ಉಪಯುಕ್ತ ಮಾಹಿತಿ, ದೇವರು

ಸಂಕ್ರಾಂತಿ ಯಾಕೆ ಮಾಡ್ತಾರೆ ಗೊತ್ತಾ? ಈ ದಿನ ಎಳ್ಳಿಗೆ ಯಾಕೆ ಇಷ್ಟು ಮಹತ್ವ.

88

ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಪ್ರತಿ ವರ್ಷ ಜನವರಿ 14 ಅಥವಾ 15 (ಪುಷ್ಯಮಾಸ)ದಲ್ಲಿ ಬರುವ ಮಕರ ಸಂಕ್ರಾಂತಿಯನ್ನು `ಉತ್ತರಾಯಣ ಪುಣ್ಯಕಾಲ’ ಎಂದು ಕರೆಯುತ್ತಾರೆ. ಕೇವಲ ಬದುಕುವುದಕ್ಕೆ ಅಷ್ಟೇ ಅಲ್ಲದೆ, ಸಾಯುವುದಕ್ಕೂ ಉತ್ತರಾಯಣ, ಪುಣ್ಯಕಾಲವನ್ನು ನೋಡುತ್ತಾರೆ. ಈ ಪುಣ್ಯಮುಹೂರ್ತದಲ್ಲಿ ಪುಣ್ಯ ಸ್ಥಳಗಳಲ್ಲಿ ಹಾಗೂ ತುಂಗಾ, ಗಂಗಾ, ಕೃಷ್ಣಾ, ಕಾವೇರಿ ಮುಂತಾದ ಪುಣ್ಯ ನದಿಗಳಲ್ಲಿ ಲಕ್ಷಾಂತರ ದೈವಭಕ್ತರು ತೀರ್ಥಸ್ನಾನ ಮಾಡುತ್ತಾರೆ. ಹಾಗೆಯೇ ಉತ್ತರಾಯಣವನ್ನು ದೇವತೆಗಳ ಕಾಲವೆಂದು ಹಲವರು ನಂಬಿದ್ದಾರೆ.

ಮೊದಲು ದಕ್ಷಿಣದತ್ತ ವಾಲಿ ಚಲಿಸುತ್ತಿದ್ದ ಸೂರ್ಯ, ಸಂಕ್ರಮಣ ದಿನದಿಂದ ಉತ್ತರ ದಿಕ್ಕಿಗೆ ತಿರುಗಿ ಚಲಿಸುತ್ತಾನೆ. ಆಯನ ಎಂದರೆ ಚಲಿಸುವುದು, ಆದರಿಂದ ಉತ್ತರಾಯಣ, ದಕ್ಷಿಣಾಯನ ಎಂದು ಹೆಸರು ಸೃಷ್ಟಿಯಾಗಿದ್ದು. ಹೀಗೆ ಸೂರ್ಯ ಪಥ ಬದಲಾಗುವುದರಿಂದ ನಮ್ಮ ದೇಶದಲ್ಲಿ ಈ ಸಮಯಕ್ಕೆ ಚಳಿ ಕಡಿಮೆಯಾಗಿ ಹಗಲು ಹೆಚ್ಚು ಸಂಭವಿಸುತ್ತದೆ.

ಎಲ್ಲಿ ಹೇಗೆ ಹಬ್ಬ ಆಚರಣೆ?

ಕರ್ನಾಟಕದಲ್ಲಿ ಸಂಕ್ರಾಂತಿ ಎಂದು ಆಚರಿಸಿದರೆ, ನೆರೆಯ ತಮಿಳುನಾಡು ಹಾಗೂ ಆಂಧ್ರ ಪ್ರದೇಶದಲ್ಲಿ ಭೋಗಿ, ಕನುಹಬ್ಬ ಎಂದು ಮೂರುದಿನಗಳ ಕಾಲ ಈ ಹಬ್ಬವನ್ನು ಆಚರಿಸುತ್ತಾರೆ. ಮಕರ ಸಂಕ್ರಾಂತಿಯೂ ಸುಗ್ಗಿಯನ್ನು ಸಾರುವ ಹಬ್ಬವಾಗಿದ್ದು, ದ್ರಾವಿಡ ಸಂಪ್ರದಾಯವನ್ನು ಪಾಲಿಸುವವರಿಗೆ ಇದೊಂದು ವಿಶೇಷ ಸಂಭ್ರಮದ ದಿನವಾಗಿರುತ್ತದೆ. ಸಂಕ್ರಾಂತಿ ದಿನದಂದು ವಿವಾಹಿತ ಹಾಗೂ ಅವಿವಾಹಿತ ಹೆಣ್ಣುಮಕ್ಕಳು ಎಳ್ಳು-ಬೆಲ್ಲ, ಕೊಬ್ಬರಿ, ನೆಲಗಡಲೆ, ಕಬ್ಬು ಬಾಳೆಹಣ್ಣು, ಸಕ್ಕರೆ ಅಚ್ಚು ಇತ್ಯಾದಿಗಳನ್ನು ಎಲ್ಲರಿಗೂ ಹಂಚಿ ಸಂಭ್ರಮಿಸುತ್ತಾರೆ. ಆಂಧ್ರದಲ್ಲಿ ಈ ದಿನದಂದು ಶ್ರೀರಾಮನ ಪೂಜೆ ಮಾಡಿ, ರೈತರು ಜಾನುವಾರುಗಳಿಗೆ ಮೈತೊಳೆದು, ಅದನ್ನು ಸಿಂಗರಿಸಿ ಮೆರವಣಿಗೆ ಮಾಡುತ್ತಾರೆ. ಅದರಲ್ಲೂ ಸಂಕ್ರಮಣದ ದಿನದ ಸಂಜೆ ಎತ್ತುಗಳಿಗೆ ಕಿಚ್ಚು ಹಾಯಿಸುವುದು ಈ ಹಬ್ಬದ ವಿಶೇಷ.

ಎಳ್ಳಿಗೆ ಮಹತ್ವ ಯಾಕೆ?

ಮಕರ ಸಂಕ್ರಾಂತಿಯ ಇನ್ನೊಂದು ಹೆಸರು ಉತ್ತರಾಯಣ ಪುಣ್ಯಕಾಲ. ಇಡೀ ಉತ್ತರಾಯಣವೇ ದೇವತೆಗಳಿಗೆ ಪ್ರಿಯವಾದದ್ದು. ದೇವಕಾರ್ಯ, ಶುಭ ಕಾರ್ಯಗಳಿಗೆ ಈ ದಿನ ಬಹಳ ಪ್ರಾಶಸ್ತ್ಯವಾಗಿದೆ. ಇಂತಹ ಉತ್ತರಾಯಣವನ್ನು ಪ್ರಾರಂಭಿಸುವ ದಿನವಾದ ಮಕರ ಸಂಕ್ರಾಂತಿಗೆ ವಿಶೇಷವಾದ ಮಾನ್ಯತೆಯಿದೆ. ಈ ದಿನ ಶ್ರದ್ಧಾಭಕ್ತಿಯಿಂದ ಮಾಡುವ ಸ್ನಾನ, ಧ್ಯಾನ, ದಾನ, ಹೋಮ, ಪೂಜೆ, ತರ್ಪಣ, ಶ್ರಾದ್ಧ ಮುಂತಾದುವುಗಳಿಗೆ ವಿಶೇಷವಾದ ಫಲ ಸಿಗುತ್ತದೆ ಎನ್ನುವ ವಿಚಾರ ಹಲವು ಶಾಸ್ತ್ರಗಳಲ್ಲಿ ಉಲ್ಲೇಖವಾಗಿದೆ.

ಸಂಕ್ರಾಂತಿ ದಿನದಂದು ಕಪ್ಪು ಎಳ್ಳಿನೊಂದಿಗೆ ಸ್ನಾನ ಮಾಡಿ ಎಳ್ಳುದಾನ ಕೊಟ್ಟರೆ ಒಳ್ಳೆಯದಾಗುತ್ತದೆ ಎನ್ನುವ ನಂಬಿಕೆಯಿದೆ. ಹಾಗೆಯೇ ದೇವಾಲಯಗಳಲ್ಲಿ ಎಳ್ಳೆಣ್ಣೆ ಹಾಕಿ ದೀಪ ಬೆಳಗಬೇಕು. ಈ ದಿನ ನಾವು ಮಾಡಿದ ದಾನ ಧರ್ಮಗಳ ಪುಣ್ಯವು ಜನ್ಮ ಜನ್ಮದಲ್ಲೂ ಸದಾ ನಮಗೆ ಶ್ರೇಯಸ್ಸು ಸಿಗುವಂತೆ ಸೂರ್ಯನು ಅನುಗ್ರಹಿಸುತ್ತಾನೆ ಎಂದು ಹಿರಿಯರು ಹೇಳುತ್ತಾರೆ. `ಎಳ್ಳು ಬೆಲ್ಲ ತಿಂದು ಒಳ್ಳೆಯ ಮಾತನಾಡು’ ಎಂಬ ಕನ್ನಡದ ಗಾದೆಗೆ ಸಂಕ್ರಾಂತಿ ಹಬ್ಬವೇ ಮೂಲವಾಗಿರುವುದು ಎಂದು ಹಲವರು ಹೇಳುತ್ತಾರೆ.

ಸಂಕ್ರಾಂತಿಯು ಸೌರಮಾನದ ಹಬ್ಬ. ಮಕರ ಮಾಸದದಲ್ಲಿ ಮಾಡುವ ಮಕರ ಸಂಕ್ರಮಣ ಆಚರಣೆ, ಚಾಂದ್ರಮಾನದಂತೆ ಪುಷ್ಪಮಾಸದಲ್ಲಿ ಇದು ಬರುತ್ತದೆ. ಎಳ್ಳಿನ ಹಬ್ಬ ಎಂದೇ ಪ್ರಸಿದ್ಧಿಯಾಗಿರುವ ಸಂಕ್ರಮಣ ಹಬ್ಬದಲ್ಲಿ ಎಳ್ಳನ್ನು ನಾನಾ ರೂಪದಲ್ಲಿ ಬಳಸುತ್ತಾರೆ. ಕೆಲವರು ಎಳ್ಳಿನಿಂದ ಸ್ನಾನ ಮಾಡುತ್ತಾರೆ. ಎಳ್ಳಿನ ನೀರಿನಿಂದ ತರ್ಪಣ ಕೊಡುತ್ತಾರೆ, ಎಳ್ಳಿನಿಂದ ಮಾಡಿದ ಗೋವನ್ನು ದಾನ ಮಾಡುತ್ತಾರೆ. ಮಕ್ಕಳಿಗೆ ಆರತಿ ಎತ್ತಿ, ಗುರು ಹಿರಿಯರಿಗೆ ನಮಸ್ಕಾರ ಮಾಡಿ ಆರ್ಶಿವಾದ ಪಡೆಯುವುದು ಸಂಕ್ರಾತಿ ಹಬ್ಬದ ಒಂದು ವಿಶೇಷ ಪದ್ಧತಿ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಪ್ಪಿತಪ್ಪಿಯೂ ʼಆಪಲ್ʼ ಬೀಜಗಳನ್ನು ತಿನ್ನಬೇಡಿ..!ಅದರ ಪರಿಣಾಮವೇನು ಗೊತ್ತ?

    ಹಣ್ಣುಗಳ ಬೀಜಗಳಲ್ಲಿ ಪೋಷಕಗಳಿರುತ್ತವೆ ಎಂದು ಎಲ್ಲಾ ಹಣ್ಣಿನ ಬೀಜಗಳನ್ನು ತಿನ್ನುವುದು ಸರಿಯಲ್ಲ. ಏಕೆಂದರೆ ಕೆಲ ಹಣ್ಣಿನ ಬೀಜಗಳು ಪ್ರಯೋಜನಕ್ಕೆ ಬರುವುದಿಲ್ಲ. ಅದರಲ್ಲೂ ಸೇಬು ಹಣ್ಣಿನ ಬೀಜಗಳನ್ನು ಮರೆತೂ ತಿನ್ನಬಾರದು. ಒಂದು ವೇಳೆ ಹಲ್ಲಿಗೆ ಸಿಕ್ಕಿಹಾಕಿಕೊಂಡರೆ ಗಾಬರಿ ಪಡದೆ ತಕ್ಷಣವೇ ಬಿಸಾಡಬೇಕು. ಏಕೆಂದರೆ ಈ ಬೀಜಗಳಲ್ಲಿ ಅಮೈಡಾಲಿನ್ ಎಂಬ ಪದಾರ್ಥ ಇರುತ್ತದೆ. ಇದು ದೇಹಕ್ಕೆ ಒಳ್ಳೆಯದಲ್ಲ. ಹೀಗಾಗಿ ಈ ಬೀಜಗಳನ್ನು ತಿಂದರೆ ಉಸಿರಾಟದ ತೊಂದರೆ ಎದುರಿಸಬೇಕಾಗುತ್ತದೆ. ಅಷ್ಟೇ ಅಲ್ಲ ತಲೆನೋವು, ವಾಂತಿ, ಬಲಹೀನತೆ, ತಲೆಸುತ್ತು ಇತ್ಯಾದಿ ಲಕ್ಷಣಗಳು ಉಂಟಾಗಬಹುದು….

  • ಸಿನಿಮಾ

    ಅಭಿಮಾನಿಗಳು ಕೊಟ್ಟ ಹೆಸರನ್ನೇ ತಮ್ಮ ಮಗಳಿಗೆ ಇಡಲಿದ್ದಾರೆ ದಂಪತಿ ಯಶ್ ಹಾಗೂ ರಾಧಿಕಾ ಪಂಡಿತ್!ಆ ಹೆಸರೇನು ಗೊತ್ತಾ?

    ಸ್ಯಾಂಡಲ್ವುಡ್ ತಾರಾ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅವರ ಜೀವನದಲ್ಲಿ ಮುದ್ದಾದ ಹೆಣ್ಣು ಮಗು ಎಂಟ್ರಿ ಕೊಟ್ಟು ಮೂರು ತಿಂಗಳಾಗಿದೆ. ಮೂರು ತಿಂಗಳಾದರೂ ಯಶ್ ಹಾಗೂ ರಾಧಿಕಾ ತಮ್ಮ ಮಗಳ ನಾಮಕರಣವನ್ನು ಮಾಡಲಿಲ್ಲ. ಈಗ ಅಭಿಮಾನಿಗಳು ಸೂಚಿಸಿದ ಹೆಸರನ್ನೇ ತಮ್ಮ ಮಗಳಿಗೆ ನಾಮಕರಣ ಮಾಡುತ್ತಿದ್ದಾರೆ. ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಹೆಣ್ಣು ಮಗುವಿಗೆ ತಂದೆ-ತಾಯಿ ಆಗಿದ್ದಾರೆ ಎಂಬ ಸುದ್ದಿ ಹೊರ ಬರುತ್ತಿದ್ದಂತೆ, ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮಗಳಿಗೆ ಹೆಸರು ಸೂಚಿಸಲು ಪ್ರಾರಂಭಿಸಿದ್ದಾರೆ. ಯಶ್…

  • Cinema

    ಚಿರಂಜೀವಿ ಸರ್ಜಾ ಅಭಿಮಾನಿಗಳು ಕಂಡಿದ್ದ ಆ ಕನಸು ಕಡೆಗೂ ಕನಸಾಗಿಯೇ ಉಳಿಯಿತು!

    ಹಲವು ಪಾತ್ರಗಳ ಮೂಲಕ ಸಿನಿಪ್ರಿಯರನ್ನು ಚಿರಂಜೀವಿ ಸರ್ಜಾ ರಂಜಿಸಿದ್ದರು. ಹಾಗಿದ್ದರೂ ಅಭಿಮಾನಿಗಳಿಗೆ ಸಮಾಧಾನ ಆಗಿರಲಿಲ್ಲ. ಯಾಕೆಂದರೆ, ಫ್ಯಾನ್ಸ್‌ಗೆ ಇದ್ದ ಮಹತ್ವದ ಆಸೆಯೊಂದು ಇನ್ನೂ ಈಡೇರಿರಲಿಲ್ಲ. ಏನದು? ಸರ್ಜಾ ಕುಟುಂಬದ ಸ್ಟಾರ್‌ ಹೀರೋಗಳೆಲ್ಲ ಜೊತೆಯಾಗಿ ನಟಿಸಬೇಕು ಎಂದು ಅಭಿಮಾನಿಗಳು ಕನಸು ಕಂಡಿದ್ದರು. ಧ್ರುವ ಸರ್ಜಾ, ಚಿರಂಜೀವಿ ಸರ್ಜಾ ಜೊತೆ ಅವರ ಮಾವ ಅರ್ಜುನ್‌ ಸರ್ಜಾರನ್ನು ಒಟ್ಟಿಗೆ ತೆರೆಮೇಲೆ ನೋಡಬೇಕು ಎಂಬ ಆಸೆ ಅವರದ್ದಾಗಿತ್ತು. ಈ ವಿಚಾರದ ಬಗ್ಗೆ ಸರ್ಜಾ ಕುಟುಂಬದ ಹೀರೋಗಳಿಗೆ ಆಗಾಗ ಪ್ರಶ್ನೆ ಎದುರಾಗುತ್ತಲೇ ಇತ್ತು. ‘ನೀವು…

  • ಸಿನಿಮಾ

    ಸ್ಯಾಂಡಲ್ ವುಡ್ ನಟರ ಮನೆಯ ಮೇಲೆ ಐಟಿ ದಾಳಿ…ರೊಚ್ಚಿಗೆದ್ದ ಅಭಿಮಾನಿಗಳು ಮೋದಿಯವರಿಗೆ ಹೇಳಿದ್ದೇನು ಗೊತ್ತೆ?

    ಇಂದು ಮುಂಜಾನೆ ಸ್ಯಾಂಡಲ್ ವುಡ್ ಸ್ಟಾರ್ ನಟರು ಗಳಾದ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ , ಪವರ್ ಪುನೀತ್ ರಾಜಕುಮಾರ್, ರಾಕಿಂಗ್ ಸ್ಟಾರ್ ಯಶ್ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಮನೆಯ ಮೇಲೆ ಐಟಿ ದಾಳಿ ನಡೆದಿದೆ. ಅಲ್ಲದೆ ನಿರ್ಮಾಪಕರುಗಳಾದ ಕೆಜಿಎಫ್ ಖ್ಯಾತಿಯ ಸ್ಟಾರ್ ನಿರ್ಮಾಪಕರಾದ ಕಿರಂಗದೂರ್ ವಿಜಯ್, ಮನೋಹರ್, ರಾಕ್ ಲೈನ್ ವೆಂಕಟೇಶ್ ಅವರ ಮನೆಯ ಮೇಲೂ ಸಹ ದಾಳಿ ನಡೆದಿದೆ. ಸಿನಿಮಾ ಕ್ಷೇತ್ರದಲ್ಲಿ ಬ್ಲ್ಯಾಕ್ ಮನಿಯನ್ನು ವೈಟ್ ಮನಿ ಆಗಿ ಬದಲಾವಣೆ…

  • ವಿಸ್ಮಯ ಜಗತ್ತು

    ಇವರು ಮದುವೆಯಾಗಿದ್ದು ಒಂದು ಪ್ರಾಣಿ ಜೊತೆ..!ಆ ಪ್ರಾಣಿ ಯಾವುದು ಗೊತ್ತಾ?

    ನಮ್ಮ ದೇಶದಲ್ಲಿ ಮಳೆ ಬರುವಂತೆ ಪ್ರಾರ್ಥಿಸಿ ಕತ್ತೆ, ಕಪ್ಪೆ ಹಾಗೂ ಇತರ ಪ್ರಾಣಿಗಳ ಜೊತೆ ಮಾಡುವೆ ಮಾಡುವುದು ಸಾಮಾನ್ಯವಾಗಿದೆ. ಈ ಪ್ರಾಣಿಗಳ ಜೊತೆ ಮದುವೆ ಮಾಡಿಕೊಂಡು ಮೆರೆವಣಿಗೆ ಮಾಡೋದು ಎಲ್ಲರಿಗು ಗೊತ್ತಿರುವ ವಿಚಾರ.ಹೀಗೆ ವಿದೇಶಗಳಲ್ಲಿ ಇಂತಹ ಸಂಪ್ರದಾಯಗಳು ಚಾಲ್ತಿಯಲ್ಲಿವೆ.

  • Archive

    RRR ಚಲನಚಿತ್ರಕ್ಕೆ ಆಸ್ಕರ್ ಪ್ರಶಸ್ತಿ

    ಇತಿಹಾಸ ಸೃಷ್ಟಿಸಿದ RRR  ಚಿತ್ರ ದಕ್ಷಿಣ ಭಾರತ ಚಲನಚಿತ್ರ ಒಂದಕ್ಕೆ ಮೊದಲ ಆಸ್ಕರ್ ಪ್ರಶಸ್ತಿಯ ಗೌರವ ನಾಟು ನಾಟು..’, ‘ಲಿಫ್ಟ್​ ಮಿ ಅಪ್​’, ‘ದಿಸ್ ಈಸ್ ಲೈಫ್​’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್​ ಹಾಡುಗಳು ರೇಸ್​​ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ. ‘ಆರ್​ಆರ್​ಆರ್’ ಚಿತ್ರದ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕರ‍್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್​ ಒರಿಜಿನಲ್​ ಸಾಂಗ್​’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ…