ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕತ್ತಿನ ಭಾಗದಲ್ಲಿ ಪಾರ್ಶ್ವವಾಯು ಸಮಸ್ಯೆಯನ್ನು ಹೊಂದಿರುವ 65 ವರ್ಷದ ವೃದ್ಧರೊಬ್ಬರು ಕೈ ಚಲನೆಯನ್ನು ಊಹಿಸಿಕೊಳ್ಳುವ ಮೂಲಕ ಬರವಣಿಗೆಯನ್ನು ಸಾಧಿಸಿದ್ದಾರೆ. ಬ್ರೈನ್ ಕಂಪ್ಯೂಟರ್ ಇಂಟರ್ಫೇಸ್ (BCI) ಸಾಧನವನ್ನು ಬಳಸಿ ಹೆಚ್ಚು ಕಾರ್ಯಕ್ಷಮತೆಯುಳ್ಳ ಮೆದುಳು ಪಠ್ಯದ ಮೂಲಕ ಸಂವಹನವನ್ನು ಸಾಧಿಸಿದೆ. ಅಮೆರಿಕದ ನರವಿಜ್ಞಾನಿಗಳು ಈ ಸಾಧನೆಯನ್ನು ಸಂಶೋಧನಾ ಸಹಯೋಗಿ ಬ್ರೈನ್ಗೇಟ್ನೊಂದಿಗೆ ಸೇರಿ ಅಭಿವೃದ್ಧಿಪಡಿಸಿದ್ದಾರೆ.
ಬ್ರೈನ್ ಕಂಪ್ಯೂಟರ್ ಇಂಟರ್ಫೇಸ್ ಎನ್ನುವ ಸಾಧನವು ಮೆದುಳಿನ ಮೇಲೆ ಚಿಪ್ಗಳಿಂದ ಕಾರ್ಯ ನಿರ್ವಹಿಸುತ್ತದೆ. ಅದು ಬಳಕೆದಾರರು ಯೋಚಿಸಿದಾಗ ಮೆದುಳಿನ ಚಟುವಟಿಕೆಯನ್ನು ಪತ್ತೆ ಮಾಡುತ್ತದೆ ಮತ್ತು ಅದನ್ನು ಕಂಪ್ಯೂಟರ್ನಿಂದ ಓದಬಲ್ಲ ಸಂಕೇತಗಳಾಗಿ ಭಾಷಾಂತರಿಸುತ್ತದೆ. ಇದನ್ನು ಅಳವಡಿಸಿರುವ ವ್ಯಕ್ತಿ ತಾನು ಬರೆಯುತ್ತಿದ್ದೇನೆ ಎಂದು ಊಹಿಸಿದಾಗ ಬ್ರೈನ್ ಚಿಪ್ನಲ್ಲಿರುವ ಸೆನ್ಸಾರ್ಗಳು ಆತನ ನ್ಯೂರಾನ್ಗಳಿಂದ ಸಿಗ್ನಲ್ಗಳನ್ನು ತೆಗೆದುಕೊಳ್ಳುತ್ತವೆ. ಈ ಸಿಗ್ನಲ್ಗಳು ಮೆಷಿನ್ ಲರ್ನಿಂಗ್ ಆಲ್ಗರಿದಮ್ಸ್ನಿಂದ ಗುರುತಿಸಿಕೊಂಡು ನೈಜ ಸಮಯದಲ್ಲಿ ನೀಡುತ್ತದೆ.
ಈ ಇಂಟರ್ಫೇಸ್ ಬಳಸಿಕೊಂಡು ಕಂಪ್ಯೂಟರ್ ನೇರವಾಗಿ ವ್ಯಕ್ತಿಯ ಮೆದುಳಿನಿಂದ ಬರುವ ಸೂಚನೆಗಳನ್ನು ಅನುಸರಿಸುತ್ತದೆ. ಆ ಮೂಲಕ ಆ ವ್ಯಕ್ತಿಯೂ ಅದನ್ನು ಯೋಚಿಸುತ್ತಾ, ಕಂಪ್ಯೂಟರ್ ಮೂಲಕ ಆ ಕೆಲಸವನ್ನು ಮಾಡಬಹುದು. ಈ ಪ್ರಕರಣದಲ್ಲಿ ವ್ಯಕ್ತಿಯ ಕೈಗಳು ಬೆನ್ನು ಹುರಿ ಗಾಯದಿಂದ ಪಾರ್ಶ್ವವಾಯುವಿಗೆ ತುತ್ತಾಗಿದ್ದು, ಕೈಗಳ ಚಲನೆಯನ್ನು ಊಹಿಸಿಕೊಂಡಿದ್ದಾರೆ. ಆ ಮೂಲಕ ಒಂದು ನಿಮಿಷದಲ್ಲಿ 90 ಅಕ್ಷರಗಳನ್ನು ಶೇಕಡಾ 94 ರಷ್ಟು ನಿಖರವಾಗಿ ಬರೆಯಲು ಸಾಧ್ಯವಾಗಿದೆ.
ಆಫ್ಲೈನ್ ಜೆನೆರಲ್ ಪರ್ಪಸ್ ಸ್ವಯಂ ತಿದ್ದುವಿಕೆಯಿಂದ ನಿಖರತೆಯೂ ಶೇಕಡಾ 99 ರಷ್ಟು ಇತ್ತು. ಇದು ದೊಡ್ಡ ಸಾಧನೆಯಾಗಿದ್ದು, ಒಂದು ನಿಮಿಷದಲ್ಲಿ 115 ಅಕ್ಷರಗಳಿಗೆ 90 ಅಕ್ಷರಗಳ ಸಾಮರ್ಥ್ಯವನ್ನು ಹೋಲಿಸಬಹುದಾದ ಕಾರಣ ಇದು ನಿಜವಾಗಿಯೂ ಅತ್ಯುತ್ತಮ ಸಾಧನೆಯಾಗಿದೆ. ಸ್ಮಾರ್ಟ್ಫೋನ್ನಲ್ಲಿ ಈ ವಯಸ್ಸಿನ ವ್ಯಕ್ತಿಯ ಟೈಪಿಂಗ್ ವೇಗವನ್ನು ಗಮನಿಸಿ ಈ ತೀರ್ಮಾನಕ್ಕೆ ಬರಲಾಗಿದೆ.
ಈ ಸಾಧನೆಯೂ ಹಿಂದಿನ ‘ಮೆದುಳಿನಿಂದ ಪಠ್ಯದವರೆಗಿನ ಸಂವಹನ’ದ ದಾಖಲೆಗಳಿಗಿಂತ ದುಪ್ಪಟ್ಟಾಗಿದೆ. ಹೊಸ ವ್ಯವಸ್ಥೆಯು ಪಾರ್ಶ್ವವಾಯು ಪೀಡಿತರಿಗೆ ತಮ್ಮ ದೈನಂದಿನ ಜೀವನದಲ್ಲಿ ಕಷ್ಟ ಪಡದೇ ಸರಾಗವಾಗಿ ಸಂವಹನ ನಡೆಸಲು ಸಕ್ರಿಯಗೊಳಿಸುವ ಮೂಲಕ ಸಹಾಯ ಮಾಡುತ್ತದೆ’ ಎಂದು ವಿಜ್ಞಾನಿಗಳು ನಂಬಿದ್ದಾರೆ. ಮಾತು, ಸ್ಕ್ರೋಲಿಂಗ್, ಪಾಯಿಂಟಿಂಗ್ ಮತ್ತು ಕ್ಲಿಕ್ ಮಾಡುವಂತಹ ಇತರ ಕಾರ್ಯಗಳಿಗೆ ಅನುಕೂಲವಾಗುವಂತಹ ಸಮಗ್ರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ವಿಜ್ಞಾನಿಗಳಿಗೆ ಈ ಯಶಸ್ಸು ಕಾರಣವಾಗುತ್ತದೆ.
ಇನ್ನು ಈ ಅಧ್ಯಯನವು ಮೇ 12 ರಂದು Nature ನಲ್ಲಿ ಪ್ರಕಟವಾಗಿದೆ. ಸ್ಪೇಸ್ ಎಕ್ಸ್ನ ಸಿಇಒ ಎಲಾನ್ ಮಸ್ಕ್ ‘ಮೆದುಳಿನಿಂದ ಬ್ರೈನ್ ಟು ಮೆಷಿನ್ ಇಂಟರ್ಫೇಸ್’ ಎನ್ನುವ ನ್ಯೂರೋ ಲಿಂಕ್ ಅನ್ನು ಸೆಪ್ಟೆಂಬರ್ 2020 ರಂದು ಅನಾವರಣಗೊಳಿಸಿದ ನಂತರ ಬ್ರೈನ್ ಚಿಪ್ಗಳು ಕಳೆದ ವರ್ಷವೂ ಸುದ್ದಿಯಲ್ಲಿತ್ತು.
Published by : Mayoon N / Biotechnologist / Director of DRM Career Build Center, kolar.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬರಿ ಒಂದು ಮೀನಿಗೆ ಗ್ರಾಹಕರೊಬ್ಬರು 5 ಲಕ್ಷ ರೂ. ನೀಡಲು ಮುಂದಾದ್ರೂ ಮಾಲೀಕ ಮಾತ್ರ ಮಾರಾಟ ಮಾಡಲ್ಲ ಎಂದು ಹೇಳಿದ ಯಾಕೆ ಗೊತ್ತಾ,.! ಈ ವಿಶೇಷ ಮೀನಿನ ಮೇಲೆ ಉರ್ದುವಿನಲ್ಲಿ ‘ಅಲ್ಲಾಹ’ ಎಂದು ಬರೆಯಲಾಗಿದ್ದು, ಕೆಲವರು ಜಲಚರಕ್ಕಾಗಿ ಲಕ್ಷಾಂತರ ರೂಪಾಯಿ ನೀಡಲು ಮುಂದಾಗುತ್ತಿದ್ದಾರೆ. ಇಷ್ಟಕ್ಕೂ ಆ ಮೀನಿನ ವಿಶೇಷತೆಯಾದರೂ ಏನು ಗೊತ್ತಾ ಇಲ್ಲಿದೆ ನೋಡಿ ಅಚ್ಚರಿ ಮುಡಿಸುವ ವಿಷಯ. ಉತ್ತರ ಪ್ರದೇಶದ ಶಾಮಲಿ ಜಿಲ್ಲೆಯ ಕೈರಾನಾದಲ್ಲಿರುವ ಈ ವಿಶೇಷ ಮೀನು ನೋಡಲು ಜನರು ದೂರದಿಂದ ಆಗಮಿಸುತ್ತಿದ್ದಾರೆ. ಶಬಾಬ್…
ಬೆಂಗಳೂರು, ಜೂನ್ 7: ಬೆಂಗಳೂರಿನಲ್ಲಿ ಗುರುವಾರ ರಾತ್ರಿ ಸುರಿದ ಅರ್ಧಗಂಟೆ ಮಳೆಗೆ ವಿವಿಧೆಡೆ ಒಟ್ಟು 83 ಮರಗಳು ಧರೆಗುರುಳಿವೆ. ರಾಜರಾಜೇಶ್ವರಿನಗರ ಹಾಗೂ ಬಸವನಗುಡಿಯಲ್ಲಿ ಅತಿ ಹೆಚ್ಚು ಮರಗಳು ಬಿದ್ದಿದೆ ಅತಿ ಹೆಚ್ಚು ಹಾನಿಯೂ ಉಂಟಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಎಲ್ಲಿ ನೋಡಿದರೂ ಮರ ಉರುಳಿರುವುದು, ಟ್ರಾನ್ಸ್ಫಾರ್ಮರ್ ವಾಹನಗಳ ಮೇಲೆ ಬಿದ್ದಿರುವುದು, ವಿದ್ಯುತ್ ಕಂಬಗಳು ಧರೆಗುರಳಿರುವುದು, ಟ್ರಾಫಿಕ್ ಜಾಮ್ ನೋಡಿ ಅರ್ಧ ಗಂಟೆ ಮಳೆ ಎಷ್ಟೊಂದು ಅವಾಂತರವನ್ನು ಸೃಷ್ಟಿಸಿದೆ. ಬಸವನಗಗುಡಿ, ಕೆಂಗೇರಿ, ರಾಜರಾಜೇಶ್ವರಿನಗರ, ಗಿರಿನಗರ ಪ್ರದೇಶದಲ್ಲಿ ಅತಿ ಹೆಚ್ಚು…
ಹಿ೦ದೂ ಧರ್ಮವು ಜಗತ್ತಿನ ಅತ್ಯ೦ತ ಪುರಾತನವಾದ ಸನಾತನ ಧರ್ಮವಾಗಿದೆ. ವೈವಿಧ್ಯಮಯವಾದ ರೀತಿನೀತಿ, ಆಚರಣೆಗಳು, ಸ೦ಪ್ರದಾಯಗಳು, ಕಲ್ಪನೆಗಳು, ಇವೆಲ್ಲವುಗಳ ಸ೦ಯೋಜನೆಯಾಗಿರುವ ಹಿ೦ದೂ ಪದ್ಧತಿಯು ಎ೦ದೆ೦ದಿಗೂ ಅತ್ಯ೦ತ ರೋಮಾ೦ಚಕವಾಗಿರುವ ನ೦ಬಿಕೆಯಾಗಿದೆ.
ನವದೆಹಲಿ, ಇಷ್ಟು ದಿನ ಮೊಟ್ಟೆ ಮಾಂಸಾಹಾರಿಯೋ,ಸಸ್ಯಾಹಾರಿಯೋ ಎಂಬ ವಾದ, ಪ್ರತಿವಾದಗಳು ಯಥೇಚ್ಚವಾಗಿ ನಡೆಯುತ್ತಿದ್ದವು. ಕೆಲವರು ಕೋಳಿಯ ಭ್ರೂಣವಾಗಿರುವುದರಿಂದ ಇದು ಮಾಂಸಾಹಾರ ಎಂದು ಹೇಳಿದರೆ, ಅದುಪೂರ್ತಿ ಕೋಳಿಯ ರೂಪು ಪಡೆದುಕೊಳ್ಳದ ಕಾರಣ ಅದು ಸಸ್ಯಾಹಾರಿ ಎಂದು ವಾದಿಸುವವರು ಅಧಿಕ ಸಂಖ್ಯೆಯಲ್ಲಿದ್ದರು. ಆದರೆ ಈಗ ಈ ಎಲ್ಲ ವಾದ ಪ್ರತಿವಾದಗಳಿಗೆ ಬ್ರೇಕ್ ಹಾಕುವ ಮೂಲಕ ಶುದ್ಧ ಸಸ್ಯ ಜನ್ಯ ಮೊಟ್ಟೆಯನ್ನು ಬೆಳೆಯಬಹುದಾಗಿದೆ! ದೆಹಲಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ಟೆಕ್ನಾಲಜಿಯ (ಐಐಟಿ) ಸಂಶೋಧಕರು ಗಿಡದಲ್ಲಿಮೊಟ್ಟೆಯನ್ನು ಬೆಳೆದಿದ್ದಾರೆ. ನಾನ್ ಸಾಯ್, ಗ್ಲುಟೆನ್ಮುಕ್ತವಾಗಿರುವ ಈ ಮೊಟ್ಟೆಯನ್ನು…
ಜಿಲ್ಲೆಯಲ್ಲಿ ಮತ್ತೆ ಜೋಡೆತ್ತು ಸದ್ದು ಮಾಡಿದ್ದು, ರಾಜಕೀಯವಾಗಿ ಅಲ್ಲದೆ ಜೋಡೆತ್ತುಗಳು ಮಾನವೀಯತೆ ಮೆರೆದಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಗೋಮಾತೆ ಸೇವೆಗೆ ಸಿದ್ಧರಾಗಿದ್ದಾರೆ. ನಟ ದರ್ಶನ್ ಕಳೆದ ದಿನ ಚೈತ್ರ ಗೋಶಾಲೆಗೆ ಸುಮಾರು 15 ಟ್ರ್ಯಾಕ್ಟರ್ ಭತ್ತದ ಹುಲ್ಲನ್ನು ಅನುದಾನ ಮಾಡಿದ್ದರು. ಇದೀಗ ನಟ ಯಶ್ ಕೂಡ ಚೈತ್ರ ಗೋಶಾಲೆಗೆ ಸಹಾಯ ಮಾಡುತ್ತಿದ್ದಾರೆ. ಈ ಮೂಲಕ ಮಂಡ್ಯದ ಚೈತ್ರ ಗೋಶಾಲೆಗೆ ದರ್ಶನ್ ಮತ್ತು ಯಶ್ ಬೆಳಕಾಗಿದ್ದಾರೆ. ಯಶ್ ಪಾಂಡವಪುರದ ತಾಲೂಕಿನ ದೊಡ್ಡಬ್ಯಾಡರಹಳ್ಳಿಯಲ್ಲಿರುವ ಚೈತ್ರ ಗೋಶಾಲೆಯ…
ಬೇವು ಬೆಲ್ಲದ ಆರೋಗ್ಯ ಪ್ರಯೋಜನಗಳು ಗೊತ್ತಾದ್ರೆ ನಿಜಕ್ಕೂ ಅಚ್ಚರಿಪಡುವಿರಿ!ಹಿಂದೂ ಕ್ಯಾಲೆಂಡರ್ ಪ್ರಕಾರ ಯುಗಾದಿ ಹೊಸ ವರ್ಷದ ದಿನವಾಗಿದೆ ಹಾಗೂ ಪವಿತ್ರ ಸಮಯ ಎಂದು ಪರಿಗಣಿಸಲ್ಪಡುತ್ತದೆ. ಕರ್ನಾಟಕದಲ್ಲಿ ಈ ಹಬ್ಬಕ್ಕೆ ಯುಗಾದಿ ಎಂದೂ ಮಹಾರಾಷ್ಟ್ರದಲ್ಲಿ ಗುಡಿ ಪಾವ್ಡಾ ಎಂಬ ಹೆಸರಿನಿಂದಲೂ ಆಚರಿಸಲಾಗುತ್ತದೆ. ಹಬ್ಬದ ವಿಶೇಷವಾಗಿ ಬೇವು ಮತ್ತು ಬೆಲ್ಲದ ಮಿಶ್ರಣವನ್ನು ಸಾಂಕೇತಿಕವಾಗಿ ಸೇವಿಸಲಾಗುತ್ತದೆ. ತಮಿಳುನಾದು ಮತ್ತು ಆಂಧ್ರಪ್ರದೇಶದಲ್ಲಿಯೂ ಈ ಹಬ್ಬವನ್ನು ಆಚರಿಸಲಾಗುತ್ತದೆ ಹಾಗೂ ಸುಖ ದುಃಖದ ಸಂಕೇತಗಳಾಗಿ ಬೇವು ಬೆಲ್ಲವನ್ನು ಹಂಚಲಾಗುತ್ತದೆ. ಬೇವು ರುಚಿಯಲ್ಲಿ ಕಹಿ ಮತ್ತು ಬೆಲ್ಲ…