ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿಂಧನೂರು : ಕ್ಷೇತ್ರದಿಂದ ಆಯ್ಕೆಯಾದ ಶಾಸಕರು ಇಚ್ಛೆ ಬಂದಂತೆ ನಡೆದುಕೊಳ್ಳುವುದು ಸರಿಯಲ್ಲ. ಕಾನೂನು ತಿದ್ದುಪಡಿ ಮಾಡಬೇಕು ಎಂದು ರೈತ ಯುವ ಮುಖಂಡ ರವಿಗೌಡ ಮಲ್ಲದಗುಡ್ಡ ಆಗ್ರಹಿಸಿದ್ದಾರೆ ರಾಜ್ಯದಲ್ಲೂ ಸಂವಿಧಾನಾತ್ಮಕವಾಗಿ ವಜಾಗೊಳಿಸುವ ಕೆಲಸ ಆಗಬೇಕು. ಕ್ಷೇತ್ರದ ಅಭಿವೃದ್ದಿ ಮರೆತು ಸೀಟಿಗಾಗಿ ಪ್ರತಿದಿನ ಕಚ್ಚಾಡುತ್ತಿರುವ ಶಾಸಕರಿಗೆ ತಕ್ಕ ಪಾಠ ಕಲಿಸಬೇಕಾದ ಕ್ಷೇತ್ರದಲ್ಲಿ ಅವರ ವಿರುದ್ದ ಎರಡನೇ ಸ್ತಾನದಲ್ಲಿ ಸೋತಿರುವ ಅಭ್ಯರ್ಥಿಯನ್ನು ಆ ಕ್ಷೇತ್ರದ ಮುಂದಿನ ಶಾಸಕರು ಎಂದು ಕಾನೂನು ಜಾರಿಗೆ ಬರಬೇಕು.

ಆಗ ಮಾತ್ರ ಪಕ್ಷೆ ನಿಷ್ಠೆ ಹಾಗು ಕ್ಷೇತ್ರದ ಜನಪರ ಅಭಿವೃದ್ದಿ ಕೆಲಸಗಳಾಗಳು ಸಾದ್ಯವಾಗುತ್ತದೆ. ಬೆಂಗಳೂರಿನ ವಿಧಾನಸೌಧದಲ್ಲಿ ಶಾಸಕರು ಕಚ್ಚಾಡುತ್ತಿರುವುದನ್ನು ನೋಡಿದರೆ ರೈತರಿಗೆ ಇವರು ಏನು ಮಾಡುತ್ತಾರೆ ಎಂಬ ಅನುಮಾನ ಮೂಡುತ್ತದೆ. ಹಾಗಾಗಿ ಪ್ರಜಾಪ್ರಭುತ್ವ ವ್ಯವಸ್ತೆಯಲ್ಲಿ ಶಾಸಕರ ವಿರುದ್ದ ಕಾನೂನು ತರುವುದು ಅವಶ್ಯವಾಗಿದೆ ಎಂದರು ಉತ್ತರ ಕರ್ನಾಟಕ ಜಿಲ್ಲೆಯಲ್ಲಿ ಬರಗಾಲ ಹಾಗು ಧನ ಕರುಗಳಿಗೆ ಮೇವು ಇಲ್ಲದೆ ರೈತರು ಕಂಗಾಲಾಗಿದ್ದಾರೆ . ಇದನ್ನು ಮರೆತು ತಮ್ಮ ಹಾಗು ಅವರ ಕುಟುಂಬ ಬೆಳವಣಿಗೆಗಾಗಿ ರಾಜಕಾರಣ ಮಾಡುತ್ತಿರುವ ರಾಜಕೀಯ ವ್ಯಕ್ತಿಗಳನ್ನು ದೂರ ಮಾಡಬೇಕು ಹಾಗು ರೈತರ ಪರವಾಗಿರುವ ಚಿಂತಕರನ್ನು ಬೆಳೆಸಬೇಕು. ಆಗ ಮಾತ್ರ ರಾಜಕೀಯ ಸುಧಾರಣೆ ಮಾಡಲು ಸಾಧ್ಯವಾಗುತ್ತದೆ. ಇಲ್ಲವಾದರೆ ರಾಜ್ಯದ ರೈತರು ಮತ್ತಷ್ಟು ಬರಗಾಲ ಎದುರಿಸಬೇಕಾಗುತ್ತದೆ ಎಂದರು.

ಮತ್ತು ಇದಕ್ಕೆ ಸಂಭದಿಸಿದಂತೆ ಭಾರತ ದೇಶದಲ್ಲಿರುವ 29 ರಾಜ್ಯಗಳ ಎಲ್ಲಾ ವಿಧಾನಸಭೆ ಸದಸ್ಯರಿಗೆ ಅವರದೇ ಆದಂತಹ ಕಾನೂನು ವ್ಯವಸ್ಥೆ ಮತ್ತು ಸಂವಿಧಾನ ವ್ಯವಸ್ಥೆ ಇದೆ ಅದರೆ ಇತ್ತಿಚೆಗೆ ಕರ್ನಾಟಕ ರಾಜ್ಯದಲ್ಲಿ ಮೈತ್ರಿ ಸರ್ಕಾರದ ಕಾಂಗ್ರೆಸ್ ಮತ್ತು ಜೆಡಿಎಸ್ ಕೆಲ ಶಾಸಕರು ತಮ್ಮ ತಮ್ಮ ವಯಕ್ತಿಕ ವಿಚಾರವಾಗಿ ಮತ್ತು ನಮಗೆ ಮಂತ್ರಿ ಸ್ತಾನ ಕೊಟ್ಟಿಲ್ಲವೆಂಬ ಕಾರಣಕ್ಕೆ ಅಸಮಾಧಾನಗೊಂಡು ತಮ್ಮನ್ನು ಗೆಲ್ಲಿಸಿದ ಜನರನ್ನು ಧಿಕ್ಕರಿಸಿ ಮತ್ತು ತಮ್ಮ ಕ್ಷೇತ್ರದ ಅಭಿವೃದ್ದಿಯನ್ನು ಮರೆತು ಕೊನೆಗೆ ರಾಜಿನಾಮೆ ನೀಡಿ ಕರ್ನಾಟಕ ರಾಜ್ಯದ ಮರ್ಯಾದೆಯನ್ನು ವಿಶ್ವಕ್ಕೆ ಬಿತ್ತರಿಸಿದ ಶಾಸಕರು ಹೊರ ರಾಷ್ಟ್ರದವರು ನಮ್ಮ ಕರ್ನಾಟಕ ರಾಜಕೀಯ ಚಿತ್ರಣವನ್ನು ನೋಡಿ ನಗುವಂತಾಗಿದೆ ಇದಕ್ಕೆ ಕಡಿವಾಣ ಹಾಕಬೇಕಾದರೆ ಭಾರತ ಸರ್ಕಾರ ಸಂವಿಧಾನಕ್ಕೆ ಸ್ವಲ್ಪತಿದ್ದುಪಡಿ ಆಗಬೇಕಿದೆ .

ರಾಜಿನಾಮೆ ನೀಡಿರುವ ಆಯಾ ಮತಕ್ಷೇತ್ರ ಮತ್ತೆ ಚುನಾವಣೆ ಜನರ ತೆರಿಗೆ ಹಣ ಪೋಲ್ ಮಾಡುವ ಬದಲು ಹಿಂದಿನ ಚುನಾವಣೆಯಲ್ಲಿ 2 ನೇ ಸ್ತಾನದಲ್ಲಿ ಸೋತಿರುವ ಅಭ್ಯರ್ತಿಯನ್ನು ಶಾಸಕನೆಂದು ಆಯ್ಕೆಮಾಡಿದರೆ ಯಾರು ರಾಜಿನಾಮೆ ನೀಡುವುದಿಲ್ಲ ಹಾಗು ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಬಿಟ್ಟು ಹೋಗುವುದಿಲ್ಲ ಇದಕ್ಕೆ ರಾಜಿನಾಮೆ ನೀಡಿರುವ ಅಭ್ಯರ್ಥಿಗಳು ಒಪ್ಪದಿದ್ದರೆ ತಮ್ಮ ತಮ್ಮ ಕ್ಷೇತ್ರದ ಚುನಾವಣೆ ವೆಚ್ಚವನ್ನು ಅವರವರೆ ಭರಿಸಬೇಕಾಗಿದೆ ಹಾಗು ಇಗಾಗಲೇ ರಾಜಿನಾಮೆ ನೀಡಿ ರಾಜ್ಯದ ಜನರ ಮತ್ತು ರಾಜಧಾನಿ ಬೆಂಗಳೂರಿನಲ್ಲಿರುವ ಶಕ್ತಿ ಸೌದವೆಂದೆ ಹೆಸರಾದ ವಿಧಾನ ಸೌಧದ ಶಕ್ತಿ ಕಳೆದಿರುವ ರಾಜಿನಾಮೆ ಕೊಟ್ಟ ಎಲ್ಲಾ ಶಾಸಕರಿಗೆ ಭಾರಿ ಮೊತ್ತದ ದಂಡವನ್ನು ವಿಧಿಸಿ ಶಾಸಕರಿಗೆ ಎಚ್ಚರ ಕಲಿಸಬೇಕಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗ್ಯಾಸ್ ಸಿಲಿಂಡರ್ ಸಂಕಷ್ಟ: ಕಾರಣಗಳು ಮತ್ತು ಪರಿಣಾಮಗಳು ಇತ್ತೀಚಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ (Gas Cylinder Crisis) ಭಾರತದಲ್ಲಿ ಹಲವಾರು ಕಡೆ ಗಂಭೀರ ಚರ್ಚೆಗೆ ಕಾರಣವಾಗಿದೆ. ಈ ಸಮಸ್ಯೆ ಸಾಮಾನ್ಯ ಜನರ ದಿನನಿತ್ಯ ಜೀವನದ ಮೇಲೆ ನೇರ ಪರಿಣಾಮ ಬೀರುತ್ತಿದೆ. ಭಾರತದಲ್ಲಿ ಎಲ್ಪಿಜಿ (LPG) ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮತ್ತು ಸರಬರಾಜಿನ ಕೊರತೆ ಜನರಲ್ಲಿ ಆತಂಕವನ್ನುಂಟು ಮಾಡುತ್ತಿದೆ. ವಿಶೇಷವಾಗಿ ಮಧ್ಯಮ ವರ್ಗ ಮತ್ತು ಬಡ ಕುಟುಂಬಗಳು ಈ ಸಮಸ್ಯೆಯಿಂದ ಹೆಚ್ಚು ತೊಂದರೆ ಅನುಭವಿಸುತ್ತಿವೆ. ಪ್ರಮುಖ…
ಶ್ರೀ ರಾಮ ಭಕ್ತ ಹನುಮಂತ ದೇವರಿಗೆ ಸಂಭಂದಿಸಿದ ಕೆಲವು ಮಂತ್ರಗಳು ಇಂತಿವೆ
ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.
ನಿತ್ಯ ವಾಹನಗಳನ್ನು ಬಳಸುವವರು ಯಾರಾದರೂ ಅದರ ಕೀಗಳನ್ನು ಭದ್ರವಾಗಿ ಇಟ್ಟುಕೊಳ್ಳಬೇಕು. ಒಂದು ವೇಳೆ ಅವನ್ನು ಕಳೆದುಕೊಂಡರೆ ಕಷ್ಟಗಳು ತಪ್ಪಿದ್ದಲ್ಲ.. ಆಗ ಅನುಭವಿಸುವ ಕಿರಿಕಿರಿ ಮಾತಿನಲ್ಲಿ ಹೇಳಲು ಸಾಧ್ಯವಿಲ್ಲ. ಇನ್ನು ಮುಖ್ಯವಾಗಿ ಕಾರಿನ ಮಾಲೀಕರು ಒಮ್ಮೊಮ್ಮೆ ಕಾರಿನಲ್ಲೇ ಕೀ ಮರೆತುಬಿಡುತ್ತಾರೆ.
ಭರಚುಕ್ಕಿ ಎಂದರೆ ಎಲ್ಲರಿಗು ಇಷ್ಟವಾದ ಜಾಗ ಎನ್ನಬಹುದು ಯಾಕೆಂದರೆ ಇಲ್ಲಿನ ಸೊಬಗು ನೋಡಲುತುಂಬಾ ಆಕರ್ಷಕವಾಗಿರುತ್ತದೆ ಮತ್ತು ಎತ್ತರದಿಂದ ಹರಿಯುವ ನೀರನ್ನು ನೋಡಲು ಜನರು ಸಾಕಷ್ಟು ದೂರದಿಂದ ಬರುತ್ತಾರೆ. ಈ ಸೊಬಗನ್ನು ಧಾರೆಯೆರೆಯುತ್ತಿದ್ದ ಭರಚುಕ್ಕಿ ಈಗ ಮತ್ತಷ್ಟು ರೋಮಾಂಚಕ ಅನುಭವ ನೀಡಲು ಸಜ್ಜಾಗುತ್ತಿದೆ. ಗಡಿಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲ ತಾಲೂಕಿನಲ್ಲಿರುವ ಶಿವನಸಮುದ್ರ ಬಳಿಯ ಭರಚುಕ್ಕಿ ಜಲಪಾತವಿಶ್ವದ ಗಮನ ಸೆಳೆಯಲು ಅಣಿಯಾಗುತ್ತಿದೆ.ಶೀಘ್ರದಲ್ಲೇ ಇಲ್ಲಿ ಪ್ರವಾಸಿ ಆಕರ್ಷಣೆಯೊಂದು ಸೇರ್ಪಡೆಗೊಳ್ಳಲಿದ್ದು, ರಾಜ್ಯ ಅರಣ್ಯ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಜತೆಗೂಡಿ ಭರಚುಕ್ಕಿ ಬಯೋಡೈವರ್ಸಿಟಿ ಪಾರ್ಕ್…
ಭಾರತದ ಅತೀ ದೊಡ್ಡ ಹನುಮಂತನಿಗೆ ಭರ್ಜರಿ ಸ್ವಾಗತ ಮಾಡಿ, ಬೀಳ್ಕೊಟ್ಟ ಸೂಲಿಬೆಲೆ ಗ್ರಾಮಸ್ತರು. ಹೌದು, ಭಾರತದ ಅತೀ ಎತ್ತರದ, 62 ಅಡೀ ಇರುವ ಹನುಮನ ಏಕಶಿಲಾವಿಗ್ರಹವನ್ನು ಕೋಲಾರದಿಂದ ಬೆಂಗಳೂರಿಗೆ ಸಾಗಿಸುತ್ತಿರುವ ವಿಚಾರ ಎಲ್ಲರಿಗೂ ಗೊತ್ತಿರುವಂತದ್ದೆ. ಹನುಮನಿಗೆ ಅಭೂತಪೂರ್ವ ಸ್ವಾಗತ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸಾಗಿಸಲಾಗುತ್ತಿದೆ. ಮಾರ್ಗ ಮಧ್ಯ ತೊಂದರೆಯಾದರೂ, ಆ…