ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕತ್ತಿನ ಭಾಗದಲ್ಲಿ ಪಾರ್ಶ್ವವಾಯು ಸಮಸ್ಯೆಯನ್ನು ಹೊಂದಿರುವ 65 ವರ್ಷದ ವೃದ್ಧರೊಬ್ಬರು ಕೈ ಚಲನೆಯನ್ನು ಊಹಿಸಿಕೊಳ್ಳುವ ಮೂಲಕ ಬರವಣಿಗೆಯನ್ನು ಸಾಧಿಸಿದ್ದಾರೆ. ಬ್ರೈನ್ ಕಂಪ್ಯೂಟರ್ ಇಂಟರ್ಫೇಸ್ (BCI) ಸಾಧನವನ್ನು ಬಳಸಿ ಹೆಚ್ಚು ಕಾರ್ಯಕ್ಷಮತೆಯುಳ್ಳ ಮೆದುಳು ಪಠ್ಯದ ಮೂಲಕ ಸಂವಹನವನ್ನು ಸಾಧಿಸಿದೆ. ಅಮೆರಿಕದ ನರವಿಜ್ಞಾನಿಗಳು ಈ ಸಾಧನೆಯನ್ನು ಸಂಶೋಧನಾ ಸಹಯೋಗಿ ಬ್ರೈನ್ಗೇಟ್ನೊಂದಿಗೆ ಸೇರಿ ಅಭಿವೃದ್ಧಿಪಡಿಸಿದ್ದಾರೆ.

ಬ್ರೈನ್ ಕಂಪ್ಯೂಟರ್ ಇಂಟರ್ಫೇಸ್ ಎನ್ನುವ ಸಾಧನವು ಮೆದುಳಿನ ಮೇಲೆ ಚಿಪ್ಗಳಿಂದ ಕಾರ್ಯ ನಿರ್ವಹಿಸುತ್ತದೆ. ಅದು ಬಳಕೆದಾರರು ಯೋಚಿಸಿದಾಗ ಮೆದುಳಿನ ಚಟುವಟಿಕೆಯನ್ನು ಪತ್ತೆ ಮಾಡುತ್ತದೆ ಮತ್ತು ಅದನ್ನು ಕಂಪ್ಯೂಟರ್ನಿಂದ ಓದಬಲ್ಲ ಸಂಕೇತಗಳಾಗಿ ಭಾಷಾಂತರಿಸುತ್ತದೆ. ಇದನ್ನು ಅಳವಡಿಸಿರುವ ವ್ಯಕ್ತಿ ತಾನು ಬರೆಯುತ್ತಿದ್ದೇನೆ ಎಂದು ಊಹಿಸಿದಾಗ ಬ್ರೈನ್ ಚಿಪ್ನಲ್ಲಿರುವ ಸೆನ್ಸಾರ್ಗಳು ಆತನ ನ್ಯೂರಾನ್ಗಳಿಂದ ಸಿಗ್ನಲ್ಗಳನ್ನು ತೆಗೆದುಕೊಳ್ಳುತ್ತವೆ. ಈ ಸಿಗ್ನಲ್ಗಳು ಮೆಷಿನ್ ಲರ್ನಿಂಗ್ ಆಲ್ಗರಿದಮ್ಸ್ನಿಂದ ಗುರುತಿಸಿಕೊಂಡು ನೈಜ ಸಮಯದಲ್ಲಿ ನೀಡುತ್ತದೆ.
ಈ ಇಂಟರ್ಫೇಸ್ ಬಳಸಿಕೊಂಡು ಕಂಪ್ಯೂಟರ್ ನೇರವಾಗಿ ವ್ಯಕ್ತಿಯ ಮೆದುಳಿನಿಂದ ಬರುವ ಸೂಚನೆಗಳನ್ನು ಅನುಸರಿಸುತ್ತದೆ. ಆ ಮೂಲಕ ಆ ವ್ಯಕ್ತಿಯೂ ಅದನ್ನು ಯೋಚಿಸುತ್ತಾ, ಕಂಪ್ಯೂಟರ್ ಮೂಲಕ ಆ ಕೆಲಸವನ್ನು ಮಾಡಬಹುದು. ಈ ಪ್ರಕರಣದಲ್ಲಿ ವ್ಯಕ್ತಿಯ ಕೈಗಳು ಬೆನ್ನು ಹುರಿ ಗಾಯದಿಂದ ಪಾರ್ಶ್ವವಾಯುವಿಗೆ ತುತ್ತಾಗಿದ್ದು, ಕೈಗಳ ಚಲನೆಯನ್ನು ಊಹಿಸಿಕೊಂಡಿದ್ದಾರೆ. ಆ ಮೂಲಕ ಒಂದು ನಿಮಿಷದಲ್ಲಿ 90 ಅಕ್ಷರಗಳನ್ನು ಶೇಕಡಾ 94 ರಷ್ಟು ನಿಖರವಾಗಿ ಬರೆಯಲು ಸಾಧ್ಯವಾಗಿದೆ.

ಆಫ್ಲೈನ್ ಜೆನೆರಲ್ ಪರ್ಪಸ್ ಸ್ವಯಂ ತಿದ್ದುವಿಕೆಯಿಂದ ನಿಖರತೆಯೂ ಶೇಕಡಾ 99 ರಷ್ಟು ಇತ್ತು. ಇದು ದೊಡ್ಡ ಸಾಧನೆಯಾಗಿದ್ದು, ಒಂದು ನಿಮಿಷದಲ್ಲಿ 115 ಅಕ್ಷರಗಳಿಗೆ 90 ಅಕ್ಷರಗಳ ಸಾಮರ್ಥ್ಯವನ್ನು ಹೋಲಿಸಬಹುದಾದ ಕಾರಣ ಇದು ನಿಜವಾಗಿಯೂ ಅತ್ಯುತ್ತಮ ಸಾಧನೆಯಾಗಿದೆ. ಸ್ಮಾರ್ಟ್ಫೋನ್ನಲ್ಲಿ ಈ ವಯಸ್ಸಿನ ವ್ಯಕ್ತಿಯ ಟೈಪಿಂಗ್ ವೇಗವನ್ನು ಗಮನಿಸಿ ಈ ತೀರ್ಮಾನಕ್ಕೆ ಬರಲಾಗಿದೆ.
ಈ ಸಾಧನೆಯೂ ಹಿಂದಿನ ‘ಮೆದುಳಿನಿಂದ ಪಠ್ಯದವರೆಗಿನ ಸಂವಹನ’ದ ದಾಖಲೆಗಳಿಗಿಂತ ದುಪ್ಪಟ್ಟಾಗಿದೆ. ಹೊಸ ವ್ಯವಸ್ಥೆಯು ಪಾರ್ಶ್ವವಾಯು ಪೀಡಿತರಿಗೆ ತಮ್ಮ ದೈನಂದಿನ ಜೀವನದಲ್ಲಿ ಕಷ್ಟ ಪಡದೇ ಸರಾಗವಾಗಿ ಸಂವಹನ ನಡೆಸಲು ಸಕ್ರಿಯಗೊಳಿಸುವ ಮೂಲಕ ಸಹಾಯ ಮಾಡುತ್ತದೆ’ ಎಂದು ವಿಜ್ಞಾನಿಗಳು ನಂಬಿದ್ದಾರೆ. ಮಾತು, ಸ್ಕ್ರೋಲಿಂಗ್, ಪಾಯಿಂಟಿಂಗ್ ಮತ್ತು ಕ್ಲಿಕ್ ಮಾಡುವಂತಹ ಇತರ ಕಾರ್ಯಗಳಿಗೆ ಅನುಕೂಲವಾಗುವಂತಹ ಸಮಗ್ರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ವಿಜ್ಞಾನಿಗಳಿಗೆ ಈ ಯಶಸ್ಸು ಕಾರಣವಾಗುತ್ತದೆ.

ಇನ್ನು ಈ ಅಧ್ಯಯನವು ಮೇ 12 ರಂದು Nature ನಲ್ಲಿ ಪ್ರಕಟವಾಗಿದೆ. ಸ್ಪೇಸ್ ಎಕ್ಸ್ನ ಸಿಇಒ ಎಲಾನ್ ಮಸ್ಕ್ ‘ಮೆದುಳಿನಿಂದ ಬ್ರೈನ್ ಟು ಮೆಷಿನ್ ಇಂಟರ್ಫೇಸ್’ ಎನ್ನುವ ನ್ಯೂರೋ ಲಿಂಕ್ ಅನ್ನು ಸೆಪ್ಟೆಂಬರ್ 2020 ರಂದು ಅನಾವರಣಗೊಳಿಸಿದ ನಂತರ ಬ್ರೈನ್ ಚಿಪ್ಗಳು ಕಳೆದ ವರ್ಷವೂ ಸುದ್ದಿಯಲ್ಲಿತ್ತು.
Published by : Mayoon N / Biotechnologist / Director of DRM Career Build Center, kolar.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾಜಿಕ ಜಾಲತಾಣಗಳಲ್ಲಿ ಒಂದಾಗಿರುವ ವಾಟ್ಸಪ್ ಭಾರತದಲ್ಲಿ ತನ್ನ ಬಿಸಿನೆಸ್ ಆ್ಯಪ್ ಅನ್ನು ಬಿಡುಗಡೆಗೊಳಿಸಿದ ಮೊದಲ ವರ್ಷದಲ್ಲಿ 6.84 ಕೋಟಿ ರೂ. ಆದಾಯ ಗಳಿಸುವಲ್ಲಿ ಯಶಸ್ವಿಯಾಗಿದೆ. ಅತ್ಯಧಿಕ ಸಂಖ್ಯೆಯ ಬಳಕೆದಾರರನ್ನು ಹೊಂದಿರುವ ವಾಟ್ಸಪ್ ದೇಶದಲ್ಲಿ ಈಗ ಆದಾಯ ಗಳಿಕೆಯ ಹಾದಿಯತ್ತ ಹೊರಳಿದೆ. ಬಿಸಿನೆಸ್ ಆವೃತ್ತಿ ಮೂಲಕ ವಾಟ್ಸಪ್ ಮೊದಲ ವರ್ಷದ ಗಳಿಕೆಯನ್ನು ಬಹಿರಂಗಪಡಿಸಿದೆ. ರಿಜಿಸ್ಟ್ರಾರ್ ಆಫ್ ಕಂಪನೀಸ್ಗೆ ವಾಟ್ಸಪ್ ಸಲ್ಲಿಸಿರುವ ದಾಖಲಾತಿಗಳ ಪ್ರಕಾರ, 2019 ರಲ್ಲಿಕಂಪನಿ 6.84 ಕೋಟಿ ರೂ. ಆದಾಯ ಮತ್ತು 57 ಲಕ್ಷ ರೂ. ಲಾಭ ಗಳಿಸಿದೆ. ತನ್ನ…
ಮಹಾರಾಷ್ಟ್ರ, ಹರಿಯಾಣ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇಂದು ಘೋಷಿಸುವ ಸಾಧ್ಯತೆ ಇದೆ. ಇಂದು ಮಧ್ಯಾಹ್ನ 12 ಗಂಟೆಗೆ ಚುನಾವಣಾ ಆಯೋಗದ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯನ್ನು ಕರೆಯಲಾಗಿದ್ದು, ಈ ಸಂದರ್ಭದಲ್ಲಿ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಲಾಗುತ್ತದೆ ಎನ್ನಲಾಗಿದೆ. ಮಹಾರಾಷ್ಟ್ರ ವಿಧಾನಸಭಾ ಅವಧಿ ಮುಂದಿನ ತಿಂಗಳು ಅಂತ್ಯವಾಗಲಿದ್ದು, ಹರಿಯಾಣ ವಿಧಾನಸಭಾ ಅವಧಿ ನವಂಬರ್ 2 ಕ್ಕೆ ಕೊನೆಗೊಳ್ಳಲಿದೆ. ಇನ್ನು ಜಾರ್ಖಂಡ್ ವಿಧಾನಸಭಾ ಅವಧಿ ಡಿಸೆಂಬರ್ 27ಕ್ಕೆ ಅಂತ್ಯವಾಗಲಿದ್ದು, ದೀಪಾವಳಿಗೂ ಮುನ್ನ…
ಬೆಂಗಳೂರು, ಮೇ 25: ಮುಂದಿನ ತಿಂಗಳಿನಿಂದ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಹಾಲಿ ಟಿಕೆಟ್ ದರಕ್ಕಿಂತ ಶೇ 20ರಷ್ಟು ದರವನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದೆ. ಕಾರ್ಮಿಕರ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ. ಬಸವರಾಜ್ ಹೇಳಿದ್ದಾರೆ. ಕಳೆದ ಏಳು ವರ್ಷಗಳಿಂದ ಬಸ್ ಪ್ರಯಾಣ ದರದಲ್ಲಿ ಏರಿಕೆ ಮಾಡಿಲ್ಲ. ಪ್ರಸ್ತುತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಭಾರಿ ಹೆಚ್ಚಳವಾಗಿವೆ. ಸಾರಿಗೆ ಸಂಸ್ಥೆಗಳ ವೆಚ್ಚ,…
ಸದ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗುತ್ತಿದೆ. ಈ ನಡುವೆ ಸಿಆರ್ಪಿಎಫ್ ಯೋಧರೊಬ್ಬರು ಕರ್ತವ್ಯ ಸಲ್ಲಿಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ ಫೋಟೋ ನೋಡಿದವರು ಆ ಚಳಿಯಲ್ಲೂ ಎದೆಗುಂದದೆ ಕರ್ತವ್ಯ ಸಲ್ಲಿಸುತ್ತಿರುವ ಯೋಧನಿಗೆ ಸಲಾಂ ಎಂದಿದ್ದಾರೆ. ನಮ್ಮ ಸೈನಿಕರು ನಮ್ಮ ಹೆಮ್ಮೆ ಎಂದು ನಾವು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಆದರೆ ನಮ್ಮ ಸೈನಿಕರು ನಮಗಾಗಿ ಪ್ರತಿದಿನ ಪಡುವ ಕಷ್ಟ ಅಷ್ಟಿಷ್ಟಲ್ಲ. ಚಳಿಗಾಳಿ ಹಿಮಮಳೆ ಯಾವುದನ್ನೂ ಲೆಕ್ಕಿಸದೆ ಸೈನಿಕರು ಬಾರ್ಡರ್ ನಲ್ಲಿ ನಮಗಾಗಿ ಪ್ರಾಣ ಒತ್ತೆಯಿಟ್ಟು…
ಹೋಟೆಲ್ ಹಾಗೂ ರೆಸ್ಟೋರೆಂಟ್ಗಳಲ್ಲಿ ಗ್ರಾಹಕರಿಗೆ ನೀಡಲಾಗುವ ಆಹಾರಕ್ಕೆ ಮಿತಿ ಹೇರಲು ಕೇಂದ್ರ ಸರ್ಕಾರ ಮುಂದಾಗಿದೆ. ಅಲ್ಲದೇ, ಒಬ್ಬ ವ್ಯಕ್ತಿ ಗರಿಷ್ಠ ಎಷ್ಟುಆಹಾರ ಸೇವಿಸಬಲ್ಲ ಎಂಬುದನ್ನು ಹೋಟೆಲ್ನವರೇ ತಿಳಿಸಬೇಕು ಹೇಳಿದೆ.
ಗೋವಾ ಪ್ರವಾಸಮಾಡ ಹೊರಟಿರುವ ಪ್ರವಾಸಿಗರೂ ಮತ್ತು ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ಇದ್ದು, ಇನ್ನು ಮುಂದೆ ಗೋವಾದಿಂದಹೆಚ್ಚು ಮದ್ಯದ ಬಾಟಲಿಗಳನ್ನು ಮನೆಗೊಯ್ಯಲು ಅಲ್ಲಿನ ಸರ್ಕಾರ ಅವಕಾಶ ನೀಡಿದೆ. ಅಚ್ಚರಿ ಪಡಬೇಡಿಇದು ನಿಜ…. ಹೌದು.. ಗೋವಾ ಪ್ರವಾಸಕ್ಕೆ ಹೋಗುವ ಮದ್ಯಪ್ರಿಯರಿಗೆ ಅಲ್ಲಿನ ಸರ್ಕಾರ ಸಿಹಿ ಸುದ್ದಿನೀಡಿದ್ದು, ಇನ್ನು ಮುಂದೆ ಪ್ರವಾಸ ಮುಗಿಸಿ ಮನೆಗೆ ಮರಳುವ ಇತರೆ ರಾಜ್ಯಗಳ ಪ್ರವಾಸಿಗರು ಹೆಚ್ಚುವರಿಮದ್ಯದ ಬಾಟಲಿಗಳನ್ನು ಮನೆಗೆ ಕೊಂಡೊಯ್ಯಬಹುದು. ಆದಾಯ ಕೊರತೆಯಿಂದ ಕಂಗೆಟ್ಟಿರುವ ಗೋವಾ ಸರ್ಕಾರ ಇಂತಹುದೊಂದು ಪ್ರಸ್ತಾವನೆಯನ್ನು ಮುಂದಿಟ್ಟಿದ್ದು, ಶೀಘ್ರದಲ್ಲಿಯೇ ಈ…