ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಡುವುದಕ್ಕೆ ಸಣ್ಣ ದಾರದಂತಿದೆ… ಆದರೆ, ಇದು ಮಾಡುವ ಕೆಲಸ ಅತಿ ಭಯಾನಕ. ಮನುಷ್ಯನ ಮೆದುಳನ್ನು ಸ್ವಲ್ಪ ಸ್ವಲ್ಪವೇ ತಿನ್ನುವುದು ಈ ಹುಳುವಿನ ಕೆಲಸ. ವೈದ್ಯಕೀಯ ಪರಿಭಾಷೆಯಲ್ಲಿ ಇದನ್ನು `ಟೇಪ್ ವರ್ಮ್’ ಎಂದು ಕರೆಯುತ್ತಾರೆ. ಇಂತಹ ವಿಚಿತ್ರ ಹುಳುವನ್ನು ವ್ಯಕ್ತಿಯೊಬ್ಬರ ಮೆದುಳಿನಿಂದ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದಿದ್ದಾರೆ ಆಗ್ನೇಯ ಚೀನಾದ 36 ವರ್ಷದ ವಾಂಗ್ ಎಂಬವರು ಬರೋಬ್ಬರಿ 15 ವರ್ಷಗಳಿಂದ ಈ ದಾರದಂತಹ ಹುಳುವಿನ ಕಾಟದಿಂದ ನಲುಗಿದ್ದರು. ಸುಮಾರು 12 ಸೆಂಟಿ ಮೀಟರ್ನಷ್ಟು ಉದ್ದವಿದ್ದ ಈ ಹುಳು ವಾಂಗ್ ಅವರ ಮೆದುಳನ್ನು ಸ್ವಲ್ಪ ಸ್ವಲ್ಪ ತಿಂದು ಹಾಕಿತ್ತು.

ವಾಂಗ್ ಅವರಿಗೆ ಬಸವನಹುಳು ತಿನ್ನುವುದೆಂದರೆ ಪಂಚಪ್ರಾಣ. ಆದರೆ, ಇದನ್ನು ತಿನ್ನಲು ಆರಂಭಿಸಿದ ಬಳಿಕ ಇವರಿಗೆ ನಿರಂತರ ವಾಂತಿ ಮಾಡಿಕೊಳ್ಳುವ ಸಮಸ್ಯೆ ಶುರುವಾಗಿತ್ತು. ಸುಮಾರು2007ರಲ್ಲಿ ವಾಂಗ್ ಅವರ ದೇಹದ ಎಡಭಾಗ ಸಂಪೂರ್ಣ ನಿಷ್ಕ್ರಿಯಗೊಂಡಿತ್ತು. ಅಲ್ಲಿಂದ ಇವರು ಹಾಸಿಗೆ ಹಿಡಿದಿದ್ದರು. ಈ ಅವಧಿಯಲ್ಲಿ ತಜ್ಞ ವೈದ್ಯರನ್ನೇ ಸಂಪರ್ಕಿಸಿದರೂ ಸಮಸ್ಯೆಗೊಂದು ಪರಿಹಾರ ಸಿಕ್ಕಿರಲಿಲ್ಲ. ಒಂದು ಹಂತದಲ್ಲಿ ಮಾರಣಾಂತಿಕ ಮೆದುಳಿನ ಕ್ಯಾನ್ಸರಿಗೂ ಇವರು ಚಿಕಿತ್ಸೆ ಪಡೆದುಕೊಂಡಿದ್ದರು.

ವಾಂಗ್ ಸ್ಥಿತಿ ಪ್ರತಿಕ್ಷಣ ಕ್ಷಣಕ್ಕೂ ಹದಗೆಡುತ್ತಾ ಸಾಗಿತ್ತು. ಅಂತಿಮವಾಗಿ2018ರಲ್ಲಿ ವಾಂಗ್ ಅವರ ಮೆದುಳಿನಲ್ಲಿ ಮಾಂಸ ತಿನ್ನುವ ಟೇಪ್ ವರ್ಮ್ ಇರುವುದನ್ನು ವೈದ್ಯರು ಪತ್ತೆ ಹಚ್ಚಿದ್ದರು. ಜಾಸ್ತಿ ಬಸವನಹುಳು ತಿನ್ನುವ ಅಭ್ಯಾಸ ಬೆಳೆಸಿಕೊಂಡಿದ್ದರಿಂದಲೇ ವಾಂಗ್ ಅವರಿಗೆ ಈ ಪರಾವಲಂಬಿ ಹುಳುವಿನ ಸಮಸ್ಯೆ ಕಾಡಲಾರಂಭಿಸಿತ್ತು ಎಂದೂ ವೈದ್ಯರು ತಿಳಿಸಿದ್ದರು.

ವೈದ್ಯರು ಹೇಳಿದಂತೆ ಈ ಪರಾವಲಂಬಿ ಹುಳು ಮೆದುಳಿನ ಅತ್ಯಂತ ಅಪಾಯಕಾರಿ ಭಾಗದಲ್ಲೇ ಇತ್ತು. ಶಸ್ತ್ರಚಿಕಿತ್ಸೆ ಮಾಡುವುದು ಸಾಧ್ಯವೇ ಇರಲಿಲ್ಲ. ಹೀಗಾಗಿ, ಶಸ್ತ್ರಚಿಕಿತ್ಸೆ ಮಾಡದೆ ಬೇರೊಂದು ವಿಧಾನದಲ್ಲಿ ಸೂಕ್ಷ್ಮವಾಗಿ ಈ ಹುಳುವನ್ನು ವೈದ್ಯರು ಹೊರತೆಗೆದಿದ್ದರು. ಇವರು ಮನೆಗೂ ಮರಳಿದ್ದರು. ಆದರೆ, ಇದಾದ ಬಳಿಕ ಮತ್ತೊಂದು ಶಾಕಿಂಗ್ ನ್ಯೂಸ್ ವಾಂಗ್ ಅವರಿಗೆ ಕಾದಿತ್ತು.
ಅಸಲಿಗೆ ಈ ಟೇಪ್ ವರ್ಮ್ ಸಂಪೂರ್ಣ ವಾಂಗ್ ಅವರ ಮೆದುಳಿನಿಂದ ಹೋಗಿರಲಿಲ್ಲ. ಸೆಪ್ಟೆಂಬರ್ ಮಧ್ಯಭಾಗದಲ್ಲಿ ಇವರಿಗೆ ಮತ್ತೆ ಅದೇ ರೀತಿ ಸಮಸ್ಯೆ ಕಂಡು ಬಂದಾಗ ವೈದ್ಯರು ಇನ್ನೊಂದು ಸಲ ತಪಾಸಣೆ ಮಾಡಿದ್ದರು. ಆಗ ಮತ್ತೆ ಈ ಹುಳು ವಾಂಗ್ ಮೆದುಳಿನಲ್ಲಿ ಜೀವಿಸುತ್ತಿರುವುದು ಕಂಡು ಬಂದಿತ್ತು. ಹೀಗಾಗಿ, ಈ ಸಲ ಅಪಾಯವಾದರೂ ಶಸ್ತ್ರಚಿಕಿತ್ಸೆ ಮಾಡಲೇಬೇಕಿತ್ತು. ಅಂತೆಯೇ ಚೀನಾದ ಗುವಾಂಗ್ಡಾಂಗ್ ಸಂಜಿಯು ಬ್ರೈನ್ ಆಸ್ಪತ್ರೆಯಲ್ಲಿ ವಾಂಗ್ ಅವರಿಗೆ ಅತ್ಯಂತ ಸೂಕ್ಷ್ಮ ಶಸ್ತ್ರಚಿಕಿತ್ಸೆ ನಡೆಯಿತು. ಈ ಶಸ್ತ್ರಚಿಕಿತ್ಸೆಯಲ್ಲಿ ವೈದ್ಯರು ವಾಂಗ್ ತಲೆಯೊಳಗಿದ್ದ ಸ್ಪಾರ್ಗನಮ್ ಮಾನಸೋನಿ ಎಂಬ ಪರಾವಲಂಬಿ ಹುಳುವನ್ನು ತೆಗೆದ್ದಾರೆ.
ಸಾಮಾನ್ಯವಾಗಿ ಇದು ಬೆಕ್ಕು ಮತ್ತು ನಾಯಿಗಳಲ್ಲಿ ಕಂಡು ಬರುತ್ತವೆಯಂತೆ. ಆದರೆ, ಮನುಷ್ಯರಲ್ಲಿ ಈ ಹುಳು ಕಂಡು ಬರುವುದು ತೀರಾ ವಿರಳಾತಿ ವಿರಳ ಎನ್ನುತ್ತಾರೆ ವೈದ್ಯರು.ಇವರ ತಲೆಯೊಳಗಿದ್ದ ಎಲ್ಲಾ ಹುಳುಗಳನ್ನು ತೆಗೆಯಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯ ವಾಂಗ್ ಚೇತರಿಸಿಕೊಳ್ಳುತ್ತಿದ್ದಾರೆ. ಈ ಮೂಲಕ15 ವರ್ಷಗಳ ನರಕಯಾತನೆಯೂ ಕೊನೆಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಕನ್ನಡ ಜೆಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಡ್ಡೆ ಸರಕಾರಿ ಶಾಲೆಯ ಈ ಹುಡ್ಗಾ ನೀರಿನಲ್ಲಿ ಚಲಿಸುವ ಸೈಕಲ್ ಆವಿಷ್ಕಾರ ಮಾಡಿದ್ದು, ಈ ಚಿಕ್ಕ ವಯಸ್ಸಿನಲ್ಲಿಯೇ ಈತನ ಪ್ರತಿಭೆ ಮೆಚ್ಚವಂತದ್ದು.
ಬೆಳಿಗ್ಗೆ ಚೆನ್ನಾಗಿದ್ದರೆ ಇಡೀ ದಿನ ಚೆನ್ನಾಗಿರುತ್ತೆ ಎಂಬ ಮಾತಿದೆ. ಇದು ನೂರಕ್ಕೆ ನೂರು ಸತ್ಯ. ಬೆಳಿಗ್ಗೆ ನಮ್ಮ ಮೂಡ್ ಹಾಳಾದ್ರೆ ಇಡೀ ದಿನ ಮನಸ್ಸು ಅಶಾಂತವಾಗಿರುತ್ತೆ. ಹಾಗಾಗಿ ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬೇಕು ಅನ್ನೋದನ್ನು ವಾಸ್ತು ಶಾಸ್ತ್ರದಲ್ಲಿ ವಿಸ್ತಾರವಾಗಿ ಹೇಳಲಾಗಿದೆ. ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬೇಕು, ಬೆಳಿಗ್ಗೆ ತಕ್ಷಣ ಏನು ಮಾಡಬಾರದು ಎಂಬುದನ್ನು ಹೇಳಲಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ ಬೆಳಗ್ಗೆ ಎದ್ದ ತಕ್ಷಣ ಕನ್ನಡಿಯನ್ನು ಮಾತ್ರ ನೋಡಬೇಡಿ. ಬೆಳಿಗ್ಗೆ ಎದ್ದ ತಕ್ಷಣ ಕನ್ನಡಿ ನೋಡೋದು…
ಟಿಪ್ಪು ಸುಲ್ತಾನ್ ಜಯಂತಿಯ ವಿಚಾರದಲ್ಲಿ ಕಾಂಗ್ರೆಸ್ -ಬಿಜೆಪಿ ನಡುವೆ ನಡೆಯುತ್ತಿರುವ ವಾಕ್ಸಮರದ ಮಧ್ಯೆಯೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಟಿಪ್ಪು ಗುಣಗಾನ ಮಾಡಿದ್ದಾರೆ.
ನಮಗೆ ಬೇಕಾಗಿರೋದು ಕನ್ನಡ, ಎಲ್ಲವನ್ನೂ ಕನ್ನಡದಲ್ಲೇ ಪಡೆಯುವುದು, ಆದರೆ ಕೆಲವರ ಪ್ರಕಾರ ಕನ್ನಡಕ್ಕೆ ಅನ್ಯ ಭಾಷೆಯಿಂದ ಬರುವುದು ತಪ್ಪಂತೆ, ಡಬ್ಬಿಂಗ್ ಭೂತವಂತೆ.
78 ವರ್ಷದ ವೃದ್ಧರೊಬ್ಬರು 1500 ಮೀ. ಓಡಿ ಚಿನ್ನದ ಪದಕ ಗೆದ್ದು ಮೈದಾನದಲ್ಲೇ ಮೃತಪಟ್ಟ ಘಟನೆಯೊಂದು ಪಂಜಾಬ್ನ ಸಂಗ್ರೂರ್ನಲ್ಲಿ ನಡೆದಿದೆ. ಬಕ್ಷೀಶ್ ಸಿಂಗ್ ಮೃತಪಟ್ಟ ವ್ಯಕ್ತಿ. ಪಂಜಾಬ್ ಮಾಸ್ಟರ್ ಅಥ್ಲೆಟಿಕ್ ಅಸೋಸಿಯೇಷನ್ ವೃದ್ಧರಿಗೆ ಅಥ್ಲೆಟಿಕ್ ಮೀಟ್ ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಬಕ್ಷೀಶ್ ಸಿಂಗ್ ಭಾಗವಹಿಸಿ ಚಿನ್ನದ ಪದಕವನ್ನು ಗೆದ್ದಿದ್ದಾರೆ. ಬಳಿಕ ಮೈದಾನದಲ್ಲಿಯೇ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. 1500 ಮೀ. ರೇಸ್ ಪೂರ್ಣಗೊಳಿಸಿದ ನಂತರ ಬಕ್ಷೀಶ್ ವಿಶ್ರಾಂತಿ ಪಡೆಯುತ್ತಿದ್ದರು. ಇದೇ ವೇಳೆ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಸಿಂಗ್ರೂರ್ ನ…
ಸೋಮವಾರ ಬಿಗ್ ಬಾಸ್ ಮನೆಯ ಸದಸ್ಯರಿಗೆ ಮನರಂಜನೆ ಸಲುವಾಗಿ ‘ಚಕ್ರವ್ಯೂಹ’ ಎಂಬ ಟಾಸ್ಕ್ ನೀಡಿದ್ದರು. ಈ ಟಾಸ್ಕ್ ನಲ್ಲಿ ಕ್ಯಾಪ್ಟನ್ ಶೈನ್ ಗಾರ್ಡನ್ ಏರಿಯಾದಲ್ಲಿ ಇರಿಸಲಾಗಿದ್ದ ಚಕ್ರವನ್ನು ತಿರುಗಿಸಬೇಕಿತ್ತು. ಈ ವೇಳೆ ಮುಳ್ಳಿನ ಬಳಿ ಯಾರ ಹೆಸರು ನಿಲ್ಲುತ್ತದೋ ಅವರು ಮನೆಯ ಸದಸ್ಯರು ಹೇಳುವಂತೆ ಮಾಡಬೇಕು ಎಂದು ಹೇಳಿದ್ದರು. ಶೈನ್ ಮೊದಲು ಚಕ್ರ ತಿರುಗಿಸಿದಾಗ ಚಂದನಾ ಅವರ ಹೆಸರು ಬಂತು. ಆಗ ಮನೆಯ ಸದಸ್ಯರು ಚಂದನಾರಿಗೆ ಕುಡಿದ ನಶೆಯಲ್ಲಿ ಇರುವಂತೆ ನಟಿಸಬೇಕು ಎಂದಿದ್ದರು. ಚಂದನಾ ಮನೆಯ ಸದಸ್ಯರು…