ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕತ್ತಿನ ಭಾಗದಲ್ಲಿ ಪಾರ್ಶ್ವವಾಯು ಸಮಸ್ಯೆಯನ್ನು ಹೊಂದಿರುವ 65 ವರ್ಷದ ವೃದ್ಧರೊಬ್ಬರು ಕೈ ಚಲನೆಯನ್ನು ಊಹಿಸಿಕೊಳ್ಳುವ ಮೂಲಕ ಬರವಣಿಗೆಯನ್ನು ಸಾಧಿಸಿದ್ದಾರೆ. ಬ್ರೈನ್ ಕಂಪ್ಯೂಟರ್ ಇಂಟರ್ಫೇಸ್ (BCI) ಸಾಧನವನ್ನು ಬಳಸಿ ಹೆಚ್ಚು ಕಾರ್ಯಕ್ಷಮತೆಯುಳ್ಳ ಮೆದುಳು ಪಠ್ಯದ ಮೂಲಕ ಸಂವಹನವನ್ನು ಸಾಧಿಸಿದೆ. ಅಮೆರಿಕದ ನರವಿಜ್ಞಾನಿಗಳು ಈ ಸಾಧನೆಯನ್ನು ಸಂಶೋಧನಾ ಸಹಯೋಗಿ ಬ್ರೈನ್ಗೇಟ್ನೊಂದಿಗೆ ಸೇರಿ ಅಭಿವೃದ್ಧಿಪಡಿಸಿದ್ದಾರೆ.

ಬ್ರೈನ್ ಕಂಪ್ಯೂಟರ್ ಇಂಟರ್ಫೇಸ್ ಎನ್ನುವ ಸಾಧನವು ಮೆದುಳಿನ ಮೇಲೆ ಚಿಪ್ಗಳಿಂದ ಕಾರ್ಯ ನಿರ್ವಹಿಸುತ್ತದೆ. ಅದು ಬಳಕೆದಾರರು ಯೋಚಿಸಿದಾಗ ಮೆದುಳಿನ ಚಟುವಟಿಕೆಯನ್ನು ಪತ್ತೆ ಮಾಡುತ್ತದೆ ಮತ್ತು ಅದನ್ನು ಕಂಪ್ಯೂಟರ್ನಿಂದ ಓದಬಲ್ಲ ಸಂಕೇತಗಳಾಗಿ ಭಾಷಾಂತರಿಸುತ್ತದೆ. ಇದನ್ನು ಅಳವಡಿಸಿರುವ ವ್ಯಕ್ತಿ ತಾನು ಬರೆಯುತ್ತಿದ್ದೇನೆ ಎಂದು ಊಹಿಸಿದಾಗ ಬ್ರೈನ್ ಚಿಪ್ನಲ್ಲಿರುವ ಸೆನ್ಸಾರ್ಗಳು ಆತನ ನ್ಯೂರಾನ್ಗಳಿಂದ ಸಿಗ್ನಲ್ಗಳನ್ನು ತೆಗೆದುಕೊಳ್ಳುತ್ತವೆ. ಈ ಸಿಗ್ನಲ್ಗಳು ಮೆಷಿನ್ ಲರ್ನಿಂಗ್ ಆಲ್ಗರಿದಮ್ಸ್ನಿಂದ ಗುರುತಿಸಿಕೊಂಡು ನೈಜ ಸಮಯದಲ್ಲಿ ನೀಡುತ್ತದೆ.
ಈ ಇಂಟರ್ಫೇಸ್ ಬಳಸಿಕೊಂಡು ಕಂಪ್ಯೂಟರ್ ನೇರವಾಗಿ ವ್ಯಕ್ತಿಯ ಮೆದುಳಿನಿಂದ ಬರುವ ಸೂಚನೆಗಳನ್ನು ಅನುಸರಿಸುತ್ತದೆ. ಆ ಮೂಲಕ ಆ ವ್ಯಕ್ತಿಯೂ ಅದನ್ನು ಯೋಚಿಸುತ್ತಾ, ಕಂಪ್ಯೂಟರ್ ಮೂಲಕ ಆ ಕೆಲಸವನ್ನು ಮಾಡಬಹುದು. ಈ ಪ್ರಕರಣದಲ್ಲಿ ವ್ಯಕ್ತಿಯ ಕೈಗಳು ಬೆನ್ನು ಹುರಿ ಗಾಯದಿಂದ ಪಾರ್ಶ್ವವಾಯುವಿಗೆ ತುತ್ತಾಗಿದ್ದು, ಕೈಗಳ ಚಲನೆಯನ್ನು ಊಹಿಸಿಕೊಂಡಿದ್ದಾರೆ. ಆ ಮೂಲಕ ಒಂದು ನಿಮಿಷದಲ್ಲಿ 90 ಅಕ್ಷರಗಳನ್ನು ಶೇಕಡಾ 94 ರಷ್ಟು ನಿಖರವಾಗಿ ಬರೆಯಲು ಸಾಧ್ಯವಾಗಿದೆ.

ಆಫ್ಲೈನ್ ಜೆನೆರಲ್ ಪರ್ಪಸ್ ಸ್ವಯಂ ತಿದ್ದುವಿಕೆಯಿಂದ ನಿಖರತೆಯೂ ಶೇಕಡಾ 99 ರಷ್ಟು ಇತ್ತು. ಇದು ದೊಡ್ಡ ಸಾಧನೆಯಾಗಿದ್ದು, ಒಂದು ನಿಮಿಷದಲ್ಲಿ 115 ಅಕ್ಷರಗಳಿಗೆ 90 ಅಕ್ಷರಗಳ ಸಾಮರ್ಥ್ಯವನ್ನು ಹೋಲಿಸಬಹುದಾದ ಕಾರಣ ಇದು ನಿಜವಾಗಿಯೂ ಅತ್ಯುತ್ತಮ ಸಾಧನೆಯಾಗಿದೆ. ಸ್ಮಾರ್ಟ್ಫೋನ್ನಲ್ಲಿ ಈ ವಯಸ್ಸಿನ ವ್ಯಕ್ತಿಯ ಟೈಪಿಂಗ್ ವೇಗವನ್ನು ಗಮನಿಸಿ ಈ ತೀರ್ಮಾನಕ್ಕೆ ಬರಲಾಗಿದೆ.
ಈ ಸಾಧನೆಯೂ ಹಿಂದಿನ ‘ಮೆದುಳಿನಿಂದ ಪಠ್ಯದವರೆಗಿನ ಸಂವಹನ’ದ ದಾಖಲೆಗಳಿಗಿಂತ ದುಪ್ಪಟ್ಟಾಗಿದೆ. ಹೊಸ ವ್ಯವಸ್ಥೆಯು ಪಾರ್ಶ್ವವಾಯು ಪೀಡಿತರಿಗೆ ತಮ್ಮ ದೈನಂದಿನ ಜೀವನದಲ್ಲಿ ಕಷ್ಟ ಪಡದೇ ಸರಾಗವಾಗಿ ಸಂವಹನ ನಡೆಸಲು ಸಕ್ರಿಯಗೊಳಿಸುವ ಮೂಲಕ ಸಹಾಯ ಮಾಡುತ್ತದೆ’ ಎಂದು ವಿಜ್ಞಾನಿಗಳು ನಂಬಿದ್ದಾರೆ. ಮಾತು, ಸ್ಕ್ರೋಲಿಂಗ್, ಪಾಯಿಂಟಿಂಗ್ ಮತ್ತು ಕ್ಲಿಕ್ ಮಾಡುವಂತಹ ಇತರ ಕಾರ್ಯಗಳಿಗೆ ಅನುಕೂಲವಾಗುವಂತಹ ಸಮಗ್ರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ವಿಜ್ಞಾನಿಗಳಿಗೆ ಈ ಯಶಸ್ಸು ಕಾರಣವಾಗುತ್ತದೆ.

ಇನ್ನು ಈ ಅಧ್ಯಯನವು ಮೇ 12 ರಂದು Nature ನಲ್ಲಿ ಪ್ರಕಟವಾಗಿದೆ. ಸ್ಪೇಸ್ ಎಕ್ಸ್ನ ಸಿಇಒ ಎಲಾನ್ ಮಸ್ಕ್ ‘ಮೆದುಳಿನಿಂದ ಬ್ರೈನ್ ಟು ಮೆಷಿನ್ ಇಂಟರ್ಫೇಸ್’ ಎನ್ನುವ ನ್ಯೂರೋ ಲಿಂಕ್ ಅನ್ನು ಸೆಪ್ಟೆಂಬರ್ 2020 ರಂದು ಅನಾವರಣಗೊಳಿಸಿದ ನಂತರ ಬ್ರೈನ್ ಚಿಪ್ಗಳು ಕಳೆದ ವರ್ಷವೂ ಸುದ್ದಿಯಲ್ಲಿತ್ತು.
Published by : Mayoon N / Biotechnologist / Director of DRM Career Build Center, kolar.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ದೇಶದಲ್ಲಿ ಪ್ಲಾಸ್ಟಿಕ್ ನಿಷೇದಕ್ಕೆ ಇರುವ ಶಿಕ್ಷೆ ನಮ್ಮ ಭಾರತಕ್ಕೂ ಬಂದ್ರೆ ಸ್ವಚ್ಛ ಭಾರತ ಆಗೋದ್ರಲ್ಲಿ ಯಾವುದೇ ಅನುಮಾನವಿಲ್ಲ ಯಾಕೆ ಗೊತ್ತಾ ಅಲ್ಲಿನ ಶಿಕ್ಷೆ ತುಂಬ ಕಠಿಣವಾಗಿದೆ.ಭಾರತದಲ್ಲಿ ಪ್ಲಾಸ್ಟಿಕ್ ನಿಷೇಧವಾಗಿದ್ದರೂ ಇದರ ಬಳಕೆ ಮಾತ್ರ ನಿಂತಿಲ್ಲ. ಆಗಾಗ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ನಡೆಸಿ ಕ್ರಮ ಕೈಗೊಳ್ಳುತ್ತಾರೆ. ಆದರೆ ಆಫ್ರಿಕಾ ಖಂಡದಲ್ಲಿರುವ ಕೀನ್ಯಾ ದೇಶ ಪ್ಲಾಸ್ಟಿಕ್ ಬಳಸುವವರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಕಾನೂನು ಜಾರಿಗೆ ತಂದಿದೆ. ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ ಮತ್ತು ಪ್ಲಾಸ್ಟಿಕ್ ಬ್ಯಾಗ್ ಗಳನ್ನು…
ಕೆಜಿಎಫ್ ಪರಭಾಷೆಗಳಿಗೆ ಡಬ್ ಆಗಿ ಧೂಳು ಎಬ್ಬಿಸಿದ ಬೆನ್ನಲ್ಲೇ ಇತ್ತ ಬೇರೆ ಭಾಷೆಯ ಚಲನ ಚಿತ್ರಗಳು ಸಹ ಡಬ್ ಆಗಿ ಬಿಡುಗಡೆಯಾಗಲು ಸಿದ್ಧವಾಗಿ ನಿಂತಿವೆ. ಇಷ್ಟು ದಿನ ಬೇರೆ ಭಾಷೆಯ ಚಲನ ಚಿತ್ರಗಳು ಕನ್ನಡ ಭಾಷೆಗೆ ಡಬ್ ಆಗಲು ಭಾರಿ ವಿರೋಧ ವಿತ್ತು. ಡಬ್ ವಿಷಯವನ್ನು ಮಾತನಾಡುವಂತೂ ಇರಲಿಲ್ಲ. ಅದರಲ್ಲೂ ಕನ್ನಡ ಚಲನಚಿತ್ರ ಮಂಡಲಿಯಂತೂ ಇದನ್ನು ತೀವ್ರವಾಗಿ ವಿರೋಧಿಸಿತ್ತು. ಕಾರಣ ಕನ್ನಡ ಚಲನಚಿತ್ರ ರಂಗವು ಮೊದಲೇ ಮಾರ್ಕೆಟಿಂಗ್ ವಿಚಾರದಲ್ಲಿ ಹಿಂದೆ ಇರುವುದರಿಂದ ಪರಭಾಷಾ ಚಿತ್ರಗಳು ಡಬ್ ಆದರೆ…
ಹಸಿ ಕೊತ್ತಂಬರಿ ಸೊಪ್ಪನ್ನು ಪ್ರತಿದಿನ ಆಹಾರದಲ್ಲಿ ಬಳಸುವುದರಿಂದ ಎ.ಬಿ1, ಬಿ2, ಸಿ ಜೀವಸತ್ವಗಳು ಮತ್ತು ಕಬ್ಬಿಣ ಇವುಗಳ ಅಭಾವದಿಂದ ತಲೆದೋರುವ ವ್ಯಾಧಿಗಳ ಭಯವಿರುವುದಿಲ್ಲ. ಒಂದು ಟೀ ಚಮಚ ಕೊತ್ತಂಬರಿ ಸೊಪ್ಪಿನ ರಸವನ್ನು ಅಷ್ಟೇ ಪ್ರಮಾಣದ ಜೇನುತುಪ್ಪ ದೊಂದಿಗೆ ಮಿಶ್ರಮಾಡಿ ಪ್ರತಿದಿನ ರಾತ್ರಿ ಸೇವಿಸುತ್ತ್ತಿದ್ದರೆ ಮೆದುಳಿನ ಕ್ರಿಯಾಶಕ್ತಿ ಹೆಚ್ಚುವುದು. ಕಣ್ಣು, ಕಿವಿ, ಹೃದಯ, ಶ್ವಾಸಕೋಶ ಕ್ರಿಯೆ ಚುರುಕಿನಿಂದ ನಡೆಯುವುದು. ಕ್ಷಯ ಮತ್ತು ಉಬ್ಬಸ ರೋಗಗಳ ಬಾಧೆ ಇರುವುದಿಲ್ಲ. ಕೊತ್ತಂಬರಿ ಸೊಪ್ಪನ್ನು ಹಲ್ಲುಗಳಿಂದ ಅಗಿಯುವುದರಿಂದ ದಂತಕ್ಷಯ ನಿವಾರಣೆಯಾಗುವುದು. ಬಾಯಿಯಿಂದ ದುರ್ಗಂಧ…
ಇನ್ನೇನು ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರ ಬರ್ತಿದೆ.ನಮ್ಮಲ್ಲಿ ವೋಟರ್ ಕಾರ್ಡ್ ಇದ್ರೂ ಕೂಡ ಮತದಾರರ ಪಟ್ಟಿಯಲ್ಲಿ ನಮ್ಮ ಹೆಸರು ಇದೆಯೋ,ಇಲ್ಲವೋ ಎಂಬ ಅನುಮಾನ ಕಾಡುವುದು ಸಹಜ.
ಆದ್ರೆ ನಿಮಗೆ ಅನುಮಾನ ಬೇಡ.ನಿಮ್ಮ ಹೆಸರು ಅಥವಾ ಬೇರೆ ಯಾರದೇ ಹೆಸರಾಗಲಿ ಮತದಾರರ ಪಟ್ಟಿಯಲ್ಲಿ ಇದೆಯೋ ಇಲ್ಲವೆಂಬುದನ್ನು ನಿಮ್ಮ ಮೊಬೈಲ್’ನಲ್ಲಿ ನೀವೇ ನೋಡಬಹುದು.
ಅನ್ನಪೂರ್ಣೇಶ್ವರಿ ದೇವಿ ನಿತ್ಯಹರಿದ್ವರ್ಣ ಬೆಟ್ಟಗಳ ಮಧ್ಯೆ ನೆಲೆಸಿದ್ದಾಳೆ. ಕೈಲಾಸದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಈ ತಾಯಿ ವರ್ಷವಿಡೀ ಭಕ್ತರನ್ನು ಆಕರ್ಷಿಸುತ್ತಾಳೆ. ದೂರದಿಂದ ಬಂದವರಿಗೆ ರಾತ್ರಿ ನಿವಾಸದ ವಸತಿ ಮತ್ತು ಉಚಿತ ಆಹಾರವನ್ನು ಒದಗಿಸಲಾಗುತ್ತದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಈ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಸನ್ನಿಧಿ ಹಿಂದೂಗಳಿಗೆ ಬಹಳ ಪವಿತ್ರವಾದ ಸ್ಥಳವಾಗಿದೆ. ದೇವಿಯ ಮುಖ್ಯ ದೇವತೆ ಆದಿ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟಿದೆ. ತಾಯಿ ಅನ್ನಪೂರ್ಣೇಶ್ವರಿ ನೆಲೆಸಿರುವ ಈ ಹೊರನಾಡು 831 ಮೀ (2,726 ಅಡಿ) ಎತ್ತರದಲ್ಲಿದೆ.. ದೇವಾಲಯದಲ್ಲಿ ಯಾರ ಬಲ…
ಕೋಳಿಗಳು ಸಾಮನ್ಯವಾಗಿ ಒಂದು ದಿನದಲ್ಲಿ ಒಂದೆರಡು ಅಥವಾ ಹೆಚ್ಚೆಂದರೆ ಮೂರು ಮೊಟ್ಟೆ ಇಡುತ್ತವೆ. ಆದರೆ ಈ ಕೋಳಿ ಅದ್ಭುತವನ್ನು ಸೃಷ್ಟಿಸಿದೆ. ಜೈಪುರದ ಘಾಟ್ಗೇಟ್ನಲ್ಲಿರುವ ಹುಝೂರಿ ಛೋಟಾ ಪಾರ್ಕ್ನಲ್ಲಿ ಈ ಅದ್ಭುತ ಕಾಣಲು ಸಿಕ್ಕಿದೆ.