ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲಿ ಕಳೆದ ಒಂದು ವಾರದಲ್ಲಿ ಭಾರಿ ಸುದ್ದಿಯಾಗುತ್ತಿರುವ ವಿಷಯ ಏನು ಅಂದರೆ ಅದೂ ಕರೋನ ವೈರಸ್ ಆಗಿದೆ, ಹೌದು ದೂರದ ಚೀನಾ ದೇಶದಲ್ಲಿ ಹುಟ್ಟಿ ಇಡೀ ಪ್ರಪಂಚಕ್ಕೆ ಆತಂಕವನ್ನ ಉಂಟುಮಾಡಿರುವ ಈ ಕರೋನ ಈಗ ನಮ್ಮ ದೇಶದಲ್ಲಿ ಕೂಡ ಕಾಣಿಸಿಕೊಂಡಿದ್ದು ಜನರು ಭಯಭಿತರಾಗಿದ್ದಾರೆ. ಹೌದು ದೆಹಲಿಯಲ್ಲಿ ಇಬ್ಬರಿಗೆ ಈ ಕರೋನ ವೈರಸ್ ಪತ್ತೆಯಾಗಿದ್ದು ನಿನ್ನೆ ನಮ್ಮ ಕರ್ನಾಟಕದಲ್ಲಿ ದುಬೈನಿಂದ ಬಂದ ಒಬ್ಬ ವ್ಯಕ್ತಿಗೆ ಕರೋನ ವೈರಸ್ ಇರಿವುದು ತಿಳಿದು ಬಂದಿದ್ದು ಆತನಿಗೆ ಬೆಂಗಳೂರಿನಲ್ಲಿ ಚಿಕಿತ್ಸೆಯನ್ನ ನೀಡಲಾಗುತ್ತಿದೆ. ಇನ್ನು ದೇಶದಲ್ಲಿ ಈ ಕರೋನ ವೈರಸ್ ಭಾರಿ ಆಘಾತವನ್ನ ಉಂಟುಮಾಡಿದ್ದು ಜನರು ಇದು ಹರಡದಿರಲು ಬೇಕಾಗದ ಅಗತ್ಯ ಕ್ರಮಗಳನ್ನ ಕೈಗೊಳ್ಳುತ್ತಿದ್ದಾರೆ.

ಇನ್ನು ಜನರು ಮುಖಕ್ಕೆ ಮಾಸ್ಕ ಹಾಕಿಕೊಂಡು ಓಡಾಡುತ್ತಿದ್ದು ದೇಶದಲ್ಲಿ ಮಾಸ್ಕ್ ಮಾರಾಟ ಕೂಡ ಬಹಳ ಜಾಸ್ತಿ ಆಗಿದೆ. ಇನ್ನು ಈಗ ಮತ್ತೊಂದು ಶಾಕಿಂಗ್ ಸುದ್ದಿಯನ್ನ ವಿಶ್ವ ಆರೋಗ್ಯ ಸಂಸ್ಥೆ ನೀಡಿದ್ದು ಜನರಲ್ಲಿ ಮತ್ತೆ ಭಯ ಉಂಟು ಮಾಡಿದೆ, ಹೌದು ಇತ್ತೀಚಿನ ದಿನಗಳಲ್ಲಿ ಹೆಚ್ಚು ಹಣಕಾಸಿನ ವ್ಯವಹಾರ ನಡೆಯುವುದು ಏಟಿಎಂ ಗಳಲ್ಲಿ ಮತ್ತು ಬ್ಯಾಂಕುಗಳಲ್ಲಿ ಆಗಿದೆ, ಆದರೆ ಈಗ ಏಟಿಎಂ ಮತ್ತು ನೋಟುಗಳಿಗೂ ಕರೋನ ವೈರಸ್ ತಗುಲಿದೆ ಅಂದರೆ ಜನರು ಜೀವನ ಮಾಡುವುದು ಹೇಗೆ ನೀವೇ ಹೇಳಿ.

ಹೌದು ವಿಶ್ವ ಆರೋಗ್ಯ ಸಂಸ್ಥೆ ಕೊಟ್ಟಿರುವ ಮಾಹಿತಿಯ ಪ್ರಕಾರ ಕರೋನ ವೈರಸ್ ಸೋಂಕು ತಗುಲಿರುವ ವ್ಯಕ್ತಿಯೂ ಏಟಿಎಂ ನಲ್ಲಿ ಹಣವನ್ನ ತಗೆಯಲು ಹೋದಾಗ ಏಟಿಎಂ ಮಷೀನ್ ಮತ್ತು ಹಣವನ್ನ ಮುಟ್ಟುತ್ತಾನೆ, ಹೀಗೆ ಆತ ಹಣ ಮತ್ತು ಏಟಿಎಂ ಮಷೀನ್ ಮುಟ್ಟಿದ ಮೇಲೆ ಆ ವೈರಸ್ ಏಟಿಎಂ ಮತ್ತು ಅಲ್ಲಿನ ಹಣಕ್ಕೂ ತಗುಲುತ್ತದೆ. ಇನ್ನು ಆತನ ನಂತರ ಆ ಏಟಿಎಂ ಬಳಸುವ ಎಲ್ಲರೂ ಕೂಡ ಏಟಿಎಂ ಮುಟ್ಟುತ್ತಾರೆ ಮತ್ತು ಹಣವನ್ನ ತಗೆಯುತ್ತಾರೆ, ಹೀಗೆ ಏಟಿಎಂ ಗಳಲ್ಲಿ ವ್ಯವಹಾರ ಮಾಡುವ ನಿಮಗೂ ಕೂಡ ಆ ವೈರಸ್ ತಗುಲುವ ಸಾಧ್ಯತೆ ಇದ್ದು ಬಹಳ ಎಚ್ಚರದಿಂದ ಇರಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಮುನ್ನೆಚ್ಚರಿಕೆಯನ್ನ ನೀಡಿದೆ.

ಇನ್ನು ವಿಶ್ವ ಅರೋಗ್ಯ ಸಂಸ್ಥೆ ಹೇಳಿರುವ ಪ್ರಕಾರ ನೀವು ಏಟಿಎಂ ಗಳಿಗೆ ಹೋಗಿ ಹಣವನ್ನ ತಗೆದ ನಂತರ ನಿಮ್ಮ ಕೈ ಮತ್ತು ಮುಖವನ್ನ ಚನ್ನಾಗಿ ತೊಳೆಯಬೇಕು ಮತ್ತು ಹಳೆಯ ನೋಟು ಮತ್ತು ನಾಣ್ಯಗಳನ್ನ ಮುಟ್ಟಿ ವ್ಯವಹಾರವನ್ನ ಮಾಡಿದಾಗಲೂ ಕೂಡ ನಿಮ್ಮ ಕೈ ಚನ್ನಾಗಿ ತೊಳೆಯಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರವನ್ನ ಕೊಟ್ಟಿದೆ. ದೇಶದಲ್ಲಿ ಈ ವೈರಸ್ ಕಾಣಿಸಿಕೊಂಡಿರುವುದರಿಂದ ಅದನ್ನ ತಡೆಗಟ್ಟುವಲ್ಲಿ ನಮ್ಮ ನಿಮ್ಮ ಪಾತ್ರ ತುಂಬಾ ಮುಖ್ಯವಾದದ್ದು, ಈ ವೈರಸ್ ಬಹಳ ಬೇಗ ಹರಡುವ ವೈರಸ್ ಆಗಿದ್ದು ಇದಕ್ಕೆ ಸರಿಯಾದ ಚಿಕಿತ್ಸೆಯನ್ನ ಕೂಡ ಇನ್ನು ಕಂಡುಹಿಡಿಯಲಾಗಿಲ್ಲ. ನೀವು ಇಂದಿನಿಂದಲೇ ಈ ಸೊಂಕು ಹರಡದಂತೆ ಅಗತ್ಯ ಕ್ರಮಗಳನ್ನ ಕೈಗೊಳ್ಳುವುದು ಉತ್ತಮ, ಈ ಕರೋನ ವೈರಸ್ ಬಗ್ಗೆ ವಿಶ್ವ ಅರೋಗ್ಯ ಸಂಸ್ಥೆ ಕೊಟ್ಟಿರುವ ಈ ಮಾಹಿತಿಯನ್ನ ತಪ್ಪದೆ ಎಲ್ಲರಿಗೂ ತಲುಪಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶುಕ್ರವಾರ, 23/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಹೆತ್ತವರನ್ನು ತೀರ್ಥಯಾತ್ರೆಗೆ ಕಳುಹಿಸುವ ಸಂಕಲ್ಪ ಮಾಡಲಿದ್ದೀರಿ. ಹಿರಿಯರಿಗೆ ಆಗಾಗ ದೇಹಾರೋಗ್ಯ ಏರುಪೇರಾಗಲಿದೆ. ಸಾಮಾಜಿಕ ರಂಗದಲ್ಲಿ ಆಗಾಗ ಸಮಾರಂಭಕ್ಕಾಗಿ ಓಡಾಟ ವಿರುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಂತಸ ತರಲಿದೆ. ರಾಜಕೀಯ ಧುರೀಣರೊಬ್ಬರ ಸಹಕಾರದಿಂದ ಮಹತ್ತರ ಕೆಲಸವೊಂದನ್ನು ಮಾಡಿಸಿಕೊಳ್ಳಲಿದ್ದೀರಿ. ವ್ಯಾಪಾರದಿಂದ ಅಧಿಕ ಲಾಭ. ವೃಷಭ:- ಮಕ್ಕಳ ಬಗ್ಗೆ ಗಮನ ಹರಿಸಬೇಕು. ಉನ್ನತ ಅಧಿಕಾರಿಗಳ ಬೆಂಬಲದಿಂದ ಕಾರ್ಯಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಿದ್ದೀರಿ. ಮೇಲ್ದರ್ಜೆ ಗುತ್ತಿಗೆದಾರರಿಗೆ ಉತ್ತಮ ಕಾಮಗಾರಿಗಳು ದೊರಯುವ ಲಕ್ಷಣಗಳು…
ಹುಟ್ಟುಹಬ್ಬದಂದು ಸ್ನೇಹಿತರು ಎಲ್ಲ ಸೇರಿ ಯುವಕನಿಗೆ ಬರ್ತ್ ಡೇ ಬಂಪ್ಸ್ ಕೊಟ್ಟಿದ್ದು, ಇದರಿಂದ ವಿದ್ಯಾರ್ಥಿ ಮೃತಪಟ್ಟ ಘಟನೆ ತಮಿಳುನಾಡಿದ ಚೆನ್ನೈನಲ್ಲಿ ನಡೆದಿದೆ. ಕಳೆದ ಎರಡು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಈಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮೃತಪಟ್ಟ ಯುವಕ ಬೆಂಗಳೂರಿನ ಐಐಎಂ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಯುವಕ ಎರಡು ತಿಂಗಳ ಹಿಂದೆ ತನ್ನ ಹುಟ್ಟುಹಬ್ಬವನ್ನು ಸ್ನೇಹಿತರ ಜೊತೆ ಆಚರಿಸಿಕೊಂಡಿದ್ದನು. ಈ ವೇಳೆ ಸ್ನೇಹಿತರು ಎಲ್ಲರು ಸೇರಿ ಆತನಿಗೆ ಬರ್ತ್ ಡೇ…
ಕೆಂಡಸಂಪಿಗೆಯ ವಿಕ್ಕಿ ವರುನ್ ಹಾಗೂ ಕಿರಿಕ್ ಪಾರ್ಟಿಯ ಸಂಯುಕ್ತ ಹೆಗ್ಡೆ ನಟಿಸಿರುವ ಈ ಸಿನಿಮಾವನ್ನು ಅಲೆಮಾರಿ ಸಂತೋಷ್ ನಿರ್ದೇಶನ ಮಾಡಿದ್ದಾರೆ..
ಬೆಕ್ಕು ಮತ್ತು ನಾಯಿ ಪರಮ ಶತ್ರುಗಳು ಎಂದು ಹೇಳುತ್ತಾರೆ. ಆದರೆ ಇಲ್ಲೊಂದು ನಾಯಿ ಬೆಕ್ಕಿನ ಮರಿಗೆ ಹಾಲುಣಿಸಿ ತಾಯಿಯ ಪ್ರೀತಿಯನ್ನು ತೋರಿಸುತ್ತಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನೆಮ್ಮಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಚೆಟ್ಟಂಗಡ ಗಿಣಿ ತಿಮ್ಮಯ್ಯ ಅವರ ಮನೆಯಲ್ಲಿ ಈ ಅಪರೂಪದ ದೃಶ ಕಂಡು ಬಂದಿದೆ. ಈ ನಾಯಿ ಪ್ರತಿನಿತ್ಯ ಬೆಕ್ಕಿನಮರಿಗೆ ಹಾಲು ನೀಡುತ್ತಿದೆ. ಈ ನಾಯಿ ಬೆಕ್ಕಿನ ಮರಿಗಳಿಗೆ ಪ್ರತಿದಿನ ಹಾಲನ್ನು ಕುಡಿಸುತ್ತದೆ. ತಾಯಿಯ ಮಮತೆಯನ್ನು ಬಯಸಿ ಬರುವ ಬೆಕ್ಕಿನ ಮರಿಗೆ…
ಕರಬೂಜ ಹಣ್ಣಿಗೆ ತನ್ನದೇ ಆದ ಸುಗಂಧವಿದೆ. ತನ್ನದೇ ರುಚಿಯೆದೆ. ಕಳಿತ ಹಣ್ಣು ಮೃದುವಾಗಿರುತ್ತದೆ. ಈ ಹಣ್ಣಿಗೆ ಇಂಗ್ಲಿಷ್ ಹೆಸರು ಮಸ್ಕ್ ಮಿಲನ್, ಸಸ್ಯಶಾಸ್ತ್ರೀಯವಾಗಿ ‘ ಕುಕ್ಕುಮೀಸ್ ಮೆಲೊ’ ಎನ್ನುತ್ತಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಚಕ್ರವರ್ತಿ’ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಚಿತ್ರಮಂದಿರಕ್ಕೆ ಅಪ್ಪಳಿಸಲು ತಯಾರಾಗಿದೆ. ಈಗಾಗಲೇ ರಿಲೀಸ್ ಡೇಟ್ ಅನೌನ್ಸ್ ಮಾಡಿರುವ ‘ಚಕ್ರವರ್ತಿ’ ಅಭಿಮಾನಿಗಳಲ್ಲಿ ಈಗೊಂದು ಗೊಂದಲ ಕಾಡುತ್ತಿದೆ.[‘ಬಾಹುಬಲಿ’ ಮೀರಿಸಿದ ದರ್ಶನ್ ‘ಚಕ್ರವರ್ತಿ’] ಗಾಂಧಿನಗರದಲ್ಲಿ ‘ಚಕ್ರವರ್ತಿ’ ಚಿತ್ರಕ್ಕೆ ಯಾವುದು ಪ್ರಮುಖ ಚಿತ್ರಮಂದಿರವೆಂಬುದು ಈಗ ಪ್ರಶ್ನೆಯಾಗಿದೆ. ಸದ್ಯ, ದರ್ಶನ್ ಸಿನಿಮಾಗಳ ನೆಚ್ಚಿನ ಚಿತ್ರಮಂದಿರಗಳಲ್ಲಿ ಸುದೀಪ್ ಅಭಿನಯದ ‘ಹೆಬ್ಬುಲಿ’ ಮತ್ತು ಪುನೀತ್ ರಾಜ್ ಕುಮಾರ್ ಅಭಿನಯದ ‘ರಾಜಕುಮಾರ’ ಪ್ರದರ್ಶನವಾಗುತ್ತಿದೆ. ಹೀಗಿರುವಾಗ ‘ಚಕ್ರವರ್ತಿ’ಯ ಎಂಟ್ರಿ ಎಲ್ಲಿ ಎಂಬುದು ಕುತೂಹಲ…