ಸುದ್ದಿ

ವಿದ್ಯಾರ್ಥಿನಿ ವರಲಕ್ಷ್ಮಿ ಸೋಲಿಗೆ ಕಾರಣವಾಯಿತು ಅವರ ಟೀಚರ್ ಮಾಡಿದ ಎಡವಟ್ಟು…!

52

ಮಂಡ್ಯದ ಹುಡುಗಿ ವರಲಕ್ಷ್ಮಿ ಆಟ-ಪಾಠ ಎಲ್ಲದರಲ್ಲೂ ಸದಾ ಮುಂದು. ಆಶುಭಾಷಣ ಮಾಡುವುದರಲ್ಲಿ ಈಕೆ ಎತ್ತಿದ ಕೈ. ಕಬಡ್ಡಿ ಕೂಡ ಆಡುವ ವರಲಕ್ಷ್ಮಿಗೆ ಮುಂದೆ ಟೀಚರ್ ಆಗಿ ಬಡ ಮಕ್ಕಳಿಗೆ ಪಾಠ ಹೇಳಿಕೊಡುವ ಆಸೆ ಇದೆ. ಜೊತೆಗೆ ಸಿ.ಎ (ಚಾರ್ಟರ್ಡ್ ಅಕೌಂಟೆಂಟ್) ಆಗುವ ಕನಸಿದೆ. ಬೆಟ್ಟದಷ್ಟು ಆಸೆ ಹೊತ್ತು ‘ಕನ್ನಡದ ಕೋಟ್ಯಧಿಪತಿ’ ವೇದಿಕೆಗೆ ಬಂದಿದ್ದ ಈ ಪುಟ್ಟ ಹುಡುಗಿಯ ಕನಸು ಒಂದೇ ಕ್ಷಣದಲ್ಲಿ ನುಚ್ಚು ನೂರಾಗಿದ್ದು ಮಾತ್ರ ದುರಾದೃಷ್ಟಕರ.

‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಕೋಟಿ ರೂಪಾಯಿ ಗೆಲ್ಲಲೇಬೇಕು ಎಂಬ ಛಲ ವರಲಕ್ಷ್ಮಿಗಿತ್ತು. ಕೋಟಿ ಗೆಲ್ಲದೇ ಹೋದರೂ, 25 ಲಕ್ಷವಾದರೂ ಗೆಲ್ಲಬೇಕು ಎಂಬ ಹಠ ಆಕೆಯಲ್ಲಿತ್ತು. ಗೆಲ್ಲುವ ಹಣದಲ್ಲಿ ತನ್ನ ವಿದ್ಯಾಭ್ಯಾಸಕ್ಕೆ ಮತ್ತು ರಾಗಿ ಬೆಳೆಯುವ ತನ್ನ ತಂದೆಯ ವ್ಯವಸಾಯಕ್ಕೆ ಸಹಾಯ ಮಾಡುವ ಆಲೋಚನೆ ಹೊಂದಿದ್ದಳು. ಜೊತೆಗೆ ತಾನು ಓದುವ ಶಾಲೆಯಲ್ಲಿ ಕ್ಲಾಸ್ ರೂಮ್ ಕಟ್ಟಿಸುವ ಇಚ್ಛೆ ಕೂಡ ಆಕೆಯಲ್ಲಿತ್ತು.

‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮದಲ್ಲಿ ಒಂಬತ್ತು ಪ್ರಶ್ನೆಗಳಿಗೆ ಸತತವಾಗಿ ಸರಿಯಾದ ಉತ್ತರ ನೀಡುತ್ತ 160,000 ರೂಪಾಯಿಗಳನ್ನು ವರಲಕ್ಷ್ಮಿ ಗಳಿಸಿದ್ದರು. ಅಚ್ಚರಿ ಅಂದ್ರೆ, ಈ ಒಂಬತ್ತು ಪ್ರಶ್ನೆಗಳಿಗೆ ಯಾವುದೇ ಲೈಫ್ ಲೈನ್ಬಳಸದೆ, ಎಲ್ಲಾ ಪ್ರಶ್ನೆಗಳಿಗೂ ಪಟಪಟ ಅಂತ ವರಲಕ್ಷ್ಮಿ ಉತ್ತರಕೊಟ್ಟಿದ್ದಳು.

ನಾನ್ ಸ್ಟಾಪ್ ಆಗಿ ಆಡಿಕೊಂಡು ಬಂದ ವರಲಕ್ಷ್ಮಿಗೆ ಸ್ಪೀಡ್ ಬ್ರೇಕರ್ ಆಗಿದ್ದು ಹತ್ತನೇ ಪ್ರಶ್ನೆ. 320,000 ರೂಪಾಯಿಗೆ ಕೇಳಲಾದ ಪ್ರಶ್ನೆ ಹೀಗಿತ್ತು

* ಈ ಕೆಳಗಿನವುಗಳಲ್ಲಿ ಯಾವ ಸ್ಥಳವು ಬಂಗಾಳ ಕೊಲ್ಲಿಯ ಕರಾವಳಿ ಪ್ರದೇಶದಲ್ಲಿದೆ?

ಅಜಂತಾ, ತಂಜಾವೂರು, ಕೊನಾರ್ಕ್, ಉಜ್ಜಯನಿ –

ಈ ಪ್ರಶ್ನೆಗೆ ಉತ್ತರ ಗೊತ್ತಿಲ್ಲದ ವರಲಕ್ಷ್ಮಿ ಮೊಟ್ಟ ಮೊದಲ ಬಾರಿಗೆ ಲೈಫ್ ಲೈನ್ ಬಳಸಿದಳು. ಹಾಗ್ನೋಡಿದ್ರೆ, ವರಲಕ್ಷ್ಮಿ ‘ಆಡಿಯನ್ಸ್ ಪೋಲ್’ ಬಳಸಬಹುದಿತ್ತು. ಆದ್ರೆ, ಆಕೆ ‘ಫೋನ್ ಎ ಫ್ರೆಂಡ್’ ಆಯ್ಕೆ ಮಾಡಿಕೊಂಡಳು. ತನಗೆ ಸೋಷಿಯಲ್ ಮತ್ತು ಸೈನ್ಸ್ ಹೇಳಿಕೊಡುವ ಗೌರಮ್ಮ ಟೀಚರ್ ಗೆ ವರಲಕ್ಷ್ಮಿ ಫೋನ್ ಮಾಡಿದಳು. ಆ ಕಡೆಯಿಂದ ಶಿಕ್ಷಕಿ ಗೌರಮ್ಮ ‘ತಂಜಾವೂರು’ ಎಂದು ಉತ್ತರಿಸಿದರು. ಇನ್ನೊಂದು ಬಾರಿ ವರಲಕ್ಷ್ಮಿ ಪ್ರಶ್ನೆ ಕೇಳುವಷ್ಟರಲ್ಲಿ ಮೂವತ್ತು ಸೆಕೆಂಡ್ ಮುಗಿದಿತ್ತು, ಫೋನ್ ಕಟ್ ಆಯ್ತು.

ಪುನೀತ್ಕೊಟ್ಟ ಸೂಚನೆ ಅರ್ಥ ಆಗಲಿಲ್ಲ.!”ಡೌಟ್ ಇದ್ದರೆ, ಇನ್ನೊಂದು ಲೈಫ್ಲೈನ್ ಬಳಸಬಹುದು.. ಟೈಮ್ ಇದೆ.. ಇನ್ನೂಎರಡು ಲೈಫ್ ಲೈನ್ ಇದೆ”ಅಂತ ಪದೇ ಪದೇ ಪುನೀತ್ರಾಜ್ ಕುಮಾರ್ ಹೇಳುತ್ತಿದ್ದರು. ಈಸೂಚನೆಯನ್ನು ಅರ್ಥ ಮಾಡಿಕೊಳ್ಳದ ವರಲಕ್ಷ್ಮಿ,ಶಿಕ್ಷಕಿ ಗೌರಮ್ಮ ಮೇಲೆ ನಂಬಿಕೆಇಟ್ಟು ‘ತಂಜಾವೂರು’ ಲಾಕ್ ಮಾಡಿಬಿಟ್ಟಳು. ದುರಾದೃಷ್ಟಅಂದ್ರೆ, ಅದು ತಪ್ಪು ಉತ್ತರ.

ಸರಿಯಾದ ಉತ್ತರ ‘ಕೊನಾರ್ಕ್’. 320,000 ವರೆಗೂಯಾವುದೇ ಲೈಫ್ ಲೈನ್ ಬಳಸದೇಬಂದಿದ್ದ ವರಲಕ್ಷ್ಮಿ ಏಕ್ದಂ ಹತ್ತು ಸಾವಿರಕ್ಕೆಕುಸಿದು ಬಿಟ್ಟಳು. ಅಲ್ಲಿಗೆ, ತಂದೆಗೆ ಸಹಾಯ ಮಾಡುವಆಸೆ, ಕ್ಲಾಸ್ ರೂಮ್ ಕಟ್ಟಿಸುವಕನಸು.. ಎರಡೂ ಕನಸಾಗಿಯೇ ಉಳಿಯಬೇಕಾಯಿತು.ಟೀಚರ್ ಮಾಡಿದ ಒಂದೇ ಒಂದುಎಡವಟ್ಟಿನಿಂದ ವರಲಕ್ಷ್ಮಿ ಆಸೆ ಈಡೇರದೇ ಹೋಯಿತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಗುಲ ದರ್ಶನ

    ತಲಕಾವೇರಿ ತೀರ್ಥೋದ್ಭವ ಸಂಭ್ರಮ: ಬ್ರಹ್ಮ ಕುಂಡಲದಲ್ಲಿ ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ ಕೊಡವರ ಕುಲದೇವತೆ..!

    ಕಾವೇರಿ ಕೊಡವರ ಕುಲದೇವಿ,ಕಾವೇರಿ ಜನ್ಮಸ್ಥಳ ತಲಕಾವೇರಿಯಲ್ಲಿ  ಅರ್ಚಕರ ಮಂತ್ರಘೋಷ ,ಮಂಗಳವಾದ್ಯ  ನಡುವೆ ತಡರಾತ್ರಿ ಸರಿಯಾಗಿ 12 ಗಂಟೆ 57 ನಿಮಿಷಕ್ಕೆ ಕರ್ಕಾಟಕಲಗ್ನ, ರೋಹಿಣಿ ನಕ್ಷತ್ರದಲ್ಲಿ ಘಟಿಸಿದ ಪವಿತ್ರ ತೀರ್ಥೋದ್ಭವವನ್ನು ರಾಜ್ಯ ಮತ್ತು ಹೊರರಾಜ್ಯದಿಂದಬಂದ ನೂರಾರು ಭಕ್ತರು ಕಣ್ತುಂಬಿಕೊಂಡರು. 12:59ಕ್ಕೆ ತೀರ್ಥೋದ್ಭವ ಘಟಿಸಲಿದೆ ಎಂದು ಹೇಳಲಾಗಿತ್ತಾದರೂ 2 ನಿಮಿಷ ಮುನ್ನವೇ ತೀರ್ಥೋದ್ಭವಾಯಿತು. 30 ಕ್ಕೂ ಹೆಚ್ಚು ಅರ್ಚಕರ ಮಂತ್ರಘೋಷ, ಮಂಗಳವಾದ್ಯದ ನಡುವೆ ಕಾವೇರಿ ಮಾತೆ ತೀರ್ಥರೂಪಿಣಿಯಾಗಿ ಕಾಣಿಸಿಕೊಳ್ಳುತ್ತಿದ್ದಂತೆ ಭಕ್ತರ ಜಯಘೋಷ ಮುಗಿಲು ಮುಟ್ಟಿತು. ಈ ವಿಸ್ಮಯಕ್ಕೆ ಅಪಾರ ಭಕ್ತ…

  • ರಾಜಕೀಯ

    20 ವರ್ಷಗಳಿಂದ ಯಾವ ಪಕ್ಷವೂ ಸೋಲಿಸಲಾಗದ ಮುಖ್ಯಮಂತ್ರಿ..!ಇವರು ಭಾರತದ ಪರಿಶುದ್ಧ ಬಡ ಮುಖ್ಯಮಂತ್ರಿ..!

    ಈ ರಾಜ್ಯದ ಮುಖ್ಯಮಂತ್ರಿ ಇದುವರೆಗೂ ಅಧಿಕಾರ ಕಳೆದುಕೊಂಡಿಲ್ಲ , ತಿಂಗಳಿಗೆ 5 ಸಾವಿರ ಪಡಿಯುವ ಭಾರತದ ಅತ್ಯಂತ ಭರವಸೆ ಮೂಡಿಸಿದ ಮುಖ್ಯಮಂತ್ರಿ ಇವರೇ ಮಾಣಿಕ್ ಸರ್ಕಾರ್.

  • ಶಿಕ್ಷಣ

    ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್

    ದೆಹಲಿ ಮಾದರಿಯಲ್ಲಿ ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್ ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ಬಿಡುಗಡೆಗೊಳಿಸಿ, 12೦ ದಿನಗಳ ಕಾಲ 1೦೦೦ ಪ್ರತಿಗಳನ್ನು ವಿತರಿಸುವ ಕಾರ್ಯಕ್ಕೆ ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಶನಿವಾರ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ವರ್ತೂರು ಪ್ರಕಾಶ್, ದೆಹಲಿಯಲ್ಲೂ ಸಹ ಆಮ್ ಆದ್ಮಿ ಮುಖ್ಯಮಂತ್ರಿ ಶಾಲೆಗಳನ್ನು ಅಭಿವೃದ್ಧಿಪಡಿಸಿರುವುದಕ್ಕಿಂತಲೂ ಮಾದರಿಯಾಗಿ ನಮ್ಮ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸ್ವಕ್ಷೇತ್ರ ರಾಜರಾಜೇಶ್ವರಿ ನಗರದಲ್ಲಿ ಸುಮಾರು…

  • ಉಪಯುಕ್ತ ಮಾಹಿತಿ

    ವಾರದಲ್ಲಿ ಯಾವದಿನ ಯಾವ ಬಣ್ಣದ ಬಟ್ಟೆಗಳನ್ನು ಧರಿಸಿದರೆ ಒಳ್ಳೆಯದು.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ wha ಈ ಪ್ರಪಂಚ ವಿಭಿನ್ನವಾದ…

  • ಸುದ್ದಿ

    ಕೆಲವೇ ನಿಮಿಶಗಳಲ್ಲಿ ಪಾಕಿಸ್ತಾನದಲ್ಲಿನ 300 ಉಗ್ರರನ್ನು ಉಡೀಸ್ ಮಾಡಿದ ಭಾರತೀಯ ವಾಯುಸೇನೆ

    ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್‍ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದು, 21 ನಿಮಿಷದಲ್ಲಿ ಮೂರು ಉಗ್ರರ ತರಬೇತಿ ಶಿಬಿರಗಳ ಮೇಲೆ ದಾಳಿ ನಡೆಸಿದೆ. ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್‍ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಬೀಡುಬಿಟ್ಟಿದ್ದ ಉಗ್ರರ ನೆಲೆಯನ್ನು ಭಾರತೀಯ ವಾಯು ಸೇನೆ ಧ್ವಂಸಗೊಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್‍ಗಾಗಿ ಮಿರಾಜ್-2000 ಹೆಸರಿನ 12 ಜೆಟ್ (ಐಎಎಫ್)ಗಳನ್ನು ಬಳಸಿಕೊಳ್ಳಲಾಗಿದೆ. ಉಗ್ರರ…

  • ದೇಶ-ವಿದೇಶ

    ಈ ಮಹಿಳೆ ಜರ್ಮನಿಯಿಂದ ಭಾರತಕ್ಕೆ ಪ್ರವಾಸಿಯಾಗಿ ಬಂದು ಮಾಡುತ್ತಿರುವ ಕೆಲಸದ ಬಗ್ಗೆ ನೀವು ತಿಳಿದರೆ ನಿಜಕ್ಕೂ ಅಚ್ಚರಿ ಪಡುತ್ತೀರ..!

    ನಮ್ಮ ಭಾರತದಲ್ಲಿ ಸುಧಾರಣೆಯಾಗುವುದು ತುಂಬಾನೇ ಇದೆ ಆದರೆ ಕೆಲವರು ಮಾತ್ರ ಅದನ್ನು ಸ್ವೀಕರಿಸಿ ಅದರ ಪಾಲನೆಯನ್ನು ಮಾಡುತ್ತಾರೆ. ಇನ್ನು ಕೆಲವರು ತಮ್ಮ ಹೊಟ್ಟೆ ಪಾಡಿಗಾಗಿಯೇ ಬದುಕುವ ಮಂದಿ ಹೆಚ್ಚು. ಸಮಾಜ ಸುಧಾರಣೆ ಮಾಡುವವರ ಸಂಖ್ಯೆ ಕಡಿಮೆ.