ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಭಿಮಾನಿ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ರಷ್ಯಾದ ಅಭಿಮಾನಿಯೊಬ್ಬರು ವಿಡಿಯೋ ಮಾಡಿ ಅವರ ಮೆಚ್ಚುಗೆ ಸೂಚಿಸಿದ್ದಾರೆ. ಈ ವಿಡಿಯೋ ನೋಡಿ ಕಿಚ್ಚ ಸುದೀಪ್ ಅವರು ರಷ್ಯಾದ ಅಭಿಮಾನಿಗೆ ಬೆರಗಾಗಿದ್ದಾರೆ ಮರೀನಾ ಕಾರ್ಟಿಂಕಾ ಎಂಬವರು ಈ ವಿಡಿಯೋದಲ್ಲಿ ಸುದೀಪ್ ಅವರ ನಟನೆ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ ಮುಂಬರುವ ದಿನಗಳಲ್ಲಿ ನಿಮ್ಮನ್ನು ಭೇಟಿ ಮಾಡುತ್ತೇನೆ ಎಂದು ಮರೀನಾ ವಿಡಿಯೋದಲ್ಲಿ ತಿಳಿಸಿದ್ದಾರೆ .

ವಿಡಿಯೋದಲ್ಲಿ ಏನಿದೆ? :ನಾನು ನಿಮ್ಮ ಬಹುದೊಡ್ಡ ಅಭಿಮಾನಿ. ನೀವು ನಡೆಸಿಕೊಡುವ ಬಿಗ್ ಬಾಸ್ ಕಾರ್ಯಕ್ರಮವನ್ನು ನಾನು ನೋಡಲು ಪ್ರಯತ್ನಿಸುತ್ತೇನೆ. ನೀವು ಅತ್ಯುತ್ತಮ ನಟರಾಗಿದ್ದು, ನಾನು ನಿಮ್ಮ ಸಿನಿಮಾಗಳನ್ನು ನೋಡಲು ಇಷ್ಟಪಡುತ್ತೇನೆ. ನೀವು ನಟಿಸಿದ ಪುಲಿ, ಕೋಟಿಗೊಬ್ಬ, ಹೆಬ್ಬುಲಿ, ಪೈಲ್ವಾನ್ ಸಿನಿಮಾಗಳನ್ನು ನೋಡಿದ್ದೇನೆ. ನೀವು ಯಾವಾಗಲೂ ಸಂತೋಷವಾಗಿ ಹಾಗೂ ಆರೋಗ್ಯವಾಗಿ ಇರಬೇಕು ಎಂದು ಬಯಸುತ್ತೇನೆ. ನೀವು ನಮಗೆ ಮನರಂಜನೆ ನೀಡುತ್ತಿರುವುದಕ್ಕೆ ಧನ್ಯವಾದ ಎಂದು ಹೇಳಿದ್ದಾರೆ.

ಇತ್ತೀಚೆಗಷ್ಟೇ ಸುದೀಪ್, ಮೆಗಾಸ್ಟಾರ್ ಚಿರಂಜೀವಿ ಜೊತೆ ನಟಿಸಿದ್ದ ‘ಸೈರಾ ನರಸಿಂಹರೆಡ್ಡಿ’ ಚಿತ್ರ ಬಿಡುಗಡೆಯಾಗಿತ್ತು. ಈ ಸಿನಿಮಾದಲ್ಲಿ ಸುದೀಪ್ ಅವುಕು ರಾಜನ ಪಾತ್ರದಲ್ಲಿ ನಟಿಸಿದ್ದರು. ಈ ಪಾತ್ರಕ್ಕೆ ಫಿದಾ ಆದ ಅಭಿಮಾನಿಗಳು ಅವುಕು ರಾಜು ಫ್ಯಾನ್ ಗರ್ಲ್ ಎಂದು ಟ್ವಿಟ್ಟರ್ ಖಾತೆ ತೆರೆದಿದ್ದರು. ರಷ್ಯಾ ಅಭಿಮಾನಿಯ ಈ ವಿಡಿಯೋವನ್ನು ಅವುಕು ರಾಜು ಫ್ಯಾನ್ ಗರ್ಲ್ಸ್ ಟ್ವಿಟ್ಟರಿನಲ್ಲಿ ಟ್ವೀಟ್ ಪೋಸ್ಟ್ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಸುದೀಪ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸುದೀಪ್ ತಮ್ಮ ಟ್ವಿಟ್ಟರಿನಲ್ಲಿ ಅಭಿಮಾನಿ ಮರೀನಾ ಕಾರ್ಟಿಂಕಾಗೆ ಧನ್ಯವಾದ ತಿಳಿಸಿದ್ದಾರೆ. ಸದ್ಯ ಸುದೀಪ್ ಅವರು ‘ಕೋಟಿಗೊಬ್ಬ-3’ ಸಿನಿಮಾದಲ್ಲಿ ನಟಿಸುತ್ತಿದ್ದು, ಆ ಬಳಿಕ ಅನೂಪ್ ಭಂಡಾರಿ ನಿರ್ದೇಶನದ ಸಿನಿಮಾದಲ್ಲಿ ನಟಿಸಲಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಯಸ್ಸಿಗೂ ಬುದ್ದಿವನ್ತಿಕೆಗೂ ಏನೂ ಸಂಭಂದವಿಲ್ಲ ಅಂತಾರೆ. ಇಂತಹವರನ್ನೂ ನೋಡಿಯೇ ಇಂತಹ ಮಾತು ಹೇಳಿದ್ದಾರೆ ಅನಿಸುತ್ತದೆ. ಏಕೆಂದರೆ, ನೀವು ಶಾಕ್ ಆಗ್ತೀರ, ಇನ್ನೂ ಹತ್ತನೇ ತರಗತಿ ಓದುತ್ತಿರುವ ಹರ್ಷವರ್ಧನ್ ಜಾಲಾ ಏರೋಬಾಟಿಕ್ಸ್ 7 ಟೆಕ್ ಸೊಲ್ಯೂಷನ್ಸ್ ಎಂಬ ಸಂಸ್ಥೆಯ ವ್ಯವಸ್ಥಾಪಕ, ಸಿಇಓ.
ಭಾರತದಲ್ಲಿ ಕೊರೋನಾ ಸೋಂಕು ಪ್ರಕರಣ ದಿನೇ ದಿನೇ ಹೆಚ್ಚುತ್ತಲೇ ಇದೆ, ಭಾರತದಲ್ಲಿ ಕೊರೋನಾ ಈಗ ಸ್ಟೇಜ್ 2 ಹಂತದಲ್ಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಸ್ಟೇಜ್ 4 ಗೆ ಕೊರೋನಾ ಆಕ್ರಮಿಸಿದರೆ ಖಂಡಿತ ದುರಂತ ಸಂಭವಿಸಲಿದೆ ಎಂದು ಹಲವಾರು ಮಂದಿ ಅಭಿಪ್ರಾಯ ಪಟ್ಟಿದ್ದಾರೆ, ಚೀನಾ ಈಗಾಗಲೇ ಈ ಸಂಕಷ್ಟದಿಂದ ಪಾರಾಗಿದೆ ಮತ್ತು ಭಾರತ ಈಗಾಗಲೇ ಹಲವಾರು ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಂಡಿದೆ. ಇಷ್ಟೇ ಅಲ್ಲದೆ ಕೊರೋನಾ ಅಬ್ಬರಕ್ಕೆ ಈಗಾಗಲೇ ಆರ್ಥಿಕ ವಹಿವಾಟು ಕುಸಿದು ಬಿದ್ದಿದೆ, ಕೇವಲ ಏಳು ದಿನಗಳಲ್ಲಿ ಅಂತರದಲ್ಲಿ…
ಈಗಿನ ಕಾಲದಲ್ಲಿ ಹಾಲನ್ನ ಕುಡಿಯದೆ ಇರುವ ಜನರ ಹುಡುಕುವುದು ಬಹಳ ಕಷ್ಟ, ಹೌದು ಹಾಲು ನಮ್ಮ ದೇಹಕ್ಕೆ ಹೆಚ್ಚಿನ ಪ್ರಮಾಣದ ಔಷದಿಯ ಅಂಶಗಳನ್ನ ಒದಗಿಸುವುದರಿಂದ ಹೆಚ್ಚಿನ ಜನರು ಹಾಲನ್ನ ಕುಡಿಯುತ್ತಾರೆ. ಇನ್ನು ಬಳಸುವ ನಾವು ಗೋಮಾತೆಯ ಹಾಲನ್ನ ವಿವಿಧ ಉಪಯೋಗಗಳಿಗಾಗಿ ಬಳಸುತ್ತೇವೆ, ಹೌದು ಚಹಾ ಮಾಡಲು ಮತ್ತು ಸಿಹಿ ತಿಂಡಿಗಳನ್ನ ಮಾಡಲು ಮತ್ತು ದೇವರ ಪೂಜೆಗೆ ಹೆಚ್ಚಿನ ಪ್ರಮಾಣದಲ್ಲಿ ಹಾಲನ್ನ ಬಳಸಲಾಗುತ್ತದೆ. ಇನ್ನು ದಿನದಿಂದ ದಿನಕ್ಕೆ ಜನಸಂಖ್ಯೆ ಜಾಸ್ತಿ ಆಗುತ್ತಾ ಹೋದಂತೆ ಹಸುವಿನ ಹಾಲಿನ ಬೆಲೆ ಕೂಡ…
ಕರ್ನಾಟಕ SSLC ಫಲಿತಾಂಶ 2026 (ನಿನ್ನೆ – ಏಪ್ರಿಲ್ 23, 2026) ನಿನ್ನೆ ಕರ್ನಾಟಕ SSLC (10ನೇ ತರಗತಿ) ಫಲಿತಾಂಶ ಪ್ರಕಟವಾಗಿದೆ. ಪ್ರಮುಖ ಹೈಲೈಟ್ಸ್ ಒಟ್ಟು ಪಾಸ್ ಪ್ರಮಾಣ: 94.1% (ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ) ಸುಮಾರು 8.6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಹೆಣ್ಣು ಮಕ್ಕಳು ಹೆಚ್ಚು ಪಾಸ್ (96.18%), ಹುಡುಗರಿಗಿಂತ ಮೇಲುಗೈ ಟಾಪರ್ಸ್ & ಫುಲ್ ಮಾರ್ಕ್ಸ್ ಕೆಲ ವಿದ್ಯಾರ್ಥಿಗಳು 625/625 ಪೂರ್ಣ ಅಂಕ ಪಡೆದಿದ್ದಾರೆ ಕುಂದಾಪುರದ ವಿದ್ಯಾರ್ಥಿ ಪ್ರೀತಮ್ ಪೂಜಾರಿ ರಾಜ್ಯ ಟಾಪರ್ ಆಗಿದ್ದಾರೆ…
ಇತ್ತೀಚೆಗಷ್ಟೇ S.S.L.C.ಪಲಿತಾಂಶ ಪ್ರಕಟವಗಿದ್ಧು ಪೇಲ್ ಆದ ವಿದ್ಯಾರ್ಥಿಗಳ ಪೂರಕ ಪರೀಕ್ಷೆ ಜೂನ್ 21 ರಿಂದ 28 ರವರೆಗೆ ನಡೆಯಲಿದೆ . ಮೇ 10 ಪೂರಕ ಪರೀಕ್ಷೆ ಕಟ್ಟಲು ಕೊನೆಯ ದಿನವಾಗಿದೆ. 200 ರೂ. ದಂಡ ಶುಲ್ಕದೊಂದಿಗೆ ಮೇ 15 ರ ವರೆಗೆ ಪೂರಕ ಪರೀಕ್ಷೆ ಕಟ್ಟಬಹುದಾಗಿದೆ.ಪೇಲ್ ಆಗಿರುವಂಥಹ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದವರು ಕೂಡ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಉತ್ತರ ಪತ್ರಿಕೆಗಳ ಛಾಯಾ ಪ್ರತಿ ಪಡೆಯಲು ಮೇ 13 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಛಾಯಾಪ್ರತಿಗೆ ಒಂದು…
ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಗ್ಯಾಸ್ ಸಿಲಿಂಡರ್ ಪಡೆಯುವವರಿಗೆ ಸಿಲಿಂಡರ್ ಜೊತೆ 50 ಲಕ್ಷ ರೂಪಾಯಿವರೆಗೆ ವಿಮೆ ಸಂಪೂರ್ಣ ಉಚಿತವಾಗಿ ಸಿಗಲಿದೆ. ಅಂದ್ರೆ ಅಡುಗೆ ಮಾಡುವ ವೇಳೆ ಸಿಲಿಂಡರ್ ಸ್ಫೋಟಿಸಿ ಅನಾಹುತ ಸಂಭವಿಸಿದ್ರೆ ಕುಟುಂಬಕ್ಕೆ 50 ಲಕ್ಷ ರೂಪಾಯಿಯವರೆಗೆ ಪರಿಹಾರ ಸಿಗಲಿದೆ. ಸರ್ವೆಯೊಂದರ ಪ್ರಕಾರ, ಭಾರತದಲ್ಲಿ ಪ್ರತಿ ವರ್ಷ 100ಕ್ಕೂ ಹೆಚ್ಚು ಮಂದಿ ಸಿಲಿಂಡರ್ ಸ್ಫೋಟಿಸಿ ಸಾವನ್ನಪ್ಪುತ್ತಾರೆ. ಆದ್ರೆ ಅನೇಕ ಬಾರಿ ಜನರು ಇದ್ರ ಪರಿಹಾರವನ್ನು ಪಡೆಯುವುದಿಲ್ಲ. ಪರಿಹಾರದ ಬಗ್ಗೆ ಅವ್ರಿಗೆ ಮಾಹಿತಿಯಿಲ್ಲದಿರುವುದು ಇದಕ್ಕೆ ಕಾರಣ. ಈ…