ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಧುವಿಲ್ಲದೆ ತನ್ನ 27 ವರ್ಷದ ಮಗನಿಗೆ ಅದ್ಧೂರಿಯಾಗಿ ಮದುವೆ ಮಾಡಿಸುವ ಮೂಲಕ ಮಗನ ಕನಸನ್ನು ನನಸು ಮಾಡಿದ ತಂದೆ…
ಅಜಯ್ ಬಾರೋಟ್ ಸಣ್ಣ ಮಗುವಿರುವಾಗಲೇ ಆತನ ಹೆತ್ತವರು ಮಗ ದೊಡ್ಡವನಾದ ಬಳಿಕ ಆತನಿಗೆ ಅದ್ಧೂರಿಯಾಗಿ ಮದುವೆ ಮಾಡಬೇಕು ಎಂಬ ಕನಸು ಕಂಡಿದ್ದರು. ಆದರೆ ಅಜಯ್ ಬೆಳವಣಿಗೆಯಲ್ಲಿ ಕುಂಠಿತವಾದ ಕಾರಣ ಆತನಿಗೆ ಸಂಗಾತಿ ಹುಡುಕಲು ಮನೆಯವರಿಗೆ ಕಷ್ಟವಾಯಿತು.

ಯಾಕಂದರೆ ಅಜಯ್ ಬೆಳೆಯುತ್ತಾ ಅಂಗವೈಕಲ್ಯದಿಂದ ಬಳಲತೊಡಗಿದ. ಹೀಗಾಗಿ ಆತನಿಗೆ ವಧು ಇಲ್ಲದೆ ಮದುವೆ ಮಾಡಲು ಕುಟುಂಬ ತೀರ್ಮಾನ ಮಾಡಿತ್ತು. ಹಾಗೆಯೇ ಗುಜರಾತ್ ಸಂಪ್ರದಾಯದಂತೆ ಇದೀಗ ಅಜಯ್ ಗೆ ಅದ್ಧೂರಿಯಾಗಿ ಮದುವೆ ಮಾಡಿಸಿದ್ದಾರೆ.
ಮಗನ ಮದುವೆಯ ಕುರಿತು ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅಜಯ್ ತಂದೆ, ನನ್ನ ಮಗ ಅಂಗವೈಕಲ್ಯನಾಗಿದ್ದು, ಚಿಕ್ಕಂದಿನಲ್ಲೇ ತನ್ನ ತಾಯಿಯನ್ನು ಕಳೆದುಕೊಂಡಿದ್ದಾನೆ. ಈತ ಕೆಲವು ಮದುವೆಗಳಿಗೆ ತೆರಳಿ ಮೆರವಣಿಗೆಯಲ್ಲಿ ಭಾಗವಹಿಸಿ ಸಂತಸ ಪಡುತ್ತಿದ್ದನು. ಅಲ್ಲದೆ ತನ್ನ ಮದುವೆಯ ಬಗ್ಗೆಯೂ ನನ್ನಲ್ಲಿ ವಿಚಾರಿಸುತ್ತಿದ್ದನು. ಆದರೆ ಆತನ ಪ್ರಶ್ನೆಗೆ ನಮ್ಮಲ್ಲಿ ಉತ್ತರವಿರಲಿಲ್ಲ.
ಯಾಕಂದರೆ ಆತನಿಗೆ ತಕ್ಕುದಾದ ಸಂಗಾತಿಯನ್ನು ಹುಡುಕಲು ನಮ್ಮಿಂದ ಸಾಧ್ಯವಿಲ್ಲ ಎಂಬುದು ತಿಳಿದಿತ್ತು. ಹೀಗಾಗಿ ನಾನು ನನ್ನ ಕುಟುಂಬಸ್ಥರ ಜೊತೆ ಮಗನ ಮದುವೆಯ ಬಗ್ಗೆ ಮಾತುಕತೆ ನಡೆಸಿದೆ. ಈ ವೇಳೆ ವಧುವಿಲ್ಲದೆ ಮಗನ ಮದುವೆಯನ್ನು ಅದ್ಧೂರಿಯಾಗಿ ಮಾಡುವುದಾಗಿ ತೀರ್ಮಾನಿಸಿದೆವು. ಈ ಮೂಲಕ ಆತನ ಕನಸನ್ನು ನನಸು ಮಾಡುವ ನಿರ್ಧಾರಕ್ಕೆ ಬಂದೆವು.

ಇದೇ ವೇಳೆ ಅಜಯ್ ಚಿಕ್ಕಪ್ಪ ಮಾತನಾಡಿ, ಮ್ಯೂಸಿಕ್ ಕೇಳಿ ಡ್ಯಾನ್ಸ್ ಮಾಡುವುದು ಅಂದರೆ ಅಜಯ್ ಗೆ ತುಂಬಾ ಇಷ್ಟ. ಇದರಿಂದ ಆತನ ಮುಖದಲ್ಲಿ ನಗು ನೋಡುತ್ತೇವೆ. ನಮ್ಮ ಗ್ರಾಮದಲ್ಲಿ ಯಾರೇ ಮದುವೆಯಾದ್ರೂ ಆ ಕಾರ್ಯಕ್ರಮಕ್ಕೆ ಅಜಯ್ ಯಾವುದೇ ಕಾರಣಕ್ಕೂ ಗೈರಾಗುತ್ತಿರಲಿಲ್ಲ. ಕಳೆದ ಫೆಬ್ರವರಿ ತಿಂಗಳಲ್ಲಿ ನನ್ನ ಮಗನ ವದುವೆ ಇತ್ತು.
ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅಜಯ್, ತನ್ನ ಮದುವೆಯ ಬಗ್ಗೆ ನನ್ನ ಬಳಿ ಪ್ರಸ್ತಾಪಿಸಿದ್ದನು. ಸದ್ಯ ನನ್ನ ಅಣ್ಣ(ಅಜಯ್ ತಂದೆ) ಮಗನ ಆಸೆಯಂತೆ ಇದೀಗ ಆತನಿಗೆ ಮದುವೆ ಮಾಡಿಸಿದ್ದಾರೆ. ನಾವು ಕೂಡ ಇತರ ಮದುವೆಯಂತೆ ಮೆರವಣಿಗೆಯ ಮೂಲಕ ಅದ್ಧೂರಿಯಾಗಿಯೇ ಕಾರ್ಯಕ್ರಮವನ್ನು ಭಾಗಿಯಾಗಿದ್ದೇವೆ. ಆದರೆ ಇಲ್ಲಿ ವಧು ಮಾತ್ರ ಇರಲಿಲ್ಲ ಅಷ್ಟೆ ಅಂದರು.

ಮದುವೆ ಆಮಂತ್ರಣ ಪತ್ರಿಕೆ ಕೂಡ ಪ್ರಿಂಟ್ ಮಾಡಿ ಸಂಬಂಧಿಕರಿಗೆ ನೀಡಿದ್ದೇವೆ. ಗುಜರಾತಿನ ಸಂಪ್ರದಾಯದಂತೆ ಪುರೋಹಿತರ ಮೂಲಕವೇ ಕಾರ್ಯಕ್ರಮ ನೆರವೇರಿದೆ. ಒಟ್ಟಿನಲ್ಲಿ ಇಲ್ಲಿ ಮಗನ ಸಂತಸವೇ ನಮಗೆ ಮುಖ್ಯವಾಗಿದೆ. ಆತನ ನಗು ಮುಖಕ್ಕಿಂತ ನಮಗೆ ಯಾವುದು ಮುಖ್ಯವಾಗಿರಲಿಲ್ಲ ಎಂದು ಅಜಯ್ ಅಂಕಲ್ ತಿಳಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರಕಾರಿ ಮತ್ತು ಖಾಸಗಿ ಕಂಪನಿ ಎಲ್ಲಿ ಕೆಲಸ ಮಾಡಿದರೂ ,ಯಾವುದೇ ಸಂಸ್ಥೆಯಲ್ಲಿ ಕೆಲಸ ಮಾಡಿದರೂ, ಉದ್ದ್ಯೋಗಿಗಳು ದೀರ್ಘಕಾಲದಿಂದ ಕೆಲಸ ಮಾಡುತ್ತಿದ್ದರು ಪ್ರಮೋಷನ್, ಸಂಬಳ ಹೆಚ್ಚಳದ ಬಗ್ಗೆ ಎದರು ನೋಡುತ್ತಿರುತ್ತಾರೆ
ಪಂಡಿತ್ ರಾಘವೇಂದ್ರ ಸ್ವಾಮಿಗಳ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು. ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772call/ whatsapp/ mail “ದೇವತಾರ್ಚನೆ ಮತ್ತು ವಿಚಾರಗಳು!”ದೇವತಾರ್ಚನೆಯಿಂದ ಮಾನವನು ಸಂಸಾರ…
ಬೆಂಗಳೂರಿನ ಜನರಿಗೆ ದಿನದಿಂದ ದಿನಕ್ಕೆ ಆಪ್ತವಾಗುತ್ತಿರುವ ನಮ್ಮ ಮೆಟ್ರೋ ಇನ್ನು ಮುಂದೆ ಇನ್ನಷ್ಟು ಹತ್ತಿರವಾಗಲಿದೆ. ಡಿಸೆಂಬರ್ ವೇಳೆಗೆ ನಮ್ಮ ಮೆಟ್ರೋದಲ್ಲಿ ಮಹಿಳಾ ಬೋಗಿ ಸಹ ಆರಂಭವಾಗಲಿದೆ.
ಕಣ್ಣಿನ ಅಂದವನ್ನು ಕಾಡಿಗೆ ಹೆಚ್ಚಿಸುತ್ತದೆ. ಮಹಿಳೆಯರು ಕಾಡಿಗೆ ಹಚ್ಚಿಕೊಳ್ಳೋದು ಸಾಮಾನ್ಯ ಸಂಗತಿ. ಆದ್ರೆ ಕೆಲವರು ಮಕ್ಕಳ ಕಣ್ಣಿಗೂ ಕಾಡಿಗೆ ಹಚ್ಚುತ್ತಾರೆ. ದೃಷ್ಟಿ ತಾಗಬಾರದು ಎನ್ನುವ ಕಾರಣಕ್ಕೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚಲಾಗುತ್ತದೆ. ಆದ್ರೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚೋದು ಸುಲಭದ ಕೆಲಸವಲ್ಲ. ಕೆಲವೊಮ್ಮೆ ಮಕ್ಕಳ ಕಣ್ಣಿಗೆ ಕೈ ತಾಗುವುದುಂಟು. ಹಾಗೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುವುದು ಸುರಕ್ಷಿತವಲ್ಲ. ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುತ್ತಿದ್ದಂತೆ ಕಣ್ಣಿನಿಂದ ನೀರು ಬರಲು ಶುರುವಾಗುತ್ತದೆ. ಇದು ಸೋಂಕಿನ ಅಪಾಯಕ್ಕೆ ಕಾರಣವಾಗುತ್ತದೆ. ಪ್ರತಿ ದಿನ…
ಬಸವ ಜಯಂತಿ – ಬಸವ ಜಯಂತಿ ಎಂದರೆ 12ನೇ ಶತಮಾನದ ಮಹಾನ್ ಸಾಮಾಜಿಕ ಸಂಸ್ಕಾರಕ, ತತ್ವಜ್ಞಾನಿ ಬಸವಣ್ಣ (ಬಸವೇಶ್ವರ) ಅವರ ಜನ್ಮ ದಿನಾಚರಣೆ 2026ರಲ್ಲಿ: ಏಪ್ರಿಲ್ 20 ರಂದು ಆಚರಣೆ. ಇದು ಮುಖ್ಯವಾಗಿ ಕರ್ನಾಟಕದಲ್ಲಿ ಹಾಗೂ ದಕ್ಷಿಣ ಭಾರತದ ಇತರೆ ರಾಜ್ಯಗಳಲ್ಲಿ ಆಚರಿಸಲಾಗುತ್ತದೆ. ಬಸವಣ್ಣರು: ಲಿಂಗಾಯತ ಧರ್ಮದ ಸ್ಥಾಪಕರು ಸಮಾನತೆ, ಜಾತಿಯ ವಿರೋಧ, ಮಹಿಳಾ ಹಕ್ಕುಗಳ ಪರ ಹೋರಾಟಗಾರರು “ಕಾಯಕವೇ ಕೈಲಾಸ” ಎಂಬ ಮಹತ್ವದ ತತ್ವವನ್ನು ನೀಡಿದವರು ಕರ್ನಾಟಕದಲ್ಲಿ ಬಸವ ಜಯಂತಿ ಆಚರಣೆ ಪ್ರಮುಖ ಹೈಲೈಟ್ಸ್: ಕರ್ನಾಟಕದ…
ಆರ್ಟಿಕಲ್ 370 ರದ್ದು ಪರಿಣಾಮ ಎಂಬಂತೆ ಪಾಕಿಸ್ತಾನ ವರ್ತಿಸತೊಡಗಿದೆ. ಪಾಕಿಸ್ತಾನವು ಬುಧವಾರ ಇಸ್ಲಾಮಾಬಾದ್ ನಲ್ಲಿ ಇರುವ ಭಾರತದ ರಾಯಭಾರಿಯನ್ನು ವಾಪಸ್ ಕಳುಹಿಸಿದೆ. ಇದರ ಜತೆಗೆ ಐದು ಅಂಶಗಳ ಯೋಜನೆಯನ್ನು ಸಹ ಘೋಷಿಸಿದೆ. ಭಾರತದ ಜತೆಗೆ ಸಂಬಂಧವನ್ನು ಕಡಿತಗೊಳಿಸಲು ನಿರ್ಧರಿಸಿದ್ದು ದ್ವಿಪಕ್ಷೀಯವ್ಯಾಪಾರ- ವ್ಯವಹಾರಗಳನ್ನು ಬಂದ್ ಮಾಡುತ್ತೇನೆ ಎಂದಿದೆ.ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದಕ್ಕೆ ಪಾಕಿಸ್ತಾನ ಮೊದಲು ಕ್ಯಾತೆ ತೆಗೆದಿತ್ತು. ಭಾರತದ ಹೈಕಮಿಷನರ್ ಆಗಿ ಅಜಯ್ ಬಿಸಾರಿಯಾ ಪಾಕಿಸ್ತಾನದಲ್ಲಿ ಇದ್ದರೆ, ಭಾರತಕ್ಕೆ ಪಾಕಿಸ್ತಾನದ ಹೈಕಮಿಷನರ್ ಆಗಿ ನೇಮಕ…