ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಎಂದರೆ ಪುಣ್ಯಭೂಮಿಯೇ ಸರಿ!! ಇಲ್ಲಿರುವ ಕೆಲವೊಂದು ನಿಗೂಢ ಸ್ಥಳಗಳು ಹಾಗೂ ಕೆಲವೊಂದು ವಿಚಾರಗಳು ಅಚ್ಚರಿಯನ್ನು ಮೂಡಿಸುತ್ತದೆ!! ಅದರ ಬಗ್ಗೆ ಎಷ್ಟೂ ಪರಿಶೀಲನೆ ನಡೆಸಿದರೂ ಏನೋ ದೈವೀ ಶಕ್ತಿ ಎಂಬುವುದನ್ನು ನಂಬಲೇ ಬೇಕಾಗುತ್ತದೆ!! ಇಂತಹ ಕೆಲವೊಂದು ಸಂಗತಿಗಳಿಗೂ ವಿಜ್ಞಾನಿಗಳಿಗೂ ಸವಾಲಾಗಿರುವುದಲ್ಲದೆ ಅಚ್ಚರಿಯನ್ನುಂಟು ಮಾಡಿಸುತ್ತದೆ..

ಈಗಾಗಲೇ ಭಾರತದಲ್ಲಿ ಹಲವಾರು ಕೋಟೆಗಳನ್ನು ನಾವು ಕಂಡಿದ್ದೇವೆ.. ಆದರೆ ಯಾವತ್ತಾದರೂ ತಲೆಕೆಳಗಾದ ರಹಸ್ಯ ಕೋಟೆಯ ಬಗ್ಗೆ ಯಾರಾದರೂ ಕೇಳಿದ್ದೀರಾ?! ತಲೆಕೆಳಗಾದ ಕೋಟೆ ಅಂದಾಗಲೇ ಅಚ್ಚರಿಯನ್ನುಂಟು ಮಾಡುತ್ತೆ ಅಲ್ವಾ?! ಹೌದು ಇಂತಹ ಕೋಟೆ ಉತ್ತರಖಂಡದ ಉದಮ್ ಸಿಂಗ್ ನಲ್ಲಿನ ಕಾಶಿಪುರದಲ್ಲಿದೆ. ಇಲ್ಲಿನ ಅಚ್ಚರಿಯೆಂದರೆ ಈ ಕೋಟೆಯ ಉಪ್ಪರಿಗೆ ಮೇಲೆ ನೆಲವಿದೆ. ಹಾಗೂ ಕೋಟೆಯ ಕೆಳಗಿನ ಭಾಗದಲ್ಲಿ ಆಕಾಶವಿದೆ.ಈ ವರೆಗೂ ಈ ಕೋಟೆಯ ಬಗ್ಗೆ ಯಾರಿಗೂ ತಿಳಿದಿರಲಿಲ್ಲ. ಆ ಸ್ಥಳದಲ್ಲಿ ಅವಶೇಷಗಳೂ ಸಿಗಲಾರಂಭಿಸಿದ ನಂತರ ಪುರಾತತ್ವ ವಿಭಾಗ ಇದರ ಪರಿಶೀಲನೆ ನಡೆಸಿದ್ದು ಇದು ಪಾಂಡವರಿಂದ ನಿರ್ಮಿಸಲ್ಪಟ್ಟಿದ್ದು ಈ ಕೋಟೆಯು ಮಹಾಭಾರತದ ಕಾಲದ್ದು ಎನ್ನಲಾಗುತ್ತದೆ. ಅದಲ್ಲದೆ ಪಾಂಡವರು ಶಿಕ್ಷಣ ಪಡೆದಿದ್ದು ಇಲ್ಲಿಯೇ ಎಂಬುದಕ್ಕೆ ಕೆಲ ಸಾಕ್ಷ್ಯಾಧಾರಗಳು ದೊರಕಿವೆ.. ದ್ರೋಣಾಚಾರ್ಯರು ಅರ್ಜುನನಿಗೆ ಬಿಲ್ಲುವಿದ್ಯೆ ಕಲಿಸಿದ್ದು ಇಲ್ಲೇ ಎನ್ನಲಾಗುತ್ತದೆ.

ಈ ಕೋಟೆಯು ತಲೆಕೆಳಗಾಗಿರುದಕ್ಕೆ ಯಾವುದೋ ಶಕ್ತಿ ಮೂಲಕ ಇದನ್ನು ತಲೆಗೆಳಗೆ ಮಾಡಲಾಗಿದೆ ಎನ್ನಲಾಗುತ್ತದೆ. ಯುಗ ಬದಲಾಗುವ ಜೊತೆಗೆ ಈ ಕೋಟೆಯು ನೆಲದೊಳಗೆ ಹುದುಗಿ ಹೋಗಿದೆ ಎನ್ನಲಾಗಿದ್ದು ಈ ನೆಲದೊಳಗೆ ಯುಗಪುರಾಣ ರಹಸ್ಯ ಅಡಗಿದೆ ಎನ್ನಲಾಗುತ್ತದೆ. ಪುರಾತತ್ವ ವಿಭಾಗವು ಈ ನೆಲವನ್ನು ಅಗೆದು ಪರೀಶೀಲನೆ ನಡೆಸಿದ್ದಾರೆ. ಪರಿಶೀಲನೆ ನಡೆಸಿದಾಗ ಹಲವಾರು ರಹಸ್ಯ ವಿಚಾರಗಳು ದೊರಕಿವೆ..ಈಗಾಗಲೇ, ಶತಶತಮಾನಗಳಷ್ಟು ಹಿಂದಿನ ಸಂಗತಿಗಳು ಭೂಗರ್ಭದಲ್ಲಿ ಹುದುಗಿ ಹೋಗಿ ಅದೆಷ್ಟೋ ವಿಚಾರಗಳು ಉತ್ಖನನ ವೇಳೆಗೆ ಸಿಕ್ಕಿರುವ ವಿಚಾರಗಳ ಬಗ್ಗೆ ತಿಳಿದೇ ಇದೆ!! ಆದರೆ ರಾಮಾಯಣ, ಮಹಾಭಾರತಗಳು ನಡೆದೇ ಇಲ್ಲ, ಇದೊಂದು ಕಟ್ಟು ಕಥೆಯೆಂದು ಹೇಳಿ ಹಿಂದೂಗಳ ಭಾವನೆಗೆ ಧಕ್ಕೆ ತರುತ್ತಿದ್ದ ಬುದ್ಧಿಜೀವಿಗಳು ಇಲ್ಲಿ ಮತ್ತೆ ಉತ್ತರ ದೊರಕುವಂತಾಗಿದೆ!!

ಮಹಾಭಾರತದ ಕಾಲದ ವಸ್ತುಗಳು ಪುರಾತತ್ವ ವಿಭಾಗ ಪರಿಶೀಲನೆಯಿಂದ ಅನೇಕ ಮೂರ್ತಿಗಳು ದೊರಕಿದ್ದು ಮಹಾಭಾರತದ ಕಾಲದ ವಸ್ತುಗಳು ಸಿಕ್ಕಿವೆ. ಈ ಕೋಟೆಯ ಬಗ್ಗೆ ಏನೋ ದೈವೀ ಶಕ್ತಿ ಅಡಗಿದೆ ಎಂದು ಹೇಳುತ್ತಾರೆ ಯಾಕೆಂದರೆ ಇಂತಹ ವಿಸ್ಮಯಕಾರಿ ಕೋಟೆ ಎಲ್ಲೂ ನಮಗೆ ಕಾಣ ಸಿಗುವುದಿಲ್ಲ!! ಹಿಂದೆ ಈ ಕೋಟೆ ಸರಿಯಾಗಿಯೇ ಇತ್ತು. ಆದರೆ ಯಾವುದೋ ಶಾಪದ ಕಾರಣದಿಂದ ಈ ಕೋಟೆ ತಲೆಕೆಳಗಾಗಿದೆ ಎನ್ನಲಾಗುತ್ತಿದ್ದು ಅದರ ರಹಸ್ಯ ಇನ್ನೂ ತಿಳಿದಿಲ್ಲ!! ಪುರಾತತ್ವ ಇಲಾಖೆಯ ಪರಿಶೀಲನೆ ಇನ್ನೂ ಮುಗಿಯದ ಕಾರಣ ಈಗ ಇಲ್ಲಿ ಜನರಿಗೆ ಪ್ರವೇಶ ನಿಷೇಧಿಸಲಾಗಿದ್ದು ಕಲ್ಲಿನ ಅವಶೇಷಗಳು ಸಿಗಲಾರಂಭಿಸಿದೆ…
ಅದಲ್ಲದೆ ಈ ಕೋಟೆಯ ಬಗ್ಗೆ ಇನ್ನೂ ಯಾರಿಗೂ ತಿಳಿದಿಲ್ಲ.. ಇದನ್ನು ತಲೆಕೆಳಗಾಗಿಯೇ ನಿರ್ಮಿಸಲಾಗಿತ್ತಾ ಅಥವಾ ಜನರು ಹೇಳುವಂತೆ ಯಾವುದೋ ಶಕ್ತಿಯಿಂದಾಗಿ ಈ ಕೋಟೆ ತಲೆಕೆಳಗಾಗಿದೆಯಾ ಎನ್ನುವುದು ತಿಳಿದಿಲ್ಲ. ಮತ್ತೊಂದು ವಿಚಾರವೆಂದರೆ ಈ ಕೋಟೆಯಿಂದ ಸ್ವಲ್ಪ ದೂರದಲ್ಲೇ ದ್ರೋಣ ಸಾಗರವಿದೆ. ಇದನ್ನು ದ್ರೋಣಾಚಾರ್ಯರ ಹೆಸರಿನಿಂದ ಕರೆಯಲಾಗುತ್ತದೆ. ಇದನ್ನು ಗಂಗಾ ನದಿಯಷ್ಟೇ ಪವಿತ್ರ ಎನ್ನಲಾಗುತ್ತದೆ. ಇಲ್ಲಿ ದ್ರೋಣಾಚಾರ್ಯರ ಶಿಷ್ಯರು ಸ್ನಾನ ಮಾಡುತ್ತಿದ್ದರು ಎನ್ನಲಾಗುತ್ತದೆ. ಅದಲ್ಲದೆ ಈ ಕೋಟೆಯ ಬಗ್ಗೆ ಇನ್ನೂ ಪುರಾತತ್ವ ಇಲಾಖೆಯಿಂದ ಪರಿಶೀಲನೆ ನಡೆಯುತ್ತಿದೆ..ಆದರೆ ಪ್ರಪಂಚದಲ್ಲಿ ನಡೆಯುವ ಅದೆಷ್ಟೋ ವಿಚಿತ್ರಗಳು ಒಂದು ಕ್ಷಣ ನಮ್ಮ ಕಣ್ಣು ತೆರೆಸುತ್ತವೆ. ಅಷ್ಟೇ ಅಲ್ಲದೇ, ಈ ವಿಚಿತ್ರಗಳು ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಅದನ್ನೂ ಪರೀಕ್ಷಿಸಲೂ ಮುಂದಾಗುತ್ತೇವೆ ಕೂಡಾ!!! ದೇವರು ಇದ್ದಾನೆಯೇ ಅಥವಾ ಇಲ್ಲವೋ ಎಂಬ ಗೊಂದಲ ಇರುವವರಿಗೆ, ದೇವರು ಇಲ್ಲ ಎಂದು ವಾದಿಸುವವರ ಕಣ್ಣು ತೆರೆಸಬೇಕು ಎಂದು ಆ ಭಗವಂತನು ನಮಗೆ ಇಂತಹ ಅದ್ಭುತಗಳನ್ನು ಮಾಡಿ ತೋರಿಸುತ್ತಾನೋ ಏನೋ ಗೊತ್ತಿಲ್ಲ!!… ಇಂತಹ ವಿಸ್ಮಯಗಳನ್ನು ನಾವು ನಂಬಲೇ ಬೇಕು….
ಆದರೆ ಇಂತಹ ರಹಸ್ಯ ಕೋಟೆಗಳು ವಿಜ್ಞಾನಿಗಳಿಗೂ ಅಚ್ಚರಿಯನ್ನುಂಟು ಮಾಡುತ್ತಿದ್ದು ಎಲ್ಲರೂ ಮೂಗಿನ ಮೇಲೆ ಬೆರಳಿಡುವ ಹಾಗೆ ಆಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಹಾರವಿಲ್ಲದೆ ಕೆಲ ಕಾಲ ಬದುಕಿದರೂ ನೀರಿಲ್ಲದೇ ಬಹಳ ಕಾಲ ಬದುಕಲು ಸಾಧ್ಯವಿಲ್ಲ. ದೇಹದಲ್ಲಿ ಹೆಚ್ಚು ನೀರಿದ್ದಷ್ಟೂ ಆರೋಗ್ಯವು ಬಲವಾಗಿರುತ್ತದೆ. ಆದ್ರೆ ಬೆಳಗ್ಗೆ ತಣ್ಣನೆಯ ನೀರು ಕುಡಿಯೋ ಬದಲು ಬಿಸಿ ನೀರನ್ನು ಕುಡಿಯುವುದರಿಂದ ಅನೇಕ ಲಾಭಗಳನ್ನು ಪಡೆಯಬಹುದು. * ಬೆಳಗಿನ ಸಮಯ ಬಿಸಿ ನೀರನ್ನು ಕುಡಿಯುವುದರಿಂದ ದೇಹದ ಹೆಚ್ಚುವರಿ ತೂಕ ಕಡಿಮೆಯಾಗುತ್ತದೆ. * ದೇಹದಲ್ಲಿ ಉಷ್ಣಾಂಶವು ಹೆಚ್ಚಾಗಿ ವಿಷಕಾರಿ ಅಂಶಗಳನ್ನು ಹೊರ ಹಾಕಲು ಬಿಸಿ ನೀರು ಸಹಾಯ ಮಾಡುತ್ತದೆ. * ರಕ್ತವನ್ನು ಶುದ್ಧೀಕರಿಸಲು ಬಿಸಿ ನೀರಿನ ಸೇವನೆ ಅತ್ಯುತ್ತಮವಾಗಿದೆ….
ಟಾಲಿವುಡ್ ಸ್ಟಾರ್ ರಜಿನಿಕಾಂತ್ ಎಲ್ಲರೂ ಮೆಚ್ಚುವ ಬಹುದೊಡ್ಡ ಕಲಾವಿದ. ಅವರು ಚಿತ್ರರಂಗ ಕಾಲಿಟ್ಟ ದಿನದಿಂದ ಇಂದಿನವರೆಗೂ ಅದೇ ಪ್ರಾಮುಖ್ಯತೆಯನ್ನೂ ಮುಂದುವರೆಸಿಕೊಡೇ ಬಂದಿದ್ದಾರೆ. 1975ರಲ್ಲಿ ತೆರೆಕಂಡ ಅಪೂರ್ವ ರಾಗಂಗಳ್ ಚಿತ್ರದಿಂದ ಇದುವರೆಗೂ 150 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಈ ಹಿಂದೆ ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿದ್ದ ಅವರು ಸೂಪರ್ ಸ್ಟಾರ್ ಆಗಿದ್ದೇ ಒಂದು ಅದ್ಭುತ ಸ್ಟೋರಿ. 45 ವರ್ಷಗಳ ಕಾಲ ಚಿತ್ರರಂಗದಲ್ಲಿ ಮೆರೆದ ರಜಿನಿಕಾಂತ್ ಅವರ ಚಿತ್ರಗಳು ಅನೇಕ ಬಾರಿ ವಿವಾದಗಳಿಗೂ ಕಾರಣವಾಗಿವೆ. ರಜನಿಕಾಂತ್ ತಮ್ಮ ನಾಲ್ಕು ದಶಕಗಳ ಚಿತ್ರರಂಗದ…
ಒಂದೇ ಕುಟುಂಬದ ಐವರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದ ಚಳ್ಳಕೆರೆಯ ನೆಹರು ಸರ್ಕಲ್ ಬಳಿ ನಡೆದಿದೆ. ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಶಿಲ್ಪಾ ಹಾಗೂ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಐವರು ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೊಮ್ಮಸಮುದ್ರ ಗ್ರಾಮದ ನಿವಾಸಿಗಳಾಗಿದ್ದು, ಖಾಲಿ ನಿವೇಶನದ ಹಕ್ಕು ಪತ್ರ ಮಾಡಿಕೊಡದೆ ಆರು ತಿಂಗಳಿಂದ ಸತಾಯಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗ್ರಾಮ ಪಂಚಾಯ್ತಿ ಪಿಡಿಓ ಪ್ರತಿಭಾ ಹಾಗೂ ಬಿಲ್ ಕಲೆಕ್ಟರ್ ಮಂಜುನಾಥ್ ನಿರ್ಲಕ್ಷ್ಯಕ್ಕೆ ಮನನೊಂದು ಕುಟುಂಬ ಈ ನಿರ್ಧಾರ…
ಓಂ ಶ್ರೀ ಕಾರ್ಯಸಿದ್ಧಿ ಗಣಪತಿ ಬನಶಂಕರಿ ದೇವಿ ಆರಾಧಕರು ಪಂಡಿತ್ ರಾಘವೇಂದ್ರ ಗುರೂಜಿ 9901077772 ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ…
ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ 2 ಹಂತದಲ್ಲಿ ಮತದಾನ ನಡೆದಿದ್ದು, ಚುನಾವಣೆಯಲ್ಲಿ ಹಣದ ಹೊಳೆಯೇ ಹರಿದಿದೆ. ಇದಕ್ಕೆ ನಿದರ್ಶನವೆನ್ನುವಂತೆ ಚುನಾವಣೆ ಆಯೋಗ ವಿವಿಧೆಡೆ ಕಾರ್ಯಾಚರಣೆ ನಡೆಸಿ ಕೋಟ್ಯಂತರ ರೂ. ಜಪ್ತಿ ಮಾಡಿದೆ. ಅಭ್ಯರ್ಥಿಗಳು ಚುನಾವಣಾ ಆಯೋಗಕ್ಕೆ ಖರ್ಚು ವೆಚ್ಚದ ಮಾಹಿತಿ ನೀಡಿದ್ದು, ಆಯೋಗ ನಿಗದಿಪಡಿಸಿದ 70 ಲಕ್ಷ ರೂ. ಮಿತಿಯನ್ನು ಯಾರೂ ದಾಟಿಲ್ಲ. ಹೈ ವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ 33 ಲಕ್ಷ ರೂ. ಖರ್ಚು ಮಾಡಿರುವುದಾಗಿ ಲೆಕ್ಕ ತೋರಿಸಿದ್ದಾರೆ. ಜೆಡಿಎಸ್…
ಪುರಾತನ ಮತ್ತು ಮುಜರಾಯಿ ಇಲಾಖೆಗೆ ಸೇರಿದ ಹಾಸನದ ವಿರೂಪಾಕ್ಷೇಶ್ವರ ದೇವಾಲಯದಲ್ಲಿ ಪ್ರತಿ ಸೋಮವಾರ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಅರ್ಚನೆ ಮಾಡಲಾಗುತ್ತದೆ.ಇದರ ಜೊತೆಗೆ ಅಧಿಕಾರಿಯ ಹೆಸರಿನಲ್ಲಿ ಮರ ಬೆಳೆಸಲಾಗುತ್ತಿದ್ದು ಪ್ರತಿದಿನ ಜಲಾಭಿಷೇಕ ಕೂಡ ನಡೆಯುತ್ತದೆ. ಈ ಪುರಾತನ ದೇವಾಲಯ ಶಿಥಿಲಾವಸ್ಥೆಗೆ ತೆರಳಿದ್ದರೂ ಯಾವ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಗಮನಹರಿಸಲಿಲ್ಲ. ಆದರೆ ರೋಹಿಣಿ ಸಿಂಧೂರಿಯವರು ದೇವಸ್ಥಾನದ ಜೀರ್ಣೋದ್ಧಾರಕ್ಕೆ ಹಣ ಬಿಡುಗಡೆ ಮಾಡಿದ್ದರು. 2017ರಲ್ಲಿ ಹಾಸನ ಜಿಲ್ಲಾಧಿಕಾರಿಯಾಗಿ ಬಂದ ರೋಹಿಣಿ ಸಿಂಧೂರಿ ದೇವಾಲಯದ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ತಕ್ಷಣ 30 ಲಕ್ಷ ಹಣ…