ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿತ್ರ ರಂಗದಲ್ಲಿ ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗುವುದಿಲ್ಲ. ಅವರಿದ್ದ ಜಾಗಕ್ಕೆ ಇವರು ಕಾಲಿಡುವುದೂ ಇಲ್ಲ. ವೃತ್ತಿ ಮತ್ಸರದಿಂದ ಬದುಕುವವರೇ ಜಾಸ್ತಿ ಅಂತ ನಾವೆಲ್ಲರೂ ಮಾತನಾಡುತ್ತೇವೆ ಮತ್ತು ಅವರು ಸಹ ಹಾಗೆಯೇ ಇರುತ್ತಾರೆ ಎಂದು ಹೇಳಿಕೊಳ್ಳುತ್ತಾರೆ ಮತ್ತು ಚಿತ್ರರಂಗ ವಲಯದಿಂದ ಸಹ ಮಾತುಗಳು ಕೇಳಿಬರುತ್ತವೆ. ಆದರೆ, 80ರ ದಶಕದ ತಾರೆಯರು ಈ ಮಾತನ್ನು ಸುಳ್ಳು ಮಾಡಿದ್ದಾರೆ. ಇದಕ್ಕೆ ಸಾಕ್ಷಿ ‘ಮೆಗಾ ಸ್ಟಾರ್’ ಚಿರಂಜೀವಿ, ಅವರ ಮನೆಯಲ್ಲಿ ನಡೆದ ಪಾರ್ಟಿಯೇ ಸಾಕ್ಷಿ. ಪ್ರತಿವರ್ಷ 80ರ ದಶಕದ ದಕ್ಷಿಣ ಭಾರತದ ಕಲಾವಿದರನ್ನು ಮನೆಗೆ ಆಹ್ವಾನಿಸಿ, ಪಾರ್ಟಿ ಮಾಡುವ ಕಾರ್ಯಕ್ರವನ್ನು ನಡೆಸಿಕೊಂಡು ಬಂದಿದ್ದಾರೆ ಚಿರು. ಅಂತೆಯೇ ಅವರ ಮನೆಯಲ್ಲಿ ಅನೇಕ ತಾರೆಯರು ಆಗಮಿಸಿ, ಹಳೆಯ ಕ್ಷಣಗಳನ್ನು ನೆನೆದಿದ್ದಾರೆ. ಯಂಗ್ ಜನರೇಷನ್ಗಿಂತ ನಾವೇನು ಕಮ್ಮಿ ಇಲ್ಲ ಎನ್ನುವಂತೆ ಪಾರ್ಟಿ ಮಾಡಿ ಎಂಜಾಯ್ ಮಾಡಿದ್ದಾರೆ. ಆ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಸಂಸದೆ ಸುಮಲತಾ ಅಂಬರೀಷ್,ರಮೇಶ್ ಅರವಿಂದ್ ಸೇರಿದಂತೆ ಅನೇಕರು ಅಲ್ಲಿ ಹಾಜರಿದ್ದರು.

ತಮ್ಮ ಸಮಕಾಲೀನ ಕಲಾವಿದರನ್ನೆಲ್ಲ ಮನೆಗೆ ಕರೆಸಿಕೊಂಡು ಚಿರಂಜೀವಿ ಅವರ ಕಾರ್ಯಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಲೈಕ್ಸ್ ಸಿಕ್ಕಿವೆ.3 ದಶಕಗಳಿಂದಲೂ ಇತರೆ ಕಲಾವಿದರೊಂದಿಗೆ ಉತ್ತಮ ಒಡನಾಟ ಹೊಂದಿರುವ ಅವರ ನಡೆಗೆ ಎಲ್ಲೆಡೆ ಮೆಚ್ಚುಗೆ ಸಿಕ್ಕಿದೆ. ಅಪ್ಪನಿಗೆ ಸಹಾಯಕವಾಗಿ ನಟ ರಾಮ್ ಚರಣ್ ಕೂಡ ಇದ್ದರು. ನಟಿ ಖುಷ್ಬೂ ತಮಿಳು, ಕನ್ನಡ ಸೇರಿ ಅನೇಕ ಭಾಷೆಗಳಲ್ಲಿ ನಟಿಸಿದ್ದಾರೆ. ತೆಲುಗಿನಲ್ಲೂ ಕಾಣಿಸಿಕೊಂಡಿದ್ದಾರೆ. ಆದರೆ, ಚಿರು ಜತೆ ನಟಿಸಿದ್ದು2006ರಲ್ಲಿ ತೆರೆಕಂಡ ‘ಸ್ಟಾಲಿನ್’ ಸಿನಿಮಾದಲ್ಲಿ ಮಾತ್ರ. ಅದು ಪೋಷಕ ಪಾತ್ರದಲ್ಲಿ! ಜೊತೆಗೆ ಸಿನಿಮಾಗಳನ್ನು ಮಾಡದಿದ್ದರೂ,

ನಟಿ, ಸಂಸದೆ ಸುಮಲತಾ ಅಂಬರೀಷ್,ಕನ್ನಡದ ಜೊತೆಗೆ ತೆಲುಗಿನಲ್ಲೂ ಸಖತ್ ಫೇಮಸ್ ಆಗಿದ್ದವರು. 80ರ ದಶಕದಲ್ಲಿ ಚಿರಂಜೀವಿ ಜತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದರು. ಜಪಗತಿ ಬಾಬು, ವಿಕ್ಟರಿ ವೆಂಕಟೇಶ್, ರಾಧಿಕಾ ಶರತ್ಕುಮಾರ್ ಜತೆ ಅವರು ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ. ಚಿರು-ಖುಷ್ಬೂ ನಡುವಿನ ಒಡನಾಟ ಮಾತ್ರ ಹಾಗೆಯೇ ಇದೆ. ಅದಕ್ಕೆ ಸಾಕ್ಷಿ ಈ ಕ್ಯೂಟ್ ಸೆಲ್ಫಿ.ಕೇರಳದಲ್ಲಿ ಮೋಹನ್ಲಾಲ್ ಸೂಪರ್ ಸ್ಟಾರ್. ಟಾಲಿವುಡ್ನಲ್ಲಿ ಚಿರಂಜೀವಿ ಮೆಗಾ ಸ್ಟಾರ್. ಈ ಇಬ್ಬರು ಕಲಾವಿದರು ಒಂದೇ ಫ್ರೇಮ್ನಲ್ಲಿ ಸೆರೆ ಸಿಕ್ಕಿದ್ದಾರೆ. ಅದಕ್ಕೆ ಕಾರಣವಾಗಿದ್ದು ಚಿರು ಮನೆಯ ಪಾರ್ಟಿ.

ಮಲಯಾಳಂ ‘ಸೂಪರ್ ಸ್ಟಾರ್’ ಮೋಹನ್ಲಾಲ್ ಜತೆ ನಟಿ ರಾಧಿಕಾ ಶರತ್ಕುಮಾರ್ ಗೆಳೆತನ ಇಂದು ನಿನ್ನೆಯದಲ್ಲ. 1985ರಲ್ಲೇ ಈ ಇಬ್ಬರು ಕಲಾವಿದರು ಒಟ್ಟಿಗೆ ‘ಕೂಡುಮ್ ಥೇಡಿ’ ಚಿತ್ರದಲ್ಲಿ ನಟಿಸಿದ್ದರು. ವಿಶೇಷವೆಂದರೆ, ಕಳೆದ ಸೆಪ್ಟಂಬರ್ನಲ್ಲಿ ತೆರೆಕಂಡ ‘ಇಟ್ಟಿಮಾನಿ; ಮೇಡ್ ಇನ್ ಚೀನಾ’ ಚಿತ್ರದಲ್ಲೂ ಇಬ್ಬರು ಒಟ್ಟಿಗೆ ಕಾಣಿಸಿಕೊಂಡಿದ್ದರು. ಚಿರು ಮನೆಯ ಪಾರ್ಟಿಯಲ್ಲಿ ಕ್ಯಾಮರಾಕ್ಕೆ ಜೊತೆಯಾಗಿ ಕಾಣಿಸಿಕೊಂಡ ಕ್ಷಣ.ಚಿರು ಮನೆಯಲ್ಲಿ 80ರ ದಶಕ ರಿ-ಯೂನಿಯನ್ ಕಾರ್ಯಕ್ರಮದಲ್ಲಿ ವಿಶೇಷವಾಗಿ ಗಮನಸೆಳೆದ ನಟಿ ಖುಷ್ಬೂ. ಈ ವೇಳೆ ನಟಿ ರಾಧಿಕಾ ಶರತ್ಕುಮಾರ್ ಮತ್ತು ನಾಧಿಯಾ ಅವರ ಜತೆ ಸೆಲ್ಫೀ ಕ್ಲಿಕ್ಕಿಸಿಕೊಂಡು ಸಂಭ್ರಮಸಿದರು.

ಚಿರು ಕುಟುಂಬದೊಂದಿಗೆ ರಾಧಿಕಾ ಶರತ್ ಕುಮಾರ್ ಫ್ಯಾಮಿಲಿ ಮೊದಲಿನಿಂದಲೂ ಉತ್ತಮ ಒಡನಾಡ ಹೊಂದಿದೆ. ರೀ-ಯೂನಿಯನ್ ಕಾರ್ಯಕ್ರಮದಲ್ಲಿ ಭೇಟಿಯಾದಾಗ ಚಿರು ಪುತ್ರ ರಾಮ್ ಚರಣ್ ಜತೆ ಕಾಣಿಸಿಕೊಂಡರು.ಬರೀ ದಕ್ಷಿಣದ ಕಲಾವಿದರು ಮಾತ್ರವಲ್ಲ, ಬಾಲಿವುಡ್ನ ಜಾಕಿಶ್ರಾಫ್ ಕೂಡ ಈ ಕಾರ್ಯಕ್ರಮದಲ್ಲಿ ಹಾಜರಿದ್ದರು. ನಟಿ ರಾಧಿಕಾ ಶರತ್ಕುಮಾರ್, ಚಿರಂಜೀವಿ ಮತ್ತು ರಾಮ್ ಚರಣ್ ಅವರೊಂದಿಗೆ ಜಾಕಿ ಅವರ ಸಖತ್ ಪೋಸ್.ತಮ್ಮ ಕಾಲದ ನಾಯಕಿಯರ ಜತೆ ಗ್ರೂಪ್ ಫೋಟೋಗೆ ಸಖತ್ ಪೋಸ್ ನೀಡಿದ್ದಾರೆ ಚಿರು. ಖುಷ್ಬೂ, ಸುಹಾಸಿನಿ ಮಣಿರತ್ನಂ, ರಾಧಿಕಾ ಶರತ್ಕುಮಾರ್ ಮುಂತಾದವರು ಅವರೊಂದಿಗೆ ಸಾಥ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತ್ರಿವಳಿ ತಲಾಖ್ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್ ಅನ್ನು ರದ್ದು ಪಡಿಸಿದೆ.
ದಟ್ಟವಾದ, ಕಪ್ಪನೆಯ ಕೂದಲು ಮಹಿಳೆಯರ ಕನಸು. ಸುಂದರ ಕೂದಲು ಪಡೆಯಲು ಏನೆಲ್ಲ ಕಸರತ್ತು ಮಾಡ್ತಾರೆ. ಮಾರುಕಟ್ಟೆಯಲ್ಲಿ ಕೂದಲು ಬೆಳವಣಿಗೆಗೆ ಸಿಗುವ ಎಲ್ಲ ಉತ್ಪನ್ನಗಳನ್ನು ಕೊಂಡು ತಂದು ಪ್ರಯೋಗ ಮಾಡ್ತಾರೆ. ಆದ್ರೆ ಇದರಿಂದ ಕೂದಲು ಬೆಳೆಯುವ ಬದಲು ಮತ್ತಷ್ಟು ಕೂದಲು ಉದುರಲು ಕಾರಣವಾಗುತ್ತದೆ. ಮನೆಯಲ್ಲಿ ಸುಲಭವಾಗಿ ಸಿಗುವ ದಾಸವಾಳದ ಹೂ ನಿಮ್ಮ ಕೂದಲಿಗೆ ಹೇಳಿ ಮಾಡಿಸಿದ ಔಷಧ. ಕೂದಲು ಉದುರುವುದನ್ನು ತಡೆಯುವ ಜೊತೆಗೆ ಗಟ್ಟಿಯಾದ ಸುಂದರ ಕಪ್ಪು ಕೂದಲು ಬೆಳೆಯಲು ನೆರವಾಗುತ್ತದೆ.ದಾಸವಾಳದ ಜೊತೆ ಬೇರೆ ಬೇರೆ ಉತ್ಪನ್ನಗಳನ್ನು ಬೆರೆಸಿ…
ಬೈಕ್ಗಳ ರಾಜ ರಾಯಲ್ ಎನ್ಫೀಲ್ಡ್ ಬೈಕ್, ಒಂದು ಕಾಲದಲ್ಲಿ ಸಾಮಾನ್ಯ ಜನರಿಗೆ ಇದರ ಹೆಸರು ಕೇಳಿದ್ರೆ ಸಾಕು, ಮೈ ಜುಮ್ಮೆನ್ನುತ್ತಿತ್ತು. ಯಾಕೆಂದ್ರೆ ಈ ಬೈಕ್’ನ್ನು ಒಮ್ಮೆ ಆದ್ರೂ ಓಡಿಸಬೇಕು ಅಂತ ಮನಸ್ಸಿಗೂ ಬಂದ್ರೂ, ಸಾಮಾನ್ಯ ಜನರ ಕೈಗೆ ಇದು ಎಟುಕುತ್ತಿರಲಿಲ್ಲ.
ಸಮಾಜ ಸೇವೆ ಮಾಡುವುದು ಅಂದರೆ ಅಷ್ಟೊಂದು ಸುಲಭದ ಮಾತಲ್ಲ ಯಾಕೆಂದರೆ. ಮಾನವ ಬುದ್ದಿ ಜೀವಿಯಾಗಿದ್ದರು ಕೆಲವೊಂದು ಸಾರಿ ಬುದ್ದಿ ಇಲ್ಲದ ರೀತಿಯಲ್ಲಿ ವರ್ತಿಸುತ್ತಾನೆ ಅಂತ ಜನಗಳ ಮದ್ಯೆ ಒಂದು ಕೆಲಸವನ್ನು ಮಾಡ ಬೇಕೆಂದರೆ ಸುಲಭದ ಕೆಲಸ ಆಗಿರುವುದಿಲ್ಲ.ಅಲ್ಲದೆ ಒಂದು ಯಶಸ್ಸು ಕಾಣ ಬೇಕೆಂದರೆ ಅದರ ಹಿಂದಿನ ಕಷ್ಟಗಳು ಅನುಭವಿಸುವವರಿಗೆ ಮಾತ್ರ ಗೊತ್ತಿರುತ್ತದೆ.
ನಮ್ಮ ಮೆಟ್ರೋ ಬೆಂಗಳೂರಿಗೆ ಮತ್ತೊಂದು ಗರಿ ಸೇರ್ಪಡೆಯಾಗಲಿದೆ. ಮೆಟ್ರೋ ಪಿಲ್ಲರ್ ಗಳು ಡಬಲ್ ಡೆಕ್ಕರ್ ಆಗಿ ಸಂಚಾರ ಸೇವೆ ನೀಡಲಿದೆ. ಸಿಲಿಕಾನ್ ಸಿಟಿ ಬೆಂಗಳೂರಿಗೆ ಹೈಟೆಕ್ ಟಚ್ ಹೆಚ್ಚಾಗಲಿದೆ. ಜಯದೇವ ಆಸ್ಪತ್ರೆ ಮುಂಭಾಗ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಡಬಲ್ ಡೆಕ್ಕರ್ ಮೆಟ್ರೋ ಬರಲಿದೆ. ಅಂದ್ರೆ ಒಂದೇ ಮಾರ್ಗದಲ್ಲಿ ಒಂದೇ ಪಿಲ್ಲರ್ ಮೇಲೆ ಮೆಟ್ರೋ ಹಾಗೂ ಕಾರು, ಬೈಕ್ ಗಳು ಸಂಚರಿಸುವ ಡಬಲ್ ಟ್ರ್ಯಾಕ್ ಬರಲಿದೆ. ನಾಗಪುರದಲ್ಲಿ ಡಬಲ್ ಟ್ರ್ಯಾಕ್ ಮೆಟ್ರೋ ಕಂ ರೋಡ್ ಲೈನ್ ಮಾಡಲಾಗಿದೆ. ಈಗ…
ಸ್ನೇಹಿತರೆ ನಾವು ಮನುಷ್ಯತ್ವದ ಬಗ್ಗೆ ಮತ್ತು ಮನುಷ್ಯರು ಮಾಡುವ ಸಹಾಯದ ಬಗ್ಗೆ ಕೇಳಿರುತ್ತೇವೆ ಮತ್ತು ನೋಡಿರುತ್ತೇವೆ, ಆದರೆ ಪ್ರಾಣಿಗಳು ತೋರುವ ಪ್ರೀತಿಯ ಬಗ್ಗೆ ನಾವು ನೋಡಿರುವುದು ಮತ್ತು ಕೇಳಿರುವುದು ತುಂಬಾ ಕಡಿಮೆ. ಸ್ನೇಹಿತರೆ ನಿಮ್ಮ ಹೃದಯಕ್ಕೆ ಹತ್ತಿರವಾಗುವ ಘಟನೆಯೊಂದು ನಮ್ಮ ದೇಶದಲ್ಲಿ ನಡೆದಿದ್ದು ಅದನ್ನ ಕೇಳಿದ ಜನರ ಕಣ್ಣಲ್ಲಿ ಕೂಡ ನೀರು ಬಂದಿದೆ. ತುಂಬಾ ಜನರು ಅವರ ಕಷ್ಟಗಳನ್ನ ನಿವಾರಣೆ ಮಾಡಿಕೊಳ್ಳುವುದರಲ್ಲಿಯೇ ದಿನವನ್ನ ಕಳೆಯುತ್ತಾರೆ, ತಮ್ಮ ಕಷ್ಟಗಳನ್ನ ಬಗೆಹರಿಸಿಕೊಳ್ಳುವುದಕ್ಕೆ ಅವರಿಗೆ ಸಮಯ ಇರುವುದಿಲ್ಲ ಇಂತಹ ಸಮಯದಲ್ಲಿ ಬೇರೆಯವರ…