News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ, ದೇವರು

ಸಂಕ್ರಾಂತಿ ಯಾಕೆ ಮಾಡ್ತಾರೆ ಗೊತ್ತಾ? ಈ ದಿನ ಎಳ್ಳಿಗೆ ಯಾಕೆ ಇಷ್ಟು ಮಹತ್ವ.

104

ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಪ್ರತಿ ವರ್ಷ ಜನವರಿ 14 ಅಥವಾ 15 (ಪುಷ್ಯಮಾಸ)ದಲ್ಲಿ ಬರುವ ಮಕರ ಸಂಕ್ರಾಂತಿಯನ್ನು `ಉತ್ತರಾಯಣ ಪುಣ್ಯಕಾಲ’ ಎಂದು ಕರೆಯುತ್ತಾರೆ. ಕೇವಲ ಬದುಕುವುದಕ್ಕೆ ಅಷ್ಟೇ ಅಲ್ಲದೆ, ಸಾಯುವುದಕ್ಕೂ ಉತ್ತರಾಯಣ, ಪುಣ್ಯಕಾಲವನ್ನು ನೋಡುತ್ತಾರೆ. ಈ ಪುಣ್ಯಮುಹೂರ್ತದಲ್ಲಿ ಪುಣ್ಯ ಸ್ಥಳಗಳಲ್ಲಿ ಹಾಗೂ ತುಂಗಾ, ಗಂಗಾ, ಕೃಷ್ಣಾ, ಕಾವೇರಿ ಮುಂತಾದ ಪುಣ್ಯ ನದಿಗಳಲ್ಲಿ ಲಕ್ಷಾಂತರ ದೈವಭಕ್ತರು ತೀರ್ಥಸ್ನಾನ ಮಾಡುತ್ತಾರೆ. ಹಾಗೆಯೇ ಉತ್ತರಾಯಣವನ್ನು ದೇವತೆಗಳ ಕಾಲವೆಂದು ಹಲವರು ನಂಬಿದ್ದಾರೆ.

ಮೊದಲು ದಕ್ಷಿಣದತ್ತ ವಾಲಿ ಚಲಿಸುತ್ತಿದ್ದ ಸೂರ್ಯ, ಸಂಕ್ರಮಣ ದಿನದಿಂದ ಉತ್ತರ ದಿಕ್ಕಿಗೆ ತಿರುಗಿ ಚಲಿಸುತ್ತಾನೆ. ಆಯನ ಎಂದರೆ ಚಲಿಸುವುದು, ಆದರಿಂದ ಉತ್ತರಾಯಣ, ದಕ್ಷಿಣಾಯನ ಎಂದು ಹೆಸರು ಸೃಷ್ಟಿಯಾಗಿದ್ದು. ಹೀಗೆ ಸೂರ್ಯ ಪಥ ಬದಲಾಗುವುದರಿಂದ ನಮ್ಮ ದೇಶದಲ್ಲಿ ಈ ಸಮಯಕ್ಕೆ ಚಳಿ ಕಡಿಮೆಯಾಗಿ ಹಗಲು ಹೆಚ್ಚು ಸಂಭವಿಸುತ್ತದೆ.

ಎಲ್ಲಿ ಹೇಗೆ ಹಬ್ಬ ಆಚರಣೆ?

ಕರ್ನಾಟಕದಲ್ಲಿ ಸಂಕ್ರಾಂತಿ ಎಂದು ಆಚರಿಸಿದರೆ, ನೆರೆಯ ತಮಿಳುನಾಡು ಹಾಗೂ ಆಂಧ್ರ ಪ್ರದೇಶದಲ್ಲಿ ಭೋಗಿ, ಕನುಹಬ್ಬ ಎಂದು ಮೂರುದಿನಗಳ ಕಾಲ ಈ ಹಬ್ಬವನ್ನು ಆಚರಿಸುತ್ತಾರೆ. ಮಕರ ಸಂಕ್ರಾಂತಿಯೂ ಸುಗ್ಗಿಯನ್ನು ಸಾರುವ ಹಬ್ಬವಾಗಿದ್ದು, ದ್ರಾವಿಡ ಸಂಪ್ರದಾಯವನ್ನು ಪಾಲಿಸುವವರಿಗೆ ಇದೊಂದು ವಿಶೇಷ ಸಂಭ್ರಮದ ದಿನವಾಗಿರುತ್ತದೆ. ಸಂಕ್ರಾಂತಿ ದಿನದಂದು ವಿವಾಹಿತ ಹಾಗೂ ಅವಿವಾಹಿತ ಹೆಣ್ಣುಮಕ್ಕಳು ಎಳ್ಳು-ಬೆಲ್ಲ, ಕೊಬ್ಬರಿ, ನೆಲಗಡಲೆ, ಕಬ್ಬು ಬಾಳೆಹಣ್ಣು, ಸಕ್ಕರೆ ಅಚ್ಚು ಇತ್ಯಾದಿಗಳನ್ನು ಎಲ್ಲರಿಗೂ ಹಂಚಿ ಸಂಭ್ರಮಿಸುತ್ತಾರೆ. ಆಂಧ್ರದಲ್ಲಿ ಈ ದಿನದಂದು ಶ್ರೀರಾಮನ ಪೂಜೆ ಮಾಡಿ, ರೈತರು ಜಾನುವಾರುಗಳಿಗೆ ಮೈತೊಳೆದು, ಅದನ್ನು ಸಿಂಗರಿಸಿ ಮೆರವಣಿಗೆ ಮಾಡುತ್ತಾರೆ. ಅದರಲ್ಲೂ ಸಂಕ್ರಮಣದ ದಿನದ ಸಂಜೆ ಎತ್ತುಗಳಿಗೆ ಕಿಚ್ಚು ಹಾಯಿಸುವುದು ಈ ಹಬ್ಬದ ವಿಶೇಷ.

ಎಳ್ಳಿಗೆ ಮಹತ್ವ ಯಾಕೆ?

ಮಕರ ಸಂಕ್ರಾಂತಿಯ ಇನ್ನೊಂದು ಹೆಸರು ಉತ್ತರಾಯಣ ಪುಣ್ಯಕಾಲ. ಇಡೀ ಉತ್ತರಾಯಣವೇ ದೇವತೆಗಳಿಗೆ ಪ್ರಿಯವಾದದ್ದು. ದೇವಕಾರ್ಯ, ಶುಭ ಕಾರ್ಯಗಳಿಗೆ ಈ ದಿನ ಬಹಳ ಪ್ರಾಶಸ್ತ್ಯವಾಗಿದೆ. ಇಂತಹ ಉತ್ತರಾಯಣವನ್ನು ಪ್ರಾರಂಭಿಸುವ ದಿನವಾದ ಮಕರ ಸಂಕ್ರಾಂತಿಗೆ ವಿಶೇಷವಾದ ಮಾನ್ಯತೆಯಿದೆ. ಈ ದಿನ ಶ್ರದ್ಧಾಭಕ್ತಿಯಿಂದ ಮಾಡುವ ಸ್ನಾನ, ಧ್ಯಾನ, ದಾನ, ಹೋಮ, ಪೂಜೆ, ತರ್ಪಣ, ಶ್ರಾದ್ಧ ಮುಂತಾದುವುಗಳಿಗೆ ವಿಶೇಷವಾದ ಫಲ ಸಿಗುತ್ತದೆ ಎನ್ನುವ ವಿಚಾರ ಹಲವು ಶಾಸ್ತ್ರಗಳಲ್ಲಿ ಉಲ್ಲೇಖವಾಗಿದೆ.

ಸಂಕ್ರಾಂತಿ ದಿನದಂದು ಕಪ್ಪು ಎಳ್ಳಿನೊಂದಿಗೆ ಸ್ನಾನ ಮಾಡಿ ಎಳ್ಳುದಾನ ಕೊಟ್ಟರೆ ಒಳ್ಳೆಯದಾಗುತ್ತದೆ ಎನ್ನುವ ನಂಬಿಕೆಯಿದೆ. ಹಾಗೆಯೇ ದೇವಾಲಯಗಳಲ್ಲಿ ಎಳ್ಳೆಣ್ಣೆ ಹಾಕಿ ದೀಪ ಬೆಳಗಬೇಕು. ಈ ದಿನ ನಾವು ಮಾಡಿದ ದಾನ ಧರ್ಮಗಳ ಪುಣ್ಯವು ಜನ್ಮ ಜನ್ಮದಲ್ಲೂ ಸದಾ ನಮಗೆ ಶ್ರೇಯಸ್ಸು ಸಿಗುವಂತೆ ಸೂರ್ಯನು ಅನುಗ್ರಹಿಸುತ್ತಾನೆ ಎಂದು ಹಿರಿಯರು ಹೇಳುತ್ತಾರೆ. `ಎಳ್ಳು ಬೆಲ್ಲ ತಿಂದು ಒಳ್ಳೆಯ ಮಾತನಾಡು’ ಎಂಬ ಕನ್ನಡದ ಗಾದೆಗೆ ಸಂಕ್ರಾಂತಿ ಹಬ್ಬವೇ ಮೂಲವಾಗಿರುವುದು ಎಂದು ಹಲವರು ಹೇಳುತ್ತಾರೆ.

ಸಂಕ್ರಾಂತಿಯು ಸೌರಮಾನದ ಹಬ್ಬ. ಮಕರ ಮಾಸದದಲ್ಲಿ ಮಾಡುವ ಮಕರ ಸಂಕ್ರಮಣ ಆಚರಣೆ, ಚಾಂದ್ರಮಾನದಂತೆ ಪುಷ್ಪಮಾಸದಲ್ಲಿ ಇದು ಬರುತ್ತದೆ. ಎಳ್ಳಿನ ಹಬ್ಬ ಎಂದೇ ಪ್ರಸಿದ್ಧಿಯಾಗಿರುವ ಸಂಕ್ರಮಣ ಹಬ್ಬದಲ್ಲಿ ಎಳ್ಳನ್ನು ನಾನಾ ರೂಪದಲ್ಲಿ ಬಳಸುತ್ತಾರೆ. ಕೆಲವರು ಎಳ್ಳಿನಿಂದ ಸ್ನಾನ ಮಾಡುತ್ತಾರೆ. ಎಳ್ಳಿನ ನೀರಿನಿಂದ ತರ್ಪಣ ಕೊಡುತ್ತಾರೆ, ಎಳ್ಳಿನಿಂದ ಮಾಡಿದ ಗೋವನ್ನು ದಾನ ಮಾಡುತ್ತಾರೆ. ಮಕ್ಕಳಿಗೆ ಆರತಿ ಎತ್ತಿ, ಗುರು ಹಿರಿಯರಿಗೆ ನಮಸ್ಕಾರ ಮಾಡಿ ಆರ್ಶಿವಾದ ಪಡೆಯುವುದು ಸಂಕ್ರಾತಿ ಹಬ್ಬದ ಒಂದು ವಿಶೇಷ ಪದ್ಧತಿ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಫ್ಯಾಷನ್

    ಗಡ್ಡ ಬಿಟ್ಟ ಗಂಡಸರನ್ನೇ ಹುಡುಗಿಯರು ತುಂಬಾ ನಂಬುತ್ತಾರಂತೆ..!ಯಾಕೆ ಹೀಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..ಶೇರ್ ಮಾಡಿ

    ಕೆಲವು ಮಹಿಳೆಯರಿಗೆ ಹೆಚ್ಚು ಕಾಲ ಬೋಳಿಸದ ಗಡ್ಡದ ಪುರುಷರೇ ಹೆಚ್ಚು ಇಷ್ಟ. ಈ ಗಡ್ಡ ಚುಚ್ಚುತ್ತದೆ ಎಂದು ಉಳಿದ ಮಹಿಳೆಯರು ದೂರು ಸರಿದರು ಕೆಲವರಿಗೆ ಮಾತ್ರ ಈ ಚುಚ್ಚುವಿಕೆಯೇ ಹೆಚ್ಚು ಇಷ್ಟವಾಗುತ್ತದಂತೆ! ಈಗ ಬಹುತೇಕ ಪುರುಷರು ರಗಡ್ ಲುಕ್ ಎಂದು ಗಡ್ಡ ಮತ್ತು ಮೀಸೆಯನ್ನು ಉರಿಗೊಳಿಸುವುದನ್ನು ನೀವು ನೋಡಿರಬಹುದು.

  • ಸುದ್ದಿ

    ಮದುವೆಯಾದ್ರು ಬಸ್​​​ನಲ್ಲೇ ಜೀವನ ನಡೆಸುತ್ತಿರುವ ಪ್ರೇಮಿಗಳು..!ಇದಕ್ಕೆ ಕಾರಣ ಏನು ಗೊತ್ತಾ..?

    ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಜಾತಿ ಬೇರೆಬೇರೆ ಇದ್ದ ಕಾರಣ ಮನೆಯವರು ಧಮಕಿ ಹಾಕಿದ ಘಟನೆ ವಿಜಯಪುರ ದಲ್ಲಿ ನಡೆದಿದೆ. ನಾವು ಒಬ್ಬರಿಗೊಬ್ಬರು ಪ್ರೀತಿಸಿದ್ದೆವೆ, ಮದುವೆ ಕೂಡ ಆಗಿದ್ದೆವೆ ಆದರೆ ನಮಗೆ ಜೀವನ ನಡೆಸಲು ಬಿಡುತ್ತಿಲ್ಲ. ಹೀಗಾಗಿ ನಮಗೆ ಬದಕಲು ಬಿಡಿ ಎಂದು ಪ್ರೇಮಿಗಳು ಅಂಗಲಾಚುತ್ತಿದ್ದಾರೆ. 5 ವರ್ಷಗಳಿಂದ ಪ್ರೀತಿಸಿ ಮದುವೆಯಾಗಿದ್ದ ದಂಪತಿಗಳಿಗೆ ಪೋಷಕರೇ ವಿಲನ್ ಆಗಿದ್ದಾರೆ. ವಿಜಯಪುರ ಜಿಲ್ಲೆ ಸಿಂಧಗಿ ತಾಲೂಕಿನ ನಾವದಗಿತ ಶೃತಿ ಹಾಗೂ ಆಲಮೇಲ ಪಟ್ಟಣದ ಗೌತಮ್​​​ ಪೋಷಕರ ವಿರೋಧದ ಮಧ್ಯೆಯೂ ಸೆಪ್ಟೆಂಬರ್ 25ರಂದು…

  • ಸುದ್ದಿ

    ಆನ್​ಲೈನ್​ನಲ್ಲಿ ಬುಕ್ ಮಾಡಿದ್ದು ಸ್ಯಾಮ್​ಸಂಗ್ ಫೋನ್​ : ಡೆಲಿವರಿ ಬಾಯ್​ ಬಿಜೆಪಿ ಸಂಸದನ ಕೈಗೆ ತಂದುಕೊಟ್ಟಿದ್ದೇನು ಗೊತ್ತಾ

     ಬಿಜೆಪಿ ಸಂಸದರೊಬ್ಬರು ಆನ್​ಲೈನ್ ದೋಖಾಕ್ಕೆ ಒಳಗಾದವರ ಪಟ್ಟಿಗೆ ಸೇರಿದ್ದಾರೆ. ಸ್ಯಾಮ್​ಸಂಗ್​ ಸ್ಮಾರ್ಟ್​ಫೋನ್​ಬೇಕು ಎಂಬ ಆಸೆಯಿಂದ ಇದೇ ಮೊದಲ ಬಾರಿಗೆ ಅವರು ಆನ್​ಲೈನ್ ಮೂಲಕ ಅದನ್ನುಖರೀದಿಸಿದ್ದರು. ಡೆಲಿವರಿ ಬಾಯ್​ ಬಂದು ಆ ಪಾರ್ಸೆಲನ್ನು ತಂದುಕೈಗಿಟ್ಟು ಹೋದರು. ಹೊಸ ಸ್ಮಾರ್ಟ್​​ಫೋನ್ ಕೈ ಸೇರಿದ ಖುಷಿಯಲ್ಲಿದ್ದರು ಸಂಸದರು. ಹಾಗಾಗಿ ಡೆಲಿವರಿ ಬಾಯ್ ಎದುರೇ ಆ ಪಾರ್ಸೆಲ್ಬಿಚ್ಚಿ ನೋಡುವ ಗೋಚಿಗೆ ಹೋಗಿರಲಿಲ್ಲ.ಸೋಮವಾರ ಬೆಳಗ್ಗೆ ಎಂದಿನಂತೆ ದಿನಚರಿಆರಂಭಿಸಿದ ಸಂಸದರು, ಆ ಪಾರ್ಸೆಲ್ಬಿಚ್ಚಿ ನೋಡಿದರು. ಸ್ಯಾಮ್​ಸಂಗ್ ಫೋನ್ಬಾಕ್ಸ್ ಇರಬೇಕಾದಲ್ಲಿ, ರೆಡ್​ಮಿ 5ಎಫೋನಿನ ಬಾಕ್ಸ್ ಇತ್ತು! ಇದೇಕೇಹೀಗಾಯಿತು,…

  • ಸುದ್ದಿ

    ಪ್ರತಿದಿನ ಎದೆಗೆ ಗುದ್ದುತ್ತಿದ್ದ ಸಾಕುನಾಯಿಗಳು, ನೋವಿನಿಂದ ವೈದ್ಯರ ಬಳಿ ಹೋದ ಮಹಿಳೆಗೆ ಕಾದಿತ್ತು ಭಾರಿ ಶಾಕ್.​

    ತನ್ನ ಜೀವನದಲ್ಲಿ ಎದುರಾಗುತ್ತಿದ್ದ ಅಪಾಯಾಕಾರಿ ಕ್ಯಾನ್ಸರ್​ ರೋಗವನ್ನು ಪತ್ತೆ ಹಚ್ಚಿ ಜೀವ ಉಳಿಸಿದ ತನ್ನ ನಾಯಿಗಳಿಗೆ ಜೀವನವನ್ನೇ ಮುಡಿಪಾಗಿಟ್ಟಿರುವುದಾಗಿ ವೇಲ್ಸ್​ ಮೂಲದ ಶ್ವಾನ ಪ್ರೇಮಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ವೇಲ್ಸ್​ನ ಬಾರ್ಗೋಡ್​ ನಿವಾಸಿಯಾಗಿರುವ​ ಲಿಂಡಾ ಮುಂಕ್ಲೆ(65) ವೇಲ್ಸ್​ ಆನ್​ಲೈನ್​ ಪತ್ರಿಕೆಗೆ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ತನ್ನ ಬಳಿ ಐದು ವರ್ಷದ ಬಿಯಾ ಮತ್ತು ಅದರ ಮೂರು ವರ್ಷದ ಹೆಣ್ಣುನಾಯಿ ಎನ್ಯಾ ಸೇರಿದಂತೆ ಒಟ್ಟು ನಾಲ್ಕು ಜರ್ಮನ್​ ಶೆಫರ್ಡ್​ ನಾಯಿಗಳನ್ನು ಸಾಕುತ್ತಿರುವುದಾಗಿ ತಿಳಿಸಿದ್ದಾರೆ. ಅದರಲ್ಲಿ ಎರಡು ನಾಯಿ ತನ್ನ ಬಳಿ…

  • ಸುದ್ದಿ

    ನಿಜಕ್ಕೂ ಅಚ್ಚರಿ ಗೋಡೆಯಲ್ಲಿ ಉದ್ಭವವಾದ ದೇವಿ..! ಅಷ್ಟಕ್ಕೂ ಅಚ್ಚರಿ ನಡೆದಿದ್ದು ಎಲ್ಲಿ ಗೊತ್ತಾ?

    ಧಾರವಾಡ ಜಿಲ್ಲೆಯ ಹೊಸ ಯಲ್ಲಾಪುರದ ರೈತ ಯಲ್ಲನಗೌಡ ಪಾಟೀಲ ಮನೆಯಲ್ಲಿ ದೀಪಾವಳಿ ಪಾಡ್ಯದ ದಿನದಂದು ದೇವಿಯ ಮೂರ್ತಿಯು ಪತ್ತೆಯಾಗಿದೆ. ಜನ ಮರಳೋ ಜಾತ್ರೆ ಮರಳೋ ಎನ್ನುವ ಹಾಗೆ, ಗೋಡೆಯಲ್ಲಿ ಉದ್ಭವವಾಗಿದೆ ಎನ್ನಲಾದ ದೇವಿಯನ್ನು ನೋಡಲು ಇಡೀ ಊರಿಗೆ ಊರೇ ಸೇರುತ್ತಿದೆ. ಧಾರವಾಡ ನಗರದ ಹೊಸ ಯಲ್ಲಾಪುರದ ದುಂಡಿ ಓಣಿಯಲ್ಲಿರುವ ಯಲ್ಲನ್ನಗೌಡ ಪಾಟೀಲ ಅವರ ಮನೆಯಲ್ಲಿ ದೇವಿ ಉದ್ಭವವಾಗಿದ್ದಾಳೆ ಎಂಬ ಸುದ್ದಿ ಹರಿದಾಡಿದ್ದು, ಈ ದೃಶ್ಯವನ್ನು ನೋಡಲು ಭಕ್ತ ಸಮೂಹವೇ ಹರಿದುಬರುತ್ತಿದೆ. ಯಲ್ಲನ್ನಗೌಡ ದಂಪತಿ ದೇವಿಯ ಆರಾಧಕರಾಗಿದ್ದು, ದೀಪಾವಳಿ…

  • ಜ್ಯೋತಿಷ್ಯ

    ಇದ್ದಕಿದ್ದಂತೆ ನಿಮ್ಮ ಜೇಬಿನಲ್ಲಿರುವ ನಾಣ್ಯ ಅಥ್ವಾ ನೋಟು ಕೆಳಗಡೆ ಬಿದ್ರೆ ಏನಾಗುತ್ತೆ ಗೊತ್ತಾ..?

    ಜೇಬಿನಿಂದ ಪೆನ್ ಅಥವಾ ಮತ್ತ್ಯಾವುದೋ ಚೀಟಿ ತೆಗೆಯುವಾಗ ನಾಣ್ಯ ಅಥವಾ ನೋಟು ಕೆಲವೊಮ್ಮೆ ಕೆಳಗೆ ಬೀಳುತ್ತದೆ. ಕೆಳಗೆ ಬಿದ್ದ ನೋಟನ್ನು ಅನೇಕರು ಕೋಪ ಮಾಡಿಕೊಂಡು ಕಿರಿಕಿರಿ ಮಾಡ್ತಾ ಎತ್ತಿಕೊಳ್ತಾರೆ. ಆದ್ರೆ ಇನ್ಮುಂದೆ ಹಾಗೆ ಮಾಡಬೇಡಿ. ನಿಮ್ಮ ಜೇಬಿನಿಂದ ಕೆಳಗೆ ಬಿದ್ದ ಹಣವನ್ನು ಖುಷಿಯಿಂದ ಎತ್ತಿಕೊಳ್ಳಿ. ಜೇಬಿನಿಂದ ಹಣ ಬೀಳೋದು ಯಾವುದರ ಮುನ್ಸೂಚನೆ ಎಂಬುದನ್ನು ತಿಳಿದುಕೊಂಡ್ರೆ ಯಾವಾಗ ಜೇಬಿನಿಂದ ಹಣ ಬೀಳುತ್ತೆ ಅಂತಾ ನೀವು ಕಾಯೋದ್ರಲ್ಲಿ ಸಂಶಯವಿಲ್ಲ. ನಿಮ್ಮ ಜೇಬಿನಿಂದ ಬಿದ್ದ ನಾಣ್ಯವನ್ನು ಎತ್ತಿಕೊಳ್ಳುವ ಮೊದಲು ಅದ್ರಿಂದಾಗುವ ಶುಭ…