ಸುದ್ದಿ

ಬಿಗ್ ಶಾಕಿಂಗ್..ಹಿರಿಯ ನಟ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಇನ್ನಿಲ್ಲ..ಏನಾಗಿತ್ತು..?

108

ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಕೊನೆಯುಸಿರೆಳೆದಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ರಂಗಭೂರ್ಮಿ ಕಲಾವಿದ ಹಿರಣ್ಣಯ್ಯ ಇಹಲೋಕ ತ್ಯಜಿಸಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ಮೂಲದ 84 ವರ್ಷದ ಮಾಸ್ಟರ್ ಹಿರಣ್ಣಯ್ಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಗುರುವಾರ ಬೆಳಗ್ಗೆ 8:30ರ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಲಂಚಾವತರ ಮೂಲಕ ಮನೆಮಾತಾಗಿದ್ದ ಹಿರಣಯ್ಯ ಅನಾರೋಗ್ಯದಿಂದಾಗಿ ತೆರೆಯ ಹಿಂದೆ ಸರಿದಿದ್ದರು. ಫೆಬ್ರವರಿ 15, 1934ರಂದು ಮೈಸೂರಿನಲ್ಲಿ ಮಾಸ್ಟರ್ ಹಿರಣಯ್ಯ ಜನಿಸಿದ್ದರು. ಅವರ ಮೂಲ ಹೆಸರು ನರಸಿಂಹಮೂರ್ತಿ. ಕಲ್ಚರ್ಡ್ ಕಮೆಡಿಯನ್ ಎಂದು ಪ್ರಖ್ಯಾತರಾಗಿದ್ದ ಕೆ. ಹಿರಣ್ಣಯ್ಯ ಮತ್ತು ಶಾರದಮ್ಮ ದಂಪತಿಗಳ ಒಬ್ಬನೇ ಮಗ. ಓದಿದ್ದು ಇಂಟರ್ ಮೀಡಿಯೆಟ್ ವರೆಗೆ. 1952ರಲ್ಲಿ ತಂದೆಯೊಂದಿಗೆ ಕೂಡಿಕೊಂಡು ಅವರಿಂದಲೇ ರಂಗಶಿಕ್ಷಣ ಪಡೆದಿದ್ದರು.

ಇಂಟರ್ ಮೀಡಿಯೆಟ್ ಓದಿದ್ದ ಹಿರಣ್ಣಯ್ಯ, ತಂದೆ ಕೆ. ಹಿರಣ್ಣಯ್ಯ 1940ರಲ್ಲಿ ರಚಿಸಿ, ನಿರ್ದೇಶಿಸಿದ ‘ವಾಣಿ’ ಚಲನಚಿತ್ರದಲ್ಲಿ ಅಭಿನಯಿಸುವ ಮೂಲಕ ಸಿನಿಮಾ ಜಗತ್ತಿಗೆ ಪಾದಾರ್ಪಣೆ ಮಾಡಿದ್ದರು. ಬಳಿಕ 1948ರಲ್ಲಿ ರಂಗಭೂಮಿಯಲ್ಲಿ ಚಿಕ್ಕ ಪಾತ್ರದಲ್ಲಿ ನಟಿಸಿದ್ದರು.

ಅವರ ‘ಲಂಚಾವತಾರ’ ನಾಟಕವೊಂದೇ 10,000ಕ್ಕೂ ಹೆಚ್ಚು ಪ್ರದರ್ಶನಗಳನ್ನು ಕಂಡ ದಾಖಲೆ ನಿರ್ಮಿಸಿದೆ.ತಮ್ಮ ಅಸಾಧಾರಣ ನಟನೆಗಾಘಿ ನಟರತ್ನಾಕರ, ಕಲಾಗಜಸಿಂಹ, ರಾಜ್ಯೋತ್ಸವ ಪ್ರಶಸ್ತಿ, ರಾಜ್ಯ ನಾಟಕ ಅಕಾಡಮಿ ಪ್ರಶಸ್ತಿ, ರಂಗಭೂಮಿ ಪ್ರಶಸ್ತಿ, ಗುಬ್ಬಿವೀರಣ್ಣ ಪ್ರಶಸ್ತಿ, ನೂಜೆರ್ಸಿ, ವಾಷಿಂಗ್‌ಟನ್ ಡಿ.ಸಿ., ಬಾಸ್ಟನ್, ಹೂಸ್ಟನ್, ನೂಯಾರ್ಕ್ ಮುಂತಾದೆಡೆಗಳಿಂದ ಸಂದ ಸನ್ಮಾನ, ನವರತ್ನಾರಾಂ ಪ್ರಶಸ್ತಿ, ಮದರಾಸು, ಹೈದರಾಬಾದು ಕನ್ನಡ ಸಂಘಗಳಿಂದ ಸನ್ಮಾನವೂ ಇವರಿಗೆ ಸಲ್ಲಿವೆ.

ಹಿರಣ್ಣಯ್ಯ ಪತ್ನಿ ಹಾಗೂ ಐವರು ಮಕ್ಕಳನ್ನು ಅಗಲಿದ್ದಾರೆ. ಇವರ ನಿಧನ ಚಿತ್ರರಂಗಕ್ಕೆ ತುಂಬಲಾರದ ನಷ್ಟವುಂಟು ಮಾಡಿದೆ. ಇಂದು ಸಂಜೆ 6 ಗಂಟೆಗೆ ಹಿರಣ್ಣಯ್ಯ ಅಂತ್ಯ ಸಂಸ್ಕಾರ ನೆರವೇರಲಿದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ