ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳಗ್ರಹಕ್ಕೆ ನೀವು ಹೋಗಲು ಇಚ್ಚಿಸುವಿರಾ..? ಅಂತರಿಕ್ಷಕ್ಕೆ ತೆರಳಲು ತುಂಬಾ ಸಿದ್ಧತೆ ಮತ್ತು ಭಾರೀ ಹಣ ಬೇಕು. ಸಾಮಾನ್ಯ ಜನರು ಅಲ್ಲಿಗೆ ಹೋಗುವುದು ಕನಸಿನ ಮಾತು…! ಆದರೆ ಕೆಂಪುಗ್ರಹವನ್ನು ಹೋಲುವಂತೆ ಸ್ಥಳವೊಂದು ಈ ಭೂಮಂಡಲದಲ್ಲಿದೆ ಎಂದರೆ ನಿಮಗೆ ಅಚ್ಚರಿಯಾಗಬಹುದು. ಉತ್ತರ ಸ್ಪೇನ್ನ ಗುಹೆಯೊಂದರಲ್ಲಿ ಮಂಗಳಗ್ರಹದ ಪರಿಸರವನ್ನು ಹೋಲುವ ಪ್ರತಿರೂಪವನ್ನು ಸೃಷ್ಟಿಸಲಾಗಿದೆ. ಆಸ್ಟ್ರೋಲ್ಯಾಂಡ್ಸ್ ಎಂಬ ಸಂಸ್ಥೆ ನಿರ್ಮಿಸಿರುವ ಏರ್ ಸ್ಟೇಷನ್ ಎಂಬ ಈ ಸ್ಥಳವು ಕೆಂಪು ಗ್ರಹಕ್ಕೆ ಅಂತರಿಕ್ಷಯಾನ ಕೈಗೊಂಡ ಅನುಭವ ನೀಡುತ್ತದೆ.

ಕಾಂಟಾಬ್ರಿಯಾದಲ್ಲಿನ ಅರ್ರೆದೊಂಡೊ ಎಂಬಲ್ಲಿ 1.5 ಕಿಲೋಮೀಟರ್ ಉದ್ದದ ಮತ್ತು 60 ಮೀಟರ್ಗಳಷ್ಟು ಎತ್ತರದ ಗುಹೆಯನ್ನು ಮಾನವರ ವಸತಿ ಸ್ಥಳವನ್ನಾಗಿ ಪರಿವರ್ತಿಸಲಾಗಿದೆ. ಮಂಗಳಗ್ರಹದ ಪರಿಸರವನ್ನೂ ಇದು ತದ್ರೂಪು ಹೋಲುತ್ತದೆ. ಇದಕ್ಕಾಗಿ ವಿಜ್ಞಾನಿಗಳು, ವಾಸ್ತುಶಿಲ್ಪಿಗಳು ಮತ್ತು ಅಭಿವೃದ್ದಿಕಾರರು ಶ್ರಮವಹಿಸಿದ್ದಾರೆ. ಇಲ್ಲಿನ ತೀವ್ರ ಕಡಿಮೆ ತಾಪಮಾನ ಮತ್ತು ಮಂಗಳ ಗ್ರಹದಲ್ಲಿರುವಂತೆ ಕಾಸ್ಮಿಕ್ ಕಿರಣಗಳು ಅಂತರಿಕ್ಷದ ಅನುಭವ ನೀಡುತ್ತವೆ.

ಈ ಗುಹೆಯಲ್ಲಿ ಪ್ರವಾಸ ಮಾಡಲು ಇಚ್ಚಿಸುವವರು 20 ದಿನಗಳ ಆನ್ಲೈನ್ ಕೋರ್ಸ್ಗೆ ಒಳಗಾಗಬೇಕು ಹಾಗೂ ಗವಿಯಲ್ಲಿ ನಾಲ್ಕು ದಿನಗಳು ಮತ್ತು ಮೂರು ರಾತ್ರಿಗಳನ್ನು ಕಳೆಯುವುದಕ್ಕೆ ಮುನ್ನ ಮೂರು ದಿವಸಗಳ ತೀವ್ರ ತರಬೇತಿ ನೀಡಲಾಗುತ್ತದೆ. ಇದು ಹೆಚ್ಚುಕಡಿಮೆ ಗಗನಯಾತ್ರಿಗಳಿಗೆ ನೀಡುವ ಟ್ರೈನಿಂಗ್ ಮಾದರಿಯಲ್ಲೇ ಇರುತ್ತದೆ.ಗುಹೆಯಲ್ಲಿ ನೆಲೆಸುವ ವೇಳೆ ಗಗನಯಾತ್ರಿಗಳೆಂದು ಕರೆಯಲ್ಪಡುವ ಪ್ರವಾಸಿಗರು ಬಾಹ್ಯಾಕಾಶ ನಡಿಗೆ ಸಾಧನಗಳನ್ನು ಕೊಂಡೊಯ್ಯಬೇಕು.

ಈ ಗವಿಯಲ್ಲೂ ದೇಹ ತೂಕರಹಿತವಾಗಿರುವ ವಾತಾವರಣ ಸೃಷ್ಟಿಸಲಾಗಿದೆ. ಗುಹೆಯೊಳಗೆ ನಿರ್ಮಿಸಲಾಗಿರುವ ಪ್ರಯೋಗಾಲಯದಲ್ಲಿ ಪ್ರವಾಸಿಗರು ನಾಲ್ಕು ದಿನಗಳ ಕಾಲ ತಾವೇ ಆಹಾರ ತಯಾರಿಸಿಕೊಳ್ಳಬೇಕು. ಗುಹೆಯೊಳಗೆ ಪ್ರವೇಶಿಸಲು ಒಂದು ಬಾರಿ 10 ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗುವುದು. ಗುಹೆಯೊಳಗೆ ಮಂಗಳ ಗ್ರಹದ ಅನುಭವ ಹೊಂದಲು ತಲಾ 6,600 ಡಾಲರ್ ಶುಲ್ಕ ಪಾವತಿಸಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೂಪರ್ಸ್ಟಾರ್ ರಜನೀಕಾಂತ್ ಆಗಾಗ ಹಿಮಾಲಯಕ್ಕೆ ಹೋಗಿ ಧ್ಯಾನ ಮಾಡಿ ಬರುತ್ತಾರೆ. ವಿಶೇಷವಾಗಿ ತಮ್ಮ ಸಿನಿಮಾಗಳು ಬಿಡುಗಡೆ ಆಗುವ ಮುಂಚೆ ಹಾಗೂ ತಮ್ಮ ಜೀವನದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುಂಚೆ ರಜನಿ ಹಿಮಾಲಯಕ್ಕೆ ಭೇಟಿ ಕೊಡುತ್ತಾರೆ. ಕೆಲ ದಿನಗಳ ಹಿಂದೆ ಸ್ವತಃ ರಜನಿ ಅವರೇ ಹಿಮಾಲಯಕ್ಕೆ ಹೋಗುವುದಾಗಿ ತಿಳಿಸಿದ್ದರು.
ನಾವು ಮಧ್ಯಾಹ್ನ ಅಥವಾ ರಾತ್ರಿ ಮಲಗುವಾಗ ನಮ್ಮ ಕೈ ಮೇಲೆ ತಲೆನ ಹಾಕಿಕೊಂಡು ಮಲಗುತ್ತೇವೆ ಅದು ನಿಮಗೂ ಗೊತ್ತು, ನಿದ್ದೆ ಮನುಷ್ಯನಿಗೆ ವರದಾನವಾಗಿದೆ, ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಕೆಲಸ ಮಾಡುವವರು ನಿದ್ರೆ ಕಡೆ ಗಮನ ಕೊಡುತ್ತಿಲ್ಲ ತುಂಬಾ ಕೆಲಸದ ಕಡೆ ಗಮನ ಕೊಡುತ್ತಿದ್ದಾರೆ ಇದರಿಂದ ನಮ್ಮ ಆರೋಗ್ಯದ ಮೇಲೆ ತುಂಬಾನೇ ಪರಿಣಾಮ ಬೀರುತ್ತದೆ. ಇದರಿಂದ ರಾತ್ರಿ ಮಲಗುವ ನಿದ್ದೆ ಸಾಕಾಗುವುದಿಲ್ಲ ಹಾಗಾಗಿ ಮಧ್ಯಾಹ್ನವೂ ಕೂಡ ಮಲಗುತ್ತಾರೆ, ಮತ್ತು ಹೆಚ್ಚಾಗಿ ನಿದ್ರೆ ಮಾಡುವವರನ್ನು ಸೋಂಬೇರಿಗಳು ಅಂತಾನೂ ಕರೆಯುತ್ತಾರೆ….
ಸ್ನೇಹಿತರೇ ನೋಡಿ ನಮ್ಮ ಕನ್ನಡ ನಾಡು ಚೆಲುವಿನ ಬೀಡು………………ಅಮೋಘಮಯ ಪ್ರೇಕ್ಷಣಿಯ ತಾಣಗಳನ್ನು ಹೊಂದಿರುವ ಇ ನಮ್ಮ ಕನ್ನಡ ನಾಡು ವರ್ಣ ರಂಜಿತವಾಗಿದೆ ,ಮರೆಯದೆ ಭೇಟಿ ಕೊಡಿ. ಕರ್ನಾಟಕದ ಆ ಸೊಬಗನ್ನು ಸವಿಯಲು
ತೂಕ ಹೆಚ್ಚಿದ್ದರೆ ಹೇಗೆ ಸಮಸ್ಯೆಯೋ ಹಾಗೆಯೇ ತೂಕ ಕಡಿಮೆ ಇದ್ದರೂ ಕಷ್ಟ. ಜಾಹಿರಾತಿನಲ್ಲಿ ಬಂದ ಪುಡಿಯನ್ನೆಲ್ಲ ತಿಂದು ತೇಗಿದರೂ ಪ್ರಯೋಜನವಾಗಿಲ್ಲವೇ? ಅವೆಲ್ಲ ಏನೂ ಬೇಡ, ಸೂಕ್ತ ಆಹಾರ ಸೇವಿಸಿ ಸಾಕು. ತೂಕ ಕಳ್ಕೊಳೋ ಬಗ್ಗೆ ಎಲ್ಲರೂ ಮಾತಾಡ್ತಾರೆ, ಎಲ್ಲ ಪತ್ರಿಕೆಗಳಲ್ಲೂ ಅದಕ್ಕೆ ಸಂಬಂಧಪಟ್ಟ ಟಿಪ್ಸ್, ಲೇಖನ ದಿನಕ್ಕೊಂದರಂತೆ ಹರಿದು ಬರುತ್ತವೆ, ಇಂಟರ್ನೆಟ್ನಲ್ಲಿ ತೂಕ ಕಳೆದುಕೊಂಡವರ ಸಕ್ಸಸ್ ಸ್ಟೋರಿಗಳಿಗೂ ಕೊರತೆ ಇಲ್ಲ. ಆದ್ರೆ ತೂಕ ಕಡಿಮೆ ಇರೋರ ಕತೆ ಕೇಳೋರೇ ಇಲ್ಲ. ಕಡ್ಡಿ, ಸಿಳ್ಳೆಕ್ಯಾತ, ಅಸ್ಥಿಪಂಜರ ಎಂದೆಲ್ಲ ಕರೆಸಿಕೊಂಡು,…
ಹಿಂದೂ ಧರ್ಮದ ಜ್ಯೋತಿಷ್ಯದ ಪ್ರಕಾರ ರತ್ನಗಳ ಧಾರಣೆಯಿಂದ ಕ್ಷೇಮ ಪ್ರಾಪ್ತವಾಗುತ್ತದೆ ಹಾಗೂ ಉದ್ಯೋಗ, ವ್ಯಾಪಾರ, ವಿವಾಹ, ಸಂತಾನ ಹೀಗೆ ನಾನಾ ಬಯಕೆಗಳ ಈಡೇರಿಕೆ ಹಾಗೂ ಜೀವನದಲ್ಲಿ ಉಂಟಾಗುವ ತೊಂದರೆಗಳಿಗೂ ರತ್ನಗಲಿಂದ ಪರಿಹಾರ ಸಿಗುತ್ತೆ ಎಂದು ಹಿಂದೂಗಳಲ್ಲಿ ನಂಬಿಕೆ ಇದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದಕ್ಕೂ ತನ್ನದೇ ಆದ ನಿಯಮವನ್ನು ಹೊಂದಿರುತ್ತದೆ ಅಂತೆಯೇ ನೀವು ರತ್ನಗಳನ್ನು ಧರಿಸುವಾಗ ಕೆಲವೊಂದು ನಿಯಮಗಳನ್ನು ಅನುಸರಿಸುವುದು ಒಳಿತು. ನೀವು ಧರಿಸುವ ರತ್ನಗಳು ನಿಮಗೆ ಒಳಿತು ಮಾಡಬಬೇಕು ಅಂದ್ರೆ ನೀವು ಇಂತಹ ನಿಯಮಗಳನ್ನು ಪಾಲಿಸಲೇಬೇಕು…
ತೀವ್ರ ಕುತೂಹಲ ಕೆರಳಿಸಿರುವ ಬಹು ನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕವನ್ನು ಪ್ರಕಟಿಸಲಾಗಿದೆ. ಮಹೂರ್ತ ಫಿಕ್ಸ್… ಮೇ 12 ರಂದು ಮತದಾನ ನಡೆಯಲಿದೆ.ತದನಂತರ ಮೇ 15 ರಂದು ಮತಎಣಿಕೆ ನಡೆಯಲಿದೆ. ಮೇ 28ಕ್ಕೆ ಪ್ರಸಕ್ತ ವಿಧಾನಸಭೆಯ ಸದಸ್ಯರ ಅವಧಿ ಮುಕ್ತಾಯವಾಗಲಿದ್ದು,ನಂತರ ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ನೀತಿ ಸಂಹಿತೆ ಜಾರಿ… ದೆಹಲಿಯ ಕೇಂದ್ರ ಚುನಾವಣಾ ಆಯೋಗದಲ್ಲಿ ಚುನಾವಣಾಧಿಕಾರಿ ಓಂ ಪ್ರಕಾಶ್ ರಾವತ್ ಅವರು ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಮತ್ತು…