ಸುದ್ದಿ

15 ವರ್ಷಗಳಿಂದ ಕಾಡುತ್ತಿದ್ದ ಮೆದುಳು ತಿನ್ನುವ ಹುಳು ಹೊರತೆಗೆದ ವೈದ್ಯರು,.!

130

ನೋಡುವುದಕ್ಕೆ ಸಣ್ಣ ದಾರದಂತಿದೆ… ಆದರೆ, ಇದು ಮಾಡುವ ಕೆಲಸ ಅತಿ ಭಯಾನಕ. ಮನುಷ್ಯನ ಮೆದುಳನ್ನು ಸ್ವಲ್ಪ ಸ್ವಲ್ಪವೇ ತಿನ್ನುವುದು ಈ ಹುಳುವಿನ ಕೆಲಸ. ವೈದ್ಯಕೀಯ ಪರಿಭಾಷೆಯಲ್ಲಿ ಇದನ್ನು `ಟೇಪ್ ವರ್ಮ್’ ಎಂದು ಕರೆಯುತ್ತಾರೆ. ಇಂತಹ ವಿಚಿತ್ರ ಹುಳುವನ್ನು ವ್ಯಕ್ತಿಯೊಬ್ಬರ ಮೆದುಳಿನಿಂದ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದಿದ್ದಾರೆ ಆಗ್ನೇಯ ಚೀನಾದ 36 ವರ್ಷದ ವಾಂಗ್ ಎಂಬವರು ಬರೋಬ್ಬರಿ 15 ವರ್ಷಗಳಿಂದ ಈ ದಾರದಂತಹ ಹುಳುವಿನ ಕಾಟದಿಂದ ನಲುಗಿದ್ದರು. ಸುಮಾರು 12 ಸೆಂಟಿ ಮೀಟರ್‌ನಷ್ಟು ಉದ್ದವಿದ್ದ ಈ ಹುಳು ವಾಂಗ್ ಅವರ ಮೆದುಳನ್ನು ಸ್ವಲ್ಪ ಸ್ವಲ್ಪ ತಿಂದು ಹಾಕಿತ್ತು.

ವಾಂಗ್ ಅವರಿಗೆ ಬಸವನಹುಳು ತಿನ್ನುವುದೆಂದರೆ ಪಂಚಪ್ರಾಣ. ಆದರೆ, ಇದನ್ನು ತಿನ್ನಲು ಆರಂಭಿಸಿದ ಬಳಿಕ ಇವರಿಗೆ ನಿರಂತರ ವಾಂತಿ ಮಾಡಿಕೊಳ್ಳುವ ಸಮಸ್ಯೆ ಶುರುವಾಗಿತ್ತು. ಸುಮಾರು2007ರಲ್ಲಿ ವಾಂಗ್ ಅವರ ದೇಹದ ಎಡಭಾಗ ಸಂಪೂರ್ಣ ನಿಷ್ಕ್ರಿಯಗೊಂಡಿತ್ತು. ಅಲ್ಲಿಂದ ಇವರು ಹಾಸಿಗೆ ಹಿಡಿದಿದ್ದರು. ಈ ಅವಧಿಯಲ್ಲಿ ತಜ್ಞ ವೈದ್ಯರನ್ನೇ ಸಂಪರ್ಕಿಸಿದರೂ ಸಮಸ್ಯೆಗೊಂದು ಪರಿಹಾರ ಸಿಕ್ಕಿರಲಿಲ್ಲ. ಒಂದು ಹಂತದಲ್ಲಿ ಮಾರಣಾಂತಿಕ ಮೆದುಳಿನ ಕ್ಯಾನ್ಸರಿಗೂ ಇವರು ಚಿಕಿತ್ಸೆ ಪಡೆದುಕೊಂಡಿದ್ದರು.

ವಾಂಗ್ ಸ್ಥಿತಿ ಪ್ರತಿಕ್ಷಣ ಕ್ಷಣಕ್ಕೂ ಹದಗೆಡುತ್ತಾ ಸಾಗಿತ್ತು. ಅಂತಿಮವಾಗಿ2018ರಲ್ಲಿ ವಾಂಗ್ ಅವರ ಮೆದುಳಿನಲ್ಲಿ ಮಾಂಸ ತಿನ್ನುವ ಟೇಪ್ ವರ್ಮ್ ಇರುವುದನ್ನು ವೈದ್ಯರು ಪತ್ತೆ ಹಚ್ಚಿದ್ದರು. ಜಾಸ್ತಿ ಬಸವನಹುಳು ತಿನ್ನುವ ಅಭ್ಯಾಸ ಬೆಳೆಸಿಕೊಂಡಿದ್ದರಿಂದಲೇ ವಾಂಗ್ ಅವರಿಗೆ ಈ ಪರಾವಲಂಬಿ ಹುಳುವಿನ ಸಮಸ್ಯೆ ಕಾಡಲಾರಂಭಿಸಿತ್ತು ಎಂದೂ ವೈದ್ಯರು ತಿಳಿಸಿದ್ದರು.

ವೈದ್ಯರು ಹೇಳಿದಂತೆ ಈ ಪರಾವಲಂಬಿ ಹುಳು ಮೆದುಳಿನ ಅತ್ಯಂತ ಅಪಾಯಕಾರಿ ಭಾಗದಲ್ಲೇ ಇತ್ತು. ಶಸ್ತ್ರಚಿಕಿತ್ಸೆ ಮಾಡುವುದು ಸಾಧ್ಯವೇ ಇರಲಿಲ್ಲ. ಹೀಗಾಗಿ, ಶಸ್ತ್ರಚಿಕಿತ್ಸೆ ಮಾಡದೆ ಬೇರೊಂದು ವಿಧಾನದಲ್ಲಿ ಸೂಕ್ಷ್ಮವಾಗಿ ಈ ಹುಳುವನ್ನು ವೈದ್ಯರು ಹೊರತೆಗೆದಿದ್ದರು. ಇವರು ಮನೆಗೂ ಮರಳಿದ್ದರು. ಆದರೆ, ಇದಾದ ಬಳಿಕ ಮತ್ತೊಂದು ಶಾಕಿಂಗ್ ನ್ಯೂಸ್ ವಾಂಗ್ ಅವರಿಗೆ ಕಾದಿತ್ತು.
ಅಸಲಿಗೆ ಈ ಟೇಪ್ ವರ್ಮ್ ಸಂಪೂರ್ಣ ವಾಂಗ್ ಅವರ ಮೆದುಳಿನಿಂದ ಹೋಗಿರಲಿಲ್ಲ. ಸೆಪ್ಟೆಂಬರ್ ಮಧ್ಯಭಾಗದಲ್ಲಿ ಇವರಿಗೆ ಮತ್ತೆ ಅದೇ ರೀತಿ ಸಮಸ್ಯೆ ಕಂಡು ಬಂದಾಗ ವೈದ್ಯರು ಇನ್ನೊಂದು ಸಲ ತಪಾಸಣೆ ಮಾಡಿದ್ದರು. ಆಗ ಮತ್ತೆ ಈ ಹುಳು ವಾಂಗ್ ಮೆದುಳಿನಲ್ಲಿ ಜೀವಿಸುತ್ತಿರುವುದು ಕಂಡು ಬಂದಿತ್ತು. ಹೀಗಾಗಿ, ಈ ಸಲ ಅಪಾಯವಾದರೂ ಶಸ್ತ್ರಚಿಕಿತ್ಸೆ ಮಾಡಲೇಬೇಕಿತ್ತು. ಅಂತೆಯೇ ಚೀನಾದ ಗುವಾಂಗ್‌ಡಾಂಗ್ ಸಂಜಿಯು ಬ್ರೈನ್ ಆಸ್ಪತ್ರೆಯಲ್ಲಿ ವಾಂಗ್ ಅವರಿಗೆ ಅತ್ಯಂತ ಸೂಕ್ಷ್ಮ ಶಸ್ತ್ರಚಿಕಿತ್ಸೆ ನಡೆಯಿತು. ಈ ಶಸ್ತ್ರಚಿಕಿತ್ಸೆಯಲ್ಲಿ ವೈದ್ಯರು ವಾಂಗ್‌ ತಲೆಯೊಳಗಿದ್ದ ಸ್ಪಾರ್ಗನಮ್ ಮಾನಸೋನಿ ಎಂಬ ಪರಾವಲಂಬಿ ಹುಳುವನ್ನು ತೆಗೆದ್ದಾರೆ.
ಸಾಮಾನ್ಯವಾಗಿ ಇದು ಬೆಕ್ಕು ಮತ್ತು ನಾಯಿಗಳಲ್ಲಿ ಕಂಡು ಬರುತ್ತವೆಯಂತೆ. ಆದರೆ, ಮನುಷ್ಯರಲ್ಲಿ ಈ ಹುಳು ಕಂಡು ಬರುವುದು ತೀರಾ ವಿರಳಾತಿ ವಿರಳ ಎನ್ನುತ್ತಾರೆ ವೈದ್ಯರು.ಇವರ ತಲೆಯೊಳಗಿದ್ದ ಎಲ್ಲಾ ಹುಳುಗಳನ್ನು ತೆಗೆಯಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯ ವಾಂಗ್ ಚೇತರಿಸಿಕೊಳ್ಳುತ್ತಿದ್ದಾರೆ. ಈ ಮೂಲಕ15 ವರ್ಷಗಳ ನರಕಯಾತನೆಯೂ ಕೊನೆಯಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಚೈತ್ರ ಮಾಸದಲ್ಲಿ ಬೇವನ್ನು ತಿನ್ನುವುದು ಪ್ರಯೋಜನಕಾರಿ

    ಪ್ರಸ್ತುತ, ಚೈತ್ರ ಮಾಸ ನಡೆಯುತ್ತಿದೆ. ಈ ಸಮಯದಲ್ಲಿ, ಬೇವಿನ ಸೇವನೆಯನ್ನು ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಆಯುರ್ವೇದದಲ್ಲೂ ಚೈತ್ರ ಮಾಸದಲ್ಲಿ ಬೇವಿನ ಎಲೆಗಳನ್ನು ತಿನ್ನುವುದು ಪ್ರಯೋಜನಕಾರಿ, ಚೈತ್ರ ಮಾಸದಲ್ಲಿ ಬೇವಿನ ಎಲೆ ಸೇವಿಸುವುದರಿಂದ ಅವರು ವರ್ಷಪೂರ್ತಿ ರೋಗಗಳಿಂದ ದೂರವಿರುತ್ತಾರೆ ಎಂದು ಹೇಳಲಾಗುತ್ತದೆ. ಬೇವಿನ ಎಲೆಗಳು ಮಾತ್ರವಲ್ಲ, ಅದರ ಕಾಂಡ, ತೊಗಟೆ, ಬೇರು ಮತ್ತು ಹಸಿ ಹಣ್ಣುಗಳೆಲ್ಲವೂ ಔ’ಷಧೀಯ ಗುಣಗಳಿಂದ ತುಂಬಿವೆ. ಅಂತಹ ಪರಿಸ್ಥಿತಿಯಲ್ಲಿ, ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ 4 ಬೇವಿನ ಎಲೆಗಳನ್ನು ತಿನ್ನುವ ಮೂಲಕ, ಯಾವ…

  • ಜ್ಯೋತಿಷ್ಯ

    ತಾಯಿ ದುರ್ಗಾ ಪರಮೇಶ್ವರಿಯನ್ನು ಭಕ್ತಿಯಿಂದ ಸ್ಮರಿಸಿ, ಈ ದಿನದ ನಿಮ್ಮ ರಾಶಿ ಫಲವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಉತ್ತಮ…

  • ಸುದ್ದಿ

    ಸುಧಾ ಮೂರ್ತಿ ದಂಪತಿಯ ಮಗನ ಮದುವೆ ಯಾವಾಗ,ಎಲ್ಲಿ,ಹೇಗೆ ಗೊತ್ತಾ?ನಿಮ್ಮ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ ನೋಡಿ..!

    ಇನ್ಫೋಸಿಸ್ ದಂಪತಿ ನಾರಾಯಣ ಮೂರ್ತಿ, ಸುಧಾ ಮೂರ್ತಿ ಅವರ ಮಗನ ಮದುವೆ ಡಿ. 2ರಂದು ಬೆಂಗಳೂರಿನ ಹೋಟೆಲಿನಲ್ಲಿ ಸರಳವಾಗಿ ನಡೆಯಲಿದೆ. ಸುಧಾಮೂರ್ತಿ ಅವರ ಮಗ ರೋಹನ್ ಮೂರ್ತಿ ಅವರು ಕೇರಳದ ಕೊಚ್ಚಿ ಮೂಲದ ಅರ್ಪಣಾ ಕೃಷ್ಣನ್ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಮದುವೆ ಸರಳವಾಗಿ ನಡೆಯಲಿದ್ದು, ಕೇವಲ ಕುಟುಂಬಸ್ಥರು ಹಾಗೂ ಆತ್ಮೀಯ ಸ್ನೇಹಿತರಿಗೆ ಆಹ್ವಾನ ನೀಡಲಾಗಿದೆ. ರೋಹನ್ ಹಾಗೂ ಅರ್ಪಣಾ ಸ್ನೇಹಿತರೊಬ್ಬರ ಮೂಲಕ ಮೂರು ವರ್ಷಗಳಿಂದ ಪರಿಚಯವಾಗಿದ್ದರು. ಅರ್ಪಣಾ ನಿವೃತ್ತ ಎಸ್‍ಬಿಐ ಉದ್ಯೋಗಿ ಸಾವಿತ್ರಿ…

  • ಜ್ಯೋತಿಷ್ಯ

    ಆಂಜಿನೇಯ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಆರೋಗ್ಯ

    ಒಂದೆಲಗದಲ್ಲಿ ಇರುವ ಮದ್ದಿನ ಗುಣಗಳನ್ನು ತಿಳಿಯಬೇಕೆ…..! ಹಾಗಾದ್ರೆ ಈ ಲೇಖನ ಓದಿ…..!

    ಒಂದೆಲಗ ಅಥವಾ ಬ್ರಾಹ್ಮೀ ಎಲೆ ಇದಕ್ಕೆ ದಕ್ಷಿಣ ಕನ್ನಡದ ಕಡೆ ತಿಮರೆ ಎಂದು ಕರೆಯುತ್ತಾರೆ. ಒಂದೆಲಗ ಎಂದರೆ ಒಂದು ಎಲೆ ಉಳ್ಳ ಸಸಿ ಎಂದರ್ಥ. ಇದರಲ್ಲಿರುವ ಮದ್ದಿನ ಗುಣ ಅಸಾಮಾನ್ಯವಾದದ್ದು. ಅದು ಏನೆಂದು ತಿಳಿದರೆ ನಿಮಗೆ ಆಗುತ್ತೆ ನೋಡಿ ಆಶ್ಚರ್ಯ.