ಸುದ್ದಿ

12 ಕಿರು ಬಂದರುಗಳನ್ನು ಅಭಿವೃದ್ಧಿಪಡಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ ಮುಖ್ಯಮಂತ್ರಿ ಕುಮಾರಸ್ವಾಮಿ

35

ರಾಜ್ಯದ 12 ಕಿರುಬಂದರುಗಳನ್ನು ಅಭಿವೃದ್ಧಿಪಡಿಸಿ ಆ ಮೂಲಕ ಉದ್ಯೋಗ ಸೃಜನೆಯನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಲೋಕೋಪಯೋಗಿ , ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಾರವಾರ ಮತ್ತು ಮಂಗಳೂರು ಬಂದರುಗಳನ್ನು ಹೊರತುಪಡಿಸಿದರೆ ಉಳಿದ ಕಿರು ಬಂದರುಗಳಲ್ಲಿ ಹೆಚ್ಚಿನ ವಾಣಿಜ್ಯ ಚಟುವಟಿಕೆಗಳು ನಡೆಯಬೇಕು, ಮೀನುಗಾರಿಕೆ ಸೇರಿದಂತೆ ಇತರೆ ವಾಣಿಜ್ಯ ಚಟುವಟಿಕೆಗಳಿಗೂ ಆದ್ಯತೆ ನೀಡಿ ರಾಜ್ಯದ ಎಲ್ಲ ಬಂದರುಗಳ ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮ್ಯಾರಿಟೈಮ್ ಮಂಡಳಿಗೆ ಶೀಘ್ರದಲ್ಲಿಯೇ ಅಧಿಕಾರಿಗಳನ್ನು ನೇಮಿಸಲಾಗುವುದು ಎಂದು ಮುಖ್ಯಮಂತ್ರಿಗಳು ಇದೇ ವೇಳೆ ಭರವಸೆ ನೀಡಿದರು. ಕಾರವಾರ ಬಂದರಿನ 2 ನೇ ಹಂತದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದ್ದು, ಬಂದರಿನ ಉತ್ತರಕ್ಕೆ 1258 ಮೀ. ಉದ್ದದ ಬರ್ತ್ ನ್ನು ವಿಸ್ತರಿಸಲು ವಿಸ್ಕೃತಾ ಯೋಜನಾ ವರದಿಯನ್ನು ತಯಾರಿಸಿದ್ದು, ಸರ್ಕಾರದ ಅನುಮೋದನೆಗೆ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು.

ಸಾಗರಮಾಲಾ ಕೋಸ್ಟಲ್ ಬರ್ತ್ ಯೋಜನೆಯಡಿ ಪ್ರಸಕ್ತ ಕಾಲಿಗೆ 54.10 ಕೋಟಿ ರೂಪಾಯಿಗಳ ಅನುದಾನವನ್ನು ಒದಗಿಸಲಾಗಿದ್ದು, ತಡೆಗೋಡೆ ನಿರ್ಮಾಣ ಕಾಮಗಾರಿ ಕೈಗೊಳ್ಳಲು ಟೆಂಡರ್ ಕರೆದು ಕಾರ್ಯಾದೇಶ ನೀಡಲಾಗಿದೆ ಹಾಗೂ ಕಾರವಾರ ಕೋಸ್ಟಲ್ ಬರ್ತ್ ನಿರ್ಮಾಣಕ್ಕೆ ಟೆಂಡರ್ ಕರೆಯಲಾಗಿದೆ ಎಂದು ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು.

ಕರಾವಳಿ ಪ್ರದೇಶದಲ್ಲಿ ಕಡಲು ಕೊರೆತ ಪದೇ ಪದೇ ಉಂಟಾಗಿ ಸ್ಥಳೀಯರಿಗೆ ತೊಂದರೆಯಾಗುತ್ತಿದ್ದು, ಈ ಬಗ್ಗೆ ಧೀರ್ಘಾವಧಿ ಪರಿಹಾರ ಕಂಡುಕೊಳ್ಳಬೇಕು, ಕಡಲ ಬದಿಯಲ್ಲಿರುವ ಜನರಿಗೆ ಪುನವರ್ಸತಿ ಕಲ್ಪಿಸುವ ಬಗ್ಗೆ ಪರಿಶೀಲಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಮ್ಮನಿಗೆ ವರ ಬೇಕಿದೆ, ಷರತ್ತುಗಳು ಅನ್ವಯ. ಫೇಸ್ಬುಕ್ ನಲ್ಲಿ ಮಗನ ಪೋಸ್ಟ್ ವೈರಲ್.

    ಅಮ್ಮನಿಗೆ ವರ ಬೇಕಿದೆ ಎಂದು ಯುವಕನೋರ್ವನ ಫೇಸ್‍ಬುಕ್ ಪೋಸ್ಟ್ ವೈರಲ್ ಆಗಿದೆ. ತಾಯಿಗೆ ವರ ಹುಡುಕುತ್ತಿರುವ ಯುವಕನ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ  ಮೆಚ್ಚುಗೆ ವ್ಯಕ್ತವಾಗಿದೆ. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಂದನ್ ನಗರದ ಫ್ರೆಂಚ್ ಕಾಲೋನಿಯ ನಿವಾಸಿ ಗೌರವ್ ತಾಯಿಗಾಗಿ ಸೂಕ್ತ ವರನನ್ನು ಹುಡುಕುತ್ತಿದ್ದಾರೆ. ಐದು ವರ್ಷಗಳ ಹಿಂದೆ ನನ್ನ ತಂದೆ ವಿಧಿವಶರಾಗಿದ್ದು, 45 ವರ್ಷದ ನನ್ನ ಅಮ್ಮ ಮನೆಯಲ್ಲಿ ಏಕಾಂಗಿ ಆಗಿರುತ್ತಾರೆ. ಮದ್ಯ ಸೇವಿಸದ ಮತ್ತು ಶುದ್ಧ ಸಸ್ಯಹಾರಿಯಾಗಿರುವ ವರ ಬೇಕಿದೆ ಎಂದು ಗೌರವ್ ಫೇಸ್‍ಬುಕ್…

  • ಜ್ಯೋತಿಷ್ಯ

    ಯಾವ ದಿನ ಹುಟ್ಟಿದವರು, ಏನೆಲ್ಲಾ ಗುಣ ನಡೆತೆ ಹೊಂದಿರುತ್ತಾರೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಜ್ಯೋತಿಷ್ಯಾಸ್ತ್ರ ಬಹು ಪುರಾತನವಾಗಿದ್ದರೂ ಕೆಲವರು ಇಂದಿಗೂ ನಂಬುವುದಿಲ್ಲ. ಆದರೆ ನಮ್ಮ ಹುಟ್ಟಿನ ಕೆಲವು ಅಂಶಗಳು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತವೆ ಎಂಬುದು ಜ್ಯೋತಿಷ್ಯಾಸ್ತ್ರದಲ್ಲಿ ಹೇಳದೇ ಇದ್ದರೂ ವಾಸ್ತವಾಂಶಗಳನ್ನು ಗಮನಿಸಿ ನಿಜ ಎಂದು ಒಪ್ಪಿಕೊಳ್ಳಲೇಬೇಕಾಗುತ್ತದೆ.

  • ಆಧ್ಯಾತ್ಮ

    ನೀವು ಇಷ್ಟಪಟ್ಟವರನ್ನು ಪಡೆಯಲು ಈ ರೀತಿ ಮಾಡಿ, ಕ್ಷಣಾರ್ಧದಲ್ಲಿ ನಿಮ್ಮವರಾಗುವರು.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ನೀವು ಇಷ್ಟಪಟ್ಟವರನ್ನು ನಿಮ್ಮಂತೆ…

  • Village

    ಕೋಲಾರ ಜಿಲ್ಲೆಯಲ್ಲಿರುವ ಹುಂಗೇನಹಳ್ಳಿ ಗ್ರಾಮದ ಬಗ್ಗೆ ನಿಮಗೆಷ್ಟು ಗೊತ್ತು? ಓದಿ ಈ ಲೇಖನವನ್ನು

    ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…

  • ಸುದ್ದಿ

    ಸಿಹಿ ಸುದ್ದಿ : ಗ್ಯಾಸ್ ಸಿಲಿಂಡರ್ ಜೊತೆ ಸಿಗುತ್ತೆ 50 ಲಕ್ಷ ರೂ. ಉಚಿತ ವಿಮೆ

    ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಗ್ಯಾಸ್ ಸಿಲಿಂಡರ್ ಪಡೆಯುವವರಿಗೆ ಸಿಲಿಂಡರ್ ಜೊತೆ 50 ಲಕ್ಷ ರೂಪಾಯಿವರೆಗೆ ವಿಮೆ ಸಂಪೂರ್ಣ ಉಚಿತವಾಗಿ ಸಿಗಲಿದೆ. ಅಂದ್ರೆ ಅಡುಗೆ ಮಾಡುವ ವೇಳೆ ಸಿಲಿಂಡರ್ ಸ್ಫೋಟಿಸಿ ಅನಾಹುತ ಸಂಭವಿಸಿದ್ರೆ ಕುಟುಂಬಕ್ಕೆ 50 ಲಕ್ಷ ರೂಪಾಯಿಯವರೆಗೆ ಪರಿಹಾರ ಸಿಗಲಿದೆ. ಸರ್ವೆಯೊಂದರ ಪ್ರಕಾರ, ಭಾರತದಲ್ಲಿ ಪ್ರತಿ ವರ್ಷ 100ಕ್ಕೂ ಹೆಚ್ಚು ಮಂದಿ ಸಿಲಿಂಡರ್ ಸ್ಫೋಟಿಸಿ ಸಾವನ್ನಪ್ಪುತ್ತಾರೆ. ಆದ್ರೆ ಅನೇಕ ಬಾರಿ ಜನರು ಇದ್ರ ಪರಿಹಾರವನ್ನು ಪಡೆಯುವುದಿಲ್ಲ. ಪರಿಹಾರದ ಬಗ್ಗೆ ಅವ್ರಿಗೆ ಮಾಹಿತಿಯಿಲ್ಲದಿರುವುದು ಇದಕ್ಕೆ ಕಾರಣ. ಈ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(19 ನವೆಂಬರ್, 2018) ಹಳೆಯ ಸಂಪರ್ಕಗಳುಮತ್ತು ಸಂಬಂಧಗಳ ಪುನಶ್ಚೇತನಕ್ಕೆ ಒಳ್ಳೆಯ ದಿನ. ನಿಮ್ಮ ಕಿಟಕಿಯಲ್ಲಿ ಹೂವಿಡುವ ಮೂಲಕ ನಿಮ್ಮ ಪ್ರೀತಿಯನ್ನು ತೋರಿಸಿ. ನಿಮ್ಮ…