ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲೇ ಮೊದಲ ವಿದ್ಯುತ್ ಪಡೆದ ನಗರ
ಭಾರತದಲ್ಲೇ ಅತಿ ಹೆಚ್ಚು ಚರ್ಚ್ಗಳನ್ನ ಒಂದಿರೊ ನಗರ
ರೈಲ್ವೆಯನ್ನು ಹೊಂದಿದ ಕರ್ನಾಟಕದ ಮೊದಲ ನಗರ
ಹೀಗೆ ಹಲವು ರೀತಿಯಲ್ಲಿ ಪ್ರಸಿದ್ಧ ಆಗಿರುವ ನಗರ ನಮ್ಮ ದೇಶವನ್ನು ಹೇಗೆ ಉಳಿಸಿದೆ ಮುಂದೆ ಓದಿ
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಸೃಷ್ಟಿಸಿರೋ ಹವಾ ಇಡೀ ಭಾರತೀಯ ಸಿನಿಮಾ ಇಂಡಸ್ಟ್ರಿಯಾದ್ಯಂತ ಬಿರುಗಾಳಿಯನ್ನೇ ಎಬ್ಬಿಸಿಬಿಟ್ಟಿದೆ. ಯಾವ ಮಟ್ಟಿಗೆ ಅಂದ್ರೆ, ಇಂಡಿಯನ್ ಸಿನಿಮಾ ಇಂಡಸ್ಟ್ರಿಯ ಇತಿಹಾಸದಲ್ಲೇ ಕನ್ನಡದ ಚಿತ್ರವೊಂದು ಇಷ್ಟೊಂದು ಪ್ರಚಾರ ಪಡೆದದ್ದು ಇದೇ ಮೊದಲು. ನಿಜ ಹೇಳಬೇಕು ಅಂದ್ರೆ, ಕೆಜಿಎಫ್ ಚಿತ್ರದಂತೆಯೇ ಆ ಊರಿನ ಹೆಸರು ಭಾರತೀಯ ಇತಿಹಾಸದಲ್ಲಿ ಅತ್ಯಂತ ವೈಭವೋಪೇತ ಹೆಸರಾಗಿ ಉಳಿದಿದೆ. ಭವ್ಯ ಭಾರತ ನಿರ್ಮಾಣಕ್ಕೆ ಅಡಿಪಾಯ ಹಾಕಿದ್ದೇ ಕೆಜಿಎಫ್.
ಭಾರತೀಯ ಇತಿಹಾಸಕ್ಕೆ ಬಂಗಾರದ ಯುಗವನ್ನ ತಂದು ಕೊಟ್ಟ ಹೆಸರು ಕೆಜಿಎಫ್. ಹೀಗಾಗಿಯೇ ಕೆಜಿಎಫ್ನ್ನ ಬಂಗಾರದ ಊರು ಎಂದೇ ಕರೆಯಲಾಗಿತ್ತು. ಇಲ್ಲಿನ ಮಣ್ಣಿನ ಕಣ ಕಣದಲ್ಲೂ ಬಂಗಾರ ಬೆರೆತು ಹೋಗಿತ್ತು. ಇದೇ ಕಾರಣಕ್ಕೆ ಕೆಜಿಎಫ್ನ್ನ ಬ್ರಿಟೀಷರು ಮಿನಿ ಲಂಡನ್ ಎನ್ನುವ ಹೆಸರಿನಿಂದ ಕರೆದರು. ಕೆಜಿಎಫ್ನ ಇತಿಹಾಸವೇ ರೋಮಾಂಚನಗೊಳಿಸುವಂಥಾದ್ದು. ಪ್ರತಿ ಕನ್ನಡಿಗ ಕೂಡ ಹೆಮ್ಮೆ ಪಡುವಂಥಾದ್ದು.
ಕೆಜಿಎಫ್ನ್ನೇ ಅಡವಿಟ್ಟಿದ್ದರು ಪ್ರಧಾನಿ ನೆಹರು:
1947 ಆಗಸ್ಟ್ 15ರಂದು ಭಾರತ ಸ್ವಾತಂತ್ರ್ಯಗೊಂಡಾಗ ದೇಶದಲ್ಲಿ ಬಡತನ ತಾಂಡವವಾಡುತ್ತಿತ್ತು. ನಿರಂತರ ಬರಗಾಲ, ನಿರುದ್ಯೋಗ, ದೇಶ ವಿಭಜನೆಯಿಂದಾಗಿ ಎಲ್ಲೆಡೆ ದೊಂಬಿ ಗಲಾಟೆ, ಕೋಮು ಗಲಭೆಗಳು, ಇಂಥಹ ಸಾಲು ಸಾಲು ಸಮಸ್ಯೆಗಳು ಪ್ರಧಾನಿ ಜವಾಹರಲಾಲ್ ನೆಹರು ಅವರಿಗೆ ದೊಡ್ಡ ಸವಾಲನ್ನೇ ಮುಂದಿಟ್ಟಿದ್ದವು. ಭಾರತ ದೇಶವನ್ನ ಕಟ್ಟಬೇಕು ಅಂದರೆ, ವಿಶ್ವಬ್ಯಾಂಕ್ನಲ್ಲಿ ಸಾಲ ಪಡೆಯಲೇಬೇಕಾದ ಅನಿವಾರ್ಯತೆ ನಿರ್ಮಾಣವಾಗಿತ್ತು. ಆದರೆ ಭಾರತಕ್ಕೆ ಸಾಲ ಕೊಡಲು ವಿಶ್ವ ಬ್ಯಾಂಕ್ ಸಿದ್ಧವಿರಲಿಲ್ಲ. ಯಾಕಂದ್ರೆ, ಭಾರತಕ್ಕೆ ಕೊಟ್ಟ ಸಾಲ ವಾಪಾಸ್ ಬರುತ್ತೆ ಎನ್ನುವ ಯಾವುದೇ ಗ್ಯಾರಂಟಿ ವಿಶ್ವಬ್ಯಾಂಕ್ಗೆ ಇರಲಿಲ್ಲ.
ವಿಶ್ವಬ್ಯಾಂಕ್ನಿಂದ ಸಾಲ ಪಡೆಯೋಕೆ ನೆಹರು, ದೇಶದ ಯಾವುದಾದರು ಬೆಲೆ ಬಾಳುವ ಪ್ರದೇಶವನ್ನ ಅಡವಿಡುವ ಚಿಂತನೆ ಮಾಡುತ್ತಾರೆ. ಆಗ ಅವರ ನೆನಪಿಗೆ ಬಂದಿದ್ದೇ ಬಂಗಾರದ ಮೊಟ್ಟೆಗಳನ್ನ ತನ್ನೊಡಲಿನಲ್ಲಿ ಇಟ್ಟುಕೊಂಡಿದ್ದ ಕೆಜಿಎಫ್. ಕೋಲಾರ ಗೋಲ್ಡ್ ಫೀಲ್ಡ್ ಎನ್ನುವ ಚಿನ್ನದ ಭೂಮಿಯನ್ನ ಅಡವಿಡಲು ಪ್ರಧಾನಿ ನೆಹರು ನಿರ್ಧರಿಸಿದ್ದರು. ಕೆಜಿಎಫ್ ಹೆಸರು ಕೇಳುತ್ತಿದ್ದಂತೆ ವಿಶ್ವಬ್ಯಾಂಕ್ ಭಾರತಕ್ಕೆ ಸಾಲವನ್ನ ವಿತರಿಸಿತ್ತು. ನಿಜ ಹೇಳಬೇಕು ಅಂದ್ರೆ, ಸ್ವತಂತ್ರ ಭಾರತದ ಅಭಿವೃದ್ಧಿಗೆ ಕೆಜಿಎಫ್ನ ಪಾತ್ರ ಬಹಳಷ್ಟಿದೆ. ಕೆಜಿಎಫ್ ಇಲ್ಲದೇ ಹೋಗಿದ್ದಿದ್ರೆ, ಸ್ವತಂತ್ರ ಭಾರತಕ್ಕೆ ಸಾಲ ಕೂಡ ಸಿಗುತ್ತಿರಲಿಲ್ಲ. ಕನ್ನಡಿಗರ ಹೆಮ್ಮೆಯ ಭೂಮಿಯನ್ನ ಅಡವಿಟ್ಟಂತಾ ನೆಹರು ಅವರು ಸಾಲ ಪಡೆದು ದೇಶದಲ್ಲಿ ಅಭಿವೃದ್ಧಿ ಕಾರ್ಯಗಳನ್ನ ಕೈಗೊಂಡರು. ಜಲಾಶಯಗಳನ್ನ ನಿರ್ಮಿಸಿದರು, ರಸ್ತೆಗಳನ್ನ ನಿರ್ಮಾಣ ಮಾಡಿದರು. ಶಾಲೆ, ಆಸ್ಪತ್ರೆ, ವಿಜ್ಞಾನ, ತಂತ್ರಜ್ಞಾನ, ಒಂದಾ ಎರಡಾ.. ಭಾರತ ಇಂದು ಇಷ್ಟೊಂದು ಎತ್ತರಕ್ಕೆ ಬೆಳೆದು ನಿಲ್ಲೋಕೆ ಬೇಕಾದ ಅಡಿಪಾಯವನ್ನ ನೆಹರು ಅಂದೇ ಹಾಕಿ ಕೊಟ್ಟರು. ನಮ್ಮ ದೇಶದ ಅಡಿಪಾಯ ಭದ್ರಗೊಳ್ಳೋಕೆ ಕಾರಣವೇ ಕನ್ನಡಿಗರ ಕೆಜಿಎಫ್ ಎನ್ನುವುದನ್ನ ದೇಶ ಮರೆಯುವಂತಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ ಬರಲಿರುವ 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತೀಯ ಮೂಲದ ಮಹಿಳೆಯೊಬ್ಬರು ಸ್ಪರ್ಧಿಸುತ್ತಿದ್ದಾರೆ. ಈ ಕುರಿತು ಅವರು ಅಮೆರಿಕದ ಮಾಧ್ಯಮವೊಂದಕ್ಕೆ ಅಧಿಕೃತವಾಗಿ ಹೇಳಿದ್ದಾರೆ. ಇವರು ಅಮೇರಿಕದ ಕಾಂಗ್ರೆಸ್ ನಮಹ ಮೊದಲ ಮಹಿಳಾ ಹಿಂದೂ ಕಾರ್ಯಕರ್ತೆ ಯಾಗಿದ್ದಾರೆ. ಹೆಸರು ತುಳಸಿ ಗಬ್ಬಾರ್ಡ್. ಈಗ ಇವರು ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬೇಕೆಂಬ ನಿರ್ಧಾರ ಮಾಡಿದ್ದಾರೆ. ತುಳಸಿ ಅವರು ಸದ್ಯ ಅಮೆರಿಕ ವಿದೇಶಾಂಗ ಇಲಾಖೆಯ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗ ಇವರ ನಿರ್ಧಾರವು ಎಲ್ಲರೂ ಆಶ್ಚರ್ಯಪಡುವಂತೆ ಮಾಡಿದೆ. ಗಬ್ಬಾರ್ಡ್ ಇರಾಕ್…
ಹಿಂದುಗಳು ನಡೆದುಕೊಳ್ಳುವ ಪವಿತ್ರ ನಾಲ್ಕು ಧಾಮಗಳ ಯಾತ್ರೆಯಲ್ಲಿ ಕೇದಾರನಾಥವೂ ಸಹ ಒಂದು, ಅಲ್ಲದೆ, ಸಮುದ್ರ ಮಟ್ಟದಿಂದ ಅತಿ ಎತ್ತರದಲ್ಲಿ ನೆಲೆಸಿರುವ ದೇವಾಲಯವೂ ಸಹ ಇದೆ. ಮೂಲತಃ ಈ ದೇವಾಲಯವು ಪಾಂಡವರಿಂದ ನಿರ್ಮಿಸಲಾಗಿದೆ ಎನ್ನುತ್ತಾರಾದರೂ ಪ್ರಸ್ತುತ ರಚನೆಯು ಆದಿ ಗುರು ಶಂಕರಾಚಾರ್ಯರಿಂದ ನಿರ್ಮಿಸಲ್ಪಟ್ಟಿದೆ ಎನ್ನಲಾಗುತ್ತದೆ. ಪ್ರಾಯಶ: ಕೇದಾರನಾಥ ತಲುಪುವುದು ಬಹುತೇಕರಿಗೆ ಬಲು ಕಷ್ಟಕರವಾಗಿದೆ. ಏಕೆಂದರೆ ಇಲ್ಲಿರುವ ವಿಪರೀತ ಹವಾಮಾನ. ಒಮ್ಮೊಮ್ಮೆ ಮೇಘಗಳ ಸ್ಫೋಟವಾಯಿತೆಂದರೆ ಸಾಕಷ್ಟಿ ನೀರು ಹಾಗೂ ಕಲ್ಲು ಬಂಡೆಗಳು ಕೇದಾರನಾಥಕ್ಕೆ ನುಗ್ಗುವುದು ಸಾಮಾನ್ಯ. ಕಳೆದ 2013 ರಲ್ಲಿ…
15 ದಿನ ಮಳೆ ಬರದಿದ್ದರೆ ಮಂಜುನಾಥನ ಅಭಿಷೇಕಕ್ಕೂ ನೀರಿಲ್ಲ. ಈಗ ಅಭಿಷೇಕಕ್ಕೆ ನೇತ್ರಾವತಿಯಲ್ಲಿ ತಾತ್ಕಲಿಕವಾಗಿ ನೀರಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ತಮ್ಮ ಕಳವಳವನ್ನು ಹೊರಹಾಕಿದ್ದಾರೆ.ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ನೀರಿನ ಸಮಸ್ಯೆಯಾಗಿದೆ. ಘಟ್ಟದ ಭಾಗದಲ್ಲಿ ಮಳೆಯಾಗದ ಕಾರಣ ನೇತ್ರಾವತಿಯಲ್ಲಿ ನೀರಿಲ್ಲ. ಅಲ್ಲದೆ ಹವಾಮಾನ ಇಲಾಖೆ ಇನ್ನೂ ಹತ್ತು ದಿನ ಮಳೆ ಬರಲ್ಲ ಎಂದು ಸೂಚನೆ ಕೊಟ್ಟಿದೆ. ಹೀಗಾಗಿ ಕ್ಷೇತ್ರ ದರ್ಶನ ಮುಂದೂಡಿ…
ಗುಜರಾತ್ನ ಬನಸ್ಕಾಂತ ಜಿಲ್ಲೆಯ ಠಾಕೂರ್ ಸಮುದಾಯದಲ್ಲಿ ಯುವತಿಯರು ಮೊಬೈಲ್ ಪೋನ್ ಬಳಕೆ ಮಾಡದಂತೆ ನಿಷೇಧವೇರಿದೆ. ಇನ್ನು ಬೇರೆ ಜಾತಿ ಯುವಕರನ್ನು ಮದುವೆಯಾದರೇ ಭಾರಿ ಮೊತ್ತದ ದಂಡವನ್ನು ಪಾಲಕರಿಗೆ ವಿಧಿಸಲಾಗುವುದು ಜಿಲ್ಲೆಯ 12 ಗ್ರಾಮಗಳಲ್ಲಿ ಈ ಕಾನೂನು ಜಾರಿಗೆ ಬರಲಿದೆ ಎಂದು ಸಮುದಾಯದ ನಾಯಕರು ಹಾಗೂ ಸ್ಥಳೀಯ ಶಾಸಕರು ತಿಳಿಸಿದ್ದಾರೆ. ಮದುವೆಗೂ ಮುನ್ನ ಯುವತಿಯರು ಮೊಬೈಲ್ ಬಳಸಬಾರದು. ಒಂದೆ ವೇಳೆ ಬಳಸಿದರೆ, ಅದಕ್ಕೆ ಹೆತ್ತವರೇ ಜವಾಬ್ದಾರಿಯಾಗಲಿದ್ದಾರೆ. ಇನ್ನು ಸಮುದಾಯದ ಯುವತಿ ಹಾಗೂ ಯುವಕರು ಬೇರೆ ಜಾತಿಯವರನ್ನು ಪ್ರೀತಿಸಿ ಮದುವೆಯಾದರೆ,…
ರಷ್ಯಾದ ಸ್ಟಾರ್ಟ್ ಅಪ್ ಕಂಪನಿಯೊಂದು ವಿಶೇಷ ರೋಬೋಟ್ ಒಂದನ್ನು ತಯಾರಿಸಿದೆ. ಈ ರೋಬೋಟ್ ಉದ್ಯೋಗವರಸಿ ಬರುವ ನಿರುದ್ಯೋಗಿಗಳ ಸಂದರ್ಶನ ಪಡೆಯಲಿದೆ. ಪ್ರಮುಖ ಕಂಪನಿಗಳು ಸೇರಿ ಸುಮಾರು 300 ಕಂಪನಿಗಳು ಈ ರೋಬೋಟ್ ಮೂಲಕ ಇಂಟರ್ವ್ಯೂ ಮಾಡಿಸ್ತಿವೆ. ಪೆಪ್ಸಿ, ಲೋರಿಯಲ್ ಸೇರಿದಂತೆ ಪ್ರಮುಖ ಕಂಪನಿಗಳಿಗೆ ಕೆಲಸಕ್ಕೆ ಸೇರಲು ನೀವು ನಿರ್ಧರಿಸಿದ್ದರೆ ನಿಮಗೆ ರೋಬೋಟ್ ವೇರಾ ಕರೆ ಮಾಡಬಹುದು. ಇಲ್ಲವೆ ವಿಡಿಯೋ ಕಾಲ್ ಮೂಲಕ ನಿಮಗೆ ಪ್ರಶ್ನೆಗಳನ್ನು ಕೇಳಬಹುದು. ಸೇಂಟ್ ಪೀಟರ್ಸ್ಬರ್ಗ್ ನ ಸ್ಟ್ರಾಫೇರಿ ಸಂಸ್ಥೆ ಈ ರೋಬೋಟ್ ಸಿದ್ಧಪಡಿಸಿದೆ….
ದಿನನಿತ್ಯದ ಚಟುವಟಿಕೆಯಲ್ಲಿ ನಿದ್ರೆಯೂ ಒಂದು. ಉತ್ತಮ ಆರೋಗ್ಯಕ್ಕೆ ಪೌಷ್ಟಿಕಾಂಶ ಭರಿತ ಆಹಾರ ಮುಖ್ಯವಾದಂತೆ ಉತ್ತಮ ನಿದ್ರೆಗೂ ನಾವು ಸೇವಿಸುವ ಆಹಾರ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ.