News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ನಾವು ಸಹ ಮಂಗಳ ಗ್ರಹಕ್ಕೆ ಹೋಗಬಹುದು ; ಇಲ್ಲಿದೆ ನೋಡಿ ಪೂರ್ತಿ ಮಾಹಿತಿ,.!!

45

ಮಂಗಳಗ್ರಹಕ್ಕೆ ನೀವು ಹೋಗಲು ಇಚ್ಚಿಸುವಿರಾ..? ಅಂತರಿಕ್ಷಕ್ಕೆ ತೆರಳಲು ತುಂಬಾ ಸಿದ್ಧತೆ ಮತ್ತು ಭಾರೀ ಹಣ ಬೇಕು. ಸಾಮಾನ್ಯ ಜನರು ಅಲ್ಲಿಗೆ ಹೋಗುವುದು ಕನಸಿನ ಮಾತು…! ಆದರೆ ಕೆಂಪುಗ್ರಹವನ್ನು ಹೋಲುವಂತೆ ಸ್ಥಳವೊಂದು ಈ ಭೂಮಂಡಲದಲ್ಲಿದೆ ಎಂದರೆ ನಿಮಗೆ ಅಚ್ಚರಿಯಾಗಬಹುದು. ಉತ್ತರ ಸ್ಪೇನ್‍ನ ಗುಹೆಯೊಂದರಲ್ಲಿ ಮಂಗಳಗ್ರಹದ ಪರಿಸರವನ್ನು ಹೋಲುವ ಪ್ರತಿರೂಪವನ್ನು ಸೃಷ್ಟಿಸಲಾಗಿದೆ. ಆಸ್ಟ್ರೋಲ್ಯಾಂಡ್ಸ್ ಎಂಬ ಸಂಸ್ಥೆ ನಿರ್ಮಿಸಿರುವ ಏರ್ ಸ್ಟೇಷನ್ ಎಂಬ ಈ ಸ್ಥಳವು ಕೆಂಪು ಗ್ರಹಕ್ಕೆ ಅಂತರಿಕ್ಷಯಾನ ಕೈಗೊಂಡ ಅನುಭವ ನೀಡುತ್ತದೆ.

ಕಾಂಟಾಬ್ರಿಯಾದಲ್ಲಿನ ಅರ್ರೆದೊಂಡೊ ಎಂಬಲ್ಲಿ 1.5 ಕಿಲೋಮೀಟರ್ ಉದ್ದದ ಮತ್ತು 60 ಮೀಟರ್‍ಗಳಷ್ಟು ಎತ್ತರದ ಗುಹೆಯನ್ನು ಮಾನವರ ವಸತಿ ಸ್ಥಳವನ್ನಾಗಿ ಪರಿವರ್ತಿಸಲಾಗಿದೆ. ಮಂಗಳಗ್ರಹದ ಪರಿಸರವನ್ನೂ ಇದು ತದ್ರೂಪು ಹೋಲುತ್ತದೆ. ಇದಕ್ಕಾಗಿ ವಿಜ್ಞಾನಿಗಳು, ವಾಸ್ತುಶಿಲ್ಪಿಗಳು ಮತ್ತು ಅಭಿವೃದ್ದಿಕಾರರು ಶ್ರಮವಹಿಸಿದ್ದಾರೆ. ಇಲ್ಲಿನ ತೀವ್ರ ಕಡಿಮೆ ತಾಪಮಾನ ಮತ್ತು ಮಂಗಳ ಗ್ರಹದಲ್ಲಿರುವಂತೆ ಕಾಸ್ಮಿಕ್ ಕಿರಣಗಳು ಅಂತರಿಕ್ಷದ ಅನುಭವ ನೀಡುತ್ತವೆ.

ಈ ಗುಹೆಯಲ್ಲಿ ಪ್ರವಾಸ ಮಾಡಲು ಇಚ್ಚಿಸುವವರು 20 ದಿನಗಳ ಆನ್‍ಲೈನ್ ಕೋರ್ಸ್‍ಗೆ ಒಳಗಾಗಬೇಕು ಹಾಗೂ ಗವಿಯಲ್ಲಿ ನಾಲ್ಕು ದಿನಗಳು ಮತ್ತು ಮೂರು ರಾತ್ರಿಗಳನ್ನು ಕಳೆಯುವುದಕ್ಕೆ ಮುನ್ನ ಮೂರು ದಿವಸಗಳ ತೀವ್ರ ತರಬೇತಿ ನೀಡಲಾಗುತ್ತದೆ. ಇದು ಹೆಚ್ಚುಕಡಿಮೆ ಗಗನಯಾತ್ರಿಗಳಿಗೆ ನೀಡುವ ಟ್ರೈನಿಂಗ್ ಮಾದರಿಯಲ್ಲೇ ಇರುತ್ತದೆ.ಗುಹೆಯಲ್ಲಿ ನೆಲೆಸುವ ವೇಳೆ ಗಗನಯಾತ್ರಿಗಳೆಂದು ಕರೆಯಲ್ಪಡುವ ಪ್ರವಾಸಿಗರು ಬಾಹ್ಯಾಕಾಶ ನಡಿಗೆ ಸಾಧನಗಳನ್ನು ಕೊಂಡೊಯ್ಯಬೇಕು.

ಈ ಗವಿಯಲ್ಲೂ ದೇಹ ತೂಕರಹಿತವಾಗಿರುವ ವಾತಾವರಣ ಸೃಷ್ಟಿಸಲಾಗಿದೆ. ಗುಹೆಯೊಳಗೆ ನಿರ್ಮಿಸಲಾಗಿರುವ ಪ್ರಯೋಗಾಲಯದಲ್ಲಿ ಪ್ರವಾಸಿಗರು ನಾಲ್ಕು ದಿನಗಳ ಕಾಲ ತಾವೇ ಆಹಾರ ತಯಾರಿಸಿಕೊಳ್ಳಬೇಕು. ಗುಹೆಯೊಳಗೆ ಪ್ರವೇಶಿಸಲು ಒಂದು ಬಾರಿ 10 ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗುವುದು. ಗುಹೆಯೊಳಗೆ ಮಂಗಳ ಗ್ರಹದ ಅನುಭವ ಹೊಂದಲು ತಲಾ 6,600 ಡಾಲರ್ ಶುಲ್ಕ ಪಾವತಿಸಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಾಧನೆ, ಸ್ಪೂರ್ತಿ

    ಫೆಬ್ರವರಿ 26-27 ನನ್ನ ಕೊನೆಯ ದಿನ ಆಮೇಲೆ ನನ್ನ ಮೇಲೆ ಕನ್ನಡಿಗರೆಲ್ಲಾ ಒಂದು ಹಿಡಿ ಮಣ್ಣು ಹಾಕಿ.” ಕೋತಿರಾಜ್​ ಅವರೇ ನೀಡಿದ ಹೇಳಿಕೆ ಯಾಕೆ ಗೊತ್ತಾ.

    ಅಪಾಯಕಾರಿ ಬಂಡೆಗಳನ್ನು ಸುಲಭವಾಗಿ ಏರಿ ರಾಜ್ಯದ ಜನರ ಮನೆಮಾತಾಗಿರುವ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್​ಗೆ ಫೆ.27 ಕೊನೆಯ ದಿನವಾಗಲಿದೆಯೆ ? ಸ್ವತಃ ಅವರೇ ನೀಡಿದ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.ಬೆಂಗಳೂರು ಹೊರವಲಯದ ನೆಲಮಂಗಲದ ಖಾಸಗಿ ಶಾಲೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜ್ಯೋತಿರಾಜ್, ಮುಂದಿನ ವರ್ಷ ಫೆಬ್ರವರಿ 26-27 ನನ್ನ ಕೊನೆಯ ದಿನ ಎಂದು ಹೇಳಿ ಭಾವುಕರಾಗಿದ್ದಾರೆ.ಸರ್ಕಾರದಿಂದ ಚಿತ್ರದುರ್ಗದ ಅಭಿವೃದ್ಧಿಗೆ ಯಾವುದೇ ಪ್ರಯೋಜನವಾಗಿಲ್ಲ. ಆದ ಕಾರಣ ನಾನು ಮುಂಬರುವ ಫೆ.26 ಮತ್ತು 27 ರಂದು ಜಗತ್ತಿನ ಅತಿ ಎತ್ತರದ ಅಮೆರಿಕದ…

  • ಸಿನಿಮಾ

    ರೆಬೆಲ್ ಸ್ಟಾರ್ ಅಂಬರೀಶ್ ರವರ ಆ ಎರಡು ಕನಸು ಕೊನೆಗೂ ನನಸಾಗಲೇ ಇಲ್ಲಾ…

    ದಿವಂಗತ ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ ಮಗ ಅಭಿಷೇಕ್ ಎಂದರೆ ಅಚ್ಚುಮೆಚ್ಚು, ಮಗನ ಮದುವೆ ಮಾಡಬೇಕು, ಅವನ ಮೊದಲ ಚಿತ್ರವನ್ನು ನೋಡಬೇಕು ಎಂದು ಕನಸು ಕಂಡಿದ್ದರು. ಅಂಬರೀಶ್ ಅವರಿಗೆ ಇದ್ದಿದ್ದು ಎರಡೇ ಆಸೆ. ಒಂದು ಮುದ್ದಿನ ಮಗ ಅಭಿಷೇಕ್ ಅವರ ಮದುವೆ ಮಾಡ್ಬೇಕು, ಇನ್ನೊಂದು ಮಗನ ಮೊದಲ ಸಿನಿಮಾ ಅಮರ್ ಚಿತ್ರವನ್ನು ನೋಡಬೇಕು ಅಂತಾ. ರೆಬೆಲ್ ಸ್ಟಾರ್ ಎಂದಿಗೂ ಅವರ ಮಗನಿಗೆ ನೀನು ಹೀಗೆ ಇರಬೇಕು, ಇಂತದ್ದೆ ಮಾಡಬೇಕು ಎಂದು ಹೇಳಿದವರಲ್ಲ.   ಅಂಬರೀಶ್ ಅವರ ಹಾಗೆ…

  • ಸುದ್ದಿ

    ನಿಮ್ಮ ಅದೃಷ್ಟವನ್ನು ಬದಲಾಯಿಸಿಕೊಳ್ಳಬೇಕೇ; ಹಾಗಾದರೆ ಅಮಾವಾಸ್ಯೆಯಂದು ಹೀಗೆ ಮಾಡಿದರೆ ಸಾಕು,..

    ಹಿಂದಿನ ಕಾಲದಲ್ಲಿ ಹಿಂದೂ ಸಮಾಜದಲ್ಲಿ ಅಮಾವಾಸ್ಯೆಯಂದು ತಿಂಗಳ ರಜೆಯನ್ನಾಗಿ ನೀಡಲಾಗುತ್ತಿತ್ತು. ಪ್ರತಿತಿಂಗಳೂ ಅವಮಾಸ್ಯೆಯಂದು ರಜೆ ಇತ್ತು. ಅಮಾವಾಸ್ಯೆಯು ಶುಭವಲ್ಲವೆಂದು ಯಾರೂ ಕೆಲಸ ಮಾಡುತ್ತಿರಲಿಲ್ಲ. ಪ್ರಯಾಣವನ್ನೂ ಕೂಡಾ ಅಮವಾಸ್ಯೆಯಂದು ಮಾಡುತ್ತಿರಲಿಲ್ಲ.ಚಂದ್ರನ ಚಕ್ರವು ಜಲಮೂಲಗಳ ಮೇಲೆಯೂಪ್ರಭಾವ ಬೀರುತ್ತದೆ ಇದರಿಂದಾಗಿ ಸಮುದ್ರದಲ್ಲೂ ಉಬ್ಬರವಿಳಿತಗಳೂ ಕಂಡು ಬರುತ್ತದೆ. ಮನುಷ್ಯನನಡವಳಿಕೆಯ ಮೇಲೂ ಚಂದ್ರನು ಪ್ರಭಾವಬೀರುವುದರಿಂದ ವ್ಯಕ್ತಿಯು ಪ್ರಕ್ಷುಬ್ಧನಾಗಬಹುದು, ಇತರರಿಗೆ ಕಿರಿಕಿರಿಯುಂಟು ಮಾಡಬಹುದುಅಥವಾ ಇತರರಿಗೆ ಕೆಟ್ಟವನಾಗಬಹುದು. ಆದ್ದರಿಂದ ಅಮಾವಾಸ್ಯೆ ಹಾಗೂ ಹುಣ್ಣಿಯ ಕುರಿತುಹಲವಾರು ಆಚರಣೆಗಳು, ನಂಬಿಕೆಗಳು ಇವೆ. ಅಮಾವಾಸ್ಯೆ ಒಳ್ಳೆಯದೇ? : ಅನೇಕರಲ್ಲಿ ಅಮಾವಾಸ್ಯೆಯ ದಿನ ಒಳ್ಳೆಯದಲ್ಲ ಎಂಬ…

  • ವಿಧ್ಯಾಭ್ಯಾಸ

    ವಿಧ್ಯಾರ್ಥಿಗಳ ಗಮನಕ್ಕೆ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮೇ 20 ಕಡೆಯ ದಿನಾಂಕ…..!

    ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸೆಕೆಂಡರಿ ಸ್ಕೂಲ್ ಲಿವಿಂಗ್ ಸರ್ಟಿಫಿಕೇಟ್ (ಎಸ್ಎಸ್ಎಲ್ಸಿ)ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಂತಿಮ ಗಡುವನ್ನು ವಿಸ್ತರಿಸಿದೆ.ಇದರಂತೆ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಯಸುವವರಿಗೆ ಮೇ 20 ಕಡೆಯ ದಿನವಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾ ಅಂತಿಮ ದಿನಾಂಕವನ್ನು ಮುಂದೂಡಿದ್ದಾಗಿ ಹೇಳಲಾಗಿದ್ದು ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಮುಖ್ಯೋಪಾಧ್ಯಾಯರ ಸಮೂಹವು ದಿನಾಂಕ ಮುಂದುಡುವಂತೆ ಇಲಾಖೆಗೆ ಮನವಿ ಸಲ್ಲಿಸಿತ್ತು. “ಹೆಚ್ಚಿನ ವಿದ್ಯಾರ್ಥಿಗಳು ಇದಾಗಲೇ ತಮ್ಮ ತಮ್ಮ ಊರುಗಳಿಗೆ ತೆರಳಿದ್ದಾರೆ. ಹಾಗಾಗಿ ಪೂರಕ ಪರೀಕ್ಷೆಯ ಲ್ಕುರಿತ ಗಡುವಿನ ವಿಚಾರ ನಮಗೆ…

  • ರಾಜಕೀಯ

    ರಾಜ್ಯದಲ್ಲಿ ಲೋಕಸಭಾ ಫಲಿತಾಂಶ 4 ಗಂಟೆ ವಿಳಂಬ!

    ಪ್ರತಿ ಲೋಕಸಭಾ ಕ್ಷೇತ್ರಗಳಲ್ಲಿ 40 ವಿವಿ ಪ್ಯಾಟ್ ಮತ ಯಂತ್ರಗಳ ಎಣಿಕೆ ಮಾಡಬೇಕು. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣಾ ಫಲಿತಾಂಶ 4 ಗಂಟೆ ತಡವಾಗಿ ಪ್ರಕಟವಾಗಬಹುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ 23(ನಾಳೆ)ರಂದು ಬೆಳಗ್ಗೆ 8 ಗಂಟೆಗೆ ಮೊದಲು ರಿಟರ್ನಿಂಗ್ ಅಧಿಕಾರಿಯ ಕಚೇರಿಯಲ್ಲಿ ಅಂಚೆ ಮತಪತ್ರಗಳ ಎಣಿಕೆ ಆರಂಭಿಸಲಾಗುತ್ತದೆ. ಬಳಿಕ ಇವಿಎಂಗಳಲ್ಲಿನ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗುತ್ತದೆ ಎಂದು ತಿಳಿಸಿದರು. ಹಿಂದೆ…

  • ಸ್ಪೂರ್ತಿ

    ಉಚಿತ ಚಿಕಿತ್ಸೆ ಕೊಟ್ಟು ಬಡವರ ಪಾಲಿಗೆ ದೇವರಂತಾಗಿರುವ ಡಾ.ರಮಣರಾವ್..!ತಿಳಿಯಲು ಈ ಲೇಖನ ಓದಿ..

    ಸುತ್ತಮುತ್ತಲ ಪ್ರದೇಶದಲ್ಲಿ 7000 ಶೌಚಾಲಯ ನಿರ್ಮಿಸಿದ್ದಾರೆ. 60 ಹಳ್ಳಿಗಳಿಗೆ ಸಹಾಯವಾಗುವಂತೆ ನಾಲ್ಕು ಬೋರ್ ವೆಲ್ ಗಳನ್ನು ಕೊರೆಸಿದ್ದಾರೆ. ನಗರದಲ್ಲಿ 50 ಶಾಲೆಗಳನ್ನು ದತ್ತು ಪಡೆದಿದ್ದು, ಮಕ್ಕಳಿಗೆ ಯೂನಿಫಾರ್ಮ್, ಬುಕ್ಸ್ ಅನ್ನು ನೀಡುತ್ತಿದ್ದಾರೆ. ಡಾ.ರಮಣರಾವ್ ಅವರ ವೈದ್ಯಕೀಯ ಸೇವೆಗೆ ಮೆಚ್ಚಿ 2010ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.