News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
Place, ಸಿನಿಮಾ

KGF ಈ ದೇಶವನ್ನು ಹೇಗೆ ಉಳಿಸಿದೆ ನೋಡಿ ಅಂದು ನೆಹರೂ ಸರ್ಕಾರವನ್ನು ಮತ್ತು ಭಾರತವನ್ನು ಹೇಗೆ ಕಾಪಾಡಿತು ನೋಡಿ

1012

ಭಾರತದಲ್ಲೇ ಮೊದಲ ವಿದ್ಯುತ್ ಪಡೆದ ನಗರ
ಭಾರತದಲ್ಲೇ ಅತಿ ಹೆಚ್ಚು ಚರ್ಚ್ಗಳನ್ನ ಒಂದಿರೊ ನಗರ
ರೈಲ್ವೆಯನ್ನು ಹೊಂದಿದ ಕರ್ನಾಟಕದ ಮೊದಲ ನಗರ

ಹೀಗೆ ಹಲವು ರೀತಿಯಲ್ಲಿ ಪ್ರಸಿದ್ಧ ಆಗಿರುವ ನಗರ ನಮ್ಮ ದೇಶವನ್ನು ಹೇಗೆ ಉಳಿಸಿದೆ ಮುಂದೆ ಓದಿ

ರಾಕಿಂಗ್​ ಸ್ಟಾರ್​ ಯಶ್​ ಅಭಿನಯದ ಕೆಜಿಎಫ್​ ಚಿತ್ರ ಸೃಷ್ಟಿಸಿರೋ ಹವಾ ಇಡೀ ಭಾರತೀಯ ಸಿನಿಮಾ ಇಂಡಸ್ಟ್ರಿಯಾದ್ಯಂತ ಬಿರುಗಾಳಿಯನ್ನೇ ಎಬ್ಬಿಸಿಬಿಟ್ಟಿದೆ. ಯಾವ ಮಟ್ಟಿಗೆ ಅಂದ್ರೆ, ಇಂಡಿಯನ್​ ಸಿನಿಮಾ ಇಂಡಸ್ಟ್ರಿಯ ಇತಿಹಾಸದಲ್ಲೇ ಕನ್ನಡದ ಚಿತ್ರವೊಂದು ಇಷ್ಟೊಂದು ಪ್ರಚಾರ ಪಡೆದದ್ದು ಇದೇ ಮೊದಲು. ನಿಜ ಹೇಳಬೇಕು ಅಂದ್ರೆ, ಕೆಜಿಎಫ್ ಚಿತ್ರದಂತೆಯೇ ಆ ಊರಿನ ಹೆಸರು ಭಾರತೀಯ ಇತಿಹಾಸದಲ್ಲಿ ಅತ್ಯಂತ ವೈಭವೋಪೇತ ಹೆಸರಾಗಿ ಉಳಿದಿದೆ. ಭವ್ಯ ಭಾರತ ನಿರ್ಮಾಣಕ್ಕೆ ಅಡಿಪಾಯ ಹಾಕಿದ್ದೇ ಕೆಜಿಎಫ್​.

ಭಾರತೀಯ ಇತಿಹಾಸಕ್ಕೆ ಬಂಗಾರದ ಯುಗವನ್ನ ತಂದು ಕೊಟ್ಟ ಹೆಸರು ಕೆಜಿಎಫ್​. ಹೀಗಾಗಿಯೇ ಕೆಜಿಎಫ್​ನ್ನ ಬಂಗಾರದ ಊರು ಎಂದೇ ಕರೆಯಲಾಗಿತ್ತು. ಇಲ್ಲಿನ ಮಣ್ಣಿನ ಕಣ ಕಣದಲ್ಲೂ ಬಂಗಾರ ಬೆರೆತು ಹೋಗಿತ್ತು. ಇದೇ ಕಾರಣಕ್ಕೆ ಕೆಜಿಎಫ್​ನ್ನ ಬ್ರಿಟೀಷರು ಮಿನಿ ಲಂಡನ್​ ಎನ್ನುವ ಹೆಸರಿನಿಂದ ಕರೆದರು. ಕೆಜಿಎಫ್​ನ ಇತಿಹಾಸವೇ ರೋಮಾಂಚನಗೊಳಿಸುವಂಥಾದ್ದು. ಪ್ರತಿ ಕನ್ನಡಿಗ ಕೂಡ ಹೆಮ್ಮೆ ಪಡುವಂಥಾದ್ದು.

ಕೆಜಿಎಫ್​ನ್ನೇ ಅಡವಿಟ್ಟಿದ್ದರು ಪ್ರಧಾನಿ ನೆಹರು:
1947 ಆಗಸ್ಟ್​ 15ರಂದು ಭಾರತ ಸ್ವಾತಂತ್ರ್ಯಗೊಂಡಾಗ ದೇಶದಲ್ಲಿ ಬಡತನ ತಾಂಡವವಾಡುತ್ತಿತ್ತು. ನಿರಂತರ ಬರಗಾಲ, ನಿರುದ್ಯೋಗ, ದೇಶ ವಿಭಜನೆಯಿಂದಾಗಿ ಎಲ್ಲೆಡೆ ದೊಂಬಿ ಗಲಾಟೆ, ಕೋಮು ಗಲಭೆಗಳು, ಇಂಥಹ ಸಾಲು ಸಾಲು ಸಮಸ್ಯೆಗಳು ಪ್ರಧಾನಿ ಜವಾಹರಲಾಲ್​ ನೆಹರು ಅವರಿಗೆ ದೊಡ್ಡ ಸವಾಲನ್ನೇ ಮುಂದಿಟ್ಟಿದ್ದವು. ಭಾರತ ದೇಶವನ್ನ ಕಟ್ಟಬೇಕು ಅಂದರೆ, ವಿಶ್ವಬ್ಯಾಂಕ್​ನಲ್ಲಿ ಸಾಲ ಪಡೆಯಲೇಬೇಕಾದ ಅನಿವಾರ್ಯತೆ ನಿರ್ಮಾಣವಾಗಿತ್ತು. ಆದರೆ ಭಾರತಕ್ಕೆ ಸಾಲ ಕೊಡಲು ವಿಶ್ವ ಬ್ಯಾಂಕ್​ ಸಿದ್ಧವಿರಲಿಲ್ಲ. ಯಾಕಂದ್ರೆ, ಭಾರತಕ್ಕೆ ಕೊಟ್ಟ ಸಾಲ ವಾಪಾಸ್​ ಬರುತ್ತೆ ಎನ್ನುವ ಯಾವುದೇ ಗ್ಯಾರಂಟಿ ವಿಶ್ವಬ್ಯಾಂಕ್​ಗೆ ಇರಲಿಲ್ಲ.

ವಿಶ್ವಬ್ಯಾಂಕ್​ನಿಂದ ಸಾಲ ಪಡೆಯೋಕೆ ನೆಹರು, ದೇಶದ ಯಾವುದಾದರು ಬೆಲೆ ಬಾಳುವ ಪ್ರದೇಶವನ್ನ ಅಡವಿಡುವ ಚಿಂತನೆ ಮಾಡುತ್ತಾರೆ. ಆಗ ಅವರ ನೆನಪಿಗೆ ಬಂದಿದ್ದೇ ಬಂಗಾರದ ಮೊಟ್ಟೆಗಳನ್ನ ತನ್ನೊಡಲಿನಲ್ಲಿ ಇಟ್ಟುಕೊಂಡಿದ್ದ ಕೆಜಿಎಫ್​. ಕೋಲಾರ ಗೋಲ್ಡ್​ ಫೀಲ್ಡ್​​​​ ಎನ್ನುವ ಚಿನ್ನದ ಭೂಮಿಯನ್ನ ಅಡವಿಡಲು ಪ್ರಧಾನಿ ನೆಹರು ನಿರ್ಧರಿಸಿದ್ದರು. ಕೆಜಿಎಫ್​ ಹೆಸರು ಕೇಳುತ್ತಿದ್ದಂತೆ ವಿಶ್ವಬ್ಯಾಂಕ್ ಭಾರತಕ್ಕೆ ಸಾಲವನ್ನ ವಿತರಿಸಿತ್ತು. ನಿಜ ಹೇಳಬೇಕು ಅಂದ್ರೆ, ಸ್ವತಂತ್ರ ಭಾರತದ ಅಭಿವೃದ್ಧಿಗೆ ಕೆಜಿಎಫ್​ನ ಪಾತ್ರ ಬಹಳಷ್ಟಿದೆ. ಕೆಜಿಎಫ್​ ಇಲ್ಲದೇ ಹೋಗಿದ್ದಿದ್ರೆ, ಸ್ವತಂತ್ರ ಭಾರತಕ್ಕೆ ಸಾಲ ಕೂಡ ಸಿಗುತ್ತಿರಲಿಲ್ಲ. ಕನ್ನಡಿಗರ ಹೆಮ್ಮೆಯ ಭೂಮಿಯನ್ನ ಅಡವಿಟ್ಟಂತಾ ನೆಹರು ಅವರು ಸಾಲ ಪಡೆದು ದೇಶದಲ್ಲಿ ಅಭಿವೃದ್ಧಿ ಕಾರ್ಯಗಳನ್ನ ಕೈಗೊಂಡರು. ಜಲಾಶಯಗಳನ್ನ ನಿರ್ಮಿಸಿದರು, ರಸ್ತೆಗಳನ್ನ ನಿರ್ಮಾಣ ಮಾಡಿದರು. ಶಾಲೆ, ಆಸ್ಪತ್ರೆ, ವಿಜ್ಞಾನ, ತಂತ್ರಜ್ಞಾನ, ಒಂದಾ ಎರಡಾ.. ಭಾರತ ಇಂದು ಇಷ್ಟೊಂದು ಎತ್ತರಕ್ಕೆ ಬೆಳೆದು ನಿಲ್ಲೋಕೆ ಬೇಕಾದ ಅಡಿಪಾಯವನ್ನ ನೆಹರು ಅಂದೇ ಹಾಕಿ ಕೊಟ್ಟರು. ನಮ್ಮ ದೇಶದ ಅಡಿಪಾಯ ಭದ್ರಗೊಳ್ಳೋಕೆ ಕಾರಣವೇ ಕನ್ನಡಿಗರ ಕೆಜಿಎಫ್​ ಎನ್ನುವುದನ್ನ ದೇಶ ಮರೆಯುವಂತಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational, ಸುದ್ದಿ

    ಕೇವಲ ಒಂದು ಸೇಬಿಗಾಗಿ ಬಿಗ್ ಮನೆಯಲ್ಲಿ ಸ್ಪರ್ಧಿಗಳ ರಂಪಾಟ..!

    ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳು ಒಂದು ಸೇಬಿಗಾಗಿ ಇಡೀ ದಿನ ಜಗಳವಾಡಿದ್ದು, ಮನೆಯಲ್ಲಿ ದೊಡ್ಡ ರಂಪಾಟವೇ ನಡೆದು ಹೋಗಿದೆ. ಮೊನ್ನೆ ರಾತ್ರಿ ಚೈತ್ರ ಕೋಟೂರು ಒಂದು ಆಪಲ್ ತಿಂದಿದ್ದಾರೆ. ಆಪಲ್ ತಿನ್ನುವ ಮುನ್ನ ಅಡುಗೆ ಮನೆಯ ಡಿಪಾರ್ಟ್ಮೆಂಟ್ ಗೆ ಸೇರಿದ್ದ ಚಂದನ್ ಆಚಾರ್ ಪರ್ಮಿಶನ್ ಕೇಳಿದ್ದಾರೆ. ಚೈತ್ರ ಕೋಟೂರುಗೆ ಚಂದನ್ ಆಚಾರ್ ಅನುಮತಿ ನೀಡಿ ಸುಜಾತ ಅವರಿಗೆ ಈ ವಿಷಯವನ್ನು ತಿಳಿಸಲು ಹೇಳುತ್ತಾರೆ. ಆಪಲ್ ತಿನ್ನುವಾಗ ಅದೇ ಚಂದನ್ ಆಚಾರ್, ಪ್ರತಾಪ್, ರಾಜು ತಾಳಿಕೋಟೆ ಜೊತೆಗೂ ಹಂಚಿಕೊಂಡು ತಿಂದಿದ್ದಾರೆ….

  • ಸಿನಿಮಾ

    ಸುಮಲತಾ ಅಂಬರೀಶ್ ಪರ ಪ್ರಚಾರ ಮಾಡುತ್ತಿರುವ ಯಶ್, ದರ್ಶನ್ ಬಗ್ಗೆ ಬಿ.ಸಿ.ಪಾಟೀಲ್ ಹೇಳಿದ್ದೇನು ಗೊತ್ತಾ..?

    ಮಂಡ್ಯ ಚುನಾವಣಾ ಕಣ ಸ್ಟಾರ್ ನಟರ ಎಂಟ್ರಿಯಿಂದ ರಂಗೇರಿದೆ. ಸ್ವತಂತ್ರ ಅಭ್ಯರ್ಥಿ ಸುಮಲತಾ ಪರ ದರ್ಶನ್‍ ಮತ್ತು ಯಶ್‍ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸ್ಟಾರ್ ಗಳ ಕ್ಯಾಂಪೇನ್‍ನಿಂದ ಮಂಡ್ಯದಲ್ಲಿ ಸುಮಲತಾ ಪರ ಮತ ಗಳಿಕೆಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಅಂತಾ ಕಾಂಗ್ರೆಸ್‍ ಶಾಸಕ ಬಿ.ಸಿ. ಪಾಟೀಲ್‍ ತಿಳಿಸಿದ್ದಾರೆ. ಇದೇ ವೇಳೆ ಚಿತ್ರನಟರ ಪ್ರಚಾರದಿಂದ ಅಭ್ಯರ್ಥಿಗೆ ಮತ ಸಿಗಲ್ಲ ಎಂಬ ಸಿಎಂ ಕುಮಾರಸ್ವಾಮಿ ಮತ್ತು ಸಚಿವ ಜಿ.ಟಿ. ದೇವೇಗೌಡರ ಹೇಳಿಕೆಯನ್ನು ಬಿ.ಸಿ. ಪಾಟೀಲ್‍ ಅಲ್ಲಗೆಳೆದಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ…

  • Sports, ಕ್ರೀಡೆ

    ಹಿರಿಯರ ಆಟ ನೋಡಲು ತುಂಬಾ ಕಾತುರರಾಗೀದ್ದೀರಾ ನೋಡಿ ಲೆಜೆಂಡ್ಸ್ ಲೀಗ್

    ಲೆಜೆಂಡ್ಸ್ ಲೀಗ್ ಕ್ರಿಕೆಟ್ (LLC) ನ ಉದ್ಘಾಟನಾ ಆವೃತ್ತಿಯು ಜನವರಿ 20 ರಂದು ಪ್ರಾರಂಭವಾಗಲಿದೆ ಮತ್ತು ಪಂದ್ಯಾವಳಿಯ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಪಂದ್ಯಗಳು ಓಮನ್‌ನ ಮಸ್ಕತ್‌ನಲ್ಲಿರುವ ಅಲ್ ಅಮರತ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿವೆ.       LLC ಎರಡು ಸುತ್ತುಗಳು ಮತ್ತು ಫೈನಲ್‌ಗಳನ್ನು ಹೊಂದಲಿದ್ದರೆ, ಆಟಗಳ ಸಮಯದಲ್ಲಿ ಮೂರು ವಿಶ್ರಾಂತಿ ದಿನಗಳು ಸಹ ಇರುತ್ತವೆ. ಮೂರನೇ ಮತ್ತು ಅಂತಿಮ ವಿಶ್ರಾಂತಿ ದಿನವು ಗ್ರ್ಯಾಂಡ್ ಫಿನಾಲೆಗೆ ಒಂದು ದಿನ ಮೊದಲು ಇರುತ್ತದೆ. ಪ್ರತಿ ಎರಡು…

    Loading

  • ಸುದ್ದಿ

    ಶಾಕಿಂಗ್ ನ್ಯೂಸ್ : 7ರ ಬಾಲಕನ ಬಾಯಲ್ಲಿತ್ತು 526 ಹಲ್ಲುಗಳು…!

    ಚೆನ್ನೈ ನ 7 ವರ್ಷದ ಬಾಲಕನ ಬಾಯಲ್ಲಿ ಸುಮಾರು 526 ಹಲ್ಲುಗಳು ಬೆಳೆದಿರುವ ಅಪರೂಪದ ಪ್ರಕರಣ ಬೆಳಕಿಗೆ ಬಂದಿದೆ.ನಗರದ ಸವಿತಾ ದಂತ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯಲ್ಲಿ 7 ವರ್ಷದ ಬಾಲಕನ ಬಾಯಿಯಲ್ಲಿದ್ದ 526 ಹಲ್ಲುಗಳನ್ನು ವೈದ್ಯರು ಆಪರೇಷನ್ ಮಾಡಿ ಹೊರ ತೆಗೆದಿದ್ದಾರೆ.‘ಕಾಂಪೌಂಡ್ ಕಾಂಪೋಸಿಟ್ ಒಂಡೊಂಟೊಮ್’ ಎಂಬ ಅಪರೂಪದ ಖಾಯಿಲೆಯಿಂದ ಬಾಲಕ ಬಳಲುತ್ತಿದ್ದ. ಸುಮಾರು 526 ಹಲ್ಲುಗಳು ಬೆಳೆದಿದ್ದರಿಂದ ಕೆಳಗಿನ ಬಲ ದವಡೆ ತುಂಬಾ ಊದಿಕೊಂಡಿತ್ತು. ಸರ್ಜರಿ ಮೂಲಕ ಆ ಎಲ್ಲ ಹಲ್ಲುಗಳನ್ನು ಹೊರ ತೆಗೆಯುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ಬಾಲಕ…

  • ಉಪಯುಕ್ತ ಮಾಹಿತಿ

    ಭಾರತೀಯರಿಗೋಸ್ಕರವೇ ಮಾಡಿರುವ ಈ ಡಿಜಿಟಲ್ ಪಂಚಾಂಗದಲ್ಲಿ ಏನೆಲ್ಲಾ ಮಾಹಿತಿ ಇದೆ ಗೊತ್ತಾ..!

    ಡಿಜಿಟಲ್ ಭಾಷಾತಂತ್ರಜ್ಞಾನ ಪರಿಹಾರಗಳ ಮುಂಚೂಣಿಯ ರೆವೆರೀ ಲಾಂಗ್ವೇಜ್‌ ಟೆಕ್ನಾಲಜೀಸ್‌ ಇಂಡಿಕ್‌ ಕ್ಯಾಲೆಂಡರ್ ಎಂಬ ಸುಲಭ ಬಳಕೆಯ ಕ್ಯಾಲೆಂಡರ್‌ಆಪ್ ಬಿಡುಗಡೆ ಮಾಡಿದೆ. ರೆವೆರೀಯ ಇಂಡಿಕ್‌ ಕ್ಯಾಲೆಂಡರ್‌ಆಪ್ ಪ್ರಸ್ತುತ ಗೂಗಲ್ ಪ್ಲೇಸ್ಟೋರ್‌ನಲ್ಲಿ ಲಭ್ಯವಿದ್ದು ಅವರ ಭಾಷೆ, ಸಂಸ್ಕೃತಿ, ಧಾರ್ಮಿಕತೆಗಳನ್ನು ಮೀರಿ ಭಾರತೀಯರಿಗೆಂದೇ ರೂಪಿಸಲಾಗಿದೆ.

  • ಆರೋಗ್ಯ

    ದಾಳಿಂಬೆ ಹಣ್ಣಿನಲ್ಲಿರುವ ಆರೋಗ್ಯಕಾರಿ ಗುಣಗಳು ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ದಿನಕ್ಕೆ ಒಂದು ಸೇಬು ತಿಂದರೆ ವೈದ್ಯರಿಂದ ದೂರವಿರ ಬಹುದು ಎಂಬ ಮಾತು ಅನಾದಿ ಕಾಲದಿಂದಲೂ ಕೇಳಿ ಬರುತ್ತಿದೆ. ಇದಕ್ಕೆ ಆಂಗ್ಲ ಭಾಷೆಯಲ್ಲಿ ಆ್ಯನ್ ಆ್ಯಪಲ್ ಎ ಡೇ ಕೀಪ್ಸ್ ಯು ಫ್ರಂ ದಿ ಡಾಕ್ಟ್ರರ್ ಎ ಡೇ ಅನ್ನುತ್ತಾರೆ..