ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಡುವುದಕ್ಕೆ ಸಣ್ಣ ದಾರದಂತಿದೆ… ಆದರೆ, ಇದು ಮಾಡುವ ಕೆಲಸ ಅತಿ ಭಯಾನಕ. ಮನುಷ್ಯನ ಮೆದುಳನ್ನು ಸ್ವಲ್ಪ ಸ್ವಲ್ಪವೇ ತಿನ್ನುವುದು ಈ ಹುಳುವಿನ ಕೆಲಸ. ವೈದ್ಯಕೀಯ ಪರಿಭಾಷೆಯಲ್ಲಿ ಇದನ್ನು `ಟೇಪ್ ವರ್ಮ್’ ಎಂದು ಕರೆಯುತ್ತಾರೆ. ಇಂತಹ ವಿಚಿತ್ರ ಹುಳುವನ್ನು ವ್ಯಕ್ತಿಯೊಬ್ಬರ ಮೆದುಳಿನಿಂದ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದಿದ್ದಾರೆ ಆಗ್ನೇಯ ಚೀನಾದ 36 ವರ್ಷದ ವಾಂಗ್ ಎಂಬವರು ಬರೋಬ್ಬರಿ 15 ವರ್ಷಗಳಿಂದ ಈ ದಾರದಂತಹ ಹುಳುವಿನ ಕಾಟದಿಂದ ನಲುಗಿದ್ದರು. ಸುಮಾರು 12 ಸೆಂಟಿ ಮೀಟರ್ನಷ್ಟು ಉದ್ದವಿದ್ದ ಈ ಹುಳು ವಾಂಗ್ ಅವರ ಮೆದುಳನ್ನು ಸ್ವಲ್ಪ ಸ್ವಲ್ಪ ತಿಂದು ಹಾಕಿತ್ತು.

ವಾಂಗ್ ಅವರಿಗೆ ಬಸವನಹುಳು ತಿನ್ನುವುದೆಂದರೆ ಪಂಚಪ್ರಾಣ. ಆದರೆ, ಇದನ್ನು ತಿನ್ನಲು ಆರಂಭಿಸಿದ ಬಳಿಕ ಇವರಿಗೆ ನಿರಂತರ ವಾಂತಿ ಮಾಡಿಕೊಳ್ಳುವ ಸಮಸ್ಯೆ ಶುರುವಾಗಿತ್ತು. ಸುಮಾರು2007ರಲ್ಲಿ ವಾಂಗ್ ಅವರ ದೇಹದ ಎಡಭಾಗ ಸಂಪೂರ್ಣ ನಿಷ್ಕ್ರಿಯಗೊಂಡಿತ್ತು. ಅಲ್ಲಿಂದ ಇವರು ಹಾಸಿಗೆ ಹಿಡಿದಿದ್ದರು. ಈ ಅವಧಿಯಲ್ಲಿ ತಜ್ಞ ವೈದ್ಯರನ್ನೇ ಸಂಪರ್ಕಿಸಿದರೂ ಸಮಸ್ಯೆಗೊಂದು ಪರಿಹಾರ ಸಿಕ್ಕಿರಲಿಲ್ಲ. ಒಂದು ಹಂತದಲ್ಲಿ ಮಾರಣಾಂತಿಕ ಮೆದುಳಿನ ಕ್ಯಾನ್ಸರಿಗೂ ಇವರು ಚಿಕಿತ್ಸೆ ಪಡೆದುಕೊಂಡಿದ್ದರು.

ವಾಂಗ್ ಸ್ಥಿತಿ ಪ್ರತಿಕ್ಷಣ ಕ್ಷಣಕ್ಕೂ ಹದಗೆಡುತ್ತಾ ಸಾಗಿತ್ತು. ಅಂತಿಮವಾಗಿ2018ರಲ್ಲಿ ವಾಂಗ್ ಅವರ ಮೆದುಳಿನಲ್ಲಿ ಮಾಂಸ ತಿನ್ನುವ ಟೇಪ್ ವರ್ಮ್ ಇರುವುದನ್ನು ವೈದ್ಯರು ಪತ್ತೆ ಹಚ್ಚಿದ್ದರು. ಜಾಸ್ತಿ ಬಸವನಹುಳು ತಿನ್ನುವ ಅಭ್ಯಾಸ ಬೆಳೆಸಿಕೊಂಡಿದ್ದರಿಂದಲೇ ವಾಂಗ್ ಅವರಿಗೆ ಈ ಪರಾವಲಂಬಿ ಹುಳುವಿನ ಸಮಸ್ಯೆ ಕಾಡಲಾರಂಭಿಸಿತ್ತು ಎಂದೂ ವೈದ್ಯರು ತಿಳಿಸಿದ್ದರು.

ವೈದ್ಯರು ಹೇಳಿದಂತೆ ಈ ಪರಾವಲಂಬಿ ಹುಳು ಮೆದುಳಿನ ಅತ್ಯಂತ ಅಪಾಯಕಾರಿ ಭಾಗದಲ್ಲೇ ಇತ್ತು. ಶಸ್ತ್ರಚಿಕಿತ್ಸೆ ಮಾಡುವುದು ಸಾಧ್ಯವೇ ಇರಲಿಲ್ಲ. ಹೀಗಾಗಿ, ಶಸ್ತ್ರಚಿಕಿತ್ಸೆ ಮಾಡದೆ ಬೇರೊಂದು ವಿಧಾನದಲ್ಲಿ ಸೂಕ್ಷ್ಮವಾಗಿ ಈ ಹುಳುವನ್ನು ವೈದ್ಯರು ಹೊರತೆಗೆದಿದ್ದರು. ಇವರು ಮನೆಗೂ ಮರಳಿದ್ದರು. ಆದರೆ, ಇದಾದ ಬಳಿಕ ಮತ್ತೊಂದು ಶಾಕಿಂಗ್ ನ್ಯೂಸ್ ವಾಂಗ್ ಅವರಿಗೆ ಕಾದಿತ್ತು.
ಅಸಲಿಗೆ ಈ ಟೇಪ್ ವರ್ಮ್ ಸಂಪೂರ್ಣ ವಾಂಗ್ ಅವರ ಮೆದುಳಿನಿಂದ ಹೋಗಿರಲಿಲ್ಲ. ಸೆಪ್ಟೆಂಬರ್ ಮಧ್ಯಭಾಗದಲ್ಲಿ ಇವರಿಗೆ ಮತ್ತೆ ಅದೇ ರೀತಿ ಸಮಸ್ಯೆ ಕಂಡು ಬಂದಾಗ ವೈದ್ಯರು ಇನ್ನೊಂದು ಸಲ ತಪಾಸಣೆ ಮಾಡಿದ್ದರು. ಆಗ ಮತ್ತೆ ಈ ಹುಳು ವಾಂಗ್ ಮೆದುಳಿನಲ್ಲಿ ಜೀವಿಸುತ್ತಿರುವುದು ಕಂಡು ಬಂದಿತ್ತು. ಹೀಗಾಗಿ, ಈ ಸಲ ಅಪಾಯವಾದರೂ ಶಸ್ತ್ರಚಿಕಿತ್ಸೆ ಮಾಡಲೇಬೇಕಿತ್ತು. ಅಂತೆಯೇ ಚೀನಾದ ಗುವಾಂಗ್ಡಾಂಗ್ ಸಂಜಿಯು ಬ್ರೈನ್ ಆಸ್ಪತ್ರೆಯಲ್ಲಿ ವಾಂಗ್ ಅವರಿಗೆ ಅತ್ಯಂತ ಸೂಕ್ಷ್ಮ ಶಸ್ತ್ರಚಿಕಿತ್ಸೆ ನಡೆಯಿತು. ಈ ಶಸ್ತ್ರಚಿಕಿತ್ಸೆಯಲ್ಲಿ ವೈದ್ಯರು ವಾಂಗ್ ತಲೆಯೊಳಗಿದ್ದ ಸ್ಪಾರ್ಗನಮ್ ಮಾನಸೋನಿ ಎಂಬ ಪರಾವಲಂಬಿ ಹುಳುವನ್ನು ತೆಗೆದ್ದಾರೆ.
ಸಾಮಾನ್ಯವಾಗಿ ಇದು ಬೆಕ್ಕು ಮತ್ತು ನಾಯಿಗಳಲ್ಲಿ ಕಂಡು ಬರುತ್ತವೆಯಂತೆ. ಆದರೆ, ಮನುಷ್ಯರಲ್ಲಿ ಈ ಹುಳು ಕಂಡು ಬರುವುದು ತೀರಾ ವಿರಳಾತಿ ವಿರಳ ಎನ್ನುತ್ತಾರೆ ವೈದ್ಯರು.ಇವರ ತಲೆಯೊಳಗಿದ್ದ ಎಲ್ಲಾ ಹುಳುಗಳನ್ನು ತೆಗೆಯಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯ ವಾಂಗ್ ಚೇತರಿಸಿಕೊಳ್ಳುತ್ತಿದ್ದಾರೆ. ಈ ಮೂಲಕ15 ವರ್ಷಗಳ ನರಕಯಾತನೆಯೂ ಕೊನೆಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಅಗಷ್ಟ್ ತಿಂಗಳ 24ಕ್ಕೆ ಅಂತ್ಯಗೊಳ್ಳಲಿದ್ದ ಕೃಷಿ ಬೆಳೆ ಸಮೀಕ್ಷೆಯನ್ನು ಸೆಪ್ಟೆಂಬರ್ ತಿಂಗಳ 24 ತನಕ ವಿಸ್ತರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಕೃಷಿ ಬೆಳೆ ಸಮೀಕ್ಷೆ ಕುರಿತಂತೆ ಸುದೀರ್ಘ ಚರ್ಚೆ ನಡೆದ ಬಳಿಕ ಒಂದು ತಿಂಗಳು ಅವಧಿ ವಿಸ್ತರಿಸುವ ತೀರ್ಮಾನ ಕೈಗೊಂಡಿದೆ. ಬೆಳೆ ಸಮೀಕ್ಷೆ ವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿ ಹಾಗೂ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದು . .ಕಳೆದ ವರ್ಷ ಕೇವಲ 3,500 ಮಂದಿ ರೈತರು ಮಾತ್ರ ನೋಂದಣಿ ಮಾಡಿದ್ದರು, ಈ ವರ್ಷ ಅಲ್ಪ ಅವಧಿಯಲ್ಲೇ…
ಈ ರೀತಿ ತಿನ್ನುವ ವ್ಯಕ್ತಿಯನ್ನು ಅನುಪ್ ಓಜಾ ಎಂದು ಗುರುತಿಸಲಾಗಿದೆ. ಈತ ದಿನದಲ್ಲಿ ತಿಂಡಿಗೆ ಬರೋಬ್ಬರಿ 40 ಚಪಾತಿಗಳನ್ನು ತಿಂದಿದ್ದಾನೆ. ಜೊತೆಗೆ ಊಟದ ಸಮಯದಲ್ಲಿ ಹತ್ತು ಪ್ಲೇಟ್ ಅನ್ನವನ್ನು ತಿಂದಿದ್ದಾನೆ. ಈ ಅಧುನಿಕ ಬಕಾಸುರನನ್ನು ನೋಡಿದ ಅಲ್ಲಿ ಅಧಿಕಾರಿಗಳು ಗೊಂದಲಕ್ಕೊಳಗಾಗಿದ್ದಾರೆ. ಈ ಘಟನೆ ಬಿಹಾರದ ಬಕ್ಸಾರ್ ನಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ. ಅನುಪ್ ರಾಜಸ್ಥಾನದಿಂದ ಬಿಹಾರಕ್ಕೆ ಮರಳಿದ್ದ, ಆದ್ದರಿಂದ ಸರ್ಕಾರದ ನಿಮಯದಂತೆ ಆತನನ್ನು ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿದೆ. ಈ ವೇಳೆ ಈತ ದಿನಕ್ಕೆ ತಿಂಡಿಯ ವೇಳೆಗೆ 40…
ನೀವೇನಾದರೂ ಹೊಸ ಬೈಕ್ ಖರೀದಿಸಲು ಯೋಜನೆ ಹಾಕಿಕೊಂಡರೆ, ವಿನ್ಯಾಸ ಅಥವಾ ಕಾರ್ಯಕ್ಷಮತೆಯ ಜೊತೆಗೆ ವಾಹನದ ಬೆಲೆಯ ಕಡೆ ನಿಮ್ಮಗೂ ನೀವು ಗಮನಹರಿಸುತ್ತೀರಿ. ಈ ಎಲ್ಲಾ ಲಕ್ಷಣಗಳನ್ನು ಪಡೆದ ಟಾಪ್ 5 ಬೈಕುಗಳ ಬಗ್ಗೆ ಮಾಹಿತಿ ಇಲ್ಲಿದೆ.
ಸರ್ಕಾರಿ ಒಡೆತನದ ಬಿಎಸ್ಎನ್ಎಲ್ ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ಯಾಟಿಲೈಟ್ ಫೋನ್ ಸೇವೆಯನ್ನು ಆರಂಭಿಸಲಿದೆ. ಬುಧವಾರ ಮೇ.25 ರಿಂದ ಈ ಸೇವೆಗೆ ಚಾಲನೆ ದೊರೆಯಲಿದ್ದು, ನೇರವಾಗಿ ಉಪಗ್ರಹಗಳ ಸಹಾಯದಿಂದ ಈ ಸೇವೆಯನ್ನು ಬಿಎಸ್ಎನ್ಎಲ್ ಓದಗಿಸಲಿದೆ ಎನ್ನಲಾಗಿದೆ.
ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು ಕೂಡ ಕಡಿಮೆಯಾಗಿದ್ದರೆ. ಕೈಯಲ್ಲಿ ಊಟ ಮಾಡುವುದರಿಂದ ಎಷ್ಟೆಲ್ಲ ಪ್ರಯೋಜನಗಳಿವೆ ಎಂದು ತಿಳಿದುಕೊಳ್ಳಿ.
ತಮಿಳುನಾಡಿಗೆ ನೀರು ಬಿಡುವಂತೆ ಕೇಂದ್ರ ಜಲ ಆಯೋಗ ಆದೇಶಿಸಿರುವ ಬೆನ್ನಲ್ಲೇ, ಮಂಡ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಈ ಆದೇಶ ಹೊರಬೀಳುತ್ತಿದ್ದಂತೆಯೇ ಜಿಲ್ಲೆಯ ವಿವಿಧೆಡೆ ರೈತರು ರಸ್ತೆಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ರೈತಸಂಘ, ಕನ್ನಡಸೇನೆ ಕಾರ್ಯಕರ್ತರು ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಜಿಲ್ಲೆಯಲ್ಲಿ ಕುಡಿಯುವ ನೀರಿಲ್ಲದೆ ಜನರು ಪರದಾಡುತ್ತಿದ್ದಾರೆ. ನಾಲೆಗಳಿಗೆ ನೀರು ಬಿಡದೆ ಬೆಳೆದ ಬೆಳೆಗಳು ಒಣಗುತ್ತಿವೆ. ಬೆಂಗಳೂರಿಗೆ ಕುಡಿಯುವ ನೀರು ಹರಿಸಲು ಸಹ ಇರುವ ಸಂಗ್ರಹದಲ್ಲಿರುವ ನೀರು ಸಾಲುವುದಿಲ್ಲ. ಪರಿಸ್ಥಿತಿ…