ಸುದ್ದಿ

15 ವರ್ಷಗಳಿಂದ ಕಾಡುತ್ತಿದ್ದ ಮೆದುಳು ತಿನ್ನುವ ಹುಳು ಹೊರತೆಗೆದ ವೈದ್ಯರು,.!

114

ನೋಡುವುದಕ್ಕೆ ಸಣ್ಣ ದಾರದಂತಿದೆ… ಆದರೆ, ಇದು ಮಾಡುವ ಕೆಲಸ ಅತಿ ಭಯಾನಕ. ಮನುಷ್ಯನ ಮೆದುಳನ್ನು ಸ್ವಲ್ಪ ಸ್ವಲ್ಪವೇ ತಿನ್ನುವುದು ಈ ಹುಳುವಿನ ಕೆಲಸ. ವೈದ್ಯಕೀಯ ಪರಿಭಾಷೆಯಲ್ಲಿ ಇದನ್ನು `ಟೇಪ್ ವರ್ಮ್’ ಎಂದು ಕರೆಯುತ್ತಾರೆ. ಇಂತಹ ವಿಚಿತ್ರ ಹುಳುವನ್ನು ವ್ಯಕ್ತಿಯೊಬ್ಬರ ಮೆದುಳಿನಿಂದ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದಿದ್ದಾರೆ ಆಗ್ನೇಯ ಚೀನಾದ 36 ವರ್ಷದ ವಾಂಗ್ ಎಂಬವರು ಬರೋಬ್ಬರಿ 15 ವರ್ಷಗಳಿಂದ ಈ ದಾರದಂತಹ ಹುಳುವಿನ ಕಾಟದಿಂದ ನಲುಗಿದ್ದರು. ಸುಮಾರು 12 ಸೆಂಟಿ ಮೀಟರ್‌ನಷ್ಟು ಉದ್ದವಿದ್ದ ಈ ಹುಳು ವಾಂಗ್ ಅವರ ಮೆದುಳನ್ನು ಸ್ವಲ್ಪ ಸ್ವಲ್ಪ ತಿಂದು ಹಾಕಿತ್ತು.

ವಾಂಗ್ ಅವರಿಗೆ ಬಸವನಹುಳು ತಿನ್ನುವುದೆಂದರೆ ಪಂಚಪ್ರಾಣ. ಆದರೆ, ಇದನ್ನು ತಿನ್ನಲು ಆರಂಭಿಸಿದ ಬಳಿಕ ಇವರಿಗೆ ನಿರಂತರ ವಾಂತಿ ಮಾಡಿಕೊಳ್ಳುವ ಸಮಸ್ಯೆ ಶುರುವಾಗಿತ್ತು. ಸುಮಾರು2007ರಲ್ಲಿ ವಾಂಗ್ ಅವರ ದೇಹದ ಎಡಭಾಗ ಸಂಪೂರ್ಣ ನಿಷ್ಕ್ರಿಯಗೊಂಡಿತ್ತು. ಅಲ್ಲಿಂದ ಇವರು ಹಾಸಿಗೆ ಹಿಡಿದಿದ್ದರು. ಈ ಅವಧಿಯಲ್ಲಿ ತಜ್ಞ ವೈದ್ಯರನ್ನೇ ಸಂಪರ್ಕಿಸಿದರೂ ಸಮಸ್ಯೆಗೊಂದು ಪರಿಹಾರ ಸಿಕ್ಕಿರಲಿಲ್ಲ. ಒಂದು ಹಂತದಲ್ಲಿ ಮಾರಣಾಂತಿಕ ಮೆದುಳಿನ ಕ್ಯಾನ್ಸರಿಗೂ ಇವರು ಚಿಕಿತ್ಸೆ ಪಡೆದುಕೊಂಡಿದ್ದರು.

ವಾಂಗ್ ಸ್ಥಿತಿ ಪ್ರತಿಕ್ಷಣ ಕ್ಷಣಕ್ಕೂ ಹದಗೆಡುತ್ತಾ ಸಾಗಿತ್ತು. ಅಂತಿಮವಾಗಿ2018ರಲ್ಲಿ ವಾಂಗ್ ಅವರ ಮೆದುಳಿನಲ್ಲಿ ಮಾಂಸ ತಿನ್ನುವ ಟೇಪ್ ವರ್ಮ್ ಇರುವುದನ್ನು ವೈದ್ಯರು ಪತ್ತೆ ಹಚ್ಚಿದ್ದರು. ಜಾಸ್ತಿ ಬಸವನಹುಳು ತಿನ್ನುವ ಅಭ್ಯಾಸ ಬೆಳೆಸಿಕೊಂಡಿದ್ದರಿಂದಲೇ ವಾಂಗ್ ಅವರಿಗೆ ಈ ಪರಾವಲಂಬಿ ಹುಳುವಿನ ಸಮಸ್ಯೆ ಕಾಡಲಾರಂಭಿಸಿತ್ತು ಎಂದೂ ವೈದ್ಯರು ತಿಳಿಸಿದ್ದರು.

ವೈದ್ಯರು ಹೇಳಿದಂತೆ ಈ ಪರಾವಲಂಬಿ ಹುಳು ಮೆದುಳಿನ ಅತ್ಯಂತ ಅಪಾಯಕಾರಿ ಭಾಗದಲ್ಲೇ ಇತ್ತು. ಶಸ್ತ್ರಚಿಕಿತ್ಸೆ ಮಾಡುವುದು ಸಾಧ್ಯವೇ ಇರಲಿಲ್ಲ. ಹೀಗಾಗಿ, ಶಸ್ತ್ರಚಿಕಿತ್ಸೆ ಮಾಡದೆ ಬೇರೊಂದು ವಿಧಾನದಲ್ಲಿ ಸೂಕ್ಷ್ಮವಾಗಿ ಈ ಹುಳುವನ್ನು ವೈದ್ಯರು ಹೊರತೆಗೆದಿದ್ದರು. ಇವರು ಮನೆಗೂ ಮರಳಿದ್ದರು. ಆದರೆ, ಇದಾದ ಬಳಿಕ ಮತ್ತೊಂದು ಶಾಕಿಂಗ್ ನ್ಯೂಸ್ ವಾಂಗ್ ಅವರಿಗೆ ಕಾದಿತ್ತು.
ಅಸಲಿಗೆ ಈ ಟೇಪ್ ವರ್ಮ್ ಸಂಪೂರ್ಣ ವಾಂಗ್ ಅವರ ಮೆದುಳಿನಿಂದ ಹೋಗಿರಲಿಲ್ಲ. ಸೆಪ್ಟೆಂಬರ್ ಮಧ್ಯಭಾಗದಲ್ಲಿ ಇವರಿಗೆ ಮತ್ತೆ ಅದೇ ರೀತಿ ಸಮಸ್ಯೆ ಕಂಡು ಬಂದಾಗ ವೈದ್ಯರು ಇನ್ನೊಂದು ಸಲ ತಪಾಸಣೆ ಮಾಡಿದ್ದರು. ಆಗ ಮತ್ತೆ ಈ ಹುಳು ವಾಂಗ್ ಮೆದುಳಿನಲ್ಲಿ ಜೀವಿಸುತ್ತಿರುವುದು ಕಂಡು ಬಂದಿತ್ತು. ಹೀಗಾಗಿ, ಈ ಸಲ ಅಪಾಯವಾದರೂ ಶಸ್ತ್ರಚಿಕಿತ್ಸೆ ಮಾಡಲೇಬೇಕಿತ್ತು. ಅಂತೆಯೇ ಚೀನಾದ ಗುವಾಂಗ್‌ಡಾಂಗ್ ಸಂಜಿಯು ಬ್ರೈನ್ ಆಸ್ಪತ್ರೆಯಲ್ಲಿ ವಾಂಗ್ ಅವರಿಗೆ ಅತ್ಯಂತ ಸೂಕ್ಷ್ಮ ಶಸ್ತ್ರಚಿಕಿತ್ಸೆ ನಡೆಯಿತು. ಈ ಶಸ್ತ್ರಚಿಕಿತ್ಸೆಯಲ್ಲಿ ವೈದ್ಯರು ವಾಂಗ್‌ ತಲೆಯೊಳಗಿದ್ದ ಸ್ಪಾರ್ಗನಮ್ ಮಾನಸೋನಿ ಎಂಬ ಪರಾವಲಂಬಿ ಹುಳುವನ್ನು ತೆಗೆದ್ದಾರೆ.
ಸಾಮಾನ್ಯವಾಗಿ ಇದು ಬೆಕ್ಕು ಮತ್ತು ನಾಯಿಗಳಲ್ಲಿ ಕಂಡು ಬರುತ್ತವೆಯಂತೆ. ಆದರೆ, ಮನುಷ್ಯರಲ್ಲಿ ಈ ಹುಳು ಕಂಡು ಬರುವುದು ತೀರಾ ವಿರಳಾತಿ ವಿರಳ ಎನ್ನುತ್ತಾರೆ ವೈದ್ಯರು.ಇವರ ತಲೆಯೊಳಗಿದ್ದ ಎಲ್ಲಾ ಹುಳುಗಳನ್ನು ತೆಗೆಯಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯ ವಾಂಗ್ ಚೇತರಿಸಿಕೊಳ್ಳುತ್ತಿದ್ದಾರೆ. ಈ ಮೂಲಕ15 ವರ್ಷಗಳ ನರಕಯಾತನೆಯೂ ಕೊನೆಯಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಆಲೂಗಡ್ಡೆಯನ್ನ ಬೇಯಿಸುವಾಗ ಎಲ್ಲರಲ್ಲೂ ಕಾಡುವ ಪ್ರಶ್ನೆ ಇದು..?ಅದಕ್ಕೆ ಇಲ್ಲಿದೆ ಪರಿಹಾರ…

    ಪ್ರತಿಬಾರಿ ಆಲೂಗಡ್ಡೆಯನ್ನ ಬೇಯಿಸುವಾಗ ಎಲ್ಲರಲ್ಲೂ ಕಾಡುವ ಪ್ರಶ್ನೆ ಎಂದರೆ ಆಲೂಗಡ್ಡೆ ಬೇಯುವಾಗ ಒಡೆದುಹೋಗುತ್ತದೆ ಎಂಬುದು. ಆಲೂಗಡ್ಡೆ ಒಡೆದು ಅದರೊಳಗೆ ನೀರು ಸೇರಿ ಆಲೂಗಡ್ಡೆಯ ರುಚಿ ಹಾಳಾಗುತ್ತದೆ.

  • ಆರೋಗ್ಯ

    ಪಿರಿಯಡ್ಸ್ ಸಮಯದಲ್ಲಿ ಆಗುವ ನೋವುಗಳಿಗೆ ಇಲ್ಲಿದೆ ಪರಿಹಾರ…ತಿಳಿಯಲು ಈ ಲೇಖನ ಓದಿ…

    ಋತುಸ್ರಾವದ ಸಂದರ್ಭದಲ್ಲಿ ಮಹಿಳೆಯರು ಬಹಳಷ್ಟು ನೋವನ್ನ ಅನುಭವಿಸುತ್ತಾರೆ, ಈ ನೋವನ್ನ ಹೇಗೆ ಕಾಪಾಡಿ ಕೊಳ್ಳ ಬಹುದು ಎಂಬುದು ಹಲವರಲ್ಲಿ ಕಾಡುವ ಪ್ರಶ್ನೆ. ಇಂತಹ ಸಂದರ್ಭದಲ್ಲಿ ನಾವು ಸೇವಿಸುವ ಆಹಾರದಲ್ಲಿಯೂ ನಾವು ಬದಲಾವಣೆಯನ್ನ ಮಾಡಿಕೊಳ್ಳ ಬೇಕು, ಹಾಗೂ ದಿನದ ಆಗು ಹೋಗುಗಳನ್ನ ಬದಲಾವಣೆ ಮಾಡಿಕೊಳ್ಳ ಬೇಕು.

  • ಸುದ್ದಿ

    ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಿಂದ ಮನೆ ಖರೀದಿಸುವವರಿಗೆ ಬಂಪರ್ ಕೊಡುಗೆ..!ಇದನ್ನೊಮ್ಮೆ ಓದಿ..

    ಮನೆ ಖರೀದಿದಾರರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಹೊಸ ಶುಭ ಸಮಾಚಾರವೊಂದನ್ನು ನೀಡಿದ್ದಾರೆ. ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ಯಾಬಿನೆಟ್ ನಿರ್ಧಾರಗಳ ಬಗ್ಗೆ ಮಾದ್ಯಮಗಳಿಗೆ ವಿವರಿಸಿದ ಸೀತಾರಾಮನ್ “ಪ್ರಸ್ತುತ 1600 ಕ್ಕೂ ಹೆಚ್ಚು ವಸತಿಯೋಜನೆಗಳು ಸ್ಥಗಿತಗೊಂಡಿವೆ. ಹಾಗಾಗಿ ಸರ್ಕಾರ , ಕೈಗೆಟುಕುವ ಮತ್ತು ಮಧ್ಯಮ ಪ್ರಮಾಣದ ಪ್ರಸ್ತುತ ಸ್ಥಗಿತಗೊಂಡ  ವಸತಿಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆಯ ಸಾಲ, ಹಣಕಾಸು ನೆರವು ನೀಡಲು ‘ವಿಶೇಷ ವಿಭಾಗ’ ಸ್ಥಾಪನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದರು. ದೇಶದಲ್ಲಿಸ್ಥ ಗಿತವಾಗಿರುವ ವಸತಿ ಯೋಜನೆಗಳನ್ನು ಪುನಾರಂಭಿಸಿ…

  • ಆಟೋಮೊಬೈಲ್ಸ್

    ಬೈಕ್‌ಗಳ ಮಹಾರಾಜ ರಾಯಲ್ ಎನ್‌ಫೀಲ್ಡ್’ಗೆ ಗೇಲಿ ಮಾಡಿ ಟಾಂಗ್ ಕೊಟ್ಟ, ಬಜಾಜ್ ಡೊಮಿನರ್!

    ಬೈಕ್‌ಗಳ ರಾಜ ರಾಯಲ್ ಎನ್‌ಫೀಲ್ಡ್ ಬೈಕ್‌, ಒಂದು ಕಾಲದಲ್ಲಿ ಸಾಮಾನ್ಯ ಜನರಿಗೆ ಇದರ ಹೆಸರು ಕೇಳಿದ್ರೆ ಸಾಕು, ಮೈ ಜುಮ್ಮೆನ್ನುತ್ತಿತ್ತು. ಯಾಕೆಂದ್ರೆ ಈ ಬೈಕ್’ನ್ನು ಒಮ್ಮೆ ಆದ್ರೂ ಓಡಿಸಬೇಕು ಅಂತ ಮನಸ್ಸಿಗೂ ಬಂದ್ರೂ, ಸಾಮಾನ್ಯ ಜನರ ಕೈಗೆ ಇದು ಎಟುಕುತ್ತಿರಲಿಲ್ಲ.

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ..ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಮಾರ್ಚ್, 2019) ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾ ಹೊಸ…

  • ಸುದ್ದಿ

    ವಾಸುಕಿ ಪ್ರಿಯಾಂಕಳನ್ನು ತಬ್ಬಿಕೊಂಡಿದಕ್ಕೆ ಕೋಪಗೊಂಡ ಭೂಮಿ ಮಾಡಿದ್ದೇನು ಗೊತ್ತಾ?

    ಬಿಗ್ ಬಾಸ್ ಮನೆಯಲ್ಲಿ ಈ ಸೀಸನ್ ನಲ್ಲಿ ಯಾವುದೇ ಲವ್ವು ಇಲ್ಲ ಅಂದುಕೊಂಡವರಿಗೆ ವಾಸುಕಿ‌ ಶಾಕ್ ನೀಡುತ್ತಾ ಬರುತ್ತಿರೋದು ಇವರೇನಾ ವಾಸುಕಿ ವೈಭವ್ ಎನ್ನುವಂತಾಗಿರೋದು ಸುಳ್ಳಲ್ಲ. ಆದರೆ ಸದ್ಯ ಚಂದನ ವಿಷಯ ಮುಗಿಸಿ ಭೂಮಿ ಜೊತೆ ಮನೆಯಲ್ಲಿ ಅಡ್ಡಾಡುತ್ತಾ ಹೆಡ್ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಾಸುಕಿ ಬಗ್ಗೆ ಮನೆಯಲ್ಲೇ ದೂರುಗಳು ಹೆಚ್ಚಾಗಿದೆ. ಹೌದು, ನಿನ್ನೆ ಬಿಗ್ ಬಾಸ್ ಮನೆಯಲ್ಲಿ ಲೈಟ್ ಆಫ್ ಆದಮೇಲೆ ಪ್ರಿಯಾಂಕ ಶೈನ್ ಹಾಗೂ ವಾಸುಕಿ ಅವರು ಲಿವಿಂಗ್ ಏರಿಯಾದಲ್ಲಿ ಮಾತನಾಡುವಾಗ. ಇತ್ತೀಚೆಗೆ ವಾಸುಕಿ ಅವರು ಎಲ್ಲರನ್ನು…