ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಲಟಿಕೆ ತಗೆಯದ ವ್ಯಕ್ತಿ ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಲಟಿಕೆ ಎಲ್ಲರೂ ತೆಗೆಯುತ್ತಾರೆ, ಇನ್ನು ಕೆಲವರು ಕೈ ಕಾಲು ಬೆರಳುಗಳ ನೋವಿನಿಂದ ಲಟಿಕೆ ತೆಗೆದರೆ ಇನ್ನು ಕೆಲವರು ಲಟಿಕೆಯ ಶಬ್ದವನ್ನ ಕೇಳಲು ಲಟಿಕೆ ತೆಗೆಯುತ್ತಾರೆ. ಇನ್ನು ಕೆಲವರಿಗೆ ಈ ಲಟಿಕೆ ತೆಗೆಯುವುದು ಒಂದು ತರಾ ಚಟ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಕೆಲವು ಜನರು ಇಡೀ ಹೊತ್ತು ಕೈ ಮತ್ತು ಕಾಲುಗಳ ಲಟಿಕೆ ತೆಗೆಯುತ್ತಲೇ ಇರುತ್ತಾರೆ ಮತ್ತು ಮಲಗಿದಾಗ ಕೂಡ ಲಟಿಕೆ ತೆಗೆಯುತ್ತಾರೆ. ಇನ್ನು ಹುಟ್ಟಿದ ಪ್ರತಿಯೊಬ್ಬ ಮಾನವ ಕೂಡ ಒಂದಲ್ಲ ಒಂದು ಭಾರಿ ಈ ಲಟಿಕೆ ತೆಗೆದೇ ಇರುತ್ತಾರೆ, ಇನ್ನು ಕೆಲವು ಸಮಯದಲ್ಲಿ ಲಟಿಕೆ ತೆಗೆಯುವ ಸಮಯದಲ್ಲಿ ವಯಸ್ಸಾದ ಹಿರಿಯರು ಮನೆಯಲ್ಲಿ ಇದ್ದರೆ ವರು ನಮಗೆ ಲಟಿಕೆ ತೆಗೆಯಬೇಡ ಎಂದು ಬಯ್ಯುತ್ತಾರೆ ಮತ್ತು ಲಟಿಕೆ ತೆಗೆದರೆ ಒಳ್ಳೆಯದಲ್ಲ ಅದೂ ಅಪಶಕುನ ಎಂದು ಹೇಳುತ್ತಾರೆ.
ಹಾಗಾದರೆ ಲಟಿಕೆ ತೆಗೆದರೆ ಒಳ್ಳೆಯದ ಅಥವಾ ಕೆಟ್ಟದ್ದ ಅನ್ನುವ ಪ್ರಶ್ನೆಗೆ ಇನ್ನು ಹಲವು ಜನರಿಗೆ ಸರಿಯಾದ ಉತ್ತರ ಸಿಕ್ಕಿಲ್ಲ, ಹಿರಿಯರು ಹೇಳುವ ಎಲ್ಲಾ ಮಾತಿನ ಹಿಂದೆ ಒಂದು ಬಲವಾದ ಕಾರಣ ಇದ್ದೆ ಇರುತ್ತಾರೆ, ಆದರೆ ಇಂದಿನ ಕಾಲದ ಯುವಕರು ಮತ್ತು ಯುವತಿಯರು ಹಿರಿಯರ ಮಾತಿಗೆ ಬೆಲೆ ಕೊಡದೆ ತಮ್ಮ ತಮ್ಮ ಮನಸ್ಸಿಗೆ ಬಂದ ಹಾಗೆ ನಡೆದುಕೊಳ್ಳುತ್ತಾರೆ ಮತ್ತು ಅದೂ ಲಟಿಕೆ ವಿಷಯದಲ್ಲೂ ಕೂಡ.

ಹೆಚ್ಚಾಗಿ ಲಟಿಕೆ ತೆಗೆಯುವುದು ನಿಮ್ಮ ದೇಹಕ್ಕೆ ತುಂಬಾ ಅಪಾಯಕಾರಿ ಎಂದು ಹೇಳುತ್ತಿದೆ ವೈದ್ಯಲೋಕ, ಹೌದು ಹೆಚ್ಚು ಲಟಿಕೆ ತೆಗೆಯುವುದು ಮಾನವನ ಮೂಳೆಗಳಿಗೆ ತುಂಬಾ ಅಪಾಯಕಾರಿ ಎಂದು ಸಂಶೋಧನೆಯಿಂದ ತಿಳಿದು ಬಂದೆ. ಸ್ನೇಹಿತರೆ ಮಾನವನ ದೇಹ ಕೂಡ ಒಂದು ಯಂತ್ರದ ತರಹ ಮತ್ತು ದೇಹದ ಮೂಲೆಗಳಲ್ಲಿ ನಾನಾರೀತಿಯ ಜೋಡಣೆ ಇರುತ್ತದೆ ಮತ್ತು ಆ ಜೋಡಣೆಗಳ ಮದ್ಯೆ ಇರುವ ಖಾಲಿ ಜಾಗದಲ್ಲಿ ಸೈನೋ ವಾಯ್ಲ್ ಫ್ಲೂಯಿಡ್ ಅನ್ನುವ ಒಂದು ರೀತಿಯ ದ್ರವ ಇರುತ್ತದೆ ಮತ್ತು ಯಂತ್ರದಲ್ಲಿ ಗ್ರೀಸ್ ಹೇಗೆ ಕೆಲಸ ಮಾಡುತ್ತದೆಯೋ ಅದೇ ರೀತಿಯಾಗಿ ಈ ಮೂಳೆಗಳ ಮದ್ಯೆ ಈ ದ್ರವ ಕೆಲಸ ಮಾಡುತ್ತದೆ.

ಇನ್ನು ಮೂಳೆಗಳ ನಡುವೆ ಇರುವ ಈ ದ್ರವ ಮೂಳೆಗಳ ನಡುವೆ ಘರ್ಷಣೆ ಆಗದೆ ಇರುವ ಹಾಗೆ ನೋಡಿಕೊಳ್ಳುತ್ತದೆ, ಮೂಳೆಗಳ ನಡುವೆ ಈ ದ್ರವದಲ್ಲಿ ಕಾರ್ಬನ್ ಡೈ ಆಕ್ಸೈಡ್ ಸಂಗ್ರಹ ಆಗಿರುತ್ತದೆ ಮತ್ತು ಅದೂ ದ್ರವದ ಮದ್ಯೆ ಗಾಳಿಯ ಗುಳ್ಳೆಯ ಹಾಗೆ ಇರುತ್ತದೆ ಮತ್ತು ಲಟಿಕೆ ತೆಗೆದಾಗ ಈ ಗುಳ್ಳೆಗಳು ಒಡೆಯುವುದರ ಕಾರಣ ಶಬ್ದ ಬರುತ್ತದೆ. ಇನ್ನು ಒಂದು ಭಾರಿ ನಾವು ಲಟಿಕೆ ತೆಗೆದ ಮೇಲೆ ಅಲ್ಲಿ ಆ ಮೂಳೆಯ ಮದ್ಯೆ ಇರುವ ಎಲ್ಲಾ ಕಾರ್ಬನ್ ಡೈ ಆಕ್ಸೈಡ್ ಖಾಲಿ ಆಗುತ್ತದೆ ಮತ್ತು ಪುನಃ ಸಂಗ್ರಹ ಆಗುತ್ತದೆ ಸುಮಾರು 20 ನಿಮಿಷ ಬೇಕಾಗುತ್ತದೆ ಮತ್ತು ಈ ಸಮಯದ ನಂತರ ಮತ್ತೇ ಲಟಿಕೆ ತೆಗೆದರೆ ಶಬ್ದ ಬರುತ್ತದೆ.

ಇನ್ನು ಹೆಚ್ಚಾಗಿ ಹೀಗೆ ಲಟಿಕೆ ತೆಗೆಯುವುದರಿಂದ ಕ್ರಮೇಣವಾಗಿ ಮೂಳೆಗಳ ನಡುವೆ ಇರುವ ಈ ದ್ರವ ಖಾಲಿ ಆಗುತ್ತಾ ಹೋಗುತ್ತದೆ ಮತ್ತು ಹೀಗೆ ದ್ರವ ಖಾಲಿ ಆಗುತ್ತಾ ಹೋದರೆ ವಯಸ್ಸಾಗುತ್ತ ಹೋದಂತೆ ಮೂಲೆಗಳಲ್ಲಿ ನೋವು ಜಾಸ್ತಿ ಆಗುತ್ತಾ ಹೋಗುತ್ತದೆ ಮತ್ತು ಮೂಳೆಗಳು ಸಡಿಲ ಆಗಿ ಒಂದೊಂದು ಉಜ್ಜಿ ಸವೆದು ಹೋಗುತ್ತದೆ. ನಿಮಗೂ ಕೂಡ ಈ ಲಟಿಕೆ ತೆಗೆಯುವ ದುರಭ್ಯಾಸ ಇದ್ದರೆ ಇಂದೇ ನಿಲ್ಲಿಸುವುದು ಮಾಡುವುದು ಒಳ್ಳೆಯದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕ್ರಿಕೆಟ್ ಬಹುತೇಕರ ಕನಸು. ಆದ್ರೆ ಅಂತರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆಯುವುದು ಸುಲಭದ ಕೆಲಸವಲ್ಲ. ಕ್ರೀಡೆ ಗೊತ್ತಿಲ್ಲದವರಿಗೂ ಕ್ರಿಕೆಟ್ ಜಗತ್ತಿನಲ್ಲಿ ಕೆಲಸ ಸಿಗುತ್ತದೆ. ಒಳ್ಳೆ ವಿದ್ಯಾಭ್ಯಾಸ ಹೊಂದಿರುವವರು ಕ್ರಿಕೆಟ್ ವೃತ್ತಿಯನ್ನಾಗಿ ಆಯ್ಕೆ ಮಾಡಿಕೊಂಡು ಲಕ್ಷಾಂತರ ರೂಪಾಯಿ ಗಳಿಕೆ ಮಾಡ್ತಿದ್ದಾರೆ. ಬ್ಯಾಟಿಂಗ್, ಬೌಲಿಂಗ್ ಮಾತ್ರವಲ್ಲ, ಮೈದಾನದಲ್ಲಿ ಹಾಗೂ ಮೈದಾನದ ಹೊರಗೆ ಕ್ರಿಕೆಟ್ ಗೆ ಸಂಬಂಧಿಸಿದ ಅನೇಕ ಕೆಲಸಗಳಿವೆ. ಪಂದ್ಯದ ತೀರ್ಪುಗಾರನಾಗಿ ನೀವು ಕೆಲಸ ಮಾಡಬಹುದು. ಪ್ರತಿ ಪಂದ್ಯಕ್ಕೆ 30 ಸಾವಿರ ರೂಪಾಯಿ ನೀಡಲಾಗುತ್ತದೆ. ಐಸಿಸಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ…
ಅಜ್ಞಾನವೆಂಬ ಕತ್ತಲನ್ನು ಕಳೆದು ಬದುಕಲ್ಲಿ ಸುಜ್ಞಾನವೆಂಬ ಜ್ಯೋತಿಯನ್ನು ಬೆಳಗಿಸುವ ಹಬ್ಬ ದೀಪಾವಳಿ. ಮಕ್ಕಳಿಗಂತೂ ದೀಪಾವಳಿ ಎಂದರೆ ಬಲು ಅಚ್ಚು ಮೆಚ್ಚು. ಪಟಾಕಿ ದೀಪಾವಳಿಯ ಪ್ರಧಾನ ಆಕರ್ಷಣೆ. ದೀಪ +ಅವಳಿ ಎಂದರೆ ಜೋಡಿ ದೀಪ ಅಥವಾ ದೀಪಗಳ ಸಾಲು ಎಂದರ್ಥ. ಸಾಲು ಸಾಲು ದೀಪ ಹಚ್ಚುವ ಈ ಹಬ್ಬಕ್ಕೆ ದೀಪಾವಳಿ ಎಂದೇ ಹೆಸರು ಬಂದಿದೆ.
ಮೇಷ ರಾಶಿ ಭವಿಷ್ಯ (Wednesday, December 1, 2021) ನೀವು ಚೈತನ್ಯದಿಂದ ತುಂಬಿರುತ್ತೀರಿ ಮತ್ತು ಇಂದು ಅಸಾಮಾನ್ಯವಾದದ್ದೇನಾದರೂ ಸಾಧಿಸುತ್ತೀರಿ. ನಿಮ್ಮ ಮೂಲಕ ಹಣವನ್ನು ಉಳಿಸಲು ಮಾಡಲಾಗಿರುವ ಪ್ರಯತ್ನವು ಇಂದು ವಿಫಲವಾಗಬಹುದು, ಹೇಗಾದರೂ, ನೀವು ಅದರ ಬಗ್ಗೆ ಚಿಂತಿಸಬೇಕಾಗಿಲ್ಲ, ಪರಿಸ್ಥಿತಿ ಶೀಘ್ರದಲ್ಲೇ ಸುಧಾರಿಸುತ್ತದೆ. ಪತ್ನಿಯೊಂದಿಗೆ ಜಗಳ ಮಾನಸಿಕ ಒತ್ತಡಕ್ಕೆ ಕಾರಣವಾಗಬಹುದು. ಅನವಶ್ಯಕ ಒತ್ತಡ ತೆಗೆದುಕೊಳ್ಳುವ ಅಗತ್ಯವಿಲ್ಲ. ಜೀವನದಲ್ಲಿ ಮಹತ್ವದ ವಿಷಯವೆಂದರೆ ನಾವು ಮಾರ್ಪಡಿಸಲು ಸಾಧ್ಯವಿಲ್ಲದ ವಿಷಯಗಳನ್ನು ಒಪ್ಪಿಕೊಳ್ಳಲು ಕಲಿಯುವುದಾಗಿದೆ. ನಿಮ್ಮ ಕಣ್ಣುಗಳು ಅದೆಷ್ಟು ಪ್ರಕಾಶಮಾನವಾಗಿವೆಯೆಂದರೆ ಅವು ನಿಮ್ಮ ಪ್ರೇಮಿಯ…
ರೈತರು ಎದುರಿಸುತ್ತಿರುವ ಕಷ್ಟಗಳನ್ನ ಪ್ರಧಾನ ಮಂತ್ರಿ ಅವರಿಗೆ ಮನವರಿಕೆ ಮಾಡಲು ಸಿಂಧನೂರು ತಾಲೂಕಿನ ಯುವಕರೊಬ್ಬರು ತನ್ನ ರಕ್ತದಲ್ಲಿ ಎರಡು ಪತ್ರಗಳನ್ನ ಬರೆದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿದ್ದಾರೆ.
ವಾಸಿಸುವವನೇ ಮನೆ ಒಡೆಯ ಎಂಬ ಐತಿಹಾಸಿಕ ಕಾಯ್ದೆ ಜಾರಿಗೆ ರಾಷ್ಟ್ರಪತಿಯವರ ಅಂಕಿತ ವಷ್ಟೇ ಬಾಕಿ. ಭೂ ಸುಧಾರಣೆಗಳ ತಿದ್ದುಪಡಿ ಕಾಯ್ದೆಯಲ್ಲಿ ‘ಯಾವುದೇ ಇತರ ಕಾನೂನು ಏನೇ ಇದ್ದರೂ, 1979ರ ಜನವರಿ ಮೊದಲ ದಿನಕ್ಕೆ ನಿಕಟಪೂರ್ವದಲ್ಲಿ ಯಾವುದೇ ಕೃಷಿ ಕಾರ್ಮಿಕನು, ಯಾವುದೇ ಗ್ರಾಮದಲ್ಲಿ ತನಗೆ ಸೇರಿರದ ಭೂಮಿಯಲ್ಲಿರುವ ವಾಸದ ಮನೆಯಲ್ಲಿ ಸಾಮಾನ್ಯವಾಗಿ ವಾಸಿಸುತ್ತಿದ್ದಲ್ಲಿ, ಅಂಥ ವಾಸದ ಮನೆಯನ್ನು, ಅದು ಇರುವ ನಿವೇಶನದ ಸಹಿತವಾಗಿ ಮತ್ತು ಅದಕ್ಕೆ ನಿಕಟವಾಗಿ ತಾಗಿಕೊಂಡಿರುವ ಮತ್ತು ಅದರ ಅನುಭೋಗಕ್ಕೆ ಅವಶ್ಯವಾಗಿರುವ ಭೂಮಿಯು ಅದರ ಮಾಲೀಕನಾಗಿ ನೋಂದಾಯಿಸಿಕೊಳ್ಳಲು ಹಕ್ಕುಳ್ಳವನಾಗಿರತಕ್ಕದ್ದು’ ಎಂದು ಹೇಳಿದೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಸಂಘ ‘ಡಿ ಕಂಪನಿ’ ಜಿಲ್ಲೆಯ ಕುಗ್ರಾಮವೊಂದರ ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡಿದ್ದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ. ಸಕಲೇಶಪುರ ತಾಲೂಕಿನ ರಾಮೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯನ್ನು ಎರಡು ವರ್ಷಕ್ಕೆ ದತ್ತು ಪಡೆದಿರುವ ದರ್ಶನ್ ಅಭಿಮಾನಿಗಳು ಶಾಲಾ ಅಭಿವೃದ್ಧಿಗೆ ಮುಂದಾಗಿದ್ದಾರೆ. ಶಾಲೆಯ ಮಕ್ಕಳಿಗೆ ಸಮವಸ್ತ್ರಗಳು, ಪುಸ್ತಕ, ಶಾಲಾ ಕಟ್ಟಡಕ್ಕೆ ಬಣ್ಣ, ಪೀಠೋಪಕರಣ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ನೀಡುವ ವಾಗ್ದಾನವನ್ನು ದರ್ಶನ್ ಅಭಿಮಾನಿಗಳು ನೀಡಿದ್ದಾರೆ. ಈ ನಿಟ್ಟಿನಲ್ಲಿ ಡಿ ಕಂಪನಿ ಈಗಾಗಲೇ ಶಿಕ್ಷಣ ಇಲಾಖೆಯಿಂದ…