News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
Place, ಸಿನಿಮಾ

KGF ಈ ದೇಶವನ್ನು ಹೇಗೆ ಉಳಿಸಿದೆ ನೋಡಿ ಅಂದು ನೆಹರೂ ಸರ್ಕಾರವನ್ನು ಮತ್ತು ಭಾರತವನ್ನು ಹೇಗೆ ಕಾಪಾಡಿತು ನೋಡಿ

1011

ಭಾರತದಲ್ಲೇ ಮೊದಲ ವಿದ್ಯುತ್ ಪಡೆದ ನಗರ
ಭಾರತದಲ್ಲೇ ಅತಿ ಹೆಚ್ಚು ಚರ್ಚ್ಗಳನ್ನ ಒಂದಿರೊ ನಗರ
ರೈಲ್ವೆಯನ್ನು ಹೊಂದಿದ ಕರ್ನಾಟಕದ ಮೊದಲ ನಗರ

ಹೀಗೆ ಹಲವು ರೀತಿಯಲ್ಲಿ ಪ್ರಸಿದ್ಧ ಆಗಿರುವ ನಗರ ನಮ್ಮ ದೇಶವನ್ನು ಹೇಗೆ ಉಳಿಸಿದೆ ಮುಂದೆ ಓದಿ

ರಾಕಿಂಗ್​ ಸ್ಟಾರ್​ ಯಶ್​ ಅಭಿನಯದ ಕೆಜಿಎಫ್​ ಚಿತ್ರ ಸೃಷ್ಟಿಸಿರೋ ಹವಾ ಇಡೀ ಭಾರತೀಯ ಸಿನಿಮಾ ಇಂಡಸ್ಟ್ರಿಯಾದ್ಯಂತ ಬಿರುಗಾಳಿಯನ್ನೇ ಎಬ್ಬಿಸಿಬಿಟ್ಟಿದೆ. ಯಾವ ಮಟ್ಟಿಗೆ ಅಂದ್ರೆ, ಇಂಡಿಯನ್​ ಸಿನಿಮಾ ಇಂಡಸ್ಟ್ರಿಯ ಇತಿಹಾಸದಲ್ಲೇ ಕನ್ನಡದ ಚಿತ್ರವೊಂದು ಇಷ್ಟೊಂದು ಪ್ರಚಾರ ಪಡೆದದ್ದು ಇದೇ ಮೊದಲು. ನಿಜ ಹೇಳಬೇಕು ಅಂದ್ರೆ, ಕೆಜಿಎಫ್ ಚಿತ್ರದಂತೆಯೇ ಆ ಊರಿನ ಹೆಸರು ಭಾರತೀಯ ಇತಿಹಾಸದಲ್ಲಿ ಅತ್ಯಂತ ವೈಭವೋಪೇತ ಹೆಸರಾಗಿ ಉಳಿದಿದೆ. ಭವ್ಯ ಭಾರತ ನಿರ್ಮಾಣಕ್ಕೆ ಅಡಿಪಾಯ ಹಾಕಿದ್ದೇ ಕೆಜಿಎಫ್​.

ಭಾರತೀಯ ಇತಿಹಾಸಕ್ಕೆ ಬಂಗಾರದ ಯುಗವನ್ನ ತಂದು ಕೊಟ್ಟ ಹೆಸರು ಕೆಜಿಎಫ್​. ಹೀಗಾಗಿಯೇ ಕೆಜಿಎಫ್​ನ್ನ ಬಂಗಾರದ ಊರು ಎಂದೇ ಕರೆಯಲಾಗಿತ್ತು. ಇಲ್ಲಿನ ಮಣ್ಣಿನ ಕಣ ಕಣದಲ್ಲೂ ಬಂಗಾರ ಬೆರೆತು ಹೋಗಿತ್ತು. ಇದೇ ಕಾರಣಕ್ಕೆ ಕೆಜಿಎಫ್​ನ್ನ ಬ್ರಿಟೀಷರು ಮಿನಿ ಲಂಡನ್​ ಎನ್ನುವ ಹೆಸರಿನಿಂದ ಕರೆದರು. ಕೆಜಿಎಫ್​ನ ಇತಿಹಾಸವೇ ರೋಮಾಂಚನಗೊಳಿಸುವಂಥಾದ್ದು. ಪ್ರತಿ ಕನ್ನಡಿಗ ಕೂಡ ಹೆಮ್ಮೆ ಪಡುವಂಥಾದ್ದು.

ಕೆಜಿಎಫ್​ನ್ನೇ ಅಡವಿಟ್ಟಿದ್ದರು ಪ್ರಧಾನಿ ನೆಹರು:
1947 ಆಗಸ್ಟ್​ 15ರಂದು ಭಾರತ ಸ್ವಾತಂತ್ರ್ಯಗೊಂಡಾಗ ದೇಶದಲ್ಲಿ ಬಡತನ ತಾಂಡವವಾಡುತ್ತಿತ್ತು. ನಿರಂತರ ಬರಗಾಲ, ನಿರುದ್ಯೋಗ, ದೇಶ ವಿಭಜನೆಯಿಂದಾಗಿ ಎಲ್ಲೆಡೆ ದೊಂಬಿ ಗಲಾಟೆ, ಕೋಮು ಗಲಭೆಗಳು, ಇಂಥಹ ಸಾಲು ಸಾಲು ಸಮಸ್ಯೆಗಳು ಪ್ರಧಾನಿ ಜವಾಹರಲಾಲ್​ ನೆಹರು ಅವರಿಗೆ ದೊಡ್ಡ ಸವಾಲನ್ನೇ ಮುಂದಿಟ್ಟಿದ್ದವು. ಭಾರತ ದೇಶವನ್ನ ಕಟ್ಟಬೇಕು ಅಂದರೆ, ವಿಶ್ವಬ್ಯಾಂಕ್​ನಲ್ಲಿ ಸಾಲ ಪಡೆಯಲೇಬೇಕಾದ ಅನಿವಾರ್ಯತೆ ನಿರ್ಮಾಣವಾಗಿತ್ತು. ಆದರೆ ಭಾರತಕ್ಕೆ ಸಾಲ ಕೊಡಲು ವಿಶ್ವ ಬ್ಯಾಂಕ್​ ಸಿದ್ಧವಿರಲಿಲ್ಲ. ಯಾಕಂದ್ರೆ, ಭಾರತಕ್ಕೆ ಕೊಟ್ಟ ಸಾಲ ವಾಪಾಸ್​ ಬರುತ್ತೆ ಎನ್ನುವ ಯಾವುದೇ ಗ್ಯಾರಂಟಿ ವಿಶ್ವಬ್ಯಾಂಕ್​ಗೆ ಇರಲಿಲ್ಲ.

ವಿಶ್ವಬ್ಯಾಂಕ್​ನಿಂದ ಸಾಲ ಪಡೆಯೋಕೆ ನೆಹರು, ದೇಶದ ಯಾವುದಾದರು ಬೆಲೆ ಬಾಳುವ ಪ್ರದೇಶವನ್ನ ಅಡವಿಡುವ ಚಿಂತನೆ ಮಾಡುತ್ತಾರೆ. ಆಗ ಅವರ ನೆನಪಿಗೆ ಬಂದಿದ್ದೇ ಬಂಗಾರದ ಮೊಟ್ಟೆಗಳನ್ನ ತನ್ನೊಡಲಿನಲ್ಲಿ ಇಟ್ಟುಕೊಂಡಿದ್ದ ಕೆಜಿಎಫ್​. ಕೋಲಾರ ಗೋಲ್ಡ್​ ಫೀಲ್ಡ್​​​​ ಎನ್ನುವ ಚಿನ್ನದ ಭೂಮಿಯನ್ನ ಅಡವಿಡಲು ಪ್ರಧಾನಿ ನೆಹರು ನಿರ್ಧರಿಸಿದ್ದರು. ಕೆಜಿಎಫ್​ ಹೆಸರು ಕೇಳುತ್ತಿದ್ದಂತೆ ವಿಶ್ವಬ್ಯಾಂಕ್ ಭಾರತಕ್ಕೆ ಸಾಲವನ್ನ ವಿತರಿಸಿತ್ತು. ನಿಜ ಹೇಳಬೇಕು ಅಂದ್ರೆ, ಸ್ವತಂತ್ರ ಭಾರತದ ಅಭಿವೃದ್ಧಿಗೆ ಕೆಜಿಎಫ್​ನ ಪಾತ್ರ ಬಹಳಷ್ಟಿದೆ. ಕೆಜಿಎಫ್​ ಇಲ್ಲದೇ ಹೋಗಿದ್ದಿದ್ರೆ, ಸ್ವತಂತ್ರ ಭಾರತಕ್ಕೆ ಸಾಲ ಕೂಡ ಸಿಗುತ್ತಿರಲಿಲ್ಲ. ಕನ್ನಡಿಗರ ಹೆಮ್ಮೆಯ ಭೂಮಿಯನ್ನ ಅಡವಿಟ್ಟಂತಾ ನೆಹರು ಅವರು ಸಾಲ ಪಡೆದು ದೇಶದಲ್ಲಿ ಅಭಿವೃದ್ಧಿ ಕಾರ್ಯಗಳನ್ನ ಕೈಗೊಂಡರು. ಜಲಾಶಯಗಳನ್ನ ನಿರ್ಮಿಸಿದರು, ರಸ್ತೆಗಳನ್ನ ನಿರ್ಮಾಣ ಮಾಡಿದರು. ಶಾಲೆ, ಆಸ್ಪತ್ರೆ, ವಿಜ್ಞಾನ, ತಂತ್ರಜ್ಞಾನ, ಒಂದಾ ಎರಡಾ.. ಭಾರತ ಇಂದು ಇಷ್ಟೊಂದು ಎತ್ತರಕ್ಕೆ ಬೆಳೆದು ನಿಲ್ಲೋಕೆ ಬೇಕಾದ ಅಡಿಪಾಯವನ್ನ ನೆಹರು ಅಂದೇ ಹಾಕಿ ಕೊಟ್ಟರು. ನಮ್ಮ ದೇಶದ ಅಡಿಪಾಯ ಭದ್ರಗೊಳ್ಳೋಕೆ ಕಾರಣವೇ ಕನ್ನಡಿಗರ ಕೆಜಿಎಫ್​ ಎನ್ನುವುದನ್ನ ದೇಶ ಮರೆಯುವಂತಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಕರಿಬೇವನ್ನು ತಿನ್ನದೇ ಹಾಗೇ ಬಿಸಾಡುತ್ತೀರಾ ..ಆದ್ರೆ ಅದರ ಅದ್ಭುತ ಪ್ರಯೋಜನಗಳನ್ನ ತಿಳಿದರೆ…

    ಕರಿಬೇವಿನ ಸೊಪ್ಪು ಅಂದ್ರೆ ಮಹಿಳೆಯರಿಗೆ ವಿಶೇಷ ಪ್ರೀತಿ. ಅವರು ಮಾಡೋ ಅಡುಗೆಗೆ ವಿಶೇಷ ಪರಿಮಳ ನೀಡೋ ಮುಖ್ಯ ಪದಾರ್ಥ ಅದು. ಹೌದು….ಅಡುಗೆಗೆ ವಿಶೇಷ ಮೆರಗು ನೀಡುತ್ತೆ ಕರಿಬೇವು. ಕೇವಲ ಪರಿಮಳಕ್ಕಷ್ಟೇ ಅಲ್ಲ, ಇದರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳೂ ಇವೆ. ಕರಿಬೇವು ಕಬ್ಬಿಣದಂಶ ಹಾಗೂ ಪೋಲಿಕ್ ಆಸಿಡ್ ಗಳ ಗುಚ್ಛವೆಂದೇ ಹೇಳಬಹುದು. ರಕ್ತಹೀನತೆಗೂ ಇದು ರಾಮಬಾಣ. ಕರಿಬೇವು ಲಿವರ್ ಗೂ ಒಳ್ಳೆಯದು. ಲಿವರ್ ಹಾಳಾಗದಂತೆ ತಡೆಯುತ್ತದೆ. ಕರಿಬೇವು ಆಂಟಿಬಯಾಟಿಕ್ ಎಂದು ಆಯುರ್ವೇದಲ್ಲಿ ಹೇಳಲಾಗುತ್ತದೆ. ಕರಿಬೇವು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ….

  • ಸುದ್ದಿ

    ರವಿಚಂದ್ರನ್ ಇನ್ನು ಮುಂದೆ ಡಾ.ರವಿಚಂದ್ರನ್ : ಗೌರವ ಡಾಕ್ಟರೇಟ್ ಪಡೆಯಲಿದ್ದಾರೆ ನಮ್ಮ ಕನಸುಗಾರ….!

    ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್,ಶಿವರಾಜ್ ಕುಮಾರ್ ನಂತರ ಕನ್ನಡದ ಮತ್ತೊಬ್ಬ ನಟ ಗೌರವ ಡಾಕ್ಟರೇಟ್  ಪಡೆಯಲಿದ್ದಾರೆ. ಅವರು ಬೇರೆ ಯಾರು ಅಲ್ಲ ಕ್ರೇಜಿ ಸ್ಟಾರ್ ರವಿ ಚಂದ್ರನ್. ಬೆಂಗಳೂರಿನ  ಸಿ ಎಮ್ ಆರ್ ವಿಶ್ವ ವಿದ್ಯಾನಿಲಯ ರವಿ ಚಂದ್ರನ್ ರಿಗೆ ಗೌರವ ಡಾಕ್ಟರೇಟ್  ನೀಡುತ್ತಿದೆ. ಈ ಹಿಂದೆ ರವಿಚಂದ್ರನ್ ಅಭಿಮಾನಿಗಳು ತಮ್ಮ ಪ್ರೀತಿಯ ನಟನಿಗೆ ಡಾಕ್ಟರೇಟ್ ನೀಡಬೇಕು ಎಂದು ತಮ್ಮ ಆಸೆ ವ್ಯಕ್ತ ಪಡಿಸಿದ್ದರು. ಇದೀಗ ಅವರ ಬಯಕೆ ಈಡೇರಿದೆ. ನವೆಂಬರ್ 3 ರಂದು ದೊಡ್ಡ ಕಾರ್ಯಕ್ರಮದ ಮೂಲಕ…

  • ಸುದ್ದಿ

    ತಾಂಬೂಲವನ್ನು ಕೊಡುವಾಗ ತೆಗೆದುಕೊಳ್ಳುವಾಗ ಹುಷಾರಾಗಿರಿ ಏಕೆ ಗೊತ್ತಾ.?

    ವೀಳ್ಯದೆಲೆ ತಾಂಬೂಲ ಕೊಡೋವಾಗ, ವೀಳ್ಯದೆಲೆ ಆಗಿ ಹೋಗಿದೆ, ಏನು ಅಂದುಕೊಳ್ಳಬೇಡಿ ಅಂಥ ಬರೀ ಹಣ್ಣು ಅಥವಾ ತೆಂಗಿನಕಾಯಿ ಕೊಟ್ಟರೆ. ನೀವು ಮಾಡುವ ಕಾರ್ಯಗಳಿಗೆ ತುಂಬಾ ಅಡಚಣೆ ಉಂಟಾಗುತ್ತದೆ ಶುಭಕಾರ್ಯಗಳಾದರೆ ತುಂಬಾ ತೊಂದರೆಗಳಾಗುತ್ತವೆ, ಜನಸಹಾಯ ದೊರೆಯುವುದಿಲ್ಲ. ಹಣಕಾಸಿಗೆ ಪರಾದಾಟವಾಗುತ್ತದೆ. ನೀವು ಕೊಡುವ ತಾಂಬೂಲದ ವೀಳ್ಯದೆಲೆ ಒಣಗಿದರೆ ಅತಿಯಾದ ನಷ್ಟ. ಅನಾರೋಗ್ಯವಾಗುತ್ತದೆ, ನಿಮ್ಮ ಕಾರ್ಯಗಳು ಅರ್ಧಕ್ಕೇ ನಿಂತು ಹೋಗುತ್ತವೆ. ಯಾರಾದರೂ ಕೊಟ್ಟ ತಾಂಬೂಲವನ್ನು ದೇವರಿಗೆ ಸಮರ್ಪಿಸದೇ, ಯಾವುದೋ ಮೂಲೆಯಲ್ಲಿ ಇಟ್ಟುಬಿಟ್ಟರೆ, ಸಮಾಜದಲ್ಲಿ, ಬಂಧುಗಳಲ್ಲಿ ಗೌರವ ಕಳೆದುಕೊಳ್ಳುತ್ತಾರೆ, ಮಕ್ಕಳಿಗೆ ಮರೆವಿನ ರೋಗ…

  • ಸುದ್ದಿ

    ದರ್ಶನ್ ಸ್ನೇಹಿತ ಸಿನಿಮಾ ಹಾಗೂ ಕಿರುತೆರೆ ಖ್ಯಾತ ನಟ ನಿಧನ…

    ರಂಗಭೂಮಿ, ಕಿರುತೆರೆ ಹಾಗೂ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದ ಖ್ಯಾತ ನಟ ೪೮ ವರ್ಷದ ಅನಿಲ್ ಕುಮಾರ್ ವಿಧಿವಶರಾಗಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಅವರು ನಗರದ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಹೆಗ್ಗೋಡಿನ ನೀನಾಸಂನಲ್ಲಿ ಅನಿಲ್‍ಕುಮಾರ್ ತರಬೇತಿ ಪಡೆದಿದ್ದರು. ಆಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅನಿಲ್ ಅವರ ಸಹಪಾಠಿಯಾಗಿದ್ದರು. ಮೂಡಲ ಮನೆ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಟ್ಟ ಅನಿಲ್ ಅವರು, ಅನೇಕ ಸೀರಿಯಲ್, ರಂಗಭೂಮಿ ಹಾಗೂ ಸಿನಿಮಾದಲ್ಲಿ ನಟಿಸಿದ್ದಾರೆ. ಅನಿಲ್ ಕುಮಾರ್ ಅವರು…

  • ಸುದ್ದಿ

    ಸರ್ಕಾರಿ ಶಾಲೆ ಒಂದರಲ್ಲಿ ಬಿಸಿ ಊಟದಲ್ಲಿ ಹಾವು ಪತ್ತೆ…ಎಲ್ಲಿ ಗೊತ್ತೇ?

    ಸರ್ಕಾರಿ ಶಾಲೆ ಯೊಂದರಲ್ಲಿ ಮಕ್ಕಳ ಬಿಸಿ ಊಟದಲ್ಲಿ ಹಾವು ಬಿದ್ದಿರುವ ಘಟನೆ ನಡೆದಿದೆ. ಈ ಶಾಲೆಗೆ ಊಟ ಸರಬರಾಜು ಮಾಡುತ್ತಿದ್ದದ್ದು ಒಂದು ಸರ್ಕಾರೇತರ ಖಾಸಗಿ ಸಂಸ್ಥೆ ಯಾಗಿದ್ದು , ಇದು ಶಾಲೆಗೆ ಕಳುಹಿಸಿಕೊಟ್ಟ ಆಹಾರದಲ್ಲಿ ಹಾವು ಇರುವುದು ಪತ್ತೆಯಾಗಿದೆ. ಮಾಧ್ಯಮಗಳಲ್ಲಿ ಈ ಸುದ್ಧಿ ವರದಿಯಾಗಿದ್ದು ಈ ಕುರಿತು ವಿಚಾರಣೆ ನಡೆಸಿ ಆ ಸಂಸ್ಥೆಯ ಮೇಲೆ ಕ್ರಮ ಕೈಗೊಳ್ಳುವಂತೆ ಸರ್ಕಾರ ಆದೇಶ ಹೊರಡಿಸಿದೆ. ಇನ್ನು ಈ ಘಟನೆ ನಡೆದಿರುವುದು ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ.ಇಲ್ಲಿನ ಗಾರ್ಗವನ್…

  • ಸುದ್ದಿ

    ನವ ವಧು ವರರ ಮೇಲೆ ಲಕ್ಷಾಂತರ ರೂ ನೋಟುಗಳ ಸುರಿಮಳೆ ಮಾಡಿದ್ರು!ಈ ಸುದ್ದಿ ನೋಡಿ…

    ಮದುವೆಯಾದ ನವಜೋಡಿ ಮೇಲೆ ಪೋಷಕರು ಲಕ್ಷಾಂತರ ರೂ. ಹಣವನ್ನು ಸುರಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸುಶಾಂತ್ ಕೋಟಾ ಹಾಗೂ ಮೇಘನಾ ಗೌಡ್ ಮಾರ್ಚ್ 17ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸುಶಾಂತ್ ಕೋಟಾ ಸಾಫ್ಟ್ ವೇರ್ ಎಂಜಿನಿಯರ್ ಆಗಿದ್ದು, ಹೈದರಾಬಾದ್‍ನ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಹೈದರಾಬಾದ್‍ನಲ್ಲಿ ನಡೆದ ಈ ಮದುವೆಯ ವಿಡಿಯೋ ವೈರಲ್ ಆಗಿದೆ. ವರ ಹಾಗೂ ವಧುವಿನ ಪೋಷಕರು ನವಜೋಡಿ ಮೇಲೆ ಹಣದ ಹೊಳೆಯನ್ನೇ ಹರಿಸಲು ಒಂದು ದೊಡ್ಡ ಬಾಸ್ಕೆಟ್‍ನಲ್ಲಿ ನೋಟುಗಳನ್ನು ತೆಗೆದುಕೊಂಡು…