ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಡುವುದಕ್ಕೆ ಸಣ್ಣ ದಾರದಂತಿದೆ… ಆದರೆ, ಇದು ಮಾಡುವ ಕೆಲಸ ಅತಿ ಭಯಾನಕ. ಮನುಷ್ಯನ ಮೆದುಳನ್ನು ಸ್ವಲ್ಪ ಸ್ವಲ್ಪವೇ ತಿನ್ನುವುದು ಈ ಹುಳುವಿನ ಕೆಲಸ. ವೈದ್ಯಕೀಯ ಪರಿಭಾಷೆಯಲ್ಲಿ ಇದನ್ನು `ಟೇಪ್ ವರ್ಮ್’ ಎಂದು ಕರೆಯುತ್ತಾರೆ. ಇಂತಹ ವಿಚಿತ್ರ ಹುಳುವನ್ನು ವ್ಯಕ್ತಿಯೊಬ್ಬರ ಮೆದುಳಿನಿಂದ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದಿದ್ದಾರೆ ಆಗ್ನೇಯ ಚೀನಾದ 36 ವರ್ಷದ ವಾಂಗ್ ಎಂಬವರು ಬರೋಬ್ಬರಿ 15 ವರ್ಷಗಳಿಂದ ಈ ದಾರದಂತಹ ಹುಳುವಿನ ಕಾಟದಿಂದ ನಲುಗಿದ್ದರು. ಸುಮಾರು 12 ಸೆಂಟಿ ಮೀಟರ್ನಷ್ಟು ಉದ್ದವಿದ್ದ ಈ ಹುಳು ವಾಂಗ್ ಅವರ ಮೆದುಳನ್ನು ಸ್ವಲ್ಪ ಸ್ವಲ್ಪ ತಿಂದು ಹಾಕಿತ್ತು.

ವಾಂಗ್ ಅವರಿಗೆ ಬಸವನಹುಳು ತಿನ್ನುವುದೆಂದರೆ ಪಂಚಪ್ರಾಣ. ಆದರೆ, ಇದನ್ನು ತಿನ್ನಲು ಆರಂಭಿಸಿದ ಬಳಿಕ ಇವರಿಗೆ ನಿರಂತರ ವಾಂತಿ ಮಾಡಿಕೊಳ್ಳುವ ಸಮಸ್ಯೆ ಶುರುವಾಗಿತ್ತು. ಸುಮಾರು2007ರಲ್ಲಿ ವಾಂಗ್ ಅವರ ದೇಹದ ಎಡಭಾಗ ಸಂಪೂರ್ಣ ನಿಷ್ಕ್ರಿಯಗೊಂಡಿತ್ತು. ಅಲ್ಲಿಂದ ಇವರು ಹಾಸಿಗೆ ಹಿಡಿದಿದ್ದರು. ಈ ಅವಧಿಯಲ್ಲಿ ತಜ್ಞ ವೈದ್ಯರನ್ನೇ ಸಂಪರ್ಕಿಸಿದರೂ ಸಮಸ್ಯೆಗೊಂದು ಪರಿಹಾರ ಸಿಕ್ಕಿರಲಿಲ್ಲ. ಒಂದು ಹಂತದಲ್ಲಿ ಮಾರಣಾಂತಿಕ ಮೆದುಳಿನ ಕ್ಯಾನ್ಸರಿಗೂ ಇವರು ಚಿಕಿತ್ಸೆ ಪಡೆದುಕೊಂಡಿದ್ದರು.

ವಾಂಗ್ ಸ್ಥಿತಿ ಪ್ರತಿಕ್ಷಣ ಕ್ಷಣಕ್ಕೂ ಹದಗೆಡುತ್ತಾ ಸಾಗಿತ್ತು. ಅಂತಿಮವಾಗಿ2018ರಲ್ಲಿ ವಾಂಗ್ ಅವರ ಮೆದುಳಿನಲ್ಲಿ ಮಾಂಸ ತಿನ್ನುವ ಟೇಪ್ ವರ್ಮ್ ಇರುವುದನ್ನು ವೈದ್ಯರು ಪತ್ತೆ ಹಚ್ಚಿದ್ದರು. ಜಾಸ್ತಿ ಬಸವನಹುಳು ತಿನ್ನುವ ಅಭ್ಯಾಸ ಬೆಳೆಸಿಕೊಂಡಿದ್ದರಿಂದಲೇ ವಾಂಗ್ ಅವರಿಗೆ ಈ ಪರಾವಲಂಬಿ ಹುಳುವಿನ ಸಮಸ್ಯೆ ಕಾಡಲಾರಂಭಿಸಿತ್ತು ಎಂದೂ ವೈದ್ಯರು ತಿಳಿಸಿದ್ದರು.

ವೈದ್ಯರು ಹೇಳಿದಂತೆ ಈ ಪರಾವಲಂಬಿ ಹುಳು ಮೆದುಳಿನ ಅತ್ಯಂತ ಅಪಾಯಕಾರಿ ಭಾಗದಲ್ಲೇ ಇತ್ತು. ಶಸ್ತ್ರಚಿಕಿತ್ಸೆ ಮಾಡುವುದು ಸಾಧ್ಯವೇ ಇರಲಿಲ್ಲ. ಹೀಗಾಗಿ, ಶಸ್ತ್ರಚಿಕಿತ್ಸೆ ಮಾಡದೆ ಬೇರೊಂದು ವಿಧಾನದಲ್ಲಿ ಸೂಕ್ಷ್ಮವಾಗಿ ಈ ಹುಳುವನ್ನು ವೈದ್ಯರು ಹೊರತೆಗೆದಿದ್ದರು. ಇವರು ಮನೆಗೂ ಮರಳಿದ್ದರು. ಆದರೆ, ಇದಾದ ಬಳಿಕ ಮತ್ತೊಂದು ಶಾಕಿಂಗ್ ನ್ಯೂಸ್ ವಾಂಗ್ ಅವರಿಗೆ ಕಾದಿತ್ತು.
ಅಸಲಿಗೆ ಈ ಟೇಪ್ ವರ್ಮ್ ಸಂಪೂರ್ಣ ವಾಂಗ್ ಅವರ ಮೆದುಳಿನಿಂದ ಹೋಗಿರಲಿಲ್ಲ. ಸೆಪ್ಟೆಂಬರ್ ಮಧ್ಯಭಾಗದಲ್ಲಿ ಇವರಿಗೆ ಮತ್ತೆ ಅದೇ ರೀತಿ ಸಮಸ್ಯೆ ಕಂಡು ಬಂದಾಗ ವೈದ್ಯರು ಇನ್ನೊಂದು ಸಲ ತಪಾಸಣೆ ಮಾಡಿದ್ದರು. ಆಗ ಮತ್ತೆ ಈ ಹುಳು ವಾಂಗ್ ಮೆದುಳಿನಲ್ಲಿ ಜೀವಿಸುತ್ತಿರುವುದು ಕಂಡು ಬಂದಿತ್ತು. ಹೀಗಾಗಿ, ಈ ಸಲ ಅಪಾಯವಾದರೂ ಶಸ್ತ್ರಚಿಕಿತ್ಸೆ ಮಾಡಲೇಬೇಕಿತ್ತು. ಅಂತೆಯೇ ಚೀನಾದ ಗುವಾಂಗ್ಡಾಂಗ್ ಸಂಜಿಯು ಬ್ರೈನ್ ಆಸ್ಪತ್ರೆಯಲ್ಲಿ ವಾಂಗ್ ಅವರಿಗೆ ಅತ್ಯಂತ ಸೂಕ್ಷ್ಮ ಶಸ್ತ್ರಚಿಕಿತ್ಸೆ ನಡೆಯಿತು. ಈ ಶಸ್ತ್ರಚಿಕಿತ್ಸೆಯಲ್ಲಿ ವೈದ್ಯರು ವಾಂಗ್ ತಲೆಯೊಳಗಿದ್ದ ಸ್ಪಾರ್ಗನಮ್ ಮಾನಸೋನಿ ಎಂಬ ಪರಾವಲಂಬಿ ಹುಳುವನ್ನು ತೆಗೆದ್ದಾರೆ.
ಸಾಮಾನ್ಯವಾಗಿ ಇದು ಬೆಕ್ಕು ಮತ್ತು ನಾಯಿಗಳಲ್ಲಿ ಕಂಡು ಬರುತ್ತವೆಯಂತೆ. ಆದರೆ, ಮನುಷ್ಯರಲ್ಲಿ ಈ ಹುಳು ಕಂಡು ಬರುವುದು ತೀರಾ ವಿರಳಾತಿ ವಿರಳ ಎನ್ನುತ್ತಾರೆ ವೈದ್ಯರು.ಇವರ ತಲೆಯೊಳಗಿದ್ದ ಎಲ್ಲಾ ಹುಳುಗಳನ್ನು ತೆಗೆಯಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯ ವಾಂಗ್ ಚೇತರಿಸಿಕೊಳ್ಳುತ್ತಿದ್ದಾರೆ. ಈ ಮೂಲಕ15 ವರ್ಷಗಳ ನರಕಯಾತನೆಯೂ ಕೊನೆಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಮಹಿಳೆ ಈ ಕೆಲಸ ಮಾಡಲು ಕಾರಣ ತಿಳಿದು ಪ್ರತಿಯೊಬ್ಬರು ಕೂಡ ಶಾಕ್ ಆದರು. ಇಷ್ಟೊಂದು ಈಕೆ ಫೇಮಸ್ ಆಗಲು ಕಾರಣವಾದರೂ ಏನು? ಈ ಸುದ್ದಿ ಬಂದಿದ್ದು ಅಹಮದಾಬಾದ್ನಿಂದ. 35 ವರ್ಷದ ಅಂಕಿತ ಆಟೋ ಓಡಿಸುತ್ತಾ ಇದ್ದಾಳೆ. ಈಕೆ ಆಟೋ ಓಡಿಸಲು ಕಾರಣ ಅವರ ತಂದೆ. ಅವರ ತಂದೆ ಮನೆಯ ಎಲ್ಲಾ ಜವಾಬ್ದಾರಿಗಳನ್ನು ನೋಡಿಕೊಳ್ಳುತ್ತಿದ್ದರು. ಆದರೆ ಅವರಿಗೆ ಕೆಲವು ವರ್ಷಗಳ ಹಿಂದೆ ಕ್ಯಾನ್ಸರ್ ಕಾಯಿಲೆ ಬಂದ ಕಾರಣ ಅಂಕಿತಾಳೇ ಮನೆಯ ಎಲ್ಲಾ ಜವಾಬ್ದಾರಿಯನ್ನು ತನ್ನ ಹೆಗಲ ಮೇಲೆ…
ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿಯಲ್ಲಿನ ಪ್ರಶ್ನಾತೀತ ನಾಯಕರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿಯವರ ವರ್ಚಸ್ಸನ್ನೇ ಬಿಜೆಪಿ ಬಳಸಿಕೊಳ್ಳುತ್ತಿದ್ದು, ಮತ್ತೊಮ್ಮೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿದೆ. ಇದರ ಮಧ್ಯೆ ಪ್ರಧಾನಿ ಮೋದಿ ಮಧ್ಯ ಪ್ರದೇಶದ ಇಂದೋರ್ ನಲ್ಲಿ ಮಾತನಾಡುವ ವೇಳೆ, ಪಕ್ಷದಲ್ಲಿ ತಮ್ಮನ್ನು ಎಚ್ಚರಿಸುವ, ಬುದ್ಧಿವಾದ ಹೇಳುವ ಹಾಗೂ ಪ್ರಶ್ನಿಸುವವರು ಯಾರೆಂಬ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ನರೇಂದ್ರ ಮೋದಿಯವರು ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ವೇಳೆ, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಜೊತೆ ಈ ಹಿಂದೆ ತಾವು ಪಕ್ಷದ ಕೆಲಸ ಮಾಡಿದ್ದು,…
ಮೀನು ಹುಟ್ಟಿನಿಂದ ಗಂಡು ಮೀನಾಗಿ ಹುಟ್ಟಿ ಎರಡು ವರ್ಷಗಳ ಬಳಿಕ ಹೆಣ್ಣು ಮೀನಾಗಿ ಬದಲಾಗುತ್ತದೆ. ಇದು ಕೇಳಲು ನಿಮ್ಗೆ ಅಚ್ಚರಿ ಅನ್ನಿಸಿದರೂ ನಿಜ. ಬರ್ರಮುಂಡಿ ಎಂಬ ಮೀನು ಈ ವಿಧವಾಗಿ ಗಂಡಿನಿಂದ ಹೆಣ್ಣಾಗಿ ರೂಪಾಂತರ ಹೊಂದುತ್ತದೆ.
ಜಗತ್ತಿನಲ್ಲಿ ಎಂತಹ ವಿಚಿತ್ರ ಜನಗಳಿರುತ್ತಾರೆ ಎಂದ್ರೆ ಯಾವಾಗ ಏನ್ ಮಾಡ್ತಾರೆ ಅಂತ ಸ್ವತಃ ಅವರಿಗೆ ಗೊತ್ತಿರುವುದಿಲ್ಲ. ಯಾಕೆಂದ್ರೆ ನಮ್ಮ ದೇಶದಲ್ಲಿ ಈಗಾಗಲೇ ಕ್ಯಾಶ್ ಲೆಸ್ ವ್ಯವಹಾರ ನಡೆಯುತ್ತಿದೆ. ಆದರೆ ಚೀನಾದಲ್ಲಿ ಮಹಿಳೆಯೊಬ್ಬರು ಕಾರೊಂದೊನ್ನು ಖರೀದಿಸಲು ಚೀಲದ ತುಂಬಾ ಹಣ ತುಂಬಿಕೊಂಡು ಹೋಗಿದ್ದಾರೆ.
ಸುಂದರವಾಗಿ ಕಾಣಲು ಎಲ್ಲರು ಇಷ್ಟಪಡ್ತಾರೆ. ಅದಕ್ಕಾಗಿ ಎಲ್ಲರೂ ಒಂದಲ್ಲಾ ಒಂದು ಟಿಪ್ಸ್ ಫಾಲೋ ಮಾಡ್ತಾರೆ. ಆದರೆ ಸರಿಯಾದ ಜ್ಞಾನವಿಲ್ಲದೇ ಜನರು ಈ 5 ಟಿಪ್ಸ್ ಅನ್ನು ನಂಬಿ ಇದನ್ನು ಅನುಸರಿಸುತ್ತಾರೆ. ಆದರೆ ಈ 5 ಟಿಪ್ಸ್ ಈಗ ಶುದ್ಧ ಸುಳ್ಳು ಎಂದು ತಿಳಿದುಬಂದಿದೆ. 1.ನಿಮ್ಮಸ್ಕಿನ್ ನನ್ನು ನಿಂಬೆಹಣ್ಣಿನಿಂದ ಉಜ್ಜುವುದು: ಜನರು ಪಿಂಪಲ್ ಫ್ರೀ ತ್ವಚೆ ಪಡೆಯಲು ನಿಂಬೆಹಣ್ಣಿನಿಂದ ಸ್ಕ್ರಬ್ಬಿಂಗ್ ಮಾಡಿಕೊಳ್ಳುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಗೆ ಹಾನಿಯಾಗುತ್ತದೆ. ಏಕೆಂದರೆ ನಿಂಬೆಹಣ್ಣಿನಲ್ಲಿ ಸಿಟ್ರಿಕ್ ಆ್ಯಸಿಡ್ ಇರುತ್ತದೆ….
1. ಕಬ್ಬಿನ ಹಾಲು ದೇಹಕ್ಕೆ ಶಕ್ತಿ ತುಂಬುವುದರ ಜತೆಗೆ ಮಾನಸಿಕ ಒತ್ತಡವನ್ನು ನಿವಾರಿಸುವಲ್ಲಿ ಸಹಕಾರಿ 2. ಕಬ್ಬಿನ ಹಾಲು ಕುಡಿದರೆ ನಿದ್ದೆ ಚೆನ್ನಾಗಿ ಬರುವುದು. ತಾಜಾ ಕಬ್ಬಿನ ರಸವನ್ನು ನಿಯಮಿತವಾಗಿ ಸೇವಿಸಿದರೆ ಇನ್ಸೊಮ್ನಿಯ(ನಿದ್ರೆ ಹೀನತೆ) ಸಮಸ್ಯೆಯೂ ದೂರವಾಗುತ್ತದೆ. 3. ತೂಕ ಕಡಿಮೆ ಮಾಡಿಕೊಳ್ಳುವವರಿಗೂ ಶುಗರ್ಕೇನ್ ಜ್ಯೂಸ್ ಬೆಸ್ಟ್. ಇದರಲ್ಲಿ ಅಧಿಕ ಪ್ರಮಾಣದಲ್ಲಿರುವ ನೈಸರ್ಗಿಕ ಸಕ್ಕರೆ ಕೊಬ್ಬು ಕರಗಿಸುವಲ್ಲಿ ಸಹಕಾರಿ. 4. ಕಬ್ಬಿನ ಹಾಲು ಕಾಮಾಲೆ ರೋಗದಿಂದ ಗುಣವಾಗಲು ಉತ್ತಮ ಮನೆಮದ್ದು. ದಿನಕ್ಕೊಂದು ಲೋಟ ಕಬ್ಬಿನಹಾಲು ಕುಡಿಯುವುದರಿಂದ ಯಕೃತ್…