News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಪ್ರೇಯಸಿ ಕೊಕ್ಕರೆಯ ಕಾಲು ಮುರಿದ ಬೇಟೆಗಾರ, ನಂತರ ಗಂಡು ಕೊಕ್ಕರೆ ಮಾಡಿದ ಕೆಲಸ ನೋಡಿ.

327

ಮನುಷ್ಯ ಪ್ರೀತಿಗಾಗಿ ಏನು ಮಾಡಲು ಕೂಡ ತಯಾರು ಇರುತ್ತಾನೆ, ಹಾಗೆ ಪ್ರಾಣಿ ಮತ್ತು ಪಕ್ಷಿಗಳು ಕೂಡ, ಬೇಟೆಗಾರನಿಂದ ಕಾಲು ಕಳೆದುಕೊಂಡ ಹೆಣ್ಣು ಕೊಕ್ಕರೆಗಾಗಿ ಈ ಗಂಡು ಕೊಕ್ಕರೆ ಮಾಡಿದ ಕೆಲಸವನ್ನ ಕೇಳಿದರೆ ನಿಮ್ಮ ಕಣ್ಣಲ್ಲಿ ಕೂಡ ನೀರು ಜಿನುಗುತ್ತದೆ. ಹಾಗಾದರೆ ಈ ಗಂಡು ಕೊಕ್ಕರೆ ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಸ್ನೇಹಿತರೆ ಈ ಕೊಕ್ಕರೆಯ ಪ್ರೇಮ ಕಥೆ ಬಹಳ ರೋಚಕವಾಗಿದೆ, ಹೌದು ದಕ್ಷಿಣ ಆಫ್ರಿಕಾದಲ್ಲಿ ವಾಸವಿದ್ದ ಗಂಡು ಕೊಕ್ಕರೆ ಕ್ಲಿಪಿತಾನ್ ಮತ್ತು ಗಂಡು ಕೊಕ್ಕರೆ ಮಲೆನಾ ತುಂಬಾ ಅನ್ಯೋನ್ಯವಾಗಿ ಕಾಲ ಕಳೆಯುತ್ತಿದ್ದವು.

ಸುಮಾರು 15 ವರ್ಷಗಳ ಹಿಂದೆ ಮಾರ್ಚ್ ತಿಂಗಳಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಚಳಿ ಜಾಸ್ತಿ ಇರುವ ಕಾರಣ ಒಳ್ಳೆಯ ಸ್ಥಳವನ್ನ ಹುಡುಕಿಕೊಂಡು 14 ಸಾವಿರ ಕಿಲೋ ಮೀಟರ್ ಸಂಚಾರವನ್ನ ಮಾಡಿ ಕ್ರೋಷಿಯಾ ದೇಶಕ್ಕೆ ಬಂದಿದ್ದವು ಈ ಎರಡು ಕೊಕ್ಕರೆಗಳು. ಕ್ಲಿಪಿತಾನ್ ಮತ್ತು ಮಲೆನಾ ಮರದ ಮೇಲೆ ಕುಳಿತ್ತಿದ್ದಾಗ ಬೇಟೆಗಾರನೊಬ್ಬ ಗುಂಡು ಹಾರಿಸಿದ್ದಾನೆ, ಇನ್ನು ಆ ಬೇಟೆಗಾರ ಹಾರಿದ ಗುಂಡು ಹೆಣ್ಣು ಕೊಕ್ಕರೆ ಮಲೆನಾ ಕಾಲಿಗೆ ಬಿತ್ತು. ಇನ್ನು ಗಾಯಗೊಂಡ ಮಲೆನಾ ನದಿಯೊಂದರ ಬಳಿ ಬಿದ್ದು ಸಾವು ಬದುಕಿನ ನಡುವೆ ಹೋರಾಟವನ್ನ ಮಾಡುತ್ತಿತ್ತು, ಈ ಸಮಯದಲ್ಲಿ ಇದನ್ನ ನೋಡಿದ ಸ್ಟಿಫನ್ ಅನ್ನುವ ವ್ಯಕ್ತಿ ಆ ಕೊಕ್ಕರೆಯನ್ನ ಮನೆಗೆ ತಂದು ಅದಕ್ಕೆ ಚಿಕಿತ್ಸೆಯನ್ನ ಕೊಟ್ಟು ಅದನ್ನ ಸಾಕಿದರು.

ತನ್ನ ಪ್ರೇಯಸಿ ಮಲೆನಾಳನ್ನು ಹುಡುಕಿ ಹುಡುಕಿ ಸಾಕಾಗಿ ಮತ್ತೆ ದಕ್ಷಿಣ ಆಫ್ರಿಕಾಗೆ ಹೋಯಿತು ಗಂಡು ಕೊಕ್ಕರೆ ಕ್ಲಿಪಿತಾನ್, ಮುಂದಿನ ವರ್ಷ ಮಾರ್ಚ್ ನಲ್ಲಿ ಮತ್ತೆ ತನ್ನ ಪ್ರೇಯಸಿಯನ್ನ ಹುಡುಕಿಕೊಂಡು ಬಂದ ಕ್ಲಿಪಿತಾನ್ ಗೆ ಕ್ರೋಷಿಯಾದ ಒಂದು ಮನೆಯ ಬಳಿ ಮಲೆನಾ ಕಾಣಿಸಿಕೊಳ್ಳುತ್ತಾಳೆ ಮತ್ತು ನಂತರ ಎರಡು ಜೊತೆಗೂಡಿದವು. ಇನ್ನು ಮಲೆನಾ ಕಾಲಿಗೆ ಪೆಟ್ಟು ಬಿದ್ದ ಕಾರಣ ಅದಕ್ಕೆ ಹಾರಾಟ ಮಾಡಲು ಸಾಧ್ಯವಾಗುವುದಿಲ್ಲ, ಈ ಕಾರಣದಿಂದ ಮಾರ್ಚ್ ತಿಂಗಳಲ್ಲಿ ಪ್ರತಿ ವರ್ಷ 14 ಸಾವಿರ ಕಿಲೋ ಮೀಟರ್ ಸಂಚಾರ ಮಾಡಿ ಬರುವ ಕ್ಲಿಪಿತಾನ್ ಆಗಸ್ಟ್ ತಿಂಗಳ ತನಕ ತನ್ನ ಪ್ರೇಯಸಿ ಮಲೆನಾ ಜೊತೆಗೆ ಇದ್ದು ಮರಿ ಮಾಡುತ್ತದೆ. ಇನ್ನು ಮಲೆನಾ ಮತ್ತು ಕ್ಲಿಪಿತಾನ್ ತನ್ನ ಮರಿಗಳಿಗೆ ಹಾರುವುದನ್ನ ಕಲಿಸಿಕೊಡುತ್ತದೆ ಮತ್ತು ಆಗಸ್ಟ್ ತಿಂಗಳಲ್ಲಿ ಮರಿಗಳನ್ನ ಕರೆದುಕೊಂಡು ದಕ್ಷಿಣ ಆಫ್ರಿಕಾಗೆ ಹೋಗುತ್ತದೆ ಕ್ಲಿಪಿತಾನ್.

ಹೀಗೆ ಸುಮಾರು 15 ವರ್ಷಗಳಿಂದ ಇವರ ಪ್ರೇಮ ಪಯಣ ನಡೆಯುತ್ತಲೇ ಇದೆ. ಮಾರ್ಚ್ ತಿಂಗಳು ಆಗಮನ ಆಗುತ್ತಿದ್ದಂತೆ ತನ್ನ ಪ್ರಿಯಕರ ಕ್ಲಿಪಿತಾನ್ ಗಾಗಿ ಪ್ರತಿ ದಿನ ಎದುರು ನೋಡುತ್ತದೆ ಹೆಣ್ಣು ಕೊಕ್ಕರೆ ಮಲೆನಾ, ಈ ಕೊಕ್ಕರೆಗಳ ಮರಿಗಳು ವಾಪಾಸ್ ಬಂದು ಮಲೆನಳನ್ನ ನೋಡುತ್ತವೋ ಇಲ್ಲವೋ ಗೊತ್ತಿಲ್ಲ, ಆದರೆ ಅದೆಷ್ಟೇ ಕಷ್ಟಕರ ವಾತಾವರಣ ಇದ್ದರೂ ಕೂಡ ಕ್ಲಿಪಿತಾನ್ ತನ್ನ ಪ್ರೇಯಸಿ ಮಲೆನಳನ್ನ ನೋಡಲು ಬಂದೆ ಬರುತ್ತದೆ. ಸ್ನೇಹಿತರೆ ಎಂತಹ ಪ್ರೀತಿ ಅಲ್ಲವೇ ಈ ಹಕ್ಕಿಗಳದ್ದು, ಈ ಕೊಕ್ಕರೆಗಳ ಪ್ರೇಮ ಕಥೆ ಈಗ ಇಡೀ ಪ್ರಪಂಚದಾದ್ಯಂತ ವೈರಲ್ ಆಗುತ್ತಿದೆ, ಇನ್ನು ಈ ಹೆಣ್ಣು ಕೊಕ್ಕರೆಯನ್ನ ಸಾಕುತ್ತಿರುವ ಸ್ಟಿಫನ್ ಅವರ ಒಳ್ಳೆಯ ಮನಸ್ಸಿಗೆ ನಾವು ಮೆಚ್ಚಲೇಬೇಕು, ಸ್ನೇಹಿತರೆ ಈ ಕೊಕ್ಕರೆಗಳ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸೌಂದರ್ಯ

    ತರಕಾರಿ,ಹಣ್ಣು ಸಿಪ್ಪೆ ಬಿಸಾಡಬೇಡಿ – ಇದರಿಂದಾಗುವ ಉಪಯೋಗಗಳು…..

    ತರಕಾರಿ ಅಥವಾ ಹಣ್ಣುಗಳ ಸಿಪ್ಪೆಗಳಿಂದ ಹಲವಾರು ಪ್ರಯೋಜನಗಳಿವೆ. ಇವುಗಳನ್ನು ಬಿಸಾಡುವ ಬದಲು ಅವುಗಳಿಂದ ಲಾಭಗಳನ್ನು ಪಡೆದುಕೊಳ್ಳಿ. ಯಾವ ಸಿಪ್ಪೆಯಲ್ಲಿ ಏನು ಲಾಭ ಎಂಬುದರ ವಿವರ ಇಲ್ಲಿದೆ. ನಿಂಬೆ ಸಿಪ್ಪೆ : ಹಳದಿ ಬಣ್ಣದ ಈ ಸಿಪ್ಪೆಯಲ್ಲಿ ನಾರು, ವಿಟಮಿನ್‌ ಸಿ, ಬಿ6, ಕ್ಯಾಲ್ಷಿಯಂ, ಐರನ್‌ ಮತ್ತು ಮೆಗ್ನೀಷಿಯಂಗಳಿವೆ. ಇವುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ನಿಂಬೆ ಸಿಪ್ಪೆಯ ರುಚಿ ನಾಲಿಗೆಯ ರುಚಿ ಹೆಚ್ಚುವಂತೆ ಮಾಡುತ್ತದೆ. ಕಲ್ಲಂಗಡಿ ಸಿಪ್ಪೆ : ಇದರ ಹಸಿರು ಸಿಪ್ಪೆಯಲ್ಲಿರುವ ಸಿಟ್ರಲ್ಲೈನ್‌ ಎಂಬ ಅಮಿನೊ…

  • ಸಿನಿಮಾ

    KGF ಧುಳೆಬ್ಬಿಸುತ್ತಿರುವ ಬೆನ್ನಲ್ಲೇ, ದಾಖಲೆಯಾಯ್ತು ಸುದೀಪ್ ಪೈಲ್ವಾನ್ ಚಿತ್ರ!ಈ ದಾಖಲೆ ಮಾಡಿದ ಮೊದಲ ಕನ್ನಡ ಚಿತ್ರವಾಗಲಿದೆ..!

    ಯಶ್ ಅಭಿನಯದ ಕೆಜಿಎಫ್ ಚಿತ್ರ ವಿಶ್ವದಾದ್ಯಂತ ಬಿಡುಗಡೆಯಾಗಿ ಬಿರುಗಾಳಿಯಂತೆ ಮುನ್ನುಗ್ಗುತ್ತಿದೆ. ಮೊದಲ ಬಾರಿಗೆ ಕನ್ನಡ ಚಿತ್ರವೊಂದು ಕನ್ನಡ ಚಿತ್ರರಂಗವನ್ನು ಮತ್ತೊಂದು ನೆಕ್ಸ್ಟ್ ಲೆವೆಲ್ ಗೆ ತೆಗೆದುಕೊಂಡುಹೋಗಿರುವುದು ಸುಳ್ಳಲ್ಲ. ಈಗ ಕನ್ನಡ ಚಿತ್ರರಂಗದ ಸುದೀಪ್ ಅಭಿನಯದ ಮತ್ತೊಂದು ಬಹು ನಿರೀಕ್ಷಿತ ಚಿತ್ರ ಪೈಲ್ವಾನ್ ನೂತನ ದಾಖಲೆ ಬರೆಯಲು ಸಜ್ಜಾಗಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ಐದು ಭಾಷೆಗಳಲ್ಲಿ ತೆರೆಕಂಡು ಧೂಳೆಬ್ಬಿಸುತ್ತಿದ್ದು ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರಕ್ಕೆ ಹೊಸ ಮಾರುಕಟ್ಟೆಯನ್ನು ಕೆಜಿಎಫ್ ಚಿತ್ರ ತೋರಿಸಿಕೊಟ್ಟಿದೆ….

  • ಆಧ್ಯಾತ್ಮ

    ದಯವಿಟ್ಟು ಈ ಏಳು ವಸ್ತುಗಳನ್ನು ಶನಿವಾರದಂದು ಮನೆಗೆ ತರಬೇಡಿ!ಶಾಕ್ ಆಗ್ಬೇಡಿ?ಈ ಲೇಖನ ಓದಿ…

    ನಮ್ಮ ಭಾರತೀಯ ಮತ್ತು ಪಾಶ್ಚಾತ್ಯ ಹಸ್ತಸಾಮುದ್ರಿಕರ ಪ್ರಕಾರ ವ್ಯಕ್ತಿಯೊಬ್ಬರ ಜೀವನದ ಮೇಲೆ ಗ್ರಹಗಳ ಗತಿ ಹಾಗೂ ಸ್ಥಾನ ಅಪಾರವಾದ ಪ್ರಭಾವ ಬೀರುತ್ತವೆ. ಇದಕ್ಕೆ ಈ ಗ್ರಹಗಳ ಗುರುತ್ವಶಕ್ತಿ ಹಾಗೂ ಸೂಸುವ ವಿಕಿರಣದ ಅಲೆಗಳೇ ಕಾರಣ. ಈ ವಿಕಿರಣದ ಅಲೆಗಳು ಭಿನ್ನ ಬಣ್ಣಗಳು ಹಾಗೂ ಭಿನ್ನ ಅಂಗಗಳ ಮೇಲೆ ಭಿನ್ನವಾಗಿ ಪ್ರತಿಕ್ರಿಯಿಸುತ್ತವೆ.

  • ಸುದ್ದಿ

    ಈ ಲಿಪ್ ಸ್ಟಿಕ್ ಬಾಬಾನ ಆ 20 ವರ್ಷದ ಹುಡುಗನ ಜೊತೆ ಮಾಡಿದ್ದೇನು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ರಾಜಸ್ತಾನ ಪೊಲೀಸರು ಸ್ವಯಂಘೋಷಿತ ದೇವಮಾನವ ಕುಲದೀಪ್ ಸಿಂಗ್ ಝಾಲಾ ಎಂಬಾತನನ್ನು ಬಂಧಿಸಿದ್ದಾರೆ. 20 ವರ್ಷದ ಯುವಕ ಯುವರಾಜ್ ಸಿಂಗ್ ಆತ್ಮಹತ್ಯೆ ಪ್ರಕರಣದಲ್ಲಿ ಈತನ ಬಂಧನವಾಗಿದೆ. ದೇವತೆಯರಾದ ಶಕ್ತಿ ಹಾಗೂ ಜಗದಂಬೆ ತನ್ನಲ್ಲಿ ಪುನರ್ಜನ್ಮ ಪಡೆದಿದ್ದಾರೆ ಅಂತಾ ಕುಲದೀಪ್ ಹೇಳಿಕೊಳ್ತಾನೆ. ನವರಾತ್ರಿ ಸಮಯದಲ್ಲಿ ಈತ ಮಹಿಳೆಯರಂತೆ ವೇಷ ಧರಿಸಿ ಲಿಪ್ ಸ್ಟಿಕ್ ಹಚ್ಚಿಕೊಳ್ತಾನೆ. ಈತನನ್ನು ಜನ ಲಿಪ್ ಸ್ಟಿಕ್ ಬಾಬಾ ಎಂದೇ ಕರೆಯುತ್ತಾರೆ. ಮಗನ ಸಾವಿಗೆ ಬಾಬಾ ಕಾರಣ ಅಂತಾ ಯುವರಾಜ್ ತಂದೆ ಸೋಹನ್ ಸಿಂಗ್ ಪೊಲೀಸರಿಗೆ ದೂರು…

  • ಆರೋಗ್ಯ

    ಸುಲಭವಾಗಿ ತೂಕ ಹೆಚ್ಚಿಸಿಕೊಳ್ಳಬೇಕಾ? ಹಾಗಾದರೆ ಈ ಆಹಾರಗಳನ್ನು ಸೇವಿಸಿ.

    ತೂಕ ಹೆಚ್ಚಿದ್ದರೆ ಹೇಗೆ ಸಮಸ್ಯೆಯೋ ಹಾಗೆಯೇ ತೂಕ ಕಡಿಮೆ ಇದ್ದರೂ ಕಷ್ಟ. ಜಾಹಿರಾತಿನಲ್ಲಿ ಬಂದ ಪುಡಿಯನ್ನೆಲ್ಲ ತಿಂದು ತೇಗಿದರೂ ಪ್ರಯೋಜನವಾಗಿಲ್ಲವೇ? ಅವೆಲ್ಲ ಏನೂ ಬೇಡ, ಸೂಕ್ತ ಆಹಾರ ಸೇವಿಸಿ ಸಾಕು. ತೂಕ ಕಳ್ಕೊಳೋ ಬಗ್ಗೆ ಎಲ್ಲರೂ ಮಾತಾಡ್ತಾರೆ, ಎಲ್ಲ ಪತ್ರಿಕೆಗಳಲ್ಲೂ ಅದಕ್ಕೆ ಸಂಬಂಧಪಟ್ಟ ಟಿಪ್ಸ್, ಲೇಖನ ದಿನಕ್ಕೊಂದರಂತೆ ಹರಿದು ಬರುತ್ತವೆ, ಇಂಟರ್ನೆಟ್‌ನಲ್ಲಿ ತೂಕ ಕಳೆದುಕೊಂಡವರ ಸಕ್ಸಸ್‌ ಸ್ಟೋರಿಗಳಿಗೂ ಕೊರತೆ ಇಲ್ಲ. ಆದ್ರೆ ತೂಕ ಕಡಿಮೆ ಇರೋರ ಕತೆ ಕೇಳೋರೇ ಇಲ್ಲ. ಕಡ್ಡಿ, ಸಿಳ್ಳೆಕ್ಯಾತ, ಅಸ್ಥಿಪಂಜರ ಎಂದೆಲ್ಲ ಕರೆಸಿಕೊಂಡು,…