ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿತ್ರ ರಂಗದಲ್ಲಿ ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗುವುದಿಲ್ಲ. ಅವರಿದ್ದ ಜಾಗಕ್ಕೆ ಇವರು ಕಾಲಿಡುವುದೂ ಇಲ್ಲ. ವೃತ್ತಿ ಮತ್ಸರದಿಂದ ಬದುಕುವವರೇ ಜಾಸ್ತಿ ಅಂತ ನಾವೆಲ್ಲರೂ ಮಾತನಾಡುತ್ತೇವೆ ಮತ್ತು ಅವರು ಸಹ ಹಾಗೆಯೇ ಇರುತ್ತಾರೆ ಎಂದು ಹೇಳಿಕೊಳ್ಳುತ್ತಾರೆ ಮತ್ತು ಚಿತ್ರರಂಗ ವಲಯದಿಂದ ಸಹ ಮಾತುಗಳು ಕೇಳಿಬರುತ್ತವೆ. ಆದರೆ, 80ರ ದಶಕದ ತಾರೆಯರು ಈ ಮಾತನ್ನು ಸುಳ್ಳು ಮಾಡಿದ್ದಾರೆ. ಇದಕ್ಕೆ ಸಾಕ್ಷಿ ‘ಮೆಗಾ ಸ್ಟಾರ್’ ಚಿರಂಜೀವಿ, ಅವರ ಮನೆಯಲ್ಲಿ ನಡೆದ ಪಾರ್ಟಿಯೇ ಸಾಕ್ಷಿ. ಪ್ರತಿವರ್ಷ 80ರ ದಶಕದ ದಕ್ಷಿಣ ಭಾರತದ ಕಲಾವಿದರನ್ನು ಮನೆಗೆ ಆಹ್ವಾನಿಸಿ, ಪಾರ್ಟಿ ಮಾಡುವ ಕಾರ್ಯಕ್ರವನ್ನು ನಡೆಸಿಕೊಂಡು ಬಂದಿದ್ದಾರೆ ಚಿರು. ಅಂತೆಯೇ ಅವರ ಮನೆಯಲ್ಲಿ ಅನೇಕ ತಾರೆಯರು ಆಗಮಿಸಿ, ಹಳೆಯ ಕ್ಷಣಗಳನ್ನು ನೆನೆದಿದ್ದಾರೆ. ಯಂಗ್ ಜನರೇಷನ್ಗಿಂತ ನಾವೇನು ಕಮ್ಮಿ ಇಲ್ಲ ಎನ್ನುವಂತೆ ಪಾರ್ಟಿ ಮಾಡಿ ಎಂಜಾಯ್ ಮಾಡಿದ್ದಾರೆ. ಆ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಸಂಸದೆ ಸುಮಲತಾ ಅಂಬರೀಷ್,ರಮೇಶ್ ಅರವಿಂದ್ ಸೇರಿದಂತೆ ಅನೇಕರು ಅಲ್ಲಿ ಹಾಜರಿದ್ದರು.

ತಮ್ಮ ಸಮಕಾಲೀನ ಕಲಾವಿದರನ್ನೆಲ್ಲ ಮನೆಗೆ ಕರೆಸಿಕೊಂಡು ಚಿರಂಜೀವಿ ಅವರ ಕಾರ್ಯಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಲೈಕ್ಸ್ ಸಿಕ್ಕಿವೆ.3 ದಶಕಗಳಿಂದಲೂ ಇತರೆ ಕಲಾವಿದರೊಂದಿಗೆ ಉತ್ತಮ ಒಡನಾಟ ಹೊಂದಿರುವ ಅವರ ನಡೆಗೆ ಎಲ್ಲೆಡೆ ಮೆಚ್ಚುಗೆ ಸಿಕ್ಕಿದೆ. ಅಪ್ಪನಿಗೆ ಸಹಾಯಕವಾಗಿ ನಟ ರಾಮ್ ಚರಣ್ ಕೂಡ ಇದ್ದರು. ನಟಿ ಖುಷ್ಬೂ ತಮಿಳು, ಕನ್ನಡ ಸೇರಿ ಅನೇಕ ಭಾಷೆಗಳಲ್ಲಿ ನಟಿಸಿದ್ದಾರೆ. ತೆಲುಗಿನಲ್ಲೂ ಕಾಣಿಸಿಕೊಂಡಿದ್ದಾರೆ. ಆದರೆ, ಚಿರು ಜತೆ ನಟಿಸಿದ್ದು2006ರಲ್ಲಿ ತೆರೆಕಂಡ ‘ಸ್ಟಾಲಿನ್’ ಸಿನಿಮಾದಲ್ಲಿ ಮಾತ್ರ. ಅದು ಪೋಷಕ ಪಾತ್ರದಲ್ಲಿ! ಜೊತೆಗೆ ಸಿನಿಮಾಗಳನ್ನು ಮಾಡದಿದ್ದರೂ,

ನಟಿ, ಸಂಸದೆ ಸುಮಲತಾ ಅಂಬರೀಷ್,ಕನ್ನಡದ ಜೊತೆಗೆ ತೆಲುಗಿನಲ್ಲೂ ಸಖತ್ ಫೇಮಸ್ ಆಗಿದ್ದವರು. 80ರ ದಶಕದಲ್ಲಿ ಚಿರಂಜೀವಿ ಜತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದರು. ಜಪಗತಿ ಬಾಬು, ವಿಕ್ಟರಿ ವೆಂಕಟೇಶ್, ರಾಧಿಕಾ ಶರತ್ಕುಮಾರ್ ಜತೆ ಅವರು ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ. ಚಿರು-ಖುಷ್ಬೂ ನಡುವಿನ ಒಡನಾಟ ಮಾತ್ರ ಹಾಗೆಯೇ ಇದೆ. ಅದಕ್ಕೆ ಸಾಕ್ಷಿ ಈ ಕ್ಯೂಟ್ ಸೆಲ್ಫಿ.ಕೇರಳದಲ್ಲಿ ಮೋಹನ್ಲಾಲ್ ಸೂಪರ್ ಸ್ಟಾರ್. ಟಾಲಿವುಡ್ನಲ್ಲಿ ಚಿರಂಜೀವಿ ಮೆಗಾ ಸ್ಟಾರ್. ಈ ಇಬ್ಬರು ಕಲಾವಿದರು ಒಂದೇ ಫ್ರೇಮ್ನಲ್ಲಿ ಸೆರೆ ಸಿಕ್ಕಿದ್ದಾರೆ. ಅದಕ್ಕೆ ಕಾರಣವಾಗಿದ್ದು ಚಿರು ಮನೆಯ ಪಾರ್ಟಿ.

ಮಲಯಾಳಂ ‘ಸೂಪರ್ ಸ್ಟಾರ್’ ಮೋಹನ್ಲಾಲ್ ಜತೆ ನಟಿ ರಾಧಿಕಾ ಶರತ್ಕುಮಾರ್ ಗೆಳೆತನ ಇಂದು ನಿನ್ನೆಯದಲ್ಲ. 1985ರಲ್ಲೇ ಈ ಇಬ್ಬರು ಕಲಾವಿದರು ಒಟ್ಟಿಗೆ ‘ಕೂಡುಮ್ ಥೇಡಿ’ ಚಿತ್ರದಲ್ಲಿ ನಟಿಸಿದ್ದರು. ವಿಶೇಷವೆಂದರೆ, ಕಳೆದ ಸೆಪ್ಟಂಬರ್ನಲ್ಲಿ ತೆರೆಕಂಡ ‘ಇಟ್ಟಿಮಾನಿ; ಮೇಡ್ ಇನ್ ಚೀನಾ’ ಚಿತ್ರದಲ್ಲೂ ಇಬ್ಬರು ಒಟ್ಟಿಗೆ ಕಾಣಿಸಿಕೊಂಡಿದ್ದರು. ಚಿರು ಮನೆಯ ಪಾರ್ಟಿಯಲ್ಲಿ ಕ್ಯಾಮರಾಕ್ಕೆ ಜೊತೆಯಾಗಿ ಕಾಣಿಸಿಕೊಂಡ ಕ್ಷಣ.ಚಿರು ಮನೆಯಲ್ಲಿ 80ರ ದಶಕ ರಿ-ಯೂನಿಯನ್ ಕಾರ್ಯಕ್ರಮದಲ್ಲಿ ವಿಶೇಷವಾಗಿ ಗಮನಸೆಳೆದ ನಟಿ ಖುಷ್ಬೂ. ಈ ವೇಳೆ ನಟಿ ರಾಧಿಕಾ ಶರತ್ಕುಮಾರ್ ಮತ್ತು ನಾಧಿಯಾ ಅವರ ಜತೆ ಸೆಲ್ಫೀ ಕ್ಲಿಕ್ಕಿಸಿಕೊಂಡು ಸಂಭ್ರಮಸಿದರು.

ಚಿರು ಕುಟುಂಬದೊಂದಿಗೆ ರಾಧಿಕಾ ಶರತ್ ಕುಮಾರ್ ಫ್ಯಾಮಿಲಿ ಮೊದಲಿನಿಂದಲೂ ಉತ್ತಮ ಒಡನಾಡ ಹೊಂದಿದೆ. ರೀ-ಯೂನಿಯನ್ ಕಾರ್ಯಕ್ರಮದಲ್ಲಿ ಭೇಟಿಯಾದಾಗ ಚಿರು ಪುತ್ರ ರಾಮ್ ಚರಣ್ ಜತೆ ಕಾಣಿಸಿಕೊಂಡರು.ಬರೀ ದಕ್ಷಿಣದ ಕಲಾವಿದರು ಮಾತ್ರವಲ್ಲ, ಬಾಲಿವುಡ್ನ ಜಾಕಿಶ್ರಾಫ್ ಕೂಡ ಈ ಕಾರ್ಯಕ್ರಮದಲ್ಲಿ ಹಾಜರಿದ್ದರು. ನಟಿ ರಾಧಿಕಾ ಶರತ್ಕುಮಾರ್, ಚಿರಂಜೀವಿ ಮತ್ತು ರಾಮ್ ಚರಣ್ ಅವರೊಂದಿಗೆ ಜಾಕಿ ಅವರ ಸಖತ್ ಪೋಸ್.ತಮ್ಮ ಕಾಲದ ನಾಯಕಿಯರ ಜತೆ ಗ್ರೂಪ್ ಫೋಟೋಗೆ ಸಖತ್ ಪೋಸ್ ನೀಡಿದ್ದಾರೆ ಚಿರು. ಖುಷ್ಬೂ, ಸುಹಾಸಿನಿ ಮಣಿರತ್ನಂ, ರಾಧಿಕಾ ಶರತ್ಕುಮಾರ್ ಮುಂತಾದವರು ಅವರೊಂದಿಗೆ ಸಾಥ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾ ಬೆನ್(100) ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ತಮ್ಮ ತಾಯಿ 100 ನೇ ವಯಸ್ಸಿನಲ್ಲಿ ನಿಧನರಾಗಿದ್ದಾಗಿ ಪ್ರಧಾನಿ ಮೋದಿ ಟ್ಟಿಟ್ ಮೂಲಕ ತಿಳಿಸಿದ್ದಾರೆ. ಹೀರಾ ಬೆನ್ ಕಳೆದೆರಡು ದಿನದಿಂದ ಅಹ್ಮದಾಬಾದ್ ನ ಯುನ್ ಮೆಹ್ತಾ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯದಲ್ಲಿ ಏರುಪೇರಾದ ಕಾರಣ ಎರಡು ದಿನಗಳ ಹಿಂದೆ ಅವರನ್ನು ಗುಜರಾತ್ ನ ಅಹಮದಾಬಾದ್ ನಲ್ಲಿರುವ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆರೋಗ್ಯದಲ್ಲಿ…
ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಪ್ರತಿ ವರ್ಷ ಜನವರಿ 14 ಅಥವಾ 15 (ಪುಷ್ಯಮಾಸ)ದಲ್ಲಿ ಬರುವ ಮಕರ ಸಂಕ್ರಾಂತಿಯನ್ನು `ಉತ್ತರಾಯಣ ಪುಣ್ಯಕಾಲ’ ಎಂದು ಕರೆಯುತ್ತಾರೆ. ಕೇವಲ ಬದುಕುವುದಕ್ಕೆ ಅಷ್ಟೇ ಅಲ್ಲದೆ, ಸಾಯುವುದಕ್ಕೂ ಉತ್ತರಾಯಣ, ಪುಣ್ಯಕಾಲವನ್ನು ನೋಡುತ್ತಾರೆ. ಈ ಪುಣ್ಯಮುಹೂರ್ತದಲ್ಲಿ ಪುಣ್ಯ ಸ್ಥಳಗಳಲ್ಲಿ ಹಾಗೂ ತುಂಗಾ, ಗಂಗಾ, ಕೃಷ್ಣಾ, ಕಾವೇರಿ ಮುಂತಾದ ಪುಣ್ಯ ನದಿಗಳಲ್ಲಿ ಲಕ್ಷಾಂತರ ದೈವಭಕ್ತರು ತೀರ್ಥಸ್ನಾನ ಮಾಡುತ್ತಾರೆ. ಹಾಗೆಯೇ ಉತ್ತರಾಯಣವನ್ನು ದೇವತೆಗಳ ಕಾಲವೆಂದು ಹಲವರು…
ಕೆಮ್ಮು ವಾಸ್ತವವಾಗಿ ಒಂದು ಕಾಯಿಲೆಯಲ್ಲ, ಒಂದು ರೋಗ ನಿರೋಧಕ ವ್ಯವಸ್ಥೆ. ಗಂಟಲಿನ ತೇವದಲ್ಲಿ ವೈರಸ್ಸುಗಳು ಮನೆ ಮಾಡಿದಾಗ ಇದನ್ನು ಕೆರೆದು ಹೊರ ಹಾಕುವ ಕ್ರಿಯೆಯೇ ಕೆಮ್ಮು. ಈ ಕೆಮ್ಮನ್ನು ಎರಡೇ ದಿನದಲ್ಲಿ ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ನೀವೆ ಸುಲಭವಾಗಿ ಮನೆಯಲ್ಲಿಯೇ ಸಿಗುವ ಸುಲಭ ಸಾಮಾಗ್ರಿಗಳಿಂದ ತಯಾರಿಸಬಹುದು. ಕೆಮ್ಮು ಮತ್ತು ಸಾವು ಯಾರನ್ನೂ ಕೇಳಿ ಬರುವುದಿಲ್ಲ ವಂತೆ. ಯಾವುದೋ ಮುಖ್ಯ ಕಾರ್ಯದಲ್ಲಿದ್ದಾಗ ಕೆಮ್ಮು ಕಾಡಿದರೆ ಆಗ ಎದು ರಾಗುವ ತಾಪತ್ರಯ ಒಂದೆರ ಡಲ್ಲ. ಅದರಲ್ಲೂ ಕೆಮ್ಮು ಸತತವಾದರೆ ಮುಖ್ಯ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಕುಟುಂಬದಲ್ಲಿನ ಅಸಮತೋಲನವನ್ನು ತಪ್ಪಿಸಲು ಮನೆಯ ಸದಸ್ಯರೊಂದಿಗೆ ಪ್ರತ್ಯೇಕವಾಗಿ ಮಾತನಾಡಿ. ನಂತರ ನೀವು ತೀರ್ಮಾನ ಕೈಕೊಂಡಲ್ಲಿ ಎಲ್ಲರೂ ನಿಮ್ಮ ತೀರ್ಮಾನವನ್ನು ಒಪ್ಪುವ ಸಾಧ್ಯತೆ ಇರುತ್ತದೆ. ಆದರೆ ಒಬ್ಬರ ವಿಚಾರ ಮತ್ತೊಬ್ಬರ…
ಇತ್ತೀಚೆಗೆ ವಿದ್ಯಾ ಬಾಲನ್ ಅವರು ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ತಮ್ಮ ಕೆರಿಯರ್ ಬಗ್ಗೆ ಹಾಗೂ ತಮಗಾದ ಕಾಸ್ಟಿಂಗ್ ಕೌಚ್ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. 2005ರಲ್ಲಿ ವಿದ್ಯಾ ಬಾಲಾನ್ ‘ಪರಿಣೀತಾ’ ಚಿತ್ರದ ಮೂಲಕ ಬಾಲಿವುಡ್ಗೆ ಎಂಟ್ರಿ ಕೊಟ್ಟಿದ್ದರು. ಇದಾದ ಬಳಿಕ ಅವರು ಬಾಲಿವುಡ್ನಲ್ಲಿ ಹಲವಾರು ಹಿಟ್ ಚಿತ್ರಗಳನ್ನು ನೀಡಿದ್ದರು. ಸಂದರ್ಶನದಲ್ಲಿ ವಿದ್ಯಾ ತಾವು ನಟಿಯಾಗಲು ಎಷ್ಟು ಕಷ್ಟಪಟ್ಟಿದ್ದೇನೆ ಎಂಬ ವಿಷಯವನ್ನು ಈಗ ಹಂಚಿಕೊಂಡಿದ್ದಾರೆ. ಅಲ್ಲದೆ ಒಂದೇ ಸಮಯದಲ್ಲಿ ಒಂದಲ್ಲ, ಎರಡಲ್ಲ ಒಟ್ಟು 12 ಚಿತ್ರಗಳನ್ನು ಕಳೆದುಕೊಂಡಿದ್ದರ…
ಸಾಮಾನ್ಯವಾಗಿ ನಟರ ಮಕ್ಕಳು ತಂದೆಯಂತೆಯೇ ಸಿನಿಮಾ ಕ್ಷೇತ್ರದ ಮೇಲೆ ಹೆಚ್ಚಿನ ಆಶಕ್ತಿ ಹೊಂದಿರುತ್ತಾರೆ. ಆದರೆ ನಟ ಅರುಣ್ ಸಾಗರ್ ಪುತ್ರ ಸಿನಿಮಾ ಬಿಟ್ಟು ಕ್ರೀಡಾ ವಿಭಾಗದಲ್ಲಿ ಆಶಕ್ತಿ ಹೊಂದಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಅರುಣ್ ಸಾಗರ್ ಪುತ್ರ ಸೂರ್ಯ ಸಾಗರ್ ವಿದೇಶಿ ಕ್ರೀಡೆ ಮಾಕ್ಸ್ ಮೌಥಾಯ್ಯಲ್ಲಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಹೌದು, ಅಂತರಾಷ್ಟ್ರೀಯ ಮಟ್ಟದ ಮಾಕ್ಸ್ ಮೌಥಾಯ್ ಸ್ಪರ್ಧೆ ಥಾಯ್ಲಂಡ್ನ ಪಟಾಯಲ್ಲಿ ನಡೆದಿತ್ತು. ಇದರಲ್ಲಿ ವಿವಿಧ ದೇಶಗಳು ಭಾಗಿಯಾಗಿದ್ದವು. ಇದೇ ರೀತಿ ಈ ಸ್ಪರ್ಧೆಯಲ್ಲಿ ಅರುಣ್…