ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ರೆಜಿಲ್ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ(ಕೆಎಸ್ಆರ್ಟಿಸಿ) ವೋಲ್ವೊ ಬಸ್ಗಳು ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ. ಕ್ರಮಿಸಿ 2 ಮಿಲಿಯನ್ ಕ್ಲಬ್ಗೆ ಸೇರ್ಪಡೆಯಾಗಿ ಜಾಗತಿಕ ಮನ್ನಣೆ ಗಳಿಸಿವೆ.

ರಾಜ್ಯ ಮತ್ತು ಹೊರ ರಾಜ್ಯದಲ್ಲಿ ಓಡುತ್ತಿರುವ ವೋಲ್ವೊ ಬಸ್ಗಳು ಹೆಚ್ಚಿನ ಮೈಲೇಜ್ ನೀಡುವ ಜತೆಗೆ, ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ ಸಂಚರಿಸಿವೆ. ಈ ಹಿನ್ನೆಲೆಯಲ್ಲಿ ಬ್ರೆಜಿಲ್ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ವೋಲ್ವೊ ಬಸ್ ಇಂಟರ್ನ್ಯಾಷನಲ್ನ ಅಧ್ಯಕ್ಷ ಹಕನ್ ಅಗ್ನೆವಾಲ್ ಅವರು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಬೆಂಗಳೂರು ಕೇಂದ್ರೀಯ ವಿಭಾಗದ ಒಂದು ಮಲ್ಟಿ ಆಕ್ಸಲ್ ವೋಲ್ವೊ ಬಸ್ ಮತ್ತು ಒಂದು ಸಿಂಗಲ್ ಆಕ್ಸಲ್ ವೋಲ್ವೊ ಬಸ್ ದುರಸ್ತಿ ಇಲ್ಲದೆ 20 ಲಕ್ಷ ಕಿ.ಮೀ. ಕ್ರಮಿಸಿವೆ. ಇತರೆ 13 ವಾಹನಗಳು 18 ಲಕ್ಷ ಕಿ.ಮೀ. ಸಂಚರಿಸಿವೆ.

ಇವೆಲ್ಲವೂ ದೂರದ ಮಾರ್ಗಗಳಲ್ಲಿ ಓಡುತ್ತಿವೆ. ಮಂಗಳೂರು ವಿಭಾಗದ ವೋಲ್ವೊ ಬಸ್ 21.5 ಲಕ್ಷ, 14 ವೋಲ್ವೊ ಬಸ್ಗಳು 18 ಲಕ್ಷ ಮತ್ತು ಮೈಸೂರು ಗ್ರಾಮಾಂತರ ವಿಭಾಗದ 4 ವೋಲ್ವೊ ವಾಹನಗಳು 19 ಲಕ್ಷ ಕಿ.ಮೀ. ಕ್ರಮಿಸಿವೆ ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ಅಕ್ಟೋಬರ್ 04:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 2.0 ಸರ್ಕಾರದ ಮೊದಲ ಬಜೆಟ್ ನಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳವಾಗಲಿದೆ. ಶೇ 05ರಷ್ಟು ತುಟ್ಟಿಭತ್ಯೆ ಹೆಚ್ಚಳಖಾತ್ರಿಯಾಗಿದೆ. ಇದರ ಜೊತೆಗೆ 7ನೇ ವೇತನಾ ಆಯೋಗದ ಅನ್ವಯ ಕೇಂದ್ರ ಸರ್ಕಾರ ಸ್ವಾಮ್ಯದ ಆರೋಗ್ಯ ಸಂಸ್ಥೆಗಳನೌಕರರಿಗೆ ಸಂಬಳ ಏರಿಕೆ, ಬಾಕಿ ಮೊತ್ತ(Arrears) ಕೂಡಾ ಲಭಿಸುತ್ತಿದೆ. ಆದರೆ, ಸರ್ಕಾರಿ ನೌಕರರ ಬೇಡಿಕೆಗಳುಇನ್ನು ಕಡಿಮೆಯಾಗಿಲ್ಲ. ಪ್ರಮುಖ ಬೇಡಿಕೆಗಳು ಈಡೇರಿಲ್ಲ. ಬೇಡಿಕೆಗೆ ಅನುಸಾರವಾಗಿ ಮೂಲ ವೇತನವನ್ನುಏರಿಕೆ ಮಾಡುವುದು ಹಾಗೂ ಫಿಟ್ಮೆಂಟ್…
ಈ ಹಣ್ಣಿನಲ್ಲಿರುವ ಅಮಿನೋ ಆ್ಯಸಿಡ್ ಎಂಬ ರಾಸಾಯನಿಕ ಅಂಶದಿಂದಾಗಿ ಮಕ್ಕಳಲ್ಲಿ ಸಿಡುಬು ಮತ್ತು ದಡಾರಾ ಕಾಯಿಲೆಯ ಲಕ್ಷಣಗಳು ಗೋಚರಿಸುವಂತೆ ಮಾಡುತ್ತಿವೆ. ಇದರಿಂದ ರಕ್ತದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಯುವಂತೆ ಮಾಡಿ ಮಕ್ಕಳಲ್ಲಿ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಯನ್ನು ತಂದೊಡ್ಡುತ್ತದೆ
ಉಪೇಂದ್ರ ಅಭಿಮಾನಿಗಳಿಗೆ ಸಿಹಿ ಸುದ್ದಿ. ಅವರ ಚಿತ್ರಕ್ಕಾಗಿ ಅಭಿಮಾನಿಗಳು ಕಾತುರರಾಗಿದ್ದರು. ಈಗ ಆ ಕಾಲ ಮುಗಿದಿದೆ.
ಬಿಬಿಎಂಪಿ ಆಸ್ಪತ್ರೆಗಳಲ್ಲಿ ಬಾಣಂತಿಯರಿಗಾಗಿ ಹೊಸ ಯೋಜನೆಯನ್ನು ಜಾರಿಗೆ ತರಬೇಕು ಎಂದು ನಿರ್ಧರಿಸಿದ್ದಾರೆ. ಈ ನಿರ್ಧಾರ ಕೈಗೊಳ್ಳಲು ಮುಖ್ಯ ಕಾರಣವೇನೆಂದರೆ ಬಾಣಂತಿಯರಿಗಾಗಿ ಉಪಯುಕ್ತ ಪೌಷ್ಟಿಕಾಂಶ ಮತ್ತು ಅವರಿಗಾಗಿ ಹಾಲು ಸಹ ನೀಡಬೇಕು ಎಂದು ನಿರ್ಧರಿಸಲಾಗಿದೆ. ಬಿಬಿಎಂಪಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಬಾಣಂತಿಯರಿಗೆ ಎರಡು ಹೊತ್ತು ಹಾಲು ಪೂರೈಸಲು ನಿರ್ಧರಿಸಿದ್ದಾರೆ. ಬಿಬಿಎಂಪಿಯ 32 ಆಸ್ಪತ್ರೆಗಳಲ್ಲಿನ ಬಾಣಂತಿಯರಲ್ಲಿ ಪೌಷ್ಟಿಕಾಂಶ ಹೆಚ್ಚಿಸಲು ಯೋಜನೆ ರೂಪಿಸಿರುವ ಅಧಿಕಾರಿಗಳು, ಪ್ರತಿದಿನ 500 ಎಂ.ಎಲ್. ಹಾಲು ಪೂರೈಸಲು ನಿರ್ಧರಿಸಿದ್ದಾರೆ. ಯೋಜನೆಗಾಗಿ ಸುಮಾರು 15 ಲಕ್ಷ ರೂ ಮೀಸಲಿಡಲಾಗಿದೆ.ವರ್ಷಕ್ಕೆ…
ನಟ, ನಿರ್ದೇಶಕನಾಗಿ ಹೆಸರು ಮಾಡಿದ್ದು ಯುವತಿಯೊರ್ವಳನ್ನು ಅತ್ಯಾಚಾರ ಮಾಡುತ್ತಿದ್ದರೂ ಅದನ್ನು ವಿರೋಧಿಸದೇ ಆತನ ವಿಕೃತ ಕಾರ್ಯಕ್ಕೆ ತಾಯಿಯೋರ್ವಳು ಸಹಾಯ ಮಾಡಿರುವ ಹೀನಾಯ ಕೃತ್ಯ ಬೆಂಗಳೂರಿನಲ್ಲಿ ನಡೆದಿದೆ. ಕಿರುಚಿತ್ರ ನಿರ್ದೇಶಕ, ನಟ ಪಿ ಪ್ರಮೋದ್ ಕುಮಾರ್ ಎಂಬಾತ 21 ವರ್ಷದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆದುಕೊಂಡು ಹೋಗಿ ತಮ್ಮ ಕಾಮತೃಷೆಗೆ ಬಳಸಿಕೊಂಡಿದ್ದಾನೆ. ಈ ವೇಳೆ ನಟನ ತಾಯಿ ಮನೆಯಲ್ಲಿ ಇದ್ದರೂ ಸಹ ಏನು ಮಾಡದೇ ಸುಮ್ಮನಿದ್ದಾರೆ. ಈ ಸಂಬಂಧ ಪ್ರಮೋದ್ ಕುಮಾರ್ ಮೊದಲ ಆರೋಪಿಯಾಗಿದ್ದು ಆತನ ತಾಯಿ…
ಬೆಂಗಳೂರು, ಮಹತ್ವಾಕಾಂಕ್ಷಿ ಚಂದ್ರಯಾನ-2 ನೌಕೆಯ ಸಂಪರ್ಕ ಕೊನೆ ಕ್ಷಣದಲ್ಲಿ ಕಡಿತಗೊಂಡಿದೆ. ಇದರಿಂದಾಗಿ ಭೂಮಿಯ ನೈಸರ್ಗಿಕ ಉಪಗ್ರಹ ಚಂದ್ರನ ಒಡಲಲ್ಲಿ ಅಡಗಿರುವ ಅನೂಹ್ಯ ರಹಸ್ಯಗಳನ್ನು ಭೇದಿಸುವ ಗುರಿ ಹೊಂದಿದ್ದ ಇಸ್ರೋಗೆ ಕೊಂಚ ಹಿನ್ನಡೆಯಾಗಿದೆ. ಚಂದ್ರನ ಅಂಗಳದ ಮೇಲೆ ಲ್ಯಾಂಡರ್ ಅನ್ನು ಇಳಿಸುವ ಕೊನೆಯ 15ನಿಮಿಷ ಭಾರೀ ಕಷ್ಟದ ಕ್ಷಣಗಳು ಎಂದು ಇಸ್ರೋ ಈ ಮೊದಲೇ ಹೇಳಿತ್ತು. ಹೀಗಾಗಿ ಮೊದಲ ಕೆಲವು ಕ್ಷಣಗಳು ಸುಸೂತ್ರವಾಗಿ ನೆರವೇರಿದರೂ ಇನ್ನೇನು ಚಂದ್ರನ ಅಂಗಳ 2.1 ಕಿ.ಮೀ ದೂರ ಇರುವಂತೆ ಲ್ಯಾಂಡರ್ ನೌಕೆ ಸಂಪರ್ಕ…