ಸುದ್ದಿ

ವಿದ್ಯಾರ್ಥಿನಿ ವರಲಕ್ಷ್ಮಿ ಸೋಲಿಗೆ ಕಾರಣವಾಯಿತು ಅವರ ಟೀಚರ್ ಮಾಡಿದ ಎಡವಟ್ಟು…!

58

ಮಂಡ್ಯದ ಹುಡುಗಿ ವರಲಕ್ಷ್ಮಿ ಆಟ-ಪಾಠ ಎಲ್ಲದರಲ್ಲೂ ಸದಾ ಮುಂದು. ಆಶುಭಾಷಣ ಮಾಡುವುದರಲ್ಲಿ ಈಕೆ ಎತ್ತಿದ ಕೈ. ಕಬಡ್ಡಿ ಕೂಡ ಆಡುವ ವರಲಕ್ಷ್ಮಿಗೆ ಮುಂದೆ ಟೀಚರ್ ಆಗಿ ಬಡ ಮಕ್ಕಳಿಗೆ ಪಾಠ ಹೇಳಿಕೊಡುವ ಆಸೆ ಇದೆ. ಜೊತೆಗೆ ಸಿ.ಎ (ಚಾರ್ಟರ್ಡ್ ಅಕೌಂಟೆಂಟ್) ಆಗುವ ಕನಸಿದೆ. ಬೆಟ್ಟದಷ್ಟು ಆಸೆ ಹೊತ್ತು ‘ಕನ್ನಡದ ಕೋಟ್ಯಧಿಪತಿ’ ವೇದಿಕೆಗೆ ಬಂದಿದ್ದ ಈ ಪುಟ್ಟ ಹುಡುಗಿಯ ಕನಸು ಒಂದೇ ಕ್ಷಣದಲ್ಲಿ ನುಚ್ಚು ನೂರಾಗಿದ್ದು ಮಾತ್ರ ದುರಾದೃಷ್ಟಕರ.

‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಕೋಟಿ ರೂಪಾಯಿ ಗೆಲ್ಲಲೇಬೇಕು ಎಂಬ ಛಲ ವರಲಕ್ಷ್ಮಿಗಿತ್ತು. ಕೋಟಿ ಗೆಲ್ಲದೇ ಹೋದರೂ, 25 ಲಕ್ಷವಾದರೂ ಗೆಲ್ಲಬೇಕು ಎಂಬ ಹಠ ಆಕೆಯಲ್ಲಿತ್ತು. ಗೆಲ್ಲುವ ಹಣದಲ್ಲಿ ತನ್ನ ವಿದ್ಯಾಭ್ಯಾಸಕ್ಕೆ ಮತ್ತು ರಾಗಿ ಬೆಳೆಯುವ ತನ್ನ ತಂದೆಯ ವ್ಯವಸಾಯಕ್ಕೆ ಸಹಾಯ ಮಾಡುವ ಆಲೋಚನೆ ಹೊಂದಿದ್ದಳು. ಜೊತೆಗೆ ತಾನು ಓದುವ ಶಾಲೆಯಲ್ಲಿ ಕ್ಲಾಸ್ ರೂಮ್ ಕಟ್ಟಿಸುವ ಇಚ್ಛೆ ಕೂಡ ಆಕೆಯಲ್ಲಿತ್ತು.

‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮದಲ್ಲಿ ಒಂಬತ್ತು ಪ್ರಶ್ನೆಗಳಿಗೆ ಸತತವಾಗಿ ಸರಿಯಾದ ಉತ್ತರ ನೀಡುತ್ತ 160,000 ರೂಪಾಯಿಗಳನ್ನು ವರಲಕ್ಷ್ಮಿ ಗಳಿಸಿದ್ದರು. ಅಚ್ಚರಿ ಅಂದ್ರೆ, ಈ ಒಂಬತ್ತು ಪ್ರಶ್ನೆಗಳಿಗೆ ಯಾವುದೇ ಲೈಫ್ ಲೈನ್ಬಳಸದೆ, ಎಲ್ಲಾ ಪ್ರಶ್ನೆಗಳಿಗೂ ಪಟಪಟ ಅಂತ ವರಲಕ್ಷ್ಮಿ ಉತ್ತರಕೊಟ್ಟಿದ್ದಳು.

ನಾನ್ ಸ್ಟಾಪ್ ಆಗಿ ಆಡಿಕೊಂಡು ಬಂದ ವರಲಕ್ಷ್ಮಿಗೆ ಸ್ಪೀಡ್ ಬ್ರೇಕರ್ ಆಗಿದ್ದು ಹತ್ತನೇ ಪ್ರಶ್ನೆ. 320,000 ರೂಪಾಯಿಗೆ ಕೇಳಲಾದ ಪ್ರಶ್ನೆ ಹೀಗಿತ್ತು

* ಈ ಕೆಳಗಿನವುಗಳಲ್ಲಿ ಯಾವ ಸ್ಥಳವು ಬಂಗಾಳ ಕೊಲ್ಲಿಯ ಕರಾವಳಿ ಪ್ರದೇಶದಲ್ಲಿದೆ?

ಅಜಂತಾ, ತಂಜಾವೂರು, ಕೊನಾರ್ಕ್, ಉಜ್ಜಯನಿ –

ಈ ಪ್ರಶ್ನೆಗೆ ಉತ್ತರ ಗೊತ್ತಿಲ್ಲದ ವರಲಕ್ಷ್ಮಿ ಮೊಟ್ಟ ಮೊದಲ ಬಾರಿಗೆ ಲೈಫ್ ಲೈನ್ ಬಳಸಿದಳು. ಹಾಗ್ನೋಡಿದ್ರೆ, ವರಲಕ್ಷ್ಮಿ ‘ಆಡಿಯನ್ಸ್ ಪೋಲ್’ ಬಳಸಬಹುದಿತ್ತು. ಆದ್ರೆ, ಆಕೆ ‘ಫೋನ್ ಎ ಫ್ರೆಂಡ್’ ಆಯ್ಕೆ ಮಾಡಿಕೊಂಡಳು. ತನಗೆ ಸೋಷಿಯಲ್ ಮತ್ತು ಸೈನ್ಸ್ ಹೇಳಿಕೊಡುವ ಗೌರಮ್ಮ ಟೀಚರ್ ಗೆ ವರಲಕ್ಷ್ಮಿ ಫೋನ್ ಮಾಡಿದಳು. ಆ ಕಡೆಯಿಂದ ಶಿಕ್ಷಕಿ ಗೌರಮ್ಮ ‘ತಂಜಾವೂರು’ ಎಂದು ಉತ್ತರಿಸಿದರು. ಇನ್ನೊಂದು ಬಾರಿ ವರಲಕ್ಷ್ಮಿ ಪ್ರಶ್ನೆ ಕೇಳುವಷ್ಟರಲ್ಲಿ ಮೂವತ್ತು ಸೆಕೆಂಡ್ ಮುಗಿದಿತ್ತು, ಫೋನ್ ಕಟ್ ಆಯ್ತು.

ಪುನೀತ್ಕೊಟ್ಟ ಸೂಚನೆ ಅರ್ಥ ಆಗಲಿಲ್ಲ.!”ಡೌಟ್ ಇದ್ದರೆ, ಇನ್ನೊಂದು ಲೈಫ್ಲೈನ್ ಬಳಸಬಹುದು.. ಟೈಮ್ ಇದೆ.. ಇನ್ನೂಎರಡು ಲೈಫ್ ಲೈನ್ ಇದೆ”ಅಂತ ಪದೇ ಪದೇ ಪುನೀತ್ರಾಜ್ ಕುಮಾರ್ ಹೇಳುತ್ತಿದ್ದರು. ಈಸೂಚನೆಯನ್ನು ಅರ್ಥ ಮಾಡಿಕೊಳ್ಳದ ವರಲಕ್ಷ್ಮಿ,ಶಿಕ್ಷಕಿ ಗೌರಮ್ಮ ಮೇಲೆ ನಂಬಿಕೆಇಟ್ಟು ‘ತಂಜಾವೂರು’ ಲಾಕ್ ಮಾಡಿಬಿಟ್ಟಳು. ದುರಾದೃಷ್ಟಅಂದ್ರೆ, ಅದು ತಪ್ಪು ಉತ್ತರ.

ಸರಿಯಾದ ಉತ್ತರ ‘ಕೊನಾರ್ಕ್’. 320,000 ವರೆಗೂಯಾವುದೇ ಲೈಫ್ ಲೈನ್ ಬಳಸದೇಬಂದಿದ್ದ ವರಲಕ್ಷ್ಮಿ ಏಕ್ದಂ ಹತ್ತು ಸಾವಿರಕ್ಕೆಕುಸಿದು ಬಿಟ್ಟಳು. ಅಲ್ಲಿಗೆ, ತಂದೆಗೆ ಸಹಾಯ ಮಾಡುವಆಸೆ, ಕ್ಲಾಸ್ ರೂಮ್ ಕಟ್ಟಿಸುವಕನಸು.. ಎರಡೂ ಕನಸಾಗಿಯೇ ಉಳಿಯಬೇಕಾಯಿತು.ಟೀಚರ್ ಮಾಡಿದ ಒಂದೇ ಒಂದುಎಡವಟ್ಟಿನಿಂದ ವರಲಕ್ಷ್ಮಿ ಆಸೆ ಈಡೇರದೇ ಹೋಯಿತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational, ಸುದ್ದಿ

    ಹಾಲರುವೆ ಉತ್ಸವದ ಸಂಭ್ರಮ- ಹರ್ಷೋದ್ಘಾರದ ಮಧ್ಯೆ ಮಾದಪ್ಪನ ಜಾತ್ರೆ..!ಇದರ ವಿಶೇಷ, ಹಿನ್ನೆಲೆಯೇನು?

    ದಕ್ಷಿಣ ಭಾರತದ ಪ್ರಮುಖ ಯಾತ್ರಾಸ್ಥಳ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಅಂಗವಾಗಿ ಹಾಲರುವೆ ಉತ್ಸವ ನಡೆಯಿತು. ಬೇಡಗಂಪಣ ಜನಾಂಗಕ್ಕೆ ಸೇರಿದ 101 ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳು 9 ಕಿ.ಮೀ ದೂರದ ಹಾಲರೆ ಹಳ್ಳದಿಂದ ಬಲಿಗಾಲಲ್ಲಿ ನೀರು ಹೊತ್ತು ತಂದು ಮಾದಪ್ಪನಿಗೆ ಅಭಿಷೇಕ ಮಾಡುವುದು ಹಾಲರುವೆ ಉತ್ಸವದ ವಿಶೇಷವಾಗಿದೆ. ಮಲೆಮಹದೇಶ್ವರ ಬೆಟ್ಟದಲ್ಲಿ ಪ್ರತಿ ವರ್ಷ ಮೂರು ದಿನಗಳ ಕಾಲ ದೀಪಾವಳಿ ಜಾತ್ರೆ ನಡೆಯುತ್ತದೆ. ಮಾದಪ್ಪನಿಗೆ ಎಣ್ಣೆಮಜ್ಜನಸೇವೆ, ಹಾಲರವೆ ಉತ್ಸವ ಮೂರನೇ ದಿನ ರಥೋತ್ಸವ ನಡೆಯುವುದು ಇಲ್ಲಿನ ವಿಶೇಷ….

  • ಸುದ್ದಿ

    ಲಕ್ನೋ: ಉತ್ತರ ಪ್ರದೇಶದ ಗ್ರಾಮವೊಂದರಲ್ಲಿ ಮುಸ್ಲಿಂ ಕುಟುಂಬಗಳು ಸತ್ತವರನ್ನು ತಮ್ಮ ಮನೆ ಮನೆಗಳಲ್ಲಿಯೇ ಸಮಾಧಿ ಮಾಡಿಕೊಳ್ಳುತ್ತಿದ್ದಾರೆ…!

    ಹೌದು. ಉತ್ತರ ಪ್ರದೇಶ ರಾಜ್ಯದ ಆಗ್ರಾ-ಜೈಪುರ ಹೆದ್ದಾರಿಯ ಆಗ್ರಾದಿಂದ 30 ಕಿಲೋ ಮೀಟರ್ ದೂರದಲ್ಲಿರುವ ಅಚ್ನೇರಾ ಬ್ಲಾಕ್‍ನ ಕುರಾಲಿ ತೆಹ್‍ಸಿಲ್‍ಯಲ್ಲಿನ ಚಹ್ ಪೋಕರ್ ಎಂಬ ಗ್ರಾಮದಲ್ಲಿ ಸುಮಾರು 50 ಮುಸ್ಲಿಂ ಕುಟುಂಬಗಳಿವೆ. ಅವರೆಲ್ಲರೂ ತಮ್ಮ ಕುಟುಂಬಸ್ಥರು ಯಾರದರೂ ಸತ್ತರೆ ಅವರನ್ನು ತಮ್ಮ ಮನೆಯಲ್ಲಿಯೆ ಸಮಾಧಿ ಮಾಡುವುದನ್ನು ರೂಡಿಸಿಕೊಂಡು ಬಂದಿದ್ದಾರಂತೆ. ಇದು ಯಾವುದೇ ಪದ್ಧತಿಯಲ್ಲ, ಬಲವಂತ ಎನ್ನುತ್ತಾರೆ ಗ್ರಾಮಸ್ಥರು. ಗ್ರಾಮದಲ್ಲಿರುವ 50 ಮುಸ್ಲಿಂ ಮನೆಗಳಲ್ಲಿ ಸುಮಾರು 300 ಜನಸಂಖ್ಯೆ ಹೊಂದಿದೆ. ಆದರೆ ಅವರಿಗೆ ಖಾಯಂ ಸ್ಮಶಾನ ಭೂಮಿ ಇಲ್ಲ….

  • ಆಧ್ಯಾತ್ಮ

    ಧ್ಯಾನ ಮಾಡೋದ್ರಿಂದ ಏನೆಲ್ಲಾ ಚಮತ್ಕಾರ ಆಗುತ್ತೆ ಗೊತ್ತಾ!ಹಾಗಾದ್ರೆ ಧ್ಯಾನ ಹೇಗೆ ಮಾಡಬೇಕು,ಹೇಗೆ ಮಾಡಬಾರದು?ತಿಳಿಯಲು ಈ ಲೇಖನಿ ಓದಿ…

    ಧ್ಯಾನವು ಚಿನ್ನದ ಹಾಗೆ ಬಹು ಮೂಲ್ಯವುಳ್ಳದು. ಭೌತಿಕ ಐಶ್ವರ್ಯಕ್ಕೂ,ಮುಕ್ತೀಗೂ,ಶಾಂತಿಗೂ ಧ್ಯಾನವು ಒಳ್ಳೆಯದು. ಅದಕ್ಕಾಗಿ ಉಪಯೋಗಿಸುವ ಸಮಯ ಎಂದಿಗೂ ನಷ್ಟವಾಗುವಂತದಲ್ಲ. ಧ್ಯಾನದ ಲಾಭಗಳು ವರ್ಣಿಸಲು ಹೋದರೆ ಅದಕ್ಕೆ ಅಂತ್ಯವೇ ಇಲ್ಲ.

  • ಮನಮಿಡಿಯುವ ಕಥೆ

    ತಾಯಿ ಮೇಲೆ ಪ್ರೀತಿ ಇದ್ದರೆ, ಈ ಮನಮುಟ್ಟುವ ಕಥೆಯನ್ನು ಒಮ್ಮೆ ಓದಿ.!

    ಒಬ್ಬ ಯುವಕನು ಮಾತೃ ಋಣವನ್ನು ತೀರಿಸಲೆಂದು ಒಂದು ಲಕ್ಷ ಬಂಗಾರದ ನಾಣ್ಯಗಳನ್ನು ಸೇರಿಸಿ ತಾಯಿಗೆ ಕೊಟ್ಟು ಅಮ್ಮ ಈ ಬಂಗಾರದ ನಾಣ್ಯಗಳಿಂದ ನಿನಗೆ ಇಷ್ಟವಾದದನ್ನು ಮಾಡಿಸೋಕೋ. ಇದರಿಂದ ನನಗೆ ತಾಯಿ ಋಣದಿಂದ ಮುಕ್ತಿ ಸಿಗುತ್ತದೆ ಅನ್ನುತ್ತಾನೆ. ತಾಯಿ ಮುಗುಳು ನಗುತ್ತ ತಾಯಿ ಹೀಗೆ ಹೇಳಿದಳು…ಮಗು, ನನ್ನ ಋಣ ತೀರಿಸಲು ಈ ಹಣ ನನಗೆ ಬೇಡ, ನೀನು ಒಂದು ದಿನ ರಾತ್ರಿ ನನ್ನ ಬಳಿ ಮಲಗಿಕೊ ಸಾಕು ಅಂತ ಹೇಳಿದರು. ತಾಯಿ ಹೇಳಿದಂತೆ ಮಗನು ಸರಿ ಎಂದು ತಾಯಿಯ…

  • ಸುದ್ದಿ

    ಸಾರ್ವಜನಿಕರ ಮುಂದೆಯೇ ಚಾಕುವಿನಿಂದ ಇರಿದು ಯುವತಿಯ ಬರ್ಬರ ಹತ್ಯೆ …!

    20 ವರ್ಷದ ಯುವತಿಯನ್ನು ಸಾರ್ವಜನಿಕವಾಗಿ ಯುವಕನೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ದೆಹಲಿಯ ಭೋಗಲ್ ಪ್ರದೇಶದಲ್ಲಿ ನಡೆದಿದೆ.ಈ ಘಟನೆ ಭೋಗಲ್ ಬಸ್ ನಿಲ್ದಾಣದ ಬಳಿ ನಡೆದಿದೆ. ಆರೋಪಿಯನ್ನು ಮುನಾಸೀರ್ ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಆತನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ದೆಹಲಿ ಪೊಲೀಸರು ಆರೋಪಿ ಮತ್ತು ಮೃತ ಯುವತಿಗೆ ಸಂಬಂಧ ಇದೆಯೇ ಎಂದು ತನಿಖೆ ನಡೆಸುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿ ಮೊದಲಿಗೆ ಮೃತ ಯುವತಿಯ ಬಳಿ ಬಂದು ಮಾತನಾಡುತ್ತಿದ್ದನು. ಆದರೆ…

  • ಆರೋಗ್ಯ

    ವಿಟಮಿನ್ ನಮ್ಮ ದೇಹಕ್ಕೆ ಎಷ್ಟೋಂದು ಅವಶ್ಯಕವೆಂಬುದು ನಿಮಗೆ ಗೊತ್ತಾ?ತಿಳಿಯಲು ಈ ಲೇಖನ ಓದಿ..

    ಜೀವಸತ್ವಗಳು ಅರ್ಥಾತ್ ವಿಟಮಿನ್ ನಮ್ಮ ದೇಹದ ವಿವಿಧ ಕಾರ್ಯಗಳಿಗೆ ಅತ್ಯವಶ್ಯಕವಾಗಿ ಬೇಕಾದ ಅಂಶಗಳು. ನಾವು ಸೇವಿಸುವ ಆಹಾರದಲ್ಲಿನ ಜೀವಸತ್ವಗಳು ಪಚನವಾಗಿ ರಕ್ತದಲ್ಲಿ ಹೀರುವಂತಾಗಲು ಜಿಡ್ಡಿನಂಶದ ಅಗತ್ಯಕ್ಕೆ ಅನುಗುಣವಾಗಿ ಅವುಗಳನ್ನು ಜಿಡ್ಡಿನಲ್ಲಿ ಕರಗುವ ಮತ್ತು ನೀರಿನಲ್ಲಿ ಕರಗುವ ಜೀವಸತ್ವಗಳೆಂದು ವಿಂಗಡಿಸಲಾಗಿದೆ. ವಿಟಮಿನ್ ಎ, ಡಿ, ಇ, ಕೆಗಳನ್ನು ಜಿಡ್ಡಿನಲ್ಲಿ ಕರಗುವ ಜೀವಸತ್ವಗಳೆಂದೂ, ಬಿ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ಜೀವಸತ್ವಗಳನ್ನು ನೀರಿನಲ್ಲಿ ಕರಗುವ ಗುಂಪನ್ನಾಗಿಯೂ ಹೆಸರಿಸಲಾಗಿದೆ.