News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜಕೀಯ

ಬಿಜೆಪಿ 2023 ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?

106

ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್, ಅರ್ಧ ಲೀ. ಉಚಿತ ನಂದಿನಿ ಹಾಲು: ಬಿಜೆಪಿಯಿಂದ ಪ್ರಣಾಳಿಕೆ ರಿಲೀಸ್ !!! ಬಿಪಿಎಲ್ (BPL) ಕುಟುಂಬಗಳಿಗೆ ಪ್ರತಿವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್‌ಗಳನ್ನು ಉಚಿತವಾಗಿ ವಿತರಿಸುತ್ತೇವೆ ಎಂದು ಬಿಜೆಪಿ (BJP) ತನ್ನ ಚುನಾವಣಾ (Election) ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ.

ರಾಜ್ಯದ ವಿಧಾನ ಸಭೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು. ಪ್ರಣಾಳಿಕೆ ರಚಿಸಿರುವ ಸಚಿವ ಡಾ.ಸುಧಾಕರ್ ನೇತೃತ್ವದ ಸಮಿತಿಯು ವಿವಿಧ ವಲಯಗಳ ನಿರೀಕ್ಷೆಗಳು, ಅಗತ್ಯತೆಗಳ ಕುರಿತು ವಲಯವಾರು ತಜ್ಞರ ಜೊತೆ ಸಂವಾದ ನಡೆಸಿ ಅಭಿಪ್ರಾಯ ಸಂಗ್ರಹ ಮಾಡಿ, ಪ್ರಣಾಳಿಕೆಯನ್ನು ಸಿದ್ಧಪಡಿಸಿದೆ.

ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?:
ಬಿಪಿಎಲ್ ಕುಟುಂಬಗಳಿಗೆ ಪ್ರತಿವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್‌ಗಳನ್ನು ಉಚಿತವಾಗಿ ವಿತರಿಸುತ್ತೇವೆ.

ಕೈಗೆಟುಕುವ ದರದಲ್ಲಿ ಗುಣಮಟ್ಟದ ಮತ್ತು ಆರೋಗ್ಯಕರ ಆಹಾರವನ್ನು ಒದಗಿಸಲು ರಾಜ್ಯದ ಪ್ರತಿ ಮಹಾನಗರ ಪಾಲಿಕೆಯ ವಾರ್ಡ್‍ಗಳಲ್ಲಿ ಅಟಲ್ ಆಹಾರ ಕೇಂದ್ರವನ್ನು ಸ್ಥಾಪಿಸುತ್ತೇವೆ.

ಪೋಷಣೆ ಯೋಜನೆಯ ಮೂಲಕ ಪ್ರತಿ ಬಿಪಿಎಲ್ ಕುಟುಂಬಗಳಿಗೆ ಪ್ರತಿದಿನ ಅರ್ಧ ಲೀಟರ್ ನಂದಿನಿ ಹಾಲು ಮತ್ತು ಪ್ರತಿ ತಿಂಗಳು 5 ಕೆಜಿ ಶ್ರೀ ಅನ್ನ- ಸಿರಿ ಧಾನ್ಯವನ್ನು ಒಳಗೊಂಡ ಪಡಿತರ ಕಿಟ್ ನೀಡುತ್ತೇವೆ.

ವಿಶ್ವೇಶ್ವರಯ್ಯ ವಿದ್ಯಾ ಯೋಜನೆ ಇದರಡಿ ಸರ್ಕಾರಿ ಶಾಲೆಗಳನ್ನು ಅತ್ಯುನ್ನತ ಶ್ರೇಣಿಗೆ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಪ್ರಬುದ್ಧರು ಹಾಗೂ ಸಂಸ್ಥೆಗಳ ಜತೆ ಸಹಭಾಗಿತ್ವ ಹೊಂದಲಾಗುತ್ತದೆ.

ಸಮನ್ವಯ ಯೋಜನೆ ಇದರಡಿ ತ್ವರಿತಗತಿಯಲ್ಲಿ SME ಗಳು ಮತ್ತು ITI ಗಳ ನಡುವೆ ಸಮನ್ವಯತೆ ಸಾಧಿಸುತ್ತೇವೆ. ಪ್ರತಿಭಾವಂತ ಯುವ ವೃತ್ತಿಪರರಿಗೆ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಕ್ರಿಯಾತ್ಮಕ ಪರಿಸರ ವ್ಯವಸ್ಥೆಯನ್ನು ನಿರ್ಮಾಣ ಮಾಡುತ್ತೇವೆ.

ಒನಕೆ ಓಬವ್ವ ಸಾಮಾಜಿಕ ನ್ಯಾಯ ನಿಧಿ ಯೋಜನೆಯನ್ನು ಪ್ರಾರಂಭಿಸುತ್ತೇವೆ. ಈ ಯೋಜನೆಯಡಿ ಎಸ್‍ಸಿ, ಎಸ್‍ಟಿ ಸಮುದಾಯದ ಮಹಿಳೆಯರು 5 ವರ್ಷಗಳ ಅವಧಿಗೆ ಮಾಡುವ ಸ್ಥಿರ ಠೇವಣಿಗಳ ಮೇಲೆ – 10 ಸಾವಿರದವರೆಗೆ ತಾಳಿಯಾಗುವ ಠೇವಣಿ ನೀಡುತ್ತೇವೆ.

ಬೆಂಗಳೂರಿನ ಅಪಾರ್ಟ್‌ಮೆಂಟ್‌ಗಳಲ್ಲಿ ಸುಲಲಿತ ಜೀವನಕ್ಕೆ ಕರ್ನಾಟಕ ಅಪಾರ್ಟ್ ಮೆಂಟ್ ಮಾಲೀಕತ್ವ ಕಾಯಿದೆ 1972ಕ್ಕೆ ಸೂಕ್ತ ತಿದ್ದುಪಡಿಗಳನ್ನು ತರುತ್ತೇವೆ ಹಾಗೂ ಕಂದುಕೊರತೆಗಳ ಪರಿಹಾರಕ್ಕೆ ಆನ್ ಲೈನ್ ವ್ಯವಸ್ಥೆಯನ್ನು ಅನುಷ್ಠಾನಗೊಳಿಸುತ್ತೇವೆ.

ಉನ್ನತ ಮಟ್ಟದ ಸಮಿತಿಯ ಶಿಫಾರಸ್ಸಿನ ಆಧಾರದ ಮೇಲೆ ಕರ್ನಾಟಕದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೊಳಿಸುತ್ತೇವೆ.

ರಾಜ್ಯದಾದ್ಯಂತ ನಿವೇಶನ ರಹಿತ, ವಸತಿ ರಹಿತ ನಿವಾಸಿಗಳಿಗೆ ಸರ್ವರಿಗೂ ಸೂರು ಯೋಜನೆಯಡಿ 10 ಲಕ್ಷ ವಸತಿ ನಿವೇಶನಗಳನ್ನು ಕಂದಾಯ ಇಲಾಖೆ ಮೂಲಕ ಹಂಚಿಕೆ ಮಾಡುತ್ತೇವೆ.

ಐಎಎಸ್, ಕೆಎಎಸ್, ಬ್ಯಾಂಕಿಂಗ್, ಸರ್ಕಾರಿ ಉದ್ಯೋಗಾಕಾಂಕ್ಷಿಗಳು ತರಬೇತಿ ಪಡೆಯಲು ಆರ್ಥಿಕ ಪ್ರೋತ್ಸಾಹವನ್ನು ನೀಡುವ ಮೂಲಕ ಮಹತ್ವಾಕಾ೦ಕ್ಷೆಯ ಯುವಜನರಿಗೆ ವೃತ್ತಿ ಬೆಂಬಲವನ್ನು ಒದಗಿಸುತ್ತೇವೆ.

ಮಿಷನ್ ಸ್ವಾಸ್ಥ್ಯ ಕರ್ನಾಟಕದ ಅಡಿ ಸರ್ಕಾರಿ ಆಸ್ಪತ್ರೆ, ಆರೋಗ್ಯ ಕೇಂದ್ರಗಳಲ್ಲಿನ ಮೂಲಸೌಕರ್ಯಗಳನ್ನು ಸುಧಾರಿಸುತ್ತೇವೆ. ಮಹಾನಗರ ಪಾಲಿಕೆಯ ಪ್ರತಿ ವಾರ್ಡ್‍ನಲ್ಲಿ ಲ್ಯಾಬೊರೇಟರಿ ಸೌಲಭ್ಯ ಹೊಂದಿರುವ ನಮ್ಮ ಕ್ಲಿನಿಕ್ ಸ್ಥಾಪಿಸುತ್ತೇವೆ. ಹಾಗೂ ಹಿರಿಯ ನಾಗರಿಕರಿಗೆ ಪ್ರತಿ ವರ್ಷ ಉಚಿತವಾಗಿ ಸಂಪೂರ್ಣ ಆರೋಗ್ಯ ತಪಾಸಣೆಯ ಸೌಲಭ್ಯ ಕಲ್ಪಿಸುತ್ತೇವೆ.

ನಮ್ಮ ಮುಂದಿನ ಪೀಳಿಗೆಗಾಗಿ ಬೆಂಗಳೂರನ್ನು ಅಭಿವೃದ್ಧಿಪಡಿಸಿ, ಅದನ್ನು ರಾಜ್ಯ ರಾಜಧಾನಿ ಪ್ರದೇಶ ಎಂದು ಗುರುತಿಸಲಾಗುತ್ತದೆ. ತಂತ್ರಜ್ಞಾನ ಆಧಾರಿತ ನಗರ ಅಭಿವೃದ್ಧಿ ಕಾರ್ಯಕ್ರಮವನ್ನು ಕಾರ್ಯಗತಗೊಳಿಸುತ್ತೇವೆ. ಸುಲಲಿತ ಜೀವನಕ್ಕೆ ಅನುವುಮಾಡಿಕೊಡುವ ಸುಸಂಘಟಿತ ಸಾರಿಗೆ ಜಾಲ ಸೃಷ್ಟಿಸುತ್ತೇವೆ. ಅಲ್ಲದೇ, ಬೆಂಗಳೂರನ್ನು ಡಿಜಿಟಲ್ ಇನ್ನೋವೇಶನ್‍ನ ಜಾಗತಿಕ ಕೇಂದ್ರವಾಗಿ ರೂಪಿಸಲು ಪೂರಕ ಪರಿಸರ ವ್ಯವಸ್ಥೆ ಕಲ್ಪಿಸುತ್ತೇವೆ.

ಕರ್ನಾಟಕವನ್ನು ಎಲೆಕ್ಟ್ರಿಕ್ ವಾಹನಗಳ ಪ್ರಮುಖ ಕೇಂದ್ರವನ್ನಾಗಿ ರೂಪಿಸುತ್ತೇವೆ. ಪೂರಕವಾಗಿ, ಚಾಜಿರ್ಂಗ್ ಸ್ಟೇಷನ್‍ಗಳ ಸ್ಥಾಪನೆ, 1,000 ಸ್ಟಾರ್ಟ್ ಅಪ್‍ಗಳಿಗೆ ಪ್ರೋತ್ಸಾಹ, ಹಾಲಿ ಇರುವ ಬಿಎಂಟಿಸಿ ಬಸ್‍ಗಳನ್ನು ಎಲೆಕ್ಟ್ರಿಕ್ ಬಸ್‍ಗಳಾಗಿ ಪರಿವರ್ತಿಸುತ್ತೇವೆ. ಜತೆಗೆ ಬೆಂಗಳೂರಿನ ಹೊರವಲಯದಲ್ಲಿ ಇಬಿ ಸಿಟಿ ಅಭಿವೃದ್ಧಿಗೊಳಿಸುವುದು.

ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕಿರು ಶೀತಲೀಕರಣ ಸೌಲಭ್ಯಗಳು ಮತ್ತು ಕೃಷಿ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು 30,000 ಕೋಟಿ ಮೊತ್ತದ ಕೆ-ಅಗ್ರಿ ಫಂಡ್ ಸ್ಥಾಪಿಸುತ್ತೇವೆ. ಎಪಿಎಂಸಿಗಳ ಆಧುನೀಕರಣ ಮತ್ತು ಡಿಜಿಟಲೀಕರಣ ಮಾಡುತ್ತೇವೆ. ಕೃಷಿ ಯಾಂತ್ರೀಕರಣಕ್ಕೆ ಒತ್ತು ನೀಡುತ್ತೇವೆ. ಜತೆಗೆ, 5 ಹೊಸ ಕೃಷಿ ಆಧಾರಿತ ಕೈಗಾರಿಕಾ ಕ್ಲಸ್ಟರ್‍ಗಳು ಮತ್ತು 3 ಹೊಸ ಆಹಾರ ಸಂಸ್ಕರಣಾ ಪಾರ್ಕ್‍ಗಳನ್ನು ಸ್ಥಾಪಿಸುತ್ತೇವೆ.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಅರವಿಂದ್ ಲಿಂಬಾವಳಿ, ಶೋಭಾರಂದ್ಲಾಜೆ, ಧಮೇರ್‍ಂದ್ರ ಪ್ರಧಾನ್ ಇತರರಿದ್ದರು.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಡಿಕೆಶಿ ರೆಬೆಲ್ ನಡುವೆ ವಾಕ್ ಸಮರ..!ಯಾಕೆ?ಏನಾಯ್ತು?ಮುಂದೆ ಓದಿ…

    ಅಂಬರೀಷ್ ಹಾಗು ಇಂಧನ ಸಚಿವ ಡಿ ಕೆ ಶಿವಕುಮಾರ್ ಅವರ ನಡುವೆ ಎಂದು ವಾಕ್ ಸಮರ ಎರ್ಪಟ್ಟಿದೆ. ಈ ನಿಟ್ಟಿನಲ್ಲಿ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಹಿರಿಯ ಕಾಂಗ್ರೆಸ್ ಮುಖಂಡ ಅಂಬರೀಶ್ ಗರಂ ಆಗಿದ್ದಾರೆ.

  • ಸುದ್ದಿ

    ಪ್ರಸಿದ್ದ ಆಭರಣ ಶೋರೂಂಗಳ ಮೇಲೆ ಐಟಿ ದಾಳಿ, 125 ಕೋಟಿ ರೂ. ಅಕ್ರಮ ಸಂಪತ್ತು ಪತ್ತೆ…!

    ಮಹಾರಾಷ್ಟ್ರ, ಕೇರಳ ಮತ್ತು ಆಂಧ್ರಪ್ರದೇಶದ ಡಿಜಿಐಟಿಗಳ ನೆರವಿನೊಡನೆ ದಾಯ ತೆರಿಗೆ – ಕರ್ನಾಟಕ ಮತ್ತು ಗೋವಾದ ಆದಾಯ ತೆರಿಗೆ ನಿರ್ದೇಶನಾಲಯ (ಡಿಜಿಐಟಿ) ದ ತನಿಖಾ ವಿಭಾಗವು  ರಾಜ್ಯದಾದ್ಯಂತ ಚಿನ್ನದ ಅಂಗಡಿ ಮೇಲೆ ನಡೆಸಿದ್ದ ದಾಳಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ಸಂಪತ್ತು ಪತ್ತೆಯಾಗಿದೆ. ಕಳೆದ ವಾರ ಎರಡು ಪ್ರಸಿದ್ಧ ಆಭರಣ ಶೋ ರೂಂಗಳಾದ  ‘ಸುಲ್ತಾನ್’ ಮತ್ತು ‘ಸಿಟಿ ಗೋಲ್ಡ್’ ಮೇಲೆ ಸರಣಿ ದಾಳಿ ನಡೆಸಲಾಗಿತ್ತು.ಎರಡೂ ಆಭರಣ ಮಾರಾಟ ಸಮೂಹವು ಸುಮಾರು 125 ಕೋಟಿ ರೂ.ಗಳ  ದಾಖಲೆ ಇಲ್ಲದ  ಆದಾಯವನ್ನು…

  • ಉಪಯುಕ್ತ ಮಾಹಿತಿ

    ರಾಜ್ಯಸರ್ಕಾರದಿಂದ ಗರ್ಭಿಣಿ ಮತ್ತು ಬಾಣಂತಿಯರಿಗೆ “ಮಾತೃಪೂರ್ಣ”ಯೋಜನೆ ಬಾಗ್ಯ!ಇದರ ಬಗ್ಗೆ ನೀವೂ ತಿಳಿಯಿರಿ ಮತ್ತು ನಿಮ್ಮವರಿಗೆ ಶೇರ್ ಮಾಡಿ ತಿಳಿಸಿ…

    ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ಟೀ-ಕಾಫಿ ಕುಡಿಯುವ ಮುಂಚೆ ನೀರು ಕುಡಿದರೆ ಏನಾಗುತ್ತೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಟೀ ಅಥವಾ ಕಾಫಿ ಕುಡಿಯುವ ಅಭ್ಯಾಸ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ಇದನ್ನು ಸೇವಿಸುವ ಮೊದಲು ನೀರು ಕುಡಿದರೆ ಆಗುವ ಪ್ರಯೋಜನ ಇನ್ನೂ ಜಾಸ್ತಿ. ಹಲ್ಲು ಕೊಳೆಯಾಗಲ್ಲ :-ಕಡು ಬಣ್ಣದ ಕಾಫಿ, ಟೀ ಕುಡಿಯುವುದರಿಂದ ಬಿಳಿ ಹಲ್ಲು ಹಳದಿಗಟ್ಟುವ ಸಾಧ್ಯತೆಯಿದೆ. ಹೀಗಾಗಿ ಮೊದಲು ನೀರು ಕುಡಿದು ಬಳಿಕ ಕಾಫಿ-ಟೀ ಕುಡಿದರೆ ಈ ಸಮಸ್ಯೆಯಿರದು.  ಅಸಿಡಿಟಿ:-ಏನೇ ಸೇವಿಸುವ ಮೊದಲು ನೀರು ಕುಡಿದರೆ ಅಸಿಡಿಟಿ ಸಮಸ್ಯೆ ಬರದು. ಕಾಫಿ ಅಥವಾ ಟೀ ಸೇವನೆ ಕೆಲವರಿಗೆ ಗ್ಯಾಸ್ಟ್ರಿಕ್ ಸಮಸ್ಯೆ ತರಬಹುದು. ಇಂತಹ…

  • ಸುದ್ದಿ

    ಹಿಮಪಾತದ ನಡುವೆ ದೇಶ ಸೇವೆ ಸಲ್ಲಿಸುತ್ತಿರುವ ಈ ವೀರಯೋಧನಿಗೊಂದು ಸಲಾಂ. ಜಾಲತಾಣಗಳಲ್ಲಿ ಸಖತ್ ವೈರಲ್.

    ಸದ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗುತ್ತಿದೆ. ಈ ನಡುವೆ ಸಿಆರ್‌ಪಿಎಫ್ ಯೋಧರೊಬ್ಬರು ಕರ್ತವ್ಯ ಸಲ್ಲಿಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ ಫೋಟೋ ನೋಡಿದವರು ಆ ಚಳಿಯಲ್ಲೂ ಎದೆಗುಂದದೆ ಕರ್ತವ್ಯ ಸಲ್ಲಿಸುತ್ತಿರುವ ಯೋಧನಿಗೆ ಸಲಾಂ ಎಂದಿದ್ದಾರೆ. ನಮ್ಮ ಸೈನಿಕರು ನಮ್ಮ ಹೆಮ್ಮೆ ಎಂದು ನಾವು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಆದರೆ ನಮ್ಮ ಸೈನಿಕರು ನಮಗಾಗಿ ಪ್ರತಿದಿನ ಪಡುವ ಕಷ್ಟ ಅಷ್ಟಿಷ್ಟಲ್ಲ. ಚಳಿಗಾಳಿ ಹಿಮಮಳೆ ಯಾವುದನ್ನೂ ಲೆಕ್ಕಿಸದೆ ಸೈನಿಕರು ಬಾರ್ಡರ್ ನಲ್ಲಿ ನಮಗಾಗಿ ಪ್ರಾಣ ಒತ್ತೆಯಿಟ್ಟು…

  • ಸುದ್ದಿ

    ಸ್ಪೋಟಕ ಮಾಹಿತಿ;ಪಬ್‌ಜಿ ವ್ಯಸನದಿಂದಾಗಿ ಯುವಕನ ಜೀವನವಾಯ್ತು ನರಕ!

    ಜನಪ್ರಿಯ ಆನ್‌ಲೈನ್ ಆಟಗಳಲ್ಲಿ ಒಂದಾದ ಪಬ್‌ಜಿ ಇತ್ತೀಚಿಗೆ ಯಾವಾಗಲೂಕೆಟ್ಟ ಕಾರಣಗಳಿಗಾಗಿಯೇ ಸುದ್ದಿಯಾಗುತ್ತಿದೆ. ಪಬ್‌ಜಿ ಆಟಗಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಮತ್ತು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಮತ್ತು ಇತರೆ ವ್ಯಸನಗಳಿಗೆತುತ್ತಾಗಿದ್ದಾರೆ ಎಂಬ ಅನೇಕ ಪ್ರಕರಣಗಳು ದಾಖಲಾಗಿವೆ. ಇಂತಹುದೇ ಮತ್ತೊಂದು ಪ್ರಕರಣ ಹೈದರಾಬಾದ್‌ನಲ್ಲಿವರದಿಯಾಗಿದೆ. ಹೌದು, ಪಬ್‌ಜಿ ಆಟದ ಕಾರಣದಿಂದಾಗಿ ಹೈದರಾಬಾದ್‌ನ 19 ವರ್ಷದ ಯುವಕನೋರ್ವಪಾರ್ಶ್ವವಾಯುವಿಗೆ ಒಳಗಾಗಿದ್ದಾನೆ ಎಂದು ತಿಳಿದುಬಂದಿದೆ. ಹೌದು, ಕಳೆದ ಆಗಸ್ಟ್ 26 ರಂದು ಈ ಘಟನೆ ನಡೆದಿದ್ದು, ಪಬ್‌ಜಿಗೆವ್ಯಸನಿಯಾಗಿದ್ದ ಹೈದರಾಬಾದ್‌ನ ಯುವಕನಿಗೆ ಪಾರ್ಶ್ವವಾಯು ಅಪ್ಪಳಿಸಿದೆ. ಐಸಿಯುಗೆ ಕರೆದೊಯ್ಯಲಾಗಿರುವಆತ ತನ್ನ ಬಲಗೈ…