ಸುದ್ದಿ

ವಿದ್ಯಾರ್ಥಿನಿ ವರಲಕ್ಷ್ಮಿ ಸೋಲಿಗೆ ಕಾರಣವಾಯಿತು ಅವರ ಟೀಚರ್ ಮಾಡಿದ ಎಡವಟ್ಟು…!

56

ಮಂಡ್ಯದ ಹುಡುಗಿ ವರಲಕ್ಷ್ಮಿ ಆಟ-ಪಾಠ ಎಲ್ಲದರಲ್ಲೂ ಸದಾ ಮುಂದು. ಆಶುಭಾಷಣ ಮಾಡುವುದರಲ್ಲಿ ಈಕೆ ಎತ್ತಿದ ಕೈ. ಕಬಡ್ಡಿ ಕೂಡ ಆಡುವ ವರಲಕ್ಷ್ಮಿಗೆ ಮುಂದೆ ಟೀಚರ್ ಆಗಿ ಬಡ ಮಕ್ಕಳಿಗೆ ಪಾಠ ಹೇಳಿಕೊಡುವ ಆಸೆ ಇದೆ. ಜೊತೆಗೆ ಸಿ.ಎ (ಚಾರ್ಟರ್ಡ್ ಅಕೌಂಟೆಂಟ್) ಆಗುವ ಕನಸಿದೆ. ಬೆಟ್ಟದಷ್ಟು ಆಸೆ ಹೊತ್ತು ‘ಕನ್ನಡದ ಕೋಟ್ಯಧಿಪತಿ’ ವೇದಿಕೆಗೆ ಬಂದಿದ್ದ ಈ ಪುಟ್ಟ ಹುಡುಗಿಯ ಕನಸು ಒಂದೇ ಕ್ಷಣದಲ್ಲಿ ನುಚ್ಚು ನೂರಾಗಿದ್ದು ಮಾತ್ರ ದುರಾದೃಷ್ಟಕರ.

‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಕೋಟಿ ರೂಪಾಯಿ ಗೆಲ್ಲಲೇಬೇಕು ಎಂಬ ಛಲ ವರಲಕ್ಷ್ಮಿಗಿತ್ತು. ಕೋಟಿ ಗೆಲ್ಲದೇ ಹೋದರೂ, 25 ಲಕ್ಷವಾದರೂ ಗೆಲ್ಲಬೇಕು ಎಂಬ ಹಠ ಆಕೆಯಲ್ಲಿತ್ತು. ಗೆಲ್ಲುವ ಹಣದಲ್ಲಿ ತನ್ನ ವಿದ್ಯಾಭ್ಯಾಸಕ್ಕೆ ಮತ್ತು ರಾಗಿ ಬೆಳೆಯುವ ತನ್ನ ತಂದೆಯ ವ್ಯವಸಾಯಕ್ಕೆ ಸಹಾಯ ಮಾಡುವ ಆಲೋಚನೆ ಹೊಂದಿದ್ದಳು. ಜೊತೆಗೆ ತಾನು ಓದುವ ಶಾಲೆಯಲ್ಲಿ ಕ್ಲಾಸ್ ರೂಮ್ ಕಟ್ಟಿಸುವ ಇಚ್ಛೆ ಕೂಡ ಆಕೆಯಲ್ಲಿತ್ತು.

‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮದಲ್ಲಿ ಒಂಬತ್ತು ಪ್ರಶ್ನೆಗಳಿಗೆ ಸತತವಾಗಿ ಸರಿಯಾದ ಉತ್ತರ ನೀಡುತ್ತ 160,000 ರೂಪಾಯಿಗಳನ್ನು ವರಲಕ್ಷ್ಮಿ ಗಳಿಸಿದ್ದರು. ಅಚ್ಚರಿ ಅಂದ್ರೆ, ಈ ಒಂಬತ್ತು ಪ್ರಶ್ನೆಗಳಿಗೆ ಯಾವುದೇ ಲೈಫ್ ಲೈನ್ಬಳಸದೆ, ಎಲ್ಲಾ ಪ್ರಶ್ನೆಗಳಿಗೂ ಪಟಪಟ ಅಂತ ವರಲಕ್ಷ್ಮಿ ಉತ್ತರಕೊಟ್ಟಿದ್ದಳು.

ನಾನ್ ಸ್ಟಾಪ್ ಆಗಿ ಆಡಿಕೊಂಡು ಬಂದ ವರಲಕ್ಷ್ಮಿಗೆ ಸ್ಪೀಡ್ ಬ್ರೇಕರ್ ಆಗಿದ್ದು ಹತ್ತನೇ ಪ್ರಶ್ನೆ. 320,000 ರೂಪಾಯಿಗೆ ಕೇಳಲಾದ ಪ್ರಶ್ನೆ ಹೀಗಿತ್ತು

* ಈ ಕೆಳಗಿನವುಗಳಲ್ಲಿ ಯಾವ ಸ್ಥಳವು ಬಂಗಾಳ ಕೊಲ್ಲಿಯ ಕರಾವಳಿ ಪ್ರದೇಶದಲ್ಲಿದೆ?

ಅಜಂತಾ, ತಂಜಾವೂರು, ಕೊನಾರ್ಕ್, ಉಜ್ಜಯನಿ –

ಈ ಪ್ರಶ್ನೆಗೆ ಉತ್ತರ ಗೊತ್ತಿಲ್ಲದ ವರಲಕ್ಷ್ಮಿ ಮೊಟ್ಟ ಮೊದಲ ಬಾರಿಗೆ ಲೈಫ್ ಲೈನ್ ಬಳಸಿದಳು. ಹಾಗ್ನೋಡಿದ್ರೆ, ವರಲಕ್ಷ್ಮಿ ‘ಆಡಿಯನ್ಸ್ ಪೋಲ್’ ಬಳಸಬಹುದಿತ್ತು. ಆದ್ರೆ, ಆಕೆ ‘ಫೋನ್ ಎ ಫ್ರೆಂಡ್’ ಆಯ್ಕೆ ಮಾಡಿಕೊಂಡಳು. ತನಗೆ ಸೋಷಿಯಲ್ ಮತ್ತು ಸೈನ್ಸ್ ಹೇಳಿಕೊಡುವ ಗೌರಮ್ಮ ಟೀಚರ್ ಗೆ ವರಲಕ್ಷ್ಮಿ ಫೋನ್ ಮಾಡಿದಳು. ಆ ಕಡೆಯಿಂದ ಶಿಕ್ಷಕಿ ಗೌರಮ್ಮ ‘ತಂಜಾವೂರು’ ಎಂದು ಉತ್ತರಿಸಿದರು. ಇನ್ನೊಂದು ಬಾರಿ ವರಲಕ್ಷ್ಮಿ ಪ್ರಶ್ನೆ ಕೇಳುವಷ್ಟರಲ್ಲಿ ಮೂವತ್ತು ಸೆಕೆಂಡ್ ಮುಗಿದಿತ್ತು, ಫೋನ್ ಕಟ್ ಆಯ್ತು.

ಪುನೀತ್ಕೊಟ್ಟ ಸೂಚನೆ ಅರ್ಥ ಆಗಲಿಲ್ಲ.!”ಡೌಟ್ ಇದ್ದರೆ, ಇನ್ನೊಂದು ಲೈಫ್ಲೈನ್ ಬಳಸಬಹುದು.. ಟೈಮ್ ಇದೆ.. ಇನ್ನೂಎರಡು ಲೈಫ್ ಲೈನ್ ಇದೆ”ಅಂತ ಪದೇ ಪದೇ ಪುನೀತ್ರಾಜ್ ಕುಮಾರ್ ಹೇಳುತ್ತಿದ್ದರು. ಈಸೂಚನೆಯನ್ನು ಅರ್ಥ ಮಾಡಿಕೊಳ್ಳದ ವರಲಕ್ಷ್ಮಿ,ಶಿಕ್ಷಕಿ ಗೌರಮ್ಮ ಮೇಲೆ ನಂಬಿಕೆಇಟ್ಟು ‘ತಂಜಾವೂರು’ ಲಾಕ್ ಮಾಡಿಬಿಟ್ಟಳು. ದುರಾದೃಷ್ಟಅಂದ್ರೆ, ಅದು ತಪ್ಪು ಉತ್ತರ.

ಸರಿಯಾದ ಉತ್ತರ ‘ಕೊನಾರ್ಕ್’. 320,000 ವರೆಗೂಯಾವುದೇ ಲೈಫ್ ಲೈನ್ ಬಳಸದೇಬಂದಿದ್ದ ವರಲಕ್ಷ್ಮಿ ಏಕ್ದಂ ಹತ್ತು ಸಾವಿರಕ್ಕೆಕುಸಿದು ಬಿಟ್ಟಳು. ಅಲ್ಲಿಗೆ, ತಂದೆಗೆ ಸಹಾಯ ಮಾಡುವಆಸೆ, ಕ್ಲಾಸ್ ರೂಮ್ ಕಟ್ಟಿಸುವಕನಸು.. ಎರಡೂ ಕನಸಾಗಿಯೇ ಉಳಿಯಬೇಕಾಯಿತು.ಟೀಚರ್ ಮಾಡಿದ ಒಂದೇ ಒಂದುಎಡವಟ್ಟಿನಿಂದ ವರಲಕ್ಷ್ಮಿ ಆಸೆ ಈಡೇರದೇ ಹೋಯಿತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ, ಸ್ಪೂರ್ತಿ

    ಕೇವಲ ಒಂದೇ ವಾರದಲ್ಲಿ ತನ್ನ ಊರಿಗೆ ಏಕಾಂಗಿಯಾಗಿ ರಸ್ತೆ ನಿರ್ಮಿಸಿದ ಮಾಂಜಿ..!

    ತನ್ನ ಹೆಂಡತಿಗಾಗಿ ರಸ್ತೆಯನ್ನೇ ನಿರ್ಮಿಸಿದ್ದ ಮಾಂಜಿಯ ಕಥೆ ನಮಗೆಲ್ಲಾ ಗೊತ್ತಿದೆ. ಇದೀಗ ಕೀನ್ಯಾದಲ್ಲೂ ಒಬ್ಬ ಮಾಂಜಿ ಇದ್ದಾರೆ. ಆದ್ರೆ, ಈತ ತನ್ನ ಹೆಂಡತಿಗಾಗಿ ಅಲ್ಲ, ಇಡೀ ಊರಿನ ಜನರಿಗೆ ನೆರವಾಗಲಿ ಅಂತ ತಾನೇ ರಸ್ತೆ ನಿರ್ಮಿಸಿ ಈಗ ಎಲ್ಲರ ದೃಷ್ಟಿಯಲ್ಲೂ ಹೀರೋ ಆಗಿದ್ದಾರೆ. ಕೀನ್ಯಾದ ಕಗಂಡಾ ಗ್ರಾಮದ ಬಳಿ ದಟ್ಟ ಅರಣ್ಯ ಪ್ರದೇಶವಿದೆ. ಅದರ ಬಳಿ ವಾಸಿಸುವ ಜನರಿಗೆ ಊರಿನ ಸಂಪರ್ಕ ಮಾಡೋಕೆ ಸರಿಯಾದ ರಸ್ತೆಯೇ ಇರಲಿಲ್ಲ. ಈ ಬಗ್ಗೆ ಗ್ರಾಮದ ನಿಕೋಲಸ್ ಮುಚಾಮಿ ಹಲವು ಬಾರಿ…

  • ಸುದ್ದಿ

    ಬ್ರಹ್ಮಾವರದಲ್ಲಿ ಮಹಾಮಳೆಯ ಅಬ್ಬರ : ಜನಜೀವನ ಅಸ್ತವ್ಯಸ್ತ…..!

    ಬ್ರಹ್ಮಾವರ ತಾಲೂಕಿನೆಲ್ಲೆಡೆ ಕುಂಭ ದ್ರೋಣ ಮಳೆಯ ಅಬ್ಬರ ಜೋರಾಗಿದ್ದು, ಮಂಗಳವಾರ ಬೆಳಗ್ಗಿನಿಂದಲೇ ಸುರಿದ ಮಳೆಯಿಂದಾಗಿ ಹಲವೆಡೆಗಳಲ್ಲಿ ನೆರೆ ಆವರಿಸಿದೆ. ಕೆಲವೆಡೆ ಮನೆಯೊಳಗೆ ನೀರು ನುಗ್ಗಿದ್ದರೆ, ಅನೇಕ ಕಡೆಗಳಲ್ಲಿ ಗದ್ದೆ, ಅಡಿಕೆ, ತೆಂಗಿನ ತೋಟ ಸಹಿತ ಕೃಷಿ ಪ್ರದೇಶಗಳು ಜಲಾವೃತಗೊಂಡಿವೆ. ಬ್ರಹ್ಮಾವರ ಪರಿಸರದ ಮಟಪಾಡಿ, ನೀಲಾವರ, ನಂದನಕುದ್ರು, ರಾಮನಕುದ್ರು, ಬಲ್ಜಿ ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದು ಇದರಿಂದಾಗಿ ವಾಹನ ಸವಾರರು ಕೂಡ ಸಮಸ್ಯೆಯನ್ನು ಅನುಭವಿಸಿದರು. ಅನೇಕ ಕಡೆಗಳಲ್ಲಿ ಭತ್ತದ ಕೃಷಿ ಬೆಳೆದಿರುವ ಗದ್ದೆ ಜಲಾವೃತಗೊಂಡಿದ್ದರೆ, ಅಡಿಕೆ ತೋಟಗಳಲ್ಲಿ ನೀರು ನಿಂತಿದೆ….

  • ಸುದ್ದಿ

    ಹಿಮಪಾತದ ನಡುವೆ ದೇಶ ಸೇವೆ ಸಲ್ಲಿಸುತ್ತಿರುವ ಈ ವೀರಯೋಧನಿಗೊಂದು ಸಲಾಂ. ಜಾಲತಾಣಗಳಲ್ಲಿ ಸಖತ್ ವೈರಲ್.

    ಸದ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗುತ್ತಿದೆ. ಈ ನಡುವೆ ಸಿಆರ್‌ಪಿಎಫ್ ಯೋಧರೊಬ್ಬರು ಕರ್ತವ್ಯ ಸಲ್ಲಿಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ ಫೋಟೋ ನೋಡಿದವರು ಆ ಚಳಿಯಲ್ಲೂ ಎದೆಗುಂದದೆ ಕರ್ತವ್ಯ ಸಲ್ಲಿಸುತ್ತಿರುವ ಯೋಧನಿಗೆ ಸಲಾಂ ಎಂದಿದ್ದಾರೆ. ನಮ್ಮ ಸೈನಿಕರು ನಮ್ಮ ಹೆಮ್ಮೆ ಎಂದು ನಾವು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಆದರೆ ನಮ್ಮ ಸೈನಿಕರು ನಮಗಾಗಿ ಪ್ರತಿದಿನ ಪಡುವ ಕಷ್ಟ ಅಷ್ಟಿಷ್ಟಲ್ಲ. ಚಳಿಗಾಳಿ ಹಿಮಮಳೆ ಯಾವುದನ್ನೂ ಲೆಕ್ಕಿಸದೆ ಸೈನಿಕರು ಬಾರ್ಡರ್ ನಲ್ಲಿ ನಮಗಾಗಿ ಪ್ರಾಣ ಒತ್ತೆಯಿಟ್ಟು…

  • Animals

    ಹಸುವಿನ ಹೊಟ್ಟೆಯಲ್ಲಿ ಇತ್ತು ಬರೋಬರಿ 15 ಕೆಜಿ !!!!!!!!!

    ಕೋಲಾರದ ನಗರದಲ್ಲಿ ವಿದೇಶಿ ಎಚ್‌ಎ- ತಳಿಯ ಹಸುವೊಂದು ದಿಢೀರನೇ ಮೇವು ತಿನ್ನುವುದು ನಿಲ್ಲಿಸಿ ಹಾಲು ಇಳುವರಿಯನ್ನು ಕಡಿತಗೊಳಿಸಿತ್ತು. ಮೇವು ತಿನ್ನುವುದು ನಿಲ್ಲಿಸಿದ್ದರಿಂದ ಹಸು ಬಡಕಲಾಗುತ್ತಾ ಹೋಯಿತು. ಹೊತ್ತಿಗೆ ಸುಮಾರು 1೦ ಲೀಟರ್ ಹಾಲು ನೀಡಿದ್ದ ಹಸು ಕೇವ ಮೂರು ನಾಲ್ಕು ಲೀಟರ್ ಹಾಲು ನೀಡಲು ಶುರುವಿಟ್ಟುಕೊಂಡಿತ್ತು. ಹಸು ಸಾಕುತ್ತಿದ್ದ ಮನೆಯವರು ಹಸುವಿಗೆ ಸಾಕಷ್ಟು ಚಿಕಿತ್ಸೆ ಮಾಡಿಸಿದರೂ ಪ್ರಯೋಜನವಾಗಿರಲಿಲ್ಲ. ಇದೇ ಪರಿಸ್ಥಿತಿ ಕಳೆದರೆ ಹಸು ಪ್ರಾಣ ಕಳೆದುಕೊಳ್ಳುವ ಆತಂಕ ಎದುರಾಗಿತ್ತು. ಇಂತ ಆತಂಕದ ಪರಿಸ್ಥಿತಿಯಲ್ಲಿ ಹಸುವಿನ ನೆರವಿಗೆ ಬಂದವರು…

  • ಸುದ್ದಿ

    ಇಲ್ಲಿದೆ ನೋಡಿ ಮದ್ಯ ಪ್ರಿಯರಿಗೊಂದು ಸಿಹಿಸುದ್ದಿ…!

    ಗೋವಾ ಪ್ರವಾಸಮಾಡ ಹೊರಟಿರುವ ಪ್ರವಾಸಿಗರೂ ಮತ್ತು ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ಇದ್ದು, ಇನ್ನು ಮುಂದೆ ಗೋವಾದಿಂದಹೆಚ್ಚು ಮದ್ಯದ ಬಾಟಲಿಗಳನ್ನು ಮನೆಗೊಯ್ಯಲು ಅಲ್ಲಿನ ಸರ್ಕಾರ ಅವಕಾಶ ನೀಡಿದೆ.  ಅಚ್ಚರಿ ಪಡಬೇಡಿಇದು ನಿಜ…. ಹೌದು.. ಗೋವಾ ಪ್ರವಾಸಕ್ಕೆ ಹೋಗುವ ಮದ್ಯಪ್ರಿಯರಿಗೆ ಅಲ್ಲಿನ ಸರ್ಕಾರ ಸಿಹಿ ಸುದ್ದಿನೀಡಿದ್ದು, ಇನ್ನು ಮುಂದೆ ಪ್ರವಾಸ ಮುಗಿಸಿ ಮನೆಗೆ ಮರಳುವ ಇತರೆ ರಾಜ್ಯಗಳ ಪ್ರವಾಸಿಗರು ಹೆಚ್ಚುವರಿಮದ್ಯದ ಬಾಟಲಿಗಳನ್ನು ಮನೆಗೆ ಕೊಂಡೊಯ್ಯಬಹುದು.  ಆದಾಯ ಕೊರತೆಯಿಂದ ಕಂಗೆಟ್ಟಿರುವ ಗೋವಾ ಸರ್ಕಾರ ಇಂತಹುದೊಂದು ಪ್ರಸ್ತಾವನೆಯನ್ನು ಮುಂದಿಟ್ಟಿದ್ದು, ಶೀಘ್ರದಲ್ಲಿಯೇ ಈ…

  • inspirational

    ಹಣ ಉಳಿಸುವ ಸುಲಭ ಮಾರ್ಗಗಳು

    ದುಡ್ಡಿನ ಅಗತ್ಯ ಯಾವಾಗ ಹೇಗೆ ಬೀಳುತ್ತದೆ ಎಂದು ಹೇಳಲು ಅಸಾಧ್ಯ. ಬದುಕಿನಲ್ಲಿ ಎಲ್ಲವೂ ಸರಿಯಾಗಿದೆ ಎಂದು ಅಂದುಕೊಳ್ಳುತ್ತಿರುವಾಗಲೇ ದುಡ್ಡಿನ ಅನಿವಾರ್ಯತೆ ಎದುರಾಗಬಹುದು. ಅದನ್ನು ಇಷ್ಟೇ ಅಂತ ಹೇಳಲು ಬರುವುದಿಲ್ಲ. ಹೀಗಾಗಿ ಎಲ್ಲಾ ಉಳಿಕೆ, ಹೂಡಿಕೆಗಳ ಬಳಿಕವೂ ತುರ್ತು ಸಂದರ್ಭದಲ್ಲಿ ಅನುಕೂಲವಾಗಲು ನಿಮ್ಮಲ್ಲಿ ಹಣ ಇರಲೇ ಬೇಕಾಗುತ್ತದೆ. ಆರೋಗ್ಯ ವಿಮೆ, ವಾಹನ ವಿಮೆಗಳನ್ನೆಲ್ಲಾ ಅಂದುಕೊಂಡ ಕಾಲಕ್ಕೆ ಪಾವತಿಯಾಗುವುದಿಲ್ಲವಾದದ್ದರಿಂದ ಟರ್ನ್ ಓರ್ವ ಮಾಡಲು ಸಾಧ್ಯವಾಗುವಂತಹ ಪ್ಲಾನ್ ಗಳನ್ನು ಮಾಡಿಕೊಳ್ಳುವುದು ಬಹಳ ಮುಖ್ಯ. ಈ ಉಳಿಕೆಯನ್ನು ನಿರ್ದಿಷ್ಟವಾಗಿ ಇಷ್ಟೇ ಎಂದು ಹೇಳಲು…