ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸರ್ಕಾರದ ಮಟ್ಟದಲ್ಲಿ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ 01ನೇ ತರಗತಿಯಿಂದ 05 ತರಗತಿಯವರೆಗೆ ಶಾಲಾ ಕಿಟ್ಗಳನ್ನು ಕೋಲಾರ ಜಿಲ್ಲೆÀಯ ನೋಂದಾಯಿತ ಕಟ್ಟಡ ಕಾರ್ಮಿಕ ಮಕ್ಕಳಿಗೆ ನೇರವಾಗಿ ಆಯಾ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಯಲ್ಲಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಸೆಂಟ್ರ್ರಿAಗ್ ಮತ್ತು ಇತರೆ ಕಟ್ಟಡ ಕಾರ್ಮಿಕರ ಸಂಘ ಅಧ್ಯಕ್ಷರಾದ ನವೀನ್ ಕುಮಾರ್ ಬಾಲಯ್ಯ ರವರು ಮಾತನಾಡಿ, ಪಾರದರ್ಶಕವಾಗಿ ಕಟ್ಟಡ ಕಾರ್ಮಿಕ ನೋಂದಾಯಿತ ಜ್ಯೇಷ್ಟತಾ ಆಧಾರದ ಮೇಲೆ ಫಲಾನುಭವಿಗಳ ಮಕ್ಕಳಿಗೆ ನೇರವಾಗಿ ಶಾಲಾ ಕಿಟ್ಗಳನ್ನು ವಿತರಣೆ ಮಾಡುತ್ತಿದ್ದು, ಕೋಲಾರ ಕಾರ್ಮಿಕ ಇಲಾಖೆಯ ಪ್ರಾಮಾಣಿಕ ಅಧಿಕಾರಿಗಳ ಸಹಕಾರದಿಂದ ನಮ್ಮ ಸಂಘ 250ಕ್ಕೂ ಹೆಚ್ಚು ಕಾರ್ಮಿಕರಿಗೆ ಇ-ಶ್ರಮ್ ಕಾರ್ಡ್ ಮತ್ತು ಆಯುಷ್ಮಾನ್ ಕಾರ್ಡ್ ವಿತರಿಸಲಾಗಿದೆ ಹಾಗೂ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಿ ನೂರಾರು ಕಾರ್ಮಿಕರಿಗೆ ಆರೋಗ್ಯ ತಪಾಸಣೆಯನ್ನು ಯಶಸ್ವಿಯಾಗಿ ನಡೆಸಲು ಸಾಧ್ಯವಾಯಿತು ಎಂದು ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಧನ್ಯವಾದಗಳನ್ನು ತಿಳಿಸಿದು. ಇದೇ ವೇಳೆ ಕೋಲಾರ ಜಿಲ್ಲಾ ಸೆಂಟ್ರ್ರಿAಗ್ ಮತ್ತು ಇತರೆ ಕಟ್ಟಡ ಕಾರ್ಮಿಕರ ಸಂಘದ ಪದಾಧಿಕಾರಿಗಳು ಹಾಜರಿದ್ದರು.

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸರ್ಕಾರದ ಮಟ್ಟದಲ್ಲಿ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ 01ನೇ ತರಗತಿಯಿಂದ 05 ತರಗತಿಯವರೆಗೆ ಶಾಲಾ ಕಿಟ್ಗಳನ್ನು ನೀಡಲು ನಿರ್ಧರಿಸಲಾಗಿದ್ದು, ಅದರಂತೆ ಕೋಲಾರ ಜಿಲ್ಲೆಗೆ 3000 ಕಿಟ್ಗಳು ಸ್ವೀಕೃತವಾಗಿದ್ದು, ಇವುಗಳನ್ನು ತಾಲ್ಲೂಕುವಾರು ಅಂದರೆ, ಕೋಲಾರ-750, ಮುಳಬಾಗಿಲು ಮತ್ತು ಶ್ರೀನಿವಾಸಪುರ-750, ಬಂಗಾರಪೇಟೆ-500, ಮಾಲೂರು-500 ಮತ್ತು ಕೆಜಿಎಫ್-500 ಒಟ್ಟು 3000 ಕಿಟ್ಗಳು ಸ್ವೀಕೃತಿಯಾಗಿರುತ್ತವೆ. ಸದರಿ ಕಿಟ್ಗಳನ್ನು ಪಾರದರ್ಶಕವಾಗಿ ಹಾಗೂ ನೇರವಾಗಿ ಫಲಾನುಭವಿಗಳ ಮಕ್ಕಳಿಗೆ ವಿತರಿಸಬೇಕಾಗಿರುವುದರಿಂದ ನೋಂದಾಯಿತ ಕಾರ್ಮಿಕರಗುರುತಿನಚೀಟಿ. ಕಾರ್ಮಿಕರ ಮತ್ತು ಮಗುವಿನ ಆಧಾರ್ಕಾರ್ಡ್ ಪ್ರತಿ. ವಿದ್ಯಾರ್ಥಿ 01 ರಿಂದ 05ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಬಗ್ಗೆ ಮೂಲ ವ್ಯಾಸಂಗ ಪ್ರಮಾಣ ಪತ್ರ ಈ ಎಲ್ಲಾ ದಾಖಲೆಗಳೊಂದಿಗೆ ಫಲಾನುಭವಿಯೇ ನೇರವಾಗಿ ಎಲ್ಲಾ ತಾಲ್ಲೂಕು ಮಟ್ಟದ ಕಾರ್ಮಿಕ ನಿರೀಕ್ಷಕರ ಕಛೇರಿಗೆ ಭೇಟಿ ನೀಡಿ ಈ ಮೇಲಿನ ದಾಖಲೆಗಳನ್ನು ಸಲ್ಲಿಸಿದ ನಂತರ ಕಟ್ಟಡ ಕಾರ್ಮಿಕರ ನೋಂದಣಿಯ ಕಾರ್ಡ್ ಜೇಷ್ಠತೆಯ ಆಧಾರದ ಮೇಲೆ ಪರಿಶೀಲನೆಗೊಂಡ ನಂತರ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶಾಲಾ ಕಿಟ್ಗಳನ್ನು ಆಯಾ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಗಳಲ್ಲಿ ನೀಡಲಾಗುವುದು.
ಮುಂದುವರೆದು, 06 ತರಗತಿಯಿಂದ 08ನೇ ತರಗತಿಯವರೆಗಿನ ಶಾಲಾ ಮಕ್ಕಳಿಗೆ ಶಾಲಾ ಕಿಟ್ಗಳನ್ನು ನೀಡಲು ನಿರ್ದರಿಸಲಾಗಿರುತ್ತದೆ. ಕೋಲಾರ-750, ಮುಳಬಾಗಿಲು ಮತ್ತು ಶ್ರೀನಿವಾಸಪುರ-750, ಮಾಲೂರು-500, ಬಂಗಾರಪೇಟೆ-500 ಮತ್ತು ಕೆಜಿಎಫ್-500 ಒಟ್ಟು 3000 ಕಿಟ್ಗಳು ಸ್ವೀಕರಿಸಲಾಗುವುದು, ಈಗಾಗಲೇ ಬಂಗಾರಪೇಟೆ ತಾಲ್ಲೂಕಿಗೆ 500 ಕಿಟ್ಗಳು ಸ್ವೀಕೃತಿಯಾಗಿರುತ್ತವೆ. ಅದರಂತೆ, ಉಳಿದ ತಾಲ್ಲೂಕುಗಳಿಗೆ ಶಾಲಾ ಕಿಟ್ಗಳು ಸ್ವೀಕೃತಿಯಾದ ನಂತರ ಸದರಿ ಕಿಟ್ಗಳನ್ನು ಪಾರದರ್ಶಕವಾಗಿ ಹಾಗೂ ನೇರವಾಗಿ ಫಲಾನುಭವಿಗಳ ಮಕ್ಕಳಿಗೆ ವಿತರಿಸಬೇಕಾಗಿರುವುದರಿಂದ ನೋಂದಾಯಿತ ಕಾರ್ಮಿಕರ ಗುರುತಿನಚೀಟಿ. ಕಾರ್ಮಿಕರ ಮತ್ತು ಮಗುವಿನ ಆಧಾರ್ಕಾರ್ಡ್ ಪ್ರತಿ. ವಿದ್ಯಾರ್ಥಿ 06 ರಿಂದ 08ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಬಗ್ಗೆ ಮೂಲ ವ್ಯಾಸಂಗ ಪ್ರಮಾಣ ಪತ್ರ ಈ ಎಲ್ಲಾ ದಾಖಲೆಗಳೊಂದಿಗೆ ಫಲಾನುಭವಿಯೇ ನೇರವಾಗಿ ಎಲ್ಲಾ ತಾಲ್ಲೂಕು ಮಟ್ಟದ ಕಾರ್ಮಿಕ ನಿರೀಕ್ಷಕರ ಕಛೇರಿಗೆ ಭೇಟಿ ನೀಡಿ ಈ ಮೇಲಿನ ದಾಖಲೆಗಳನ್ನು ಸಲ್ಲಿಸಿದ ನಂತರ ಕಟ್ಟಡ ಕಾರ್ಮಿಕರ ನೋಂದಣಿಯ ಕಾರ್ಡ್ ಜೇಷ್ಠತೆಯ ಆಧಾರದ ಮೇಲೆ ಪರಿಶೀಲನೆಗೊಂಡ ನಂತರ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶಾಲಾ ಕಿಟ್ಗಳನ್ನು ಆಯಾ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಗಳಲ್ಲಿ ನೀಡಲಾಗುವುದು ಎಂದು ಕೋಲಾರ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಕ್ಷಿಣ ಭಾರತದ ಪ್ರಮುಖ ಯಾತ್ರಾಸ್ಥಳ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಅಂಗವಾಗಿ ಹಾಲರುವೆ ಉತ್ಸವ ನಡೆಯಿತು. ಬೇಡಗಂಪಣ ಜನಾಂಗಕ್ಕೆ ಸೇರಿದ 101 ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳು 9 ಕಿ.ಮೀ ದೂರದ ಹಾಲರೆ ಹಳ್ಳದಿಂದ ಬಲಿಗಾಲಲ್ಲಿ ನೀರು ಹೊತ್ತು ತಂದು ಮಾದಪ್ಪನಿಗೆ ಅಭಿಷೇಕ ಮಾಡುವುದು ಹಾಲರುವೆ ಉತ್ಸವದ ವಿಶೇಷವಾಗಿದೆ. ಮಲೆಮಹದೇಶ್ವರ ಬೆಟ್ಟದಲ್ಲಿ ಪ್ರತಿ ವರ್ಷ ಮೂರು ದಿನಗಳ ಕಾಲ ದೀಪಾವಳಿ ಜಾತ್ರೆ ನಡೆಯುತ್ತದೆ. ಮಾದಪ್ಪನಿಗೆ ಎಣ್ಣೆಮಜ್ಜನಸೇವೆ, ಹಾಲರವೆ ಉತ್ಸವ ಮೂರನೇ ದಿನ ರಥೋತ್ಸವ ನಡೆಯುವುದು ಇಲ್ಲಿನ ವಿಶೇಷ….
ಭೂತ ಪ್ರೇತಗಳಲ್ಲಿ ನಿಮಗೆ ನಂಬಿಕೆ ಇದೆಯೇ? ಈ ಪ್ರಶ್ನೆಗೆ ಭಿನ್ನ ವ್ಯಕ್ತಿಗಳಿಂದ ಭಿನ್ನ ಉತ್ತರ ದೊರಕಬಹುದು. ಆದರೆ ವಿಜ್ಞಾನದ ಪ್ರಕಾರ ಭೂತ ಪ್ರೇತಗಳ ಇರುವಿಕೆಗೆ ಯಾವುದೇ ಆಧಾರವಿಲ್ಲ ಹಾಗೂ ಇವುಗಳ ಇರುವಿಕೆಯನ್ನು ಸಾಬೀತುಪಡಿಸಲು ವೈಜ್ಞಾನಿಕವಾಗಿ ಸಾಧ್ಯವೂ ಇಲ್ಲ.
ಈಗಂತೂ ರಾಜಕಾರಣಿಗಳು ತಾವು ಗೆಲ್ಲುವುದಕ್ಕಾಗಿ ಏನು ಬೇಕೋ ಮಾಡುತ್ತಾರೆ, ಹೇಗೆಂದರೆ ಹಾಗೆ ಮಾತನಾಡುತ್ತಾರೆ ಕೂಡ. ಕೊನೆಗೂ ರಾಜಕೀಯಕ್ಕೆ ದೇವರನ್ನು ಎಳೆದು ತಂದು ದೇವರಿಗೂ ಜಾತಿಯ ಪಟ್ಟಿಯನ್ನು ಕಟ್ಟಿಬಿಟ್ಟಿದ್ದಾರೆ. ಹನುಮಂತ ಅರಣ್ಯವಾಸಿ. ಆತ ದಲಿತ ವರ್ಗಕ್ಕೆ ಸೇರಿದ್ದವನೆಂಬ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ಬಳಿಕ ಈ ಕುರಿತು ಪರ-ವಿರೋಧದ ಚರ್ಚೆಗಳು ಮುಂದುವರೆದಿವೆ. ಆದಿತ್ಯನಾಥ್ ಅವರ ಹೇಳಿಕೆಗೆ ಸ್ವಪಕ್ಷೀಯರಿಂದಲೂ ವಿರೋಧ ವ್ಯಕ್ತವಾಗಿದ್ದು, ಯೋಗಿ ಹೇಳಿಕೆಯನ್ನು ಖಂಡಿಸಿದ್ದ ಬಿಜೆಪಿ ಸಂಸದೆ ಸಾವಿತ್ರಿಬಾಯಿ ಫುಲೆ ಈಗ ಪಕ್ಷ ತೊರೆದಿದ್ದಾರೆ….
ಸಾಮ್ರಾಜ್ಯ ಗೆದ್ದ ಮಕ್ಕಳಿಗೆ ತಾಯಿಯೇ ಎದುರು ನಿಂತು ಕಿರೀಟ ಹಾಕಿ ಪಟ್ಟಾಭಿಷೇಕ ಮಾಡಿರುವುದು ಚರಿತ್ರೆಯ ಪುಟಗಳಲ್ಲಿ ನಾವು ಓದಿದ್ದೇವೆ. ಆದರೆ ಧಾರವಾಡದಲ್ಲಿ ರೈತರೊಬ್ಬರು ತಮ್ಮ ತಾಯಿಯ ಶತಮಾನೋತ್ಸವಕ್ಕೆ ಬೆಳ್ಳಿ ಕಿರೀಟ ತೊಡಿಸಿ ಸಾವಿರಾರು ಜನರ ಮಧ್ಯೆ ಅಭಿನಂದಿಸಿದ್ದಾರೆ. ಡಾಕ್ಟರ್, ಇಂಜಿನಿಯರ್ ಓದಿ ಕೆಲಸ ಸಿಕ್ಕ ಬಳಿಕ ವಿದೇಶದಲ್ಲಿ ಸುಖ ಜೀವನ ನಡೆಸುವ ಕೆಲ ಮಕ್ಕಳು ತಮ್ಮ ತಂದೆ ತಾಯಿಯನ್ನು ವೃದ್ಧಾಶ್ರಮಕ್ಕೋ, ಅನಾಥಾಶ್ರಮಕ್ಕೋ ಸೇರಿಸುವ ಕಾಲವಿದು. ಇಂಥಹ ಕಾಲದಲ್ಲಿ ಧಾರವಾಡ ಜಿಲ್ಲೆಯ ಹೊಲ್ತಿಕೋಟಿ ಗ್ರಾಮದ ರೈತ ಮಹದೇವಪ್ಪ ಕೋರಿ…
ರಾಕಿಂಗ್ ಸ್ಟಾರ್ ಯಶ್ ಕುಟುಂಬ ನ್ಯಾಯಾಲಯದ ಆದೇಶದಂತೆ ಬೆಂಗಳೂರಿನ ಬನಶಂಕರಿಯ ಕತ್ರಿಗುಪ್ಪೆಯಲ್ಲಿರುವ ಬಾಡಿಗೆ ಮನೆಯನ್ನು ಮಾರ್ಚ್ 31ರೊಳಗೆ ಖಾಲಿ ಮಾಡಬೇಕಾಗಿತ್ತು. ಆದರೆ ಇದೀಗ ಯಶ್ ಅವರ ತಾಯಿ ಪುಷ್ಪಾ, ಇನ್ನೂ ಆರು ತಿಂಗಳ ಕಾಲ ಇದೇ ಮನೆಯಲ್ಲಿ ನೆಲೆಸಲು ಅವಕಾಶ ಮಾಡಿಕೊಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಕುಟುಂಬ ಹಾಸನದಲ್ಲಿ ನೆಲೆಸಲು ನಿರ್ಧರಿಸಿದ್ದು, ಅಲ್ಲಿ ಈಗಾಗಲೇ ಮನೆ ನಿರ್ಮಾಣ ಕಾರ್ಯ ಆರಂಭವಾಗಿದೆ. ಇನ್ನು 6 ತಿಂಗಳೊಳಗಾಗಿ ಈ ಕಾರ್ಯ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ತಮಗೆ ಈಗ ವಾಸಿಸುತ್ತಿರುವ…
ಕೆಲವೊಂದು ಜೀವ ಜಂತುಗಳು ನಮ್ಮ ಭವಿಷ್ಯದಲ್ಲಾಗುವ ಘಟನೆಗಳ ಬಗ್ಗೆ ಮೊದಲೇ ಮುನ್ಸೂಚನೆ ನೀಡುತ್ತವೆ. ಇದಕ್ಕೆ ಹಲ್ಲಿ ಕೂಡ ಹೊರತಾಗಿಲ್ಲ. ಹಲ್ಲಿ ಏನು ಮಾಡಿದ್ರೆ ಶುಭ? ಏನು ಮಾಡಿದ್ರೆ ಅಶುಭ? ಹಲ್ಲಿ ಯಾವ ಸ್ಥಿತಿಯಲ್ಲಿ ಕಾಣಬಾರದು ಎಂಬುದನ್ನು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ. ಮನೆಯೊಳಗೆ ಪ್ರವೇಶ ಮಾಡುವಾಗ ಹಲ್ಲಿ ಕಂಡ್ರೆ ಶುಭ. ಆದ್ರೆ ಗೃಹಪ್ರವೇಶದ ದಿನ ಸತ್ತ ಹಲ್ಲಿ ಕಣ್ಣಿಗೆ ಬೀಳಬಾರದು. ಸತ್ತ ಹಲ್ಲಿ ಕಾಣಿಸಿಕೊಂಡ್ರೆ ಅವಶ್ಯವಾಗಿ ಪೂಜೆ ಮಾಡಿ ನಂತ್ರವೇ ಹೊಸ ಮನೆ ಪ್ರವೇಶ ಮಾಡಬೇಕು. ಸತ್ತ ಹಲ್ಲಿಗಳು…