕೆ ತುಂಬಾನೇ ಮುಖ್ಯ., ವಿದ್ಯೆ ಮುಖ್ಯ ಆದ್ರೆ ವಿನಯ ಅತ್ಯಗತ್ಯ. ವಿನಯಾನ ಯಾವ ಶಾಲೇಲೂ ಹೇಳಿಕೊಡಲ್ಲ. ಯೋಗ ಎಲ್ಲರಿಗೂ ಬರಬಹುದು, ಆದ್ರೆ ಯೋಗ್ಯತೆ ಕೆಲವರಿಗೆ ಮಾತ್ರ ಇರತ್ತೆ.. ” ದೇಶ ಸುತ್ತಿ ನೋಡು, ಕೋಶ ಓದಿ ನೋಡು” ಅಂತಾರೆ ದೊಡ್ಡವರು. ಹಾಗೆ ಎಲ್ಲಾ ಜ್ಞಾನಾನೂ ಪುಸ್ತಕದಿಂದಾನೆ ಸಿಗಲ್ಲ, ಅನುಭಾವಾನೂ ಅಷ್ಟೇ ಮುಖ್ಯ. 1. ಅಕ್ಷಯ್ ಕುಮಾರ್:- ಮಾರ್ಷಲ್ ಆರ್ಟ್ಸ್ ಮುಂದುವರಿಸಬೇಕು ಅಂತ ಕಾಲೇಜನ್ನ ಬಿಟ್ರು. ಇವ್ರೊಂಥರ ಮಲ್ಟಿ ಟ್ಯಾಲೆಂಟೆಡ್. ನಟನೆ ಮಾಡ್ತಾರೆ, ಅಡಿಗೆ ಮಾಡ್ತಾರೆ, ಫೈಟ್…

  • ಉಪಯುಕ್ತ ಮಾಹಿತಿ

    ನಿಮ್ಮ ತ್ವಚೆಯನ್ನು ಕಾಪಾಡಿಕೊಂಡು ಸೌಂದರ್ಯವಾಗಿ ಕಾಣಬೇಕೇ? ಹಾಗಾದರೆ ನೀವು ಇದನ್ನು ಬಳುಸುವುದು ಉತ್ತಮ.!

    ಯೌವ್ವನದಲ್ಲಿ ತ್ವಚೆಯ ಸೌಂದರ್ಯದ ಕಾಳಜಿವಹಿಸಿದರೆ ವಯಸ್ಸಾದಂತೆ ಅದರ ಪ್ರತಿಫಲ ಕಾಣಬಹುದು. ಸಾಮಾನ್ಯವಾಗಿ ಹೆಚ್ಚಿನವರು ಮುಖದ ಸೌಂದರ್ಯವನ್ನು ಕಾಪಾಡಿಕೊಳ್ಳಲು ಬಯಸುತ್ತಾರೆ. ಇದಕ್ಕಾಗಿ ಹಲವು ರೀತಿಯ ರಾಸಾಯನಿಕ ಸೌಂದರ್ಯವರ್ಧಕಗಳ ಮೊರೆ ಹೋಗುವವರೇ ಹೆಚ್ಚು. ಆದರೆ ಎಲ್ಲ ಕಡೆಯು ಹೇರಳವಾಗಿ ದೊರೆಯುವ ಕೆಲ ಗಿಡಗಳಿಂದಲೂ ನಿಮ್ಮ ಮುಖದ ಕಾಂತಿಯನ್ನು ಹೆಚ್ಚಿಸಬಹುದು ಎಂಬುದು ಅನೇಕರಿಗೆ ತಿಳಿದಿಲ್ಲ. ಹೌದು, ಲೋಳೆಸರ, ಕತ್ಲಿಗಿಡ ಎಂದೆಲ್ಲಾ ಕರೆಸಿಕೊಳ್ಳುವ ಅಲೋವೇರ ಎಲೆಗಳನ್ನು ಬಳಸಿ ಕೂಡ ತ್ವಚೆಯನ್ನು ಆರೈಕೆ ಮಾಡಬಹುದು. ಪ್ರಸ್ತುತ ಅನೇಕ ಕಂಪೆನಿಗಳು ಸಹ ಅಲೋವೇರ ಉತ್ಪನ್ನಗಳನ್ನು ಮಾರುಕಟ್ಟೆಗೆ…

  • ಸುದ್ದಿ

    ಏಕಕಾಲಕ್ಕೆ ಪಂಚಭಾಷೆಗಳಲ್ಲಿ ರಿಲೀಸ್ ಆಗಲಿರುವ ಶಿವರಾಜ್‌ ಕುಮಾರ್‌ ಭಜರಂಗಿ 2 ಚಿತ್ರ…!

    ಕನ್ನಡ ಚಿತ್ರಗಳನ್ನು ದೇಶಾದ್ಯಂತ ಎಲ್ಲಭಾಷೆಗಳ ಪ್ರೇಕ್ಷಕರು ನೋಡಿ ಮೆಚ್ಚಿಕೊಳ್ಳುತ್ತಿದ್ದಾರೆ. ಇದೇ ಕಾರಣಕ್ಕೆ ಭಜರಂಗಿ-2 ಸಿನಿಮಾವನ್ನು ಪಂಚಭಾಷೆಗಳಲ್ಲಿ ತಯಾರಿಸುವ ಪ್ಲಾನ್‌ ಮಾಡಿದ್ದೇವೆ. ಸೆಪ್ಟೆಂಬರ್‌ 9ರಿಂದ ಶೂಟಿಂಗ್‌ ಆರಂಭವಾಗಲಿದೆ ಎಂದಿದ್ದಾರೆ ನಿರ್ದೇಶಕ ಎ ಹರ್ಷ.ಕೆಜಿಎಫ್‌ ಸಿನಿಮಾದ ಬಂದ ನಂತರ ಪ್ಯಾನ್‌ ಇಂಡಿಯಾ ಸಿನಿಮಾಗಳನ್ನು ಮಾಡುವ ಟ್ರೆಂಡ್‌ ಸ್ಯಾಂಡಲ್‌ವುಡ್‌ನಲ್ಲಿ ಹೆಚ್ಚುತ್ತಿದ್ದು, ಹಿರಿಯ ನಟ ಶಿವರಾಜ್‌ ಕುಮಾರ್‌ ಇದೀಗ ಅಂತಹ ಚಿತ್ರ ಒಂದರಲ್ಲಿ ನಟಿಸುತ್ತಿದ್ದಾರೆ. ಹರ್ಷ ನಿರ್ದೇಶನದ ‘ಭಜರಂಗಿ-2’ ಚಿತ್ರವನ್ನು ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿಯಲ್ಲಿ ಏಕಕಾಲಕ್ಕೆ ತಯಾರಿಸಲಾಗುತ್ತಿದ್ದು, ಈ…

  • ಸಿನಿಮಾ

    ತನ್ನ ಹೆತ್ತ ತಾಯಿ ಮಾಡಿದ್ದ ಶೋಷಣೆಯನ್ನ ಬಹಿರಂಗ ಮಾಡಿದ ಫೇಮಸ್ ನಟಿ..!

    ಮಲಯಾಳಂ ಚಲನಚಿತ್ರ ನಟಿ ಸಂಗೀತ ಕ್ರಿಶ್ ತಮ್ಮ ತಾಯಿಯ ಆರೋಪಕ್ಕೆ ಟ್ವಿಟರ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಕ್ರಿಶ್ ತಾಯಿ ಇತ್ತೀಚೆಗೆ ಮಗಳು ತನ್ನನ್ನ ವೃದ್ಧಾಪ್ಯದಲ್ಲಿ ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಆಸ್ತಿಗಾಗಿ ಕ್ರಿಶ್ ನನ್ನನ್ನ ಮನೆಯಿಂದ ಹೊರ ಹಾಕಲು ಮುಂದಾಗಿದ್ದಾಳೆ ಎಂದು ಆರೋಪಿಸಿದ್ದರು. ಈ ಹೇಳಿಕೆ ಕ್ರಿಶ್ ಳನ್ನ ಹೆಚ್ಚು ಸುದ್ದಿಯಲ್ಲಿರುವ ಹಾಗೆ ಮಾಡಿತ್ತು. ಈ ಆರೋಪಗಳಿಗೆ ಕ್ರಿಶ್ ಟ್ವಟರ್ ಮೂಲಕ ಸರಿಯಾಗೇ ಉತ್ತರ ನೀಡಿದ್ದಾರೆ. ತಾನು 13 ವರ್ಷದ ಬಾಲಕಿಯಾಗಿದ್ದಾಗ ಹೇಗೆ ತನ್ನನ್ನ ಶೋಷಿಸಲಾಯಿತು ಎಂದು ವಿವರಿಸಿದ್ದಾಳೆ. ಕುಡುಕ…