ಸುದ್ದಿ

ಎಲ್‌ಪಿಜಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸಲು ಎಲ್‌ಪಿಜಿ ಡೀಲರ್ಬಳಿಯೇ ಹೋಗುತ್ತಿದ್ದಿರಾ ;ಇನ್ಮುಂದೆ ಆನ್‌ಲೈನ್ ಮೂಲಕವೂ ಅರ್ಜಿ ಸಲ್ಲಿಸಬಹುದು,ಇಲ್ಲಿದೆ ನೋಡಿ ಮಾಹಿತಿ,.!!

72

ಎಲ್‌ಪಿಜಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸಲು ಎಲ್‌ಪಿಜಿ ಡೀಲರ್ಬಳಿಯೇ ಹೋಗಬೇಕೆಂದೇನಿಲ್ಲ. ಆನ್‌ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು. ಜತೆಗೆ ಈ ಪ್ರಕ್ರಿಯೆಯನ್ನುಪೂರ್ತಿಯಾಗಿ ಡಿಜಿಟಲೀಕರಣ ಮಾಡಿರುವುದರಿಂದ, ಅಗತ್ಯವಿರುವವರು ಪ್ರಯೋಜನ ಪಡೆದುಕೊಳ್ಳಬಹುದು. ಅಲ್ಲದೆಡೀಲರ್ ಬಳಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸುವುದು ಕಿರಿಕಿರಿ ಪ್ರಕ್ರಿಯೆ ಎನ್ನಿಸಿದರೆ, ಆನ್‌ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು.

ದೇಶದ ಪ್ರಮುಖ 3 ಎಲ್‌ಪಿಜಿ ಪೂರೈಕೆದಾರ ಕಂಪನಿಗಳ ವೆಬ್‌ಸೈಟ್ ಮೂಲಕ ಹೊಸ ಎಲ್‌ಪಿಜಿ ಸಂಪರ್ಕಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ. ಜತೆಗೆ ಪ್ರತಿ ಕಂಪನಿಗಳು ಕೂಡ ಪ್ರತ್ಯೇಕ ಆ್ಯಪ್‌ ಹೊಂದಿದ್ದು, ಅದರ ಮೂಲಕವೂ ಹೊಸ ಸಂಪರ್ಕಕ್ಕೆ ಅರ್ಜಿ, ರಿಫಿಲ್ ಬುಕಿಂಗ್, ಇತರ ಸಂಬಂಧಿತ ಸೇವೆಗಳನ್ನು ಬಳಸಬಹುದು.

ಹೊಸ ಎಲ್‌ಪಿಜಿ ಸಂಪರ್ಕಕ್ಕೆಅರ್ಜಿ ಸಲ್ಲಿಸಲು ಈ ವಿಧಾನ ಅನುಸರಿಸಿ;
.ನಿಮ್ಮ ಆಯ್ಕೆಯ ಎಲ್‌ಪಿಜಿಪೂರೈಕೆದಾರರನ್ನು ಆರಿಸಿಕೊಳ್ಳಿ
ಎಚ್‌ಪಿ ಗ್ಯಾಸ್:https://myhpgas.in/myHPGas/NewConsumerRegistration.aspx
ಭಾರತ್ ಗ್ಯಾಸ್:https://my.ebharatgas.com/LPGServices/ApplyNewConnection
ಇಂಡೇನ್ ಗ್ಯಾಸ್:https://cx.indianoil.in/webcenter/portal/Customer

ಮೇಲಿನ ಲಿಂಕ್ ತೆರೆದ ಬಳಿಕ, ನಿಮ್ಮ ಸಮೀಪದ ಎಲ್‌ಪಿಜಿ ಡೀಲರ್ ಅನ್ನು ಹುಡುಕಿ, ಅಲ್ಲಿ ಸರ್ಚ್ ಆಯ್ಕೆಯಿದೆ. ನಿಮಗೆ ಈಗಾಗಲೇ ಡೀಲರ್ ಗೊತ್ತಿದ್ದರೆ, ಅಲ್ಲಿ ನಮೂದಿಸಬಹುದು. ಬಳಿಕ, ನಿಮ್ಮ ಸಮೀಪದ ಡೀಲರ್ ಆಯ್ಕೆ ಮಾಡಿ. ಎಲ್‌ಪಿಜಿ ಸಿಲಿಂಡರ್ ಡೆಲಿವರಿಗೆ ಏರಿಯಾ ಮಿತಿ ಇರುವುದರಿಂದ, ಸಮೀಪದ ಡೀಲರ್ ಆಯ್ಕೆ ಸೂಕ್ತ. ಬಳಿಕ, ಅಲ್ಲಿರುವ ಫಾರ್ಮ್‌ನಲ್ಲಿ ನಿಮ್ಮ ವಿವರ, ವಿಳಾಸ, ಸಬ್ಸಿಡಿ ನಗದು ವರ್ಗಾವಣೆ-ಬ್ಯಾಂಕ್ ವಿವರ, ಎಷ್ಟು ಸಿಲಿಂಡರ್ ಮತ್ತು ಯಾವ ವಿಧ, ಸಿಲಿಂಡರ್ ಸಾಮರ್ಥ್ಯ ಎನ್ನುವುದನ್ನು ಎಂಟರ್ ಮಾಡಿ. ಬಳಿಕ ನಿಮ್ಮ ಐಡೆಂಟಿಟಿ ಹಾಗೂ ವಿಳಾಸದ ದೃಢೀಕರಣವನ್ನು ಆಯ್ಕೆ ಮಾಡಿ.

ಪಾಸ್‌ಪೋರ್ಟ್ ಸೈಜ್‌ನ ಫೋಟೋ ಮತ್ತು ವಿಳಾಸದ ದೃಢೀಕರಣಕ್ಕೆ ಸಂಬಂಧಿಸಿದ ಡಾಕ್ಯುಮೆಂಟ್ ಅಪ್‌ಲೋಡ್ ಮಾಡಿ. ಬಳಿಕ ಅಲ್ಲಿ ನೀಡಿರುವ ನಿಬಂಧನೆಗಳನ್ನು ಓದಿ, ಸಬ್‌ಮಿಟ್ ಕೊಡಿ. ಅದಾದ ನಂತರ, ನಿಮ್ಮನ್ನು ಪಾವತಿ ಪೇಜ್‌ಗೆ ಕರೆದೊಯ್ಯುತ್ತದೆ. ಅಲ್ಲಿ, ನೆಟ್‌ ಬ್ಯಾಂಕಿಂಗ್, ಡೆಬಿಟ್ ಕಾರ್ಡ್‌, ಕ್ರೆಡಿಟ್ ಕಾರ್ಡ್‌ ಅಥವಾ ಕ್ಯಾಶ್ ಆನ್ ಡೆಲಿವರಿ ಆಯ್ಕೆ ಬಳಸಬಹುದು. ಅದಾದ ಬಳಿಕ, ನಿಮಗೆ ರೆಫರೆನ್ಸ್ ನಂಬರ್ ಒಂದು ದೊರೆಯುತ್ತದೆ. ನಿಮ್ಮ ಮೊಬೈಲ್ ಮತ್ತು ಇ ಮೇಲ್‌ಗೆ ಅರ್ಜಿ ಸಲ್ಲಿಸಿದ ದೃಢೀಕರಣ ಬರುತ್ತದೆ. ರೆಫರೆನ್ಸ್ ನಂಬರ್ ಉಪಯೋಗಿಸಿ, ನಿಮ್ಮ ಬುಕಿಂಗ್ ಸ್ಥಿತಿಗತಿ, ಸಿಲಿಂಡರ್ ಡೆಲಿವರಿ ದಿನಾಂಕವನ್ನು ತಿಳಿದುಕೊಳ್ಳಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ತಂತ್ರಜ್ಞಾನ

    ನೆಲದ ಮೇಲೆ ಹಾಗೊ ಆಕಾಶದಲ್ಲಿ ಹಾರುವ ಕಾರು..!ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ …

    ಒಂದೆಡೆ ಹಲವಾರು ರೋಗಗಳಿಗೆ ಹೊಸ ಹೊಸ ಮದ್ದುಗಳನ್ನು ಕಂಡುಹಿಡಿಯಲಾಗುತ್ತಿದ್ದರೆ ಮತ್ತೊಂದೆಡೆ ನೆಲದಲ್ಲಿ ಎದುರಾಗಲಿರುವ ಜಾಗದ ಕೊರತೆಯನ್ನು ನೀಗಿಸಲು ಬಾನಂಚಿನಲ್ಲಿ ಬೇರೆ ನೆಲೆಗಳನ್ನು ಹುಡುಕುವಂತ ಕೆಲಸಗಳು ನಡೆಯುತ್ತಿವೆ.

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ,ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(10 ಡಿಸೆಂಬರ್, 2018) ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ. ಕೆಲವರಿಗೆ ಕುಟುಂಬದಲ್ಲಿಒಂದು ಹೊಸ ಆಗಮನ ಸಂಭ್ರಮಾಚರಣೆ…

  • ಸೌಂದರ್ಯ

    ಮೆಂತೆ ಕಾಳು ಬಳಸಿ ನಿಮ್ಮ ‘ಸೌಂದರ್ಯವನ್ನು’ ಹೆಚ್ಚಿಸಿಕೊಳ್ಳಿ

    ಎಲ್ಲರಿಗೂ ತಿಳಿದಿರುವ ಹಾಗೆ ಮೆಂತೆ ಕಾಳು ವಿವಿಧ ಔಷಧೀಯ ಗುಣಗಳನ್ನು ಹೊಂದಿದೆ. ಇದನ್ನ ಆಹಾರದಲ್ಲಿ ಉಪಯೋಗಿಸಿದಷ್ಟು ದೇಹಕ್ಕೆ ಒಳ್ಳೆಯದು. ಈ ಮೆಂತೆ ಕಾಳು ಔಷಧೀಯ ಗುಣಗಳ ಜೊತೆಗೆ ಸೌಂದರ್ಯವರ್ಧಕವಾಗಿಯೂ ಕೆಲಸ ಮಾಡುತ್ತದೆ. ಯಾವುದೋ ಕೆಮಿಕಲ್ ಇರುವ ಕ್ರೀಮ್ ಹಚ್ಚುವ ಬದಲು, ನಿಮ್ಮ ಮನೆಯಲ್ಲೇ ಇರುವ ಮೆಂತೆ ಕಾಳುಗಳಿಂದ ನಿಮ್ಮ ಮುಖದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. 50 ಗ್ರಾಂ ಮೆಂತೆ ಕಾಳನ್ನು ರಾತ್ರಿ ನೆನಸಿಡಿ. ಬೆಳಗ್ಗೆ ಎದ್ದು ಅದರಲ್ಲಿನ ನೀರನ್ನ ತೆಗೆಯಿರಿ. ಆದ್ರೆ ಆ ನೀರನ್ನು ಚೆಲ್ಲಬಾರದು. ಈ ಮೆಂತೆ…

  • corona

    ಕೋಲಾರ ಜಿಲ್ಲೆ ಯಲ್ಲಿ ಕೊರೋನ ಹೆಚ್ಚಳ

    ಕೊರೋನ ದೇಶದಲ್ಲಿ ರಾಜ್ಯದಲ್ಲಿ ಹೆಚ್ಚಳದಿಂದಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಕರ್ನಾಟಕದ ಆರೋಗ್ಯ ಸಚಿವ ಸುಧಾಕರ್ ಅವರು ತಿಳಿಸಿದ್ದಾರೆ. ಸಕ್ರೀಯ ಪ್ರಕರಣಗಳು ಹೆಚ್ಚುತ್ತಿವೆ.ದಿನದಿಂದ ದಿನಕ್ಕೆ ಸರಾಸರಿ ಒಂದು ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು ರಾಜ್ಯವ್ಯಾಪಿ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗಿದೆ.ಆದರಂತೆ ಜಿಲ್ಲಾವಾರು ಪ್ರಕರಣಗಳು ಹೆಚ್ಚುತ್ತಿವೆ.ಕೋಲಾರ ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣ ಏರುಮುಖವಾಗಿದೆ.ಇಪ್ಪತ್ತರ ಆಸುಪಾಸಿನಲ್ಲಿದ್ದ ಪ್ರಕರಣಗಳು ಈಗ 75 ಸಕ್ರಿಯ ಪ್ರಕರಣ ದಾಖಲಾಗಿದೆ. ತಾಲ್ಲೂಕುವಾರು ಸಕ್ರಿಯ ಪ್ರಕರಣಗಳು ಇಂತಿದೆ. ಕೋಲಾರ 5, ಮಾಲೂರು 13, ಬಂಗಾರಪೇಟೆ 13, ಕೆಜಿಎಫ್…

    Loading

  • ಸಿನಿಮಾ

    ಮುಂಬೈನ ರಸ್ತೆ ರಸ್ತೆಗಳಲ್ಲಿ ಕನ್ನಡದ KGF ಹವಾ..!

    ಈಗ ಕರ್ನಾಟಕ ಸೇರಿದಂತೆ ಭಾರತದ ಮೂಲೆ ಮೂಲೆಯಲ್ಲೂ ಕೆಜಿಎಫ್ ಸಿನಿಮಾದ್ದೇ ಸೌಂಡ್. ಇದೀಗ ಮುಂಬೈನಲ್ಲೂ ರಾಕಿ ಭಾಯ್ ಹವಾ ಶುರುವಾಗಿದೆ. ಕೆಜಿಎಫ್ ಹಿಂದಿ ಅವತರಣಿಕೆ ಸಿನಿಮಾ ಮಹಾರಾಷ್ಟ್ರ ಸೇರಿದಂತೆ ಉತ್ತರ ಭಾರತದ ಹಲವಾರು ಚಿತ್ರಮಂದಿರಗಳಲ್ಲಿ ಇದೇ ತಿಂಗಳು 21 ರಂದು ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಸದ್ಯ ಹಿಂದಿ ಪ್ರಮೋಷನ್ ಕೂಡ ಭರದಿಂದ ಸಾಗುತ್ತಿದ್ದು, ಮುಂಬೈನ ಪ್ರಮುಖ ಸ್ಥಳಗಳಲ್ಲಿ ಯಶ್, ಪೋಸ್ಟರ್ಸ್ ಗಳು ರಾರಾಜಿಸುತ್ತಿವೆ. ಕನ್ನಡದಲ್ಲಿ ಜೋಕೆ ನಾನು ಬಳ್ಳಿಯ ಮಿಂಚು ಹಾಡನ್ನು ಕೆಜಿಎಫ್ ಚಿತ್ರಕ್ಕಾಗಿ ರಿಕ್ರಿಯೇಟ್…

  • ಸುದ್ದಿ

    ಇಷ್ಟುದಿನ ಸಗಣಿಗೆ ಮಾತ್ರ ಬೇಡಿಕೆ ಇತ್ತು ಆದರೆ ಈಗ ನಾಯಿ ಮಲಕ್ಕೂ ಬಂತು ಬೇಡಿಕೆ! ಏನ್ ಕಾಲ ಬಂತು ಗುರು..,

    ಇತ್ತೀಚಿನ ದಿನಗಳಲ್ಲಿ ಗೋವುಗಳನ್ನು ಸಾಕುವ ಜಮಾನ ಕಡಿಮೆಯಾಗುತ್ತಾ ಬರುತ್ತಿದೆ. ಹೀಗಾಗಿ ಕೃಷಿಗೆ ಬೇಕಾದ ಗೊಬ್ಬರಕ್ಕಾಗಿ ಜನ ಅಲೆದಾಡುತ್ತಾರೆ. ಸಗಣಿಯನ್ನು ರಸಗೊಬ್ಬರವಾಗಿ ಕೃಷಿಗಳಿಗೆ ಬಳಸುವುದರಿಂದ ಸದ್ಯ ಇದಕ್ಕೆ ಬೇಡಿಕೆ ಇದೆ. ಇದರಂತೆಯೇ ಇದೀಗ ನಾಯಿಗಳ ಮಲಕ್ಕೂ ಬೇಡಿಕೆಯಿದೆ. ಹೌದು. ಪಿಲಿಫೈನ್ಸ್ ಶಾಲೆಯೊಂದರ ವಿದ್ಯಾರ್ಥಿಗಳು ಹೊಸ ಆವಿಷ್ಕಾರವೊಂದನ್ನು ಮಾಡಿದ್ದು, ಅದರಲ್ಲಿ ನಾಯಿಗಳ ಮಲದಿಂದಲೂ ಉಪಯೋಗವಿದೆ ಎಂಬುದನ್ನು ಸಾಬೀತುಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ನಾಯಿಗಳ ಮಲಕ್ಕೂ ಹೆಚ್ಚಿನ ಬೇಡಿಕೆ ಬರಬಹುದಾದ ಸಾಧ್ಯತೆಗಳಿವೆ. ಸಿಮೆಂಟ್ ನೊಂದಿಗೆ ನಾಯಿ ಮಲವನ್ನು ಮಿಕ್ಸ್ ಮಾಡಿ ಇಟ್ಟಿಗೆ…