News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜಕೀಯ

ಬಿಜೆಪಿ 2023 ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?

105

ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್, ಅರ್ಧ ಲೀ. ಉಚಿತ ನಂದಿನಿ ಹಾಲು: ಬಿಜೆಪಿಯಿಂದ ಪ್ರಣಾಳಿಕೆ ರಿಲೀಸ್ !!! ಬಿಪಿಎಲ್ (BPL) ಕುಟುಂಬಗಳಿಗೆ ಪ್ರತಿವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್‌ಗಳನ್ನು ಉಚಿತವಾಗಿ ವಿತರಿಸುತ್ತೇವೆ ಎಂದು ಬಿಜೆಪಿ (BJP) ತನ್ನ ಚುನಾವಣಾ (Election) ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ.

ರಾಜ್ಯದ ವಿಧಾನ ಸಭೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು. ಪ್ರಣಾಳಿಕೆ ರಚಿಸಿರುವ ಸಚಿವ ಡಾ.ಸುಧಾಕರ್ ನೇತೃತ್ವದ ಸಮಿತಿಯು ವಿವಿಧ ವಲಯಗಳ ನಿರೀಕ್ಷೆಗಳು, ಅಗತ್ಯತೆಗಳ ಕುರಿತು ವಲಯವಾರು ತಜ್ಞರ ಜೊತೆ ಸಂವಾದ ನಡೆಸಿ ಅಭಿಪ್ರಾಯ ಸಂಗ್ರಹ ಮಾಡಿ, ಪ್ರಣಾಳಿಕೆಯನ್ನು ಸಿದ್ಧಪಡಿಸಿದೆ.

ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?:
ಬಿಪಿಎಲ್ ಕುಟುಂಬಗಳಿಗೆ ಪ್ರತಿವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್‌ಗಳನ್ನು ಉಚಿತವಾಗಿ ವಿತರಿಸುತ್ತೇವೆ.

ಕೈಗೆಟುಕುವ ದರದಲ್ಲಿ ಗುಣಮಟ್ಟದ ಮತ್ತು ಆರೋಗ್ಯಕರ ಆಹಾರವನ್ನು ಒದಗಿಸಲು ರಾಜ್ಯದ ಪ್ರತಿ ಮಹಾನಗರ ಪಾಲಿಕೆಯ ವಾರ್ಡ್‍ಗಳಲ್ಲಿ ಅಟಲ್ ಆಹಾರ ಕೇಂದ್ರವನ್ನು ಸ್ಥಾಪಿಸುತ್ತೇವೆ.

ಪೋಷಣೆ ಯೋಜನೆಯ ಮೂಲಕ ಪ್ರತಿ ಬಿಪಿಎಲ್ ಕುಟುಂಬಗಳಿಗೆ ಪ್ರತಿದಿನ ಅರ್ಧ ಲೀಟರ್ ನಂದಿನಿ ಹಾಲು ಮತ್ತು ಪ್ರತಿ ತಿಂಗಳು 5 ಕೆಜಿ ಶ್ರೀ ಅನ್ನ- ಸಿರಿ ಧಾನ್ಯವನ್ನು ಒಳಗೊಂಡ ಪಡಿತರ ಕಿಟ್ ನೀಡುತ್ತೇವೆ.

ವಿಶ್ವೇಶ್ವರಯ್ಯ ವಿದ್ಯಾ ಯೋಜನೆ ಇದರಡಿ ಸರ್ಕಾರಿ ಶಾಲೆಗಳನ್ನು ಅತ್ಯುನ್ನತ ಶ್ರೇಣಿಗೆ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಪ್ರಬುದ್ಧರು ಹಾಗೂ ಸಂಸ್ಥೆಗಳ ಜತೆ ಸಹಭಾಗಿತ್ವ ಹೊಂದಲಾಗುತ್ತದೆ.

ಸಮನ್ವಯ ಯೋಜನೆ ಇದರಡಿ ತ್ವರಿತಗತಿಯಲ್ಲಿ SME ಗಳು ಮತ್ತು ITI ಗಳ ನಡುವೆ ಸಮನ್ವಯತೆ ಸಾಧಿಸುತ್ತೇವೆ. ಪ್ರತಿಭಾವಂತ ಯುವ ವೃತ್ತಿಪರರಿಗೆ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಕ್ರಿಯಾತ್ಮಕ ಪರಿಸರ ವ್ಯವಸ್ಥೆಯನ್ನು ನಿರ್ಮಾಣ ಮಾಡುತ್ತೇವೆ.

ಒನಕೆ ಓಬವ್ವ ಸಾಮಾಜಿಕ ನ್ಯಾಯ ನಿಧಿ ಯೋಜನೆಯನ್ನು ಪ್ರಾರಂಭಿಸುತ್ತೇವೆ. ಈ ಯೋಜನೆಯಡಿ ಎಸ್‍ಸಿ, ಎಸ್‍ಟಿ ಸಮುದಾಯದ ಮಹಿಳೆಯರು 5 ವರ್ಷಗಳ ಅವಧಿಗೆ ಮಾಡುವ ಸ್ಥಿರ ಠೇವಣಿಗಳ ಮೇಲೆ – 10 ಸಾವಿರದವರೆಗೆ ತಾಳಿಯಾಗುವ ಠೇವಣಿ ನೀಡುತ್ತೇವೆ.

ಬೆಂಗಳೂರಿನ ಅಪಾರ್ಟ್‌ಮೆಂಟ್‌ಗಳಲ್ಲಿ ಸುಲಲಿತ ಜೀವನಕ್ಕೆ ಕರ್ನಾಟಕ ಅಪಾರ್ಟ್ ಮೆಂಟ್ ಮಾಲೀಕತ್ವ ಕಾಯಿದೆ 1972ಕ್ಕೆ ಸೂಕ್ತ ತಿದ್ದುಪಡಿಗಳನ್ನು ತರುತ್ತೇವೆ ಹಾಗೂ ಕಂದುಕೊರತೆಗಳ ಪರಿಹಾರಕ್ಕೆ ಆನ್ ಲೈನ್ ವ್ಯವಸ್ಥೆಯನ್ನು ಅನುಷ್ಠಾನಗೊಳಿಸುತ್ತೇವೆ.

ಉನ್ನತ ಮಟ್ಟದ ಸಮಿತಿಯ ಶಿಫಾರಸ್ಸಿನ ಆಧಾರದ ಮೇಲೆ ಕರ್ನಾಟಕದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೊಳಿಸುತ್ತೇವೆ.

ರಾಜ್ಯದಾದ್ಯಂತ ನಿವೇಶನ ರಹಿತ, ವಸತಿ ರಹಿತ ನಿವಾಸಿಗಳಿಗೆ ಸರ್ವರಿಗೂ ಸೂರು ಯೋಜನೆಯಡಿ 10 ಲಕ್ಷ ವಸತಿ ನಿವೇಶನಗಳನ್ನು ಕಂದಾಯ ಇಲಾಖೆ ಮೂಲಕ ಹಂಚಿಕೆ ಮಾಡುತ್ತೇವೆ.

ಐಎಎಸ್, ಕೆಎಎಸ್, ಬ್ಯಾಂಕಿಂಗ್, ಸರ್ಕಾರಿ ಉದ್ಯೋಗಾಕಾಂಕ್ಷಿಗಳು ತರಬೇತಿ ಪಡೆಯಲು ಆರ್ಥಿಕ ಪ್ರೋತ್ಸಾಹವನ್ನು ನೀಡುವ ಮೂಲಕ ಮಹತ್ವಾಕಾ೦ಕ್ಷೆಯ ಯುವಜನರಿಗೆ ವೃತ್ತಿ ಬೆಂಬಲವನ್ನು ಒದಗಿಸುತ್ತೇವೆ.

ಮಿಷನ್ ಸ್ವಾಸ್ಥ್ಯ ಕರ್ನಾಟಕದ ಅಡಿ ಸರ್ಕಾರಿ ಆಸ್ಪತ್ರೆ, ಆರೋಗ್ಯ ಕೇಂದ್ರಗಳಲ್ಲಿನ ಮೂಲಸೌಕರ್ಯಗಳನ್ನು ಸುಧಾರಿಸುತ್ತೇವೆ. ಮಹಾನಗರ ಪಾಲಿಕೆಯ ಪ್ರತಿ ವಾರ್ಡ್‍ನಲ್ಲಿ ಲ್ಯಾಬೊರೇಟರಿ ಸೌಲಭ್ಯ ಹೊಂದಿರುವ ನಮ್ಮ ಕ್ಲಿನಿಕ್ ಸ್ಥಾಪಿಸುತ್ತೇವೆ. ಹಾಗೂ ಹಿರಿಯ ನಾಗರಿಕರಿಗೆ ಪ್ರತಿ ವರ್ಷ ಉಚಿತವಾಗಿ ಸಂಪೂರ್ಣ ಆರೋಗ್ಯ ತಪಾಸಣೆಯ ಸೌಲಭ್ಯ ಕಲ್ಪಿಸುತ್ತೇವೆ.

ನಮ್ಮ ಮುಂದಿನ ಪೀಳಿಗೆಗಾಗಿ ಬೆಂಗಳೂರನ್ನು ಅಭಿವೃದ್ಧಿಪಡಿಸಿ, ಅದನ್ನು ರಾಜ್ಯ ರಾಜಧಾನಿ ಪ್ರದೇಶ ಎಂದು ಗುರುತಿಸಲಾಗುತ್ತದೆ. ತಂತ್ರಜ್ಞಾನ ಆಧಾರಿತ ನಗರ ಅಭಿವೃದ್ಧಿ ಕಾರ್ಯಕ್ರಮವನ್ನು ಕಾರ್ಯಗತಗೊಳಿಸುತ್ತೇವೆ. ಸುಲಲಿತ ಜೀವನಕ್ಕೆ ಅನುವುಮಾಡಿಕೊಡುವ ಸುಸಂಘಟಿತ ಸಾರಿಗೆ ಜಾಲ ಸೃಷ್ಟಿಸುತ್ತೇವೆ. ಅಲ್ಲದೇ, ಬೆಂಗಳೂರನ್ನು ಡಿಜಿಟಲ್ ಇನ್ನೋವೇಶನ್‍ನ ಜಾಗತಿಕ ಕೇಂದ್ರವಾಗಿ ರೂಪಿಸಲು ಪೂರಕ ಪರಿಸರ ವ್ಯವಸ್ಥೆ ಕಲ್ಪಿಸುತ್ತೇವೆ.

ಕರ್ನಾಟಕವನ್ನು ಎಲೆಕ್ಟ್ರಿಕ್ ವಾಹನಗಳ ಪ್ರಮುಖ ಕೇಂದ್ರವನ್ನಾಗಿ ರೂಪಿಸುತ್ತೇವೆ. ಪೂರಕವಾಗಿ, ಚಾಜಿರ್ಂಗ್ ಸ್ಟೇಷನ್‍ಗಳ ಸ್ಥಾಪನೆ, 1,000 ಸ್ಟಾರ್ಟ್ ಅಪ್‍ಗಳಿಗೆ ಪ್ರೋತ್ಸಾಹ, ಹಾಲಿ ಇರುವ ಬಿಎಂಟಿಸಿ ಬಸ್‍ಗಳನ್ನು ಎಲೆಕ್ಟ್ರಿಕ್ ಬಸ್‍ಗಳಾಗಿ ಪರಿವರ್ತಿಸುತ್ತೇವೆ. ಜತೆಗೆ ಬೆಂಗಳೂರಿನ ಹೊರವಲಯದಲ್ಲಿ ಇಬಿ ಸಿಟಿ ಅಭಿವೃದ್ಧಿಗೊಳಿಸುವುದು.

ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕಿರು ಶೀತಲೀಕರಣ ಸೌಲಭ್ಯಗಳು ಮತ್ತು ಕೃಷಿ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು 30,000 ಕೋಟಿ ಮೊತ್ತದ ಕೆ-ಅಗ್ರಿ ಫಂಡ್ ಸ್ಥಾಪಿಸುತ್ತೇವೆ. ಎಪಿಎಂಸಿಗಳ ಆಧುನೀಕರಣ ಮತ್ತು ಡಿಜಿಟಲೀಕರಣ ಮಾಡುತ್ತೇವೆ. ಕೃಷಿ ಯಾಂತ್ರೀಕರಣಕ್ಕೆ ಒತ್ತು ನೀಡುತ್ತೇವೆ. ಜತೆಗೆ, 5 ಹೊಸ ಕೃಷಿ ಆಧಾರಿತ ಕೈಗಾರಿಕಾ ಕ್ಲಸ್ಟರ್‍ಗಳು ಮತ್ತು 3 ಹೊಸ ಆಹಾರ ಸಂಸ್ಕರಣಾ ಪಾರ್ಕ್‍ಗಳನ್ನು ಸ್ಥಾಪಿಸುತ್ತೇವೆ.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಅರವಿಂದ್ ಲಿಂಬಾವಳಿ, ಶೋಭಾರಂದ್ಲಾಜೆ, ಧಮೇರ್‍ಂದ್ರ ಪ್ರಧಾನ್ ಇತರರಿದ್ದರು.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಈ ನುಗ್ಗೆ ಎಲೆಗಳ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ…

    ನುಗ್ಗೆಯಲ್ಲಿ ಬಿಸುಡಲು ಏನಿಲ್ಲ. ಅದರ ಕಾಯಿ ಮಾತ್ರವಲ್ಲ; ಎಲೆ, ಬೇರು, ಹೂ, ತೊಗಟೆ ಎಲ್ಲವೂ ಬಳಕೆಯ ದೃಷ್ಟಿಯಿಂದ ಮಹತ್ವ ಪಡೆದಿವೆ. ಇದರ ಮರವನ್ನು ಕೆತ್ತಿದಾಗ ಒಸರುವ ಅಂಟನ್ನು ಹಾಲಿನಲ್ಲಿ ಬೆರೆಸಿ ಲೇಪಿಸಿದರೆ ತಲೆಶೂಲೆ ಶೀಘ್ರ ಶಮನವಾಗುತ್ತದೆ ಎಂದಿದೆ ವೈದ್ಯಗ್ರಂಥ. ನುಗ್ಗೆ ಎಲೆಗಳನ್ನು  ಹಲವಾರು ಬಗೆಯ ಅಡುಗೆಗಳಲ್ಲಿ ಬಳಸಲಾಗುತ್ತದೆ. ಈ ಎಲೆಗಳಲ್ಲಿ ಅಮೂಲ್ಯ ಖನಿಜಗಳು, ವಿಟಮಿನ್ನುಗಳು ಹಾಗೂ ಪ್ರೋಟೀನುಗಳೂ ಇವೆ. ಸಾಮಾನ್ಯವಾಗಿ ಈ ಎಲೆಗಳನ್ನು ದಾಲ್, ಸಾಂಬಾರ್ ಅಥವಾ ಕೆಲವು ಸೂಪ್‌ಗಳಲ್ಲಿ ಬಳಸಲಾಗುತ್ತದೆ. ಆದರೆ ಈ ಎಲೆಗಳ ಸೇವನೆಯಿಂದ…

  • ಸುದ್ದಿ

    ಹಾಲಲ್ಲ,ಆಲ್ಕೋಹಾಲ್‍ನಲ್ಲೂ ಕಲಬೆರಕೆ; ಬಾಟಲ್ ಖಾಲಿ ಮಾಡುವಾಗ ಬಯಲಿಗೆ ಬಂದ ಸತ್ಯ..! ಈ ಗಟನೆ ನಡೆದಿದ್ದು ಎಲ್ಲಿ ಗೊತ್ತಾ?

    ಬಿಯರ್ ಕುಡಿಯುವಾಗ ಬಾಟಲಿಯಲ್ಲಿ ಕಲಬೆರಕೆ ಮಾಡಿರುವುದು ಪತ್ತೆಯಾಗಿದ್ದು, ಕೋಲಾರದ ಗ್ರಾಹಕರೊಬ್ಬರು ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.ಕೋಲಾರ ಜಿಲ್ಲೆಯ ಮಾಲೂರಿನ ಬೈರಸಂದ್ರ ಬಳಿಯ ಶ್ರೀ ಲಕ್ಷ್ಮೀ ವೈನ್ಸ್‍ನಲ್ಲಿ ಖರೀದಿಸಿದ ಬಿಯರ್ ನಲ್ಲಿ ಕಲಬೆರಕೆ ಮಾಡಿರುವುದು ಪತ್ತೆಯಾಗಿದೆ. ಚಿಲ್ಡ್ ಬಿಯರ್ ನಲ್ಲಿ ಕಲಬೆರಕೆಯಾಗಿದ್ದು, ಅರ್ಧ ಬಾಟಲಿ ಕುಡಿದ ಬಳಿಕ ಇದು ಗ್ರಾಹಕನ ಅರಿವಿಗೆ ಬಂದಿದೆ. ಈ ಕುರಿತು ಬಾರ್ ಮಾಲೀಕರ ವಿರುದ್ಧ ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಿಕ್ಸ್ ಮಾಡುವ ವೇಳೆ ಏನೋ ಬಿದ್ದಿದೆ ಎಂದು ಬಾರ್ ಮಾಲೀಕರು…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ,ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ವಿಪರೀತ ಧನಲಾಭವಿದೆ..!ನಿಮ್ಮ ರಾಶಿಗಳು ಇವೆಯೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ (18 ನವೆಂಬರ್, 2018) ನಿಮ್ಮ ವರ್ತನೆ ಕೇವಲ ನಿಮ್ಮ ಕುಟುಂಬಕ್ಕೆ ಮಾತ್ರವೇ ಅಸಮಾಧಾನ ತರದೇ ಸಂಬಂಧಗಳಲ್ಲೂ ಶೂನ್ಯತೆಯನ್ನು ತರಬಹುದು. ಏಕಪಕ್ಷೀಯ ವ್ಯಾಮೋಹನಿಮಗೆ…

  • ಉಪಯುಕ್ತ ಮಾಹಿತಿ

    ಸದ್ಯದಲ್ಲೇ “ಗೋವು ” ಆನ್ಲೈನ್ ಮಾರುಕಟ್ಟೆ ..!ತಿಳಿಯಲು ಈ ಲೇಖನ ಓದಿ ..

    ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕವಾದ ವೆಬ್ಸೈಟ್ ಇದ್ದರೆ ಹೇಗಿರುತ್ತದೆ. ಇನ್ನು ಆರು ತಿಂಗಳು ಕಾದು ಕುಳಿತರೆ ಅದೂ ಸಿದ್ಧವಾಗಿ ಬಿಡುತ್ತದೆ. ಅದೂ ಓಎಲ್‌ಎಕ್ಸ್, ಕ್ವಿಕರ್ ಮಾದರಿಯಲ್ಲಿಯೇ.

  • ಜ್ಯೋತಿಷ್ಯ

    ಶಿವ ಪರಮಾತ್ಮನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ whatpp ಮೆಸೇಜ್ ಮಾಡಿ…