News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
Place, ಸಿನಿಮಾ

KGF ಈ ದೇಶವನ್ನು ಹೇಗೆ ಉಳಿಸಿದೆ ನೋಡಿ ಅಂದು ನೆಹರೂ ಸರ್ಕಾರವನ್ನು ಮತ್ತು ಭಾರತವನ್ನು ಹೇಗೆ ಕಾಪಾಡಿತು ನೋಡಿ

1011

ಭಾರತದಲ್ಲೇ ಮೊದಲ ವಿದ್ಯುತ್ ಪಡೆದ ನಗರ
ಭಾರತದಲ್ಲೇ ಅತಿ ಹೆಚ್ಚು ಚರ್ಚ್ಗಳನ್ನ ಒಂದಿರೊ ನಗರ
ರೈಲ್ವೆಯನ್ನು ಹೊಂದಿದ ಕರ್ನಾಟಕದ ಮೊದಲ ನಗರ

ಹೀಗೆ ಹಲವು ರೀತಿಯಲ್ಲಿ ಪ್ರಸಿದ್ಧ ಆಗಿರುವ ನಗರ ನಮ್ಮ ದೇಶವನ್ನು ಹೇಗೆ ಉಳಿಸಿದೆ ಮುಂದೆ ಓದಿ

ರಾಕಿಂಗ್​ ಸ್ಟಾರ್​ ಯಶ್​ ಅಭಿನಯದ ಕೆಜಿಎಫ್​ ಚಿತ್ರ ಸೃಷ್ಟಿಸಿರೋ ಹವಾ ಇಡೀ ಭಾರತೀಯ ಸಿನಿಮಾ ಇಂಡಸ್ಟ್ರಿಯಾದ್ಯಂತ ಬಿರುಗಾಳಿಯನ್ನೇ ಎಬ್ಬಿಸಿಬಿಟ್ಟಿದೆ. ಯಾವ ಮಟ್ಟಿಗೆ ಅಂದ್ರೆ, ಇಂಡಿಯನ್​ ಸಿನಿಮಾ ಇಂಡಸ್ಟ್ರಿಯ ಇತಿಹಾಸದಲ್ಲೇ ಕನ್ನಡದ ಚಿತ್ರವೊಂದು ಇಷ್ಟೊಂದು ಪ್ರಚಾರ ಪಡೆದದ್ದು ಇದೇ ಮೊದಲು. ನಿಜ ಹೇಳಬೇಕು ಅಂದ್ರೆ, ಕೆಜಿಎಫ್ ಚಿತ್ರದಂತೆಯೇ ಆ ಊರಿನ ಹೆಸರು ಭಾರತೀಯ ಇತಿಹಾಸದಲ್ಲಿ ಅತ್ಯಂತ ವೈಭವೋಪೇತ ಹೆಸರಾಗಿ ಉಳಿದಿದೆ. ಭವ್ಯ ಭಾರತ ನಿರ್ಮಾಣಕ್ಕೆ ಅಡಿಪಾಯ ಹಾಕಿದ್ದೇ ಕೆಜಿಎಫ್​.

ಭಾರತೀಯ ಇತಿಹಾಸಕ್ಕೆ ಬಂಗಾರದ ಯುಗವನ್ನ ತಂದು ಕೊಟ್ಟ ಹೆಸರು ಕೆಜಿಎಫ್​. ಹೀಗಾಗಿಯೇ ಕೆಜಿಎಫ್​ನ್ನ ಬಂಗಾರದ ಊರು ಎಂದೇ ಕರೆಯಲಾಗಿತ್ತು. ಇಲ್ಲಿನ ಮಣ್ಣಿನ ಕಣ ಕಣದಲ್ಲೂ ಬಂಗಾರ ಬೆರೆತು ಹೋಗಿತ್ತು. ಇದೇ ಕಾರಣಕ್ಕೆ ಕೆಜಿಎಫ್​ನ್ನ ಬ್ರಿಟೀಷರು ಮಿನಿ ಲಂಡನ್​ ಎನ್ನುವ ಹೆಸರಿನಿಂದ ಕರೆದರು. ಕೆಜಿಎಫ್​ನ ಇತಿಹಾಸವೇ ರೋಮಾಂಚನಗೊಳಿಸುವಂಥಾದ್ದು. ಪ್ರತಿ ಕನ್ನಡಿಗ ಕೂಡ ಹೆಮ್ಮೆ ಪಡುವಂಥಾದ್ದು.

ಕೆಜಿಎಫ್​ನ್ನೇ ಅಡವಿಟ್ಟಿದ್ದರು ಪ್ರಧಾನಿ ನೆಹರು:
1947 ಆಗಸ್ಟ್​ 15ರಂದು ಭಾರತ ಸ್ವಾತಂತ್ರ್ಯಗೊಂಡಾಗ ದೇಶದಲ್ಲಿ ಬಡತನ ತಾಂಡವವಾಡುತ್ತಿತ್ತು. ನಿರಂತರ ಬರಗಾಲ, ನಿರುದ್ಯೋಗ, ದೇಶ ವಿಭಜನೆಯಿಂದಾಗಿ ಎಲ್ಲೆಡೆ ದೊಂಬಿ ಗಲಾಟೆ, ಕೋಮು ಗಲಭೆಗಳು, ಇಂಥಹ ಸಾಲು ಸಾಲು ಸಮಸ್ಯೆಗಳು ಪ್ರಧಾನಿ ಜವಾಹರಲಾಲ್​ ನೆಹರು ಅವರಿಗೆ ದೊಡ್ಡ ಸವಾಲನ್ನೇ ಮುಂದಿಟ್ಟಿದ್ದವು. ಭಾರತ ದೇಶವನ್ನ ಕಟ್ಟಬೇಕು ಅಂದರೆ, ವಿಶ್ವಬ್ಯಾಂಕ್​ನಲ್ಲಿ ಸಾಲ ಪಡೆಯಲೇಬೇಕಾದ ಅನಿವಾರ್ಯತೆ ನಿರ್ಮಾಣವಾಗಿತ್ತು. ಆದರೆ ಭಾರತಕ್ಕೆ ಸಾಲ ಕೊಡಲು ವಿಶ್ವ ಬ್ಯಾಂಕ್​ ಸಿದ್ಧವಿರಲಿಲ್ಲ. ಯಾಕಂದ್ರೆ, ಭಾರತಕ್ಕೆ ಕೊಟ್ಟ ಸಾಲ ವಾಪಾಸ್​ ಬರುತ್ತೆ ಎನ್ನುವ ಯಾವುದೇ ಗ್ಯಾರಂಟಿ ವಿಶ್ವಬ್ಯಾಂಕ್​ಗೆ ಇರಲಿಲ್ಲ.

ವಿಶ್ವಬ್ಯಾಂಕ್​ನಿಂದ ಸಾಲ ಪಡೆಯೋಕೆ ನೆಹರು, ದೇಶದ ಯಾವುದಾದರು ಬೆಲೆ ಬಾಳುವ ಪ್ರದೇಶವನ್ನ ಅಡವಿಡುವ ಚಿಂತನೆ ಮಾಡುತ್ತಾರೆ. ಆಗ ಅವರ ನೆನಪಿಗೆ ಬಂದಿದ್ದೇ ಬಂಗಾರದ ಮೊಟ್ಟೆಗಳನ್ನ ತನ್ನೊಡಲಿನಲ್ಲಿ ಇಟ್ಟುಕೊಂಡಿದ್ದ ಕೆಜಿಎಫ್​. ಕೋಲಾರ ಗೋಲ್ಡ್​ ಫೀಲ್ಡ್​​​​ ಎನ್ನುವ ಚಿನ್ನದ ಭೂಮಿಯನ್ನ ಅಡವಿಡಲು ಪ್ರಧಾನಿ ನೆಹರು ನಿರ್ಧರಿಸಿದ್ದರು. ಕೆಜಿಎಫ್​ ಹೆಸರು ಕೇಳುತ್ತಿದ್ದಂತೆ ವಿಶ್ವಬ್ಯಾಂಕ್ ಭಾರತಕ್ಕೆ ಸಾಲವನ್ನ ವಿತರಿಸಿತ್ತು. ನಿಜ ಹೇಳಬೇಕು ಅಂದ್ರೆ, ಸ್ವತಂತ್ರ ಭಾರತದ ಅಭಿವೃದ್ಧಿಗೆ ಕೆಜಿಎಫ್​ನ ಪಾತ್ರ ಬಹಳಷ್ಟಿದೆ. ಕೆಜಿಎಫ್​ ಇಲ್ಲದೇ ಹೋಗಿದ್ದಿದ್ರೆ, ಸ್ವತಂತ್ರ ಭಾರತಕ್ಕೆ ಸಾಲ ಕೂಡ ಸಿಗುತ್ತಿರಲಿಲ್ಲ. ಕನ್ನಡಿಗರ ಹೆಮ್ಮೆಯ ಭೂಮಿಯನ್ನ ಅಡವಿಟ್ಟಂತಾ ನೆಹರು ಅವರು ಸಾಲ ಪಡೆದು ದೇಶದಲ್ಲಿ ಅಭಿವೃದ್ಧಿ ಕಾರ್ಯಗಳನ್ನ ಕೈಗೊಂಡರು. ಜಲಾಶಯಗಳನ್ನ ನಿರ್ಮಿಸಿದರು, ರಸ್ತೆಗಳನ್ನ ನಿರ್ಮಾಣ ಮಾಡಿದರು. ಶಾಲೆ, ಆಸ್ಪತ್ರೆ, ವಿಜ್ಞಾನ, ತಂತ್ರಜ್ಞಾನ, ಒಂದಾ ಎರಡಾ.. ಭಾರತ ಇಂದು ಇಷ್ಟೊಂದು ಎತ್ತರಕ್ಕೆ ಬೆಳೆದು ನಿಲ್ಲೋಕೆ ಬೇಕಾದ ಅಡಿಪಾಯವನ್ನ ನೆಹರು ಅಂದೇ ಹಾಕಿ ಕೊಟ್ಟರು. ನಮ್ಮ ದೇಶದ ಅಡಿಪಾಯ ಭದ್ರಗೊಳ್ಳೋಕೆ ಕಾರಣವೇ ಕನ್ನಡಿಗರ ಕೆಜಿಎಫ್​ ಎನ್ನುವುದನ್ನ ದೇಶ ಮರೆಯುವಂತಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸೌಂದರ್ಯ

    ಚಳಿಗಾಲದಲ್ಲಿ ಫೇಶಿಯಲ್ ಮಾಡಿಸುವುದರಿಂದಾಗುವ ಆ 7 ಪ್ರಯೋಜನಗಳೇನು ಗೊತ್ತಾ?

    ಚಳಿಗಾಲ ಬಂತೆಂದರೆ ಸಾಕು ಒಂದೆಲ್ಲಾ ಒಂದು ತ್ವಚೆ ಸಮಸ್ಯೆ ಶುರುವಾಗುವುದು. ಮೈಯನ್ನು ಉಣ್ಣೆ ಬಟ್ಟೆ, ಸ್ವೆಟರ್, ಕೋಟ್ ಇವುಗಳಿಂದ ರಕ್ಷಣೆ ಮಾಡಿದರೂ ಮುಖವನ್ನು ಹಾಗೇ ಬಿಡುವುದರಿಂದ ಮುಖದ ತ್ವಚೆ ಒಡೆಯಲಾರಂಭಿಸುತ್ತದೆ. ಇದರಿಂದ ಮುಖದ ತ್ವಚೆ ಡ್ರೈಯಾಗಿ ಮುಖದ ಕಾಂತಿ ಕಡಿಮೆಯಾಗುವುದು. ತುಟಿ ಒಡೆಯಲಾರಂಭಿಸುತ್ತದೆ, ಇದರಿಂದ ಮುಖ ಮತ್ತಷ್ಟು ಮಂಕಾಗಿ ಆಗಿ ಕಾಣುವುದು. ಚಳಿಯ ಪರಿಣಾಮ ನಿಮ್ಮ ಮುಖದ ಮೇಲೆ ಬೀರದಂತೆ ತಡೆಗಟ್ಟಲು ಫೇಶಿಯಲ್ ಮಾಡಿಸುವುದು ಒಳ್ಳೆಯದು. ಫೇಶಿಯಲ್ ಮಾಡಿಸುವುದರಿಂದ ಚಳಿಯಿಂದ ಒಡೆದು ಮುಖ ಕಪ್ಪಾಗುವುದಿಲ್ಲ, ಎಂದಿನಂತೆ ನಿಮ್ಮ…

  • ಉಪಯುಕ್ತ ಮಾಹಿತಿ

    ಬೇಲದ ಹಣ್ಣಿನಲ್ಲಿರುವ ಈ ಅದ್ಭುತ ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನಿಮಗೆಷ್ಟು ಗೊತ್ತು?

    ಬಿಲ್ವಪತ್ರೆ ಎಲೆಯನ್ನು ನಾವು ಶಿವಪೂಜೆಗೆ ಉಪಯೋಗಿಸುತ್ತೇವೆ. ಆದರೆ ಅದರ ಹಣ್ಣಿನ ಬಗ್ಗೆ ಹೆಚ್ಚಿನ ಜನರಿಗೆ ಗೊತ್ತಿಲ್ಲ. ಈ ಬಿಲ್ವ ಪತ್ರೆ ಹಣ್ಣು ದೇಹಕ್ಕೆ ತಂಪು ಮತ್ತು ಹೊಟ್ಟೆಗೆ ಸಂಬಂಧಪಟ್ಟ ಸಮಸ್ಯೆಗಳಿಗೆ ಉತ್ತಮವಾದ ಔಷಧಿ. ಬೇಸಿಗೆ ಕಾಲದಲ್ಲಿ ಈ ಹಣ್ಣಿನ ಸೇವನೆ ಉತ್ತಮ. ಅಲ್ಲದೆ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ. ಗ್ಯಾಸ್ಟ್ರಿಕ್, ಅಲ್ಸರ್, ಮೂತ್ರಪಿಂಡದ ಸಮಸ್ಯೆ, ಮಲಬದ್ಧತೆ, ಅಜೀರ್ಣ ಸಮಸ್ಯೆಯಿದ್ದರೆ ಈ ಹಣ್ಣನ್ನು ತಿನ್ನಬಹುದು. ಇದೊಂದು ಎನರ್ಜಿ ಡ್ರಿಂಕ್ ಅಂತಲೇ ಹೇಳಲಾಗುತ್ತದೆ. ತೂಕ ಇಳಿಸಲು ಬಯಸುವವರು ಈ ಹಣ್ಣನ್ನು…

  • ರಾಜಕೀಯ

    ನರೇಂದ್ರ ಮೋದಿಯನ್ನು ಕೆಣಕಿದ ಮೋಹಕ ತಾರೆ ರಮ್ಯಾ!ಟ್ವಿಟ್ಟರ್ನಲ್ಲಿ ಟೀಕೆಗಳ ಸುರಿಮಳೆ…

    ಕನ್ನಡ ಸಿನಿಮಾ ತಾರೆ ಮತ್ತು ಕಾಂಗ್ರೆಸ್ ಯುವ ನಾಯಕಿ ರಮ್ಯಾರವರು ತಮ್ಮ ಟ್ವಿಟ್ಟರ್’ನ ಟ್ವಿಟ್’ಗಳ ಮೂಲಕ ಪೇಚಿಗೆ ಸಿಲುಕುವುದು ಸಾಮಾನ್ಯ.

  • ಸುದ್ದಿ

    30 ಕಿ ಮೀ ದೂರದಲ್ಲಿರುವಆಸ್ಪತ್ರೆಗೆ ಕೇವಲ 18 ನಿಮಿಷಗಳಲ್ಲಿ ರಕ್ತ ರವಾನೆ : ಯಶಶ್ವಿಯಾಗಿ ನಡೆದ ಡ್ರೋನ್ ಪ್ರಯೋಗ……..

    ಡ್ರೋನ್ ಮೂಲಕ ಕೇವಲ 18 ನಿಮಿಷದಲ್ಲಿ 30 ಕಿ.ಮೀ ಸಂಚರಿಸಿ ರಕ್ತದ ಮಾದರಿಯನ್ನು ನೀಡಿದ ಘಟನೆ ಮೊದಲ ಬಾರಿಗೆ ಉತ್ತರಾಖಂಡದಲ್ಲಿ ನಡೆದಿದೆ.ನಂದಗೋನ್‍ನ ಜಿಲ್ಲಾಸ್ಪತ್ರೆಯಿಂದ ರಕ್ತದ ಮಾದರಿಯನ್ನು ಡ್ರೋನ್ ಮೂಲಕ ತೇರಿಯಲ್ಲಿರುವ ಆಸ್ಪತ್ರೆಗೆ ಕಳುಹಿಸಲಾಗಿದೆ. ಮೊದಲ ಪ್ರಯತ್ನದಲ್ಲೇ ಇದು ಸಫಲವಾಗಿದ್ದು, ಇದು ಭಾರತದ ಆರೋಗ್ಯದ ಸೇವೆಯಲ್ಲಿ ಇದೊಂದು ದೊಡ್ಡ ಹೆಜ್ಜೆ ಆಗಲಿದೆ. ಡ್ರೋನ್ ನಂದಗೋನದಿಂದ ತೇರಿ ನಡುವಿನ 30 ಕಿ.ಮೀ ದೂರವನ್ನು 18 ನಿಮಿಷದಲ್ಲಿ ಡ್ರೋನ್ ಕ್ರಮಿಸಿದೆ. ಡ್ರೋನ್ ಪ್ರತಿ ಗಂಟೆಗೆ 100 ಕಿ.ಮೀ ವೇಗದಲ್ಲಿ ಸಂಚರಿಸುವ ಸಾಮಥ್ರ್ಯ…

  • ಗ್ಯಾಜೆಟ್

    ಈಗ ಬರುತ್ತಿದೆ jio DTH ಬೇರೆ DTH ಸರ್ವಿಸ್ ಗಳಿಗೆ ಶುರುವಾಗಿದೆ ಭಯ..!ತಿಳಿಯಲು ಈ ಲೇಖನ ಓದಿ…

    ಜಿಯೋ ಸೆಟ್‌ ಟಾಪ್‌ ಬಾಕ್ಸ್‌ನ ಚಿತ್ರಗಳು ಈಗಾಗಲೇ ಮಾಧ್ಯಮಗಳಿಗೆ ಸೋರಿ ಹೋಗಿವೆ. ಜಿಯೋ ಸ್ಯಾಟಲೈಟ್‌ ಸೇವೆಯು 50ಕ್ಕೂ ಹೆಚ್ಚು ಎಚ್‌ಡಿ ಚ್ಯಾನಲ್‌ಗ‌ಳು ಸೇರಿದಂತೆ 300ಕ್ಕೂ ಹೆಚ್ಚು ಚ್ಯಾನಲ್‌ಗ‌ಳನ್ನು ಒಳಗೊಂಡಿರುತ್ತವೆ ಎನ್ನಲಾಗಿದೆ.

  • ಸುದ್ದಿ

    ಅಧಿಕಾರಕ್ಕೆ ಬರುತ್ತಿದ್ದಂತೆ ಬಯಲಾಯ್ತು BSY ಸರ್ಕಾರದ ಬಹುಕೋಟಿ ಗುಡ್ ರಿಚ್ ಹಗರಣ…!!

    ಜಿಂದಾಲ್​ಗೆ ಭೂಮಿ ನೀಡೋದನ್ನು ವಿರೋಧಿಸಿ ಹೋರಾಟ ಮಾಡಿದ್ದ ಬಿಎಸ್ ಯಡಿಯೂರಪ್ಪ ಸಿಎಂ ಆದ ವಾರದಲ್ಲೇ ಅಮೆರಿಕ ಮೂಲದ ಕಂಪನಿಗೆ 250 ಕೋಟಿ ಮೌಲ್ಯದ ಭೂಮಿಯನ್ನು ರಾತ್ರೋರಾತ್ರಿ ತರಾತುರಿಯಲ್ಲಿ ನೀಡಿದ್ದಾರೆ. ಅಮೆರಿಕ ಮೂಲದ ಬಹುರಾಷ್ಟ್ರೀಯ ವೈಮಾನಿಕ ಕಂಪನಿ ಗುಡ್​ರಿಚ್​ಗೆ ದೇವನಹಳ್ಳಿಯ ಏರೋಸ್ಪೇಸ್ SEZ ಪಾರ್ಕ್​​​ನ 25 ಎಕರೆ 1 ಗುಂಟೆ ಭೂಮಿಯನ್ನು ಎಕರೆಗೆ 2.50 ಕೋಟಿ ರೂಪಾಯಿಯಂತೆ ನೀಡಿದ್ದಾರೆ. ತಜ್ಞರ ವರದಿ ತರಿಸಿಕೊಳ್ಳದೇ, HLCC ಮೀಟಿಂಗ್ ಮಾಡದೇ, ಅಧಿಕಾರಿಗಳು ವಿರೋಧದ ನಡುವೆಯೂ 5 ವರ್ಷದ ಹಿಂದೆ ಅರ್ಜಿ ಸಲ್ಲಿಸಿದವರಿಗೆ…