ಸುದ್ದಿ

ಪ್ರೇಯಸಿಯೊಂದಿಗೆ ಪತ್ನಿಯನ್ನೂ ಮರುಮದ್ವೆಯಾದ ಸಿಆರ್‌ಪಿಎಫ್ ಯೋಧ…ಕಾರಣ?

67

ರಾಯ್ಪುರ್: ಸಿಆರ್‌ಪಿಎಫ್ ಯೋಧನೊಬ್ಬ ಪ್ರೇಯಸಿ ಮತ್ತು ಪತ್ನಿಯನ್ನು ಮರು ವಿವಾಹವಾಗುವ ಮೂಲಕ ಇಬ್ಬರನ್ನೂ ಏಕಕಾಲಕ್ಕೆ ಮದುವೆಯಾಗಿರುವ ಅಪರೂಪದ ಘಟನೆ ಛತ್ತೀಸ್‍ಗಢದ ಜಾಷ್ಪುರ್ ಜಿಲ್ಲೆಯ ಬಗ್ದೋಲ್ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ.

Colorful Hindu wedding in India

ಜಾಷ್ಪುರ್ ಮೂಲದ ಅನಿಲ್ ಪೈಕ್ರಾ ಇಬ್ಬರು ಮಹಿಳೆಯರನ್ನು ಮದುವೆಯಾದ ಸಿಆರ್‌ಪಿಎಫ್ ಯೋಧ. ಇವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಸಿಆರ್‌ಪಿಎಫ್ ಯೋಧನಾಗಿ ಕಾರ್ಯನಿರ್ವಹಿಸುತ್ತಿದ್ದರು. ಅನಿಲ್ ಪೈಕ್ರಾ ನಾಲ್ಕು ವರ್ಷಗಳ ಹಿಂದೆ ತಮ್ಮ ಗ್ರಾಮದ ಪಕ್ಕದ ಗ್ರಾಮದ ಯುವತಿ ಜೊತೆ ಮದುವೆಯಾಗಿದ್ದರು. ಮದುವೆಯಾಗಿದ್ದರೂ ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದ ಯುವತಿಯನ್ನು ಪ್ರೀತಿಸುತ್ತಿದ್ದರು.

ಸ್ಥಳೀಯರು ಪ್ರಕಾರ ಅನಿಲ್ ಪೈಕ್ರಾ ಅವರ ಮೊದಲ ಪತ್ನಿ ಮದುವೆಯಾಗಿ ನಾಲ್ಕು ವರ್ಷಗಳಾದರೂ ಮಕ್ಕಳಾಗಿರಲಿಲ್ಲ. ಹೀಗಾಗಿ ತಾವೂ ಪ್ರೀತಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯನ್ನು ಮದುವೆಯಾಗಲು ನಿರ್ಧರಿಸಿದರು. ಈ ಮದುವೆಗೆ ಮೊದಲ ಪತ್ನಿ ಕೂಡ ಒಪ್ಪಿಗೆ ಸೂಚಿಸಿದ್ದರು. ಆದ್ದರಿಂದ ಅನಿಲ್ ರಜೆ ಮೇಲೆ ಗ್ರಾಮಕ್ಕೆ ಬಂದಾಗ ತನ್ನ ಪ್ರೇಯಸಿಯ ಜೊತೆ ಹೆಚ್ಚು ಸಮಯ ಕಳೆಯುತ್ತಿದ್ದರು. ಇದೀಗ ಸಂಪ್ರದಾಯದಂತೆ ಪ್ರೇಯಸಿಯ ಜೊತೆ ಪತ್ನಿಯನ್ನು ಮರು ಮದುವೆಯಾಗಿದ್ದಾರೆ ಎಂದು ಪತ್ರಕರ್ತ ರಾಜೇಶ್ ಪಾಂಡೆ ಅವರು ತಿಳಿಸಿದ್ದಾರೆ.

ಕಾನೂನಿನ ಪ್ರಕಾರ ಸರ್ಕಾರಿ ಕೆಲಸದಲ್ಲಿರುವವರು ಮೊದಲ ಪತ್ನಿ ಬದುಕಿರುವಾಗಲೇ ಮತ್ತೊಂದು ಮದುವೆಯಾಗಬಾರದು. ಸೇವಾ ನಿಯಮಗಳ ಪ್ರಕಾರ ಏಕಕಾಲಕ್ಕೆ ಇಬ್ಬರು ಮಹಿಳೆಯರನ್ನು ಮದುವೆಯಾಗುವಂತಿಲ್ಲ. ಈ ರೀತಿ ಮಾಡಿದರೆ ನಿಯಮ ಉಲ್ಲಂಘಿಸಿದಂತಾಗುತ್ತದೆ. ಯಾವುದೇ ಜಾತಿ, ಧರ್ಮದ ಹೊರತಾಗಿ ಎಲ್ಲ ಸರ್ಕಾರಿ ನೌಕರರಿಗೂ ಈ ನಿಯಮ ಅನ್ವಯಿಸುತ್ತದೆ. ಆದರೆ ಅನಿಲ್ ಪೈಕ್ರಾ ಇಬ್ಬರು ಮಹಿಳೆಯರನ್ನು ವಿವಾಹವಾಗಿದ್ದಾರೆ. ಈ ಮೂಲಕ ಮುಂದೆ ಅವರಿಗೆ ಸಮಸ್ಯೆಯಾಗಲಿದೆ ಎಂದು ಸಿಆರ್ ಪಿಎಫ್ ವಕ್ತಾರ ಬಿಸಿ ಪತ್ರ ಅವರು ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ, ಸ್ಪೂರ್ತಿ

    15 ವರ್ಷಗಳಿಂದ ಹೆಗಲ ಮೇಲೆ ನೀರು ಹೊತ್ತು ಬರಡು ಭೂಮಿಯಲ್ಲಿ ಬಂಗಾರದಂತಹ ಬೆಳೆ ತೆಗೆದ ರೈತ, ಈ ಸುದ್ದಿ ನೋಡಿ.

    ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಗುಡಪಳ್ಳಿ ಗ್ರಾಮದ ವಿಲಾಸ್‍ರಾವ್ ಹೂಗಾರ್ ಇವತ್ತಿನ ನಮ್ಮ ಹೀರೋ. ಭೀಕರ ಬರಗಾಲದಿಂದ ನಲುಗಿ ಹೋಗಿರುವ ಜಿಲ್ಲೆಯಲ್ಲಿ ರೈತರು ತತ್ತರಿಸಿ ಹೋಗಿದ್ದಾರೆ. ಆದರೆ 15 ವರ್ಷಗಳ ಹಿಂದೆ ವಿಲಾಸ್‍ರಾವ್ ಬರಡು ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಬಿಸಿಲ ನಾಡು ಬೀದರ್ ನ ಔರಾದ್ ತಾಲೂಕಿನ ವಿಲಾಸ್‍ರಾವ್ ಹೂಗಾರ್ ಅವರು ಬರಡು ಭೂಮಿಯಲ್ಲಿ ಬಂಗಾರದ ಬೆಳೆ ತೆಗೆದಿದ್ದಾರೆ. ಇದಕ್ಕಾಗಿ 15 ವರ್ಷಗಳಿಂದ ಹೆಗಲ ಮೇಲೆ ನೀರು ಹೊತ್ತಿದ್ದಾರೆ. ಸಾಹಸಿ ಜೀವನ ನೋಡಿದ ಸ್ಥಳೀಯ…

  • ಸುದ್ದಿ

    ರಾತ್ರಿಹೊತ್ತು ಪಾಳಿ ಸೆಕ್ಯೂರಿಟಿಯಾಗಿ ದುಡಿಯುತ್ತಿದ್ದ ವಿದ್ಯಾರ್ಥಿ ಈಗ ಇನ್ಫೋಸಿಸ್ ಎಂಜಿನಿಯರ್‌,.!

    ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಈಗ ಇನ್ಫೋಸಿಸ್ ಇಂಜಿನಿಯರ್ ಆಗಿ ಸಾಧನೆ ಮಾಡಿದ್ದಾನೆ. ಈ ಸಾಧನೆ ಮಾಡಿ ಮೆಚ್ಚುಗೆಗೆ ಪಾತ್ರನಾದ ಯುವಕ ಅಂಕಿತ್‌. ಈತ ದೆಹಲಿಯವನಾಗಿದ್ದು, ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ. ಹಗಲು ನಿಟ್ಟೆ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಆದರೆ, ರಾತ್ರಿ ಪಾಳಿಯ ದುಡಿಮೆ ಎನ್ನುವ ಕಾರಣಕ್ಕೆ ಆತ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ…

  • ಕ್ರೀಡೆ

    ಖ್ಯಾತ ಬ್ಯಾಡ್ಮಿಂಟನ್ ತಾರೆ,ಈಗ ಜಿಲ್ಲಾಧಿಕಾರಿ!ಇದಕ್ಕೆ ನಿಮ್ಮ ಸಹಮತವೇನು?ಈ ಲೇಖನಿ ಓದಿ,ಕಾಮೆಂಟ್ ಮಾಡಿ ತಿಳಿಸಿ…

    ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರನ್ನು ಆಂಧ್ರಪ್ರದೇಶ ಸರ್ಕಾರ ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಕ ಮಾಡಿತ್ತು. ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಅಪಾಯಿಂಟ್ಮೆಂಟ್ ಲೆಟರ್ ಅನ್ನು ಸಿಂಧುಗೆ ಹಸ್ತಾಂತರಿಸಿದ್ದರು. 30 ದಿನಗಳೊಳಗೆ ಡೆಪ್ಯೂಟಿ ಕಲೆಕ್ಟರ್ ಆಗಿ ಅಧಿಕಾರ ಸ್ವೀಕರಿಸುವಂತೆ ಆಂಧ್ರ ಸರ್ಕಾರ ಸಿಂಧುಗೆ ಸೂಚಿಸಿತ್ತು.

  • ಆರೋಗ್ಯ

    ‘ಬೀಟ್‌ರೂಟ್‌’ನಲ್ಲಿ ಇರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಕೇವಲ ತನ್ನ ಬಣ್ಣದ ಕಾರಣ ಹೆಚ್ಚಿನವರ ಅವಗಣನೆಗೆ ಒಳಗಾಗಿರುವ ತರಕಾರಿ ಎಂದರೆ ಬೀಟ್‌ರೂಟ್. ಹೆಚ್ಚಿನವರು ಕೆಂಪು ಬಣ್ಣವನ್ನು ತಮ್ಮ ಊಟದಲ್ಲಿ ಇಷ್ಟಪಡದಿರುವುದೇ ಇದಕ್ಕೆ ಕಾರಣ. ವಾಸ್ತವವಾಗಿ ಜೀವ ಉಳಿಸುವ ಔಷಧಿ ಕಹಿಯಿರುವಂತೆ ಬಣ್ಣದಲ್ಲಿ ಆಕರ್ಷಕವಲ್ಲದಿದ್ದರೂ ಪೋಷಕಾಂಶಗಳ ಆಗರವಾಗಿರುವ ಬೀಟ್‌ರೂಟ್ ಅನ್ನು ನಮ್ಮ ಆಹಾರದಲ್ಲಿ ನಿಯಮಿತವಾಗಿ ಸೇರಿಸುವ ಮೂಲಕ ಇದರ ಅದ್ಭುತ ಪ್ರಯೋಜನಗಳನ್ನು ಪಡೆಯಬಹುದು

  • ದೇವರು

    ‘ಉಗ್ರ ಹನುಮಂತ’ಚಿತ್ರದ ಹಿಂದಿರುವ ರೋಚಕ ಸ್ಟೋರಿ ಗೊತ್ತಾ ನಿಮ್ಗೆ!ಈ ಚಿತ್ರ ಹೇಗೆ ಬಂತು ಗೊತ್ತಾ?

    ಯುವ ಜನರಿಗೆ ಟ್ಯಾಟೂ, ಹಚ್ಚೆಗಳು ಅಂದ್ರೆ ಸ್ವಲ್ಪ ಹೆಚ್ಚೇ ಹುಚ್ಚಿದೆ. ವಾಹನಗಳ ಮೇಲೆ ವಿಭಿನ್ನವಾದ ಸ್ಟಿಕ್ಕರ್ಗಳು ಪ್ರಯೋಗಿಸುವ ಬಗ್ಗೆಯೂ ಆಸಕ್ತಿ ಇರುತ್ತದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಕಾರು ಮತ್ತು ಬೈಕ್ಗಳ ಮೇಲೆ ಉಗ್ರ ಸ್ವರೂಪಿ ಆಂಜನೇಯನ ಚಿತ್ರ ರಾರಾಜಿಸುತ್ತಿದೆ. ರಾಜ್ಯದ ಸಾಕಷ್ಟು ಕಡೆಗಳಲ್ಲಿ ಈ ಭಜರಂಗಿ ಓಡಾಡುತ್ತಿದ್ದಾನೆ.

  • ಮನರಂಜನೆ

    ಅನುಶ್ರೀಗೆ ಮರೆಯಲಾರದ ಗಿಫ್ಟ್ ಕೊಟ್ಟ ಹನುಮಂತಪ್ಪ..ಸಾರಿ ಕೇಳಿದ ಅನುಶ್ರೀ!

    ಕುರಿಗಾಯಿ ಹನುಮಂತ ಅವರು ಜೀ ಕನ್ನಡ ವಾಹಿನಿಯ ‘ಸರಿಗಮಪ’ ಕಾರ್ಯಕ್ರಮದಲ್ಲಿ ಹಾಡುವ ಮೂಲಕ ವೀಕ್ಷಕರ ಮನಗೆದ್ದಿದ್ದಾರೆ. ತಮ್ಮದೇ ಶೈಲಿಯಲ್ಲಿ ಹಾಡುವ ಮೂಲಕ ಹನುಮಂತ ಅವರು ಮನೆ ಮಾತಾಗಿದ್ದಾರೆ. ಅವರಿಗೆ ಸಿನಿಮಾದಲ್ಲಿ ಹಾಡುವ ಅವಕಾಶ ಕೊಡುವುದಾಗಿ ನಿರ್ದೇಶಕ ಯೋಗರಾಜ ಭಟ್ ಈಗಾಗಲೇ ಭರವಸೆ ನೀಡಿದ್ದಾರೆ. ‘ಸರಿಗಮಪ’ ಕಾರ್ಯಕ್ರಮದ ನಿರೂಪಕಿ ಅನುಶ್ರೀ ಲಂಬಾಣಿ ಉಡುಗೆ ತಂದುಕೊಡುವಂತೆ ಕೇಳಿಕೊಂಡಿದ್ದರಂತೆ. ಹನುಮಂತ ಅವರ ತಾಯಿ ಲಂಬಾಣಿ ಉಡುಗೆ ತಂದುಕೊಟ್ಟಿದ್ದು, ಅದನ್ನು ಧರಿಸಿ ಸಂತಸ ಹಂಚಿಕೊಂಡ ಅನುಶ್ರೀ ಕ್ಷಮೆ ಕೂಡ ಕೇಳಿದ್ದಾರೆ. ‘ತಮ್ಮ ಹನುಮಂತ…