ಕರ್ನಾಟಕ

ನೋಂದಾಯಿತ ಕಟ್ಟಡ ಕಾರ್ಮಿಕ ಮಕ್ಕಳಿಗೆ ಶಾಲಾ ಕಿಟ್ ವಿತರಣೆ

83

ಕೋಲಾರ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸರ್ಕಾರದ ಮಟ್ಟದಲ್ಲಿ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ 01ನೇ ತರಗತಿಯಿಂದ 05 ತರಗತಿಯವರೆಗೆ ಶಾಲಾ ಕಿಟ್‌ಗಳನ್ನು ಕೋಲಾರ ಜಿಲ್ಲೆÀಯ ನೋಂದಾಯಿತ ಕಟ್ಟಡ ಕಾರ್ಮಿಕ ಮಕ್ಕಳಿಗೆ ನೇರವಾಗಿ ಆಯಾ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಯಲ್ಲಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಸೆಂಟ್ರ‍್ರಿAಗ್ ಮತ್ತು ಇತರೆ ಕಟ್ಟಡ ಕಾರ್ಮಿಕರ ಸಂಘ ಅಧ್ಯಕ್ಷರಾದ ನವೀನ್ ಕುಮಾರ್ ಬಾಲಯ್ಯ ರವರು ಮಾತನಾಡಿ, ಪಾರದರ್ಶಕವಾಗಿ ಕಟ್ಟಡ ಕಾರ್ಮಿಕ ನೋಂದಾಯಿತ ಜ್ಯೇಷ್ಟತಾ ಆಧಾರದ ಮೇಲೆ ಫಲಾನುಭವಿಗಳ ಮಕ್ಕಳಿಗೆ ನೇರವಾಗಿ ಶಾಲಾ ಕಿಟ್‌ಗಳನ್ನು ವಿತರಣೆ ಮಾಡುತ್ತಿದ್ದು, ಕೋಲಾರ ಕಾರ್ಮಿಕ ಇಲಾಖೆಯ ಪ್ರಾಮಾಣಿಕ ಅಧಿಕಾರಿಗಳ ಸಹಕಾರದಿಂದ ನಮ್ಮ ಸಂಘ 250ಕ್ಕೂ ಹೆಚ್ಚು ಕಾರ್ಮಿಕರಿಗೆ ಇ-ಶ್ರಮ್ ಕಾರ್ಡ್ ಮತ್ತು ಆಯುಷ್‌ಮಾನ್ ಕಾರ್ಡ್ ವಿತರಿಸಲಾಗಿದೆ ಹಾಗೂ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಿ ನೂರಾರು ಕಾರ್ಮಿಕರಿಗೆ ಆರೋಗ್ಯ ತಪಾಸಣೆಯನ್ನು ಯಶಸ್ವಿಯಾಗಿ ನಡೆಸಲು ಸಾಧ್ಯವಾಯಿತು ಎಂದು ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಧನ್ಯವಾದಗಳನ್ನು ತಿಳಿಸಿದು. ಇದೇ ವೇಳೆ ಕೋಲಾರ ಜಿಲ್ಲಾ ಸೆಂಟ್ರ‍್ರಿAಗ್ ಮತ್ತು ಇತರೆ ಕಟ್ಟಡ ಕಾರ್ಮಿಕರ ಸಂಘದ ಪದಾಧಿಕಾರಿಗಳು ಹಾಜರಿದ್ದರು.

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸರ್ಕಾರದ ಮಟ್ಟದಲ್ಲಿ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ 01ನೇ ತರಗತಿಯಿಂದ 05 ತರಗತಿಯವರೆಗೆ ಶಾಲಾ ಕಿಟ್‌ಗಳನ್ನು ನೀಡಲು ನಿರ್ಧರಿಸಲಾಗಿದ್ದು, ಅದರಂತೆ ಕೋಲಾರ ಜಿಲ್ಲೆಗೆ 3000 ಕಿಟ್‌ಗಳು ಸ್ವೀಕೃತವಾಗಿದ್ದು, ಇವುಗಳನ್ನು ತಾಲ್ಲೂಕುವಾರು ಅಂದರೆ, ಕೋಲಾರ-750, ಮುಳಬಾಗಿಲು ಮತ್ತು ಶ್ರೀನಿವಾಸಪುರ-750, ಬಂಗಾರಪೇಟೆ-500, ಮಾಲೂರು-500 ಮತ್ತು ಕೆಜಿಎಫ್-500 ಒಟ್ಟು 3000 ಕಿಟ್‌ಗಳು ಸ್ವೀಕೃತಿಯಾಗಿರುತ್ತವೆ. ಸದರಿ ಕಿಟ್‌ಗಳನ್ನು ಪಾರದರ್ಶಕವಾಗಿ ಹಾಗೂ ನೇರವಾಗಿ ಫಲಾನುಭವಿಗಳ ಮಕ್ಕಳಿಗೆ ವಿತರಿಸಬೇಕಾಗಿರುವುದರಿಂದ ನೋಂದಾಯಿತ ಕಾರ್ಮಿಕರಗುರುತಿನಚೀಟಿ. ಕಾರ್ಮಿಕರ ಮತ್ತು ಮಗುವಿನ ಆಧಾರ್‌ಕಾರ್ಡ್ ಪ್ರತಿ. ವಿದ್ಯಾರ್ಥಿ 01 ರಿಂದ 05ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಬಗ್ಗೆ ಮೂಲ ವ್ಯಾಸಂಗ ಪ್ರಮಾಣ ಪತ್ರ ಈ ಎಲ್ಲಾ ದಾಖಲೆಗಳೊಂದಿಗೆ ಫಲಾನುಭವಿಯೇ ನೇರವಾಗಿ ಎಲ್ಲಾ ತಾಲ್ಲೂಕು ಮಟ್ಟದ ಕಾರ್ಮಿಕ ನಿರೀಕ್ಷಕರ ಕಛೇರಿಗೆ ಭೇಟಿ ನೀಡಿ ಈ ಮೇಲಿನ ದಾಖಲೆಗಳನ್ನು ಸಲ್ಲಿಸಿದ ನಂತರ ಕಟ್ಟಡ ಕಾರ್ಮಿಕರ ನೋಂದಣಿಯ ಕಾರ್ಡ್ ಜೇಷ್ಠತೆಯ ಆಧಾರದ ಮೇಲೆ ಪರಿಶೀಲನೆಗೊಂಡ ನಂತರ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶಾಲಾ ಕಿಟ್‌ಗಳನ್ನು ಆಯಾ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಗಳಲ್ಲಿ ನೀಡಲಾಗುವುದು.

ಮುಂದುವರೆದು, 06 ತರಗತಿಯಿಂದ 08ನೇ ತರಗತಿಯವರೆಗಿನ ಶಾಲಾ ಮಕ್ಕಳಿಗೆ ಶಾಲಾ ಕಿಟ್‌ಗಳನ್ನು ನೀಡಲು ನಿರ್ದರಿಸಲಾಗಿರುತ್ತದೆ. ಕೋಲಾರ-750, ಮುಳಬಾಗಿಲು ಮತ್ತು ಶ್ರೀನಿವಾಸಪುರ-750, ಮಾಲೂರು-500, ಬಂಗಾರಪೇಟೆ-500 ಮತ್ತು ಕೆಜಿಎಫ್-500 ಒಟ್ಟು 3000 ಕಿಟ್‌ಗಳು ಸ್ವೀಕರಿಸಲಾಗುವುದು, ಈಗಾಗಲೇ ಬಂಗಾರಪೇಟೆ ತಾಲ್ಲೂಕಿಗೆ 500 ಕಿಟ್‌ಗಳು ಸ್ವೀಕೃತಿಯಾಗಿರುತ್ತವೆ. ಅದರಂತೆ, ಉಳಿದ ತಾಲ್ಲೂಕುಗಳಿಗೆ ಶಾಲಾ ಕಿಟ್‌ಗಳು ಸ್ವೀಕೃತಿಯಾದ ನಂತರ ಸದರಿ ಕಿಟ್‌ಗಳನ್ನು ಪಾರದರ್ಶಕವಾಗಿ ಹಾಗೂ ನೇರವಾಗಿ ಫಲಾನುಭವಿಗಳ ಮಕ್ಕಳಿಗೆ ವಿತರಿಸಬೇಕಾಗಿರುವುದರಿಂದ ನೋಂದಾಯಿತ ಕಾರ್ಮಿಕರ ಗುರುತಿನಚೀಟಿ. ಕಾರ್ಮಿಕರ ಮತ್ತು ಮಗುವಿನ ಆಧಾರ್‌ಕಾರ್ಡ್ ಪ್ರತಿ. ವಿದ್ಯಾರ್ಥಿ 06 ರಿಂದ 08ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಬಗ್ಗೆ ಮೂಲ ವ್ಯಾಸಂಗ ಪ್ರಮಾಣ ಪತ್ರ ಈ ಎಲ್ಲಾ ದಾಖಲೆಗಳೊಂದಿಗೆ ಫಲಾನುಭವಿಯೇ ನೇರವಾಗಿ ಎಲ್ಲಾ ತಾಲ್ಲೂಕು ಮಟ್ಟದ ಕಾರ್ಮಿಕ ನಿರೀಕ್ಷಕರ ಕಛೇರಿಗೆ ಭೇಟಿ ನೀಡಿ ಈ ಮೇಲಿನ ದಾಖಲೆಗಳನ್ನು ಸಲ್ಲಿಸಿದ ನಂತರ ಕಟ್ಟಡ ಕಾರ್ಮಿಕರ ನೋಂದಣಿಯ ಕಾರ್ಡ್ ಜೇಷ್ಠತೆಯ ಆಧಾರದ ಮೇಲೆ ಪರಿಶೀಲನೆಗೊಂಡ ನಂತರ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶಾಲಾ ಕಿಟ್‌ಗಳನ್ನು ಆಯಾ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಗಳಲ್ಲಿ ನೀಡಲಾಗುವುದು ಎಂದು ಕೋಲಾರ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ‘ಹೆಬ್ಬುಲಿ’ ಜಾಗಕ್ಕೆ ‘ಚಕ್ರವರ್ತಿ’ ಎಂಟ್ರಿ! ‘ಸಂತೋಷ್’ ಯಾರಿಗೆ?

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಚಕ್ರವರ್ತಿ’ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಚಿತ್ರಮಂದಿರಕ್ಕೆ ಅಪ್ಪಳಿಸಲು ತಯಾರಾಗಿದೆ. ಈಗಾಗಲೇ ರಿಲೀಸ್ ಡೇಟ್ ಅನೌನ್ಸ್ ಮಾಡಿರುವ ‘ಚಕ್ರವರ್ತಿ’ ಅಭಿಮಾನಿಗಳಲ್ಲಿ ಈಗೊಂದು ಗೊಂದಲ ಕಾಡುತ್ತಿದೆ.[‘ಬಾಹುಬಲಿ’ ಮೀರಿಸಿದ ದರ್ಶನ್ ‘ಚಕ್ರವರ್ತಿ’] ಗಾಂಧಿನಗರದಲ್ಲಿ ‘ಚಕ್ರವರ್ತಿ’ ಚಿತ್ರಕ್ಕೆ ಯಾವುದು ಪ್ರಮುಖ ಚಿತ್ರಮಂದಿರವೆಂಬುದು ಈಗ ಪ್ರಶ್ನೆಯಾಗಿದೆ. ಸದ್ಯ, ದರ್ಶನ್ ಸಿನಿಮಾಗಳ ನೆಚ್ಚಿನ ಚಿತ್ರಮಂದಿರಗಳಲ್ಲಿ ಸುದೀಪ್ ಅಭಿನಯದ ‘ಹೆಬ್ಬುಲಿ’ ಮತ್ತು ಪುನೀತ್ ರಾಜ್ ಕುಮಾರ್ ಅಭಿನಯದ ‘ರಾಜಕುಮಾರ’ ಪ್ರದರ್ಶನವಾಗುತ್ತಿದೆ. ಹೀಗಿರುವಾಗ ‘ಚಕ್ರವರ್ತಿ’ಯ ಎಂಟ್ರಿ ಎಲ್ಲಿ ಎಂಬುದು ಕುತೂಹಲ…

  • ಜೀವನಶೈಲಿ

    ತಾಮ್ರದ ಲೋಟದಲ್ಲಿ ನೀರು ಕುಡಿದರೆ ಏನೆಲ್ಲಾ ಪರಿಣಾಮ ಆಗುತ್ತೆ ಗೊತ್ತಾ???

    ಬದಲಾದ ಜೀವನ ಶೈಲಿಯಿಂದಾಗಿ ನಿತ್ಯ ನಾವು ಸ್ಟೀಲ್ ಮತ್ತು ಪ್ಲಾಸ್ಟಿಕ್ ತಟ್ಟೆ, ಲೋಟಗಳ ಉಪಯೋಗಿಸುವುದು ಹೆಚ್ಚು. ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳನ್ನು ತಿಳಿದರೆ

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ

    ಕೋಲಾರ:- ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ, ಹನುಮಂತರಾಯನ ದಿನ್ನೆ ಗ್ರಾಮದ ವಾಸಿ ಹೆಚ್.ಎನ್.ವೆಂಕಟೇಶ್ ಬಿನ್ ನಾರಾಯಣಸ್ವಾಮಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಎನ್.ಬೈರ ರವರು ಹಾಗೂ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯವರು ಕಲಂ 6 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ…

  • ಉದ್ಯೋಗ

    ಶ್ರೀಮಂತರಾಗಲು ಭಾರತದಲ್ಲಿವೆ ಅತೀ ಹೆಚ್ಚು ಹಣ ಪಡೆಯುವ ಕೆಲಸಗಳು..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

    ಭಾರತದಲ್ಲಿ ಅತಿ ಹೆಚ್ಚು ಸಂಬಳ ಗಳಿಸಬಹುದಾದ ಪ್ರಮುಖ 1೦ ಉದ್ಯೋಗಗಳ ಪಟ್ಟಿ ಇಲ್ಲಿದ್ದು, ಮುಂದಿನ ದಿನಗಳಲ್ಲಿ ಲಕ್ಷಾಧೀಶರಾಗ ಬಯಸುವವರಿಗೆ ಇದು ಮಾರ್ಗದರ್ಶಿ ಯಾಗ ಬಹುದು. ಅಮೂಲ್ಯವೆನಿಸುವ ಯಾವುದೇ ವಸ್ತು ಸುಲಭವಾಗಿ ದಕ್ಕುವುದಿಲ್ಲ. ಹಣವೂ ಅಷ್ಟೇ ! ಯಾರೇ ಆಗಲಿ, ಎಷ್ಟೇ ಹಣವಂತರಿರಲಿ, ಬಾಯಲ್ಲಿ ಬೆಳ್ಳಿ ಚಮಚವನ್ನಿರಿಸಿಕೊಂಡು ಹುಟ್ಟಿರುವುದಿಲ್ಲ.

  • ಗ್ಯಾಜೆಟ್

    ಹಣದ ಬದಲು ಎಟಿಎಂನಲ್ಲಿ ಬಂತು ಪೇಪರ್…! ತಿಳಿಯಲು ಈ ಲೇಖನವನ್ನು ಓದಿ …

    ಬಳ್ಳಾರಿ ಜಿಲ್ಲೆಯ ಎಸ್‍ಬಿಐ ಬ್ಯಾಂಕ್ ಎಟಿಎಂನಲ್ಲಿ ಹಣದ ಬದಲು ಪೇಪರ್ ಬಂದ ಪ್ರಕರಣಕ್ಕೆ ಸಂಭಂದಿಸಿದಂತೆ ಬ್ಯಾಂಕ್ ಅಧಿಕಾರಿಗಳು ತಪ್ಪೊಪ್ಪಿಕೊಂಡಿದ್ದಾರೆ. ಇಲ್ಲಿನ ಟ್ಯಾಂಕ್‌ 1 ರಸ್ತೆಯಲ್ಲಿರುವ ಎಸ್‌ಬಿಐ ಎಟಿಎಂನಲ್ಲಿ ನೋಟಿನ ಬದಲು ಪೇಪರ್‌ ಬಂದ ಘಟನೆ ನಡೆದಿದೆ. ರಮೇಶ್‌ ಎನ್ನುವವರು 8000 ರೂಪಾಯಿ ಡ್ರಾ ಮಾಡಿದ್ದು 500 ರೂಪಾಯಿ ಮುಖಬೆಲೆಯ 15 ನೋಟುಗಳ ನಡುವೆ ಅದೇ ಗಾತ್ರದ ಚಲನ್‌ ಮಾದರಿಯ ಪೇಪರ್‌ವೊಂದು ಬಂದಿದೆ. ಹಣವನ್ನು ಎಣಿಸಿ ನೋಡುವಾಗ ಪೇಪರ್‌ ಕಂಡಿದ್ದು  ಬ್ಯಾಂಕ್‌ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಒಂದೋ ಹಣದ…