ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ ಜಿಲ್ಲೆಯ 6 ವಿಧಾನ ಸಭಾ ಮತ ಕ್ಷೇತ್ರಗಳ ಚುನಾವಣೆಗೆ ಸಿದ್ಧತೆಗಳು ಪೂರ್ಣ; ಇಂದಿನಿಂದಲೇ ಮಾದರಿ ನೀತಿ ಸಂಹಿತೆ ಜಾರಿ; ನಿಗಾವಹಿಸಲು ವಿವಿಧ ತಂಡಗಳ ರಚನೆ: ಜಿಲ್ಲಾ ಚುನಾವಣಾಧಿಕಾರಿ ವೆಂಕಟ್ ರಾಜಾ
ಕೋಲಾರ(ಕರ್ನಾಟಕ ವಾರ್ತೆ)ಮಾ.29: ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆಯ ಆರು ವಿಧಾನ ಸಭಾ ಮತ ಕ್ಷೇತ್ರಗಳಲ್ಲಿ ಪಾರದರ್ಶಕ, ಮುಕ್ತ, ಶಾಂತಿಯುತ ಮತ್ತು ನಿಷ್ಪಕ್ಷಪಾತ ಚುನಾವಣೆಗಳನ್ನು ಜರುಗಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ವಿವಿಧ ತಂಡಗಳನ್ನು ರಚಿಸಿ ಅಧಿಕಾರಿಗಳನ್ನು ನೇಮಿಸಿ, ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಹೇಳಿದರು. ಅವರು ಇಂದು ಮಧ್ಯಾಹ್ನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸುದ್ಧಿಗೊಷ್ಠಿ ಜರುಗಿಸಿ, ಮಾತನಾಡಿದರು.
ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಏಪ್ರೀಲ್ 13 ರಂದು ಜಿಲ್ಲೆಯ ಆರು ವಿಧಾನ ಸಭಾ ಮತ ಕ್ಷೇತ್ರಗಳಿಗೆ ಚುನಾವಣೆ ಜರುಗಿಸಲು ಅಧಿಸೂಚನೆ ಹೊರಡಿಸಲಾಗುತ್ತದೆ. ಏಪ್ರೀಲ್ 20ರ ವರೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಬಹುದು. ಸಲ್ಲಿಕೆಯಾದ ನಾಮಪತ್ರಗಳ ಪರಿಶೀಲನೆಯು ಏಪ್ರೀಲ್ 21 ರಂದು ನಡೆಯಲಿದೆ. ಎಪ್ರಿಲ್ 24 ರವರೆಗೆ ನಾಮಪತ್ರ ಹಿಂಪಡೆಯಲು ಅವಕಾಶ ನೀಡಲಾಗಿದೆ. ಮತ್ತು ಮೇ 10 ರಂದು ಮತದಾನ ನಡೆಯಲಿದ್ದು, ಮೇ 13 ರಂದು ಮತ ಏಣಿಕೆ ಜರುಗಲಿದೆ. ಒಟ್ಟಾರೆ ಮೇ 15 ರಂದು ಎಲ್ಲ ಚುನಾವಣಾ ಪ್ರಕ್ರೀಯೆಗಳು ಮುಕ್ತಾಯವಾಗಲಿವೆ ಎಂದು ಅವರು ಹೇಳಿದರು.
ಮತದಾರರ ಸಂಖ್ಯೆ: ಜಿಲ್ಲೆಯಲ್ಲಿ ಆರು ವಿಧಾನಸಭಾ ಮತಕ್ಷೇತ್ರಗಳಿದ್ದು, ಒಟ್ಟು ಪುರುಷ 625644 ಮಹಿಳಾ 633192 ಹಾಗೂ ಇತರೆ 159 ಸೇರಿದಂತೆ ಒಟ್ಟು 1258995 ಮತದಾರರಿದ್ದಾರೆ.
ಶ್ರೀನಿವಾಸಪುರ ವಿಧಾನಸಭಾ ಮತ ಕ್ಷೇತ್ರ-144 : ಪುರುಷರು-106785 ಮಹಿಳೆಯರು-108213 ಇತರೆ-7. ಒಟ್ಟು ಮತದಾರರು- 215005
ಮುಳಬಾಗಿಲು ವಿಧಾನಸಭಾ ಮತ ಕ್ಷೇತ್ರ-145( ಪ ಜಾ): ಪುರುಷರು – 106430. ಮಹಿಳೆಯರು–107779 ಇತರೆ-10. ಒಟ್ಟು ಮತದಾರರು-214219
ಕೆ ಜಿ ಎಪ್ ವಿಧಾನಸಭಾ ಮತ ಕ್ಷೇತ್ರ-146( ಪ ಜಾ): ಪುರುಷರು-98054. ಮಹಿಳೆಯರು-99148. ಇತರೆ-40. ಒಟ್ಟು ಮತದಾರರು– 197242
ಬಂಗಾರಪೇಟೆ ವಿಧಾನಸಭಾ ಮತ ಕ್ಷೇತ್ರ-147( ಪ ಜಾ): ಪುರುಷರು-101284. ಮಹಿಳೆಯರು-102028. ಇತರೆ-40. ಒಟ್ಟು ಮತದಾರರು-203352
ಕೋಲಾರ ವಿಧಾನಸಭಾ ಮತ ಕ್ಷೇತ್ರ 148: ಪುರುಷರು-118159 ಮಹಿಳೆಯರು-120238. ಇತರೆ – 55. ಒಟ್ಟು ಮತದಾರರು–238452
ಮಾಲೂರು ವಿಧಾನಸಭಾ ಮತ ಕ್ಷೇತ್ರ-149: ಪುರುಷರು-94932. ಮಹಿಳೆಯರು-95786. ಇತರೆ-7. ಒಟ್ಟು ಮತದಾರರು-190725
ಮತಗಟ್ಟೆಗಳ ಸಂಖ್ಯೆ: ಜಿಲ್ಲೆಯಲ್ಲಿ ಒಟ್ಟು 1590 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಇವುಗಳ ಪೈಕಿ 392 ಸೂಕ್ಷ್ಮ ಮತಗಟೆಗಳನ್ನು ಗುರುತಿಸಲಾಗಿದೆ. ಈ ಮತಗಟ್ಟೆಗಳಲ್ಲಿ ಮತದಾನದ ದಿನದಂದು ವಿಡಿಯೋಗ್ರಾಫಿ, ವೆಬ್ಕ್ಯಾಸ್ಟಿಂಗ್ ಮತ್ತು ಮೈಕ್ರೋ ಅಬ್ಸರ್ವರ್ಸ್ಗಳನ್ನು ನಿಯಮಾನುಸಾರ ನೇಮಕ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಯುವ ಮತದಾರರು: ಜಿಲ್ಲೆಯಲ್ಲಿ ಪ್ರಸ್ತುತ 2023ರ ವಿಧಾನ ಸಭಾ ಚುನಾವಣೆಗೆ ಒಟ್ಟು 32014 ಯುವ ಮತದಾರರಿದ್ದಾರೆ ಮತ್ತು 80 ವರ್ಷ ಹಾಗೂ ಮೇಲ್ಪಟ್ಟ ಸುಮಾರು 29338 ಹಿರಿಯ ಮತದಾರರಿದ್ದಾರೆ.
ಪ್ರಚಾರ ಸಾಮಗ್ರಿಗಳ ತೆರವು: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ವಿವಿಧ ಪಕ್ಷಗಳ ಪ್ರಚಾರ ಸಾಮಗ್ರಿಗಳನ್ನು ತೆರವುಗೊಳಿಸುವ ಕಾರ್ಯವನ್ನು ಈಗಾಗಲೇ ಮಾಡಲಾಗುತ್ತಿದೆ. ಇವತ್ತಿನ ವರೆಗೆ ಗೊಡೆ ಬರಹ, ಪೋಸ್ಟರ್ಗಳು, ಬ್ಯಾನರಗಳು ಹಾಗೂ ಇತರೆ ಪ್ರಚಾರ ಸಾಮಗ್ರಿಗಳನ್ನು ಜಿಲ್ಲಾ ಚುನಾವಣಾ ಆಯೋಗದಿಂದ ತೆರವುಗೊಳಿಸಲಾಗಿದೆ ಮತ್ತು ಅನುಮತಿ ಇಲ್ಲದೇ ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಿ ಸಾರ್ವಜನಿಕ ಸ್ಥಳ ಅಂದಗೆಡಿಸಿದ್ದ ಪ್ರಚಾರ ಸಾಮಗ್ರಿಗಳನ್ನು ತೆರವುಗೊಳ್ಳಿಸಲಾಗಿದೆ.
ಚುನಾವಣಾ ನೀತಿ ಸಂಹಿತೆಯು ಇಂದಿನಿಂದ ಜಾರಿಯಾಗಿದ್ದು, ಅನುಮತಿ ಇಲ್ಲದೆ ಯಾವುದೇ ರೀತಿಯ ಪ್ರಚಾರ ಸಾಮಗ್ರಿಗಳನ್ನು ಅಳವಡಿಸುವಂತಿಲ್ಲ. ನಿಯಮ ಮೀರಿದವರ ವಿರುದ್ಧ ಭಾರತ ಚುನಾವಾಣಾ ಆಯೋಗದ ನಿರ್ದೇಶನದಂತೆ ಮತ್ತು ಜಾರಿಯಲ್ಲಿರುವ ವಿವಿಧ ಕಾನೂನುಗಳಡಿ ಸೂಕ್ತ ಕ್ರಮಕೈಗೊಳ್ಳಲಾಗುವುದೆಂದು ಅವರು ಹೇಳಿದರು.
ಆಯುಧಗಳ ಠೇವಣಿಗೆ ಸೂಚನೆ: ಜಿಲ್ಲೆಯಲ್ಲಿ ಪರವಾಣಿಗೆ ಹೊಂದಿರುವ ಆಯುಧಗಳನ್ನು ಸ್ಕ್ರೀನಿಂಗ್ ಕಮಿಟಿ ಪರಿಶೀಲನೆಗೆ ಒಳಪಡಿಸಬೇಕು ಮತ್ತು ಚುನಾವಣಾ ಪ್ರಕ್ರೀಯೆ ಸಂಪೂರ್ಣವಾಗಿ ಮುಗಿಯುವವರೆಗೆ ತಮ್ಮ ಸಮೀಪದ ಪೊಲೀಸ್ ಠಾಣೆಗಳಲ್ಲಿ ಠೇವಣಿ ಇಡಲು ಸೂಚಿಸಲಾಗಿದೆ ಎಂದು ಅವರು ಹೇಳಿದರು.
ಹಣ, ವಸ್ತು, ಇತರೆ ಸಾಮಗ್ರಿಗಳ ವಶ: ಸೂಕ್ತ ದಾಖಲೆ ಇಲ್ಲದೆ ಹೊಂದಿದ್ದ ಮತ್ತು ಚುನಾವಣಾ ಕಾರಣಕ್ಕೆ ಬಳಕೆಯಾಗುವ ಅನುಮಾನದಿಂದ ಕೆಲವು ಕಡೆ ಹಣ, ವಸ್ತು ಹಾಗೂ ಇತರೆ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ 1ಕೋಟಿ ರೂ.ಗಳಿಗೂ ಅಧಿಕ ಮೊತ್ತದ ಹಣ, ವಶಕ್ಕೆ ಪಡೆದು ತನಿಖೆ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದರು.
ಆರು ವಿಧಾನಸಭಾ ಮತಕ್ಷೇತ್ರಗಳ ಚುನಾವಣಾಧಿಕಾರಿಗಳ ಕಚೇರಿ:
ಶ್ರೀನಿವಾಸಪುರ ವಿಧಾನಸಭಾ ಮತಕ್ಷೇತ್ರ-144: ನವಲಗುಂದ ವಿಧಾನ ಸಭಾ ಮತಕ್ಷೇತ್ರದ ಚುನಾವಣಾ ಅಧಿಕಾರಿಗಳ ಕಚೇರಿಯನ್ನು ಶ್ರೀನಿವಾಸಪುರ ತಹಶೀಲ್ದಾರ ಕಚೇರಿಯಲ್ಲಿ ತೆರೆಯಲಾಗಿದ್ದು, ಜಿಲ್ಲಾಪಂಚಾಯತ್ ಉಪ ಕಾರ್ಯದರ್ಶಿ ನಂದಿನಿ(9480870001) ಚುಣಾವಣಾಧಿಕಾರಿಯಾಗಿದ್ದಾರೆ.
ಮುಳಬಾಗಿಲು ವಿಧಾನಸಭಾ ಮತಕ್ಷೇತ್ರ-145: ಮುಳಬಾಗಿಲು ವಿಧಾನ ಸಭಾ ಮತಕ್ಷೇತ್ರದ ಚುನಾವಣಾ ಅಧಿಕಾರಿಗಳ ಕಚೇರಿಯನ್ನು ಮುಳಬಾಗಿಲು ತಹಶೀಲ್ದಾರ ಕಚೇರಿಯಲ್ಲಿ ತೆರೆಯಲಾಗಿದ್ದು ಉಪನಿರ್ದೇಶಕರು ,ಭೂಮಿ ಭಾಗ್ಯಮ್ಮ(9844410602) ಚುಣಾವಣಾಧಿಕಾರಿಯಾಗಿದ್ದಾರೆ.
ಕೆಜಿಎಫ್ ವಿಧಾನಸಭಾ ಮತಕ್ಷೇತ್ರ-145: ಕೆಜಿಎಫ್ ವಿಧಾನ ಸಭಾ ಮತಕ್ಷೇತ್ರದ ಚುನಾವಣಾ ಅಧಿಕಾರಿಗಳ ಕಚೇರಿಯನ್ನು ಕೆಜಿಎಫ್ ತಹಶೀಲ್ದಾರ ಕಚೇರಿಯಲ್ಲಿ ತೆರೆಯಲಾಗಿದ್ದು, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಜಂಟಿನಿರ್ದೇಶಕರಾದ ಮೊಹಮ್ಮದ್ ಅಫೀಕ್ ಉಲ್ಲಾ ಷರೀಫ್ (9845628883) ಚುಣಾವಣಾಧಿಕಾರಿಯಾಗಿದ್ದಾರೆ.
ಬಂಗಾರಪೇಟೆ ವಿಧಾನಸಭಾ ಮತಕ್ಷೇತ್ರ-147: ಬಂಗಾರಪೇಟೆ ವಿಧಾನ ಸಭಾ ಮತಕ್ಷೇತ್ರದ ಚುನಾವಣಾ ಅಧಿಕಾರಿಗಳ ಕಚೇರಿಯನ್ನು ಬಂಗಾರಪೇಟೆ ತಹಶೀಲ್ದಾರ ಕಚೇರಿಯಲ್ಲಿ ತೆರೆಯಲಾಗಿದ್ದು, ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕಿ ಶೃತಿ ಎಂ ಕೆ(9591056238)ಚುಣಾವಣಾಧಿಕಾರಿಯಾಗಿದ್ದಾರೆ.
ಕೋಲಾರ ವಿಧಾನಸಭಾ ಮತಕ್ಷೇತ್ರ-148: ಕೋಲಾರ ವಿಧಾನ ಸಭಾ ಮತಕ್ಷೇತ್ರದ ಚುನಾವಣಾ ಅಧಿಕಾರಿಗಳ ಕಚೇರಿಯನ್ನು ಕೋಲಾರ ತಹಶೀಲ್ದಾರ ಕಚೇರಿಯಲ್ಲಿ ತೆರೆಯಲಾಗಿದ್ದು, ಕೋಲಾರ ಸಹಾಯಕ ಆಯುಕ್ತರಾದ ಹೆಚ್ ಎಸ್ ವೆಂಕಟಲಕ್ಷ್ಮೀ (8105595859) ಚುಣಾವಣಾಧಿಕಾರಿಯಾಗಿದ್ದಾರೆ.
ಮಾಲೂರು ವಿಧಾನಸಭಾ ಮತಕ್ಷೇತ್ರ-149: ಮಾಲೂರು ವಿಧಾನ ಸಭಾ ಮತಕ್ಷೇತ್ರದ ಚುನಾವಣಾ ಅಧಿಕಾರಿಗಳ ಕಚೇರಿಯನ್ನು ಮಾಲೂರು ತಹಶೀಲ್ದಾರ ಕಚೇರಿಯಲ್ಲಿ ತೆರೆಯಲಾಗಿದ್ದು, ತೋಟಗಾರಿಕೆ ಉಪನಿರ್ದೇಶಕರಾದ ಕುಮಾರಸ್ವಾಮಿ(9900590596) ಚುಣಾವಣಾಧಿಕಾರಿಯಾಗಿದ್ದಾರೆ.
ಚುನಾವಣಾಧಿಕಾರಿಗಳು ವಿಧಾನ ಸಭಾ ಮತಕ್ಷೆತ್ರ ವ್ಯಾಪ್ತಿಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಸಭೆ, ಸಮಾರಂಭ, ವಾಹನ ಪರವಾಣಿಗೆ ಮುಂತಾದವುಗಳ ಅರ್ಜಿಗಳನ್ನು ಸು-ವಿಧಾ ತಂತ್ರಾಂಶದ ಮೂಲಕ ಸಲ್ಲಿಸಿದ್ದಲ್ಲಿ ಪರವಾನಿಗೆ ನೀಡುವ ಕುರಿತು ಕ್ರಮವಹಿಸಬೇಕು. ಮತ್ತು ಜಿಲ್ಲಾ ವ್ಯಾಪ್ತಿಗೆ ಸಂಬಂಧಿಸಿದಂತೆ ಈ ಕುರಿತು ಅರ್ಜಿಗಳಿದ್ದಲ್ಲಿ ಜಿಲ್ಲಾ ಚುನಾವಣಾ ಕಾರ್ಯಾಲಯದಿಂದ ಕ್ರಮವಹಿಸಲಾಗುವುದೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಮಾದರಿ ನೀತಿ ಸಂಹಿತೆ ಕುರಿತು ತಕ್ಷಣ ಕೈಗೊಳ್ಳಬೇಕಾದ ಕ್ರಮಗಳು:
ಮಾಧ್ಯಮ ಉಸ್ತುವಾರಿ ಕೇಂದ್ರಕ್ಕೆ ಮೇಲ್ವಿಚಾರಣೆಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕಿ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದೆ. ಮತ್ತು ದೂರು ನಿರ್ವಹಣಾ ತಂಡ(1950)ವನ್ನು ನೇಮಿಸಲಾಗಿದೆ. ಈ ಎರಡು ಕೇಂದ್ರಗಳು ದಿನದ 24 ಗಂಟೆ ಕಾರ್ಯನಿರ್ವಹಿಸುತ್ತವೆ. ಸಾರ್ವಜನಿಕರು ಅಥವಾ ಯಾರೇ ಆಗಲಿ ಚುನಾವಣಾ ಸಂಬಂಧಿತ ದೂರುಗಳಿದ್ದಲ್ಲಿ ಸು-ವಿಧಾ ತಂತ್ರಾಂಶ ಅಥವಾ 1950 ಸಹಾಯವಾಣಿ ಮೂಲಕ ಸಲ್ಲಿಸಬಹುದು ಎಂದು ಜಿಲ್ಲಾ ಚುನಾವಣಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಾದ ಎಂ.ನಾರಾಯಣ ಅಪರ ಜಿಲ್ಲಾಧಿಕಾರಿ ಡಾ.ಸಂಕರಗೌಡ ವಣಿಕ್ಯಾಳ್ ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾ ಶಾಖೆಯ ತಹಶೀಲ್ದಾರ ನಾಗವೇಣಿ, ಶಿರಸ್ತೆದಾರ ಮಂಜುಳಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಗಳಲ್ಲಿ ಗೋವುಗಳನ್ನು ಸಾಕುವ ಜಮಾನ ಕಡಿಮೆಯಾಗುತ್ತಾ ಬರುತ್ತಿದೆ. ಹೀಗಾಗಿ ಕೃಷಿಗೆ ಬೇಕಾದ ಗೊಬ್ಬರಕ್ಕಾಗಿ ಜನ ಅಲೆದಾಡುತ್ತಾರೆ. ಸಗಣಿಯನ್ನು ರಸಗೊಬ್ಬರವಾಗಿ ಕೃಷಿಗಳಿಗೆ ಬಳಸುವುದರಿಂದ ಸದ್ಯ ಇದಕ್ಕೆ ಬೇಡಿಕೆ ಇದೆ. ಇದರಂತೆಯೇ ಇದೀಗ ನಾಯಿಗಳ ಮಲಕ್ಕೂ ಬೇಡಿಕೆಯಿದೆ. ಹೌದು. ಪಿಲಿಫೈನ್ಸ್ ಶಾಲೆಯೊಂದರ ವಿದ್ಯಾರ್ಥಿಗಳು ಹೊಸ ಆವಿಷ್ಕಾರವೊಂದನ್ನು ಮಾಡಿದ್ದು, ಅದರಲ್ಲಿ ನಾಯಿಗಳ ಮಲದಿಂದಲೂ ಉಪಯೋಗವಿದೆ ಎಂಬುದನ್ನು ಸಾಬೀತುಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ನಾಯಿಗಳ ಮಲಕ್ಕೂ ಹೆಚ್ಚಿನ ಬೇಡಿಕೆ ಬರಬಹುದಾದ ಸಾಧ್ಯತೆಗಳಿವೆ. ಸಿಮೆಂಟ್ ನೊಂದಿಗೆ ನಾಯಿ ಮಲವನ್ನು ಮಿಕ್ಸ್ ಮಾಡಿ ಇಟ್ಟಿಗೆ…
ಉಳಿತಾಯ ಖಾತೆ ತೆರೆಯಲು ಇಷ್ಟಪಡವವರಿಗೆ ಈ ವಿಧಾನ ತುಂಬಾನೇ ಸರಳ ಹಾಗು ಸೂಕ್ತ ಅನಿಸುತ್ತೆ. ಇತ್ತೀಚಿನ ದಿನಗಳಲ್ಲಿ ಉಳಿತಾಯ ಖಾತೆಯನ್ನು ತೆರೆಯಲು ಹೆಚ್ಚು ಮಂದಿ ಬಯಸುತ್ತಾರೆ. ಬಡವರು ಮಧ್ಯಮ ವರ್ಗದವರಿಗೆ ಇದು ತುಂಬಾನೇ ಅವಶ್ಯಕ. ಈ ವಿಧಾನ ಮನೆಯ ಹೆಣ್ಣು ಮಕ್ಕಳಿಗೆ ತುಂಬಾನೇ ಸಹಕಾರಿಯಾಗಿದೆ. ಈ ರೀತಿಯಲ್ಲಿ ಉಳಿತಾಯ ಮಾಡುತ್ತ ಹೋದರೆ ವರ್ಷದಲ್ಲಿ ಒಂದು ಲಕ್ಷಕ್ಕಿಂತ ಹೆಚ್ಚು ಹಣವನ್ನು ನೀವು ಸಂಪಾದಿಸಬಹುದು. ಇದರಿಂದ ನಿಮ್ಮ ಮನೆಯ ಕೆಲಸಕ್ಕೆ ಬಳಸಿ ಕೊಳ್ಳಬಹುದು. ಪ್ರತಿ ದಿನ ಯಾವ ರೀತಿಯಲ್ಲಿ ಉಳಿತಾಯ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಸದಾ ಕಾಲವು ನಿಮ್ಮನ್ನು ಜನರು ಮಾತನಾಡಿಸಬೇಕು. ಪ್ರತಿಯೊಂದು ಕ್ರಿಯೆಗೂ ಶಹಾಬಾಸ್ಗಿರಿ ಕೊಡಬೇಕೆಂಬ ಮನೋಭೂಮಿಕೆಯಿಂದ ಹೊರಬನ್ನಿ. ಏಕೆಂದರೆ ಎಲ್ಲರನ್ನು ಎಲ್ಲಾ ಕಾಲಕ್ಕೂ ಮೂರ್ಖರನ್ನಾಗಿಸಲು ಶಕ್ಯವಿಲ್ಲ. ನಿಮ್ಮಲ್ಲಿನ ತಪ್ಪನ್ನು ತಿದ್ದುವವರನ್ನುನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ನಮಗೆ ಗೊತ್ತಿರುವ ಹಾಗೆ ಶ್ರೀ ರಾಮ ಭಕ್ತ ಹನುಮಂತನ ಜನ್ಮ ವೃತ್ತಾಂತ, ಹನುಮಂತ ದೇವರು, ಭಗವಾನ್ ಶಿವನ ಅಂಶದ ಅವತಾರ ಇವೆಲ್ಲವೂ ನಮಗೆ ಗೊತ್ತಿದೆ. ಆದರೆ ಗೊತ್ತಿಲ್ಲದ ವಿಷಯ ಏನೆಂದರೆ ಹನುಮಂತನ ಈ ಅವತಾರಕ್ಕೆ ಮುಂಚೆ, ಎಷ್ಟೋ ಯುಗಗಳ ಹಿಂದಯೇ ಹನುಮಂತನ ಮತ್ತೊಂದು ಅವತಾರವಾಗಿತ್ತು. ಆ ಅವತಾರವೇ ವೃಶ ಕಪಿ ಅವತಾರ.
ಅಳು ಹುಟ್ಟಿನಿಂದಲೇ ನಮ್ಮ ಸಂಗಾತಿ, ನಾವು ಮಕ್ಕಳಾಗಿದ್ದಾಗ ನಮ್ಮ ಭಾವನಾತ್ಮಕ, ಶಾರೀರಿಕ ಅವಶ್ಯಕತೆಗಳಿಗಾಗಿ ಅಳುತ್ತಿದ್ದೆವು, ಇನ್ನು ಭಾವನಾತ್ಮಕ ಕಣ್ಣೀರು ಉಕ್ಕಿ ಬರಲು ಅನೇಕ ಕಾರಣಗಳಿವೆ. ದುಃಖ, ನಿರಾಶೆ, ದೈಹಿಕ ಅಥವಾ ಮಾನಸಿಕ ವೇದನೆ ಇವೆಲ್ಲಾ ನಾವು ಕಣ್ಣೀರಿಡುವಂತೆ ಮಾಡುತ್ತವೆ, ಸಂತೋಷ, ಸಮಾಧಾನ, ಸಾಧನೆಯಂಥ ಸನ್ನಿವೇಶಗಳು ಕೂಡ ಭಾವನಾತ್ಮಕ ಕಣ್ಣೀರು ಬರಿಸುತ್ತವೆ, ಆದರೆ ಇವು ಆನಂದಬಾಷ್ಪಗಳು. ಕೆಲವೊಮ್ಮೆ ಒಬ್ಬರು ಅಳುವುದನ್ನು ನೋಡಿ ಇನ್ನೊಬ್ಬರಿಗೆ ಕಣ್ಣೀರು ಬರುತ್ತದೆ, ನಿಮಗೆ ಗೊತ್ತಿರಲು ಸಾಧ್ಯವಿಲ್ಲ ಅಳುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ, ಅಮೆಕದ ವಿಜ್ಞಾನಿಗಳು…
ನುಗ್ಗೆಯಲ್ಲಿ ಬಿಸುಡಲು ಏನಿಲ್ಲ. ಅದರ ಕಾಯಿ ಮಾತ್ರವಲ್ಲ; ಎಲೆ, ಬೇರು, ಹೂ, ತೊಗಟೆ ಎಲ್ಲವೂ ಬಳಕೆಯ ದೃಷ್ಟಿಯಿಂದ ಮಹತ್ವ ಪಡೆದಿವೆ. ಇದರ ಮರವನ್ನು ಕೆತ್ತಿದಾಗ ಒಸರುವ ಅಂಟನ್ನು ಹಾಲಿನಲ್ಲಿ ಬೆರೆಸಿ ಲೇಪಿಸಿದರೆ ತಲೆಶೂಲೆ ಶೀಘ್ರ ಶಮನವಾಗುತ್ತದೆ ಎಂದಿದೆ ವೈದ್ಯಗ್ರಂಥ. ನುಗ್ಗೆ ಎಲೆಗಳನ್ನು ಹಲವಾರು ಬಗೆಯ ಅಡುಗೆಗಳಲ್ಲಿ ಬಳಸಲಾಗುತ್ತದೆ. ಈ ಎಲೆಗಳಲ್ಲಿ ಅಮೂಲ್ಯ ಖನಿಜಗಳು, ವಿಟಮಿನ್ನುಗಳು ಹಾಗೂ ಪ್ರೋಟೀನುಗಳೂ ಇವೆ. ಸಾಮಾನ್ಯವಾಗಿ ಈ ಎಲೆಗಳನ್ನು ದಾಲ್, ಸಾಂಬಾರ್ ಅಥವಾ ಕೆಲವು ಸೂಪ್ಗಳಲ್ಲಿ ಬಳಸಲಾಗುತ್ತದೆ. ಆದರೆ ಈ ಎಲೆಗಳ ಸೇವನೆಯಿಂದ…