ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು. ಉತ್ತರ ಪ್ರದೇಶ ರಾಜ್ಯದ ಆಗ್ರಾ-ಜೈಪುರ ಹೆದ್ದಾರಿಯ ಆಗ್ರಾದಿಂದ 30 ಕಿಲೋ ಮೀಟರ್ ದೂರದಲ್ಲಿರುವ ಅಚ್ನೇರಾ ಬ್ಲಾಕ್ನ ಕುರಾಲಿ ತೆಹ್ಸಿಲ್ಯಲ್ಲಿನ ಚಹ್ ಪೋಕರ್ ಎಂಬ ಗ್ರಾಮದಲ್ಲಿ ಸುಮಾರು 50 ಮುಸ್ಲಿಂ ಕುಟುಂಬಗಳಿವೆ. ಅವರೆಲ್ಲರೂ ತಮ್ಮ ಕುಟುಂಬಸ್ಥರು ಯಾರದರೂ ಸತ್ತರೆ ಅವರನ್ನು ತಮ್ಮ ಮನೆಯಲ್ಲಿಯೆ ಸಮಾಧಿ ಮಾಡುವುದನ್ನು ರೂಡಿಸಿಕೊಂಡು ಬಂದಿದ್ದಾರಂತೆ. ಇದು ಯಾವುದೇ ಪದ್ಧತಿಯಲ್ಲ, ಬಲವಂತ ಎನ್ನುತ್ತಾರೆ ಗ್ರಾಮಸ್ಥರು.

ಗ್ರಾಮದಲ್ಲಿರುವ 50 ಮುಸ್ಲಿಂ ಮನೆಗಳಲ್ಲಿ ಸುಮಾರು 300 ಜನಸಂಖ್ಯೆ ಹೊಂದಿದೆ. ಆದರೆ ಅವರಿಗೆ ಖಾಯಂ ಸ್ಮಶಾನ ಭೂಮಿ ಇಲ್ಲ. ಸ್ಮಶಾನ ಭೂಮಿಯ ಕೊರತೆಯಿರುವುದರಿಂದ ಯಾರೇ ಸತ್ತರೂ ಕುಟುಂಬದವರು ಅವರನ್ನು ಅವರ ಮನೆಯಲ್ಲಿಯೇ ಸಮಾಧಿ ಮಾಡುತ್ತಾರೆ. ಇಲ್ಲಿರುವ ಬಹುಪಾಲು ಮುಸ್ಲಿಮರು ಸ್ವಂತ ಭೂಮಿ ಇರದ ಕೂಲಿ ಕೆಲಸ ಮಾಡುವ ಕಡುಬಡವರು. ತಮ್ಮದೇ ಭೂಮಿ ಅಥವಾ ಜಮೀನು ಹೊಂದಿರುವವರು ತಮ್ಮ ಜಮೀನಿನಲ್ಲಿ ಸಮಾಧಿ ಮಾಡಬಹುದು.

ಮಾಧ್ಯಮಗಳೊಂದಿಗೆ ಮಾತನಾಡಿದ ರಿಂಕಿ ಬೇಗಂ, ವಿಪರೀತ ಜ್ವರದಿಂದ ಸತ್ತ ನನ್ನ 10 ತಿಂಗಳ ಮಗುವಿನಿಂದ ಹಿಡಿದು ನಮ್ಮ ಕುಟುಂಬದ ಐವರನ್ನು ನಾವು ಹಿತ್ತಲಿನಲ್ಲಿ ಸಮಾಧಿಮಾಡಿದ್ದೇವೆ ಎಂದರು.
ಗುಡ್ಡಿ ಎಂಬವರ ಮಾತನಾಡಿ, ನಮ್ಮಂತಹ ಬಡವರಿಗೆ ಸಾವಿಗೆ ಬೆಲೆಯಿಲ್ಲ. ಮನೆಯಲ್ಲಿ ಜಾಗದ ಕೊರತೆಯಿಂದ ಸತ್ತವರ ಸಮಾಧಿ ಮೇಲೆಯೇ ದಿನನಿತ್ಯ ಓಡಾಡುತ್ತೇವೆ ಹಾಗೂ ಅದರ ಮೇಲೆ ಕೂರುತ್ತೇವೆ ಎಂದು ಹೇಳುತ್ತಾರೆ.

ಅಡುಗೆ ಕೋಣೆಗಳಲ್ಲಿ, ಕೊಠಡಿಗಳಲ್ಲಿ, ಅಂಗಳದಲ್ಲಿ, ಮನೆಯ ಇಕ್ಕೆಲಗಳಲ್ಲಿ ಹಾಗೂ ಹಿತ್ತಲಿನಲ್ಲಿ ನಿರ್ಮಿಸಿರುವ ಸಮಾಧಿಗಳಲ್ಲಿ ಶವಗಳು ಕೊಳೆಯುವಾಗ ಉಂಟಾಗುವ ದುರ್ವಾಸನೆ ಹಾಗೂ ಮಾಲಿನ್ಯತೆಯನ್ನು ಸಹಿಸಿಕೊಳ್ಳಲೇಬೇಕಾಗುತ್ತದೆ. ಜೊತೆಗೆ ಇದರಿಂದ ಮಾನಸಿಕ ಆಘಾತಗಳು ಕೂಡ ಕಾಡುತ್ತವೆ. ಪಕ್ಕದ ಊರಿನ ಮುಸ್ಲಿಂರು ಈ ಗ್ರಾಮಕ್ಕೆ ಕಾಲಿಡುವುದನ್ನೆ ಬಿಟ್ಟಿದ್ದಾರೆ. ಮಳೆಗಾಲದಲ್ಲಿ ಈ ಸಮಾಧಿಯಲ್ಲಿನ ಅವಶೇಷಗಳು ಹೊರಬರುವ ಸಾಧ್ಯತೆಗಳೂ ಇರುತ್ತವೆ.ಮುನೀಮ್ ಖಾನ್ ಮಾತನಾಡಿ, ನಮ್ಮ ಪೂರ್ವಜರಿಗಾಗಿ ಸ್ವಲ್ಪ ಜಾಗ ಕೊಡಿ ಎಂದು ನಾವು ಕೇಳಿಕೊಂಡಿದ್ದೇವೆ. ಹಿಂದುಗಳಿಗೆ ಸ್ಮಶಾನ ಜಾಗವಿದೆ ಆದರೆ ನಾವು ಸಮಾಧಿಯೊಂದಿಗೆ ವಾಸಿಸುತ್ತಿದ್ದೇವೆ ಎನ್ನುತ್ತಾರೆ.
ಈ ಹಿಂದೆ ಹಳ್ಳಿಗರ ಸಮಾಧಿಗಾಗಿ ಕೆರೆ ಇರುವ ಸ್ಥಳವನ್ನು ಆಡಳಿತ ಮಂಡಳಿ ನೀಡಿತ್ತು. ಆದರೆ ಆ ಕೆರೆಯನ್ನು ತೆರವುಗೊಳಿಸಿ ಅಲ್ಲಿ ಸಮಾಧಿಗೆ ಭೂಮಿಯನ್ನು ಸಿದ್ಧಪಡಿಸುವುದು ದುಬರಿ ಕೆಲಸವಾದುದರಿಂದ ಹೊಸ ಜಾಗವನ್ನು ಗುರುತಿಸುವುದಾಗಿ ಸರ್ಕಾರ ಹೇಳಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸಿಗೆ ಮೋಸ ಮಾಡಲು ಹೋಗಿ ಭೂಮಿ ಶೆಟ್ಟಿ ಅವರು ಸಿಕ್ಕಿಬಿದ್ದಿದ್ದಾರೆ.. ಹೌದು ಈ ವಾರ ಲಕ್ಸುರಿ ಬಡ್ಜೆಟ್ ಗಾಗಿ ಕಳ್ಳ ಪೊಲೀಸ್ ಟಾಸ್ಕ್ ಒಂದನ್ನು ನೀಡಲಾಗಿತ್ತು.. ಅದರಂತೆ ಶೈನ್ ರಾಜು ತಾಳಿಕೋಟೆ ಚಂದನ್ ಪ್ರಿಯಾಂಕ ಪೊಲೀಸರಾದರೆ ಇತ್ತ ವಾಸುಕಿ ದೀಪಿಕಾ ಕುರಿ ಕಳ್ಳರಾಗಿದ್ದರು. ಸುಜಾತ ಪತ್ರಕರ್ತೆಯಾಗಿ ಕಾಣಿಸಿಕೊಂಡರು.. ಇನ್ನುಳಿದಂತೆ ಭೂಮಿ ಪೃಥ್ವಿ ಕಿಶನ್ ಚಂದನ ಹರೀಶ್ ರಾಜ್ ಜನ ಸಾಮಾನ್ಯರಾಗಿದ್ದರು. ಆದರೆ ಜನಸಾಮಾನ್ಯರ ನಡುವೆ ಇದ್ದ ಕಳ್ಳರು ಯಾರೆಂದು ಉಳಿದವರಿಗೆ ತಿಳಿದಿರಲಿಲ್ಲ. ಕಿತ್ತಾಟ ಕಿರುಚಾಟ ಹಾಗೂ…
ರಾಕಿಂಗ್ ಸ್ಟಾರ್ ಯಶ್ ಕುಟುಂಬ ನ್ಯಾಯಾಲಯದ ಆದೇಶದಂತೆ ಬೆಂಗಳೂರಿನ ಬನಶಂಕರಿಯ ಕತ್ರಿಗುಪ್ಪೆಯಲ್ಲಿರುವ ಬಾಡಿಗೆ ಮನೆಯನ್ನು ಮಾರ್ಚ್ 31ರೊಳಗೆ ಖಾಲಿ ಮಾಡಬೇಕಾಗಿತ್ತು. ಆದರೆ ಇದೀಗ ಯಶ್ ಅವರ ತಾಯಿ ಪುಷ್ಪಾ, ಇನ್ನೂ ಆರು ತಿಂಗಳ ಕಾಲ ಇದೇ ಮನೆಯಲ್ಲಿ ನೆಲೆಸಲು ಅವಕಾಶ ಮಾಡಿಕೊಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಕುಟುಂಬ ಹಾಸನದಲ್ಲಿ ನೆಲೆಸಲು ನಿರ್ಧರಿಸಿದ್ದು, ಅಲ್ಲಿ ಈಗಾಗಲೇ ಮನೆ ನಿರ್ಮಾಣ ಕಾರ್ಯ ಆರಂಭವಾಗಿದೆ. ಇನ್ನು 6 ತಿಂಗಳೊಳಗಾಗಿ ಈ ಕಾರ್ಯ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ತಮಗೆ ಈಗ ವಾಸಿಸುತ್ತಿರುವ…
ಜನರ ತೆರಿಗೆ ಹೊರೆ ತಪ್ಪಿಸಲು ಗ್ರಾಹಕರ ಉತ್ಪನ್ನಗಳು ಹಾಗೂ ದಿನ ಬಳಕೆ ವಸ್ತುಗಳ ಮೇಲಿನ ಸರಕುಗಳು ಮತ್ತು ಸೇವೆಗಳ ತೆರಿಗೆ (ಜಿಎಸ್ಟ) ಕಡಿಮೆ ಮಾಡಿರುವ ಕೇಂದ್ರ ಸರ್ಕಾರ ಈಗ ವಾಷಿಂಗ್ಮೆಷಿನ್, ಫ್ರಿಜ್ನಂಥ ಗೃಹೋಪಯೋಗಿ ಸಾಧನಗಳ ಸುಂಕ ಕಡಿಮೆ ಮಾಡಲು ಚಿಂತನೆ ನಡೆಸಿದೆ.
ನೀವೇನಾದರೂ ಹೊಸ ಬೈಕ್ ಖರೀದಿಸಲು ಯೋಜನೆ ಹಾಕಿಕೊಂಡರೆ, ವಿನ್ಯಾಸ ಅಥವಾ ಕಾರ್ಯಕ್ಷಮತೆಯ ಜೊತೆಗೆ ವಾಹನದ ಬೆಲೆಯ ಕಡೆ ನಿಮ್ಮಗೂ ನೀವು ಗಮನಹರಿಸುತ್ತೀರಿ. ಈ ಎಲ್ಲಾ ಲಕ್ಷಣಗಳನ್ನು ಪಡೆದ ಟಾಪ್ 5 ಬೈಕುಗಳ ಬಗ್ಗೆ ಮಾಹಿತಿ ಇಲ್ಲಿದೆ.
ಭಟ್ಕಳ: ಪಾಲಕರಾದವರು ತಮ್ಮ ಮಕ್ಕಳಿಗೆ ಶಿಕ್ಷಣ ಒಂದರಲ್ಲಿಯೇ ಒತ್ತಡ ಹಾಕದೆ ಕ್ರೀಡೆ, ಸಾಂಸ್ಕೃತಿ ಹಾಗು ಎಲ್ಲಾ ರಂಗದಲ್ಲಿಯೂ ಕೂಡ ಹೆಚ್ಚು ಪ್ರೋತ್ಸಾಹ ನೀಡಿ ಸಮಾಜದಲ್ಲಿ ಉನ್ನತ ಮಟ್ಟಕ್ಕೆ ಹೋಗುವಂತೆ ಮಾಡಬೇಕು ಎಂದು ಶಾಸಕ ಸುನೀಲ ನಾಯ್ಕ ಹೇಳಿದರು. ಅವರು ಗುರುವಾರದಂದು ಸರಕಾರಿ ಪ್ರೌಢಶಾಲೆ ಸೋನಾರಕೇರಿಯಲ್ಲಿ ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಭಟ್ಕಳ ಹಾಗೂ ಸರಕಾರಿ ಪ್ರೌಢಶಾಲೆ ಸೋನಾರಕೇರಿ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕ ಮಟ್ಟದ…
ಅಂತರ್ಜಾಲ ಬಳಕೆ ಹೆಚ್ಚಾದಂತೆ ಸಾಮಾಜಿಕ ಜಾಲತಾಣಗಳ ಬಳಕೆ ಕೂಡ ಜಾಸ್ತಿಯಾಗಿದೆ. ಜನಪ್ರಿಯ ಜಾಲತಾಣವಾಗಿರುವ ವಾಟ್ಸಾಪ್ ಡಿಸೆಂಬರ್ 31 ರಿಂದ ಕೆಲವು ಸ್ಮಾರ್ಟ್ ಫೋನ್ ಗಳಲ್ಲಿ ಕಾರ್ಯ ನಿರ್ವಹಿಸುವುದನ್ನು ಸ್ಥಗಿತಗೊಳಿಸಲಿದೆ.