ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯ ಪ್ರೀತಿಗಾಗಿ ಏನು ಮಾಡಲು ಕೂಡ ತಯಾರು ಇರುತ್ತಾನೆ, ಹಾಗೆ ಪ್ರಾಣಿ ಮತ್ತು ಪಕ್ಷಿಗಳು ಕೂಡ, ಬೇಟೆಗಾರನಿಂದ ಕಾಲು ಕಳೆದುಕೊಂಡ ಹೆಣ್ಣು ಕೊಕ್ಕರೆಗಾಗಿ ಈ ಗಂಡು ಕೊಕ್ಕರೆ ಮಾಡಿದ ಕೆಲಸವನ್ನ ಕೇಳಿದರೆ ನಿಮ್ಮ ಕಣ್ಣಲ್ಲಿ ಕೂಡ ನೀರು ಜಿನುಗುತ್ತದೆ. ಹಾಗಾದರೆ ಈ ಗಂಡು ಕೊಕ್ಕರೆ ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಸ್ನೇಹಿತರೆ ಈ ಕೊಕ್ಕರೆಯ ಪ್ರೇಮ ಕಥೆ ಬಹಳ ರೋಚಕವಾಗಿದೆ, ಹೌದು ದಕ್ಷಿಣ ಆಫ್ರಿಕಾದಲ್ಲಿ ವಾಸವಿದ್ದ ಗಂಡು ಕೊಕ್ಕರೆ ಕ್ಲಿಪಿತಾನ್ ಮತ್ತು ಗಂಡು ಕೊಕ್ಕರೆ ಮಲೆನಾ ತುಂಬಾ ಅನ್ಯೋನ್ಯವಾಗಿ ಕಾಲ ಕಳೆಯುತ್ತಿದ್ದವು.

ಸುಮಾರು 15 ವರ್ಷಗಳ ಹಿಂದೆ ಮಾರ್ಚ್ ತಿಂಗಳಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಚಳಿ ಜಾಸ್ತಿ ಇರುವ ಕಾರಣ ಒಳ್ಳೆಯ ಸ್ಥಳವನ್ನ ಹುಡುಕಿಕೊಂಡು 14 ಸಾವಿರ ಕಿಲೋ ಮೀಟರ್ ಸಂಚಾರವನ್ನ ಮಾಡಿ ಕ್ರೋಷಿಯಾ ದೇಶಕ್ಕೆ ಬಂದಿದ್ದವು ಈ ಎರಡು ಕೊಕ್ಕರೆಗಳು. ಕ್ಲಿಪಿತಾನ್ ಮತ್ತು ಮಲೆನಾ ಮರದ ಮೇಲೆ ಕುಳಿತ್ತಿದ್ದಾಗ ಬೇಟೆಗಾರನೊಬ್ಬ ಗುಂಡು ಹಾರಿಸಿದ್ದಾನೆ, ಇನ್ನು ಆ ಬೇಟೆಗಾರ ಹಾರಿದ ಗುಂಡು ಹೆಣ್ಣು ಕೊಕ್ಕರೆ ಮಲೆನಾ ಕಾಲಿಗೆ ಬಿತ್ತು. ಇನ್ನು ಗಾಯಗೊಂಡ ಮಲೆನಾ ನದಿಯೊಂದರ ಬಳಿ ಬಿದ್ದು ಸಾವು ಬದುಕಿನ ನಡುವೆ ಹೋರಾಟವನ್ನ ಮಾಡುತ್ತಿತ್ತು, ಈ ಸಮಯದಲ್ಲಿ ಇದನ್ನ ನೋಡಿದ ಸ್ಟಿಫನ್ ಅನ್ನುವ ವ್ಯಕ್ತಿ ಆ ಕೊಕ್ಕರೆಯನ್ನ ಮನೆಗೆ ತಂದು ಅದಕ್ಕೆ ಚಿಕಿತ್ಸೆಯನ್ನ ಕೊಟ್ಟು ಅದನ್ನ ಸಾಕಿದರು.

ತನ್ನ ಪ್ರೇಯಸಿ ಮಲೆನಾಳನ್ನು ಹುಡುಕಿ ಹುಡುಕಿ ಸಾಕಾಗಿ ಮತ್ತೆ ದಕ್ಷಿಣ ಆಫ್ರಿಕಾಗೆ ಹೋಯಿತು ಗಂಡು ಕೊಕ್ಕರೆ ಕ್ಲಿಪಿತಾನ್, ಮುಂದಿನ ವರ್ಷ ಮಾರ್ಚ್ ನಲ್ಲಿ ಮತ್ತೆ ತನ್ನ ಪ್ರೇಯಸಿಯನ್ನ ಹುಡುಕಿಕೊಂಡು ಬಂದ ಕ್ಲಿಪಿತಾನ್ ಗೆ ಕ್ರೋಷಿಯಾದ ಒಂದು ಮನೆಯ ಬಳಿ ಮಲೆನಾ ಕಾಣಿಸಿಕೊಳ್ಳುತ್ತಾಳೆ ಮತ್ತು ನಂತರ ಎರಡು ಜೊತೆಗೂಡಿದವು. ಇನ್ನು ಮಲೆನಾ ಕಾಲಿಗೆ ಪೆಟ್ಟು ಬಿದ್ದ ಕಾರಣ ಅದಕ್ಕೆ ಹಾರಾಟ ಮಾಡಲು ಸಾಧ್ಯವಾಗುವುದಿಲ್ಲ, ಈ ಕಾರಣದಿಂದ ಮಾರ್ಚ್ ತಿಂಗಳಲ್ಲಿ ಪ್ರತಿ ವರ್ಷ 14 ಸಾವಿರ ಕಿಲೋ ಮೀಟರ್ ಸಂಚಾರ ಮಾಡಿ ಬರುವ ಕ್ಲಿಪಿತಾನ್ ಆಗಸ್ಟ್ ತಿಂಗಳ ತನಕ ತನ್ನ ಪ್ರೇಯಸಿ ಮಲೆನಾ ಜೊತೆಗೆ ಇದ್ದು ಮರಿ ಮಾಡುತ್ತದೆ. ಇನ್ನು ಮಲೆನಾ ಮತ್ತು ಕ್ಲಿಪಿತಾನ್ ತನ್ನ ಮರಿಗಳಿಗೆ ಹಾರುವುದನ್ನ ಕಲಿಸಿಕೊಡುತ್ತದೆ ಮತ್ತು ಆಗಸ್ಟ್ ತಿಂಗಳಲ್ಲಿ ಮರಿಗಳನ್ನ ಕರೆದುಕೊಂಡು ದಕ್ಷಿಣ ಆಫ್ರಿಕಾಗೆ ಹೋಗುತ್ತದೆ ಕ್ಲಿಪಿತಾನ್.

ಹೀಗೆ ಸುಮಾರು 15 ವರ್ಷಗಳಿಂದ ಇವರ ಪ್ರೇಮ ಪಯಣ ನಡೆಯುತ್ತಲೇ ಇದೆ. ಮಾರ್ಚ್ ತಿಂಗಳು ಆಗಮನ ಆಗುತ್ತಿದ್ದಂತೆ ತನ್ನ ಪ್ರಿಯಕರ ಕ್ಲಿಪಿತಾನ್ ಗಾಗಿ ಪ್ರತಿ ದಿನ ಎದುರು ನೋಡುತ್ತದೆ ಹೆಣ್ಣು ಕೊಕ್ಕರೆ ಮಲೆನಾ, ಈ ಕೊಕ್ಕರೆಗಳ ಮರಿಗಳು ವಾಪಾಸ್ ಬಂದು ಮಲೆನಳನ್ನ ನೋಡುತ್ತವೋ ಇಲ್ಲವೋ ಗೊತ್ತಿಲ್ಲ, ಆದರೆ ಅದೆಷ್ಟೇ ಕಷ್ಟಕರ ವಾತಾವರಣ ಇದ್ದರೂ ಕೂಡ ಕ್ಲಿಪಿತಾನ್ ತನ್ನ ಪ್ರೇಯಸಿ ಮಲೆನಳನ್ನ ನೋಡಲು ಬಂದೆ ಬರುತ್ತದೆ. ಸ್ನೇಹಿತರೆ ಎಂತಹ ಪ್ರೀತಿ ಅಲ್ಲವೇ ಈ ಹಕ್ಕಿಗಳದ್ದು, ಈ ಕೊಕ್ಕರೆಗಳ ಪ್ರೇಮ ಕಥೆ ಈಗ ಇಡೀ ಪ್ರಪಂಚದಾದ್ಯಂತ ವೈರಲ್ ಆಗುತ್ತಿದೆ, ಇನ್ನು ಈ ಹೆಣ್ಣು ಕೊಕ್ಕರೆಯನ್ನ ಸಾಕುತ್ತಿರುವ ಸ್ಟಿಫನ್ ಅವರ ಒಳ್ಳೆಯ ಮನಸ್ಸಿಗೆ ನಾವು ಮೆಚ್ಚಲೇಬೇಕು, ಸ್ನೇಹಿತರೆ ಈ ಕೊಕ್ಕರೆಗಳ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲಕರೊಬ್ಬರು ತನ್ನ ಆಟೋವನ್ನು ಮನೆಯಂತೆ ಮಾಡಿ ಪ್ರಯಾಣಿಕರಿಗೆ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು, ಇವರ ಈ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸತ್ಯವನ್ ಗೈಟ್ ಅವರು ಪ್ರಯಾಣಿಕರ ಪ್ರಯಾಣ ಸುಖಕರವಾಗಿರಲಿ ಎಂದು ತಮ್ಮ ಆಟೋದಲ್ಲಿ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಿದ್ದಾರೆ. ಸತ್ಯವನ್ ಅವರ ಆಟೋದಲ್ಲಿ ವಾಶ್ ಬೇಸಿನ್, ಮೊಬೈಲ್ ಫೋನ್ ಚಾರ್ಜಿಂಗ್ ಪಾಯಿಂಟ್, ಗಿಡಗಳು ಇನ್ನಿತರ ಸೌಲಭ್ಯಗಳು ಕಾಣಬಹುದು. ವಿಶೇಷ ಏನಂದರೆ ಸತ್ಯವನ್ ಅವರು ಹಿರಿಯ ನಾಗರಿಕರಿಗೆ ಒಂದು ಕಿ.ಮೀವರೆಗೆ ಸವಾರಿ ಮಾಡಲು ಯಾವುದೇ ಹಣ ಪಡೆಯುವುದಿಲ್ಲ. ಅಲ್ಲದೆ ಸತ್ಯವನ್…
ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ಕನಿಷ್ಠ 1 ಜಿ.ಬಿ. ಡೇಟಾವನ್ನು ಉಚಿತವಾಗಿ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸಿದೆ. ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯ, ಕಾಲೇಜುಗಳಲ್ಲಿ ಆಗಸ್ಟ್ 15 ರೊಳಗೆ ಸೌಲಭ್ಯ ನೀಡಲು ಸೂಚನೆ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಉಚಿತವಾಗಿ ವೈಫೈ ಸೌಲಭ್ಯ ಕಲ್ಪಿಸಲಾಗುತ್ತದೆ
ಯಮುನಾ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಬಸ್ ವೊಂದು ಜಾರಿ ಹದಿನೈದು ಅಡಿ ಆಳದ ದೊಡ್ಡ ಮೋರಿಯಲ್ಲಿ ಬಿದ್ದ ಪರಿಣಾಮ ಇಪ್ಪತ್ತೊಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ನೂರಾ ಅರವತ್ತೈದು ಕಿ.ಮೀ. ಉದ್ದ ಎಕ್ಸ್ ಪ್ರೆಸ್ ಹೈವೆ ಉತ್ತರಪ್ರದೇಶದಲ್ಲಿ ನೋಯ್ಡಾ ಹಾಗೂ ಆಗ್ರಾದ ಮಧ್ಯೆ ಸಂಪರ್ಕ ಕಲ್ಪಿಸುತ್ತದೆ.ರಾಜ್ಯ ರಸ್ತೆ ಸಾರಿಗೆ ಬಸ್ ಸ್ಕಿಡ್ ಆಗಿ 50 ಅಡಿ ಆಳದ ಚರಂಡಿಗೆ ಬಿದ್ದ ಪರಿಣಾಮ ಸ್ಥಳದಲ್ಲಿಯೇ 29 ಮಂದಿ ಪ್ರಯಾಣಿಕರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಚಾಲಕ ನಿದ್ದೆ…
ತಿಗಣೆಯು ಸಾಮಾನ್ಯವಾಗಿ ರಾತ್ರಿ ವೇಳೆ ಮನುಷ್ಯರ ರಕ್ತವನ್ನು ಕುಡಿಯುವ ಒಂದು ಬಗೆಯ ಕೀಟ. ಇದರ ಕಡಿತವು ದದ್ದುಗಳು, ಮಾನಸಿಕ ಪರಿಣಾಮಗಳು ಮತ್ತು ಅಲರ್ಜಿ ಲಕ್ಷಣಗಳು ಸೇರಿದಂತೆ ಅನೇಕ ಆರೋಗ್ಯ ಪರಿಣಾಮಗಳನ್ನು ಉಂಟುಮಾಡಬಹುದು. ತಿಗಣೆ ಕಡಿತವು ಅಗೋಚರ ಬೊಕ್ಕೆಗಳಿಂದ ಹಿಡಿದು ಎದ್ದುಕಾಣುವ ಬೊಕ್ಕೆಗಳವರೆಗೆ ಚರ್ಮದ ಬದಲಾವಣೆಗಳಿಗೆ ಕಾರಣವಾಗಬಹುದು. ಲಕ್ಷಣಗಳು ಕಾಣಿಸಿಕೊಳ್ಳುವುದಕ್ಕೆ ನಿಮಿಷಗಳು ಅಥವಾ ದಿನಗಳವರೆಗೆ ಬೇಕಾಗಬಹುದು. ತುರಿಕೆಯು ಸಾಮಾನ್ಯವಾಗಿರುತ್ತದೆ, ಮತ್ತು ಕೆಲವರಿಗೆ ಸುಸ್ತು ಎನಿಸಬಹುದು ಅಥವಾ ಜ್ವರ ಇರಬಹುದು. ಸಾಮಾನ್ಯವಾಗಿ, ಶರೀರದ ತೆರೆದ ಪ್ರದೇಶಗಳು ಬಾಧಿತವಾಗುತ್ತವೆ ಮತ್ತು ಸಾಲಾಗಿ ಮೂರು ಕಡಿತಗಳು ಉಂಟಾಗುತ್ತವೆ. ತಿಗಣೆ ಕಡಿತಗಳು ಯಾವುದೇ ಸಾಂಕ್ರಾಮಿಕ…
ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೋಡಿಹಳ್ಳಿ ಸಮೀಪ 7 ಹೆಡೆ ಸರ್ಪದ ಅಸ್ತಿತ್ವ ಕಂಡುಬಂದಿದೆ. 7 ತಲೆಯ ಹೊಂದಿರುವ ಹಾವಿನ ಪೂರೆ ಕಾಣಿಸಿಕೊಂಡಿದ್ದು, ಇದು ದೈವ ಸ್ವರೂಪ ಎಂದು ಗ್ರಾಮಸ್ಥರು ಹೂವು, ಹಣ್ಣು, ಅರಿಶಿನ ಕುಂಕುಮ ಹಾಕಿ ಪೂಜೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್ ಆಗಿದೆ. ಕೋಡಿಹಳ್ಳಿ ಸಮೀಪದ ಮರಿಗೌಡನ ದೊಡ್ಡಿ ಬಳಿ ನಿರ್ಜನ ಪ್ರದೇಶದಲ್ಲಿ ಹಾವಿನ ಪೊರೆ ಕಾಣಿಸಿಕೊಂಡಿದೆ. ಸಮೀಪದಲ್ಲಿ ದೊಡ್ಡ ಹುತ್ತ ಕೂಡ ಇದೆ. ಸುಮಾರು 6 ತಿಂಗಳ ಹಿಂದೆ ಕೋಟೆಕೊಪ್ಪ ಗ್ರಾಮದ…
ಹಲ್ಲುಜ್ಜಲು ಬಳಸುವ ಪೇಸ್ಟ್ ಜತೆಗೆ ಸ್ವಲ್ಪ ಬೇಕಿಂಗ್ ಸೋಡಾ ಮಿಕ್ಸ್ ಮಾಡಿ ಹಲ್ಲುಜ್ಜಿ ನೋಡಿ. ಈ ರೀತಿ ವಾರಕ್ಕೆ ಎರಡು ಬಾರಿ ಮಾಡುವುದರಿಂದ ಹಲ್ಲು ಹಳದಿಗಟ್ಟುವಿಕೆ ತಡೆಯಬಹುದು.