ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಿಂಬೆಯನ್ನು ಅಡುಗೆಯ ರುಚಿಗೆ ಮತ್ತು ಔಷಧಿಗೆ ಬಳಸುತ್ತಾರೆ, ನಮ್ಮ ಆರೋಗ್ಯಕ್ಕೂ ಸಹ ಲಿಂಬೆ ಉತ್ತಮ ಆರೈಕೆ. ಸಾಮಾನ್ಯವಾಗಿ ನಿಂಬೆಹಣ್ಣಿನ ರಸವನ್ನು ಹಿಂಡಿ ಎಲ್ಲರೂ ಸಿಪ್ಪೆಯನ್ನು ಬಿಸಾಡುತ್ತಾರೆ ಆದರೆ ನಮಗೆ ತಿಳಿದಿಲ್ಲ ಲಿಂಬೆ ರಸಕ್ಕಿಂತ ಹತ್ತು ಪಟ್ಟು ಸಿಪ್ಪೆಯಲ್ಲಿ ಹತ್ತಿ ಹೆಚ್ಚು ಪೋಷಕಾಂಶಗಳು ಇರುತ್ತವೆ ಎಂದು.

ಲಿಂಬೆಯ ಸಿಪ್ಪೆಯಲ್ಲಿ ಮಿಟಮಿನ್ಸ್ , ಖನಿಜ, ಕರಗದೇ ಇರುವಂತಹ ನಾರುಗಳು ಹಾಗೂ ಪೊಟ್ಯಾಶಿಯಂ, ಕ್ಯಾಲ್ಸಿಯಂ, ಹಾಗೂ ಮಿಟಮಿನ್ ಸಿ ಉತ್ತಮ ಪ್ರಮಾಣದಲ್ಲಿ ಇರುತ್ತದೆ. ಇವು ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಇರಿಸುತ್ತದೆ. ಹಾಗಾಗಿ ನಿಂಬೆ ಸಿಪ್ಪೆಯನ್ನು ಬಿಸಾಡಬೇಡಿ ಇದನ್ನು ಬಳಸಿಕೊಳ್ಳಿ ಇದರಿಂದ ಹಲವು ಪ್ರಯೋಜನಗಳಿವೆ ಅವುಗಳನ್ನು ತಿಳಿಯೋಣ ಬನ್ನಿ.
ಕ್ಯಾನ್ಸರ್ ನಿಂದ ತಡೆಗಟ್ಟುತ್ತದೆ: ಕ್ಯಾನ್ಸರ್ ನಿಂದ ತಡೆಗಟ್ಟಲು ಹಾಗೂ ಕ್ಯಾನ್ಸರ್ ಗೆ ಚಿಕಿತ್ಸೆಯಾಗಿ ಲಿಂಬೆಸಿಪ್ಪೆಯನ್ನು ಬಳಸಲಾಗುತ್ತಿದೆ. ಲಿಂಬೆಸಿಪ್ಪೆ ಕ್ಯಾನ್ಸರ್ ಪೀಡಿತ ಜೀವಕೋಶಗಳ ವಿರುದ್ದ ಹೋರಾಡುವ ಶಕ್ತಿಯಿದೆ. ಒಂದು ಅಧ್ಯಯನ ಪ್ರಕಾರ ಕ್ಯಾನ್ಸರ್ ಪೀಡಿತ ಜೀವಕೋಶಗಳಿರುವ ವ್ಯಕ್ತಿಗಳು ಲಿಂಬೆಸಿಪ್ಪೆಯನ್ನು ಸೇವಿಸುವ ಮೂಲಕ ಇವುಗಳು ಅಭಿವೃದ್ದಿಯಾಗುವುದನ್ನು ತಡೆಗಟ್ಟಿವೆ. ಕ್ಯಾನ್ಸರ್ ಪೀಡಿತ ಜೀವಕೋಶಗಳು ಆಮ್ಲೀಯ ವಾತಾವರಣದಲ್ಲಿ ಶೀಘ್ರವಾಗಿ ಅಭಿವೃದ್ದಿ ಹೊಂದುತ್ತವೆ.

ಮೂಳೆಗಳ ಆರೋಗ್ಯ : ಲಿಂಬೆ ಸಿಪ್ಪೆಯಲ್ಲಿ ವಿಟಮಿನ್ ಸಿ ಮತ್ತು ಕ್ಯಾಲ್ಸಿಯಂ ಉತ್ತಮ ಪ್ರಮಾಣದಲ್ಲಿವೆ. ಇವು ಮೂಳೆಗಳ ಆರೋಗ್ಯ ಉತ್ತಮಗೊಳಿಸುತ್ತವೆ ಹಾಗೂ ಮೂಳೆಗಳಿಗೆ ಸಂಬಂಧಿಸಿದ ಕಾಯಿಲೆಗಳ ಚಿಕಿತ್ಸೆಗೂ ನೆರವಾಗುತ್ತವೆ. ವಿಶೇಷವಾಗಿ ಉರಿಯೂತದ ಸಂಧಿವಾತ (inflammatory polyarthritis) ಮೂಳೆಗಳಲ್ಲಿ ಗಾಳಿಗುಳ್ಳೆಗಳು ತುಂಬಿಕೊಳ್ಳುವ ಓಸ್ಟಿಯೋಪೋರೋಸಿಸ್, ಮತ್ತು ರ್ಹೂಮಟಾಯ್ಡ್ ಸಂಧಿವಾತ ಮೊದಲಾದ ತೊಂದರೆಗಳ ಚಿಕಿತ್ಸೆಗೆ ನೆರವಾಗುತ್ತವೆ.
ತೂಕ ಇಳಿಕೆ : ಲಿಂಬೆ ಸಿಪ್ಪೆಯ ಸೇವನೆಯಿಂದ ತೂಕ ಇಳಿಕೆಯ ಪ್ರಯತ್ನಗಳಿಗೆ ಹೆಚ್ಚಿನ ಬೆಂಬಲ ನೀಡುತ್ತದೆ. ಇದರಲ್ಲಿರುವ ಪೆಕ್ಟಿನ್ ಎಂಬ ಪೋಷಕಾಂಶ ಜೀರ್ಣಗೊಳ್ಳಲು ಹೆಚ್ಚಿನ ಕೊಬ್ಬನ್ನು ಬಳಸಿಕೊಳ್ಳುವ ಮೂಲಕ ಕೊಬ್ಬನ್ನು ಕರಗಿಸಿ ತೂಕ ಇಳಿಕೆಗೆ ನೆರವಾಗುತ್ತದೆ.

ಲಿಂಬೆಸಿಪ್ಪೆಯನ್ನು ಸೇವಿಸುವ ವಿಧಾನ
ಲಿಂಬೆರಸವನ್ನು ಹಿಂಡುವ ಮುನ್ನ ಸಿಪ್ಪೆಯನ್ನು ಚೆನ್ನಾಗಿ ತೊಳೆದುಕೊಳ್ಳಬೇಕು. ಬಳಿಕ ಕತ್ತರಿಸಿ ಹಿಂಡಿ ಸಿಪ್ಪೆಯನ್ನು ಪ್ರತ್ಯೇಕಿಸಿಟ್ಟುಕೊಳ್ಳಿ. ಬಳಿಕ ಇವನ್ನು ಅತಿ ಚಿಕ್ಕದಾದ ಚೂರುಗಳನ್ನಾಗಿಸಿ ಎಲ್ಲೆಲ್ಲಿ ಹುಳಿ ಅಗತ್ಯವಿದೆಯೋ ಅಲ್ಲಿ ಈ ತುಂಡುಗಳನ್ನು ಬಳಸಬಹುದು. ಇನ್ನೊಂದು ವಿಧಾನದಲ್ಲಿ ಕೊಂಚ ನೀರಿನಲ್ಲಿ ಲಿಂಬೆಯ ಸಿಪ್ಪೆಗಳನ್ನು ಬೇಯಿಸಿ ಕೊಂಚವೇ ಸಕ್ಕರೆ ಬೆರೆಸಿ ಪಾಕವನ್ನಾಗಿಸಿ. ಇದು ತಣಿದ ಬಳಿಕ ಇದನ್ನು ನೇರವಾಗಿ ಸೇವಿಸಬಹುದು. ಇನ್ನೊಂದು ವಿಧಾನದಲ್ಲಿ, ಟೀ ಕುದಿಸುವಾಗ ಲಿಂಬೆಯ ಸಿಪ್ಪೆಗಳನ್ನು ಕುದಿಯುವ ನೀರಿನಲ್ಲಿ ಹಾಕಿ ಕುದಿಸಿ ಈ ಟೀಯನ್ನು ಸೇವಿಸಬಹುದು. ಮಸಾಲೆ ಅರೆಯುವಾಗ ಹುಳಿಯ ಬದಲು ಲಿಂಬೆ ಸಿಪ್ಪೆಯನ್ನು ಸೇರಿಸಿ ಅರೆಯಬಹುದು. ಇದು ಅಡುಗೆಯ ರುಚಿಯನ್ನು ಹೆಚ್ಚಿಸುವ ಜೊತೆಗೇ ಆರೋಗ್ಯವನ್ನೂ ಉತ್ತಮಗೊಳಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲ್ಕತ್ತಾ: ವರದಕ್ಷಿಣೆಯೇ ಬೇಡ ಎಂದಿದ್ದ ವರನಿಗೆ 1 ಲಕ್ಷ ರೂಪಾಯಿ ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಉಡುಗೊರೆಯಾಗಿ ನೀಡಿ ಮಗಳನ್ನು ಧಾರೆಯೆರೆದು ಕೊಟ್ಟ ವಿಶೇಷ ಮದುವೆಯೊಂದು ಕೋಲ್ಕತ್ತಾದಲ್ಲಿ ನಡೆದಿದೆ. ಕೋಲ್ಕತ್ತಾದ ಶಿಕ್ಷಕ ಸೂರ್ಯಕಾಂತ್ ಬರಿಕ್ ಅವರ ಮದುವೆಯು ಅದೇ ಊರಿನ ಪ್ರಿಯಾಂಕಾ ಬೇಜ್ ಅವರ ಜೊತೆ ಖೇಜುರಿಯ ಕಲ್ಯಾಣ ಮಂಟಪವೊಂದರಲ್ಲಿ ನೆರವೇರಬೇಕಿತ್ತು. ಈ ವೇಳೆ ಕಲ್ಯಾಣಮಂಟಪಕ್ಕೆ ಬಂದ ಅವರಿಗೆ ಬರೋಬ್ಬರಿ 1 ಲಕ್ಷ ರೂ. ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಗಿಫ್ಟ್ ಮಾಡಿದ್ದಾರೆ. ವರದಕ್ಷಿಣೆ…
ಮೊಬೈಲ್ ಪರಿಚಯವಾದ ಮೇಲೆ ಜಗತ್ತಿನ ಜನರ ದಿನಚರಿಯೇ ಬದಲಾಗಿದೆ. ಕೆಲವರಿಗಂತೂ ಒಂದು ಅರ್ಧ ತಾಸು ಮೊಬೈಲ್ ಬಿಟ್ಟಿರು ಎಂದರೆ ಬಿಟ್ಟಿರಲು ಸಾಧ್ಯವಾಗುವುದಿಲ್ಲ. ಯಾರು ಮೆಸೇಜ್ ಮಾಡಿರಬಹುದು,ಯಾರು ಕಾಲ್ ಮಾಡಿರಬಹುದು ಎಂದು ಮನಸ್ಸು ಆ ಕಡೆ ಸೆಳೆಯುತ್ತಿರುತ್ತದೆ, ಮೊಬೈಲ್ ಬಳಸುವುದು ಎಲ್ಲರಲ್ಲಿ ಒಂದು ಚಟವಾಗಿ ಬಿಟ್ಟಿದೆ ಎಂದು ತಪ್ಪಾಗಲಾರದು. ಇನ್ನು ನಮ್ಮ ದಿನನಿತ್ಯದ ಎಷ್ಟೋ ಕೆಲಸ ಕಾರ್ಯಗಳಿಗೆ ಮೊಬೈಲ್ ಅನ್ನೇ ಅವಲಂಬಿಸಿದ್ದೇವೆ. ಬ್ಯಾಂಕ್ ವ್ಯವಹಾರದಿಂದ ಹಿಡಿದು ಮನೆಗೆ ದಿನಸಿ ತರುವುದಕ್ಕೂ ಮೊಬೈಲ್ ಬೇಕೇಬೇಕು. ನಮ್ಮ ಬಹುತೇಕ ವ್ಯವಹಾರಗಳು ಆನ್ಲೈನ್…
ಕೇವಲ ತನ್ನ ಬಣ್ಣದ ಕಾರಣ ಹೆಚ್ಚಿನವರ ಅವಗಣನೆಗೆ ಒಳಗಾಗಿರುವ ತರಕಾರಿ ಎಂದರೆ ಬೀಟ್ರೂಟ್. ಹೆಚ್ಚಿನವರು ಕೆಂಪು ಬಣ್ಣವನ್ನು ತಮ್ಮ ಊಟದಲ್ಲಿ ಇಷ್ಟಪಡದಿರುವುದೇ ಇದಕ್ಕೆ ಕಾರಣ. ವಾಸ್ತವವಾಗಿ ಜೀವ ಉಳಿಸುವ ಔಷಧಿ ಕಹಿಯಿರುವಂತೆ ಬಣ್ಣದಲ್ಲಿ ಆಕರ್ಷಕವಲ್ಲದಿದ್ದರೂ ಪೋಷಕಾಂಶಗಳ ಆಗರವಾಗಿರುವ ಬೀಟ್ರೂಟ್ ಅನ್ನು ನಮ್ಮ ಆಹಾರದಲ್ಲಿ ನಿಯಮಿತವಾಗಿ ಸೇರಿಸುವ ಮೂಲಕ ಇದರ ಅದ್ಭುತ ಪ್ರಯೋಜನಗಳನ್ನು ಪಡೆಯಬಹುದು
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 2 ಸಾವಿರರೂಪಾಯಿ ಮುಖಬೆಲೆಯ ನೋಟು ಮುದ್ರಣವನ್ನು ಸ್ಥಗಿತಗೊಳಿಸಿದೆ.ಪ್ರಸಕ್ತ ವರ್ಷ ನೋಟು ಮುದ್ರಣಇಲಾಖೆ 2 ಸಾವಿರ ಮುಖಬೆಲೆಯ ಒಂದುನೋಟನ್ನೂ ಮುದ್ರಿಸಿಲ್ಲ ಎಂದು ಆರ್ಬಿಐಆರ್ಟಿಐ ಅರ್ಜಿಗೆ ನೀಡಿರುವಉತ್ತರದಲ್ಲಿ ಸ್ಪಷ್ಟಪಡಿಸಿದೆ. ಆದರೆ ಹಾಲಿ ಇರುವ ನೋಟುಗಳ ಚಲಾವಣೆಗೆ ಸಮಸ್ಯೆಯೇನಿಲ್ಲ. ಆರ್ಬಿಐ ಮಾಹಿತಿ ಪ್ರಕಾರ ನೋಟು ಮುದ್ರಣ ಇಲಾಖೆ 2016-17ನೇ ಹಣಕಾಸು ವರ್ಷದಲ್ಲಿ 2 ಸಾವಿರ ಮುಖಬೆಲೆಯ ಒಟ್ಟು 3,54,29,91,000 ನೋಟುಗಳನ್ನು ಮುದ್ರಣ ಮಾಡಿತ್ತು. 2017-18 ರಲ್ಲಿ 11,15,07,000 ನೋಟು ಹಾಗೂ 2018-19ನೇ ಸಾಲಿನಲ್ಲಿ ಕೇವಲ4,66,90,000 ನೋಟುಗಳನ್ನು…
ಮಕ್ಕಳು 18 ವರ್ಷಕ್ಕಿಂತ ಚಿಕ್ಕವರಿದ್ದರೆ, ಸರ್ಕಾರಿ ಅಥವಾ ಖಾಸಗಿ ಶಾಲೆಯಲ್ಲಿ ಓದುತ್ತಿದ್ದಾರೆಂದಾದ್ರೆ ಇಲ್ಲೊಂದು ಸುವರ್ಣಾವಕಾಶವಿದೆ. ಮಕ್ಕಳಿಗೆ 1 ಲಕ್ಷದಿಂದ 10 ಸಾವಿರದವರೆಗೆ ಹಣ ಗೆಲ್ಲುವ ಅವಕಾಶವನ್ನು ಕೇಂದ್ರ ಸರ್ಕಾರ ನೀಡ್ತಿದೆ.
ಇಂದು ಬುಧವಾರ, 21/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…