ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳಗ್ರಹಕ್ಕೆ ನೀವು ಹೋಗಲು ಇಚ್ಚಿಸುವಿರಾ..? ಅಂತರಿಕ್ಷಕ್ಕೆ ತೆರಳಲು ತುಂಬಾ ಸಿದ್ಧತೆ ಮತ್ತು ಭಾರೀ ಹಣ ಬೇಕು. ಸಾಮಾನ್ಯ ಜನರು ಅಲ್ಲಿಗೆ ಹೋಗುವುದು ಕನಸಿನ ಮಾತು…! ಆದರೆ ಕೆಂಪುಗ್ರಹವನ್ನು ಹೋಲುವಂತೆ ಸ್ಥಳವೊಂದು ಈ ಭೂಮಂಡಲದಲ್ಲಿದೆ ಎಂದರೆ ನಿಮಗೆ ಅಚ್ಚರಿಯಾಗಬಹುದು. ಉತ್ತರ ಸ್ಪೇನ್ನ ಗುಹೆಯೊಂದರಲ್ಲಿ ಮಂಗಳಗ್ರಹದ ಪರಿಸರವನ್ನು ಹೋಲುವ ಪ್ರತಿರೂಪವನ್ನು ಸೃಷ್ಟಿಸಲಾಗಿದೆ. ಆಸ್ಟ್ರೋಲ್ಯಾಂಡ್ಸ್ ಎಂಬ ಸಂಸ್ಥೆ ನಿರ್ಮಿಸಿರುವ ಏರ್ ಸ್ಟೇಷನ್ ಎಂಬ ಈ ಸ್ಥಳವು ಕೆಂಪು ಗ್ರಹಕ್ಕೆ ಅಂತರಿಕ್ಷಯಾನ ಕೈಗೊಂಡ ಅನುಭವ ನೀಡುತ್ತದೆ.

ಕಾಂಟಾಬ್ರಿಯಾದಲ್ಲಿನ ಅರ್ರೆದೊಂಡೊ ಎಂಬಲ್ಲಿ 1.5 ಕಿಲೋಮೀಟರ್ ಉದ್ದದ ಮತ್ತು 60 ಮೀಟರ್ಗಳಷ್ಟು ಎತ್ತರದ ಗುಹೆಯನ್ನು ಮಾನವರ ವಸತಿ ಸ್ಥಳವನ್ನಾಗಿ ಪರಿವರ್ತಿಸಲಾಗಿದೆ. ಮಂಗಳಗ್ರಹದ ಪರಿಸರವನ್ನೂ ಇದು ತದ್ರೂಪು ಹೋಲುತ್ತದೆ. ಇದಕ್ಕಾಗಿ ವಿಜ್ಞಾನಿಗಳು, ವಾಸ್ತುಶಿಲ್ಪಿಗಳು ಮತ್ತು ಅಭಿವೃದ್ದಿಕಾರರು ಶ್ರಮವಹಿಸಿದ್ದಾರೆ. ಇಲ್ಲಿನ ತೀವ್ರ ಕಡಿಮೆ ತಾಪಮಾನ ಮತ್ತು ಮಂಗಳ ಗ್ರಹದಲ್ಲಿರುವಂತೆ ಕಾಸ್ಮಿಕ್ ಕಿರಣಗಳು ಅಂತರಿಕ್ಷದ ಅನುಭವ ನೀಡುತ್ತವೆ.

ಈ ಗುಹೆಯಲ್ಲಿ ಪ್ರವಾಸ ಮಾಡಲು ಇಚ್ಚಿಸುವವರು 20 ದಿನಗಳ ಆನ್ಲೈನ್ ಕೋರ್ಸ್ಗೆ ಒಳಗಾಗಬೇಕು ಹಾಗೂ ಗವಿಯಲ್ಲಿ ನಾಲ್ಕು ದಿನಗಳು ಮತ್ತು ಮೂರು ರಾತ್ರಿಗಳನ್ನು ಕಳೆಯುವುದಕ್ಕೆ ಮುನ್ನ ಮೂರು ದಿವಸಗಳ ತೀವ್ರ ತರಬೇತಿ ನೀಡಲಾಗುತ್ತದೆ. ಇದು ಹೆಚ್ಚುಕಡಿಮೆ ಗಗನಯಾತ್ರಿಗಳಿಗೆ ನೀಡುವ ಟ್ರೈನಿಂಗ್ ಮಾದರಿಯಲ್ಲೇ ಇರುತ್ತದೆ.ಗುಹೆಯಲ್ಲಿ ನೆಲೆಸುವ ವೇಳೆ ಗಗನಯಾತ್ರಿಗಳೆಂದು ಕರೆಯಲ್ಪಡುವ ಪ್ರವಾಸಿಗರು ಬಾಹ್ಯಾಕಾಶ ನಡಿಗೆ ಸಾಧನಗಳನ್ನು ಕೊಂಡೊಯ್ಯಬೇಕು.

ಈ ಗವಿಯಲ್ಲೂ ದೇಹ ತೂಕರಹಿತವಾಗಿರುವ ವಾತಾವರಣ ಸೃಷ್ಟಿಸಲಾಗಿದೆ. ಗುಹೆಯೊಳಗೆ ನಿರ್ಮಿಸಲಾಗಿರುವ ಪ್ರಯೋಗಾಲಯದಲ್ಲಿ ಪ್ರವಾಸಿಗರು ನಾಲ್ಕು ದಿನಗಳ ಕಾಲ ತಾವೇ ಆಹಾರ ತಯಾರಿಸಿಕೊಳ್ಳಬೇಕು. ಗುಹೆಯೊಳಗೆ ಪ್ರವೇಶಿಸಲು ಒಂದು ಬಾರಿ 10 ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗುವುದು. ಗುಹೆಯೊಳಗೆ ಮಂಗಳ ಗ್ರಹದ ಅನುಭವ ಹೊಂದಲು ತಲಾ 6,600 ಡಾಲರ್ ಶುಲ್ಕ ಪಾವತಿಸಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ಈ ವಿಶೇಷ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವ ಸೂಚಕವಾಗಿರಲಿದೆ. ವಿಶೇಷ ನಾಣ್ಯದ ವಿಶೇಷತೆ ಹೀಗಿದೆ: ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ…
ವಿದ್ಯಾರ್ಥಿನಿಯೊಬ್ಬಳು ಯುವಕನೊಬ್ಬನನ್ನು ತಬ್ಬಿಕೊಂಡ ಕಾರಣ ಯೂನಿವರ್ಸಿಟಿ, ಅವಳನ್ನು ಕಾಲೇಜಿನಿಂದ ಉಚ್ಚಾಟಿಸಿದ್ದು, ಇದೀಗ ಅಪ್ಪುಗೆಯೇ ಆಕೆಯ ವಿದ್ಯಾರ್ಥಿ ಜೀವನಕ್ಕೆ ಸಂಚಕಾರ ತಂದಿದೆ. ಈಜಿಪ್ಟ್ ನ ಅಲ್-ಅಝರ್ ಯೂನಿವರ್ಸಿಟಿ, ವಿದ್ಯಾರ್ಥಿನಿಯ ಈ ವರ್ತನೆಯಿಂದ ಸಂಸ್ಥೆಯ ಗೌರವಕ್ಕೆ ಧಕ್ಕೆ ಬಂದಿದೆ ಎಂದು ಹೇಳಿ ಈ ಕ್ರಮಕೈಗೊಂಡಿದೆ. ಅಲ್-ಅಝರ್ ಯೂನಿವರ್ಸಿಟಿಯ ಮನ್ಸೌರಾದಲ್ಲಿರುವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಯುವಕನೊಬ್ಬ ಮಂಡಿಯೂರಿ ಹೂವಿನ ಬೊಕ್ಕೆ ಕೊಟ್ಟಿದ್ದು, ಬಳಿಕ ಇಬ್ಬರೂ ಪರಸ್ಪರ ಅಪ್ಪಿಕೊಂಡಿದ್ದರು. ಇದರ ವಿಡಿಯೊ ಎಲ್ಲ ಕಡೆ ಹರಿದಾಡಿದ್ದು, ಯೂನಿವರ್ಸಿಟಿಯ ಆಡಳಿತ ಮಂಡಳಿಯವರೆಗೂ ತಲುಪಿತ್ತು. ಅವಿವಾಹಿತ ಮಹಿಳೆ-ಪುರುಷ…
ವಧುವಿಲ್ಲದೆ ತನ್ನ 27 ವರ್ಷದ ಮಗನಿಗೆ ಅದ್ಧೂರಿಯಾಗಿ ಮದುವೆ ಮಾಡಿಸುವ ಮೂಲಕ ಮಗನ ಕನಸನ್ನು ನನಸು ಮಾಡಿದ ತಂದೆ… ಅಜಯ್ ಬಾರೋಟ್ ಸಣ್ಣ ಮಗುವಿರುವಾಗಲೇ ಆತನ ಹೆತ್ತವರು ಮಗ ದೊಡ್ಡವನಾದ ಬಳಿಕ ಆತನಿಗೆ ಅದ್ಧೂರಿಯಾಗಿ ಮದುವೆ ಮಾಡಬೇಕು ಎಂಬ ಕನಸು ಕಂಡಿದ್ದರು. ಆದರೆ ಅಜಯ್ ಬೆಳವಣಿಗೆಯಲ್ಲಿ ಕುಂಠಿತವಾದ ಕಾರಣ ಆತನಿಗೆ ಸಂಗಾತಿ ಹುಡುಕಲು ಮನೆಯವರಿಗೆ ಕಷ್ಟವಾಯಿತು. ಯಾಕಂದರೆ ಅಜಯ್ ಬೆಳೆಯುತ್ತಾ ಅಂಗವೈಕಲ್ಯದಿಂದ ಬಳಲತೊಡಗಿದ. ಹೀಗಾಗಿ ಆತನಿಗೆ ವಧು ಇಲ್ಲದೆ ಮದುವೆ ಮಾಡಲು ಕುಟುಂಬ ತೀರ್ಮಾನ ಮಾಡಿತ್ತು. ಹಾಗೆಯೇ…
ಮಕ್ಕಳು ಮೊಬೈಲ್ ನೋಡ್ತಾರೆ, ಟಿವಿ ನೋಡ್ತಾರೆಂಬ ಪಾಲಕರ ಆರೋಪ ಈಗ ಸಾಮಾನ್ಯವಾಗಿದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಪಾಲಕರ ಆತಂಕಕ್ಕೆ ಕಾರಣವಾಗಿರುವುದು ಪಬ್ಜಿ ಗೇಮ್. ಮಕ್ಕಳ ಪ್ರಾಣವನ್ನೇ ಪಡೆಯುತ್ತಿರುವ ಈ ಪಬ್ಜಿ ಆಟಕ್ಕೆ ಮಕ್ಕಳು ದಾಸರಾಗುತ್ತಿದ್ದಾರೆ. ಇದು ಮಕ್ಕಳ ತಪ್ಪಲ್ಲ. ಈಗಿನ ವಾತಾವರಣ, ಆಟವಾಡಲು ಜಾಗವಿಲ್ಲದ ಪರಿಸ್ಥಿತಿ ಮಕ್ಕಳನ್ನು ಆನ್ಲೈನ್ ಗೇಮ್ ಗೆ ಪ್ರೋತ್ಸಾಹಿಸುತ್ತಿದೆ. ಮಕ್ಕಳು ಅತಿ ಹೆಚ್ಚಿನ ಮಟ್ಟದಲ್ಲಿ ಆನ್ಲೈನ್ ಗೇಮ್ ಗಳನ್ನು ಆಡಿದ್ರೆ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ನಿದ್ರೆ ಕೊರತೆ, ಶಕ್ತಿ ಕಡಿಮೆಯಾಗುವುದು, ದಣಿವು, ಸುಸ್ತು,…
ಹಣಕಾಸು ರಾಜ್ಯ ಸಚಿವ ಸಂತೋಷ ಕುಮಾರ್ ಗಂಗಾವರ್ರು ಸಂಸತ್ತಿಗೆ ಲಿಖಿತ ಪ್ರಶ್ನೆಗೆ ಉತ್ತರಿಸಿ ಒಬ್ಬವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ಹಂಚಲಾಗಿತ್ತು. ಜುಲೈ 27ರವರೆಗೆ 11.44 ಲಕ್ಷ ನಕಲಿ ಪ್ಯಾನ್ ಕಾರ್ಡ್ ಗುರುತಿಸಿ ರದ್ದು ಪಡಿಸಲಾಗಿದೆ. ಎಂದು ತಿಳಿಸಿದ್ದಾರೆ. ಒಬ್ಬನೆ ವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ನೀಡಿದ್ದು ಪತ್ತೆಯಾಗಿದೆ.
ಬುಧವಾರ, 21/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮೇಲಾಧಿಕಾರಿಗಳೊಂದಿಗಿನ ಮಾತುಕತೆಯಿಂದ ಹೆಚ್ಚಿನ ಫಲ. ಕೃಷಿ, ಹೈನುಗಾರಿಕೆಯಲ್ಲಿ ತೊಡಗಿಕೊಂಡವರಿಗೆ ಅನುಕೂಲ ಮತ್ತು ಲಾಭ ದೊರಕಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ.ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿನ ಸಾಧನೆ ಕಂಡು ಸಂತೋಷ ವಾಗಲಿದೆ….