ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳಗ್ರಹಕ್ಕೆ ನೀವು ಹೋಗಲು ಇಚ್ಚಿಸುವಿರಾ..? ಅಂತರಿಕ್ಷಕ್ಕೆ ತೆರಳಲು ತುಂಬಾ ಸಿದ್ಧತೆ ಮತ್ತು ಭಾರೀ ಹಣ ಬೇಕು. ಸಾಮಾನ್ಯ ಜನರು ಅಲ್ಲಿಗೆ ಹೋಗುವುದು ಕನಸಿನ ಮಾತು…! ಆದರೆ ಕೆಂಪುಗ್ರಹವನ್ನು ಹೋಲುವಂತೆ ಸ್ಥಳವೊಂದು ಈ ಭೂಮಂಡಲದಲ್ಲಿದೆ ಎಂದರೆ ನಿಮಗೆ ಅಚ್ಚರಿಯಾಗಬಹುದು. ಉತ್ತರ ಸ್ಪೇನ್ನ ಗುಹೆಯೊಂದರಲ್ಲಿ ಮಂಗಳಗ್ರಹದ ಪರಿಸರವನ್ನು ಹೋಲುವ ಪ್ರತಿರೂಪವನ್ನು ಸೃಷ್ಟಿಸಲಾಗಿದೆ. ಆಸ್ಟ್ರೋಲ್ಯಾಂಡ್ಸ್ ಎಂಬ ಸಂಸ್ಥೆ ನಿರ್ಮಿಸಿರುವ ಏರ್ ಸ್ಟೇಷನ್ ಎಂಬ ಈ ಸ್ಥಳವು ಕೆಂಪು ಗ್ರಹಕ್ಕೆ ಅಂತರಿಕ್ಷಯಾನ ಕೈಗೊಂಡ ಅನುಭವ ನೀಡುತ್ತದೆ.

ಕಾಂಟಾಬ್ರಿಯಾದಲ್ಲಿನ ಅರ್ರೆದೊಂಡೊ ಎಂಬಲ್ಲಿ 1.5 ಕಿಲೋಮೀಟರ್ ಉದ್ದದ ಮತ್ತು 60 ಮೀಟರ್ಗಳಷ್ಟು ಎತ್ತರದ ಗುಹೆಯನ್ನು ಮಾನವರ ವಸತಿ ಸ್ಥಳವನ್ನಾಗಿ ಪರಿವರ್ತಿಸಲಾಗಿದೆ. ಮಂಗಳಗ್ರಹದ ಪರಿಸರವನ್ನೂ ಇದು ತದ್ರೂಪು ಹೋಲುತ್ತದೆ. ಇದಕ್ಕಾಗಿ ವಿಜ್ಞಾನಿಗಳು, ವಾಸ್ತುಶಿಲ್ಪಿಗಳು ಮತ್ತು ಅಭಿವೃದ್ದಿಕಾರರು ಶ್ರಮವಹಿಸಿದ್ದಾರೆ. ಇಲ್ಲಿನ ತೀವ್ರ ಕಡಿಮೆ ತಾಪಮಾನ ಮತ್ತು ಮಂಗಳ ಗ್ರಹದಲ್ಲಿರುವಂತೆ ಕಾಸ್ಮಿಕ್ ಕಿರಣಗಳು ಅಂತರಿಕ್ಷದ ಅನುಭವ ನೀಡುತ್ತವೆ.

ಈ ಗುಹೆಯಲ್ಲಿ ಪ್ರವಾಸ ಮಾಡಲು ಇಚ್ಚಿಸುವವರು 20 ದಿನಗಳ ಆನ್ಲೈನ್ ಕೋರ್ಸ್ಗೆ ಒಳಗಾಗಬೇಕು ಹಾಗೂ ಗವಿಯಲ್ಲಿ ನಾಲ್ಕು ದಿನಗಳು ಮತ್ತು ಮೂರು ರಾತ್ರಿಗಳನ್ನು ಕಳೆಯುವುದಕ್ಕೆ ಮುನ್ನ ಮೂರು ದಿವಸಗಳ ತೀವ್ರ ತರಬೇತಿ ನೀಡಲಾಗುತ್ತದೆ. ಇದು ಹೆಚ್ಚುಕಡಿಮೆ ಗಗನಯಾತ್ರಿಗಳಿಗೆ ನೀಡುವ ಟ್ರೈನಿಂಗ್ ಮಾದರಿಯಲ್ಲೇ ಇರುತ್ತದೆ.ಗುಹೆಯಲ್ಲಿ ನೆಲೆಸುವ ವೇಳೆ ಗಗನಯಾತ್ರಿಗಳೆಂದು ಕರೆಯಲ್ಪಡುವ ಪ್ರವಾಸಿಗರು ಬಾಹ್ಯಾಕಾಶ ನಡಿಗೆ ಸಾಧನಗಳನ್ನು ಕೊಂಡೊಯ್ಯಬೇಕು.

ಈ ಗವಿಯಲ್ಲೂ ದೇಹ ತೂಕರಹಿತವಾಗಿರುವ ವಾತಾವರಣ ಸೃಷ್ಟಿಸಲಾಗಿದೆ. ಗುಹೆಯೊಳಗೆ ನಿರ್ಮಿಸಲಾಗಿರುವ ಪ್ರಯೋಗಾಲಯದಲ್ಲಿ ಪ್ರವಾಸಿಗರು ನಾಲ್ಕು ದಿನಗಳ ಕಾಲ ತಾವೇ ಆಹಾರ ತಯಾರಿಸಿಕೊಳ್ಳಬೇಕು. ಗುಹೆಯೊಳಗೆ ಪ್ರವೇಶಿಸಲು ಒಂದು ಬಾರಿ 10 ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗುವುದು. ಗುಹೆಯೊಳಗೆ ಮಂಗಳ ಗ್ರಹದ ಅನುಭವ ಹೊಂದಲು ತಲಾ 6,600 ಡಾಲರ್ ಶುಲ್ಕ ಪಾವತಿಸಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭಾ ಚುನಾವಣೆಯವರೆಗೆ ತಣ್ಣಗಿದ್ದ ಆಪರೇಷನ್ ಕಮಲ ವಿಚಾರ ಮತದಾನ ಮುಗಿದ ಬಳಿಕ ತರೆಮರೆಯಲ್ಲಿ ಆರಂಭವಾಗಿದೆ ಎನ್ನಲಾಗಿದ್ದು, ಈಗ ಸಿಎಂ ಎಚ್ಡಿ ಕುಮಾರಸ್ವಾಮಿ ಅವರು ತಮ್ಮ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದಾರೆ. ರಮೇಶ್ ಜಾರಕಿಹೊಳಿ ರಾಜೀನಾಮೆ ಮಾತಿನ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಅವರಿಗೆ ಆತಂಕ ಶುರುವಾಗಿದೆ ಎನ್ನಲಾಗಿದ್ದು ಹೀಗಾಗಿ ಶಾಸಕರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಲು ಭಾನುವಾರ ಸಂಜೆ ಖಾಸಗಿ ಹೋಟೆಲ್ನಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಲೋಕಸಭೆ ಚುನಾವಣೆ ಬಳಿಕ ನಡೆಯಲಿರುವ ಮೊದಲ ಜೆಡಿಎಸ್ ಶಾಸಕಾಂಗ ಸಭೆ ಇದಾಗಿದೆ….
ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಹಾಗೂ ಮಕ್ಕಳು ಭೇಟಿ ನೀಡಿದರು. ಈ ವೇಳೆ ಪ್ರತಾಪ್ ಅವರ ಪತ್ನಿ ಸರಿತಾ ಸ್ಪರ್ಧಿ ಪ್ರಿಯಾಂಕಾ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಸೋಮವಾರ ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಸರಿತಾ ಆಗಮಿಸಿದ್ದರು. ಈ ವೇಳೆ ಸರಿತಾ ಅವರು ಮನೆ ಮಂದಿ ಜೊತೆ ಆತ್ಮೀಯವಾಗಿ ಮಾತನಾಡಿಸಿ ತಾವು ತಂದಿದ್ದ ತಿಂಡಿಯನ್ನು ಪ್ರತಾಪ್ ಅವರಿಗೆ ನೀಡದೇ ವಾಸುಕಿ ಅವರಿಗೆ ಕೊಟ್ಟಿದ್ದಾರೆ. ಸರಿತಾ, ಪ್ರತಾಪ್ ಜೊತೆ ಮಾತನಾಡಿದ ಬಳಿಕ…
ಒಂದು ವರ್ಷದ ಹಿಂದೆ ಅಧಿಕೃತವಾಗಿ ಈ ಧರೆಯಲ್ಲಿ ಅವತರಿಸಿರುವ ಪುಟ್ಟ ಬಾಲಕಿಯೀಗ ಆರೋಗ್ಯವಂತಳಾಗಿ ಬೆಳೆಯುತ್ತಿದ್ದಾಳೆ. ಇದರಲ್ಲೇನು ವಿಶೇಷ ಎನ್ನುತ್ತೀರಾ? ಈ ಮಗು ಎರಡು ಬಾರಿ ಜನಿಸಿದ್ದು, ಇದಕ್ಕಾಗಿ ಆಧುನಿಕ ವೈದ್ಯಕೀಯಕ್ಕೆ ಕೃತಜ್ಞತೆಗಳನ್ನು ಹೇಳಬೇಕಾಗಿದೆ.
ರಾಜ್ಯದ ಜನತೆಗೆ ಶುಕ್ರವಾರ ಮುಂಜಾನೆಲೇ ಶಾಕ್ ಎದುರಾಗಿದೆ. ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ತೈಲ ಕಂಪನಿಗಳು ಏಕಾಏಕಿ ಹೆಚ್ಚಿಸಿದ್ದು, ಕರ್ನಾಟಕದಲ್ಲೂ ಇಂಧನ ದರ ಏರಿಕೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟಿದೆ. ಮೇ 15ರಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಲೀಟರ್ಗೆ ಸುಮಾರು ₹3ರವರೆಗೆ ಏರಿಕೆ ಮಾಡಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ ಕಂಡಿರುವುದೇ ಈ ನಿರ್ಧಾರಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರವು ಸುಮಾರು ₹3.26…
ಕೆಮ್ಮು ವಾಸ್ತವವಾಗಿ ಒಂದು ಕಾಯಿಲೆಯಲ್ಲ, ಒಂದು ರೋಗ ನಿರೋಧಕ ವ್ಯವಸ್ಥೆ. ಗಂಟಲಿನ ತೇವದಲ್ಲಿ ವೈರಸ್ಸುಗಳು ಮನೆ ಮಾಡಿದಾಗ ಇದನ್ನು ಕೆರೆದು ಹೊರ ಹಾಕುವ ಕ್ರಿಯೆಯೇ ಕೆಮ್ಮು. ಈ ಕೆಮ್ಮನ್ನು ಎರಡೇ ದಿನದಲ್ಲಿ ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ನೀವೆ ಸುಲಭವಾಗಿ ಮನೆಯಲ್ಲಿಯೇ ಸಿಗುವ ಸುಲಭ ಸಾಮಾಗ್ರಿಗಳಿಂದ ತಯಾರಿಸಬಹುದು. ಕೆಮ್ಮು ಮತ್ತು ಸಾವು ಯಾರನ್ನೂ ಕೇಳಿ ಬರುವುದಿಲ್ಲ ವಂತೆ. ಯಾವುದೋ ಮುಖ್ಯ ಕಾರ್ಯದಲ್ಲಿದ್ದಾಗ ಕೆಮ್ಮು ಕಾಡಿದರೆ ಆಗ ಎದು ರಾಗುವ ತಾಪತ್ರಯ ಒಂದೆರ ಡಲ್ಲ. ಅದರಲ್ಲೂ ಕೆಮ್ಮು ಸತತವಾದರೆ ಮುಖ್ಯ…
ಅಸ್ಸಾಂ ಸರ್ಕಾರ ಶನಿವಾರ ಬಿಡುಗಡೆ ಮಾಡಿರುವ ರಾಷ್ಟ್ರೀಯ ಪೌರತ್ವ ನೋಂದಣಿಯ (ಎನ್ಆರ್ಸಿ) ಅಂತಿಮ ಪಟ್ಟಿಯ ಪ್ರಕಾರ 19.06 ಲಕ್ಷ ಜನರು ಭಾರತೀಯ ಪೌರರಲ್ಲ ಎಂದು ಹೇಳಲಾಗಿದೆ. ಹಾಗೆಂದು ತಕ್ಷಣವೇ ಇವರನ್ನು ಬಂಧಿಸದಿರಲು ಹಾಗೂ ಅಕ್ರಮ ನಿವಾಸಿಗಳು ಎಂದು ಘೋಷಿಸದಿರಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ. ಇದೇ ವೇಳೆ ತಾವು ಭಾರತೀಯ ಪೌರರು ಎಂಬುದನ್ನು ಸಾಬೀತುಪಡಿಸಲು ತಮ್ಮ ಬಳಿ ದಾಖಲೆಗಳಿದ್ದರೆ, ಅವುಗಳನ್ನು ಒದಗಿಸಿ ತಮ್ಮ ಪೌರತ್ವವನ್ನು ಮತ್ತೊಮ್ಮೆ ಸಾಬೀತುಪಡಿಸಲು ಇವರೆಲ್ಲರಿಗೂ ಅವಕಾಶ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ನಿರ್ದೇಶನ ನೀಡಿದೆ….