ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅವನು ಕರ್ಣ. ಆತ ಕುಂತಿಯ ಮೊದಲ ಮಗ. ಪಾಂಡವರ ಹಿರಿಯಣ್ಣ. ಪರಶುರಾಮರ ಮೆಚ್ಚಿನ ಶಿಷ್ಯ. ದುರ್ಯೋಧನನ ಆಪ್ತಮಿತ್ರ. ಅರ್ಜುನನ ಪರಮಶತ್ರು. ಅವನು, ಭೀಷ್ಮರ ಕಣ್ಣಲ್ಲಿ ಸಿಡಿಮಿಡಿ ಉಂಟುಮಾಡುವ ಆಸಾಮಿ. ಭೀಮನ ಪಾಲಿಗೊಂದು ಅಸೂಯೆ. ಕರ್ಣನೆಂದರೆ ಅಷ್ಟೇ ಅಲ್ಲ. ಆತ, ದ್ರೌಪದಿಯಂಥ ದ್ರೌಪದಿಯ ಎದೆಯಲ್ಲೂ ಆಸೆಯ ತರಂಗ ಎಬ್ಬಿಸಿದ ಸುಂದರಾಂಗ. ಕೊಡುಗೈ ದೊರೆ. ಅಂಗರಾಜ, ಹುಟ್ಟಿನಿಂದ ಕ್ಷತ್ರಿಯನಾಗಿದ್ದರೂ, ಎಲ್ಲರಿಂದಲೂ ಸೂತಪುತ್ರ ಎಂದು ಕರೆಸಿಕೊಂಡ ನತದೃಷ್ಟ ಮತ್ತು ಮಹಾಭಾರತದ ದುರಂತ ನಾಯಕ! ಕುಂತಿ-ಸೂರ್ಯದೇವನ ಸಮಾಗಮದ ಕಾರಣಕ್ಕೆ ಹುಟ್ಟಿದವನು ಕರ್ಣ. ಮಗನ ಮೇಲಿನ ಮಮತೆಯಿಂದ ಅವನು ಕವಚ ಕುಂಡಲಗಳೊಂದಿಗೇ ಜನಿಸುವಂತೆ ನೋಡಿಕೊಂಡ ಸೂರ್ಯದೇವ.
ಮುಂದೆ, ಅಪವಾದಕ್ಕೆ ಹೆದರಿದ ಕುಂತಿ, ಆಗ ತಾನೆ ಹುಟ್ಟಿದ ಮಗುವನ್ನು ನದಿಯಲ್ಲಿ ತೇಲಿ ಬಿಡುವುದು, ಹಾಗೆ ತೇಲಿ ಹೋದ ಮಗು ರಾಧಾ-ಅದಿರಥ ಎಂಬ ಬೆಸ್ತ ದಂಪತಿಗೆ ಸಿಗುವುದು; ಅವರಿಬ್ಬರೂ ಈತನನ್ನು ಸಾಕುವುದು ಮತ್ತು ಅದೇ ಕಾರಣಕ್ಕೆ ಸೂತಪುತ್ರ ಎಂಬ ಹೀಯಾಳಿಕೆಯಂಥ ಮಾತಿಗೆ ಕರ್ಣ ಪದೇಪದೇ ಈಡಾಗುವುದು. ಈ ಕಥೆ ಎಲ್ಲರಿಗೂ ಗೊತ್ತು. ಅಷ್ಟೇ ಅಲ್ಲ, ಬಿಲ್ವಿದ್ಯೆ ಕಲಿಯಬೇಕೆಂಬ ಮಹದಾಸೆಯಿಂದ ತಾನು ಬ್ರಾಹ್ಮಣ ಕುಮಾರ ಎಂದು ಹೇಳಿಕೊಂಡು ಪರಶುರಾಮರ ಬಳಿ ಹೋಗುವುದು, ವಿದ್ಯೆ ಕಲಿಯುವುದು, ಅವರ ಮೆಚ್ಚಿನ ಶಿಷ್ಯನಾಗುವುದು ಹಾಗೂ ಕಡೆಗೊಮ್ಮೆ ಅನಿವಾರ್ಯ ಸಂದರ್ಭದಲ್ಲಿ ಬಾಣ ಪ್ರಯೋಗದ ಮಂತ್ರವೇ ನೆನಪಿಗೆ ಬಾರದಿರಲಿ’ ಎಂಬ ಶಾಪಕ್ಕೆ ಗುರಿಯಾಗುವುದು.

ಕೊನೆಗೆ ಮಹಾಭಾರತ ಯುದ್ಧದ ಸಮಯದಲ್ಲಿ ಪರಶುರಾಮನ ಶಾಪದ ಕಾರಣ ತನ್ನ ವಿದ್ಯೆ ಮರೆತುಹೋಗಿ ರಥ ಮಣ್ಣಿನಲ್ಲಿ ಹೂತಿದ್ದಾಗ ಅರ್ಜುನನ ಬಾಣದಿಂದ ಸಾಯುತ್ತಾನೆ. ಕರ್ಣ ಪರಾಕ್ರಮಿ ಎಂದು ಕೃಷ್ಣನಿಗೆ ತಿಳಿದಿತ್ತು, ಕರ್ಣ ಅಸಾಧಾರಣ ಯೋಧನೆಂದು ಕೃಷ್ಣನಿಗೆ ಮೊದಲೇ ತಿಳಿದಿತ್ತು, ಅರ್ಜುನ ಎಷ್ಟೇ ದೊಡ್ಡ ಬಿಲ್ಲುಗಾರನಾಗಿದ್ದರೂ ಅವನನ್ನು ಕರ್ಣ ಮುಂದೆ ಸೋಲಿಸಬಹುದು ಎಂಬ ಭಯ ಕೂಡ ಕ್ರಷ್ಣನನಿಗಿತ್ತು.
ಸ್ನೇಹಿತರೆ ಕರ್ಣ ಸಾಯಲು ಅನೇಕ ಕಾರಣಗಳಿವೆ, ಇದರಲ್ಲಿ ಒಂದು ಕಾರಣ ಕರ್ಣನು ಸೂರ್ಯನಿಂದ ಪಡೆದ ರಕ್ಷಾಕವಚ, ಇದು ಇರುವವರೆಗೂ ಕೂಡ ಯಾವುದೇ ಆಯುಧವು ಅವನಿಗೆ ಹಾನಿ ಮಾಡಲು ಸಾದ್ಯವಿರಲಿಲ್ಲ ಆದ್ದರಿಂದ ಅರ್ಜುನ ಕರ್ಣನನ್ನು ಕೊಲ್ಲುವುದು ಅಸಾಧ್ಯವಾಗಿತ್ತು. ಕರ್ಣನ ಪರಾಕ್ರಮ ಜನಜನಿತವಾಗಿ ಬೆಳಗಿದಂತೆಯೇ ಅವನ ದಾನಗುಣವೂ ವಿಖ್ಯಾತವಾಯಿತು, ಭೀಮ ದುರ್ಯೋಧನರಿಗೆ ಹೇಗೆ ಬದ್ಧವೈರವೋ ಹಾಗೆಯೇ ಕರ್ಣ ಅರ್ಜುನರಿಗೆ ಎಲ್ಲ ವಿಷಯಗಳಲ್ಲಿಯೂ ಸ್ಪರ್ಧೆ ನಡೆಯುತ್ತಿತ್ತು. ಅರ್ಜುನನ ಮೇಲ್ಮೈಯಲ್ಲಿ ಆಸಕ್ತನಾಗಿದ್ದ ಇಂದ್ರನಿಗೆ ಕರ್ಣನನ್ನು ಹೇಗಾದರೂ ಮಾಡಿ ನಿಶ್ಶಕ್ತನನ್ನಾಗಿ ಮಾಡಬೇಕೆಂಬ ಯೋಚನೆ ಬಲವಾಗಿ ಕಾಡಲಾರಂಭಿಸಿತು. ಕರ್ಣನ ಉದಾರಗುಣವನ್ನು ಕೇಳಿದ ಆತ ಒಂದು ದಿನ ವಿಪ್ರವೇಷದಲ್ಲಿ ಕರ್ಣನಲ್ಲಿಗೆ ಬಂದು ಆತನ ಕವಚಕುಂಡಲಗಳನ್ನು ಬೇಡಿದ.

ಇಂದ್ರನ ಸಂಚನ್ನು ಮೊದಲೇ ತಿಳಿದ ಸೂರ್ಯ ಕರ್ಣನಿಗೆ ಸ್ವಪ್ನದಲ್ಲಿ ಕಾಣಿಸಿಕೊಂಡು ಎಚ್ಚರಸಿದ್ದರೂ ಕರ್ಣ ತನ್ನ ಸಹಜಗುಣಕ್ಕೆ ಅನುಸಾರವಾಗಿ ತನಗೆ ರಕ್ಷೆಯಂತಿದ್ದ ಕವಚಕುಂಡಲಗಳನ್ನು ಮನಃಪೂರ್ವಕವಾಗಿ ಇಂದ್ರನಿಗೆ ಒಪ್ಪಿಸಿದ. ನಂತರ ತಾನು ಅರಿಯದೆ ಮಾಡಿದ ತಪ್ಪಿನಿಂದಾಗಿ ಹಾಗು ಅಗತ್ಯ ಇರುವ ಸಂದರ್ಭದಲ್ಲೇ ಕರ್ಣನಿಗಿದ್ದ ಶಾಪಗಳು ಅವನಿಗೆ ಮುಳುವಾಗಿ ಸಾಯಬೇಕಾಯಿತು. ಇಷ್ಟಕ್ಕೂ ಸಾಯುವ ಮುನ್ನ ಕೃಷ್ಣನಿಂದ ಮೂರು ವರ ಪಡೆದಕೊಂಡ ಈ ರೋಚಕ ಕಥೆ ನಿಮಗೆ ಗೊತ್ತಾ ಹೇಳುತ್ತೇವೆ ಕೇಳಿ, ಕೊನೆಯ ಕ್ಷಣಗಳಲ್ಲಿ ಕರ್ಣನ ಕೌಶಲ್ಯ ಮತ್ತು ಭಕ್ತಿಯಿಂದ ಸಂತಸಗೊಂಡ ಶ್ರೀ ಕೃಷ್ಣ ಕರ್ಣನಿಗೆ ಮೂರು ವರಗಳನ್ನು ಕೇಳುವಂತೆ ಹೇಳುತ್ತಾನೆ. ಇದೆ ಸಮಯದಲ್ಲಿ ಕರ್ಣ ಕೇಳಿದ ಆ ಕೊನೆಯ ಆಸೆಗಳು ಏನಾಗಿದ್ದವು ಗೊತ್ತಾ, ಹಾಗಾದರೆ ಕರ್ಣ ಕೇಳಿದ ಕೊನೆಯ ಆಸೆಯ ಬಗ್ಗೆ ನಾವು ಈಗ ನಿಮಗೆ ತಿಳಿಸುತ್ತೇವೆ ಓದಿ.

ತನ್ನ ಮೊದಲ ವರದಲ್ಲಿ ಜ್ಞಾನಿ ಕರ್ಣನು ಕೃಷ್ಣನನ್ನು ಮುಂದಿನ ಜೀವನದಲ್ಲಿ ತನ್ನ ರೀತಿಯ ಜನರ ಉನ್ನತಿಗಾಗಿ ವಿಶೇಷವಾದ ಏನನ್ನಾದರೂ ಮಾಡಲು ವರವನ್ನು ಕೇಳಿದನು, ಏಕೆಂದರೆ ಅವನು ಸೂತ್ರ ಪುತ್ರನಾಗಿರುವುದರಿಂದ ಅವನ ಜೀವನದುದ್ದಕ್ಕೂ ಮೋಸ ಮತ್ತು ದುಃಖವನ್ನು ಎದುರಿಸಿದ್ದ. ಎರಡನೆಯ ವರವಾಗಿ ಕರ್ಣನು ತನ್ನ ಮುಂದಿನ ಜೀವನದಲ್ಲಿ ಕೃಷ್ಣನು ತನ್ನ ರಾಜ್ಯದಲ್ಲಿ ಜನಿಸಬೇಕೆಂದು ಕರ್ಣನು ಕೇಳಿಕೊಳ್ಳುತ್ತಾನೆ, ಇನ್ನು ತನ್ನ ಕೊನೆಯ ವರದಲ್ಲಿ ಕರ್ಣ ತನ್ನ ಕೊನೆಯ ವಿಧಿಗಳನ್ನು ಭೂಮಂಡಲದಲ್ಲಿ ಯಾವುದೇ ಪಾಪವಿಲ್ಲದ ಸ್ಥಳದಲ್ಲಿ ನಡೆಸಬೇಕೆಂದು ಕೃಷ್ಣನಿಗೆ ಹೇಳಿದನು, ಇನ್ನು ಇಡೀ ಭೂಮಿಯ ಮೇಲೆ ಅಂತಹ ಸ್ಥಳವಿಲ್ಲದ ಕಾರಣ ಕೃಷ್ಣನು ತನ್ನ ಅಂಗೈಯಲ್ಲೇ ಕರ್ಣನ ಕೊನೆಯ ವಿಧಿಗಳನ್ನು ಮಾಡಿದನು ಇದರಿಂದ ಕರ್ಣ ಮೋಕ್ಷವನ್ನು ಕೂಡ ಪಡೆಯುತ್ತಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗತಿಸಿದ ಹಿರಿಯರಿಗೆ ನಮನ ಸಲ್ಲಿಸಲು ಕುಟುಂಬ ಸದಸ್ಯರು ಈ ಮಾಸಾಂತ್ಯದವರೆಗೆ ಪಿತೃ ಪಕ್ಷವನ್ನು ಆಚರಿಸುತ್ತಾರೆ. ಸಾವನ್ನಪ್ಪಿದ ಕುಟುಂಬದ ಹಿರಿಯರಿಗೆ ಶ್ರದ್ದಾಂಜಲಿ ಸಲ್ಲಿಸುವ ಸಲುವಾಗಿ ಅವರಿಗಿಷ್ಟವಾದ ಆಹಾರ ಪದಾರ್ಥಗಳನ್ನಿಟ್ಟು ಪೂಜಿಸಲಾಗುತ್ತದೆ. ಆದರೆ ಅನಾದಿ ಕಾಲದಿಂದಲೂ ಪಿತೃಪಕ್ಷದ ಪರಂಪರೆ ನಡೆದುಕೊಂಡು ಬಂದಿದೆ. ಮಹಾಭಾರತದಲ್ಲಿ ತನ್ನ ಕರ್ಣಕುಂಡಲವನ್ನು ಕೊಟ್ಟು ಮರಣವನ್ನಪ್ಪಿದ ಕರ್ಣ, ಸ್ವರ್ಗ ಲೋಕಕ್ಕೆ ಹೋದ ವೇಳೆ ಆಹಾರವಾಗಿ ವಜ್ರ, ವೈಢೂರ್ಯಗಳನ್ನು ನೀಡಲಾಗುತ್ತದೆ. ಆಗ ಕರ್ಣ ಈ ಕುರಿತು ಪ್ರಶ್ನಿಸಿದಾಗ, ಹಿರಿಯರಿಗೆ ಶ್ರಾದ್ದ ಮಾಡದ ಹಿನ್ನಲೆಯಲ್ಲಿ ಕರ್ಣ ಮಾಡಿದ ದಾನಕ್ಕೆ ಅನುಸಾರವಾಗಿ ಇದನ್ನು ನೀಡಲಾಗುತ್ತದೆ ಎನ್ನಲಾಗುತ್ತದೆ….
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ದೆಹಲಿಯಿಂದ ರಾಜಕೀಯ ಘಟಾನುಘಟಿಗಳು ನ ಮುಂದು ತಾ ಮುಂದು ಎಂಬಂತೆ ಆಗಮಿಸುತ್ತಿದ್ದಾರೆ. ಇನ್ನು ಈ ಬಾರಿಯ ಚುನಾವಣೆಯನ್ನು ತಮ್ಮ ಸ್ವ ಪ್ರತಿಷ್ಠೆಯೆಂದು ತೆಗೆದುಕೊಂಡಿರುವ ಪ್ರದಾನ ಮಂತ್ರಿ ನರೇಂದ್ರ ಮೋದಿ ಹಾಗು ಬಿಜೆಪಿ ಪಕ್ಷದ ಮಾಸ್ಟರ್ ಮೈಂಡ್ ಕರ್ನಾಟಕ ರಾಜ್ಯದ ಚುನಾವಣೆಯ ಬಗ್ಗೆ ಸಕತ್ ಪ್ಲಾನ್ ಮಾಡುತಿದ್ದರೆ. ಇನ್ನು ಈ ಹಿನ್ನೆಲೆಯಲ್ಲಿ ಅಮಿತ್ ಶಾ ರವರು ಸಿ ಎಂ ಸಿದ್ದರಾಮಯ್ಯ ರವರಿಗೆ ಠಕ್ಕರ್ ನೀಡಲು ಸಕತ್ ಮಾಸ್ಟರ್ ಪ್ಲಾನ್ ಒಂದನ್ನು ಮಾಡಿಕೊಂಡಿದ್ದಾರೆ….
ಹುಡುಗಿಯರು ಮತ್ತಷ್ಟು ಸುಂದರವಾಗಿ ಕಾಣಲು ಅನವಶ್ಯಕ ಕೂದಲನ್ನು ತೆಗೆಯುತ್ತಾರೆ.ಇದಕ್ಕಾಗಿ ಥ್ರೆಡ್ಡಿಂಗ್ ಮಾಡಿಸಿಕೊಳ್ತಾರೆ. ಥ್ರೆಡ್ಡಿಂಗ್ ಸೂಕ್ಷ್ಮ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಥ್ರೆಡ್ಡಿಂಗ್ ಮಾಡಿದ ಜಾಗದಲ್ಲಿ ಮೊಡವೆಗಳು ಏಳುತ್ತವೆ. ಒಂದು ಮಾಡಲು ಹೋಗಿ ಇನ್ನೊಂದಾಯ್ತು ಅಂತಾ ಗೊಣಗ್ತಾರೆ. ಇನ್ನು ಈ ಬಗ್ಗೆ ಬೇಸರ ಮಾಡಿಕೊಳ್ಳಬೇಕಾಗಿಲ್ಲ. ಈ ಮೊಡವೆಗಳಿಂದ ಸುಲಭವಾಗಿ ಮುಕ್ತಿ ಹೊಂದುವ ಉಪಾಯ ಇಲ್ಲಿದೆ.ಥ್ರೆಡ್ಡಿಂಗ್ ಮಾಡಿಸಿಕೊಳ್ಳುವ ಮೊದಲು ಚರ್ಮವನ್ನು ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ. ಇದರಿಂದ ಥ್ರೆಡ್ಡಿಂಗ್ ಮಾಡುವ ವೇಳೆ ನೋವಾಗುವುದಿಲ್ಲ. ನಂತರ ಕಾಟನ್ ಬಟ್ಟೆಯಿಂದ ಚರ್ಮವನ್ನು ಮೃದುವಾಗಿ…
ಕಠಿಣ ಪರಿಶ್ರಮ ಹಾಗೂ ಪ್ರಯತ್ನದ ಫಲವಾಗಿ ರ್ಯಾಪರ್ ಚಂದನ್ ಶೆಟ್ಟಿ ಸ್ಯಾಂಡಲ್ವುಡ್ ನಲ್ಲಿ ಒಂದು ಹೆಸರು ಪಡೆದು ಇದೀಗ ದೊಡ್ಡ ಮಟ್ಟದ ಸಂಭಾವನೆ ಪಡೆಯುವ ಮೂಲಕ ಸಾಧನೆಯ ಹಾದಿಯಲ್ಲಿ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದಾರೆ.. ಹೌದು, ದಂಗಾಗುವಂತಿದೆ ಚಂದನ್ ಶೆಟ್ಟಿ ಸಂಭಾವನೆ. ಹೌದು, ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ‘ಬಿಗ್ ಬಾಸ್’ನಿಂದ ಬಂದ ಬಳಿಕ ಫುಲ್ ಬ್ಯುಸಿಯಾಗಿದ್ದಾರೆ. ವಿವಿಧೆಡೆ ಕಾರ್ಯಕ್ರಮ ನೀಡುವ ಚಂದನ್ ಶೆಟ್ಟಿ ಅವರ ಅಭಿಮಾನಿಗಳ ಸಂಖ್ಯೆ ಭಾರೀ ಜಾಸ್ತಿಯಾಗಿದೆ. ರಿಯಾಲಿಟಿ ಶೋ, ಸಿನಿಮಾಗಳಲ್ಲಿಯೂ ಅವರು ಬ್ಯುಸಿಯಾಗಿದ್ದಾರೆ….
ಮೇಷ ರಾಶಿ ಭವಿಷ್ಯ (Friday, December 31, 2021) ಹೊರಾಂಗಣ ಕ್ರೀಡೆ ನಿಮ್ಮನ್ನು ಸೆಳೆಯುತ್ತದೆ-ಧ್ಯಾನ ಮತ್ತು ಯೋಗ ಲಾಭ ತರುತ್ತವೆ. ನೀವು ಮನೆಯಿಂದ ಹೊರ ಇದ್ದು ಉದ್ಯೋಗ ಅಥವಾ ಅಧ್ಯಯನ ಮಾಡುತ್ತಿದ್ದರೆ, ನಿಮ್ಮ ಹಣ ಮತ್ತು ಸಮಯವನ್ನು ವ್ಯರ್ಥ ಮಾಡುವಂತಹ ಜನರಿಂದ ದೂರವಿರುವುದು ಕಲಿತುಕೊಳ್ಳಬೇಕು. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಪ್ರಣಯದ ನಡತೆಗಳು ಫಲ ನೀಡುವುದಿಲ್ಲ. ಕಣ್ಣುಗಳು ಎಂದಿಗೂ ಸುಳ್ಳು ಹೇಳುವುದಿಲ್ಲ, ಮತ್ತು ನಿಮ್ಮ ಸಂಗಾತಿಯ ಕಣ್ಣುಗಳು ಇಂದು ನಿಮಗೆ ಏನೋ…
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ 90 ದಿನಗಳನ್ನು ಮುಗಿಸಿದೆ. ಈ ಕಾರ್ಯಕ್ರಮ ಮುಗಿಯಲು ಇನ್ನೂ ಕೆಲವು ದಿನಗಳು ಇರುವಾಗಲೇ ಭಾನುವಾರ ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಡಬಲ್ ಎಲಿಮಿನೇಟ್ ಆಗಿದ್ದಾರೆ. ಹೌದು.ಭಾನುವಾರ ನಟ ಸುದೀಪ್ ಅವರು ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಇಬ್ಬರನ್ನು ಎಲಿಮಿನೇಟ್ ಮಾಡಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಇಬ್ಬರಿಗೂ ಸರ್ಪ್ರೈಸ್ ಕೊಟ್ಟಿದ್ದಾರೆ. ಮುಂದಿನ ವಾರ ಡಬಲ್ ಎಲಿಮಿನೇಷನ್ ಇದೆ. ಹೀಗಾಗಿ ಈ ವಾರ ಎಲಿಮಿನೇಟ್ ಇರಲಿಲ್ಲ. ಈ ವಿಚಾರ ಮನೆಯ ಸದಸ್ಯರಿಗೆ ಗೊತ್ತಿರಲಿಲ್ಲ….