ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಡುವುದಕ್ಕೆ ಸಣ್ಣ ದಾರದಂತಿದೆ… ಆದರೆ, ಇದು ಮಾಡುವ ಕೆಲಸ ಅತಿ ಭಯಾನಕ. ಮನುಷ್ಯನ ಮೆದುಳನ್ನು ಸ್ವಲ್ಪ ಸ್ವಲ್ಪವೇ ತಿನ್ನುವುದು ಈ ಹುಳುವಿನ ಕೆಲಸ. ವೈದ್ಯಕೀಯ ಪರಿಭಾಷೆಯಲ್ಲಿ ಇದನ್ನು `ಟೇಪ್ ವರ್ಮ್’ ಎಂದು ಕರೆಯುತ್ತಾರೆ. ಇಂತಹ ವಿಚಿತ್ರ ಹುಳುವನ್ನು ವ್ಯಕ್ತಿಯೊಬ್ಬರ ಮೆದುಳಿನಿಂದ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದಿದ್ದಾರೆ ಆಗ್ನೇಯ ಚೀನಾದ 36 ವರ್ಷದ ವಾಂಗ್ ಎಂಬವರು ಬರೋಬ್ಬರಿ 15 ವರ್ಷಗಳಿಂದ ಈ ದಾರದಂತಹ ಹುಳುವಿನ ಕಾಟದಿಂದ ನಲುಗಿದ್ದರು. ಸುಮಾರು 12 ಸೆಂಟಿ ಮೀಟರ್ನಷ್ಟು ಉದ್ದವಿದ್ದ ಈ ಹುಳು ವಾಂಗ್ ಅವರ ಮೆದುಳನ್ನು ಸ್ವಲ್ಪ ಸ್ವಲ್ಪ ತಿಂದು ಹಾಕಿತ್ತು.

ವಾಂಗ್ ಅವರಿಗೆ ಬಸವನಹುಳು ತಿನ್ನುವುದೆಂದರೆ ಪಂಚಪ್ರಾಣ. ಆದರೆ, ಇದನ್ನು ತಿನ್ನಲು ಆರಂಭಿಸಿದ ಬಳಿಕ ಇವರಿಗೆ ನಿರಂತರ ವಾಂತಿ ಮಾಡಿಕೊಳ್ಳುವ ಸಮಸ್ಯೆ ಶುರುವಾಗಿತ್ತು. ಸುಮಾರು2007ರಲ್ಲಿ ವಾಂಗ್ ಅವರ ದೇಹದ ಎಡಭಾಗ ಸಂಪೂರ್ಣ ನಿಷ್ಕ್ರಿಯಗೊಂಡಿತ್ತು. ಅಲ್ಲಿಂದ ಇವರು ಹಾಸಿಗೆ ಹಿಡಿದಿದ್ದರು. ಈ ಅವಧಿಯಲ್ಲಿ ತಜ್ಞ ವೈದ್ಯರನ್ನೇ ಸಂಪರ್ಕಿಸಿದರೂ ಸಮಸ್ಯೆಗೊಂದು ಪರಿಹಾರ ಸಿಕ್ಕಿರಲಿಲ್ಲ. ಒಂದು ಹಂತದಲ್ಲಿ ಮಾರಣಾಂತಿಕ ಮೆದುಳಿನ ಕ್ಯಾನ್ಸರಿಗೂ ಇವರು ಚಿಕಿತ್ಸೆ ಪಡೆದುಕೊಂಡಿದ್ದರು.

ವಾಂಗ್ ಸ್ಥಿತಿ ಪ್ರತಿಕ್ಷಣ ಕ್ಷಣಕ್ಕೂ ಹದಗೆಡುತ್ತಾ ಸಾಗಿತ್ತು. ಅಂತಿಮವಾಗಿ2018ರಲ್ಲಿ ವಾಂಗ್ ಅವರ ಮೆದುಳಿನಲ್ಲಿ ಮಾಂಸ ತಿನ್ನುವ ಟೇಪ್ ವರ್ಮ್ ಇರುವುದನ್ನು ವೈದ್ಯರು ಪತ್ತೆ ಹಚ್ಚಿದ್ದರು. ಜಾಸ್ತಿ ಬಸವನಹುಳು ತಿನ್ನುವ ಅಭ್ಯಾಸ ಬೆಳೆಸಿಕೊಂಡಿದ್ದರಿಂದಲೇ ವಾಂಗ್ ಅವರಿಗೆ ಈ ಪರಾವಲಂಬಿ ಹುಳುವಿನ ಸಮಸ್ಯೆ ಕಾಡಲಾರಂಭಿಸಿತ್ತು ಎಂದೂ ವೈದ್ಯರು ತಿಳಿಸಿದ್ದರು.

ವೈದ್ಯರು ಹೇಳಿದಂತೆ ಈ ಪರಾವಲಂಬಿ ಹುಳು ಮೆದುಳಿನ ಅತ್ಯಂತ ಅಪಾಯಕಾರಿ ಭಾಗದಲ್ಲೇ ಇತ್ತು. ಶಸ್ತ್ರಚಿಕಿತ್ಸೆ ಮಾಡುವುದು ಸಾಧ್ಯವೇ ಇರಲಿಲ್ಲ. ಹೀಗಾಗಿ, ಶಸ್ತ್ರಚಿಕಿತ್ಸೆ ಮಾಡದೆ ಬೇರೊಂದು ವಿಧಾನದಲ್ಲಿ ಸೂಕ್ಷ್ಮವಾಗಿ ಈ ಹುಳುವನ್ನು ವೈದ್ಯರು ಹೊರತೆಗೆದಿದ್ದರು. ಇವರು ಮನೆಗೂ ಮರಳಿದ್ದರು. ಆದರೆ, ಇದಾದ ಬಳಿಕ ಮತ್ತೊಂದು ಶಾಕಿಂಗ್ ನ್ಯೂಸ್ ವಾಂಗ್ ಅವರಿಗೆ ಕಾದಿತ್ತು.
ಅಸಲಿಗೆ ಈ ಟೇಪ್ ವರ್ಮ್ ಸಂಪೂರ್ಣ ವಾಂಗ್ ಅವರ ಮೆದುಳಿನಿಂದ ಹೋಗಿರಲಿಲ್ಲ. ಸೆಪ್ಟೆಂಬರ್ ಮಧ್ಯಭಾಗದಲ್ಲಿ ಇವರಿಗೆ ಮತ್ತೆ ಅದೇ ರೀತಿ ಸಮಸ್ಯೆ ಕಂಡು ಬಂದಾಗ ವೈದ್ಯರು ಇನ್ನೊಂದು ಸಲ ತಪಾಸಣೆ ಮಾಡಿದ್ದರು. ಆಗ ಮತ್ತೆ ಈ ಹುಳು ವಾಂಗ್ ಮೆದುಳಿನಲ್ಲಿ ಜೀವಿಸುತ್ತಿರುವುದು ಕಂಡು ಬಂದಿತ್ತು. ಹೀಗಾಗಿ, ಈ ಸಲ ಅಪಾಯವಾದರೂ ಶಸ್ತ್ರಚಿಕಿತ್ಸೆ ಮಾಡಲೇಬೇಕಿತ್ತು. ಅಂತೆಯೇ ಚೀನಾದ ಗುವಾಂಗ್ಡಾಂಗ್ ಸಂಜಿಯು ಬ್ರೈನ್ ಆಸ್ಪತ್ರೆಯಲ್ಲಿ ವಾಂಗ್ ಅವರಿಗೆ ಅತ್ಯಂತ ಸೂಕ್ಷ್ಮ ಶಸ್ತ್ರಚಿಕಿತ್ಸೆ ನಡೆಯಿತು. ಈ ಶಸ್ತ್ರಚಿಕಿತ್ಸೆಯಲ್ಲಿ ವೈದ್ಯರು ವಾಂಗ್ ತಲೆಯೊಳಗಿದ್ದ ಸ್ಪಾರ್ಗನಮ್ ಮಾನಸೋನಿ ಎಂಬ ಪರಾವಲಂಬಿ ಹುಳುವನ್ನು ತೆಗೆದ್ದಾರೆ.
ಸಾಮಾನ್ಯವಾಗಿ ಇದು ಬೆಕ್ಕು ಮತ್ತು ನಾಯಿಗಳಲ್ಲಿ ಕಂಡು ಬರುತ್ತವೆಯಂತೆ. ಆದರೆ, ಮನುಷ್ಯರಲ್ಲಿ ಈ ಹುಳು ಕಂಡು ಬರುವುದು ತೀರಾ ವಿರಳಾತಿ ವಿರಳ ಎನ್ನುತ್ತಾರೆ ವೈದ್ಯರು.ಇವರ ತಲೆಯೊಳಗಿದ್ದ ಎಲ್ಲಾ ಹುಳುಗಳನ್ನು ತೆಗೆಯಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯ ವಾಂಗ್ ಚೇತರಿಸಿಕೊಳ್ಳುತ್ತಿದ್ದಾರೆ. ಈ ಮೂಲಕ15 ವರ್ಷಗಳ ನರಕಯಾತನೆಯೂ ಕೊನೆಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನ್ಯಾಯಬೆಲೆ ಅಂಗಡಿಗಳಲ್ಲಿಯೇ ಇನ್ನುಮುಂದೆ ಬಸ್, ರೈಲು ಹಾಗೂ ವಿಮಾನ ಟಿಕೆಟ್ ಕಾಯ್ದಿರಿಸಬಹುದಾಗಿದೆ. ವಿದ್ಯುತ್ ಬಿಲ್ ಪಾವತಿ ಹಾಗೂ ಮೊಬೈಲ್ ರಿಚಾರ್ಜ್ ಸೇವೆಗಳು ಲಭ್ಯವಾಗಲಿವೆ. ರಾಜ್ಯ ಸರ್ಕಾರದ ಈ ಮಹತ್ವಕಾಂಕ್ಷಿ ಯೋಜನೆಗೆ ಬುಧವಾರ (ಆ. 2) ಚಾಲನೆ ದೊರೆಯಲಿದೆ.
ಸಾಮಾನ್ಯವಾಗಿ ವ್ಯಕ್ತಿ ಹೊಂದಿರುವ ಸೌಂದರ್ಯ ತನ್ನ ತಂದೆ ತಾಯಿ ಅಥವಾ ಅಘೋಷಿತವಾಗಿ ಬಂದಿರುವ ಸಂಪತ್ತು ಎಂದು ಹೇಳಲಾಗುವುದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ವ್ಯಕ್ತಿ ಹೊಂದಿರುವ ಮಾನಸಿಕ ಮತ್ತು ದೈಹಿಕ ಗುಣಗಳು ಅವನ ಜಾತಕ ಕುಂಡಲಿ ಹಾಗೂ ಅವನ ರಾಶಿ ಚಕ್ರಗಳಿಗೆ ಅನುಗುಣವಾಗಿ ಇರುತ್ತವೆ ಎಂದು ಹೇಳಲಾಗುತ್ತದೆ. ವ್ಯಕ್ತಿ ಹುಟ್ಟುವ ಸಮಯದಲ್ಲಿ ಅವನ ಗ್ರಹಗತಿಗಳು ಯಾವ ಸ್ಥಾನದಲ್ಲಿ ಇದ್ದವು ಎನ್ನುವುದನ್ನು ಅನುಸರಿಸಿ ದೇಹ ಮತ್ತು ಮಾನಸಿಕ ಸ್ಥಿತಿಯ ರಚನೆಯಾಗುತ್ತದೆ ಎನ್ನಲಾಗಿದೆ. ಒಂದು ಅಂದಾಜಿನ ಪ್ರಕಾರ 12 ರಾಶಿ ಚಕ್ರಗಳಲ್ಲಿ…
ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ. ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಮನೆ ಮುಂದೆ ದೊಡ್ಡ ಬೋರ್ಡ್ ಹಾಕುವ ಮೂಲಕ ತಮ್ಮ ಅಭಿಮಾನಿಗಳ ಬಳಿ ಮನವಿ ಮಾಡಿಕೊಂಡಿದ್ದರು. ಈಗ ದರ್ಶನ್ ಅವರ ಮನವಿಗೆ ಅಭಿಮಾನಿಗಳು ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಫೆಬ್ರವರಿ 16ರಂದು ದರ್ಶನ್ ಅವರ ಹುಟ್ಟುಹಬ್ಬವಿದ್ದು, ಡಿ-ಬಾಸ್ ಜನ್ಮದಿನವನ್ನು ಅಭಿಮಾನಿಗಳು ದೊಡ್ಡ ಹಬ್ಬದಂತೆ ಆಚರಿಸುತ್ತಾರೆ. ಆದರೆ ಬ್ಯಾನರ್, ಕೇಕ್, ಹಾರ ತಂದು ಅದ್ಧೂರಿಯಾಗಿ ನನ್ನ ಹುಟ್ಟುಹಬ್ಬ ಆಚರಿಸಬೇಡಿ ಎಂದು ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದರು. ಕಳೆದ ವರ್ಷ ದರ್ಶನ್ ತಮ್ಮ ಹುಟ್ಟುಹಬ್ಬಕ್ಕೆ ಬ್ಯಾನರ್,…
ಅಪ್ಪಿತಪ್ಪಿಯೂ ಈ ನಾಲ್ಕು ಆಹಾರ ಸೇವಿಸಬೇಡಿ,ಕಿಡ್ನಿ ಸ್ಟೋನ್ ಗ್ಯಾರೆಂಟಿ.ಈಗಲೆ ನೋಡಿ. ನಮಸ್ಕಾರ ವೀಕ್ಷಕರೇ ಕೆಲವೊಂದು ಆಹಾರ ಪದಾರ್ಥಗಳನ್ನು ತಿಂದರೆ ಕಿಡ್ನಿ ಸ್ಟೋನ್ ಆಗುತ್ತದೆ ಮಾಹಿತಿಯನ್ನು ತಿಳಿದುಕೊಳ್ಳೋಣ ಮನುಷ್ಯನ ಶರೀರದಲ್ಲಿ ಮೂತ್ರಪಿಂಡಗಳು ತುಂಬ ಮುಖ್ಯವಾದ ಪಾತ್ರವನ್ನು ವಹಿಸುತ್ತವೆ ಇವು ರಕ್ತವನ್ನು ಹಾಳು ಮಾಡುವ ಕೆಟ್ಟ ಪದಾರ್ಥಗಳನ್ನು ಬೇರ್ಪಡಿಸಿ ಮೂತ್ರದ ಮೂಲಕ ವರ ಹಾಕಿ ಆಹಾರಗಳ ಸಮತೋಲನವನ್ನು ಕಾಪಾಡುತ್ತವೆ ಯಾವಾಗ ಮೂತ್ರದಲ್ಲಿ ಅಧಿಕವಾಗಿರುವ ಲವಣಗಳು ಸ್ಪಟಿಕ ರೂಪದಲ್ಲಿ ಮಾರ್ಪಟ್ಟು ಗಣವನ್ನು ವಸ್ತುವಾಗಿ ಪರಿವರ್ತನೆಯಾಗುತ್ತದೆ ಅದನ್ನು ಮೂತ್ರಕೋಶದ ಕಲ್ಲು ಅಥವಾ ಕಿಡ್ನಿಸ್ಟೋನ್…
ಪಾಸಿಟೀವೋ, ನೆಗೆಟಿವೋ.. ಒಟ್ನಲ್ಲಿ ಪ್ರಚಾರ ಸಿಕ್ಕರೆ ಸಾಕು ಅಂತ ಕೆಲ ಸಿನಿಮಾ ತಂಡವರು ಏನೇನೋ ಪ್ಲಾನ್ ಮಾಡ್ತಾರೆ. ನೆಗೆಟಿವ್ ಪಬ್ಲಿಸಿಟಿ ಆದರೂ ಪರ್ವಾಗಿಲ್ಲ, ಒಟ್ನಲ್ಲಿ ಹೆಚ್ಚು ಜನರನ್ನು ತಲುಪಲು ಗಾಂಧಿನಗರದ ಕೆಲ ಮಂದಿ ಸರ್ಕಸ್ ಮಾಡುವುದು ನಿಮಗೆಲ್ಲ ಗೊತ್ತೇ ಇದೆ. ಸೇಮ್ ಟು ಸೇಮ್ ಇದೇ ಸ್ಟ್ರಾಟೆಜಿಯನ್ನ ನಟಿ ಮತ್ತು ಬರಹಗಾರ್ತಿ ಚೈತ್ರ ಕೊಟ್ಟೂರು ‘ಬಿಗ್ ಬಾಸ್’ ಮನೆಯಲ್ಲಿ ಅಪ್ಲೈ ಮಾಡುತ್ತಿರುವ ಹಾಗಿದೆ. ‘ಬಿಗ್ ಬಾಸ್’ ಮನೆಯಲ್ಲಿ ಮೂರು ಹೊತ್ತು ಸುಮ್ಮನೆ ಇದ್ದರೆ, ಕ್ಯಾಮರಾಗಳು ಕೂಡ ಝೂಮ್…