ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಪ್ರತಿ ವರ್ಷ ಜನವರಿ 14 ಅಥವಾ 15 (ಪುಷ್ಯಮಾಸ)ದಲ್ಲಿ ಬರುವ ಮಕರ ಸಂಕ್ರಾಂತಿಯನ್ನು `ಉತ್ತರಾಯಣ ಪುಣ್ಯಕಾಲ’ ಎಂದು ಕರೆಯುತ್ತಾರೆ. ಕೇವಲ ಬದುಕುವುದಕ್ಕೆ ಅಷ್ಟೇ ಅಲ್ಲದೆ, ಸಾಯುವುದಕ್ಕೂ ಉತ್ತರಾಯಣ, ಪುಣ್ಯಕಾಲವನ್ನು ನೋಡುತ್ತಾರೆ. ಈ ಪುಣ್ಯಮುಹೂರ್ತದಲ್ಲಿ ಪುಣ್ಯ ಸ್ಥಳಗಳಲ್ಲಿ ಹಾಗೂ ತುಂಗಾ, ಗಂಗಾ, ಕೃಷ್ಣಾ, ಕಾವೇರಿ ಮುಂತಾದ ಪುಣ್ಯ ನದಿಗಳಲ್ಲಿ ಲಕ್ಷಾಂತರ ದೈವಭಕ್ತರು ತೀರ್ಥಸ್ನಾನ ಮಾಡುತ್ತಾರೆ. ಹಾಗೆಯೇ ಉತ್ತರಾಯಣವನ್ನು ದೇವತೆಗಳ ಕಾಲವೆಂದು ಹಲವರು ನಂಬಿದ್ದಾರೆ.

ಮೊದಲು ದಕ್ಷಿಣದತ್ತ ವಾಲಿ ಚಲಿಸುತ್ತಿದ್ದ ಸೂರ್ಯ, ಸಂಕ್ರಮಣ ದಿನದಿಂದ ಉತ್ತರ ದಿಕ್ಕಿಗೆ ತಿರುಗಿ ಚಲಿಸುತ್ತಾನೆ. ಆಯನ ಎಂದರೆ ಚಲಿಸುವುದು, ಆದರಿಂದ ಉತ್ತರಾಯಣ, ದಕ್ಷಿಣಾಯನ ಎಂದು ಹೆಸರು ಸೃಷ್ಟಿಯಾಗಿದ್ದು. ಹೀಗೆ ಸೂರ್ಯ ಪಥ ಬದಲಾಗುವುದರಿಂದ ನಮ್ಮ ದೇಶದಲ್ಲಿ ಈ ಸಮಯಕ್ಕೆ ಚಳಿ ಕಡಿಮೆಯಾಗಿ ಹಗಲು ಹೆಚ್ಚು ಸಂಭವಿಸುತ್ತದೆ.

ಎಲ್ಲಿ ಹೇಗೆ ಹಬ್ಬ ಆಚರಣೆ?
ಕರ್ನಾಟಕದಲ್ಲಿ ಸಂಕ್ರಾಂತಿ ಎಂದು ಆಚರಿಸಿದರೆ, ನೆರೆಯ ತಮಿಳುನಾಡು ಹಾಗೂ ಆಂಧ್ರ ಪ್ರದೇಶದಲ್ಲಿ ಭೋಗಿ, ಕನುಹಬ್ಬ ಎಂದು ಮೂರುದಿನಗಳ ಕಾಲ ಈ ಹಬ್ಬವನ್ನು ಆಚರಿಸುತ್ತಾರೆ. ಮಕರ ಸಂಕ್ರಾಂತಿಯೂ ಸುಗ್ಗಿಯನ್ನು ಸಾರುವ ಹಬ್ಬವಾಗಿದ್ದು, ದ್ರಾವಿಡ ಸಂಪ್ರದಾಯವನ್ನು ಪಾಲಿಸುವವರಿಗೆ ಇದೊಂದು ವಿಶೇಷ ಸಂಭ್ರಮದ ದಿನವಾಗಿರುತ್ತದೆ. ಸಂಕ್ರಾಂತಿ ದಿನದಂದು ವಿವಾಹಿತ ಹಾಗೂ ಅವಿವಾಹಿತ ಹೆಣ್ಣುಮಕ್ಕಳು ಎಳ್ಳು-ಬೆಲ್ಲ, ಕೊಬ್ಬರಿ, ನೆಲಗಡಲೆ, ಕಬ್ಬು ಬಾಳೆಹಣ್ಣು, ಸಕ್ಕರೆ ಅಚ್ಚು ಇತ್ಯಾದಿಗಳನ್ನು ಎಲ್ಲರಿಗೂ ಹಂಚಿ ಸಂಭ್ರಮಿಸುತ್ತಾರೆ. ಆಂಧ್ರದಲ್ಲಿ ಈ ದಿನದಂದು ಶ್ರೀರಾಮನ ಪೂಜೆ ಮಾಡಿ, ರೈತರು ಜಾನುವಾರುಗಳಿಗೆ ಮೈತೊಳೆದು, ಅದನ್ನು ಸಿಂಗರಿಸಿ ಮೆರವಣಿಗೆ ಮಾಡುತ್ತಾರೆ. ಅದರಲ್ಲೂ ಸಂಕ್ರಮಣದ ದಿನದ ಸಂಜೆ ಎತ್ತುಗಳಿಗೆ ಕಿಚ್ಚು ಹಾಯಿಸುವುದು ಈ ಹಬ್ಬದ ವಿಶೇಷ.

ಎಳ್ಳಿಗೆ ಮಹತ್ವ ಯಾಕೆ?
ಮಕರ ಸಂಕ್ರಾಂತಿಯ ಇನ್ನೊಂದು ಹೆಸರು ಉತ್ತರಾಯಣ ಪುಣ್ಯಕಾಲ. ಇಡೀ ಉತ್ತರಾಯಣವೇ ದೇವತೆಗಳಿಗೆ ಪ್ರಿಯವಾದದ್ದು. ದೇವಕಾರ್ಯ, ಶುಭ ಕಾರ್ಯಗಳಿಗೆ ಈ ದಿನ ಬಹಳ ಪ್ರಾಶಸ್ತ್ಯವಾಗಿದೆ. ಇಂತಹ ಉತ್ತರಾಯಣವನ್ನು ಪ್ರಾರಂಭಿಸುವ ದಿನವಾದ ಮಕರ ಸಂಕ್ರಾಂತಿಗೆ ವಿಶೇಷವಾದ ಮಾನ್ಯತೆಯಿದೆ. ಈ ದಿನ ಶ್ರದ್ಧಾಭಕ್ತಿಯಿಂದ ಮಾಡುವ ಸ್ನಾನ, ಧ್ಯಾನ, ದಾನ, ಹೋಮ, ಪೂಜೆ, ತರ್ಪಣ, ಶ್ರಾದ್ಧ ಮುಂತಾದುವುಗಳಿಗೆ ವಿಶೇಷವಾದ ಫಲ ಸಿಗುತ್ತದೆ ಎನ್ನುವ ವಿಚಾರ ಹಲವು ಶಾಸ್ತ್ರಗಳಲ್ಲಿ ಉಲ್ಲೇಖವಾಗಿದೆ.

ಸಂಕ್ರಾಂತಿ ದಿನದಂದು ಕಪ್ಪು ಎಳ್ಳಿನೊಂದಿಗೆ ಸ್ನಾನ ಮಾಡಿ ಎಳ್ಳುದಾನ ಕೊಟ್ಟರೆ ಒಳ್ಳೆಯದಾಗುತ್ತದೆ ಎನ್ನುವ ನಂಬಿಕೆಯಿದೆ. ಹಾಗೆಯೇ ದೇವಾಲಯಗಳಲ್ಲಿ ಎಳ್ಳೆಣ್ಣೆ ಹಾಕಿ ದೀಪ ಬೆಳಗಬೇಕು. ಈ ದಿನ ನಾವು ಮಾಡಿದ ದಾನ ಧರ್ಮಗಳ ಪುಣ್ಯವು ಜನ್ಮ ಜನ್ಮದಲ್ಲೂ ಸದಾ ನಮಗೆ ಶ್ರೇಯಸ್ಸು ಸಿಗುವಂತೆ ಸೂರ್ಯನು ಅನುಗ್ರಹಿಸುತ್ತಾನೆ ಎಂದು ಹಿರಿಯರು ಹೇಳುತ್ತಾರೆ. `ಎಳ್ಳು ಬೆಲ್ಲ ತಿಂದು ಒಳ್ಳೆಯ ಮಾತನಾಡು’ ಎಂಬ ಕನ್ನಡದ ಗಾದೆಗೆ ಸಂಕ್ರಾಂತಿ ಹಬ್ಬವೇ ಮೂಲವಾಗಿರುವುದು ಎಂದು ಹಲವರು ಹೇಳುತ್ತಾರೆ.

ಸಂಕ್ರಾಂತಿಯು ಸೌರಮಾನದ ಹಬ್ಬ. ಮಕರ ಮಾಸದದಲ್ಲಿ ಮಾಡುವ ಮಕರ ಸಂಕ್ರಮಣ ಆಚರಣೆ, ಚಾಂದ್ರಮಾನದಂತೆ ಪುಷ್ಪಮಾಸದಲ್ಲಿ ಇದು ಬರುತ್ತದೆ. ಎಳ್ಳಿನ ಹಬ್ಬ ಎಂದೇ ಪ್ರಸಿದ್ಧಿಯಾಗಿರುವ ಸಂಕ್ರಮಣ ಹಬ್ಬದಲ್ಲಿ ಎಳ್ಳನ್ನು ನಾನಾ ರೂಪದಲ್ಲಿ ಬಳಸುತ್ತಾರೆ. ಕೆಲವರು ಎಳ್ಳಿನಿಂದ ಸ್ನಾನ ಮಾಡುತ್ತಾರೆ. ಎಳ್ಳಿನ ನೀರಿನಿಂದ ತರ್ಪಣ ಕೊಡುತ್ತಾರೆ, ಎಳ್ಳಿನಿಂದ ಮಾಡಿದ ಗೋವನ್ನು ದಾನ ಮಾಡುತ್ತಾರೆ. ಮಕ್ಕಳಿಗೆ ಆರತಿ ಎತ್ತಿ, ಗುರು ಹಿರಿಯರಿಗೆ ನಮಸ್ಕಾರ ಮಾಡಿ ಆರ್ಶಿವಾದ ಪಡೆಯುವುದು ಸಂಕ್ರಾತಿ ಹಬ್ಬದ ಒಂದು ವಿಶೇಷ ಪದ್ಧತಿ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಚುನಾವಣಾ ರಣರಂಗ ದಿನೇ ದಿನೇ ಹೆಚ್ಚು ಹಾಮಾನಾ ಸೆಳೆಯುತ್ತಿದ್ದು, ಮತದಾನ ಮಾಡುವುದಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿವೆ. ಈಗಾಗಲೇ ಬಿಜೆಪಿ ಮತ್ತು ಜೆಡಿಎಸ್ ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದವು. ಆದರೆ ಕಾಂಗ್ರೆಸ್ ಮಾತ್ರ ತಾಳ್ಮೆ ತೆಗೆದುಕೊಂಡಿತ್ತು.. ಆದರೆ ನೆನ್ನೆ ಸಂಜೆ ವೇಳೆಗೆ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಕರ್ನಾಟಕ ರಾಜ್ಯದ ವಿಧಾನಸಭಾ ಅಭ್ಯರ್ಥಿಗಳ ಹೆಸರನ್ನು ಒಂದೇ ಪಟ್ಟಿಯಲ್ಲಿ ಬಿಡುಗಡೆ ಮಾಡಿದೆ. ನಿನ್ನೆ ದೆಹಲಿಯಿಂದ ಬೆಂಗಳೂರಿಗೆ ಬಂಡ ಜಿ…
ಕರ್ನಾಟಕದ ಸುದ್ದಿ ಮಾಧ್ಯಮಗಳಲ್ಲಿ ‘ಉದಯ ನ್ಯೂಸ್’ ವಾಹಿನಿಯು ಒಂದು ಕಾಲದಲ್ಲಿ ತುಂಬಾ ಹೆಸರು ಮಾಡಿತ್ತು.ಆದರೆ ಈಗ ಬಂದಿರುವ ಸುದ್ದಿವಾಹಿನಿಗಳಿಗೆ ಪೈಪೋಟಿ ಕೊಡಲಾಗದೆ ಈ ವಾಹಿನಿಯು ಈಗ ಮುಚ್ಚುವ ಸ್ಥಿತಿಗೆ ತಲುಪಿದೆ.
ರೆಬೆಲ್ ಸ್ಟಾರ್ ಅಂಬರೀಶ್ ಅವರ ನಿಧನ ಸುದ್ದಿ ಕೇಳಿ ವಿದೇಶದಲ್ಲಿ ಶೂಟಿಂಗ್ ಮಾಡುತ್ತಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಚಿತ್ರೀಕರಣವನ್ನು ನಿಲ್ಲಿಸಿ ಬಹಳ ಅಡೆ ತಡೆಗಳನ್ನು ದಾಟಿ ಬೆಂಗಳೂರಿಗೆ ಬಂದಿದ್ದಾರೆ. ಅಂಬರೀಶ್ ಅವರ ನಿಧನದ ಸುದ್ದಿ ಕೇಳಿ ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ ,”ಅಂಬಿ ಅಪ್ಪಾಜಿಯನ್ನು ಕಳೆದುಕೊಂಡಿರುವದನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಸ್ವೀಡನ್ ಅಲ್ಲಿ ನಡೆಯುತ್ತಿದ್ದ ಯಜಮಾನ ಶೂಟಿಂಗ್ ರದ್ದುಗೊಳಿಸಿ ಇಡೀ ತಂಡ ಆದಷ್ಟೂ ಬೇಗ ಬೆಂಗಳೂರಿಗೆ ವಾಪಸಾಗುತ್ತಿದ್ದೇವೆ” ಎಂದು ಟ್ವೀಟ್ ಮಾಡಿದ್ದರು. ಬಹುಶಃ ದರ್ಶನ್ ಅವರು ಭಯ ಪಡುವ…
ಭಗವದ್ಗೀತೆಯ ಕಿರು ಪರಿಚಯ.. ಪ್ರಶ್ನೋತ್ತರಮಾಲಿಕೆ.. ಪ್ರತಿಯೊಬ್ಬರೂ ಓದಿ.. ಶೇರ್ ಮಾಡಿ.. * ಭಗವದ್ಗೀತೆಯನ್ನು ಯಾರು ಯಾರಿಗೆ ಬೋಧಿಸಿದರು..? ಉತ್ತರ : ಭಗವಾನ್ ಶ್ರೀಕೃಷ್ಣ ಅರ್ಜುನನಿಗೆ. * ಯಾವಾಗ ಬೋಧಿಸಿದ..? ಉತ್ತರ : ಇಂದಿನಿಂದ ಸುಮಾರು ೭ ಸಾವಿರ ವರ್ಷಗಳ ಹಿಂದೆ. * ಯಾವ ದಿನ ಬೋಧಿಸಿದ..? ಉತ್ತರ : ರವಿವಾರ. * ಯಾವ ತಿಥಿಯಲ್ಲಿ..? ಉತ್ತರ : ಏಕಾದಶಿಯಂದು. * ಎಲ್ಲಿ ಬೋಧಿಸಿದ..? ಉತ್ತರ : ಕುರುಕ್ಷೇತ್ರದ ರಣಭೂಮಿಯಲ್ಲಿ. * ಎಷ್ಟು ಸಮಯ ಬೋಧಿಸಿದ..? ಉತ್ತರ : 45…
ಮನುಷ್ಯ ಎಷ್ಟು ವರ್ಷ ಬದುಕಿರಬಲ್ಲ…? ಜಗತ್ತಿನ ಅತ್ಯಂತ ಹಿರಿಯ ವ್ಯಕ್ತಿ ಯಾರಿರಬಹುದು….? ಮನುಷ್ಯನ ವಯಸ್ಸಿಗೆ ಮಿತಿ ಇದ್ಯಾ….? ಇಂತಹ ಹತ್ತಾರು ಪ್ರಶ್ನೆಗಳು ನಮ್ಮ ಮನಸ್ಸಿನಲ್ಲಿ ಆಗಾಗ ಗಿರಕಿ ಹೊಡೆಯುತ್ತಲೇ ಇರುತ್ತವೆ. ಅಮೆರಿಕದ ವಿಜ್ಞಾನಿಗಳು ಈ ಬಗ್ಗೆ ಸಂಶೋಧನೆ ನಡೆಸಿದ್ದಾರೆ. 5 ತಂಡಗಳಾಗಿ ಪ್ರತ್ಯೇಕ ಸಂಶೋಧನೆ ನಡೆಸಿದ್ದು, ಮನುಷ್ಯನ ಆಯಸ್ಸು ಗರಿಷ್ಠ 114.9 ವರ್ಷ ಅಥವಾ ಅದನ್ನು ಮೀರಲೂಬಹುದು ಅನ್ನೋ ತೀರ್ಮಾನಕ್ಕೆ ಬಂದಿದ್ದಾರೆ. ಆದ್ರೆ ಈ ಸಂಶೋಧನೆಯಲ್ಲಿ ನಿಖರತೆ ಇಲ್ಲ ಅನ್ನೋದು ಇನ್ನು ಕೆಲವರ ವಾದ. ಮನುಷ್ಯ 120…
ಈಗಿನ ಸೋಶಿಯಲ್ ಮಿಡಿಯಾಗಳಾದ ಫೇಸ್ಬುಕ್,ಟ್ವಿಟ್ಟರ್, ಹಾಗೂ ಯೂ ಟೂಬ್’ಗಳಲ್ಲಿ ರಾತ್ರೋ ರಾತ್ರಿ ಫೇಮಸ್ ಆದವರಿದ್ದಾರೆ. ಅವರು ಹೇಗಿದ್ದಾರೆ ಅನ್ನುವುದು ಮುಖ್ಯ ಅಲ್ಲ. ಅವರಲ್ಲಿ ಏನು ಟ್ಯಾಲೆಂಟ್ ಇದೆ ಅನ್ನುವುದು ಮುಖ್ಯ. ಅಂತಹ ಟ್ಯಾಲೆಂಟ್ ಇದ್ದವರು ಸೋಶಿಯಲ್ ಮಿಡಿಯಾಗಳಿಂದ ಸೂಪರ್ ಸ್ಟಾರ್ ಆಗಬಹುದು.