ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಪ್ರತಿ ವರ್ಷ ಜನವರಿ 14 ಅಥವಾ 15 (ಪುಷ್ಯಮಾಸ)ದಲ್ಲಿ ಬರುವ ಮಕರ ಸಂಕ್ರಾಂತಿಯನ್ನು `ಉತ್ತರಾಯಣ ಪುಣ್ಯಕಾಲ’ ಎಂದು ಕರೆಯುತ್ತಾರೆ. ಕೇವಲ ಬದುಕುವುದಕ್ಕೆ ಅಷ್ಟೇ ಅಲ್ಲದೆ, ಸಾಯುವುದಕ್ಕೂ ಉತ್ತರಾಯಣ, ಪುಣ್ಯಕಾಲವನ್ನು ನೋಡುತ್ತಾರೆ. ಈ ಪುಣ್ಯಮುಹೂರ್ತದಲ್ಲಿ ಪುಣ್ಯ ಸ್ಥಳಗಳಲ್ಲಿ ಹಾಗೂ ತುಂಗಾ, ಗಂಗಾ, ಕೃಷ್ಣಾ, ಕಾವೇರಿ ಮುಂತಾದ ಪುಣ್ಯ ನದಿಗಳಲ್ಲಿ ಲಕ್ಷಾಂತರ ದೈವಭಕ್ತರು ತೀರ್ಥಸ್ನಾನ ಮಾಡುತ್ತಾರೆ. ಹಾಗೆಯೇ ಉತ್ತರಾಯಣವನ್ನು ದೇವತೆಗಳ ಕಾಲವೆಂದು ಹಲವರು ನಂಬಿದ್ದಾರೆ.

ಮೊದಲು ದಕ್ಷಿಣದತ್ತ ವಾಲಿ ಚಲಿಸುತ್ತಿದ್ದ ಸೂರ್ಯ, ಸಂಕ್ರಮಣ ದಿನದಿಂದ ಉತ್ತರ ದಿಕ್ಕಿಗೆ ತಿರುಗಿ ಚಲಿಸುತ್ತಾನೆ. ಆಯನ ಎಂದರೆ ಚಲಿಸುವುದು, ಆದರಿಂದ ಉತ್ತರಾಯಣ, ದಕ್ಷಿಣಾಯನ ಎಂದು ಹೆಸರು ಸೃಷ್ಟಿಯಾಗಿದ್ದು. ಹೀಗೆ ಸೂರ್ಯ ಪಥ ಬದಲಾಗುವುದರಿಂದ ನಮ್ಮ ದೇಶದಲ್ಲಿ ಈ ಸಮಯಕ್ಕೆ ಚಳಿ ಕಡಿಮೆಯಾಗಿ ಹಗಲು ಹೆಚ್ಚು ಸಂಭವಿಸುತ್ತದೆ.

ಎಲ್ಲಿ ಹೇಗೆ ಹಬ್ಬ ಆಚರಣೆ?
ಕರ್ನಾಟಕದಲ್ಲಿ ಸಂಕ್ರಾಂತಿ ಎಂದು ಆಚರಿಸಿದರೆ, ನೆರೆಯ ತಮಿಳುನಾಡು ಹಾಗೂ ಆಂಧ್ರ ಪ್ರದೇಶದಲ್ಲಿ ಭೋಗಿ, ಕನುಹಬ್ಬ ಎಂದು ಮೂರುದಿನಗಳ ಕಾಲ ಈ ಹಬ್ಬವನ್ನು ಆಚರಿಸುತ್ತಾರೆ. ಮಕರ ಸಂಕ್ರಾಂತಿಯೂ ಸುಗ್ಗಿಯನ್ನು ಸಾರುವ ಹಬ್ಬವಾಗಿದ್ದು, ದ್ರಾವಿಡ ಸಂಪ್ರದಾಯವನ್ನು ಪಾಲಿಸುವವರಿಗೆ ಇದೊಂದು ವಿಶೇಷ ಸಂಭ್ರಮದ ದಿನವಾಗಿರುತ್ತದೆ. ಸಂಕ್ರಾಂತಿ ದಿನದಂದು ವಿವಾಹಿತ ಹಾಗೂ ಅವಿವಾಹಿತ ಹೆಣ್ಣುಮಕ್ಕಳು ಎಳ್ಳು-ಬೆಲ್ಲ, ಕೊಬ್ಬರಿ, ನೆಲಗಡಲೆ, ಕಬ್ಬು ಬಾಳೆಹಣ್ಣು, ಸಕ್ಕರೆ ಅಚ್ಚು ಇತ್ಯಾದಿಗಳನ್ನು ಎಲ್ಲರಿಗೂ ಹಂಚಿ ಸಂಭ್ರಮಿಸುತ್ತಾರೆ. ಆಂಧ್ರದಲ್ಲಿ ಈ ದಿನದಂದು ಶ್ರೀರಾಮನ ಪೂಜೆ ಮಾಡಿ, ರೈತರು ಜಾನುವಾರುಗಳಿಗೆ ಮೈತೊಳೆದು, ಅದನ್ನು ಸಿಂಗರಿಸಿ ಮೆರವಣಿಗೆ ಮಾಡುತ್ತಾರೆ. ಅದರಲ್ಲೂ ಸಂಕ್ರಮಣದ ದಿನದ ಸಂಜೆ ಎತ್ತುಗಳಿಗೆ ಕಿಚ್ಚು ಹಾಯಿಸುವುದು ಈ ಹಬ್ಬದ ವಿಶೇಷ.

ಎಳ್ಳಿಗೆ ಮಹತ್ವ ಯಾಕೆ?
ಮಕರ ಸಂಕ್ರಾಂತಿಯ ಇನ್ನೊಂದು ಹೆಸರು ಉತ್ತರಾಯಣ ಪುಣ್ಯಕಾಲ. ಇಡೀ ಉತ್ತರಾಯಣವೇ ದೇವತೆಗಳಿಗೆ ಪ್ರಿಯವಾದದ್ದು. ದೇವಕಾರ್ಯ, ಶುಭ ಕಾರ್ಯಗಳಿಗೆ ಈ ದಿನ ಬಹಳ ಪ್ರಾಶಸ್ತ್ಯವಾಗಿದೆ. ಇಂತಹ ಉತ್ತರಾಯಣವನ್ನು ಪ್ರಾರಂಭಿಸುವ ದಿನವಾದ ಮಕರ ಸಂಕ್ರಾಂತಿಗೆ ವಿಶೇಷವಾದ ಮಾನ್ಯತೆಯಿದೆ. ಈ ದಿನ ಶ್ರದ್ಧಾಭಕ್ತಿಯಿಂದ ಮಾಡುವ ಸ್ನಾನ, ಧ್ಯಾನ, ದಾನ, ಹೋಮ, ಪೂಜೆ, ತರ್ಪಣ, ಶ್ರಾದ್ಧ ಮುಂತಾದುವುಗಳಿಗೆ ವಿಶೇಷವಾದ ಫಲ ಸಿಗುತ್ತದೆ ಎನ್ನುವ ವಿಚಾರ ಹಲವು ಶಾಸ್ತ್ರಗಳಲ್ಲಿ ಉಲ್ಲೇಖವಾಗಿದೆ.

ಸಂಕ್ರಾಂತಿ ದಿನದಂದು ಕಪ್ಪು ಎಳ್ಳಿನೊಂದಿಗೆ ಸ್ನಾನ ಮಾಡಿ ಎಳ್ಳುದಾನ ಕೊಟ್ಟರೆ ಒಳ್ಳೆಯದಾಗುತ್ತದೆ ಎನ್ನುವ ನಂಬಿಕೆಯಿದೆ. ಹಾಗೆಯೇ ದೇವಾಲಯಗಳಲ್ಲಿ ಎಳ್ಳೆಣ್ಣೆ ಹಾಕಿ ದೀಪ ಬೆಳಗಬೇಕು. ಈ ದಿನ ನಾವು ಮಾಡಿದ ದಾನ ಧರ್ಮಗಳ ಪುಣ್ಯವು ಜನ್ಮ ಜನ್ಮದಲ್ಲೂ ಸದಾ ನಮಗೆ ಶ್ರೇಯಸ್ಸು ಸಿಗುವಂತೆ ಸೂರ್ಯನು ಅನುಗ್ರಹಿಸುತ್ತಾನೆ ಎಂದು ಹಿರಿಯರು ಹೇಳುತ್ತಾರೆ. `ಎಳ್ಳು ಬೆಲ್ಲ ತಿಂದು ಒಳ್ಳೆಯ ಮಾತನಾಡು’ ಎಂಬ ಕನ್ನಡದ ಗಾದೆಗೆ ಸಂಕ್ರಾಂತಿ ಹಬ್ಬವೇ ಮೂಲವಾಗಿರುವುದು ಎಂದು ಹಲವರು ಹೇಳುತ್ತಾರೆ.

ಸಂಕ್ರಾಂತಿಯು ಸೌರಮಾನದ ಹಬ್ಬ. ಮಕರ ಮಾಸದದಲ್ಲಿ ಮಾಡುವ ಮಕರ ಸಂಕ್ರಮಣ ಆಚರಣೆ, ಚಾಂದ್ರಮಾನದಂತೆ ಪುಷ್ಪಮಾಸದಲ್ಲಿ ಇದು ಬರುತ್ತದೆ. ಎಳ್ಳಿನ ಹಬ್ಬ ಎಂದೇ ಪ್ರಸಿದ್ಧಿಯಾಗಿರುವ ಸಂಕ್ರಮಣ ಹಬ್ಬದಲ್ಲಿ ಎಳ್ಳನ್ನು ನಾನಾ ರೂಪದಲ್ಲಿ ಬಳಸುತ್ತಾರೆ. ಕೆಲವರು ಎಳ್ಳಿನಿಂದ ಸ್ನಾನ ಮಾಡುತ್ತಾರೆ. ಎಳ್ಳಿನ ನೀರಿನಿಂದ ತರ್ಪಣ ಕೊಡುತ್ತಾರೆ, ಎಳ್ಳಿನಿಂದ ಮಾಡಿದ ಗೋವನ್ನು ದಾನ ಮಾಡುತ್ತಾರೆ. ಮಕ್ಕಳಿಗೆ ಆರತಿ ಎತ್ತಿ, ಗುರು ಹಿರಿಯರಿಗೆ ನಮಸ್ಕಾರ ಮಾಡಿ ಆರ್ಶಿವಾದ ಪಡೆಯುವುದು ಸಂಕ್ರಾತಿ ಹಬ್ಬದ ಒಂದು ವಿಶೇಷ ಪದ್ಧತಿ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಮಹಾದೇವ ಶಿವನ ಪಂಚಾಕ್ಷರಿ ಮಂತ್ರ, ಜಪಿಸಿದರೆ ಮನಸ್ಸಿಗೆ ನೆಮ್ಮದಿ ಸಿಗುತ್ತದೆ.
ಪುರುಷರು ತುಂಬಾ ಅಂದದಿಂದ ಇದ್ದರೆ ಸ್ತ್ರೀಯರು ಅವರನ್ನು ಹೊಗಳುತ್ತಾರೆ.ಇದು ಜಗತ್ತಿಗೆ ಗೊತ್ತಿರುವ ಸತ್ಯ.ಯಾವ ಪುರುಷ ತನ್ನ ಅಂದದಿಂದ ಆಕರ್ಷಿಸುತ್ತಾನೋ ಅಂತವರು ಸ್ತ್ರೀಯರ ಮನಸ್ಸನ್ನು ಸುಲಭವಾಗಿ ಕದಿಯುತ್ತಾನೆ.
ಪರಿಸರ ದಿನಾಚರಣೆಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ವಿಶ್ವ ಪರಿಸರ ದಿನಾಚರಣೆ ಆಚರಿಸಲು ಲಕ್ಷ ಲಕ್ಷ ದುಡ್ಡು ವೆಚ್ಚ ಮಾಡಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಪರಿಸರ ದಿನಾಚರಣೆಗಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬರೋಬ್ಬರಿ 20 ಲಕ್ಷ ರೂಪಾಯಿ ಖರ್ಚು ಮಾಡಿದೆ ಎಂದು ತಿಳಿದು ಬಂದಿದೆ. ಜೂನ್ 5 ರಂದು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಮಾಡಲಾಗಿತ್ತು.ಸರಳವಾಗಿ ಆಚರಿಸಬೇಕಿದ್ದ ಪರಿಸರ ದಿನಾಚರಣೆಗೆ 20.45 ಲಕ್ಷ ರೂ. ಹಣ ಖರ್ಚಾಗಿದೆ. ಮಲ್ಲೇಶ್ವರದ ಚೌಡಯ್ಯ ಮೆಮೋರಿಯಲ್ ಹಾಲ್ನಲ್ಲಿ…
ಮೈಕಲ್ ಜಾಕ್ಸನ್ ಎಂಬ ಮಹಾನ್ ಗಾಯಕ ಪ್ರತಿಭೆಯು 150 ವರ್ಷಗಳ ಕಾಲ ಬದುಕಬೇಕೆಂದು ಬಯಸಿದ, ಅದಕ್ಕಾಗಿ ತಲೆ ಕೂದಲಿಂದ ಹಿಡಿದು ಕಾಲಿನ ಬೆರಳುಗಳವರೆಗೆ ದಿನ ನಿತ್ಯ ಪರೀಕ್ಷಿಸಲು 12 ನುರಿತ ಡಾಕ್ಟರ್ ಗಳನ್ನು ತನ್ನ ಮನೆಯಲ್ಲಿ ನೇಮಿಸಿದ್ದ. ಆತ ಆಹಾರವನ್ನು ಸೇವಿಸುವುದಕ್ಕೆ ಮುಂಚೆ ಆತನ ಆಹಾರಗಳನ್ನು ಲ್ಯಾಬ್ ನಲ್ಲಿ ಟೆಸ್ಟ್ ಮಾಡುತ್ತಿದ್ದರು. ಆತನ ದೈನಂದಿನ ವ್ಯಾಯಾಮ ಮತ್ತು ಇತರ ದೇಹ ಸಂರಕ್ಷಣೆಗಾಗಿ ಮತ್ತೆ 15 ಜನರನ್ನು ಕೂಡಾ ನೇಮಿಸಿದ್ದ. ಆಕ್ಸಿಜನ್ ನ ಅಳತೆಯನ್ನು ನಿಯಂತ್ರಿಸುವ ತಂತ್ರಜ್ಞಾನವಿರುವ ಬೆಡ್ಡನ್ನು…
ಧ್ಯಾನವು ಚಿನ್ನದ ಹಾಗೆ ಬಹು ಮೂಲ್ಯವುಳ್ಳದು. ಭೌತಿಕ ಐಶ್ವರ್ಯಕ್ಕೂ,ಮುಕ್ತೀಗೂ,ಶಾಂತಿಗೂ ಧ್ಯಾನವು ಒಳ್ಳೆಯದು. ಅದಕ್ಕಾಗಿ ಉಪಯೋಗಿಸುವ ಸಮಯ ಎಂದಿಗೂ ನಷ್ಟವಾಗುವಂತದಲ್ಲ. ಧ್ಯಾನದ ಲಾಭಗಳು ವರ್ಣಿಸಲು ಹೋದರೆ ಅದಕ್ಕೆ ಅಂತ್ಯವೇ ಇಲ್ಲ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಮಾರ್ಚ್, 2019) ವಿಶ್ರಾಂತಿಯ ಸಲುವಾಗಿ ನಿಕಟ ಸ್ನೇಹಿತರೊಂದಿಗೆ ಸ್ವಲ್ಪ ಸಮಯ ಕಳೆಯಿರಿ. ನೀವು ನಿಮ್ಮನ್ನು ಒಂದು…