ಆರೋಗ್ಯ

ನಿಂಬೆ ಸಿಪ್ಪೆಯನ್ನ ಬಿಸಾಡ್ತೀದೀರಾ ಇನ್ನು ಮುಂದೆ ಬಿಸಾಡಬೇಡಿ ಇದರಿಂದ ಸಾಕಷ್ಟು ಉಪಯೋಗಗಳಿವೆ.

204

ಲಿಂಬೆಯನ್ನು ಅಡುಗೆಯ ರುಚಿಗೆ ಮತ್ತು ಔಷಧಿಗೆ ಬಳಸುತ್ತಾರೆ, ನಮ್ಮ ಆರೋಗ್ಯಕ್ಕೂ ಸಹ ಲಿಂಬೆ ಉತ್ತಮ ಆರೈಕೆ. ಸಾಮಾನ್ಯವಾಗಿ ನಿಂಬೆಹಣ್ಣಿನ ರಸವನ್ನು ಹಿಂಡಿ ಎಲ್ಲರೂ ಸಿಪ್ಪೆಯನ್ನು ಬಿಸಾಡುತ್ತಾರೆ ಆದರೆ ನಮಗೆ ತಿಳಿದಿಲ್ಲ ಲಿಂಬೆ ರಸಕ್ಕಿಂತ ಹತ್ತು ಪಟ್ಟು ಸಿಪ್ಪೆಯಲ್ಲಿ ಹತ್ತಿ ಹೆಚ್ಚು ಪೋಷಕಾಂಶಗಳು ಇರುತ್ತವೆ ಎಂದು.

ಲಿಂಬೆಯ ಸಿಪ್ಪೆಯಲ್ಲಿ ಮಿಟಮಿನ್ಸ್ , ಖನಿಜ, ಕರಗದೇ ಇರುವಂತಹ ನಾರುಗಳು ಹಾಗೂ ಪೊಟ್ಯಾಶಿಯಂ, ಕ್ಯಾಲ್ಸಿಯಂ, ಹಾಗೂ ಮಿಟಮಿನ್ ಸಿ ಉತ್ತಮ ಪ್ರಮಾಣದಲ್ಲಿ ಇರುತ್ತದೆ. ಇವು ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಇರಿಸುತ್ತದೆ. ಹಾಗಾಗಿ ನಿಂಬೆ ಸಿಪ್ಪೆಯನ್ನು ಬಿಸಾಡಬೇಡಿ ಇದನ್ನು ಬಳಸಿಕೊಳ್ಳಿ ಇದರಿಂದ ಹಲವು ಪ್ರಯೋಜನಗಳಿವೆ ಅವುಗಳನ್ನು ತಿಳಿಯೋಣ ಬನ್ನಿ.

ಕ್ಯಾನ್ಸರ್ ನಿಂದ ತಡೆಗಟ್ಟುತ್ತದೆ: ಕ್ಯಾನ್ಸರ್ ನಿಂದ ತಡೆಗಟ್ಟಲು ಹಾಗೂ ಕ್ಯಾನ್ಸರ್ ಗೆ ಚಿಕಿತ್ಸೆಯಾಗಿ ಲಿಂಬೆಸಿಪ್ಪೆಯನ್ನು ಬಳಸಲಾಗುತ್ತಿದೆ. ಲಿಂಬೆಸಿಪ್ಪೆ ಕ್ಯಾನ್ಸರ್ ಪೀಡಿತ ಜೀವಕೋಶಗಳ ವಿರುದ್ದ ಹೋರಾಡುವ ಶಕ್ತಿಯಿದೆ. ಒಂದು ಅಧ್ಯಯನ ಪ್ರಕಾರ ಕ್ಯಾನ್ಸರ್ ಪೀಡಿತ ಜೀವಕೋಶಗಳಿರುವ ವ್ಯಕ್ತಿಗಳು ಲಿಂಬೆಸಿಪ್ಪೆಯನ್ನು ಸೇವಿಸುವ ಮೂಲಕ ಇವುಗಳು ಅಭಿವೃದ್ದಿಯಾಗುವುದನ್ನು ತಡೆಗಟ್ಟಿವೆ. ಕ್ಯಾನ್ಸರ್ ಪೀಡಿತ ಜೀವಕೋಶಗಳು ಆಮ್ಲೀಯ ವಾತಾವರಣದಲ್ಲಿ ಶೀಘ್ರವಾಗಿ ಅಭಿವೃದ್ದಿ ಹೊಂದುತ್ತವೆ.

ಮೂಳೆಗಳ ಆರೋಗ್ಯ : ಲಿಂಬೆ ಸಿಪ್ಪೆಯಲ್ಲಿ ವಿಟಮಿನ್ ಸಿ ಮತ್ತು ಕ್ಯಾಲ್ಸಿಯಂ ಉತ್ತಮ ಪ್ರಮಾಣದಲ್ಲಿವೆ. ಇವು ಮೂಳೆಗಳ ಆರೋಗ್ಯ ಉತ್ತಮಗೊಳಿಸುತ್ತವೆ ಹಾಗೂ ಮೂಳೆಗಳಿಗೆ ಸಂಬಂಧಿಸಿದ ಕಾಯಿಲೆಗಳ ಚಿಕಿತ್ಸೆಗೂ ನೆರವಾಗುತ್ತವೆ. ವಿಶೇಷವಾಗಿ ಉರಿಯೂತದ ಸಂಧಿವಾತ (inflammatory polyarthritis) ಮೂಳೆಗಳಲ್ಲಿ ಗಾಳಿಗುಳ್ಳೆಗಳು ತುಂಬಿಕೊಳ್ಳುವ ಓಸ್ಟಿಯೋಪೋರೋಸಿಸ್, ಮತ್ತು ರ್‍ಹೂಮಟಾಯ್ಡ್ ಸಂಧಿವಾತ ಮೊದಲಾದ ತೊಂದರೆಗಳ ಚಿಕಿತ್ಸೆಗೆ ನೆರವಾಗುತ್ತವೆ.

ತೂಕ ಇಳಿಕೆ : ಲಿಂಬೆ ಸಿಪ್ಪೆಯ ಸೇವನೆಯಿಂದ ತೂಕ ಇಳಿಕೆಯ ಪ್ರಯತ್ನಗಳಿಗೆ ಹೆಚ್ಚಿನ ಬೆಂಬಲ ನೀಡುತ್ತದೆ. ಇದರಲ್ಲಿರುವ ಪೆಕ್ಟಿನ್ ಎಂಬ ಪೋಷಕಾಂಶ ಜೀರ್ಣಗೊಳ್ಳಲು ಹೆಚ್ಚಿನ ಕೊಬ್ಬನ್ನು ಬಳಸಿಕೊಳ್ಳುವ ಮೂಲಕ ಕೊಬ್ಬನ್ನು ಕರಗಿಸಿ ತೂಕ ಇಳಿಕೆಗೆ ನೆರವಾಗುತ್ತದೆ.

ಲಿಂಬೆಸಿಪ್ಪೆಯನ್ನು ಸೇವಿಸುವ ವಿಧಾನ
ಲಿಂಬೆರಸವನ್ನು ಹಿಂಡುವ ಮುನ್ನ ಸಿಪ್ಪೆಯನ್ನು ಚೆನ್ನಾಗಿ ತೊಳೆದುಕೊಳ್ಳಬೇಕು. ಬಳಿಕ ಕತ್ತರಿಸಿ ಹಿಂಡಿ ಸಿಪ್ಪೆಯನ್ನು ಪ್ರತ್ಯೇಕಿಸಿಟ್ಟುಕೊಳ್ಳಿ. ಬಳಿಕ ಇವನ್ನು ಅತಿ ಚಿಕ್ಕದಾದ ಚೂರುಗಳನ್ನಾಗಿಸಿ ಎಲ್ಲೆಲ್ಲಿ ಹುಳಿ ಅಗತ್ಯವಿದೆಯೋ ಅಲ್ಲಿ ಈ ತುಂಡುಗಳನ್ನು ಬಳಸಬಹುದು. ಇನ್ನೊಂದು ವಿಧಾನದಲ್ಲಿ ಕೊಂಚ ನೀರಿನಲ್ಲಿ ಲಿಂಬೆಯ ಸಿಪ್ಪೆಗಳನ್ನು ಬೇಯಿಸಿ ಕೊಂಚವೇ ಸಕ್ಕರೆ ಬೆರೆಸಿ ಪಾಕವನ್ನಾಗಿಸಿ. ಇದು ತಣಿದ ಬಳಿಕ ಇದನ್ನು ನೇರವಾಗಿ ಸೇವಿಸಬಹುದು. ಇನ್ನೊಂದು ವಿಧಾನದಲ್ಲಿ, ಟೀ ಕುದಿಸುವಾಗ ಲಿಂಬೆಯ ಸಿಪ್ಪೆಗಳನ್ನು ಕುದಿಯುವ ನೀರಿನಲ್ಲಿ ಹಾಕಿ ಕುದಿಸಿ ಈ ಟೀಯನ್ನು ಸೇವಿಸಬಹುದು. ಮಸಾಲೆ ಅರೆಯುವಾಗ ಹುಳಿಯ ಬದಲು ಲಿಂಬೆ ಸಿಪ್ಪೆಯನ್ನು ಸೇರಿಸಿ ಅರೆಯಬಹುದು. ಇದು ಅಡುಗೆಯ ರುಚಿಯನ್ನು ಹೆಚ್ಚಿಸುವ ಜೊತೆಗೇ ಆರೋಗ್ಯವನ್ನೂ ಉತ್ತಮಗೊಳಿಸುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಇಂತಹದೆನಾದ್ರು ನಿಮ್ಮ ಮನೆಯಲ್ಲಿ ಕಂಡುಬಂದ್ರೆ ಅವುಗಳಿಂದ ತುಂಬಾ ಹುಷಾರಾಗಿರಿ..!ತಿಳಿಯಲು ಮುಂದೆ ಓದಿ…

    ನಾವು ದಿನ ನಿತ್ಯ ಬಳುಸುವ ಕೆಲವೊಂದು ವಸ್ತುಗಳೇ ನಮ್ಮ ದೇಹಕ್ಕೆ ಹಾನಿಕಾರಕ. ಅವುಗಳಲ್ಲಿ ಯಾವುವು ಅಂತ ತಿಳಿದುಕೊಲ್ಲಬೇಕಾದ್ರೆ ಮುಂದೆ

  • ಸುದ್ದಿ

    ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ನಗರ ಸಭೆ ಸಂಸ್ಥೆಗಳಿಗೆ 40 ಕೋಟಿ ರೂ. ಬಿಡುಗಡೆ…!

    ರಾಜ್ಯದ ಬರಪೀಡಿತ ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ 40 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ನಗರಾಭಿವೃದ್ಧಿ ಇಲಾಖೆ ಆದೇಶಿಸಿದೆ. ನಗರ ಸ್ಥಳೀಯ ಸಂಸ್ಥೆಗಳು, ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಪೋರ್ಸ್ ರಚಿಸಲಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಅವಶ್ಯವಿರುವ ಕಾಮಗಾರಿಗಳ ಕ್ರಿಯಾ ಯೋಜನೆಯನ್ನು ತಯಾರಿಸಿ, ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆದು ತುರ್ತಾಗಿ ಅನುಷ್ಠಾನಗೊಳಿಸಬೇಕು. ಬಿಡುಗಡೆ ಮಾಡಿರುವ ಅನುದಾನದಡಿ ಕೊಳವೆ ಬಾವಿಗಳನ್ನು ಆಳಗೊಳಿಸುವ, ಸ್ವಚ್ಛಗೊಳಿಸುವುದು ಹಾಗೂ ಹೈಡ್ರೋಫ್ರಾಕ್ಚರಿಂಗ್ ಕೈಗೊಳ್ಳುವುದು. ನೀರು…

  • ಸ್ಪೂರ್ತಿ

    ಕುರಿಕಾಯುವ ಹುಡುಗಿಯೊಬ್ಬಳು, ಆ ದೇಶದ ಶಿಕ್ಷಣ ಮಂತ್ರಿ ಹಾಗುವದೆಂದ್ರೆ ಸಾಮಾನ್ಯ ಅಲ್ಲ.!ಈ ಸ್ಟೋರಿ ಎಲ್ಲರಿಗೂ ಸ್ಪೂರ್ತಿ ಓದಿ ಮರೆಯದೇ ಶೇರ್ ಮಾಡಿ…

    ಬದುಕಿನಲ್ಲಿ ಮನಸಿದ್ದರೆ ಏನಾದರೂ ಸಾಧಿಸಬಹುದು ಎಂಬುದಕ್ಕೆ ಎಂತಹ ಒಳ್ಳೆಯ ಉದಾಹರಣೆಯಾಗಿರುವ ಈ ಯುವತಿ ಕುರಿ ಕಾಯುವವಳು. ವಲಸೆಗಾರರಾಗಿ ಬಂದು, ಬಡತನದಲ್ಲಿ ಬೆಳೆದು, ಆ ದೇಶ – ಭಾಷೆಯನ್ನು ಕಲಿತು, ಸಮಾಜವನ್ನು ತನ್ನದಾಗಿಸಿಕೊಂಡು ಅದೇ ದೇಶದಲ್ಲಿ ಮಂತ್ರಿಯಾಗುವುದು ಸಹಜ ಸಾಧನೆಯಲ್ಲ. ಬದುಕಿನಲ್ಲಿ ಮನಸಿದ್ದರೆ ಏನಾದರೂ ಸಾಧಿಸಬಹುದು ಎಂಬುದಕ್ಕೆ ಇಂತಹ ಒಳ್ಳೆಯ ಉದಾಹರಣೆ.   ಇವಳ ಹೆಸರು ನಜತ್ ವಲ್ಲದ್-ಬೆಲ್ಕಾಸೆಮ್. ಇಂದು ಇವಳು ಫ್ರಾನ್ಸ್ ದೇಶದ ಶಿಕ್ಷಣ ಮಂತ್ರಿ. ಶಿಕ್ಷಣ ಇಲಾಖೆಗೆ ಮಂತ್ರಿಯಾಗಿ ಬಂದ ಮೊದಲ ಮಹಿಳೆಯಂತೆ. ನಜತ್ ವಲ್ಲದ್-ಬೆಲ್ಕಾಸೆಮ್(4…

  • ಸುದ್ದಿ

    ನೆನಪಿಡಿ ಊಟದ ನಂತರ ಅಪ್ಪಿತಪ್ಪಿಯೂ ಸಹ ಇಂತಹ ತಪ್ಪುಗಳನ್ನು ಮಾಡದೆ ಹೆಚ್ಚರವಹಿಸಿ,.!

    ಸಾಮಾನ್ಯವಾಗಿಮಧ್ಯಾಹ್ನ ಊಟ ಮಾಡಿದ ಬಳಿಕಸ್ವಲ್ಪ ನಿದ್ರೆ ಮಾಡಬೇಕು ಎಂದುಹೇಳುವುದನ್ನು ನಾವೆಲ್ಲರೂ ಕೇಳಿದ್ದೇವೆ. ಆದರೆ ಊಟವಾದ ತಕ್ಷಣವೇಮಲಗಿದರೆ ಆಗ ಜೀರ್ಣಕ್ರಿಯೆ ಮೇಲೆಪರಿಣಾಮ ಬೀರುವುದು ಮತ್ತು ಆಹಾರವು ಜೀರ್ಣವಾಗದೆಹಾಗೆ ಇರುವುದು.ಹೊಟ್ಟೆ ತುಂಬಾ ಊಟ ಮಾಡಿದ ಬಳಿಕ ನಮಗನಿಸುವುದು ನಿದ್ರೆ ಮಾಡಬೇಕು ಎಂದು. ಅದು ಮಧ್ಯಾಹ್ನವೇ ಆಗಿರಬಹುದು ಅಥವಾ ರಾತ್ರಿಯ ಊಟವೇ ಆಗಿರಬಹುದು. ಯಾಕೆಂದರೆ ಹೊಟ್ಟೆ ಭಾರವಾದ ಕೂಡಲೇ ದೇಹದಲ್ಲಿ ಜಡತ್ವ ತುಂಬುವುದು. ಇದು ನಿದ್ರೆಗೆ ಜಾರುವಂತೆ ಮಾಡುವುದು. ಆದರೆ ಊಟವಾದ ತಕ್ಷಣವೇ ಮಲಗುವುದು ಸರಿಯಾದ ಕ್ರಮವಲ್ಲ ಮತ್ತು ಇದು ಆರೋಗ್ಯದ…

  • ಉಪಯುಕ್ತ ಮಾಹಿತಿ

    ಒಣ ದ್ರಾಕ್ಷಿಯನ್ನು ಹೀಗೆ ಸೇವಿಸುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ನೋಡಿ..

    ಒಣ ದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡ್ತಾರೆ. ಈ ದ್ರಾಕ್ಷಿ ಬಾಯಿಗೆ ರುಚಿಯೊಂದೇ ಅಲ್ಲ ಆರೋಗ್ಯಕರ. ಒಣ ದ್ರಾಕ್ಷಿಯನ್ನು ನೀರಿನಲ್ಲಿ ಕುದಿಸಿ ಆ ನೀರನ್ನು ರಾತ್ರಿ ಪೂರ್ತಿ ಹಾಗೆ ಇಟ್ಟು ಬೆಳಗ್ಗೆ ಸೇವಿಸುವುದ್ರಿಂದ ಸಾಕಷ್ಟು ಪ್ರಯೋಜನವಿದೆ. ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ಕುದಿಸಿದ ನೀರನ್ನು ಕುಡಿಯುವುದ್ರಿಂದ ಮಲಬದ್ಧತೆ, ಎಸಿಡಿಟಿ ಹಾಗೂ ಆಯಾಸ ಸಮಸ್ಯೆ ಕಡಿಮೆಯಾಗುತ್ತದೆ. ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ. ಇದು ದೇಹದಲ್ಲಿರುವ ಟ್ರೈಗ್ಲಿಸರೈಡ್ ಮಟ್ಟವನ್ನು ಕಡಿಮೆ ಮಾಡಲು ನೆರವಾಗುತ್ತದೆ. ಒಣದ್ರಾಕ್ಷಿ ಕುದಿಸಿಟ್ಟ ನೀರು ಮುಖದ ಮೇಲಿನ ಸುಕ್ಕನ್ನು ಕಡಿಮೆ…

  • ಸುದ್ದಿ

    ಲಕ್ನೋ: ಉತ್ತರ ಪ್ರದೇಶದ ಗ್ರಾಮವೊಂದರಲ್ಲಿ ಮುಸ್ಲಿಂ ಕುಟುಂಬಗಳು ಸತ್ತವರನ್ನು ತಮ್ಮ ಮನೆ ಮನೆಗಳಲ್ಲಿಯೇ ಸಮಾಧಿ ಮಾಡಿಕೊಳ್ಳುತ್ತಿದ್ದಾರೆ…!

    ಹೌದು. ಉತ್ತರ ಪ್ರದೇಶ ರಾಜ್ಯದ ಆಗ್ರಾ-ಜೈಪುರ ಹೆದ್ದಾರಿಯ ಆಗ್ರಾದಿಂದ 30 ಕಿಲೋ ಮೀಟರ್ ದೂರದಲ್ಲಿರುವ ಅಚ್ನೇರಾ ಬ್ಲಾಕ್‍ನ ಕುರಾಲಿ ತೆಹ್‍ಸಿಲ್‍ಯಲ್ಲಿನ ಚಹ್ ಪೋಕರ್ ಎಂಬ ಗ್ರಾಮದಲ್ಲಿ ಸುಮಾರು 50 ಮುಸ್ಲಿಂ ಕುಟುಂಬಗಳಿವೆ. ಅವರೆಲ್ಲರೂ ತಮ್ಮ ಕುಟುಂಬಸ್ಥರು ಯಾರದರೂ ಸತ್ತರೆ ಅವರನ್ನು ತಮ್ಮ ಮನೆಯಲ್ಲಿಯೆ ಸಮಾಧಿ ಮಾಡುವುದನ್ನು ರೂಡಿಸಿಕೊಂಡು ಬಂದಿದ್ದಾರಂತೆ. ಇದು ಯಾವುದೇ ಪದ್ಧತಿಯಲ್ಲ, ಬಲವಂತ ಎನ್ನುತ್ತಾರೆ ಗ್ರಾಮಸ್ಥರು. ಗ್ರಾಮದಲ್ಲಿರುವ 50 ಮುಸ್ಲಿಂ ಮನೆಗಳಲ್ಲಿ ಸುಮಾರು 300 ಜನಸಂಖ್ಯೆ ಹೊಂದಿದೆ. ಆದರೆ ಅವರಿಗೆ ಖಾಯಂ ಸ್ಮಶಾನ ಭೂಮಿ ಇಲ್ಲ….